Updated News From Kaup
ಪುರಸಭೆಯ ಸಮಗ್ರ ಘನತ್ಯಾಜ್ಯ ನಿರ್ವಹಣೆಯ ಕನಸನ್ನು ಪೂರ್ಣಗೊಳಿಸುವ ಆಶಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ - ಅನಿಲ್ ಕುಮಾರ್ ಕಾಪು
Posted On: 06 May 2021, 10:29 PM
ಕಾಪು : ಕಾಪು ಪುರಸಭೆಯ ನೂತನ ಎಲ್ಲೂರು ಘನತ್ಯಾಜ್ಯ ಘಟಕದ ಪ್ರಗತಿ ಪರಿಶೀಲನೆ ನಡೆಸಲು ಕಾಪು ಪುರಸಭೆಯ ಅಧ್ಯಕ್ಷರಾದ ಅನಿಲ್ ಕುಮಾರ್ ಇವರು ಕಾಪು ಪುರಸಭೆಯ ಮುಖ್ಯಾಧಿಕಾರಿ ವೆಂಕಟೇಶ ನಾವಡ ಬಿ. ಹಾಗೂ ಸಿಬ್ಬಂದಿಗಳೊಂದಿಗೆ ಮೇ, 4ರಂದು ಭೇಟಿ ನೀಡಿರುತ್ತಾರೆ. ಘಟಕದ ಕಾಮಗಾರಿಗಳ ಮಾಹಿತಿಯನ್ನು ಪಡೆದು, ಘಟಕವು ಶೀಘ್ರವಾಗಿ ಕಾರ್ಯಾರಂಭ ಮಾಡುವ ಎಲ್ಲಾ ಸಾಧ್ಯತೆಗಳನ್ನು ಪರಿಶೀಲಿಸಿ ಕಾಪು ಪುರಸಭೆಯ ಸಮಗ್ರ ಘನತ್ಯಾಜ್ಯ ನಿರ್ವಹಣೆಯ ಕನಸನ್ನು ಪೂರ್ಣಗೊಳಿಸುವ ಆಶಯವನ್ನು ವ್ಯಕ್ತಪಡಿಸಿದರು. ಪ್ರಸ್ತುತ ಕಾಪು ಪುರಸಭೆಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ವಿಲೇವಾರಿ ಮಾಡಲು ಸೂಕ್ತ ಜಾಗದ ಕೊರತೆಯಿದ್ದು ಎಲ್ಲೂರು ಘಟಕದ ನಿರ್ಮಾಣದಿಂದ ಪ್ರತಿದಿನ ಸುಮಾರು 10 ಟನ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಪರಿಸರಕ್ಕೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನಿರ್ವಹಿಸಬಹುದಾಗಿದೆ. ಇದರಲ್ಲಿ ಕಾಪು ಪುರಸಭಾ ವ್ಯಾಪ್ತಿಯ ಸಾರ್ವಜನಿಕರ ಸಹಕಾರವು ಅತೀ ಮುಖ್ಯವಾಗಿದ್ದು, ಘನತ್ಯಾಜ್ಯವನ್ನು ಹಸಿ ಕಸ (ಕೊಳೆಯುವ ತ್ಯಾಜ್ಯ), ಒಣ ಕಸ (ಪ್ಲಾಸ್ಟಿಕ್, ಪೇಪರ್, ಲೋಹ, ಗ್ಲಾಸ್ ಇತ್ಯಾದಿ) ಹಾಗೂ ಸ್ಯಾನಿಟರಿ ತ್ಯಾಜ್ಯ (ಸ್ಯಾನಿಟರಿ ಪ್ಯಾಡ್, ಡೈಪರ್) ಗಳಾಗಿ ವಿಂಗಡಿಸಿ ಪುರಸಭೆಯ ವಾಹನಕ್ಕೆ ನೀಡಬೇಕೆಂದು ಈ ಸಂದರ್ಭ ಸಾರ್ವಜನಿಕರಿಗೆ ಕರೆ ನೀಡಿದರು.
ಕಾಪು : ಪ್ರತಿದಿನ ಹಕ್ಕಿ ಪಿಕ್ಕಿ ಜನಾಂಗದವರ ಹಸಿವು ನೀಗಿಸುವ ತಂಡ
Posted On: 06 May 2021, 04:54 PM
ಕಾಪು : ಜನತಾ ಕಫ್ಯೂ೯ನ ಸಂದರ್ಭ ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನದ ವಠಾರದಲ್ಲಿರುವ ಹಕ್ಕಿ ಪಿಕ್ಕಿ ಜನಾಂಗದವರ ಹಸಿವು ನೀಗಿಸುವ ನಿಟ್ಟಿನಲ್ಲಿ ಪ್ರತಿದಿನ ಆಹಾರ ಒದಗಿಸುತ್ತಿರುವ ತಂಡವು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಈ ತಂಡದಲ್ಲಿ ನೀತಾ ಪ್ರಭು, ಪ್ರಶಾಂತ್ ಪೂಜಾರಿ ಕಾಪು, ಯಾದವ್ ಪೂಜಾರಿ ಕಾಪು, ಚೇತನ್ ಮೂಳೂರು, ರಕ್ಷಿತ್, ಶ್ರವಣ್ ಕುಮಾರ್, ಪ್ರದೀಪ್ ಕುಮಾರ್, ಅನಿಲ್ ಅಮೀನ್ ಮತ್ತು ಸುಕೇಶ್ ಅಮೀನ್ ಉಪಸ್ಥಿತರಿದ್ದರು.
ಇನ್ನಂಜೆ : ಮರ್ಕೊಡಿ ಪರಿಸರದ ತ್ಯಾಜ್ಯ ವಿಲೇವಾರಿ
Posted On: 06 May 2021, 04:49 PM
ಕಾಪು : ಇಂದು ಮರ್ಕೋಡಿ ಪರಿಸರದ ಶುಚಿತ್ವವು ಇನ್ನಂಜೆ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ರೋಕೆಶ್ ಮತ್ತು ತಂಡದಿಂದ ನಡೆಯಿತು.. ಗ್ರಾ.ಪಂ ಸದಸ್ಯರಾದ ನಿತೇಶ್ ಸಾಲ್ಯಾನ್ ಕಲ್ಯಾಲು, ಸ್ಥಳೀಯರಾದ ರಾಜ್ ಸಾಲ್ಯಾನ್ ಮತ್ತು ಬಾಲಕೃಷ್ಣ ಆರ್. ಕೋಟ್ಯಾನ್ ಕಾಪು ಉಪಸ್ಥಿತರಿದ್ದು ಮರ್ಕೊಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಇನ್ನಂಜೆ ಗ್ರಾ. ಪಂ ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ, ಇನ್ನಂಜೆ ಗ್ರಾ. ಪಂ. ಸದಸ್ಯರಾದ ದಿವೇಶ್ ಶೆಟ್ಟಿ ಹಾಗೂ ಮಾಲಿನಿ ಶೆಟ್ಟಿಯವರು ಸ್ವಚ್ಛತಾ ಸಿಬ್ಬಂದಿಗಳ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ. ಸ್ಥಳೀಯರೊಂದಿಗೆ ಮಾತನಾಡಿದ ಅವರು ಮುಂದಿನ ದಿನಗಳಲ್ಲಿಯೂ ತಾವು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆಯಿತ್ತರು. ಕಾಪು ಠಾಣೆಯ ಹೊಯ್ಸಳದ ಸಬ್ ಇನ್ಸ್ಪೆಕ್ಟರ್ ರವರು ಬಂದು ತಾವು ಮಾಡುವ ಕೆಲಸ ಅಭಿನಂದನಾರ್ಹ ಎಂದು ಪ್ರಶಂಸಿಸಿ ಇನ್ನು ಮುಂದೆ ಈ ಪರಿಸರದಲ್ಲಿ ತ್ಯಾಜ್ಯ ಬಿಸಾಡುವವರ ಮಾಹಿತಿಕೊಟ್ಟರೆ ತಾನು ಕ್ರಮ ಕೈಗೊಳ್ಳುವುದಾಗಿ ಭರವಸೆ ಇತ್ತರು.
ಹಿಂದು ಜಾಗರಣ ವೇದಿಕೆ ಕಾಪು ತಾಲೂಕು ವತಿಯಿಂದ ರಕ್ತದಾನ ಶಿಬಿರ
Posted On: 05 May 2021, 09:31 PM
ಕಾಪು : ಹಿಂದು ಜಾಗರಣ ವೇದಿಕೆ ಕಾಪು ತಾಲೂಕು ಮತ್ತು ಅಭಯಹಸ್ತ ಹೆಲ್ಪ್ ಲೈನ್ ಉಡುಪಿ ವತಿಯಿಂದ ಇಂದು ರಕ್ತದಾನ ಶಿಬಿರವು ಕಳತ್ತೂರು ಶೇಖರ ಶೆಟ್ಟಿಯವರ ಕುಶಲ ಶೇಖರ ಶೆಟ್ಟಿ ಇಂಟರ್ನ್ಯಾಷನಲ್ ಆಡಿಟೋರಿಯಂನಲ್ಲಿ ನಡೆಯಿತು. ಒಟ್ಟು 104 ಮಂದಿ ಕಾರ್ಯಕರ್ತರು ರಕ್ತದಾನ ಮಾಡಿದರು. ಶಿಬಿರವನ್ನು ಉದ್ಯಮಿಗಳಾದ ಹರೀಶ್ ಶೆಟ್ಟಿ ಗುರ್ಮೆಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಶಾರೀರಿಕ ಪ್ರಮುಖರಾದ ಸತೀಶ್ ಕುತ್ಯಾರ್ , ಉದ್ಯಮಿಗಳಾದ ಜಿನೇಶ್ ಬಲ್ಲಾಳ್, ಪ್ರವೀಣ್ ಗುರ್ಮೆ , ಹಿಂ.ಜಾ.ವೇ ಶಿರ್ವ ವಲಯದ ಗೌರವಾಧ್ಯಕ್ಷರಾದ ರಂಗನಾಥ ಶೆಟ್ಟಿ ,ಶಿರ್ವ ವಲಯದ ಹಿಂ.ಜಾ.ವೇ ಅಧ್ಯಕ್ಷರು ರಕ್ಷಿತ್ ಪೂಜಾರಿ ಶಿರ್ವ, ಸಮಾಜ ಸೇವಕರಾದ ನೀತಾ ಪ್ರಭು ,ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್ ಮಣಿಪಾಲ್ ,ಮಹಾಕಾಳಿ ಸಮೂಹ ಸಂಸ್ಥೆ ಉಡುಪಿಯ ಮಾಲಕರಾದ ನಾರಾಯಣ್ ತಂತ್ರಿ , ಹಿಂ.ಜಾ.ವೇ ಜಿಲ್ಲಾ ಅಧ್ಯಕ್ಷರಾದ ಪ್ರಶಾಂತ್ ನಾಯಕ್ , ಹಿಂಜಾವೇ ಮಂಗಳೂರು ವಿಭಾಗ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ , ಹಿಂಜಾವೇ ಉಡುಪಿ ಜಿಲ್ಲಾ ನಿಧಿಪ್ರಮುಖರಾದ ಉಮೇಶ್ ಸೂಡ , ಹಿಂಜಾವೇ ಜಿಲ್ಲಾ ಕಾರ್ಯದರ್ಶಿ ರಾಜೇಶ ಉಚ್ಚಿಲ , ಹಿಂಜಾವೇ ಕಾಪು ತಾಲ್ಲೂಕು ಅಧ್ಯಕ್ಷರಾದ ಶಶಿಧರ ಹೆಗ್ಡೆ ಹಿರೇಬೆಟ್ಟು ಮತ್ತಿತರರು ಉಪಸ್ಥಿತರಿದ್ದರು. ಹಿಂಜಾವೇ ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಗುರುಪ್ರಸಾದ್ ಸೂಡ ಸರ್ವರನ್ನು ಸ್ವಾಗತಿಸಿ , ಹಿಂಜಾವೇ ಕಾಪು ತಾಲೂಕು ಪ್ರಚಾರ ಪ್ರಮುಖ್ ಸಂತೋಷ್ ಕಂಚಿನಡ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಭಾರತ್ ಪ್ರೆಸ್ ಮಾಲಕ ದೇವದಾಸ್ ಪೈ ನಿಧನ
Posted On: 05 May 2021, 06:10 PM
ಉಡುಪಿ : ಭಾರತ್ ಪ್ರೆಸ್ ನ ಮಾಲಕರೂ ಉಡುಪಿ ಜಿಲ್ಲಾ ಮುದ್ರಣಾಲಯ ಗಳ ಮಾಲಕರ ಸಂಘ ದ ಮಾರ್ಗದರ್ಶಕರು ಧಾರ್ಮಿಕ ಚಿಂತಕರಾದ ದೇವದಾಸ್ ಪೈ ಯವರು ಏಪ್ರಿಲ್ 29 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಸಂತಾಪ ವನ್ನು ಸೂಚಿಸಿದೆ. ಅಧ್ಯಕ್ಷರಾದ ಎಮ್ ಮಹೇಶ್ ಕುಮಾರ್, ಗೌರವ ಸಲಹೆಗಾರರಾದ ಅಶೋಕ್ ಶೆಟ್ಟಿ, ಕಾರ್ಯದರ್ಶಿ ಮನೋಜ್ ಕಡಬ, ಕೋಶಾಧಿಕಾರಿ ಸುಧೀರ್ ಡಿ. ಬಂಗೇರ, ಮಾಜಿ ಅಧ್ಯಕ್ಷರಾದ ರಮೇಶ್ ತಿಂಗಳಾಯ, ಸದಸ್ಯರಾದ ಅನಿಲ್ ಶೆಟ್ಟಿ ಉಪಸ್ಥಿತರಿದ್ದರು.
ಕರಂದಾಡಿ ಗ್ರಾಮದ ಬ್ರಹ್ಮರಗುಂಡಿ ಹೊಳೆಯ ಪಾವಿತ್ರ್ಯತೆ ಕಾಪಾಡಿ : ಸಾರ್ವಜನಿಕರ ಆಗ್ರಹ
Posted On: 02 May 2021, 10:31 PM
ಕಾಪು : ಕಾಪು ತಾಲೂಕಿನ ಕರಂದಾಡಿ ಗ್ರಾಮದ ಬ್ರಹ್ಮರಗುಂಡಿ ಹೊಳೆಯು ಪವಿತ್ರವಾಗಿದ್ದು, ಇಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಜಳಕದ ಸ್ಥಳವಾಗಿರುತ್ತದೆ. ಈ ಪವಿತ್ರ ಸ್ಥಳದಲ್ಲಿ ಯಾವುದೇ ತರಹದ ತ್ಯಾಜ್ಯ ಮತ್ತು ಕಸ ಕಡ್ಡಿ ಹಾಕಬಾರದೆಂದು ವಿನಂತಿಸುವ ಬ್ಯಾನರ್ ಅಳವಡಿಸಲಾಗಿದೆ. ಜನರು ಪ್ಲಾಸ್ಟಿಕ್, ಕೋಳಿ ತ್ಯಾಜಗಳನ್ನು ಎಸೆಯುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಆ ಮೂಲಕ ಹೊಳೆಯ ಪಾವಿತ್ರ್ಯತೆಯನ್ನು ಉಳಿಸಬೇಕಾಗಿದೆ ಎಂದಿದ್ದಾರೆ.
ಶಿರ್ವ : ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕರು ನೀರು ಪಾಲು
Posted On: 02 May 2021, 07:11 PM
ಕಾಪು : ಶಿರ್ವ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆ ಗ್ರಾಮದ ಪಾಂಬೂರು ಕಬೆಡಿ ಪರಿಸರದಲ್ಲಿ ಇರುವ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ಇಂದು ಸಂಜೆ ನಡೆದಿದೆ. ಪಾಂಬೂರಿನಲ್ಲಿ ಕೂಲಿ ಕಾರ್ಮಿಕರಾಗಿದ್ದು ಶಂಕರಪುರ ಸರ್ಕಾರಿ ಗುಡ್ಡೆ ನಿವಾಸಿಗಳೆಂದು ತಿಳಿದು ಬಂದಿದೆ. ಶಂಕರಪುರ ಸುಭಾಸ್ ನಗರದ ಕ್ಯಾಲ್ವಿನ್ ಕಸ್ತಲಿನೊ (21), ಜಾಬೀರ್ (18), ರಿಜ್ವಾನ್ (28) ಎಂದು ತಿಳಿದು ಬಂದಿದೆ. ನದಿಯಿಂದ ಈಶ್ವರ ಮಲ್ಪೆಯವರ ಸಹಕಾರದಿಂದ ಮೂವರ ಶವವನ್ನು ದಡಕ್ಕೆ ತರಲಾಗಿದೆ.
ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ : ವಿಶಿಷ್ಟ ರೀತಿಯಲ್ಲಿ ಕಾಮಿ೯ಕರ ದಿನಾಚರಣೆ
Posted On: 02 May 2021, 06:43 PM
ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ ಇದರ ವತಿಯಿಂದ ವಿಶಿಷ್ಟ ಶೈಲಿಯಲ್ಲಿ ಕಾರ್ಮಿಕರ ದಿನವನ್ನು ಮೇ.1ರಂದು ಆಚರಿಸಲಾಯಿತು. ಲಾಕ್ ಡೌನ್ ನಿಂದ ತೀರಾ ಸಂಕಷ್ಟದಲ್ಲಿದ್ದ ರೋಗಿ ,ಅಸಹಾಯಕರು,ಒಂಟಿ ವೃದ್ದರು ಇರುವ ಅಸಹಾಯಕ ಕಾರ್ಮಿಕರಿಗೆ ನಾವಿದ್ದೇವೆ ನಿಮ್ಮ ಜೊತೆ ಎಂದು ಅಭಯ ನೀಡುವುದರೊಂದಿಗೆ ಸಹಾಯಧನ, ಊಟಕ್ಕೆ ಬೇಕಾದ ಅಕ್ಕಿ ಮತ್ತಿತರ ವಸ್ತುಗಳನ್ನು ನೀಡಲಾಯಿತು. ಅಲ್ಲದೆ ಬಡ ಕಾಮಿ೯ಕ ರೋಗಿಗೆ ವಾಟರ್ ಬೆಡ್ಡ್ ನೀಡಲಾಯಿತು. ಪೇತ್ರಿ,ಚೇರ್ಕಾಡಿ ,ಕರಂಬಳ್ಳಿದೊಡ್ಡನಗುಡ್ಡೆ ,ಉಡುಪಿ, ಮಣಿಪಾಲದ 10 ಬಡ ಕಾರ್ಮಿಕ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ಹೋಂಡಾಕ್ಟರ್ ತಂಡದ ಸದಸ್ಯರಾದ ಡಾ.ಶಶಿಕಿರಣ್ ಶೆಟ್ಟಿ, ರಾಘವೇಂದ್ರ ಪೂಜಾರಿ, ಬಂಗಾರಪ್ಪ, ಸವಿತಾ ಶೆಟ್ಟಿ, ರಾಘವೇಂದ್ರ ಪ್ರಭು ಕರ್ವಾಲು ,ದಿನಕರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಬಂಟಕಲ್ಲು : ಲಾಕ್ ಡೌನ್ ಸಮಯ ಕೊರೋನೇತರ ರೋಗಿಗಳಿಗೆ ಬಂಟಕಲ್ಲಿನಿಂದ ಉಚಿತ ಅಂಬುಲೆನ್ಸ್ ಸೇವೆ
Posted On: 01 May 2021, 02:15 PM
ಕಾಪು : ಕೊರೊನಾ ಲಾಕ್ ಡೌನ್ ಸಮಯದಲ್ಲಿ ಕೊರೋನಾ ಸೋಂಕಿತರನ್ನು ಹೊರತು ಪಡಿಸಿ ಅನಾರೋಗ್ಯದಿಂದಿರುವ ರೋಗಿಗಳಿಗೆ ಉಡುಪಿ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹೋಗುವವರಿಗೆ ಬಂಟಕಲ್ಲು ನಾಗರಿಕ ಸೇವಾ ಸಮಿತಿಯವರು ಉಚಿತ ಅಂಬುಲೆನ್ಸ್ ಸೇವೆಯನ್ನು ನೀಡುತ್ತಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಈ ಉಚಿತ ಸೇವೆಯನ್ನು ನೀಡಲಾಗುವುದು . ತುರ್ತು ಸಂಧರ್ಭದಲ್ಲೂ ಇದರ ಸೇವೆಯನ್ನು ಪಡೆಯಬಹುದಾಗಿದೆ. ಬಂಟಕಲ್ಲು, ಶಿರ್ವ ಆಸುಪಾಸಿನ ಸಾರ್ವಜನಿಕರು ಇದರ ಉಪಯೋಗವನ್ನು ಪಡೆಯಬಹುದಾಗಿದೆ. ಈ ಸೇವೆಯನ್ನು ಪಡೆಯಲಿಚ್ಚಿಸುವವರು (ಉಮೇಶ್ ರಾವ್ : 9880181052) ಇವರನ್ನು ಸಂಪರ್ಕಿಸಬಹುದು ಎಂದು ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಕೆ.ಆರ್.ಪಾಟ್ಕರ್ ಬಂಟಕಲ್ಲು ತಿಳಿಸಿದ್ದಾರೆ.
