Updated News From Kaup
ಸಂತ ಮೇರಿ ಕಾಲೇಜು ಶಿರ್ವ : ಭವಿಷ್ಯದ ಜೀವನ ಮತ್ತು ಉದ್ಯೋಗ ಕೌಶಲ್ಯಗಳು ಕಾರ್ಯಕ್ರಮ
Posted On: 01-02-2021 04:27PM
ಶಿರ್ವ : ವಿದ್ಯಾರ್ಥಿ ಜೀವನದಲ್ಲಿ ಕಲಿಕೆಯ ಜೊತೆಗೆ ಅಗತ್ಯವಾಗಿ ಬೇಕಾಗುವ ಸಲಹೆ ಮತ್ತು ಸೂಚನೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸುತ್ತಾ ಪದವಿ ವ್ಯಾಸಂಗ ಮಾಡುವ ವರ್ಷದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜತೆಗೆ ಭಾವನಾತ್ಮಕ ವಿಚಾರಗಳೊಂದಿಗೆ ಜವಾಬ್ದಾರಿಯುತ ಮೌಲ್ಯ ಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವೆಂದು ಮುಖ್ಯಅಥಿತಿಯಾಗಿ ಆಗಮಿಸಿದ ಮೈಟ್ ಕಾಲೇಜಿನ ಪ್ರಾಧ್ಯಾಪಕರಾದ ಶ್ರಿ ಪ್ರದಿಪ್ ಬಿ.ಆರ್ ರವರು ಕಿವಿಮಾತು ಹೇಳಿದರು.
ಕುತ್ಯಾರು : ಭಾರತ ಮಾತಾ ಪೂಜನಾ ಕಾರ್ಯಕ್ರಮ
Posted On: 31-01-2021 04:19PM
ಅಯೋಧ್ಯ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಭಾರತ ಮಾತಾ ಪೂಜನಾ ಕಾರ್ಯಕ್ರಮ ಕೇಂಜ ತಂತ್ರಿ ನಿವಾಸದಲ್ಲಿ ಜರಗಿತು.
ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ: ಸಾರ್ವಜನಿಕರಿಂದ ಉತ್ತಮ ಸ್ಪಂದನೆ
Posted On: 31-01-2021 08:16AM
ಉಡುಪಿ : ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಇಲಾಖೆ ಮತ್ತಿತರ ಅಧಿಕಾರಿಗಳ ಗ್ರಾಮ ವಾಸ್ತವ್ಯದ ಪೈಲಟ್ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಶನಿವಾರ ನಾಲ್ಕೂರು ಗ್ರಾಮಕ್ಕೆ ಭೇಟಿ ನೀಡಿ, ಸಾರ್ವಜನಿಕರ ವಿವಿಧ ಸಮಸ್ಯೆಗಳ ಕುರಿತು 147 ಅರ್ಜಿಗಳನ್ನು ಸ್ವೀಕರಿಸಿ, ಕೆಲವು ಅರ್ಜಿಗಳ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದರು. ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಮಲ್ಲಾರುಗುತ್ತು ಶ್ರೀ ಸುಬ್ರಹ್ಮಣ್ಯ ಶೆಟ್ಟಿ ನಿಧನ
Posted On: 30-01-2021 10:00PM
ಕಾಪು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಭಾಸ್ಕರ್ ಶೆಟ್ಟಿಯವರ ಸುಪುತ್ರ, ಕಾಪು ಪುರಸಭೆಯ ಸದಸ್ಯೆ ಶ್ರೀಮತಿ. ಶಾಂತಲತಾ ಎಸ್. ಶೆಟ್ಟಿ ಯವರ ಪತಿ ಮಲ್ಲಾರುಗುತ್ತು ಶ್ರೀ ಸುಬ್ರಹ್ಮಣ್ಯ ಶೆಟ್ಟಿಯವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಲ್ಲಾರಿನ ತಮ್ಮ ಸ್ವಗೃಹದಲ್ಲಿ ನಿಧನಹೊಂದಿದರು.
ಕಟಪಾಡಿಯ ಕೋಟೆ, ಕಂಬೆರ್ಕಳ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಇಂದು ಮತ್ತು ನಾಳೆ ಸಿರಿ ಸಿಂಗಾರದ ನೇಮೋತ್ಸವ
Posted On: 30-01-2021 02:32PM
ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ಪುರಾತನ ಕಟಪಾಡಿಯ ಕೋಟೆ, ಕಂಬೆರ್ಕಳ ಬಬ್ಬುಸ್ವಾಮಿ ದೈವಸ್ಥಾನದ ಪ್ರಸಕ್ತ ಸಾಲಿನ ನೇಮೋತ್ಸವವು ಇಂದು ಮತ್ತು ನಾಳೆ ಜರಗಲಿದೆ.
ಎಮ್ ಆರ್ ಜಿ ಗ್ರೂಪಿನ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿರವರಿಗೆ ಭಾರತೀಯ ವ್ಯವಹಾರಗಳ ದೂರದೃಷ್ಟಿಯ ನಾಯಕ 2020 ಪ್ರಶಸ್ತಿ
Posted On: 30-01-2021 10:06AM
ನೆಟ್ ವಕ್೯ ಮೀಡಿಯಾ ಗ್ರೂಪ್ ಇದರ ಪ್ರಧಾನ ಸಂಪಾದಕ ಹಾಗೂ 11 ನೇ ವಾರ್ಷಿಕ ಭಾರತ ನಾಯಕತ್ವ ಕಾನ್ಕ್ಲೇವ್ ಮತ್ತು ಭಾರತೀಯ ವ್ಯವಹಾರಗಳ ನಾಯಕತ್ವ ಪ್ರಶಸ್ತಿಗಳ ತೀರ್ಪುಗಾರರ- ಅಧ್ಯಕ್ಷರಾದ ಸತ್ಯ ಬ್ರಹ್ಮ ಅವರು ಉಧ್ಯಮಿ ಎಂ.ಆರ್.ಜಿ. ಸಮೂಹದ ಕಾರ್ಯಾಧ್ಯಕ್ಷ ಉದ್ಯಮಿ ಕೆ. ಪ್ರಕಾಶ್ ಶೆಟ್ಟಿರವರಿಗೆ ಭಾರತೀಯ ವ್ಯವಹಾರಗಳ ದೂರದೃಷ್ಷಿಯ ನಾಯಕ 2020 ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಶಂಕರಪುರ : ರಾಷ್ಟ್ರಿಯ ರಸ್ತೆ ಸುರಕ್ಷತಾ ಸಪ್ತಾಹ -2021 ಮಾಹಿತಿ ಕಾರ್ಯಕ್ರಮ ಮತ್ತು ಜಾಥಾ
Posted On: 29-01-2021 11:38PM
ರೋಟರಿ ಶಂಕರಪುರ, ಶಿರ್ವ ಪೊಲೀಸ್ ಠಾಣೆ, ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ, ಟ್ಯಾಕ್ಸಿ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ ಮತ್ತು ಶ್ರೀ ದುರ್ಗಾ ಗೂಡ್ಸ್ ಟೆಂಪೋ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ ಇವರ ಸಹಯೋಗದಲ್ಲಿ ರಾಷ್ಟ್ರಿಯ ರಸ್ತೆ ಸುರಕ್ಷತಾ ಸಪ್ತಾಹ -2021ರ ಮಾಹಿತಿ ಕಾರ್ಯಕ್ರಮ ಮತ್ತು ಜಾಥಾ ಕಾರ್ಯಕ್ರಮವು ಶಂಕರಪುರ ರೋಟರಿ ಭವನದಲ್ಲಿ ನಡೆಯಿತು.
ಜನವರಿ 31ರಂದು ಬೆಳ್ಮಣ್ಣು ರೋಟರಿ ಕ್ಲಬ್ ಆತಿಥ್ಯದಲ್ಲಿ ವಲಯ ಕ್ರೀಡಾ ಕೂಟ ಗೊಬ್ಬು ಗಮ್ಮತ್ 2021
Posted On: 29-01-2021 11:10PM
ಬೆಳ್ಮಣ್ಣು ರೋಟರಿ ಕ್ಲಬ್ ಆತಿಥ್ಯದಲ್ಲಿ 3182 ಜಿಲ್ಲೆ ವಲಯ 5 ರಲ್ಲಿ ಒಳಗೊಂಡ ವಲಯ ಕ್ರೀಡಾಕೂಟ ಗೊಬ್ಬು ಗಮ್ಮತ್ 2021 ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಇದೇ ಬರುವ ದಿನಾಂಕ 31ಜನವರಿ ಆದಿತ್ಯವಾರದಂದು ನಡೆಯಲಿದೆ.
ಜಲಜೀವನ್ ಮಿಷನ್ ಯಶಸ್ವಿ ಅನುಷ್ಠಾನ ನಮ್ಮೆಲ್ಲರ ಗುರಿ: ನವೀನ್ ಭಂಡಾರಿ
Posted On: 29-01-2021 08:30PM
ಪುತ್ತೂರು : ಪ್ರತಿ ಮನೆಗೆ, ವ್ಯಕ್ತಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಜನಜೀವನ್ ಮಿಷನ್ನಿನ ಮುಖ್ಯ ಗುರಿಯಾಗಿದೆ ಎಂದು ಪುತ್ತೂರು ತಾಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿ ಶ್ರೀ ನವೀನ್ ಭಂಡಾರಿ ಹೇಳಿದರು.
ಜನವರಿ 31ರಂದು ಕುತ್ಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಜನಾ ಮಂಗಳೋತ್ಸವ
Posted On: 28-01-2021 03:44PM
ಕಾಪು ತಾಲೂಕಿನ ಕುತ್ಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಟ್ಟಡದ ಸುವರ್ಣ ಮಹೋತ್ಸವದ ಪ್ರಯುಕ್ತ ಭಜನಾ ಮಂಗಳೋತ್ಸವವು ಜನವರಿ 31ರಂದು ದೇವಸ್ಥಾನದಲ್ಲಿ ನಡೆಯಲಿದೆ.
