Updated News From Kaup
ಜ.30 ರಂದು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ : ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು
Posted On: 28-01-2021 12:42PM
ಉಡುಪಿ : ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚೂರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಿ, ಸದ್ರಿ ಗ್ರಾಮಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ ಒದಗಿಸಲಿದ್ದಾರೆ, ಇಡೀ ರಾಜ್ಯದಲ್ಲಿ ಇದು ಪ್ರಥಮ ಪೈಲಟ್ ಕಾರ್ಯಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು.
ಕಾಪು ದೀಪಸ್ತಂಭ 5 ತಿಂಗಳ ಹಿಂದೆ ಹಾನಿಯಾದ ಮೆಟ್ಟಿಲು, ಗೋಡೆ ಇನ್ನೂ ದುರಸ್ತಿಯಾಗಿಲ್ಲ ಪ್ರವಾಸೋದ್ಯಮ ಇಲಾಖೆಯ ಜಾಣ ಮೌನ
Posted On: 28-01-2021 12:36PM
ಉಡುಪಿ ಜಿಲ್ಲೆಯ ಕಾಪು ಕಡಲ ಕಿನಾರೆಯಲ್ಲಿರುವ ಬ್ರಿಟಿಷ್ ಕಾಲದಲ್ಲಿ ನಿರ್ಮಿಸಲ್ಪಟ್ಟ ಕಾಪು ದೀಪಸ್ತಂಭ ವೀಕ್ಷಿಸಲು ದಿನನಿತ್ಯ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ.
ಕುತ್ಯಾರು : ಭಾರತ ಮಾತಾ ಪೂಜನಾ ಕಾರ್ಯಕ್ರಮ
Posted On: 27-01-2021 07:37PM
ಅಯೋಧ್ಯಾ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಭಾರತಮಾತಾ ಪೂಜನಾ ಕಾರ್ಯಕ್ರಮವು ಪಡು ಕುತ್ಯಾರು ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದಲ್ಲಿ ಜರಗಿತು.
ಕುತ್ಯಾರು ಗ್ರಾಮಪಂಚಾಯತ್ ನಲ್ಲಿ ಗಣರಾಜ್ಯೋತ್ಸವ
Posted On: 27-01-2021 07:19PM
ಕುತ್ಯಾರು ಗ್ರಾಮಪಂಚಾಯತ್ ಆಡಳಿತಾಧಿಕಾರಿ ಅರುಣ್ ಕುಮಾರ್ ಹೆಗ್ಡೆ ಧ್ವಜಾರೋಹಣ ಮಾಡುವ ಮೂಲಕ ಕುತ್ಯಾರು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಳತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ
Posted On: 27-01-2021 07:15PM
ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಿವೃತ್ತ ಶಿಕ್ಷಕರಾದ ಶ್ರೀಕರಯ್ಯ ಧ್ವಜಾರೋಹಣ ಮಾಡಿದರು.
ಮಟ್ಟಾರು : ಶ್ರೀರಾಮ ನಾಮ ಜಪದೊಂದಿಗೆ ಶ್ರೀರಾಮೋತ್ಸವ
Posted On: 27-01-2021 06:42PM
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ವಿಶ್ವ ಹಿಂದು ಪರಿಷದ್ ಬಜರಂಗದಳ ಮಾತೃಶಕ್ತಿ ಮಟ್ಟಾರು ಘಟಕದ ನೇತೃತ್ವದಲ್ಲಿ ಶ್ರೀರಾಮೋತ್ಸವ ಜರಗಿತು. ಸಾಮೂಹಿಕವಾಗಿ ದೀಪ ಪ್ರಜ್ವಲನೆಯೊಂದಿಗೆ ಶ್ರೀರಾಮ ನಾಮ ಜಪ ಮಾಡಲಾಯಿತು.
92 ಹೇರೂರು ಗ್ರಾಮದಲ್ಲಿ ಕಳ್ಳರ ಕಾಟ
Posted On: 27-01-2021 10:54AM
ಹಲವು ದಿನಗಳಿಂದ ಕಳ್ಳರ ಕಾಟ ಉಡುಪಿಯಲ್ಲಿ ಹೆಚ್ಚಾಗುತ್ತಿದ್ದು, ಉಡುಪಿ ಜಿಲ್ಲೆಯ ಕಾಪು ತಾಲೂಕಿನ 92 ಹೇರೂರು ಗ್ರಾಮದಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ರಾತ್ರಿ ವಿದ್ಯುತ್ ಕಡಿತಗೊಂಡಾಗ, ನಾಯಿಗಳ ಬೊಗಳುವಿಕೆ ಜಾಸ್ತಿ ಆಗುತ್ತೆ, ಇದೆ ಹೊತ್ತಿನಲ್ಲಿ ಕಳ್ಳರು ಈ ಪರಿಸರದಲ್ಲಿ ತಿರುಗಾಡುವುದರ ಬಗ್ಗೆ ಹಲವರ ಅನಿಸಿಕೆಯಾಗಿದೆ.
ವಿಜೇತ ವಿಶೇಷ ಶಾಲೆ : ಗಣರಾಜ್ಯೋತ್ಸವ ದಿನಾಚರಣೆ, ಮೇಕ್ ಸಂ ಒನ್ ಸ್ಮೈಲ್ ತಂಡದಿಂದ ಶಾಲಾ ಗೋಡೆಯಲ್ಲಿ ಇಂಡಿಯಾ ಬಾರ್ಡರ್ ಚಿತ್ರಗಳ ಅನಾವರಣ, ದೇಶದ ಸೈನಿಕರಿಗೆ ಗೌರವ ಸಮರ್ಪಣಾ ಕಾರ್ಯಕ್ರಮ.
Posted On: 27-01-2021 10:46AM
ವಿಜೇತ ವಿಶೇಷ ಶಾಲೆಯಲ್ಲಿ 72ನೇ ವರ್ಷದ ಗಣರಾಜ್ಯೋತ್ಸವ ಹಾಗೂ ಮೇಕ್ ಸಂ ಒನ್ ಸ್ಮೈಲ್ ತಂಡದ ವತಿಯಿಂದ ವಿಜೇತ ವಿಶೇಷ ಶಾಲಾ ಗೋಡೆಯಲ್ಲಿ ಚಿತ್ರಿಸಿದ ಇಂಡಿಯಾ ಬಾರ್ಡರ್ (ಭಾರತ ದ ಗಡಿ ಪ್ರದೇಶ) ಚಿತ್ರಣವನ್ನು ವಿಜೇತ ವಿಶೇಷ ಶಾಲೆಗೆ ಸಮರ್ಪಿಸಿ, ದೇಶದ ಸೈನಿಕರಿಗೆ ಗೌರವ ಸಮರ್ಪಣಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಸಂತ ಮೇರಿಕಾಲೇಜು ಶಿರ್ವ : 72ನೇ ಗಣರಾಜ್ಯೋತ್ಸವ ಆಚರಣೆ
Posted On: 26-01-2021 10:44PM
ಶಿರ್ವ: ದೇಶವು 72ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುತ್ತಿದೆ.ಈ ದಿನವನ್ನು ಸಂವಿಧಾನ ರಚನಾ ದಿನವೆಂದೂ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ವಂದನೆಯನ್ನು ಸಲ್ಲಿಸುತ್ತಾ,ಸಂವಿಧಾನ ರಚನಾ ಸಮಿತಿಯ ಸದಸ್ಯರನ್ನು ನೆನೆಯುತ್ತಾ,ಈ ದಿನದ ಮಹತ್ವವನ್ನು ವಿವರಿಸುವ ಮೂಲಕ ನವಯುವಕರು ಮತ್ತು ಜನಪ್ರತಿನಿಧಿಗಳು ಸಂವಿಧಾನದ ಮೂಲಭೂತ ವಿಚಾರಗಳನ್ನು ಅರ್ಥೈಸಿಕೊಂಡು ನವಭಾರತದ ನಿರ್ಮಾಣದಲ್ಲಿ ಮಹತ್ವದ ಹೆಜ್ಜೆಗಳನ್ನು ಇಡಬೇಕೆಂದು ತಿಳಿಸುವ ಮೂಲಕ ರಾಷ್ಟ್ರ ಪ್ರಶ್ನೆ ಬಂದಾಗ ಧರ್ಮ,ಜಾತಿ,ಪ್ರಾಂತೀಯತೆಯನ್ನು ಮರೆತು ನಾವೆಲ್ಲರೂ ಭಾರತೀಯರೆಂಬ ವಿಶಾಲ ಮನೋಭಾವನೆಯನ್ನು ಜಗತ್ತಿನೆಲ್ಲೆಡೆಗೆ ಸಾರಿ,ಭವ್ಯ ಭಾರತದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಭಾರತದ ಕೀರ್ತಿಯನ್ನು ವಿಶ್ವ ಪಟದಲ್ಲಿ ಬೆಳಗಬೇಕೆಂದು ವಿದ್ಯಾರ್ಥಿ ಸಮುದಾಯಕ್ಕೆ ಮುಖ್ಯ ಅತಿಥಿಯಾಗಿ ಧ್ವಜಾರೋಹಣವನ್ನು ನೆರವೇರಿಸಿ ಶಿರ್ವ ಸಂತ ಮೇರಿ ಕಾಲೇಜಿನ ಪ್ರಾಂಶುಪಾಲರಾದ ಡಾ ಹೆರಾಲ್ಡ್ ಐವನ್ ಮೊನಿಸ್ ರವರು ಕರೆ ನೀಡಿದರು.
ಕುತ್ಯಾರು : ಸೂರ್ಯ ಚೈತನ್ಯ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ
Posted On: 26-01-2021 10:31PM
ಶಿಕ್ಷಣದ ಪ್ರಮುಖ ಉದ್ದೇಶವು ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ ಬೆಳೆಸುವುದಾಗಿದೆ. ಯುವಜನತೆಯು ಸಮಾಜದ ಏಳಿಗೆಗೆ ಸದಾ ಶ್ರಮಿಸಬೇಕು. ಭಾರತದ ಉನ್ನತ ಪರಂಪರೆಯನ್ನು ರಕ್ಷಿಸುವ ಹೊಣೆಗಾರಿಕೆ ನಮ್ಮದು. ಜನರ ತೆರಿಗೆ ಹಣದ ಸದ್ವಿನಿಯೋಗವಾಗಬೇಕು. ದೇಶದ ಸೈನಿಕರ ತ್ಯಾಗ ,ಬಲಿದಾನ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಎಂದು ಮಂಗಳೂರಿನ ನೀರು ಸರಬರಾಜು ಯೋಜನೆಯ ಡಿಸೈನ್ ಇಂಜಿನಿಯರ್ ಪ್ರಕಾಶ್ ಕಿಣಿ ಕುತ್ಯಾರು ಹೇಳಿದರು. ಅವರು ಕುತ್ಯಾರಿನ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸಂಸ್ಥೆಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ಮಾತನಾಡಿದರು.
