Updated News From Kaup
ಸಿರಿಗನ್ನಡ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪುರಸ್ಕೃತರಾದ ಸಮಾಜ ಸೇವಕ ರಾಘವೇಂದ್ರ ಪ್ರಭು,ಕವಾ೯ಲು
Posted On: 28-02-2021 07:49PM
ಉಡುಪಿ : ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು, ಕನಾ೯ಟಕ ರಕ್ಷಣಾ ವೇದಿಕೆ ಸಪ್ತಸ್ವರ ಸಂಗೀತ ಕಲಾ ಬಳಗ ಬೆಳಗಾವಿ ಮತ್ತು ಮರಳ ಸಿದ್ದೇಶ್ವರ ಕಲಾ ಪೋಷಕ ಸಂಘ ವತಿಯಿoದ ಫೆ.28 ರಂದು ಬೆಳಗಾವಿಯಲ್ಲಿ ರಾಷ್ಟ್ರೀಯ ಕಲಾ ಉತ್ಸವ -2021 ಕಾಯ೯ಕ್ರಮ ನಡೆಯಿತು.
92 ಹೇರೂರು : ಉಚಿತ ಚೆಂಡೆ ತರಬೇತಿ ತರಗತಿ ಶುಭಾರಂಭ
Posted On: 28-02-2021 07:44PM
ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 92ನೇ ಹೇರೂರು ಒಕ್ಕೂಟ ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿ ಹೇರೂರು, ಶ್ರೀ ಗುರುರಾಘವೇಂದ್ರ ಮಹಿಳಾ ಭಜನಾ ಮಂಡಳಿ ಹೇರೂರು, ದೇವಾಡಿಗರ ಸಂಘ ಹೇರೂರು ಬಂಟಕಲ್ಲು ಇವರ ಆಶ್ರಯದಲ್ಲಿ ಉಚಿತ ಚೆಂಡೆ ತರಬೇತಿ ತರಗತಿ ಇಂದು ಉದ್ಘಾಟನೆಗೊಂಡಿತು. ಉದ್ಘಾಟಕರಾಗಿ ಶ್ರೀ ಪುಂಡಲೀಕ ಮರಾಠ ನಿವೃತ್ತ ಶಿಕ್ಷಕರು ಹಾಗೂ ಹಿರಿಯ ಪತ್ರಕರ್ತರು ಬಂಟಕಲ್ಲು ಉದ್ಘಾಟಿಸಿ ಶುಭಹಾರೈಸಿದರು.
ಮಾನವೀಯ ನ್ಯಾಯಕ್ಕಾಗಿ ಪ್ರತಿಭಟನೆ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ
Posted On: 28-02-2021 05:56PM
ಉಡುಪಿ : ಸಾಮಾಜಿಕ ಹೋರಾಟವನ್ನು ಮಾಡುತ್ತಾ ಪತ್ನಿ, ಮೂವರು ಚಿಕ್ಕ ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿಗೆ ಮಾರಣಾಂತಿಕ ಹಲ್ಲೆಯಾಗಿದ್ದು ಈ ಕುರಿತು ಪೋಲಿಸ್ ಠಾಣೆಗೆ ಹಾಗೂ ವರಿಷ್ಠಾಧಿಕಾರಿಗೆ ದೂರು ದಾಖಲಿಸಿದ್ದರೂ ಯಾವುದೇ ಕ್ರಮಕೈಗೊಂಡಿರುವುದಿಲ್ಲ. ಆದುದರಿಂದ ಸಮಾನ ಮನಸ್ಕ ಬಿಲ್ಲವರನ್ನು ಕೂಡಿಕೊಂಡು ಮಾನವೀಯ ನೆಲೆಯಲ್ಲಿ ಶಂಕರ ಶಾಂತಿಗೆ ನ್ಯಾಯವನ್ನು ಆಗ್ರಹಿಸಿ ಮಾಚ್೯ 1, ಸಂಜೆ 3 ಗಂಟೆಗೆ ಶಾಂತಿಯುತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾಪು ಜೇಸಿಐನ ವತಿಯಿಂದ ಮೆಸ್ಕಾಂನ ಹಿರಿಯ ಲೈನ್ ಮ್ಯಾನ್ ಸತೀಶ್ ರವರಿಗೆ ಸಮ್ಮಾನ
Posted On: 27-02-2021 06:01PM
ಕಾಪು : ಜೇಸಿಐ ಭಾರತದ ನಿರ್ದೇಶನದಂತೆ ಸೆಲ್ಯೂಟ್ ದಿ ಸೈಲಂಟ್ ವರ್ಕರ್ ಕಾರ್ಯಕ್ರಮದಡಿ ಕಾಪು ಜೇಸಿಐನ ವತಿಯಿಂದ ಮೆಸ್ಕಾಂನ ಹಿರಿಯ ಲೈನ್ ಮ್ಯಾನ್ ಸತೀಶ್ ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು.
ಕಾಪು ಲೈಟ್ ಹೌಸ್ ಗೆ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಭೇಟಿ
Posted On: 27-02-2021 05:54PM
ಬ್ರಿಟಿಷ್ ಕಾಲದಲ್ಲಿ ಸ್ಥಾಪನೆಯಾದ ಕಾಪು ಲೈಟ್ ಹೌಸ್ ಗೆ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಭೇಟಿ ನೀಡಿ ಬೀಚ್ನ ಮುಂದಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.
ಜೈನ ಸಮುದಾಯದಿಂದ ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಹಲ್ಲೆಯ ಖಂಡನೆ
Posted On: 27-02-2021 04:53PM
ಸರಳ ವ್ಯಕ್ತಿತ್ವದ ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿಯವರು ಭೃಷ್ಟಾಚಾರವನ್ನು ವಿರೋಧಿಸಿದವರು ಅವರ ಮೇಲೆ ಸುಳ್ಳು ಆರೋಪ ಹೊರಿಸಿರುವುದು ಅಕ್ಷಮ್ಯ. ಶಂಕರ್ ರವರ ಸಾಮಾಜಿಕ ಕಳಕಳಿಗೆ ಜೈನ ಬಸದಿಯ ಹೋರಾಟವು ಸಾಕ್ಷಿಯಾಗಿದೆ. ಅವರ ಮೇಲೆ ಹಲ್ಲೆಗೈದವರನ್ನು ಇಷ್ಟರವರೆಗೆ ಬಂಧಿಸದಿರುವುದು ದುರಂತ. ಈ ನಿಟ್ಟಿನಲ್ಲಿ ಜೈನ ಸಮುದಾಯದ ಒಂದಷ್ಟು ಜನ ಒಟ್ಟಾಗಿ ಸದ್ಯದಲ್ಲಿಯೇ ಜಿಲ್ಲಾಧಿಕಾರಿ, ತಹಶೀಲ್ದಾರರಿಗೆ ಮನವಿ ನೀಡಲಿದ್ದೇವೆ ಎಂದು ಜೈನ ಸಮುದಾಯದ ಮುಖಂಡರಾದ ಡಾ. ಆಕಾಶ್ ಜೈನ್ ತಿಳಿಸಿದ್ದಾರೆ.
ಇನ್ನಂಜೆ : ಮಾಚ್೯ 20, 21 ಇನ್ನಂಜೆ ಪ್ರೀಮಿಯರ್ ಲೀಗ್, ಮಾಚ್೯ 27 ರಂದು ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ
Posted On: 27-02-2021 02:52PM
ಕಾಪು : ಇನ್ನಂಜೆ ಯುವಕ ಮಂಡಲ ಇನ್ನಂಜೆ ಇವರ ಆಶ್ರಯದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟವರಿಗೆ ಮಾರ್ಚ್ 20, 21 ರಂದು ಇನ್ನಂಜೆ ಶಾಲಾ ಮೈದಾನದಲ್ಲಿ ಇನ್ನಂಜೆ ಪ್ರೀಮಿಯರ್ ಲೀಗ್ ಸೀಮಿತ ಓವರ್ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ. ಇನ್ನಂಜೆ ಯುವಕ ಮಂಡಲ ಟ್ರೋಫಿ - 2021ರೊಂದಿಗೆ ಪ್ರಥಮ ಬಹುಮಾನವಾಗಿ ₹ ಇಪ್ಪತ್ತು ಸಾವಿರ ಮತ್ತು ದ್ವಿತೀಯ ₹ ಹತ್ತು ಸಾವಿರ ಇರಲಿದೆ.
ಹಗ್ಗ ಜಗ್ಗಾಟ : ಬೆಳ್ಳೆಯ ಯುವಸ್ಫೂರ್ತಿ ಕಲಾ ಮತ್ತು ಕ್ರೀಡಾ ಸಂಘಕ್ಕೆ ಬಹುಮಾನ.
Posted On: 27-02-2021 02:15PM
ಕಾಪು : ಬೆಳ್ತಂಗಡಿ ವಿಧಾನ ಸಭಾ ವ್ಯಾಪ್ತಿಯ ಪಾಲಡ್ಕದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರೀಡಾ ಕೂಟದಲ್ಲಿ ಸಾಮಾಜಿಕವಾಗಿ ಕಾಪು ತಾಲೂಕು ಬೆಳ್ಳೆ ಪರಿಸರದಲ್ಲಿ ಜನಾನುರಾಗಿರುವ ಯುವ ಸ್ಫೂರ್ತಿ ಕಲಾ ಹಾಗೂ ಕ್ರೀಡಾ ಸಂಘವು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ಚತುರ್ಥ ಸ್ಥಾನ ಪಡೆದುಕೊಂಡಿದೆ.
