Updated News From Kaup
ಕುಂದಾಪುರ : ಲಾರಿ ಚಾಲಕರಿಗೆ ಊಟ ನೀಡಿದ ಶ್ರೀನಾರಾಯಣಗುರು ಯುವಕ ಮಂಡಲ ಕುಂದಾಪುರ
Posted On: 08 Jun 2021, 08:37 PM
ಕುಂದಾಪುರ ಜೂ.7 : ಕೋವಿಡ್ ಎರಡನೇ ಅಲೆಯಿಂದ ಜನ ಜೀವನ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಈ ಕೊರೋನ ಲಾಕ್ಡೌನ್ ಹಲವರ ತುತ್ತಿನ ಅನ್ನ ಕುಸಿದಿದೆ. ಅದರಲ್ಲೂ ಲಾರಿ ಚಾಲಕರ ಸ್ಥಿತಿಯಂತೂ ಅತೀ ದಾರುಣವಾಗಿದೆ. ಕೋವಿಡ್ ಕರ್ಫ್ಯೂ ಘೋಷಣೆ ಆದ ಬಳಿಕ ಹೆದ್ದಾರಿಯಲ್ಲಿ ಕೈ ಬೆರಳೆಣಿಕೆಯಷ್ಟೇ ಹೋಟೆಲ್ ತೆರೆಯದೇ ಇರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂದು ಶ್ರೀನಾರಾಯಣ ಗುರು ಯುವಕ ಮಂಡಲ (ರಿ.) ಕುಂದಾಪುರ ವತಿಯಿಂದ ಲಾರಿ ಚಾಲಕರಿಗೆ ಸರಿಸುಮಾರು 250 ಊಟವನ್ನು ಕುಂದಾಪುರ ಮಾಜಿ ಪುರಸಭಾಧ್ಯಕ್ಷ ಅಧ್ಯಕ್ಷೆ ಶ್ರೀಮತಿ ಗುಣರತ್ನರವರ ನೆರವಿನಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಯುವಕ ಮಂಡಲ (ರಿ.) ಅಧ್ಯಕ್ಷ ಶ್ರೀನಾಥ್ ಕಡ್ಗಿ ಮನೆ, ಗೌರವಾಧ್ಯಕ್ಷರಾದ ಅಶೋಕ್ ಪೂಜಾರಿ, ಕಾರ್ಯದರ್ಶಿಯಾದ ವಿಜಯ ಕೋಣಿ, ಉಪಾಧ್ಯಕ್ಷರಾದ ಯೋಗೀಶ್ ಕೋಡಿ,ಅಜಿತ್ ಚರ್ಚ್ ರೋಡ್, ನಿರ್ದೇಶಕರದಂತಹ ಭಾಸ್ಕರ ವಿಠಲವಾಡಿ ರಾಜೇಶ್ ಕಡ್ಗಿ ಮನೆ ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವತಿಯಿಂದ ಕಾಪು ತಾಲೂಕಿನ ಸಿ ಪ್ರವರ್ಗದ ದೈವ - ದೇವಸ್ಥಾನಗಳ ಅರ್ಚಕ, ಸಿಬ್ಬಂದಿಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ
Posted On: 08 Jun 2021, 12:32 PM
ಕಾಪು : ಸರಕಾರದ ಆದೇಶದಂತೆ ಕಾಪು ತಾಲೂಕಿನ ಸಿ ಪ್ರವರ್ಗದ 30 ಅಧಿಸೂಚಿತ ಸಂಸ್ಥೆ ದೈವ - ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಮತ್ತು ಸಿಬ್ಬಂದಿಗಳಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಅಭಿವೃದ್ಧಿ (ಜಿರ್ಣೋದ್ದಾರ) ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ಕಾಪು ತಾಲೂಕಿನ ಉಪ ತಹಸೀಲ್ದಾರ್ ಶ್ರೀ ಚಂದ್ರಹಾಸ್ ಬಂಗೇರ, ವ್ಯವಸ್ಥಾಪನ ಸಮಿತಿಯ ಸರ್ವಸದಸ್ಯರು ಮತ್ತು ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿಯವರು ಉಪಸ್ಥಿತರಿದ್ದರು.
ಖಾಸಗಿ ಶಿಕ್ಷಕರಿಗೆ ಸಹಾಯ ಹಸ್ತ ನೀಡಿದ ನಟ ಲಿಖಿತ್ ಶೆಟ್ಟಿ
Posted On: 08 Jun 2021, 11:26 AM
ಕಾಪು : ಕೋವಿಡ್ ನಿಂದ ಅನೇಕ ಶಾಲಾ ಶಿಕ್ಷಕರಿಗೆ ಸಂಬಳ ಇಲ್ಲದಂತಹ ದಿನಗಳು ನಿರ್ಮಾಣವಾಗಿವೆ. ಕೆಲವರಿಗೆ ಅರ್ಧ ಸಂಬಳ, ಇನ್ನು ಕೆಲವರಿಗೆ ಸಮಯಕ್ಕೆ ಸರಿಯಾಗಿ ಸಂಬಳವೇ ತಲುಪುತ್ತಿಲ್ಲ. ತಮ್ಮವರನ್ನು ಕಳೆದುಕೊಂಡಿರುವ ಹಾಗೂ ಕೋವಿಡ್ ನಿಂದ ಅತಿಥಿ ಶಿಕ್ಷಕರಿಗೆ ಪರ್ಮನೆಂಟ್ ಕೆಲಸ ಆಗಲು ಇನ್ನೂ ಕಾಯಬೇಕಾದಂತಹ ಪರಿಸ್ಥಿತಿ. ಇಂತಹ ಕಠಿಣ ಸಮಯದಲ್ಲಿ ಬೆಂಗಳೂರಿನ ಖಾಸಗಿ ಶಿಕ್ಷಕರ ಸಂಘದವರು ಅನೇಕರಿಗೆ ಮನವಿಯನ್ನು ನೀಡಿ ಸರಿಯಾದ ಸ್ಪಂದನೆ ಸಿಗದಿದ್ದಾಗ ಅದು ಹೇಗೋ ಅವರ ವಿಚಾರಗಳನ್ನು ತಿಳಿದುಕೊಂಡು ಬಹುತೇಕ 33ಕ್ಕೂ ಹೆಚ್ಚು ಶಿಕ್ಷಕರ ಕುಟುಂಬಗಳಿಗೆ ದಿನಸಿ ಸಾಮಾಗ್ರಿಯ ಕಿಟ್ ಅನ್ನು ಕಾಣಿಕೆಯಾಗಿ ನೀಡಿದ್ದಾರೆ. ಶಿಕ್ಷಕರು ಸಮಾಜವನ್ನು ನಿರ್ಮಾಣ ಮಾಡುವವರು ಇಂತಹ ಸಮಯದಲ್ಲಿ ಅವರ ಜೊತೆ ನಿಲ್ಲುವುದು ನಮ್ಮ ಆದ್ಯ ಕರ್ತವ್ಯ ಎಂದು ಲಿಖಿತ್ ಶೆಟ್ಟಿ ಸ್ವತಃ ತಾವೇ ಶಿಕ್ಷಕರ ಸಂಘದ ಮುಖ್ಯಸ್ಥೆ ಆಯೆಷಾ ಶೇಖ್ ಬೆಂಗಳೂರು ಅವರಿಗೆ ಕರೆ ಮಾಡಿ ಕಿಟ್ ನ್ನು ಹಸ್ತಾಂತರಿಸಿದ್ದಾರೆ. ನಟ ನಿರ್ಮಾಪಕ ಹಾಗೂ ಅನೇಕ ಉದ್ಯಮದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಒರಿಯರ್ದೊರಿ ಅಸಲ್(ತುಳು), ನಮ್ ದುನಿಯಾ ನಮ್ ಸ್ಟೈಲ್, ಪೆಟ್ರೋಲ್ ಹಾಗೂ ಸಂಕಷ್ಟಕರ ಗಣಪತಿ , ಫ್ಯಾಮಿಲಿ ಪ್ಯಾಕ್ ಸಿನಿಮಾಗಳ ನಾಯಕನಟ ಲಿಖಿತ್ ಶೆಟ್ಟಿ ಹೆಚ್ಚು ಸದ್ದುಗದ್ದಲವಿಲ್ಲದೆ ತಾವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದಾರೆ. ಲಿಖಿತ್ ಶೆಟ್ಟಿ ಯವರ ಎಲ್ಲಾ ಸಿನಿಮಾಗಳಿಗೆ , ಯೋಜನೆಗಳಿಗೆ ಶುಭವಾಗಲಿ.
ಕುಂದಾಪುರ ಅಂಬೇಡ್ಕರ್ ಕಾಲೋನಿ ನಿವಾಸಿಗಳಿಗೆ ಡೈನಾಮಿಕ್ ಇನ್ಫ್ರಾಟೆಕ್ ವತಿಯಿಂದ ಕಿಟ್ ವಿತರಣೆ
Posted On: 07 Jun 2021, 03:19 PM
ಕುಂದಾಪುರ, ಜೂ.7 : ಕೋವಿಡ್ ಮಹಾಮಾರಿ 2ನೇ ಅಲೆಗೆ ಜನಸಾಮಾನ್ಯರ ಬವಣೆ ಹೇಳತೀರದು, ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಅಂಬೇಡ್ಕರ್ ಕಾಲೋನಿ ಜನರ ಸಂಕಷ್ಟವನ್ನು ಅರಿತು ಉಡುಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಪುರಸಭೆ ಸದಸ್ಯರಾದ ಪ್ರಭಾಕರ್ ವಿ. ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶೇಖರ್ ಪೂಜಾರಿಯವರು, ಡೈನಾಮಿಕ್ ಇನ್ಫ್ರಾಟೆಕ್ ಸಂಸ್ಥೆಯ ಪಾಲುದಾರರಾದ ದಿನೇಶ್ ಅಮೀನ್, ಗಣೇಶ್ ಅಮೀನ್, ಧೀರಜ್ ಹೆಜ್ಮಾಡಿಯವರ ಸಹಭಾಗಿತ್ವದಲ್ಲಿ ನಿನ್ನೆ ಅಂಬೇಡ್ಕರ್ ಕಾಲೋನಿ ನಿವಾಸಿಗಳಿಗೆ ಸರಿಸುಮಾರು 25 ಫುಡ್ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ಮಾಜಿ ಅಧ್ಯಕ್ಷರಾದ ದೇವಕಿ ಸಣ್ಣಯ್ಯ, ಬಿಜೆಪಿ ಕುಂದಾಪುರ ಮಂಡಲ ಕ್ಷೇತ್ರ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ, ಉಪಾಧ್ಯಕ್ಷರಾದ ಸಂದೀಪ್ ಖಾರ್ವಿ, ಉಡುಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಪುರಸಭೆ ಸದಸ್ಯರಾದ ಪ್ರಭಾಕರ್ ವಿ., ಸ್ಥಾಯಿ ಸಮಿತಿ ಅಧ್ಯಕ್ಷರಾದ ಶೇಖರ್ ಪೂಜಾರಿ, ಪುರಸಭೆ ಸದಸ್ಯರಾದ ಅಶ್ವಿನಿ ಪ್ರದೀಪ್, ಸಂತೋಷ್ ಶೆಟ್ಟಿ ಹಾಗೂ ಡೈನಾಮಿಕ್ ಇನ್ಫ್ರಾಟೆಕ್ ಸಂಸ್ಥೆಯ ದಿನೇಶ್ ಅಮೀನ್, ಧೀರಜ್ ಹೆಜಮಾಡಿ, ಗಣೇಶ್ ಅಮೀನ್, ಭಾಸ್ಕರ್ ಬಿಲ್ಲವ, ಕಮಲಾಕ್ಷ ಯು, ಭಾಸ್ಕರ ವಿಠಲವಾಡಿ, ಹರೀಶ್ ಕುಂದರ್, ದಿವಾಕರ್ ಕಡ್ಗಿಮನೆ, ಅಬ್ದುಲ್ ಅಜೀಜ್, ಹರೀಶ್ ಪುತ್ರನ್, ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಉಪಸ್ಥಿತರಿದ್ದರು.
ಕಾಪು : ಶಾಲಾ ವಾಹನ ಚಾಲಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ದಿನಸಿ ಸಾಮಗ್ರಿಗಳ ವಿತರಣೆ
Posted On: 07 Jun 2021, 03:13 PM
ಕಾಪು : ಲಾಕ್ ಡೌನ್ ಸಂದರ್ಭದಲ್ಲಿ ಕಾಪು ಪರಿಸರದ ಶಾಲಾ ವಾಹನ ಚಾಲಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ನೀತಾ ಪ್ರಭು ಹಾಗೂ ಸ್ನೇಹಿತರ ಸಹಕಾರದೊಂದಿಗೆ 28 ಸಾವಿರ ಮೌಲ್ಯದ 35 ಕಿಟ್ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ನೀತಾ ಪ್ರಭು, ಪ್ರಶಾಂತ್ ಪೂಜಾರಿ ಕಾಪು, ಅರುಣ್ ಕಾಮತ್, ಯಾದವ್ ಪೂಜಾರಿ, ಪ್ರಜ್ವಲ್ ಶೆಟ್ಟಿ ಮಲ್ಲಾರ್, ಜೀವನ್ ಶೆಟ್ಟಿ ಮಲ್ಲಾರ್, ಶ್ರೀಕಾಂತ್ ನಾಯಕ್ ಅಲೆವೂರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ, ಜನಪ್ರತಿನಿಧಿಗಳಿಗೆ ದೈವ ಚಾಕ್ರಿ ವರ್ಗದ ಪರವಾಗಿ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದಿಂದ ಟ್ವಿಟರ್ ಅಭಿಯಾನ
Posted On: 07 Jun 2021, 02:22 PM
ಉಡುಪಿ : ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿನೋದ್ ಶೆಟ್ಟಿ ಅವರು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ನಮ್ಮ ಕರಾವಳಿಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇರುವ ದೈವಾರಾಧನೆ ಕ್ಷೇತ್ರದಲ್ಲಿ ಸುಮಾರು 60 ಸಾವಿರಕ್ಕಿಂತಲೂ ಹೆಚ್ಚು ದೈವ ಚಾಕ್ರಿ ಮಾಡುವ ವರ್ಗದವರಿದ್ದಾರೆ. ಅದರಲ್ಲಿ ಪರವ ಸಮುದಾಯ, ನಲಿಕೆ ಸಮುದಾಯ, ಪಂಬದ ಸಮುದಾಯ, ಕೊರಗ ಸಮುದಾಯ, ನಾಗಸ್ವರ ಬ್ಯಾಂಡ್ ವಾದಕರು, ದರ್ಶನ ಪಾತ್ರಿಗಳು, ಮಧ್ಯಸ್ಥರು, ಮುಕ್ಕಲಿ, ಮಡಿವಾಳರು, ಬಬ್ಬು ಸ್ವಾಮಿ, ಸ್ವಾಮಿ ಕೂಡುಕಟ್ಟು, ಮುಂಡಾಲ ಸಮುದಾಯ, ಗರಡಿ ಕೂಡುಕಟ್ಟು ಹೀಗೆ ಹಲವಾರು ದೈವ ಚಾಕ್ರಿ ವರ್ಗದವರಿದ್ದಾರೆ ಇವರಿಗೆ ದೈವಾರಾಧನೆ ಅಲ್ಲಿ ಬರುವ ಸಂಭಾವನೆಯಲ್ಲಿ ಕುಟುಂಬವನ್ನು ನಡೆಸ ಬೇಕಾಗಿರುತ್ತದೆ. ಲಾಕ್ ಡೌನ್ ಆದುದರಿಂದ ಯಾವುದೇ ಸೇವಾ ಕಾರ್ಯಗಳು ನಡೆಯುವುದಿಲ್ಲ ಆದ್ದರಿಂದ ಸಂಕಷ್ಟದಲ್ಲಿದ್ದಾರೆ. ಕಳೆದ ಬಾರಿ, ಈ ಬಾರಿ ಸರ್ಕಾರಕ್ಕೆ ಎಷ್ಟು ಮನವಿ ಕೊಟ್ಟರು ಸರ್ಕಾರ ಸ್ಪಂದನೆಗೆ ಬೆಲೆ ಕೊಡುತ್ತಿಲ್ಲ. ಶಾಸಕರು, ಸಂಸದರು, ಉಸ್ತುವಾರಿ ಸಚಿವರು, ಧಾರ್ಮಿಕ ದತ್ತಿ ಇಲಾಖೆ ಸಚಿವರು ಮುಗ್ಧ ಮನಸಿನ ದೈವ ಚಾಕ್ರಿ ವರ್ಗದವರ ಬೆಂಬಲಕ್ಕೆ ಬರುವುದಿಲ್ಲ. ಯಾಕೆ ಇಷ್ಟು ದಿನ ಇದರ ಬಗ್ಗೆ ಮೌನವೆಂಬುದು ನನ್ನ ಪ್ರಶ್ನೆ. ಇನ್ನು ಮುಂದಿನ ದಿನದಲ್ಲಿ ಅದಕ್ಕೆ ಸೂಕ್ತ ಮನವಿಯನ್ನು ಕೊಡಬೇಕಾಗಿ ಎಲ್ಲಾ ರಾಜಕೀಯ ಮುಖಂಡರಿಗೆ ಮನವಿ ಮಾಡುತ್ತಿದ್ದೇನೆ. ದೈವ ಚಾಕ್ರಿ ಪರವಾಗಿ ಯುವಸಮುದಾಯವನ್ನು ಹೋರಾಟ ಅಭಿಯಾನವನ್ನು ನಡೆಸುತ್ತಿದೆ. ಮೂರು ದಿವಸದ ಹೋರಾಟದಲ್ಲಿ ನೀವು ಮುಖ್ಯಮಂತ್ರಿಗಳಿಗೆ, ರಾಜಕೀಯ ನಾಯಕರಿಗೆ ಯುವ ಸಮುದಾಯದ ನೇತೃತ್ವದಲ್ಲಿ ನಡೆಯುವ ಟ್ವಿಟರ್ ಅಭಿಯಾನ ಚಳುವಳಿ ಟ್ವೀಟ್ ಮಾಡುವುದರ ಮೂಲಕ ದೈವ ಚಾಕ್ರಿ ಅವರಿಗೆ ನ್ಯಾಯ ಒದಗಿಸಿ ಕೊಡಬೇಕಾಗಿ ನಾನು ಬೆಂಬಲ ಕೇಳುತ್ತಿದ್ದೇನೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶಿರ್ವ: ಕುಬೇರ್ ಎಂಟರ್ಪ್ರೈಸಸ್ ವತಿಯಿಂದ ರೇಷನ್ ಕಿಟ್, ಮಾಸ್ಕ್ ವಿತರಣೆ
Posted On: 06 Jun 2021, 11:01 PM
ಕಾಪು : ಕುಬೇರ್ ಎಂಟರ್ಪ್ರೈಸಸ್ ವತಿಯಿಂದ ಸುಮಾರು 60 ಕ್ಕೂ ಹೆಚ್ಚು ಕುಟುಂಬಗಳಿಗೆ ರೇಷನ್ ಕಿಟ್ ವಿತರಣೆ ಮಾಡಲಾಯಿತು. ಇದೇ ಸಂದರ್ಭ ಶಿರ್ವ ಪಂಚಾಯತ್, ಡಾಕ್ಟರ್ಸ್, ಮೆಸ್ಕಾಂ ಸಿಬ್ಬಂದಿ, ಶಿರ್ವ ಪೊಲೀಸ್ ಸಿಬ್ಬಂದಿಗಳಿಗೆ ಮತ್ತು ಆಶಾ ಕಾರ್ಯಕರ್ತರಿಗೆ ಮಾಸ್ಕ್ ವಿತರಣೆಯನ್ನು ಮಾಡಲಾಯಿತು.
ಬಹ್ಮಾವರ : ಮಿಯಾವಾಕಿ ದೇವರ ಕಾಡು ಯೋಜನೆಗೆ ಚಾಲನೆ
Posted On: 06 Jun 2021, 10:53 PM
ಉಡುಪಿ : ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಸುವಣ೯ ಎಂಟರ್ಪ್ರೆಸಸ್ ಮತ್ತು ಶ್ರೀರಾಮ ಫ್ರೆಂಡ್ಸ್ ಹೇರೂರು ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ 24 ಸೆನ್ಸ್ ಗದ್ದೆಯಲ್ಲಿ ಮಿಯಾವಾಕಿ ದೇವರ ಕಾಡು ವನ ಮಾಡುವ ಸಲುವಾಗಿ ವಿವಿಧ ಜಾತಿಯ ಗಿಡ ನೆಡುವ ಕಾಯ೯ಕ್ರಮ ಹೇರೂರುನಲ್ಲಿ ನಡೆಯಿತು. ಜಯಂಟ್ಸ್ ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂದನ್ ಹೇರೂರು ರವರ ಮುತುವಜಿ೯ ಯಲ್ಲಿ ನಡೆದ ಈ ಕಾಯ೯ಕ್ರಮದ ಉದ್ಘಾಟನೆಯನ್ನು ಮಡಿಕೇರಿ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾII ರಾಮಚಂದ್ರ ಕಾಮತ್ ನೆರವೇರಿಸಿ ಶುಭ ಹಾರೈಸಿದರು. ಈ ಸಂದಭ೯ದಲ್ಲಿ ಡಾ|| ವಿಜಯೀoದ್ರ ವಸಂತ್, ವೇಣುಗೋಪಾಲ್ ಹೆಬ್ಬಾರ್, ಸುನಿತಾ ಮಧುಸೂದನ್, ಜಯಂಟ್ಸ್ ನ ಸುಂದರ ಪೂಜಾರಿ ಮೂಡುಕುಕ್ಕುಡೆ, ಮಿಲ್ಟನ್ ಒಲಿವರ್, ವಿವೇಕ್, ಸುರೇಶ್, ರವಿರಾಜ್ ಹೆಚ್.ಪಿ ,ರಾಘವೇಂದ್ರ ಪ್ರಭು,ಕವಾ೯ಲು ಮತ್ತಿತರರು ಉಪಸ್ಥಿತರಿದ್ದರು.
ಪೌರ ಕಾರ್ಮಿಕರಿಗೆ ಡೈನಾಮಿಕ್ ಇನ್ಫ್ರಾಟೆಕ್ ವತಿಯಿಂದ ಕಿಟ್ ವಿತರಣೆ
Posted On: 06 Jun 2021, 10:28 PM
ಕುಂದಾಪುರ : ಪರಿಸರ ಸ್ವಚ್ಛತೆಯ ಜೊತೆಗೆ ಜನರ ಮನೋಭಾವವನ್ನು ಬದಲಾಯಿಸುವುದು ಸ್ವಚ್ಛ ಭಾರತದ ಪರಿಕಲ್ಪನೆ ಯಾಗಿದ್ದು, ಸ್ವಚ್ಛತೆಯ ಕುರಿತು ಕಾನೂನು ಜಾರಿಗೆ ಬಂದರೆ ಸಾಲದು, ಜನರ ಮನಸ್ಥಿತಿ ಪರಿವರ್ತನೆ ಆಗಬೇಕು, ಪರಿಸರವನ್ನು ಸ್ವಚ್ಛವಾಗಿರಿಸುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರವಾದದು, ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಚತೆಯ ಕುರಿತು ಬಿಡುವಿಲ್ಲದೆ ನಿರಂತರ ಸೇವೆ ಸಲ್ಲಿಸುವ ಪೌರ ಕಾರ್ಮಿಕರ ಸೇವೆಯನ್ನು ಗುರುತಿಸಿ ಉಡುಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಪುರಸಭೆ ಸದಸ್ಯರಾದ ಪ್ರಭಾಕರ್ ವಿ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶೇಖರ್ ಪೂಜಾರಿಯವರು, ಡೈನಾಮಿಕ್ ಇನ್ಫ್ರಾಟೆಕ್ ಸಂಸ್ಥೆಯ ಸಹಭಾಗಿತ್ವದಲ್ಲಿ ಇಂದು ಕುಂದಾಪುರ ಪುರಸಭೆ 60 ಪೌರಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ ಮಾಡಲಾಯಿತು. ಫುಡ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಕುಂದಾಪುರ ಮಂಡಲ ಕ್ಷೇತ್ರ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆಯವರು ಪೌರ ಕಾರ್ಮಿಕರ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪೌರಕಾರ್ಮಿಕರು ಕರೋನಾ ವಾರಿಯರ್ಸ್ ಗಳು ಜೀವದ ಹಂಗನ್ನು ತೊರೆದು ದುಡಿದವರು, ಪೌರಕಾರ್ಮಿಕರನ್ನು ಗುರುತಿಸಿ ಫುಡ್ ಕಿಟ್ ನೀಡಿದ ದಾನಿಗಳನ್ನು ಅಭಿನಂದಿಸಿದರು. ಪೌರಕಾರ್ಮಿಕರು ಕೇವಲ ಕೋರೋನಾ ಸಂದರ್ಭದಲ್ಲಿ ಮಾತ್ರ ಕೋರೋನಾ ವಾರಿಯರ್ಸ್ ಅಲ್ಲ, ಅವರು ಸಮಾಜದ ಡಾಕ್ಟರ್ ಗಳು ಮಾತ್ರವಲ್ಲದೆ ಇಡೀ ಸಮಾಜದ ಸ್ವಸ್ಥವನ್ನು ಕಾಪಾಡುವ ಡಾಕ್ಟರ್ ಗಳು ಎಂದು ಕುಂದಾಪುರ ಪುರಸಭೆ ಮಾಜಿ ಅಧ್ಯಕ್ಷರಾದ ಮೋಹನ್ ದಾಸ ಶೈಣೆಯವರು ಮುಕ್ತಕಂಠದಿಂದ ಹೊಗಳಿದರು. ಉಡುಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಪುರಸಭೆ ಸದಸ್ಯರಾದ ಪ್ರಭಾಕರ್ ವಿ. ಯವರು ಡೈನಾಮಿಕ್ ಇನ್ಫ್ರಾಟೆಕ್ ಸಂಸ್ಥೆಯವರಿಗೆ ಅಭಿನಂದನೆ ತಿಳಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ಮಾಜಿ ಅಧ್ಯಕ್ಷರಾದ ಮೋಹನ್ ದಾಸ ಶೈಣೆ, ದೇವಕಿ ಸಣ್ಣಯ್ಯ, ಬಿಜೆಪಿ ಕುಂದಾಪುರ ಮಂಡಲ ಕ್ಷೇತ್ರ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ, ಉಪಾಧ್ಯಕ್ಷರಾದ ಸಂದೀಪ್ ಖಾರ್ವಿ, ಉಡುಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಪುರಸಭೆ ಸದಸ್ಯರಾದ ಪ್ರಭಾಕರ್ .ವಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶೇಖರ್ ಪೂಜಾರಿ, ಪುರಸಭೆ ಸದಸ್ಯರಾದ ಅಶ್ವಿನಿ ಪ್ರದೀಪ್, ಸಂತೋಷ್ ಶೆಟ್ಟಿ ಹಾಗೂ ಡೈನಾಮಿಕ್ ಇನ್ಫ್ರಾಟೆಕ್ ಸಂಸ್ಥೆಯ ದಿನೇಶ್ ಅಮೀನ್, ಧೀರಜ್ ಹೆಜಮಾಡಿ, ಗಣೇಶ್ ಅಮೀನ್, ಭಾಸ್ಕರ್ ಬಿಲ್ಲವ, ಕಮಲಾಕ್ಷ ಯು, ಭಾಸ್ಕರ ವಿಠಲವಾಡಿ, ಹರೀಶ್ ಕುಂದರ್, ದಿವಾಕರ್ ಕಡ್ಗಿಮನೆ, ಅಬ್ದುಲ್ ಅಜೀಜ್, ಹರೀಶ್ ಪುತ್ರನ್, ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಉಪಸ್ಥಿತರಿದ್ದರು.
ಕೊಲ್ಲೂರು : ಕಲ್ಯಾಣಿಗುಡ್ಡೆ ಬಡ ಪರಿಶಿಷ್ಟ ಪಂಗಡ ಬುಡಕಟ್ಟು ಜನಾಂಗದವರಿಗೆ ಕಿಟ್ ವಿತರಣೆ ಮತ್ತು ಶಾಶ್ವತ ಸೂರಿಗಾಗಿ ಮನವಿ
Posted On: 05 Jun 2021, 10:29 PM
ಉಡುಪಿ : ಕೋರೋನಾ ಮಹಾಮಾರಿ 2ನೇ ಅಲೆಗೆ ಕಲ್ಯಾಣಿಗುಡ್ಡೆ ಭಾಗದ ಪರಿಶಿಷ್ಟ ಪಂಗಡ ಬುಡಕಟ್ಟು ಜನರ ಸಂಕಷ್ಟವನ್ನು ಅರಿತು ಉಡುಪಿ ಜಿಲ್ಲೆ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಂದಾಪುರ ಪುರಸಭೆ ಸದಸ್ಯರಾದ ಪ್ರಭಾಕರ ವಿ ರವರು ಹಿಂದೆ ಕುಂದಾಪುರದ ಎಸಿಪಿ, ಪ್ರಸುತ್ತ ಮಂಗಳೂರಿನ ಡಿಸಿಪಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಹರಿರಾಮ್ ಶಂಕರ್ ರವರಿಗೆ ಪ್ರಸ್ತುತ ಪರಿಶಿಷ್ಟ ಪಂಗಡ ಬುಡಕಟ್ಟು ಜನಾಂಗದ ಸ್ಥಿತಿಗತಿಗಳ ಮನವರಿಕೆ ಮಾಡಿ ಸಹಾಯ ಹಸ್ತ ಕೇಳಿದಾಗ ಡಿಸಿಪಿ ಹರಿರಾಮ್ ಶಂಕರ್ ಸ್ಪಂದಿಸುವುದರ ಜೊತೆಗೆ ಮತ್ತೊಮ್ಮೆ ಮಾನವೀಯತೆಯಿಂದ ಮೆರೆದಿದ್ದಾರೆ. ಹರೆರಾಮ ಶಂಕರ್, ಮಂಗಳೂರು ಡಿಸಿಪಿ ಡಿಸಿಪಿ ಹರೇರಾಮ್ ಶಂಕರ್ ರವರ ಮನವಿಗೆ ಒಗೊಟ್ಟ ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಕೊಲ್ಲೂರು ಸಮೀಪದ ಕಲ್ಯಾಣಿಗುಡ್ಡೆಯ ಬಡ ಪರಿಶಿಷ್ಟ ಪಂಗಡ ಬುಡಕಟ್ಟು ಜನಾಂಗದ ಸುಮಾರು ಮೂವತ್ತು ಕುಟುಂಬಗಳಿಗೆ ಕುಂದಾಪುರದ ನ್ಯೂ ಮೆಡಿಕಲ್ ಸೆಂಟರ್ ನ ಡಾಕ್ಟರ್ ರಂಜನ್ ಶೆಟ್ಟಿ ಅವರ ಸೂಚನೆಯ ಮೇರೆಗೆ ಇಂದು ಕೊಲ್ಲೂರು ಸರಕಾರಿ ಶಾಲೆಯ ವಠಾರದಲ್ಲಿ ಪರಿಶಿಷ್ಟ ಪಂಗಡ ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಆಹಾರ ಕಿಟ್ ಗಳನ್ನು ವಿತರಿಸಲಾಯಿತು. ಈ ಹಿಂದೆ ಕುಂದಾಪುರದ ಎಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಹರೇರಾಮ್ ಶಂಕರ್ ರವರು ಕಲ್ಯಾಣಿಗುಡ್ಡೆಯ ಬಡ ಪರಿಶಿಷ್ಟ ಪಂಗಡ ಬುಡಕಟ್ಟು ಜನಾಂಗದ ಗುಡಿಸಲಲ್ಲಿ ವಾಸಿಸುವ ಪರಿವಾರದವರನ್ನು ಖುದ್ದಾಗಿ ಭೇಟಿ ನೀಡಿ ಅವರ ಸುಖದುಃಖಗಳನ್ನು ವಿಚಾರಿಸಿದ್ದರು, ಮಾತ್ರವಲ್ಲದೆ ಇವರುಗಳಿಗೆ ಶಾಶ್ವತ ಸೂರು ಕಲ್ಪಿಸಬೇಕೆಂದು ಸ್ಥಳೀಯ ಜನಪ್ರತಿನಿಧಿಗಳು ಮತ್ತು ಶಾಸಕರ ಗಮನಕ್ಕೂ ತಂದಿದ್ದರು. ಇಂದು ಪರಿಶಿಷ್ಟ ಪಂಗಡ ಬುಡಕಟ್ಟು ಜನಾಂಗದ ಅಧ್ಯಕ್ಷರಾದ ಕುಶಾಲ್, ಉಪಾಧ್ಯಕ್ಷರಾದ ಶಿವರವರು ನೆರೆದಿರುವ ಮುಖಂಡರುಗಳ ಸಮ್ಮುಖದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ 21 ಪರಿವಾರದವರಿಗೆ ಶಾಶ್ವತ ಸೂರು ಕಲ್ಪಿಸಬೇಕೆಂದು ಮನವಿ ನೀಡಿದರು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು ಹಾಗೂ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೇಶ್ ಭಟ್, ಉಪಾಧ್ಯಕ್ಷರಾದಂತ ಹರೀಶ್ ಶೆಟ್ಟಿ ಕೊಲ್ಲೂರು ಹಾಗೂ ಯುವ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಮಚ್ಚಟ್ಟು, ಕೋಶಾಧಿಕಾರಿ ನಿತಿನ್ ಕುಮಾರ್ ಶೆಟ್ಟಿ ಹುಂಚನಿ, ಸಚಿನ್ ಶೆಟ್ಟಿ ವಕ್ವಾಡಿ, ಉಡುಪಿ ಜಿಲ್ಲೆ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಂದಾಪುರ ಪುರಸಭಾ ಸದಸ್ಯ ಪ್ರಭಾಕರ.ವಿ, ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ರುಕ್ಕನ್ ಗೌಡ, ಕರುಣ್ ಶೆಟ್ಟಿ ಕಾನಕಿ ಮತ್ತು ಅರುಣ್ ಕುಮಾರ್ ಶೆಟ್ಟಿ , ಸ್ಥಳೀಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
