Updated News From Kaup
R.M ಕ್ರಿಯೆಷನ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ಮಾಜಂದಿನ ಮೋಕೆ ತುಳು ಆಲ್ಬಮ್ ಗೀತೆ ಬಿಡುಗಡೆ
Posted On: 14-02-2021 09:38PM
ಪ್ರಿಯ ಕ್ರಿಯೇಷನ್ಸ್ ಅರ್ಪಿಸುವ ಅಕ್ಕ-ತಂಗಿಯ ಪ್ರೀತಿಯ ಸಂಬಂಧವನ್ನು ಸಾರುವ ಮಾಜಂದಿನ ಮೋಕೆ ಎಂಬ ತುಳು ಆಲ್ಬಮ್ ಗೀತೆ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಅಡ್ವೆಯಲ್ಲಿ, ಯುವವಾಹಿನಿ (ರಿ) ಅಡ್ವೆ ಘಟಕದ ಆಶ್ರಯದಲ್ಲಿ ಕ್ಷೇತ್ರದ ಪೂಜಾ ಕಾರ್ಯಕ್ರಮದೊಂದಿಗೆ R.M ಕ್ರಿಯೆಷನ್ಸ್ ಲಾಂಛನದ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳಿಸಲಾಯಿತು.
ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡ ವಿಜಯ ಬಾಲನಿಕೇತನ ಭೇಟಿ
Posted On: 14-02-2021 08:48PM
ಉಡುಪಿ : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಬ್ರಹ್ಮಾವರದ ಮಠಪಾಡಿಯ ಆಶಕ್ತ ಕಾರ್ಮಿಕ ಮಕ್ಕಳ ವಸತಿ ಗೃಹ ವಿಜಯ ಬಾಲನಿಕೇತನಕ್ಕೆ ಭೇಟಿ ನೀಡಿ ಅವರ ಬೇಡಿಕೆಯ ಅವಶ್ಯ ತರಕಾರಿ ಸಾಮಗ್ರಿ ವಿತರಿಸಲಾಯಿತು.
ನವ ಭಾರತಕ್ಕಾಗಿ ಒಂದಾಗೋಣ ಪುಲ್ವಾಮಾ ದಾಳಿಗೆ ದೈಯ೯ವಾಗಿ ಉತ್ತರಿಸೋಣ
Posted On: 14-02-2021 08:38PM
ಫೆಬ್ರವರಿ 14 ಭಾರತದ ಪಾಲಿಗೆ ಎಂದೂ ಮರೆಯಲಾಗದ ದಿನ. ಇಂದು ನಮ್ಮ ಕೆಚ್ಚೆದೆಯ ವೀರರು ದೇಶಕ್ಕಾಗಿ ತಮ್ಮ ಪ್ರಾಣ ಅರ್ಪಿಸಿದ ದಿನ. ಹೇಡಿ ಉಗ್ರರ ಪಾಪಕೃತ್ಯಕ್ಕೆ ಗಡಿಯಲ್ಲಿ ನಮ್ಮ ವೀರರು ಅಮರರಾಗಿದ್ದರು. ನರಿಬುದ್ಧಿ ಉಗ್ರರ ಈ ಕುಕೃತ್ಯದ ಫಲವಾಗಿ ನಮ್ಮ 40 ವೀರರು ಹುತಾತ್ಮರಾದ ದಿನವಿಂದು. ಪುಲ್ವಾಮಾದಲ್ಲಿ ನಡೆದಿದ್ದ ಈ ರಕ್ಕಸ ಕೃತ್ಯವನ್ನು ಇಡೀ ಭಾರತ ಎಂದೂ ಮರೆಯದು. ಇಂತಹ ನೋವಿನ ದಿನಕ್ಕೆ ಇವತ್ತಿಗೆ ಎರಡು ವರ್ಷ ತುಂಬಿದೆ. 2019ರ ಫೆಬ್ರವರಿ 14ರ ಶುಕ್ರವಾರ 40 ಸಿಆರ್ಪಿಎಫ್ ಯೋಧರಿದ್ದ ವಾಹನ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿತ್ತು. ಈ ವೇಳೆ, ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್ಪೊರಾದಲ್ಲಿ ರಕ್ಕಸ ಉಗ್ರರು ದಾಳಿ ಮಾಡಿದ್ದರು.
ಪ್ರೇಮಿಗಳ ದಿನಾಚರಣೆಯಂದು ಸ್ವಚ್ಛತಾ ಶ್ರಮದಾನ
Posted On: 14-02-2021 08:26PM
ಪ್ರೇಮಿಗಳ ದಿನಾಚರಣೆ ಯಂದು ಪರಿಸರ ಪ್ರೇಮಿಗಳಾಗೋಣ ಎಂಬ ಧೇಯವಾಕ್ಯದೊಂದಿಗೆ ಬಂಟಕಲ್ಲು ರಾಜಾಪುರ ಸಾರಸ್ವತ ಯುವ ವೃಂದ ಬಂಟಕಲ್ಲು ಇವರ ಆಶ್ರಯದಲ್ಲಿ ಇಂದು ಬೆಳಿಗ್ಗೆ 7.30 ರಿಂದ 9.30 ರವರೆಗೆ ಶಿರ್ವ ಮಹಾಲಸ ನಾರಾಯಣಿ ದೇವಸ್ಥಾನದ ತಿರುವಿನಿಂದ ಶಿರ್ವ ಪೇಟೆಯ ಮುಖ್ಯ ರಸ್ತೆ ಎರಡು ಬದಿಗಳಲ್ಲಿ ಹರಡಿದ್ದ ತ್ಯಾಜ್ಯ,ಕಸ, ಪ್ಲಾಸ್ಟಿಕ್, ಹೆಕ್ಕುವ ಮೂಲಕ ಸ್ವಚ್ಚತೆ ಕಾರ್ಯಕ್ರಮ ನಡೆಯಿತು.
ಅನೈತಿಕ ತಾಣವಾಗಿ ಇತಿಹಾಸ ಪ್ರಸಿದ್ಧ ಧನಸ್ಸು ತೀರ್ಥ, ಭರವಸೆ ಈಡೇರಿಸದ ಪೊಲೀಸ್ ಇಲಾಖೆ, ಮೌನವಹಿಸಿದ ಪಂಚಾಯತ್, ಸ್ಥಳೀಯ ಯುವಕರಿಂದ ಸ್ವಚ್ಛತಾ ಕಾರ್ಯ
Posted On: 14-02-2021 02:04PM
ಗುರು ಪರಶುರಾಮ ರಿಂದ ನಿರ್ಮಿತವಾಗಿದೆ ಎಂಬ ನಂಬಿಕೆ ಇರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಧನಸ್ಸು ತೀರ್ಥವು ಶ್ರೀ ಕ್ಷೇತ್ರ ಕುಂಜಾರುಗಿರಿ ಸಂಬಂಧಿಸಿದ ನಾಲ್ಕು ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ, ಮಜೂರು ಗ್ರಾಮಗಳ ಗಡಿಭಾಗದಲ್ಲಿದೆ.
ಜೀರ್ಣೋದ್ಧಾರಗೊಳ್ಳುತ್ತಿರುವ ದ್ವಾರಕಾಮಾಯಿ ಶ್ರೀ ಸಾಯಿಬಾಬಾ ಮಂದಿರದ ಗೋಡೆಯಲ್ಲಿ ಶಿಲ್ಪಿಗಳಿಗೆ ಕಂಡ ನಗುಮುಖದ ಬಾಬಾ
Posted On: 13-02-2021 11:47PM
ಜೀರ್ಣೋದ್ಧಾರಗೊಳ್ಳುತ್ತಿರುವ ದ್ವಾರಕಾಮಾಯಿ ಶ್ರೀ ಸಾಯಿಬಾಬಾ ಮಂದಿರದ ಗುರೂಜಿ ಸಾಯಿ ಈಶ್ವರ್ ನೂತನ ಸಾಯಿಬಾಬಾ ಮೂರ್ತಿಯನ್ನು ಕೆತ್ತುತಿರುವ ರಾಜಸ್ಥಾನದ ಜೈಪುರದ ಶಿಲ್ಪಕಲಾ ಕೇಂದ್ರಕ್ಕೆ ಇಂದು ಭೇಟಿ ನೀಡಿದ್ದರು.
ಶಿರ್ವ ಗ್ರಾಮ ಪಂಚಾಯತ್ ಎಸ್ ಎಲ್ ಆರ್ ಎಮ್ ಕಾರ್ಯಕರ್ತರಿಂದ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ
Posted On: 13-02-2021 11:26PM
ಶಿರ್ವ ಗ್ರಾಮ ಪಂಚಾಯತ್ ಎಸ್ ಎಲ್ ಆರ್ ಎಮ್ ಕಾರ್ಯಕರ್ತರಿಂದ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ವಿಶೇಷ ಆಂದೋಲನದ ಪ್ರಯುಕ್ತ ಸ್ವಚ್ಛತಾ ಶ್ರಮದಾನ ನಡೆಯಿತು.
ಟ್ರೀ ಹೌಸ್ ಕೆಫೆ NH66 ಎರ್ಮಾಳು-ಉಚ್ಚಿಲ ಗ್ರಾಹಕರ ಸೇವೆಗೆ ಲಭ್ಯ
Posted On: 13-02-2021 11:13PM
ಮಂಗಳೂರು ಉಡುಪಿ NH66 ರಾಷ್ಟ್ರೀಯ ಹೆದ್ದಾರಿಯಲ್ಲಿ ಎರ್ಮಾಳು ಬಡದಿಂದ ಉಚ್ಚಿಲದ ಕಡೆಗೆ ಹೋಗುವಾಗ ದಮನಿಕಾ ಪ್ಲಾಜಾದ ಎದುರು ತನ್ನ ವಿಶಿಷ್ಟ ರೀತಿಯ ವಿನ್ಯಾಸದ ಕಟ್ಟಡದಿಂದ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ.
ಬಿರುವೆರ್ ಕಾಪು ಸೇವಾ ಟ್ರಸ್ಟ್ : ಜ್ಞಾನದೀವಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮ
Posted On: 13-02-2021 03:10PM
ಕಾಪು ತಾಲೂಕಿನ ಪ್ರತಿಭಾವಂತ ಬಿಲ್ಲವ ಹಾಗೂ ಇತರ ಸಮಾಜದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ 2020 -21 ನೇ ಸಾಲಿನ ಜ್ಞಾನದೀವಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮವು ಬಿರುವೆರ್ ಕಾಪು ಸೇವಾ ಟ್ರಸ್ಟ್ ಇವರ ಆಶ್ರಯದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಇದರ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಫೆಬ್ರವರಿ 21, ಆದಿತ್ಯವಾರ ಸಂಜೆ 3.30 ರಿಂದ 6 ಗಂಟೆಯ ತನಕ ನಡೆಯಲಿದೆ.
ಕೆಡ್ಡಸ ಮರೆತು ಹೋಗುತ್ತಿರುವ ಆಚರಣೆ - ಭೂಮಿತಾಯಿ ಪುಷ್ಪವತಿ ಎಂಬ ಒಸಗೆ
Posted On: 13-02-2021 02:00PM
[ಫೆ.10,11,12 ಅಂದರೆ ಮಕರಮಾಸದ ಕೊನೆಯ ಮೂರು ದಿನ,ಪುಯಿಂತೆಲ್ ತಿಂಗಳ ಅಂತ್ಯದ ದಿನಗಳು ಭೂರಜಸ್ವಲಾ ದಿನ.] ನಿಸರ್ಗ ದೇಶಕ್ಕೆ ಸೌಭಾಗ್ಯವನ್ನು ಕೊಡುತ್ತದೆ ಎಂಬುದು ಒಂದು ಹಳೆಯ ರೂಢಿಯ ಮಾತು. ಕಾಡು ನಾಡಾಗುತ್ತಾ ಕೃಷಿ ಲಾಭಕಾರಿ ಎನಿಸದೆ, ಅವಗಣನೆಗೆ ಒಳಗಾಗಿರುವ ಅಭಿವೃದ್ಧಿಯ ಭರಾಟೆಯ ಈ ಕಾಲಘಟ್ಟದಲ್ಲಿ ಒಂದು ಪುರಾತನ ಸಾಂಸ್ಕೃತಿಕ ಸಂಭ್ರಮ ಮರೆಯಾಗುತ್ತಿದೆ. ಆದುದರಿಂದಲೇ ನಮ್ಮ ಆಚರಣೆಗಳು ಮೂಲ ಆಶಯ ಕಳೆದುಕೊಳ್ಳುತ್ತಿವೆ, ಔಪಚಾರಿಕವಾಗುತ್ತಿವೆ. ಅಥವಾ ಮರೆತೇ ಹೋಗುತ್ತಿವೆ. ಮರೆತು ಹೋದ - ಹೋಗುತ್ತಿರುವ ಆಚರಣೆಗಳಲ್ಲಿ ತುಳುವರ ‘ಕೆಡ್ಡಸ’ ಒಂದು; ಹೌದು... ಕೆಡ್ಡಸ ಹಾಗಂದರೆ ಏನು, ಯಾವಾಗ ಸನ್ನಿಹಿತವಾಗುತ್ತದೆ ಎಂದು ಪ್ರಶ್ನಿಸುವಂತಾದ ಈ ಸ್ಥಿತಿಗೆ ನಮ್ಮ ಬದುಕಿನ ರೀತಿ-ನೀತಿ-ರಿವಾಜುಗಳು ಬದಲಾದುದೇ ಕಾರಣ. ಮನಸ್ಸು - ಮನಸ್ಸುಗಳ ನಡುವಿನ ಮಾನಸಿಕ ಅಂತರ ಹಿಗ್ಗುತ್ತಾ ಭಾವನಾತ್ಮಕ ಸಂಬಂಧಗಳು ಕೇವಲ ‘ಸೋಗು ಅನ್ನಿಸುತ್ತಾ’ ಮುಂದೆ ಗಮಿಸುವ ಅತಿ ಉತ್ಸಾಹದಲ್ಲಿ ನೆಲ, ಜಲ, ಮರಮಟ್ಟು ,ಒಟ್ಟಿನಲ್ಲಿ ಪ್ರಕೃತಿಯನ್ನು ಕಾಣುವ ದೃಷ್ಟಿಯೂ ಬದಲಾಗಿದೆ. ಒಂದು ಕಾಲಕ್ಕೆ ಪ್ರಕೃತಿ ನಮ್ಮನ್ನು ಪೋಷಿಸುವ, ಜೀವನಾಧಾರಳಾಗಿರುವ ತಾಯಿ. ನೆಲದವ್ವೆಯನ್ನು ನಂಬಿದ್ದು ಎಲ್ಲಿಯವರೆಗೆ ಎಂದರೆ ‘ಭೂಮಿಸಾಕ್ಷಿಯಾಗಿ ಹೇಳುತ್ತೇನೆ' ಎಂದು ಭೂಮಿಯನ್ನು ಸ್ಪರ್ಶಿಸಿ ಸಾಕ್ಷಿ ಹೇಳುವ ಮಾತು ಜನಮಾನಸದಲ್ಲಿ ಸಹಜವಾಗಿ ಚಾಲ್ತಿಯಲ್ಲಿತ್ತು. ನಾವು ಭೂಮಿಯನ್ನು ಗೌರವಿಸುತ್ತಿದ್ದೆವು, ಪೂಜಿಸುತ್ತಿದ್ದೆವು.ಜನಪದರ ಜೀವನ ಭೂಮಿಗೆ ಅಂತಹ ಮಹತ್ತರ ಪ್ರಾಶಸ್ತ್ಯ ಕೊಟ್ಟಿತ್ತು ಎಂಬುದಕ್ಕೆ ‘ಕೆಡ್ಡಸ’ ಆಚರಣೆಯ ಸ್ವರೂಪ, ಕಲ್ಪನೆ, ಅನುಸಂಧಾನಕ್ಕೆ ಆಧಾರವಾಗುತ್ತದೆ.
