Updated News From Kaup

ಕಾಪು : ಧರೆಗುರುಳಿದ ಬೃಹತ್ ಗಾತ್ರದ ಮರ, ಅರಣ್ಯ ಇಲಾಖೆ, ಪೋಲೀಸ್, ಸ್ಥಳೀಯರಿಂದ ತೆರವು

Thumbnail
Posted On: 15 Jun 2021, 08:27 AM

ಕಾಪು, ಜೂ.15 : ಇಂದು ಬೆಳಿಗ್ಗೆ ಕಾಪು, ಮಜೂರು ಸಂಪರ್ಕ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ಸ್ಥಳೀಯರಿಗೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬೆಳಿಗ್ಗೆ ಸರಿ ಸುಮಾರು 4:30 ಕ್ಕೆ ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಹಿಂಭಾಗದಲ್ಲಿ ಈ ಮರವು ಧರೆಗೆ ಉರುಳಿದ್ದು ಸ್ಥಳೀಯರು ಕಾಪು ವಲಯ ಅರಣ್ಯಾಧಿಕಾರಿ ಮಂಜುನಾಥ್ ಮತ್ತು ಕಾಪು ಠಾಣಾ ಸಿಬ್ಬಂದಿ ಹರೀಶ್ ನಾಯ್ಕ್ ರವರ ಸಹಕಾರದಿಂದ ಈ ಮರವನ್ನು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯರಾದ ಉಮೇಶ್ ಶೆಟ್ಟಿ, ಪ್ರಕಾಶ್ ದೇವಾಡಿಗ ಮತ್ತು ಪ್ರಶಾಂತ್ ಪೂಜಾರಿ ಕಾಪು ಹಾಗೂ ಮತ್ತಿತರರು ಉಪಸ್ಥಿತರಿದ್ದು ಬೃಹತ್ ಗಾತ್ರದ ಮರವನ್ನು ತೆರವು ಗೊಳಿಸಲು ಸಹಕರಿಸಿದರು.

ಶಿರ್ವ : ಆಶಾ ಕಾರ್ಯಕರ್ತೆಯರಿಗೆ ರೇಶನ್ ಕಿಟ್ ವಿತರಣೆ

Thumbnail
Posted On: 14 Jun 2021, 08:07 PM

ಕಾಪು : ಕೊರೋನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಮಾಜ ಸೇವಕಿ ನೀತಾ ಪ್ರಭು ಕಾಪು ಮತ್ತು ಹಿಂದು ಜಾಗರಣ ವೇದಿಕೆ ಶಿರ್ವ ವಲಯ ವತಿಯಿಂದ ರೇಶನ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ನೀತಾ ಪ್ರಭು ಕಾಪು , ಅಲೆವೂರು ಶ್ರೀಕಾಂತ್ ನಾಯಕ್ ,ವೈದ್ಯಾಧಿಕಾರಿ ಗಾಯತ್ರಿ ,ಚರಣ್ ಶಾಂತಿ ಕಟಪಾಡಿ ,ಗಿರಿಧರ್ ಪ್ರಭು , ಹಿಂದು ಜಾಗರಣ ವೇದಿಕೆ ಜಿಲ್ಲಾ ಪ್ರಮುಖರಾದ ಉಮೇಶ್ ಸೂಡ , ಹಿಂ.ಜಾ.ವೇ ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಗುರುಪ್ರಸಾದ್ ಸೂಡ , ಹಿಂ.ಜಾ.ವೇ ಶಿರ್ವ ವಲಯ ಅಧ್ಯಕ್ಷರಾದ ರಕ್ಷಿತ್ ಶಿರ್ವ ಮತ್ತಿತರರು ಉಪಸ್ಥಿತರಿದ್ದರು.

ರಾಮಕುಂಜ : ಬಾವಿಗಳಿಗೆ ಜೀವ ನೀಡಿದ ಕೆರೆ

Thumbnail
Posted On: 13 Jun 2021, 02:56 PM

ಮಂಗಳೂರು : ದಿನೇ ದಿನೇ ಕುಸಿಯುತ್ತಿರುವ ಅಂತರ್ಜಲ ಮಟ್ಟದಿಂದಾಗಿ ಕೆರೆ, ನದಿ,ಬಾವಿ, ಹಳ್ಳ ಕೊಳ್ಳಗಳು ಮಾಯವಾಗುತ್ತಿರುವ ಸಂದರ್ಭದಲ್ಲಿ ಇಲ್ಲೊಂದು ಕೆರೆ ತನ್ನ ಸುತ್ತಮುತ್ತಲಿನ ಅದೆಷ್ಟೋ ಬಾವಿಗಳಿಗೆ ಮರುಜೀವ ನೀಡಿದೆ. ಅನಾದಿ ಕಾಲದಿಂದಲೂ ಇದ್ದ ಒಂದು ಕೆರೆ ಕಾಲಾಂತರದಲ್ಲಿ ಸಂಪೂರ್ಣ ಮಾಯವಾಗಿ ಸಮತಟ್ಟಾದ ಮೈದಾನದಂತಾಗಿದ್ದು,ಅಲ್ಲೊಂದು ಕೆರೆ ಇತ್ತು ಎಂಬುದೇ ಎಷ್ಟೋ ಜನರಿಗೆ ತಿಳಿದಿರಲಿಲ್ಲ. ಯಾವಾಗ 2016-17 ರಲ್ಲಿ ಉದ್ಯೋಗ ಖಾತ್ರಿ ಯೋಜನೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಜಂಟಿಯಾಗಿ ಕಾಮಗಾರಿ ಕೈಗೆತ್ತಿಕೊಂಡು ಅದಕ್ಕೊಂದು ಹೊಸ ರೂಪು ಕಲ್ಪಿಸಿದರೋ ಆಗಲೇ ಕೆರೆ ಮರುಹುಟ್ಟು ಪಡೆಯಿತು. ಇದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ದೊಡ್ಡ ಕೆರೆಯ ಕಥೆ. ಉದ್ಯೋಗ ಖಾತ್ರಿ ಯೋಜನೆಯ ಸುಮಾರು 27 ಲಕ್ಷ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 5 ಲಕ್ಷ ರೂ. ವೆಚ್ಚದಲ್ಲಿ ಪುನಶ್ಚೇತನಗೊಂಡಿತು.ಈ ಕೆರೆಯ ಪುನಶ್ಚೇತನದಿಂದಾಗಿ ಸುತ್ತಮುತ್ತಲಿನ ಸುಮಾರು 100-150 ಖಾಸಗಿ ಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿ ಯಾವತ್ತೂ ನೀರಿನ ಅಭಾವ ತಲೆದೋರಿಲ್ಲ. ಸದಾ ಕಾಲ ಬೇಸಿಗೆಯಲ್ಲಿ ಬರಿದಾಗುತ್ತಿದ್ದ ಒಂದು ಕೊಳವೆ ಬಾವಿಯು ಇದೀಗ ಎಂದೂ ಬರಿದಾಗದೇ ವರ್ಷವಿಡೀ ನೀರು ಹೊರಹೊಮ್ಮತ್ತದೆ ಎನ್ನುತ್ತಾರೆ ರಾಮಕುಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರು. ಒಟ್ಟಿನಲ್ಲಿ ಜಲಮೂಲಗಳ ಬಗ್ಗೆ ನಿರ್ಲಕ್ಷ್ಯ ವಹಿಸಿ ಮಾಲಿನ್ಯ ಮಾಡುವ ಪ್ರಸಂಗಗಳೇ ಹೆಚ್ಚಿರುವ ಇಂದಿನ ದಿನಗಳಲ್ಲಿ ಸಂಪೂರ್ಣ ಕಣ್ಮರೆಯಾಗಿದ್ದ ಕೆರೆಯೊಂದಕ್ಕೆ ಮರುಹುಟ್ಟು ನೀಡಿ ನೀರಿನ ಅಭಾವ ತಡೆಗಟ್ಟಿದ್ದಲ್ಲದೇ ಅಂತರ್ಜಲ ಮಟ್ಟ ಹೆಚ್ಚಿಸುವಲ್ಲಿ ರಾಮಕುಂಜ ಗ್ರಾಮ ಪಂಚಾಯತ್ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯ ಶ್ಲಾಘನೀಯ. ಜಲಜೀವನ್ ಮಿಷನ್ ಯೋಜನೆಯ ಪ್ರಮುಖ ಭಾಗವಾದ (ಗುರಿ) ಅಂತರ್ಜಲ ಪುನಶ್ಚೇತನ ಮತ್ತು ಜಲಮೂಲಗಳ ಸಂರಕ್ಷಣೆಯ ವಿಶೇಷ ಆಂದೋಲನಕ್ಕೆ ಈ ಕೆರೆಯ ಕೊಡುಗೆ ಅಪಾರ. ಮುಂಬರುವ ದಿನಗಳಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಈ ಕೆರೆಯ ನಿರಂತರ ರಕ್ಷಣೆಯಲ್ಲಿ ನಾವೆಲ್ಲ ಶ್ರಮಿಸುತ್ತೇವೆ ಎನ್ನುತ್ತಾರೆ ಗ್ರಾಮಸ್ಥರು.

ಕೊರೋನಾ ಸಂದರ್ಭ ನಿಸ್ವಾರ್ಥ ಸೇವೆಗೈಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಗೌರವ, ಆಹಾರ ಕಿಟ್ ವಿತರಣೆ

Thumbnail
Posted On: 13 Jun 2021, 10:36 AM

ಕುಂದಾಪುರ : ಪ್ರಾಣವನ್ನೇ ಪಣಕ್ಕಿಟ್ಟು ಮಹಾಮಾರಿ ಕೊರೋನಾ 2ನೇ ಅಲೆಯ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಕೆಲಸ ಶ್ಲಾಘನೀಯ. ಕೋವಿಡ್ ನಿರ್ವಹಣೆಯ ಸಂದರ್ಭದಲ್ಲಿ ಮೊದಲಿಗೆ ಸಾರ್ವಜನಿಕರು ಭಯ ಭೀತರಾಗಿದ್ದರು. ಪರೀಕ್ಷೆ ಮಾಡಿಸಲು, ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದಾಗ ಅವರ ಮನವೊಲಿಸಿ, ದುರ್ಗಮ, ಅಪಾಯಕಾರಿ ಜಾಗಕ್ಕೆ ತೆರಳಿ ಆಶಾ ಕಾರ್ಯಕರ್ತೆಯರು ಕೊರೋನಾ ಜಾಗೃತಿ ಮೂಡಿಸಿ ನಿಸ್ವಾರ್ಥ ಸೇವೆಯನ್ನು ಮಾಡುವ ಆಶಾ ಕಾರ್ಯಕರ್ತೆಯರನ್ನು ಮುಕ್ತ ಕಂಠದಿಂದ ಹೊಗಳಿ, ಅವರನ್ನು ಶಾಲು ಹೊದಿಸಿ, ಆಹಾರದ ಕಿಟ್ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಂದಾಪುರ ಪುರಸಭಾ ಸದಸ್ಯ ಪ್ರಭಾಕರ.ವಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶೇಖರ್ ಪೂಜಾರಿ, ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ, ಸತೀಶ್ ಉಷಾ ಹೋಟೆಲ್ ಮಾಲಕರು ಕುಂದಾಪುರ, ಗಣೇಶ ಜೋಗಿ ಶ್ರೀದೇವಿ ಕಂಗನಾ ಸ್ಟೋರ್ ಕುಂದಾಪುರ, ಹರೀಶ್ ಮೆಸ್ಕಾಂ ಗುತ್ತಿಗೆದಾರರು ಕುಂದಾಪುರ, ಸತೀಶ್ ಜೋಗಿ ಬಿ.ಸಿ.ಎಮ್. ಹಾಸ್ಟೆಲ್ ಕುಂದಾಪುರ ಉಪಸ್ಥಿತರಿದ್ದರು.

ಉಡುಪಿಯ ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ತಂಡದಿಂದ ಕುಂದಾಪುರ ಮೊಳಹಳ್ಳಿ ಗ್ರಾಮದ ಸರಕಾರಿ ಶಾಲೆಯ ಮಕ್ಕಳ ಪೋಷಕರಿಗೆ ದಿನಸಿ ಕಿಟ್ ವಿತರಣೆ

Thumbnail
Posted On: 12 Jun 2021, 08:05 PM

ಉಡುಪಿ, ಜೂ.12 : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೋಣಿಹಾರ, ಮೊಳಹಳ್ಳಿ ಗ್ರಾಮ, ಕುಂದಾಪುರ ತಾಲೂಕು ಇಲ್ಲಿಗೆ ಭೇಟಿನೀಡಿ ಅಲ್ಲಿನ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ವಿಚಾರಿಸಿ ಎಲ್ಲಾ ವಿದ್ಯಾರ್ಥಿಗಳಿಗೆ (25 ವಿದ್ಯಾರ್ಥಿಗಳು)ದಿನಸಿ ಸಾಮಗ್ರಿಗಳ ಕಿಟ್ ಗಳನ್ನು ವಿದ್ಯಾರ್ಥಿಗಳ ಪೋಷಕರಿಗೆ ಹಸ್ತಾಂತರಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ಪೇಟೆ ಕಡೆಗಳಲ್ಲಿ ಹಲವಾರು ಸಂಘ ಸಂಸ್ಥೆಗಳು ಇಂತಹ ಕಾರ್ಯಕ್ರಮ ನಡೆಸುತ್ತಾರೆ. ಆದರೆ ಹಳ್ಳಿ ಪ್ರದೇಶಗಳಲ್ಲಿ ಇಂತಹ ಸಮಾಜ ಸೇವೆ ಅಗತ್ಯವಿದೆ. ಹಳ್ಳಿ ಭಾಗದಲ್ಲೂ ಆಸರೆ ತಂಡವು ಕಾರ್ಯನಿರ್ವಹಿಸುವುದು ಸಂತಸ ತಂದಿದೆ ಎಂದರು. ದಿನಸಿ ಸಾಮಗ್ರಿಗಳ ಹಸ್ತಾಂತರ ಕಾರ್ಯವನ್ನು ಆಸರೆ ತಂಡದ ಸ್ಥಾಪಕಾಧ್ಯಕ್ಷರು ಆದ ಡಾ. ಕೀರ್ತಿ ಪಾಲನ್ ನೆರವೇರಿಸಿದರು. ಈ ಸಂದರ್ಭ ತಂಡದ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಎಂ. ಕೆ, ಜೊತೆ ಕಾರ್ಯದರ್ಶಿ ಶ್ರೀಕಾಂತ್ ಅಮಿನ್ ಹಾಗೂ ಕೋಶಾಧಿಕಾರಿ ಜಗದೀಶ್ ಬಂಟಕಲ್ ಉಪಸ್ಥಿತರಿದ್ದರು. ಶಾಲೆಯ ಪ್ರಾಂಶುಪಾಲ ಯಶವಂತ್ ಸ್ವಾಗತಿಸಿದರು. ದಿನೇಶ್ ಬಿದ್ಕಲಕಟ್ಟೆ ವಂದಿಸಿದರು.

ರಾಜ್ಯ ಸರ್ಕಾರದಿಂದ ಅಧಿಕೃತ ಮಾನ್ಯತೆ ಸಿಗಲು ನಾಳೆ ತುಳುನಾಡಿನಾದ್ಯಂತ "ಟ್ವಿಟ್ ತುಳುನಾಡ್" ಅಭಿಯಾನ

Thumbnail
Posted On: 12 Jun 2021, 06:00 PM

ತುಳು ಭಾಷೆಗೆ ರಾಜ್ಯ ಭಾಷೆಯ ಮಾನ್ಯತೆ ದೊರಕಬೇಕೆಂಬ ನೆಲೆಯಲ್ಲಿ ಹಲವಾರು ದಿನಗಳ ಬೇಡಿಕೆಯಾಗಿತ್ತು. ತುಳು ಭಾಷೆಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವ ನಿಟ್ಟಿನಲ್ಲಿ ಜೈ ತುಳುನಾಡ್ ಸಂಘಟನೆ ಟ್ವೀಟ್ ತುಳುನಾಡ್ ಟ್ವಿಟ್ಟರ್ ಅಭಿಯಾನವನ್ನು ಹಮ್ಮಿಕೊಂಡಿದೆ. ನಾಳೆ (ಜೂನ್ 13) ಬೆಳಿಗ್ಗೆ 6ರಿಂದ ರಾತ್ರಿ 11.59 ರವರೆಗೆ ನಡೆಯಲಿದೆ. #TuluOfficialinKA_KL ಹ್ಯಾಶ್ ಟ್ಯಾಗ್ ಮಾಡುವ ಮೂಲಕ ತುಳುನಾಡಿನ ಸಮಸ್ತರು ಟ್ವೀಟ್ ಅಭಿಯಾನದಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದ್ದಾರೆ. ಇದಕ್ಕಾಗಿ ತಾಲೂಕು ಗುಂಪುಗಳನ್ನು ಮಾಡಲಾಗಿದ್ದು ಅದರ ಮೂಲಕ ಅಭಿಯಾನ ಮಾಡಬೇಕೆಂದು ತಿಳಿಸಿದ್ದಾರೆ. ಟ್ವೀಟ್ ತುಳುನಾಡ್ ಅಭಿಯಾನದ ಪ್ರತಿ ತಾಲೂಕಿನ ವಾಟ್ಸಾಪ್ ಗ್ರೂಪ್ 1) ನಿಮ್ಮ ತಾಲೂಕಿನ ಗ್ರೂಪಿಗೆ ಸೇರಿಕೊಳ್ಳಿ. (ನಿಮ್ಮ ತಾಲೂಕಿನ ಹೆಸರಿನ ಮೇಲೆ ಒತ್ತುವ ಮೂಲಕ) 2) ಟ್ವೀಟ್ ಅಭಿಯಾನ ಮತ್ತು ತುಳುನಾಡಿಗೆ ಆಗುವ ಅನ್ಯಾಯದ ಬಗ್ಗೆ ಮಾತ್ರ ಪೋಸ್ಟ್ ಹಾಕಬಹುದು, ವಿಚಾರಾತ್ಮಕ ಚರ್ಚೆ ಮಾಡಬಹುದು. 3) ಟ್ವೀಟ್ ಅಭಿಯಾನದಲ್ಲಿ ಯಾವ ರೀತಿಯಲ್ಲಿ ಟ್ವೀಟ್ ಬರೆಯಬಹುದು ಎಂಬ ಸಲಹೆ ಸೂಚನೆಗಳನ್ನು ಕೊಡಬಹುದು. Bolther (Belthangady), Bantwala Bolther(Belthangady), Bantwala 2 Kaup, Odipu (Udupi) , Brahmavara Mulki, Bedra Moodbidri Kudla, Ullala Kudla, Ullala 2 Karla (Karkala), Hebri Sullia(Sulya), Puttur, Kadaba Sullia (Sulya), Puttur, Kadaba 2 Kasrod (Kasargod), Manjeshwar Gulf Countries

ಹಿಂದೂ ಧರ್ಮದ ಅವಹೇಳನ Instagram ಮೇಲೆ ದೂರು ದಾಖಲು

Thumbnail
Posted On: 11 Jun 2021, 07:53 PM

ಗೂಗಲ್ ಕನ್ನಡವನ್ನು ಪ್ರಪಂಚದ ಕೆಟ್ಟ ಭಾಷೆ ಎಂದು ತೋರಿಸಿತ್ತು , ಅಮೆಜಾನ್ ಕನ್ನಡದ ಹಳದಿ-ಕೆಂಪು ಬಣ್ಣದ ಬಾವುಟ ಹಾಗೂ ಸರ್ಕಾರದ ಲಾಂಛನಗಳನ್ನು ಕೆಟ್ಟ ರೀತಿಯಲ್ಲಿ ಉಪಯೋಗಿಸಿತ್ತು. ಇದೀಗ Instagram ನ ಸರದಿ , Instagram ಮಾಡಿದ್ದೇನು ? ಹೌದು ದೆಹಲಿಯ ಮನೀಷ್ ಸಿಂಗ್ ರವರು Instagram ಮೇಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಇದಕ್ಕೆ ಕಾರಣ Instagram ತನ್ನ ಅಪ್ಲಿಕೇಶನ್ ನಲ್ಲಿ ಭಾರತೀಯರಿಗೆ ಅವಮಾನ ಮಾಡಿದೆ. ಭಾರತದಲ್ಲಿ ಅಲ್ಲದೇ ವಿಶ್ವದ ಹಲವು ದೇಶಗಳಲ್ಲಿ ಈಶ್ವರ ದೇವರನ್ನು ಜಾತಿ-ಧರ್ಮ ಭೇದವಿಲ್ಲದೇ ಮಹಾದೇವ , ಶಿವ , ಶಂಕರ , ಕಾಲಭೈರವ ಮುಂತಾದ ಹತ್ತಾರು ಹೆಸರುಗಳಿಂದ ಪೂಜಿಸುತ್ತೇವೆ. ಶಿವ ದೇವರ ಹೆಸರಿನಲ್ಲಿ ಭಾರತದಲ್ಲಿ ಲಕ್ಷಾಂತರ ದೇವಸ್ಥಾನಗಳಿವೆ ಇಷ್ಟೆಲ್ಲಾ ವಿಷಯ ತಿಳಿದಿದ್ದರೂ Instagram ತನ್ನ Giphy ಯಲ್ಲಿ ಶಿವ ದೇವರ ಕುರಿತಾದ ಆಕ್ಷೇರ್ಪಾಹ Giphy ಯನ್ನು ಸೇರಿಸಿದೆ. ಚಿತ್ರವನ್ನು ಸರಿಯಾಗಿ ನೋಡಿದರೆ ಒಂದು ಕೈನಲ್ಲಿ ಅಭಯ ಹಸ್ತ ಹಾಗೂ ಧ್ಯಾನ ಮುದ್ರೆಗಳಿವೆ ಆದರೆ ಅದಕ್ಕೆ ಜೋಡಿಕೊಂಡಂತಿರುವ ಬಲಗೈ ನಲ್ಲಿ ವೈನ್ ಹಿಡಿದಂತೆ ಚಿತ್ರಿಸಲಾಗಿದೆ ಜೊತೆಗೆ ಎಡಗೈನಲ್ಲಿ ಮೊಬೈಲ್ ‌ಹಾಗೂ ಕಿವಿಗೆ ಹೆಡ್ಫೋನ್ ಧರಿಸಿದಂತೆ ಅಸಭ್ಯವಾಗಿ ಚಿತ್ರಿಸಲಾಗಿದೆ. ಈ ಚಿತ್ರ ಕೋಟ್ಯಾಂತರ ಧರ್ಮಾಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದ್ದಲ್ಲದೆ ನೆಟ್ಟಿಗರು ಈ ಘಟನೆಯನ್ನು ಖಂಡಿಸಿದ್ದಾರೆ. ಇನ್ನಾದರೂ ಸರ್ಕಾರ ಇಂತಹ ಸಂಸ್ಥೆ ಅಥವಾ ವ್ಯಕ್ತಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಸಮಾಜದ ಸ್ವಾಸ್ಥ್ಯ ಕಾಪಾಡಬೇಕಿದೆ. ಅಭಿಷೇಕ್ ರಾವ್ TECH NEWS Click Here To Watch YOUTUBE Video

ವಿಶೇಷ ಆರ್ಥಿಕ ಪ್ಯಾಕೇಜ್ ಗಾಗಿ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ

Thumbnail
Posted On: 10 Jun 2021, 09:24 PM

ಉಡುಪಿ : ಕೊರೊನ ಲಾಕ್ ಡೌನ್ ಸಂದರ್ಭದಲ್ಲಿ ದೈವ ಚಾಕ್ರಿ ವರ್ಗವು ಜೀವನ ನಡೆಸಲು ತುಂಬಾ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇವರಿಗೆ ಯಾವುದೇ ಸಂಪಾದನೆ ಇಲ್ಲ. ದೈವಾರಾಧನೆ ಮೂಲ ಕುಲಕಸುಬಾಗಿ ಅವಲಂಬಿಸಿದ್ದಾರೆ. ಇದರಿಂದ ಬರುವ ಸಂಭಾವನೆಯಲ್ಲಿ ಕುಟುಂಬವನ್ನು ನೀಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ. ) ಉಡುಪಿ ಜಿಲ್ಲೆಯ ಪದಾಧಿಕಾರಿಗಳು ಸರ್ವ ಸದಸ್ಯರ ಪರವಾಗಿ ಉಡುಪಿ ಜಿಲ್ಲಾಧಿಕಾರಿಯಾದ ಜಿ. ಜಗದೀಶ್ ಅವರನ್ನು ಭೇಟಿ ಮಾಡಿ ಮನವಿ ನೀಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ದೈವ ಚಾಕ್ರಿ ವರ್ಗದವರ ಸಮಸ್ಯೆಗಳನ್ನು ಹೇಳಿದರು. ಈಗಾಗಲೇ ಸರ್ಕಾರದ ಮೂರು ಬಾರಿಯ ಕೋವಿಡ್ ಪ್ಯಾಕೇಜಿನಲ್ಲಿ ಸರ್ಕಾರ ನಮ್ಮ ಕರಾವಳಿಯ ದೈವಾರಾಧನೆ ಕ್ಷೇತ್ರದಲ್ಲಿ ದುಡಿಯುವವರಿಗೆ ಈ ಲಾಕ್ ಡೌನ್ ತುರ್ತು ಸಂದರ್ಭದಲ್ಲಿ ಯಾವುದೇ ಪರಿಹಾರ ಒದಗಿಸಿಲ್ಲ. ಎರಡು ವರ್ಷದಿಂದ ಸರಿಯಾಗಿ ಯಾವುದೇ ಪೂಜೆ-ಪುರಸ್ಕಾರ, ವಾರ್ಷಿಕ ನೇಮೋತ್ಸವಗಳು, ಯಾವುದೇ ಇತರ ಕಾರ್ಯಗಳು ನಡೆಯಲಿಲ್ಲ. ಈ ಒಂದು ಸಂದರ್ಭದಲ್ಲಿ ಸರ್ಕಾರ ಸಂಪೂರ್ಣ ನಿಷೇಧಿಸಿದೆ. ಸುಮಾರು ಉಡುಪಿ -ಮಂಗಳೂರಿನಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ದೈವ ಚಾಕ್ರಿ ವರ್ಗದವರಿದ್ದಾರೆ. ಲಾಕ್ ಡೌನ್ ತೆಗೆದ ನಂತರ ಮುಂದಿನ ದಿನಗಳಲ್ಲಿ 200 ಜನರ ಸೀಮಿತ ಅವಧಿಗೆ ಸರ್ಕಾರದ ಕಟ್ಟುನಿಟ್ಟಾದ ನಿಯಮ ಅನುಸಾರವಾಗಿ ದೈವಾರಾಧನೆಗೆ ಅನುಮತಿ ನೀಡಬೇಕಾಗಿ ಈ ಮೂಲಕ ಕೇಳಿಕೊಳ್ಳುತ್ತೇವೆ ಎಂದು ಒಕ್ಕೂಟದ ಸರ್ವ ಸದಸ್ಯರು ಜಿಲ್ಲಾಧಿಕಾರಿಗೆ ವಿನಂತಿ ಮಾಡಿಕೊಂಡರು. ಮನವಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿ ಈ ದಿನವೇ ಮುಖ್ಯಮಂತ್ರಿಗಳಿಗೆ ನಿಮ್ಮ ಬೇಡಿಕೆಗಳ ಮನವಿಯನ್ನು ಕಳುಹಿಸಿಕೊಡುತ್ತೇನೆ ಎಂದು ಸರ್ವ ಸದಸ್ಯರಿಗೆ ಸ್ಪಂದಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ರವಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನೋದ್ ಶೆಟ್ಟಿ, ಕೋಶಾಧಿಕಾರಿ ಶ್ರೀಧರ್ ಪೂಜಾರಿ, ಜೊತೆಗೆ ಕಾರ್ಯದರ್ಶಿ ರವೀಶ್ ಕಾಮತ್ ಹಾಗೂ ಗೌರವ ಹಿತೈಷಿಗಳಾದ ನವೀನ್ ಉಪಸ್ಥಿತಿಯಿದ್ದರು.

ಕೊರೊನಾ ಕಷ್ಟಕಾಲದಲ್ಲಿ ಅಸಹಾಯಕರ ಪಾಲಿಗೆ ನೆರವಾಗುತ್ತಿರುವ ಮೇಕ್ ಸಂಒನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ತಂಡ

Thumbnail
Posted On: 10 Jun 2021, 08:56 PM

ಕಾಪು : ಕೊರೋನದಿಂದಾಗಿ ನಮಗೆಲ್ಲ ತಿಳಿದಿರುವ ಹಾಗೆ ಬಹಳಷ್ಟು ಜನರ ಜೀವನದ ದಿಕ್ಕೇ ಬದಲಾಗಿದೆ, ಬದುಕಿಗೆ ಆಸರೆಯಾಗ ಬೇಕಿದ್ದವರೇ ಕೆಲಸವಿಲ್ಲದೇ ಮನೆಯಲ್ಲೇ ಇರಬೇಕಾದ ಪರಿಸ್ಥಿತಿ, ಈ ಕಷ್ಟ ಕಾಲದಲ್ಲಿ ನಾವೆಲ್ಲರೂ ಒಂದಾಗಿ ಒಬ್ಬರಿಗೊಬ್ಬರು ನೆರವಾಗುವುದೇ ಜೀವನ. ಮೇಕ್ ಸಂಒನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ತಂಡ ನಮ್ಮ ಕೈಯಲ್ಲಾದ ಕಿಂಚಿತು ಸಹಾಯವನ್ನು ಈ ಕೊರೋನದಿಂದ ತೊಂದರೆಯಾದ ಕುಟುಂಬಗಳಿಗೆ ನೀಡುತ್ತಾ ಬಂದಿರುತ್ತದೆ. ಹಾಗೇ ಈ ವರುಷ ಕೊರೋನ ಎರಡನೇ ಅಲೆಯ ಲಾಕ್ಡೌನ್ ಅವಧಿಯಲ್ಲಿ ಈ ತಂಡವು ಉಡುಪಿ ಜಿಲ್ಲೆಯಾದ್ಯಂತ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಕಿಟ್ ವಿತರಿಸುವ ಕಾರ್ಯವನ್ನು ಕೈಗೆತ್ತಿಗೊಂಡಿದೆ. ಸುಮಾರು 5ಲಕ್ಷ ರೂಪಾಯಿ ವೆಚ್ಚದಲ್ಲಿ 500 ಕ್ಕಿಂತ ಹೆಚ್ಚು ಕುಟುಂಬಗಳಿಗೆ ಜಿಲ್ಲೆಯಾದ್ಯಂತ, ಹಳ್ಳಿ ಹಳ್ಳಿಗಳಲ್ಲಿ ಸಂಚರಿಸಿ, ತೀರಾ ಬಡವರಿಗೆ ಕಿಟ್ ವಿತರಿಸುವ ಕೆಲಸವನ್ನು ಕಳೆದ 10 ದಿನಗಳಿಂದ ಯಶಸ್ವಿಯಾಗಿ ಮಾಡುತ್ತ ಬಂದಿದೆ. ಮೊದಲಿಗೆ ಸುಮಾರು ೧೦೦ ಕಿಟ್ಗಳನ್ನೂ ಕೊಡುವ ಉದ್ದೇಶದಿಂದ ಈ ಕಾರ್ಯಕ್ರಮ ಆರಂಭವಾಯಿತು ನಂತರ ತಂಡದ ಸದಸ್ಯರ ಉತ್ತಮ ಪ್ರತಿಕ್ರಿಯೆಯಿಂದ ಸುಮಾರು 500 ಕಿಟ್ಗಳನ್ನು ಈಗಾಗಲೇ ನೀಡಿ ಇನ್ನು ಹಲವು ಕುಟುಂಬಗಳಿಗೆ ಕಿಟ್ ವಿತರಿಸುವ ಉದ್ದೇಶ ಹೊಂದಿದ್ದಾರೆ. ಈ ಕಿಟ್ಗಳನ್ನೂ ವಿತರಿಸುವ ಸಂದರ್ಭದಲ್ಲಿ ಯಾವುದೇ ಕುಟುಂಬದ ಫೋಟೋಗಳನ್ನೂ ತೆಗೆಯದೆ ಕೇವಲ ಮನೆಗಳ ಫೋಟೋಗಳನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹೊಸ ಆರಂಭವನ್ನು ಆರಂಭಿಸಿ ಎಲ್ಲರ ಮೆಚ್ಚುಗೆಯನ್ನು ಗಳಿಸಿದ್ದಾರೆ. ಈ ತಂಡವು ಈಗಾಗಲೇ ಹಲವಾರು ಇಂತಹ ಜನ ಹಿತಕರವಾದ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಆ ಬಡ ಕುಟುಂಬಗಳ ಮನೆಯ ಬಾಗಿಲಿನಲ್ಲಿ ಕಿಟ್ಗಳನ್ನು ಇಟ್ಟು ,ಆ ಮನೆಮಂದಿಯ ಮುಖದಲ್ಲೊಂದು ಸಣ್ಣ ನಗು ತರಿಸುವ ಒಂದು ಪುಟ್ಟ ಪ್ರಯತ್ನ. ಮುಂದೆ ಖಂಡಿತವಾಗಿಯೂ ಅವರ ಕಷ್ಟಕ್ಕೆ ನಾವೆಲ್ಲರೂ ಆಸರೆಯಾಗುವೆವು ಎಂಬುದು ಈ ತಂಡದ ಸದಸ್ಯರ ಗುರಿ. ಇದರ ಜೊತೆಗೆ ಕೆಲವು ಆಶ್ರಮಗಳಿಗೆ ಆಹಾರ ಸಾಮಗ್ರಿಗಳನ್ನು ಈ ಲಾಕ್ಡೌನ್ ಸಂದರ್ಭದಲ್ಲಿ ಪೂರೈಸಿದ್ದಾರೆ. ಬ್ರಹ್ಮಾವರದ ಅಪ್ಪ ಅಮ್ಮ ಅನಾಥಾಲಯ, ಕಾರ್ಕಳದ ಸುರಕ್ಷಾ ವೃದ್ಧಾಶ್ರಮ, ಮಂಗಳೂರಿನ ಸ್ನೇಹದೀಪ , ಮಣಿಪಾಲದ ಹೊಸಬೆಳಕು ಈ ನಾಲ್ಕು ಸಂಸ್ಥೆ ಗಳಿಗೆ ದಿನಸಿ ಸಾಮಗ್ರಿಗಳನ್ನೂ ಪೂರೈಸಿದೆ. ಹಲವು ಗ್ರಾಮ ಪಂಚಾಯತಿಯ ಆಶಾ ಕಾರ್ಯಕರ್ತರಿಗೆ ಸನ್ಮಾನ ಹಾಗು ಕಿಟ್ ವಿತರಣೆ, ಅರೋಗ್ಯ ಕೇಂದ್ರದ ದಾದಿಯರಿಗೆ ಸನ್ಮಾನ ಮತ್ತು ಕಿಟ್ಗಳನ್ನು , ವೈದ್ಯಾಧಿಕಾರಿಗಳಿಗೆ ಗೌರವಾರ್ಪಣೆ, ಇಂತಹ ವಿವಿಧ ಕಾರ್ಯಕ್ರಮ ಗಳನ್ನೂ ನಡೆಸಿದ್ದಾರೆ. ಈ ಕೊರೋನ ಆದಷ್ಟು ಬೇಗ ನಮ್ಮೆಲ್ಲರ ಜೀವನದಿಂದ ದೂರವಾಗಿ ನಮೆಲ್ಲರ ಜೀವನದಲ್ಲಿ ಸುಖ,ಶಾಂತಿ, ನೆಮ್ಮದಿ , ಆರೋಗ್ಯ ಸಿಗಲೆಂದು ಆ ದೇವರಲ್ಲಿ ನಾವೆಲ್ಲರೂ ಪ್ರಾರ್ಥಿಸೋಣ. ಮೇಕ್ ಸಂಒನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ತಂಡ (MAKESOME1SMILE HELPINGHAND) ಉಡುಪಿ /ದಕ್ಷಿಣಕನ್ನಡ/ಮುಂಬೈ. Follow us on Instagram/Facebook Makesome1smile_helpinghand Logon to: www.makesome1smile.com

ತಲ್ಮಕ್ಕಿ ಪರಿಶಿಷ್ಟ ಪಂಗಡದ ಸಮುದಾಯ ಭವನವೋ! ಇಲ್ಲ ಸಿಮೆಂಟ್ ಗೋದಾಮೋ?

Thumbnail
Posted On: 10 Jun 2021, 07:26 PM

ಕುಂದಾಪುರ ಜೂ.9: ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯತ್ ತಲ್ಮಕ್ಕಿ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಪಂಗಡ ಸಮುದಾಯ ಭವನ ನಿರ್ಮಾಣಕ್ಕೆ ಕರ್ನಾಟಕ ಸರಕಾರ ಸರಿಸುಮಾರು ಅಂದಾಜು ವೆಚ್ಚ 12 ಲಕ್ಷ ವ್ಯಯಿಸಿ ಕೆ. ಆರ್.ಐ.ಡಿ. ಎಲ್., ಉಡುಪಿ ಅಡಿಯಲ್ಲಿ 2014-15ರಲ್ಲಿ ನಿರ್ಮಾಣ ಮಾಡಿತ್ತು. ಆದರೆ ಈ ಸಮುದಾಯ ಭವನದ ಪ್ರಸ್ತುತ ಸ್ಥಿತಿಗತಿಗಳನ್ನು ನೋಡಿದಾಗ ಪರಿಶಿಷ್ಟ ಪಂಗಡದ ಭವನವೋ? ಇಲ್ಲ ಸಿಮೆಂಟ್ ಗೋದಾಮೋ? ಎನ್ನುವ ಪ್ರಶ್ನೆ ಕಾಡಿದೆ. ಸಮುದಾಯದ ಸುತ್ತಮುತ್ತ ಗಿಡಗಂಟಿಗಳು ಬೆಳೆದು ನಿಂತಿದೆ, ಸಮುದಾಯ ಭವನದ ಹೊರಗಡೆ ಇರುವ ಸೋಲಾರ್ ದೀಪ ಕಾಣೆಯಾಗಿದೆ. ಸಮುದಾಯದ ಭವನದ ಒಳಗಡೆ ಸಹ ಯಾವುದೇ ಲೈಟ್ ಮತ್ತು ಫ್ಯಾನ್ ಕಾಣಿಸುತ್ತಿಲ್ಲ. ಸಮುದಾಯ ಭವನದ ಬಾಗಿಲಿನ ಚಿಲಕವನ್ನು ಮುರಿಯಲಾಗಿದ್ದು, ಕಬ್ಬಿಣದ ತಂತಿಯನ್ನು ಬಳಸಿ ಮುಚ್ಚಲಾಗಿದೆ. ಸ್ಥಳೀಯ ಗ್ರಾಮ ಪಂಚಾಯತ್ ಪಿಡಿಯೋ, ಗ್ರಾಮಲೆಕ್ಕಿಗ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರು ಸ್ಥಳೀಯ ಜನಪ್ರತಿನಿಧಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆಯೇ? ಸ್ಥಳೀಯರು ಹೇಳುವಂತೆ ಸಮುದಾಯ ಭವನದ ಒಳಗೆ ಕಬ್ಬಿಣದ ರಾಡ್, ಸಿಮೆಂಟ್ ಚೀಲಗಳ ದಾಸ್ತಾನು ಮಾಡಿದ್ದು ಹಲವು ತಿಂಗಳಿಂದ ಈ ಚಟುವಟಿಕೆ ನಡೆಯುತ್ತಿದ್ದೆ, ಆದರೂ ಎಲ್ಲಾ ಸಿಮೆಂಟ್ ಚೀಲಗಳು ಯಾರಿಗೆ ಸಂಬಂಧಪಟ್ಟಿದ್ದು? ಈ ಸಿಮೆಂಟ್ ಚೀಲಗಳನ್ನು ಇಲ್ಲಿ ಇರಿಸಲು ಅನುಮತಿ ನೀಡಿದವರಾರು? ಸಮುದಾಯ ಭವನದ ಬೀಗ ಮುರಿದರು ಇನ್ನೂ ಗ್ರಾಮ ಪಂಚಾಯತ್ ಗಮನಕ್ಕೆ ಬಾರದೆ ಇದ್ದಿದ್ದು ವಿಪರ್ಯಾಸವೇ ಸರಿ! ಆದಷ್ಟು ಬೇಗ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಯವರು ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕಾಗಿದೆ. ವರದಿ : ಕಿರಣ್ ಕುಂದಾಪುರ