Updated News From Kaup
ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ
Posted On: 01 May 2021, 02:09 PM
ಕಾಪು : ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರಾದ ಲಾಲಾಜಿ ಆರ್. ಮೆಂಡನ್ ಭೇಟಿ ನೀಡಿ ಆಸ್ಪತ್ರೆಯ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿ ಸಭೆ ನಡೆಸಿದ ಮಾನ್ಯ ಶಾಸಕರು ದಾನಿಗಳ ಮುಖಾಂತರ ಆಕ್ಸಿಜನ್ ವ್ಯವಸ್ಥೆ ಆರಂಭಿಸಿ, ಆಸ್ಪತ್ರೆಗೆ ಬರುವ ಒಳ ಹಾಗೂ ಹೊರ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದೆ, ಆಸ್ಪತ್ರೆಗೆ ಕೋವಿಡ್ -19 ವಾಕ್ಸಿನ್ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಸ್ಥಳೀಯರ ನೆರವಿನೊಂದಿಗೆ ಸಮರ್ಪಕವಾಗಿ ಜನಸಂದಣಿಯಾಗದೆ ಸೂಕ್ತವ್ಯವಸ್ಥೆಯೊಂದಿಗೆ ಮಾಡುವುದಾಗಿ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ, ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದೆ ಆಸ್ಪತ್ರೆ ಕಾರ್ಯನಿರ್ವಹಿಸಲಿದೆ ಎಂದರು. ಈ ಸಂದರ್ಭದಲ್ಲಿ ಪಡುಬಿದ್ರಿ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷರಾದ ಯಶೋದ, ಹೆಜಮಾಡಿ ಪಂಚಾಯತ್ ಅಧ್ಯಕ್ಷರಾದ ಪ್ರಾಣೇಶ್, ತಾಲೂಕು ಪಂಚಾಯತ್ ಸದಸ್ಯರಾದ ನೀತಾ ಗುರುರಾಜ್, ಸ್ಥಳೀಯರಾದ ಪ್ರಕಾಶ್ ಶೆಟ್ಟಿ, ಸುರೇಶ್ ಹಾಗೂ ವೈದ್ಯಾಧಿಕಾರಿ ರಾಜಶ್ರೀ, ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೆಜಮಾಡಿ : ಹೊಳೆಯಲ್ಲಿ ಅನಾಥ ಶವ ಪತ್ತೆ
Posted On: 01 May 2021, 01:32 PM
ಕಾಪು : ಕೆಲ ದಿನಗಳ ಹಿಂದೆ ಹೆಜಮಾಡಿ ಭಾಗದಲ್ಲಿ ಶಾಂಭವಿ ನದಿಯಲ್ಲಿ ತೇಲುತ್ತಿದ್ದ ಅನಾಥ ಶವವನ್ನು ಕಂಡು ಸಾರ್ವಜನಿಕರು ಪಡುಬಿದ್ರಿ ಪೋಲೀಸರಿಗೆ ಮಾಹಿತಿ ನೀಡಿದ್ದರು. ಪೋಲೀಸರು ಬಂದಾಗ ಶವವು ಮುಲ್ಕಿ ವ್ಯಾಪ್ತಿಯಲ್ಲಿದ್ದ ಪರಿಣಾಮ ಮುಲ್ಕಿ ಠಾಣೆಗೆ ಮಾಹಿತಿಯನ್ನು ನೀಡಿದ್ದರು. ಮುಲ್ಕಿ ಪೋಲೀಸರು ಸ್ಥಳಕ್ಕಾಗಿಮಿಸಿದಾಗ ನೀರಿನ ಹರಿತಕ್ಕೆ ಶವವೇ ಇರಲಿಲ್ಲ. ದಿನ ಕಳೆದು ಕೊಳೆತು, ಗುರುತು ಸಿಗದ ಸ್ಥಿತಿಯಲ್ಲಿದ್ದ ಆ ಶವವು ಹೆಜಮಾಡಿ ಕಡವಿನ ಬಾಗಿಲು ಬಳಿ ಪತ್ತೆಯಾದ ಸಂದರ್ಭ ಹೆಜಮಾಡಿ ಗ್ರಾಮಪಂಚಾಯತ್, ಪಡುಬಿದ್ರಿ ಪೋಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ಸಹಕಾರದಿಂದ ಶವವನ್ನು ಮೇಲಕ್ಕೆತ್ತಲಾಯಿತು. ಶವವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ.
ಬಂಟಕಲ್ಲು: ಕೋವಿಡ್ ಲಸಿಕೆ ಪೂರ್ವ ರಕ್ತದಾನ ಶಿಬಿರ
Posted On: 30 Apr 2021, 08:21 PM
ಕಾಪು : ಸ್ಥಳೀಯ ರಾಜಾಪುರ ಸಾರಸ್ವತ ಯುವ ವೃಂದದ ಸದಸ್ಯರು ಕೋವಿಡ್ ಲಸಿಕೆ ಪಡೆಯುವ ಮುಂಚಿತವಾಗಿ ರಕ್ತದಾನ ಮಾಡುವ ಉಪಯುಕ್ತ ಕಾರ್ಯಕ್ರಮವು ಇಂದು ಜರುಗಿತು. 60 ಕ್ಕೂ ಹೆಚ್ಚು ಭಾರಿ ರಕ್ತ ದಾನ ಮಾಡಿದ ರಕ್ತದಾನಿ ಶ್ರೀ ದೇವದಾಸ್ ಪಾಟ್ಕರ್ ಲವರ ನೇತೃತ್ವದಲ್ಲಿ ಇಂದು ಮಣಿಪಾಲ ಕೆ ಎಮ್ ಸಿ ಯ ಬ್ಲಡ್ ಬ್ಯಾಂಕ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಶಿರ್ವ ಗ್ರಾ.ಪಂ ಅಧ್ಯಕ್ಷ , ರಾ ಸಾ ಯುವ ವೃಂದದ ಗೌರವಾಧ್ಯಕ್ಷರೂ ಆಗಿರುವ ಕೆ. ಆರ್. ಪಾಟ್ಕರ್ ರವರು ದೀಪ ಬೆಳಗಿಸಿ ಚಾಲನೆ ನೀಡಿದರು. ಕೊರೋನಾ ಸಂಕಷ್ಟ ಸಮಯದಲ್ಲಿ ಯುವ ವೃಂದದ ಸದಸ್ಯರು ಲಸಿಕೆ ಪಡೆಯುವ ಮುಂಚಿತವಾಗಿ ಸ್ವಯಂ ಪ್ರೇರಿತರಾಗಿ ರಕ್ತ ದಾನ ಶಿಬಿರದಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದು ಅಭಿನಂದಿಸಿದರು. ರಕ್ತದ ಕೊರತೆಯಾಗುವಂತಹ ಈ ಸಂಧರ್ಭದಲ್ಲಿ ಇದರ ನೇತೃತ್ವ ವಹಿಸಿ ಕಾರ್ಯಕ್ರಮ ಆಯೋಜಿಸಿದ ರಕ್ತದಾನಿ ದೇವದಾಸ ಪಾಟ್ಕರ್ ಇವರನ್ನು ವಿಶೇಷವಾಗಿ ಅಭಿನಂದಿಸಲಾಯಿತು. ಕಾರ್ಯಕ್ರಮಕ್ಕೆ ಅಭಯ ಹಸ್ತ ಹೆಲ್ಪ್ ಲೈನ್ ಉಡುಪಿ, ರಕ್ತ ನಿಧಿ ಮಣಿಪಾಲ ಇವರು ಸಹಯೋಗ ನೀಡಿದ್ದು ಅಭಯ ಹೆಲ್ಪ್ ಲೈನ್ ನ ಸತೀಶ್ ಸಾಲಿಯಾನ್, ರಕ್ತ ನಿಧಿಯ ಡಾ| ದಿವ್ಯ , ಯುವ ವೃಂದದ ಅಧ್ಯಕ್ಷ ವಿಶ್ವನಾಥ ಬಾಂದೇಲ್ಕರ್, ಡಾ| ಶ್ರೀರಾಮ್ ಮರಾಠೆ ಹಾಗೂ ಯುವ ವೃಂದದ ಸದಸ್ಯರು ಉಪಸ್ಥಿತರಿದ್ದರು. 25 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವ ವೃಂದದ ಪೂರ್ವಧ್ಯಕ್ಷ ವಿರೇಂದ್ರ ಪಾಟ್ಕರ್ ಹಾಗೂ ಸುಬ್ರಹ್ಮಣ್ಯ ವಾಗ್ಲೆ ಯವರನ್ನು ವಿಶೇಷವಾಗಿ ಅಭಿನಂದಿಸಲಾಯಿತು.
ಬಂಟಕಲ್ಲು: ಕೋವಿಡ್ ಲಸಿಕೆ ಪೂರ್ವ ರಕ್ತದಾನ ಶಿಬಿರ
Posted On: 30 Apr 2021, 08:19 PM
ಕಾಪು : ಸ್ಥಳೀಯ ರಾಜಾಪುರ ಸಾರಸ್ವತ ಯುವ ವೃಂದದ ಸದಸ್ಯರು ಕೋವಿಡ್ ಲಸಿಕೆ ಪಡೆಯುವ ಮುಂಚಿತವಾಗಿ ರಕ್ತದಾನ ಮಾಡುವ ಉಪಯುಕ್ತ ಕಾರ್ಯಕ್ರಮವು ಇಂದು ಜರುಗಿತು. 60 ಕ್ಕೂ ಹೆಚ್ಚು ಭಾರಿ ರಕ್ತ ದಾನ ಮಾಡಿದ ರಕ್ತದಾನಿ ಶ್ರೀ ದೇವದಾಸ್ ಪಾಟ್ಕರ್ ಲವರ ನೇತೃತ್ವದಲ್ಲಿ ಇಂದು ಮಣಿಪಾಲ ಕೆ ಎಮ್ ಸಿ ಯ ಬ್ಲಡ್ ಬ್ಯಾಂಕ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಶಿರ್ವ ಗ್ರಾ.ಪಂ ಅಧ್ಯಕ್ಷ , ರಾ ಸಾ ಯುವ ವೃಂದದ ಗೌರವಾಧ್ಯಕ್ಷರೂ ಆಗಿರುವ ಕೆ. ಆರ್. ಪಾಟ್ಕರ್ ರವರು ದೀಪ ಬೆಳಗಿಸಿ ಚಾಲನೆ ನೀಡಿದರು. ಕೊರೋನಾ ಸಂಕಷ್ಟ ಸಮಯದಲ್ಲಿ ಯುವ ವೃಂದದ ಸದಸ್ಯರು ಲಸಿಕೆ ಪಡೆಯುವ ಮುಂಚಿತವಾಗಿ ಸ್ವಯಂ ಪ್ರೇರಿತರಾಗಿ ರಕ್ತ ದಾನ ಶಿಬಿರದಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದು ಅಭಿನಂದಿಸಿದರು. ರಕ್ತದ ಕೊರತೆಯಾಗುವಂತಹ ಈ ಸಂಧರ್ಭದಲ್ಲಿ ಇದರ ನೇತೃತ್ವ ವಹಿಸಿ ಕಾರ್ಯಕ್ರಮ ಆಯೋಜಿಸಿದ ರಕ್ತದಾನಿ ದೇವದಾಸ ಪಾಟ್ಕರ್ ಇವರನ್ನು ವಿಶೇಷವಾಗಿ ಅಭಿನಂದಿಸಲಾಯಿತು. ಕಾರ್ಯಕ್ರಮಕ್ಕೆ ಅಭಯ ಹಸ್ತ ಹೆಲ್ಪ್ ಲೈನ್ ಉಡುಪಿ, ರಕ್ತ ನಿಧಿ ಮಣಿಪಾಲ ಇವರು ಸಹಯೋಗ ನೀಡಿದ್ದು ಅಭಯ ಹೆಲ್ಪ್ ಲೈನ್ ನ ಸತೀಶ್ ಸಾಲಿಯಾನ್, ರಕ್ತ ನಿಧಿಯ ಡಾ| ದಿವ್ಯ , ಯುವ ವೃಂದದ ಅಧ್ಯಕ್ಷ ವಿಶ್ವನಾಥ ಬಾಂದೇಲ್ಕರ್, ಡಾ| ಶ್ರೀರಾಮ್ ಮರಾಠೆ ಹಾಗೂ ಯುವ ವೃಂದದ ಸದಸ್ಯರು ಉಪಸ್ಥಿತರಿದ್ದರು. 25 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವ ವೃಂದದ ಪೂರ್ವಧ್ಯಕ್ಷ ವಿರೇಂದ್ರ ಪಾಟ್ಕರ್ ಹಾಗೂ ಸುಬ್ರಹ್ಮಣ್ಯ ವಾಗ್ಲೆ ಯವರನ್ನು ವಿಶೇಷವಾಗಿ ಅಭಿನಂದಿಸಲಾಯಿತು. ಯುವ ವೃಂದದ ಸದಸ್ಯರೆಲ್ಲರು ರಕ್ತದಾನ ಮಾಡಿದರು, ರಕ್ತ ನಿಧಿಯ ಡಾ| ದಿವ್ಯರವರು ರಕ್ತ ನಿಧಿಯ ವತಿಯಿಂದ ಕೃತಜ್ಞತೆ ಸಲ್ಲಿಸಿದರು. ಬಂಟಕಲ್ಲಿನಿಂದ ಮಣಿಪಾಲಕ್ಕೆ ಹೋಗಿ ಬರಲು ಮಣಿಪಾಲ ರಕ್ತ ನಿಧಿಯಿಂದ ಬಸ್ ನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಬಂಟಕಲ್ಲು: ಕೋವಿಡ್ ಲಸಿಕೆ ಪೂರ್ವ ರಕ್ತದಾನ ಶಿಬಿರ
Posted On: 30 Apr 2021, 08:18 PM
ಕಾಪು : ಸ್ಥಳೀಯ ರಾಜಾಪುರ ಸಾರಸ್ವತ ಯುವ ವೃಂದದ ಸದಸ್ಯರು ಕೋವಿಡ್ ಲಸಿಕೆ ಪಡೆಯುವ ಮುಂಚಿತವಾಗಿ ರಕ್ತದಾನ ಮಾಡುವ ಉಪಯುಕ್ತ ಕಾರ್ಯಕ್ರಮವು ಇಂದು ಜರುಗಿತು. 60 ಕ್ಕೂ ಹೆಚ್ಚು ಭಾರಿ ರಕ್ತ ದಾನ ಮಾಡಿದ ರಕ್ತದಾನಿ ಶ್ರೀ ದೇವದಾಸ್ ಪಾಟ್ಕರ್ ಲವರ ನೇತೃತ್ವದಲ್ಲಿ ಇಂದು ಮಣಿಪಾಲ ಕೆ ಎಮ್ ಸಿ ಯ ಬ್ಲಡ್ ಬ್ಯಾಂಕ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಶಿರ್ವ ಗ್ರಾ.ಪಂ ಅಧ್ಯಕ್ಷ , ರಾ ಸಾ ಯುವ ವೃಂದದ ಗೌರವಾಧ್ಯಕ್ಷರೂ ಆಗಿರುವ ಕೆ. ಆರ್. ಪಾಟ್ಕರ್ ರವರು ದೀಪ ಬೆಳಗಿಸಿ ಚಾಲನೆ ನೀಡಿದರು. ಕೊರೋನಾ ಸಂಕಷ್ಟ ಸಮಯದಲ್ಲಿ ಯುವ ವೃಂದದ ಸದಸ್ಯರು ಲಸಿಕೆ ಪಡೆಯುವ ಮುಂಚಿತವಾಗಿ ಸ್ವಯಂ ಪ್ರೇರಿತರಾಗಿ ರಕ್ತ ದಾನ ಶಿಬಿರದಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದು ಅಭಿನಂದಿಸಿದರು. ರಕ್ತದ ಕೊರತೆಯಾಗುವಂತಹ ಈ ಸಂಧರ್ಭದಲ್ಲಿ ಇದರ ನೇತೃತ್ವ ವಹಿಸಿ ಕಾರ್ಯಕ್ರಮ ಆಯೋಜಿಸಿದ ರಕ್ತದಾನಿ ದೇವದಾಸ ಪಾಟ್ಕರ್ ಇವರನ್ನು ವಿಶೇಷವಾಗಿ ಅಭಿನಂದಿಸಲಾಯಿತು. ಕಾರ್ಯಕ್ರಮಕ್ಕೆ ಅಭಯ ಹಸ್ತ ಹೆಲ್ಪ್ ಲೈನ್ ಉಡುಪಿ, ರಕ್ತ ನಿಧಿ ಮಣಿಪಾಲ ಇವರು ಸಹಯೋಗ ನೀಡಿದ್ದು ಅಭಯ ಹೆಲ್ಪ್ ಲೈನ್ ನ ಸತೀಶ್ ಸಾಲಿಯಾನ್, ರಕ್ತ ನಿಧಿಯ ಡಾ| ದಿವ್ಯ , ಯುವ ವೃಂದದ ಅಧ್ಯಕ್ಷ ವಿಶ್ವನಾಥ ಬಾಂದೇಲ್ಕರ್, ಡಾ| ಶ್ರೀರಾಮ್ ಮರಾಠೆ ಹಾಗೂ ಯುವ ವೃಂದದ ಸದಸ್ಯರು ಉಪಸ್ಥಿತರಿದ್ದರು. 25 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವ ವೃಂದದ ಪೂರ್ವಧ್ಯಕ್ಷ ವಿರೇಂದ್ರ ಪಾಟ್ಕರ್ ಹಾಗೂ ಸುಬ್ರಹ್ಮಣ್ಯ ವಾಗ್ಲೆ ಯವರನ್ನು ವಿಶೇಷವಾಗಿ ಅಭಿನಂದಿಸಲಾಯಿತು.
ಬಿಲ್ಲವ ಸೇವಾ ಸಂಘ ಇನ್ನಂಜೆ : ಗುರು ಮಂದಿರದ ನಾಲ್ಕನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ
Posted On: 29 Apr 2021, 10:42 PM
ಕಾಪು : ಬಿಲ್ಲವ ಸೇವಾ ಸಂಘ (ರಿ.) ಇನ್ನಂಜೆಯ ನಾರಾಯಣಗುರು ಮಂದಿರದ ನಾಲ್ಕನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವವು ಸರ್ಕಾರದ ನಿರ್ದೇಶನದಂತೆ ಕೋವಿಡ್ ನಿರ್ಬಂಧದಂತೆ ಸರಳ ರೀತಿಯಲ್ಲಿ ಆಚರಿಸಲಾಯಿತು. ಆ ಪ್ರಯುಕ್ತ ಏಪ್ರಿಲ್ 29, ಶುಕ್ರವಾರ ಬೆಳಿಗ್ಗೆ 7.00 ಗಂಟೆಗೆ ಮಹಾಗಣಪತಿ ಹೋಮ, ನವಕ ಪ್ರಧಾನ ಕಲಶ, 8.00 ಗಂಟೆಗೆ ಸಾಮೂಹಿಕ ಗುರುಪೂಜೆ ಜರಗಿತು. ನಂತರ ಭಜನಾ ಮಂಗಳ ಹಾಗೂ ಪ್ರಸಾದ ವಿತರಣೆ ನಡೆಯಿತು.
ಸೂರ್ಯನಮಸ್ಕಾರದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಉಡುಪಿಯ ರೇಣುಕಾ ಗೋಪಾಲಕೃಷ್ಣ
Posted On: 29 Apr 2021, 12:57 PM
ಕಾಪು : ಸತತ ಪರಿಶ್ರಮದ ಮೂಲಕ ಯೋಗದಲ್ಲಿ ಸಾಧನೆಯನ್ನು ಮಾಡಿ ಇದೀಗ 17 ನಿಮಿಷ, 49 ಸೆಕೆಂಡ್ ಗಳಲ್ಲಿ 170 ಸೂರ್ಯನಮಸ್ಕಾರ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾರೆ ಉಡುಪಿ ಸಮೀಪದ ಪೆರಂಪಳ್ಳಿ ಬೊಬ್ಬರ್ಯಕಟ್ಟೆ ರೇಣುಕಾ ಗೋಪಾಲಕೃಷ್ಣ. ಈ ಮೂಲಕ ಅಸ್ಸಾಮಿನ ಪುಷ್ಪಾಂಜಲಿ ಸೇನಾಪತಿ ಅವರ 1 ಗಂಟೆ 15 ನಿಮಿಷ 48 ಸೆಕೆಂಡ್ ಗಳಲ್ಲಿ 132 ಸೂರ್ಯನಮಸ್ಕಾರದ ದಾಖಲೆಯನ್ನು ರೇಣುಕಾ ಗೋಪಾಲಕೃಷ್ಣ ಮುರಿದಿದ್ದಾರೆ. ಈ ಸಂದರ್ಭ ಉಡುಪಿ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ನಿರೀಕ್ಷಕ ಸತೀಶ್, ಇಂಡಿಯ ಬುಕ್ ಆಫ್ ರೆಕಾರ್ಡ್ಸ್ನ ಹರೀಶ್ ಆರ್., ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಪಿ., ಮಲ್ಪೆ ಸಿಎಸ್ಪಿ ಶಾಖಾಧೀಕ್ಷಕ ಗೋಪಾಲಕೃಷ್ಣ, ಮಲ್ಪೆ ಸಿಎಸ್ಪಿ ನಿವೃತ್ತ ಪಿಎಸ್ಐ ಬಿ. ಮನಮೋಹನ ರಾವ್ ಉಪಸ್ಥಿತರಿದ್ದರು.
ಇನ್ನಂಜೆ : ಶ್ರೀ ದೇವಿ ಭಜನಾ ಮಂಡಳಿಯ 43ನೇ ಭಜನಾ ಮಂಗಳೋತ್ಸವ
Posted On: 28 Apr 2021, 10:08 AM
ಕಾಪು : ಇನ್ನಂಜೆ ಗ್ರಾಮದ ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ 43ನೇ ಭಜನಾ ಮಂಗಳೋತ್ಸವವನ್ನು ಗ್ರಾಮದ ಹಿರಿಯರು, ಧಾರ್ಮಿಕ ಚಿಂತಕರು, ಸಮಾಜಸೇವಕರಾದ ಸದಾನಂದ ಕೆ. ಶೆಟ್ಟಿ ದೀಪ ಪ್ರಜ್ವಲಿಸಿ ಭಜನಾಮಂಗಲೋತ್ಸವಕ್ಕೆ ಚಾಲನೆ ನೀಡಿದರು. ಮಧ್ಯಾಹ್ನ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆಯು ಮಂಡಳಿಯ ಸ್ಥಾಪಕ ಅಧ್ಯಕ್ಷರಾದ ಜಯಕರ ಶೆಟ್ಟಿ ದಂಪತಿಗಳ ಉಪಸ್ಥಿತಿಯಲ್ಲಿ ನೆರವೇರಿತು. ಈ ಸಂದರ್ಭ ಗ್ರಾಮದ ಹಿರಿಯರು ಹಾಗೂ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಶಂಕರಪುರ ಸಾಯಿ ಬಾಬಾ ಮಂದಿರಕ್ಕೆ ಮೂರ್ತಿಗಳ ಆಗಮನ
Posted On: 23 Apr 2021, 10:04 AM
ಉಡುಪಿ : ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿ ಬಾಬಾ ಮಂದಿರದಲ್ಲಿ ಮೇ ತಿಂಗಳ 1,2 ಮತ್ತು 3 ರಂದು ನಡೆಯುವ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಇಂದು ಸಾಯಿ ಬಾಬಾ ಮೂರ್ತಿಯನ್ನು ಶಂಕರಪುರದ ಮಂದಿರಕ್ಕೆ ಸ್ವಾಗತಿಸಲಾಯಿತು. ರಾಜಸ್ಥಾನದ ಜೈಪುರದಲ್ಲಿ ಕೆತ್ತಲಾದ ಅಮೃತಶಿಲೆಯ ದ್ವಾರಕಾಮಾಯಿ ಸಾಯಿ ಬಾಬಾ ಮತ್ತು ಧನ್ವಂತರಿ ಸಾಯಿಬಾಬಾ ಮೂರ್ತಿಗಳ ಜೊತೆಗೆ ಕರಿಗಲ್ಲಿನ ಗಣಪತಿ, ಆಂಜನೇಯ, ಅಯ್ಯಪ್ಪ, ಸುಬ್ರಮಣ್ಯ ಮೂರ್ತಿಗಳನ್ನು ಉಡುಪಿಯ ಜೋಡುಕಟ್ಟೆಯಿಂದ ವಾಹನ ಮೆರವಣಿಗೆಯಲ್ಲಿ ಶಂಕರಪುರಕ್ಕೆ ತರಲಾಯಿತು. ಜಯಕರ ಶೆಟ್ಟಿ ಇಂದ್ರಾಳಿ,ಸುಪ್ರಸಾದ್ ಶೆಟ್ಟಿ, ಕಿರಣ್ ಜೋಗಿ, ಪ್ರಕಾಶ್ ಬಾರಾಡಿ, ಗೀತಾಂಜಲಿ ಸುವರ್ಣ ಕಟಪಾಡಿ , ವೀಣಾ ಶೆಟ್ಟಿ, ಸತೀಶ್ ಉದ್ಯಾವರ, ವಿಶ್ವನಾಥ ಸುವರ್ಣ, ಉಮೇಶ್ ನಾಯ್ಕ್ ,ಸಂಪತ್ ಶೆಟ್ಟಿ, ಸುಧಾಕರ ಶೆಟ್ಟಿ, ಯಶ್ ಪಾಲ್ ಸುವರ್ಣ , ರಾಧಾಕೃಷ್ಣ ಮೆಂಡನ್,ವಿಜಯ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.
ಮಂಡೇಡಿ, ಇನ್ನಂಜೆ : ಶ್ರೀ ದೇವಿ ಭಜನಾ ಮಂಡಳಿಯ 43ನೇ ಭಜನಾ ಮಂಗಲೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾ ಅನ್ನಸಂತರ್ಪಣೆ
Posted On: 20 Apr 2021, 10:41 AM
ಕಾಪು : ಕಾಪು ತಾಲೂಕಿನ ಮಂಡೇಡಿ, ಇನ್ನಂಜೆಯ ಶ್ರೀ ದೇವಿ ಭಜನಾ ಮಂಡಳಿಯ ವಾರ್ಷಿಕೋತ್ಸವದ ಪ್ರಯುಕ್ತ 43ನೇ ಭಜನಾ ಮಂಗಲೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾ ಅನ್ನಸಂತರ್ಪಣೆಯು ಏಪ್ರಿಲ್ 22, ಗುರುವಾರ ನಡೆಯಲಿದೆ. ಏಪ್ರಿಲ್ 22, ಗುರುವಾರ ಬೆಳಿಗ್ಗೆ ಗಂಟೆ 10 ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 12 ಕ್ಕೆ ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 1ರಿಂದ ಅನ್ನಸಂತರ್ಪಣೆ, ಸಾಯಂಕಾಲ ಗಂಟೆ 6ರಿಂದ ದೀಪ ಪ್ರತಿಷ್ಠೆಯೊಂದಿಗೆ ವಿವಿಧ ಭಜನಾ ಮಂಡಳಿಯವರಿಂದ ಭಜನೆ ಆರಂಭ, ಪ್ರಾತಃ ಕಾಲ ರಾತ್ರಿ ಗಂಟೆ 12-30ಕ್ಕೆ ಭಜನಾ ಮಂಗಳೋತ್ಸವ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
