Updated News From Kaup
ಬಳಕುಂಜೆಯಲ್ಲಿ ಜಲ ಸಮಸ್ಯೆಯ ಕುರಿತ ಕಿರುಚಿತ್ರ ಪ್ರದರ್ಶನ
Posted On: 17 Mar 2021, 02:42 PM
ಮಂಗಳೂರು : ತಾಲೂಕಿನ ಬಳಕುಂಜ ಗ್ರಾಮ ಪಂಚಾಯತಿಯಲ್ಲಿ ದೇಶದ ವಿವಿಧ ಪ್ರದೇಶದಲ್ಲಿ ಇರುವ ನೀರಿನ ಅಭಾವದ ಕುರಿತು ಒಂದು ಕಿರು ಚಿತ್ರ ಪ್ರದರ್ಶನದ ಜೊತೆಗೆ Book ಎಂಬ ಕೃತಿ ಆಧಾರಿತ ಜಲದ ಸಮಸ್ಯೆಗೆ ಸಂಬಂಧಿಸಿದ ಕಿರುಚಿತ್ರವನ್ನು ಪ್ರದರ್ಶನ ಮಾಡಲಾಯಿತು. ಮರುಭೂಮಿಯಲ್ಲಿ ದಾಹದಿಂದ ಸುತ್ತಾಡುವ ವ್ಯಕ್ತಿಗೆ ಹ್ಯಾಂಡ್ ಪಂಪ್ ಸಿಕ್ಕಾಗ, ಎಷ್ಟೇ ಪಂಪ್ ಮಾಡಿದರೂ ನೀರು ಸಿಗದೇ ಇದ್ದಾಗ ಮರಕ್ಕೆ ನೇತು ಹಾಕಿದ ಒಂದು ಅಶುದ್ಧ ನೀರಿನ ಬಾಟಲಿ ಸಿಕ್ಕಿ, ಅದರ ಕೆಳಗೆ ತೆಲುಗು ಲಿಪಿಯಲ್ಲಿ ಬರೆದಿರುವ (ಈ ನೀರನ್ನು ಪಂಪಿಗೆ ಹಾಕಿ ಆಗ ಶುದ್ಧ ನೀರು ಸಿಗುತ್ತದೆ) ವಾಕ್ಯ ನೋಡಿ ಆ ವ್ಯಕ್ತಿ ಹಾಕುವುದು. ಬಳಿಕ ಶುದ್ಧವಾದ ನೀರು ಲಭ್ಯವಾಗುವ ಸಂದೇಶ ನಿರ್ಮಿತ ಅದ್ಭುತ ಕಿರುಚಿತ್ರ ಇದಾಗಿತ್ತು. ನೆರೆದಿದ್ದ ಎಲ್ಲರಿಂದಲೂ ಈ ಕಿರುಚಿತ್ರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು.
ಶಂಕರ್ ಶಾಂತಿ ಪ್ರಕರಣ : ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ, ಆರೋಪಿಗಳನ್ನು ಬಂಧಿಸುವ ಭರವಸೆ
Posted On: 15 Mar 2021, 10:58 PM
ಉಡುಪಿ : ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದು ನೈಜ ಆರೋಪಿಗಳನ್ನು ಬಂಧಿಸದ ಹಿನ್ನೆಲೆಯಲ್ಲಿ ಅವರ ಪತ್ನಿ ಪೂರ್ಣಿಮಾ ಶಂಕರ್, ಮಕ್ಕಳು ಹಾಗೂ ಕುಟುಂಬ ವರ್ಗದ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲವಾಗಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ, ದಲಿತ ಸಂಘರ್ಷ ಸಮಿತಿ, ಆರ್ ಟಿ ಐ ಕಾರ್ಯಕರ್ತರ ಸಮಿತಿ, ಜಿಲ್ಲೆಯ ವಿವಿಧ ಬಿಲ್ಲವ ಸಂಘಗಳು, ಸಮಾನ ಮನಸ್ಕರು ಮಣಿಪಾಲದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಶಂಕರ್ ಶಾಂತಿ ಅವರ ಪತ್ನಿ ಪೂರ್ಣಿಮ ಶಂಕರ್ ದೇವರ ಭಯವಿಲ್ಲದೆ ದೇವಸ್ಥಾನದಲ್ಲಿಯೇ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳಿಗೆ ಪೊಲೀಸರ ಭಯವಿಲ್ಲದಾಗಿದೆ. ಈ ಬೆಳವಣಿಗೆ ಅನುಮಾನವನ್ನು ಉಂಟುಮಾಡುತ್ತಿದೆ. ಶಂಕರ್ ಶಾಂತಿ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ. ಸುಳ್ಳು ಆರೋಪದ ವಿರುದ್ಧ ಯಾವುದೇ ದೇವರ ಮುಂದೆ ನಾನು ಆಣೆ-ಪ್ರಮಾಣಕ್ಕೂ ಸಿದ್ಧನಾಗಿದ್ದೇನೆ ಎಂದರು. ದುಷ್ಕರ್ಮಿಗಳನ್ನು ಬಂಧಿಸಿ ನ್ಯಾಯ ದೊರಕಿಸಿ ಎಂದು ಎಂದರು. ಇದೇ ಸಂದರ್ಭ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಶೇಖರ್ ಹಾವಂಜೆ ರಾಜಕೀಯದ ಮಂದಿ ಜಿಲ್ಲೆಯಲ್ಲಾದ ಹಲ್ಲೆಯ ಬಗ್ಗೆ ಮಾತನಾಡುತ್ತಿಲ್ಲ. ಅಂದರೆ ಅವರಿಗೆ ಓಟು ನೀಡುವ ತನಕ ಮಾತ್ರ ಜನರು ಬೇಕೇ? ಎಂದು ಪ್ರಶ್ನಿಸಿದರು. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ದೇವಾಲಯದಲ್ಲಿ ಇಂತಹ ಅನಾಚಾರ ನಡೆದಾಗಲೂ ಸಂಬಂಧಪಟ್ಟ ಇಲಾಖೆ ಪ್ರಶ್ನಿಸುತ್ತಿಲ್ಲ ಇದರ ಬಗ್ಗೆ ಜಿಲ್ಲಾಧಿಕಾರಿಯವರು ಗಮನಹರಿಸಬೇಕಾಗಿದೆ. ಅದೇ ರೀತಿಯಾಗಿ ಮುಂದಿನ ದಿನಗಳಲ್ಲಿ ಶಂಕರ್ ಶಾಂತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು. ಬಿಲ್ಲವ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಮಾತನಾಡಿ ಹಲವಾರು ಬಾರಿ ಪ್ರತಿಭಟನೆ ಆದಾಗ ಮಾತ್ರ ಪೊಲೀಸ್ ಇಲಾಖೆಯು ದುಷ್ಕರ್ಮಿಗಳನ್ನು ಬಂಧಿಸುತ್ತದೆ. ಆದರೆ ನೈಜ ಆರೋಪಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದು ಆ ಮೂಲಕ ಪೊಲೀಸ್ ಇಲಾಖೆಗೆ ಸಡ್ಡು ಹೊಡೆಯುತ್ತಿದ್ದಾರೆ. ಇದು ಇಲಾಖೆಯ ಮೇಲೆ ನಮ್ಮಲ್ಲಿ ಅನುಮಾನ ಮೂಡಿಸುತ್ತಿದೆ ಎಂದರು. ಪ್ರತಿಭಟನಾ ಸ್ಥಳಕ್ಕೆ ಮನವಿ ಸ್ವೀಕರಿಸಲು ಅಪರ ಜಿಲ್ಲಾಧಿಕಾರಿ ಬಂದಾಗ ಪ್ರತಿಭಟನಾಕಾರು ಜಿಲ್ಲಾಧಿಕಾರಿಯವರೇ ಬಂದು ಮನವಿ ಸ್ವೀಕರಿಸಬೇಕೆಂದು ಪಟ್ಟು ಹಿಡಿದಾಗ ಪ್ರತಿಭಟನಾಕಾರರ ಮನವಿ ಮೇರೆಗೆ ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು. ಈ ಸಂದರ್ಭ ಮಾತನಾಡಿದ ಅವರು ದುಷ್ಕರ್ಮಿಗಳನ್ನು ಬಂಧಿಸುವ ಭರವಸೆ ನೀಡಿದರು. ಪ್ರತಿಭಟನಾ ಸಭೆಯಲ್ಲಿ ಉಡುಪಿ ಜಿಲ್ಲೆಯ ಬಿಲ್ಲವ ಸಂಘಗಳ ಅಧ್ಯಕ್ಷರು, ಸದಸ್ಯರು ಹಾಗೂ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರು, ಸದಸ್ಯರು, ಆರ್ ಟಿ ಐ ಕಾರ್ಯಕರ್ತರುಗಳು, ಉಡುಪಿ ಜಿಲ್ಲಾ ಬಿಲ್ಲಾ ವೇದಿಕೆಯ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮಾನಮನಸ್ಕರು ಉಪಸ್ಥಿತರಿದ್ದರು.
ಸಿಟಿ ರಿಜನ್ ಮುಂಬೈ : ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಧ್ಯಕ್ಷರಾಗಿ ನಿಲೇಶ್ ಶೆಟ್ಟಿ ಇನ್ನಾ ಆಯ್ಕೆ
Posted On: 15 Mar 2021, 10:43 PM
ಕಾಪು : ಮುಂಬಯಿ ಬಂಟರ ಸಂಘದ ಸಿಟಿ ರಿಜನ್ ಮುಂಬೈ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಧ್ಯಕ್ಷರಾಗಿ ನಿಲೇಶ್ ಶೆಟ್ಟಿ ಇನ್ನಾ ಆಯ್ಕೆಯಾಗಿರುತ್ತಾರೆ.
ಮಾಚ್೯ 21 : ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಮಹೋತ್ಸವ
Posted On: 15 Mar 2021, 09:35 PM
ಪಡುಬಿದ್ರಿ : ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿಯ ಧ್ವಜಾರೋಹಣ ಮಾಚ್೯ 14, ಆದಿತ್ಯವಾರ ಜರಗಿದೆ. ಮಾರ್ಚ್ 21 ರಂದು ಬೆಳಗ್ಗೆ 11ಕ್ಕೆ ರಥಾರೋಹಣ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ 11ಕ್ಕೆ ಮಹಾರಥೋತ್ಸವ ನಡೆಯಲಿದೆ. ಮಾರ್ಚ್ 22 ಪ್ರಾತಃಕಾಲ 6:30 ಕವಾಟೋದ್ಘಾಟನೆ, ಬಲಿ ಉತ್ಸವ, ತುಲಾಭಾರ ಸೇವೆಗಳು ನಡೆಯಲಿದ್ದು. ಸಂಜೆ 4 ಕ್ಕೆ ಇತಿಹಾಸ ಪ್ರಸಿದ್ಧ ಚೆಂಡು, ರಾತ್ರಿ 7ಕ್ಕೆ ಅವಭೃತ ಸ್ನಾನ, ಬಲಿ ಕಟ್ಟೆ ಪೂಜೆ, ಸೂಟೆದಾರ, ಬಲಿ ಉತ್ಸವ, ಧ್ವಜಾವರೋಹಣ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪಡುಬಿದ್ರಿ ಬ್ಲೂಫ್ಲಾಗ್ ಬೀಚ್ ನಲ್ಲಿ ನಮಾಜ್ ಮಾಡಿ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ: ವಿಶ್ವ ಹಿಂದೂ ಪರಿಷದ್, ಬಜರಂಗದಳ ಖಂಡನೆ
Posted On: 15 Mar 2021, 08:51 PM
ಕಾಪು ತಾಲೂಕಿನ ಪಡುಬಿದ್ರಿ ಬ್ಲೂಫ್ಲಾಗ್ ಬೀಚ್ ನಲ್ಲಿ ನಮಾಜ್ ಮಾಡಿ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ ಮಾಡಿರುವ ಪ್ರಕರಣ ನಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುತ್ತದೆ. ಈ ಪ್ರಕರಣವನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲಾಧ್ಯಕ್ಷ ಪಿ.ವಿಷ್ಣುಮೂರ್ತಿ ಆಚಾರ್ಯ,ಕಾಪು ಪ್ರಖಂಡ ಕಾರ್ಯದರ್ಶಿ ಜಯಪ್ರಕಾಶ್ ಪ್ರಭು,ಬಜರಂಗದಳದ ಜಿಲ್ಲಾ ಸುರಕ್ಷಾ ಪ್ರಮುಖ್ ರಾಜೇಶ್ ಕೋಟ್ಯಾನ್,ಕಾಪು ಪ್ರಖಂಡ ಸಂಚಾಲಕ ಸುಧೀರ್ ಜಂಟಿಯಾಗಿ ತಿಳಿಸಿರುತ್ತಾರೆ. ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ ಮಾಡಿರುವವರ ವಿರುಧ್ಧ ಕಾನೂನು ಕ್ರಮ ಕೈಗೊಂಡು ಮುಂದೆ ಈ ರೀತಿಯ ಪ್ರಕರಣ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿ ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮನವಿ ಮಾಡುತ್ತದೆ. ಪಡುಬಿದ್ರಿ ಬೀಚ್ ಪ್ರವಾಸೋದ್ಯಮ ಪ್ರದೇಶವಾಗಿದ್ದು ಸ್ಥಳೀಯ ಹಾಗೂ ಹೊರಗಿನ ಅನೇಕರು ಇಲ್ಲಿಗೆ ಆಗಮಿಸುತ್ತಿದ್ದು ಅವರ ಸುರಕ್ಷತಾ ದೃಷ್ಟಿಯಿಂದ ಭದ್ರತಾ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿಯ ಪ್ರದೇಶದಲ್ಲಿ ಈ ರೀತಿಯ ವರ್ತನೆ ಸರಿಯಲ್ಲ. ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯ ವರ್ತನೆಗಳು ಮರುಕಳಿಸಿದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಗ್ರವಾದ ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.
ಕಾಪು : ಯಕ್ಷ ಪ್ರಿಯರು ಕಲಾ ಸಂಘಟನೆ ಉದ್ಘಾಟನೆ
Posted On: 15 Mar 2021, 08:44 PM
ಕಾಪು : ಕರಾವಳಿಯ ಗಂಡುಕಲೆ ಎಂದೇ ಬಿಂಬಿತವಾಗಿರುವ ಯಕ್ಷಗಾನ ಕಲೆ, ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಮತ್ತು ಕಲಾವಿದರನ್ನು ಪೋಷಿಸುವ ಉದ್ದೇಶದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಯಕ್ಷ ಪ್ರಿಯರು ಕಾಪು ಸಂಘಟನೆಯು ಮಾ.೧೩ರಂದು ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ಬಳಿಯಲ್ಲಿರುವ ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ ಉದ್ಘಾಟನೆಗೊಂಡಿತು. ಯಕ್ಷಪ್ರಿಯರು ಕಾಪು ಸಂಸ್ಥೆಯನ್ನು ಉದ್ಘಾಟಿಸಿದ ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಕಾಪುವಿನಲ್ಲಿ ನೂತನವಾಗಿ ಆರಂಭಗೊಂಡ ಯಕ್ಷ ಪ್ರಿಯರು ಸಂಸ್ಥೆಯ ಮೂಲಕವಾಗಿ ಯಕ್ಷಗಾನ ಕಲಾವಿದರು, ಕಲೆ ಮತ್ತು ಸಂಸ್ಕೃತಿಯ ಅನಾವರಣಗೊಳ್ಳುತ್ತಿರುವುದು ಪ್ರಶಂಸನೀಯವಾಗಿದೆ. ಕರಾವಳಿಯ ಗಂಡು ಕಲೆ ಯಕ್ಷಗಾವನ್ನು ಇಂದಿನ ಯುವಜನರಿಗೆ ಪರಿಚಯಿಸಿಕೊಡುವ ಉದ್ದೇಶದಿಂದ ಪ್ರಾರಂಭಗೊಂಡಿರುವ ಈ ಸಂಸ್ಥೆಯು ಉತ್ತರೋತ್ತರ ಅಭಿವೃದ್ಧಿಯನ್ನು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಯಕ್ಷ ಪ್ರಿಯರು ಸಂಘಟನೆಯ ಉದ್ಘಾಟನೆಯ ಅಂಗವಾಗಿ ಶ್ರೀ ಮಂಗಳಾದೇವಿ ಪ್ರಸಾದಿತ ಯಕ್ಷಗಾನ ಮಂಡಳಿಯವರಿಂದ ಕಾರ್ನಿಕದ ಕೊರಗಜ್ಜೆ ಕಾಲಮಿತಿ ಯಕ್ಷಗಾನ ಪ್ರದರ್ಶನ ಆಯೋಜಿಸಲಾಯಿತು. ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಅರ್ಚಕ ವೇ| ಮೂ| ಜನಾರ್ದನ ತಂತ್ರಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ್ ಆಚಾರ್ಯ, ಗುತ್ತಿನಾರ್ ರಮೇಶ್ ಶೆಟ್ಟಿ ಬೈರುಗುತ್ತು, ಬಂಟರ ಸಂಘದ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಶ್ರೀ ವೀರಭದ್ರ ದೇವಸ್ಥಾನದ ಪ್ರತಿನಿಽ ಅಶೋಕ್ ಶೆಟ್ಟಿಗಾರ್, ಮಂಗಳಾದೇವಿ ಪ್ರಸಾದಿತ ಯಕ್ಷಗಾನ ಮಂಡಳಿ ಮೇಳದ ವ್ಯವಸ್ಥಾಪಕ ಎಸ್.ಎ. ವರ್ಕಾಡಿ, ಸಂಚಾಲಕ ಸತ್ಯಪಾಲ ರೈ ಕೆಡಿಂಜೆ, ಹಿರಿಯ ಕಲಾವಿದ ಕೆ.ಎಚ್. ದಾಸಪ್ಪ ರೈ ಪುತ್ತೂರು, ಸಂಘಟಕ ಅರುಣ್ ಶೆಟ್ಟಿ ಪಾದೂರು ಉಪಸ್ಥಿತರಿದ್ದರು. ಸಂಘಟಕರಾದ ಕೆ. ಲೀಲಾಧರ ಶೆಟ್ಟಿ ಪ್ರಸ್ತಾವನೆಗೈದರು. ಪತ್ರಕರ್ತ ರಾಕೇಶ್ ಕುಂಜೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪುರುಷೋತ್ತಮ್ ಸಾಲ್ಯಾನ್ ವಂದಿಸಿದರು.
ಕಾಪು ಶ್ರೀ ಮಾರಿಯಮ್ಮ ದೇವಸ್ಥಾನ ಆದಿಸ್ಥಳ ಶ್ರೀ ತ್ರಿಶಕ್ತಿ ಸನ್ನಿಧಿಯಲ್ಲಿ ವಾರ್ಷಿಕ ಮಹೋತ್ಸವ
Posted On: 13 Mar 2021, 02:05 PM
ಕಾಪು : ಕಾಪು ಶ್ರೀ ಮಾರಿಯಮ್ಮ ದೇವಸ್ಥಾನ ಆದಿಸ್ಥಳ ಶ್ರೀ ತ್ರಿಶಕ್ತಿ ಸನ್ನಿಧಿ ಕೋಟೆಮನೆ, ಮಲ್ಲಾರು, ಕಾಪು ಇಲ್ಲಿ ಮಾರ್ಚ್ 13, ಶನಿವಾರ ಮತ್ತು ಮಾರ್ಚ್ 14, ಆದಿತ್ಯವಾರ ವಾರ್ಷಿಕ ಮಹೋತ್ಸವ ಜರಗಲಿದೆ. ಮಾರ್ಚ್ 13, ಶನಿವಾರದಂದು ಪ್ರಾತಃಕಾಲ ಪುಣ್ಯಾಹ ಶುದ್ಧಿ, ಸನ್ನಿಧಾನಕ್ಕೆ ಸಂಬಂಧಪಟ್ಟ ನಾಗನಿಗೆ ತನು ತಂಬಿಲ ಸೇವೆ. ಬೆಳಿಗ್ಗೆ 9:30 ಕ್ಕೆ ಮಹಾಗಣಪತಿ ಹೋಮ, ಸಾಯಂಕಾಲ 7:30 ರಿಂದ ಭಜನಾ ಕಾರ್ಯಕ್ರಮ. ರಾತ್ರಿ 8:30 ಕ್ಕೆ ಹೂವಿನ ಪೂಜೆ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಾಚ್೯14, ಆದಿತ್ಯವಾರದಂದು ಸ್ಥಳಶುದ್ಧಿ, ಪ್ರಾರ್ಥನೆ, ದೇವಿ ಪಾರಾಯಣ, ಕಲಶಾಭಿಷೇಕ, ಅಲಂಕಾರ ಪೂಜೆ. ಮಧ್ಯಾಹ್ನ 12:25 ಕ್ಕೆ ಚಂಡಿಕಾ ಪೂರ್ಣಾಹುತಿ, ಮಹಾಪೂಜೆ. ಮಧ್ಯಾಹ್ನ 1ಕ್ಕೆ ಬ್ರಾಹ್ಮಣಾರಾಧನೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಾಚ್೯ 14 : ಕಾಪುವಿನ ಹೋಟೆಲ್ ಮಂದಾರ ಯಾತ್ರಿ ನಿವಾಸ ವಠಾರದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ
Posted On: 12 Mar 2021, 11:32 AM
ಕಾಪು : ಕಾಪುವಿನ ಹೋಟೆಲ್ ಮಂದಾರ ಯಾತ್ರಿ ನಿವಾಸ ವಠಾರದಲ್ಲಿ ಮಾಚ್೯ 14, ಆದಿತ್ಯವಾರ ಶ್ರೀಮತಿ ಮತ್ತು ಶ್ರೀ ರಶ್ಮಿಕಾಂತ್ ಶೆಟ್ಟಿ, ಶ್ರೀಮತಿ ಮತ್ತು ಶ್ರೀ ವಿನಯ್ ಶೆಟ್ಟಿ ನಂದಿಕೂರು ಇವರ ಸೇವಾರ್ಥವಾಗಿ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕಲಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಮಂಗಳೂರು ಇವರಿಂದ ಸಂಜೆ 6ರಿಂದ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾ ಭಾಗವನ್ನು ಬಯಲಾಟವಾಗಿ ಆಡಿತೋರಿಸಲಿರುವರು. ಅದೇ ದಿನ ಬೆಳಿಗ್ಗೆ 10 ಗಂಟೆಗೆ ಗಣಹೋಮ ಮತ್ತು ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶಂಕರ್ ಶಾಂತಿ ಪ್ರಕರಣಕ್ಕೆ ನ್ಯಾಯ ಸಿಗದಿದ್ದಲ್ಲಿ ಮಕ್ಕಳೊಂದಿಗೆ ಉಪವಾಸ ಸತ್ಯಾಗ್ರಹ : ಪೂರ್ಣಿಮ ಶಂಕರ್ ಶಾಂತಿ
Posted On: 11 Mar 2021, 07:15 PM
ಉಡುಪಿ : ಶಂಕರ್ ಶಾಂತಿಯವರು ಜನಸಾಮಾನ್ಯರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಾ ಕಾನೂನು, ನಿಯಮ ಪಾಲನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ನನ್ನ ಗಂಡನ ಮೇಲೆ ದಿನಾಂಕ 20-02-2021, ಆದಿತ್ಯವಾರದಂದು ಮನೆಯ ಸಮೀಪದ ಕಾಳಿಕಾಂಬ ದೇವಾಲಯ ಅಡುಗೆ ಕೋಣೆಯಲ್ಲಿ ಕೂಡಿ ಹಾಕಿ, ಚಿತ್ರ ಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅದೇ ಸಮಯಕ್ಕೆ ಬೊಬ್ಬೆ ಕೇಳಿ ನಾನು ಸ್ಥಳಕ್ಕಾಗಮಿಸಿದಾಗ ನನ್ನ ಗಂಡ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಅವರನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದೆ. RTI ಕಾರ್ಯಕರ್ತನಾಗಿ ಸಾಮಾಜಿಕ ನೆಲೆಯಲ್ಲಿ ತನ್ನ ಊರಿನಲ್ಲಿ ಹಾಗೂ ಸುತ್ತಮುತ್ತ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದವರು ನನ್ನ ಗಂಡ. ರಸ್ತೆ ಸಾರಿಗೆ ಸುರಕ್ಷತೆ ವಿಷಯ, ಕಾಂಕ್ರೀಟ್ ರಸ್ತೆ ಕಳಪೆ ವಿಷಯ, ಬಾರ್ಕೂರು ಜೈನ ಬಸದಿ ಅತಿಕ್ರಮಣ ತೆರವು, ಬಾರ್ಕೂರು ಗ್ರಾ. ಪಂ. ಅವ್ಯವಹಾರ, ಹೊಸಾಳ ಗರಡಿಯಲ್ಲಿ ವೈದಿಕನೋರ್ವನ ಅನಾಚಾರ ಪ್ರಶ್ನಿಸುವಿಕೆ, ಇಂತಹದ್ದೆ ಅನೇಕ ಜನಪರ ಸೇವೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದವರು ನನ್ನ ಗಂಡ ಶಂಕರ ಶಾಂತಿ. ಜೈನ್ ಬಸದಿ ಅತಿಕ್ರಮಣ ತೆರವು ಮತ್ತು ರಸ್ತೆ ಬದಿಯಲ್ಲಿ ಬ್ಯಾನರ್ ಅಳವಡಿಸಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರ ಕುರಿತು ನನ್ನ ಗಂಡ ಕ್ರಮ ಕೈಗೊಂಡಿದ್ದರಿಂದ ದುಷ್ಕರ್ಮಿಗಳಾದ ಪ್ರವೀಣ ಆಚಾರ್ಯ, ಪ್ರಸಾದ್ ಆಚಾರ್ಯ, ಶಾಂತರಾಮ ಶೆಟ್ಟಿ, ಮಂಜಪ್ಪ ಪೂಜಾರಿ, ದಿವಾಕರ ಒಟ್ಟು ಸೇರಿ ಕಬ್ಬಿಣದ ರಾಡ್ನಿಂದ ಕೊಲೆಯತ್ನ ನಡೆಸಿರುವುದು ದುಷ್ಟಕೂಟದ ರಾಜಕೀಯ ಪ್ರೇರಿತ ದುಷ್ಟಕೃತಕ್ಕೆ ಈ ಹಲ್ಲೆ ಕಾರಣವಾಗಿದೆ. ಮನುಷ್ಯತ್ವವಿಲ್ಲದ ವರ್ತನೆಯಾಗಿದ್ದು ಇದರಲ್ಲಿ ನನ್ನ ಗಂಡನ ಸಂಬಂದಿಯಾದ ಮಂಜಪ್ಪ ಪೂಜಾರಿ ಇತರರ ಜೊತೆ ಸೇರಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ನನ್ನ ಗಂಡನ ಬೊಬ್ಬೆ ಕೇಳಿ ನಾನು ಬಾರದೆ ಹೋದಲ್ಲಿ ನನ್ನ ಗಂಡ ಶಿವನ ಪಾದ ಸೇರುತ್ತಿದ್ದರೇನೋ? ನಾನು ಈ ಪ್ರಕರಣ ದಾಖಲಿಸುವ ಮೊದಲೇ ನನ್ನ ಗಂಡನ ಸಂಬಂದಿಯಾದ ಮಂಜಪ್ಪ ಪೂಜಾರಿ ನನ್ನ ಗಂಡನೇ ದೇವಾಲಯದ ಕಿಟಕಿ ಗಾಜನ್ನು ಒಡೆದು ಇತರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೂರು ದಾಖಲಿಸಿದ್ದು ವಿಪರ್ಯಾಸವೇ ಸರಿ. ಅದೇ ದಿನ ನಾನು ಪ್ರವೀಣ ಆಚಾರ್ಯ, ಪ್ರಸಾದ್ ಆಚಾರ್ಯ, ಶಾಂತರಾಮ ಶೆಟ್ಟಿ, ಮಂಜಪ್ಪ ಪೂಜಾರಿ, ದಿವಾಕರ ಮೇಲೆ ಹಲ್ಲೆ ಪ್ರಕರಣವನ್ನು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. 5ಜನ ಆರೋಪಿಗಳ ಮೇಲೆ ಅಪರಾಧ ಕ್ರಮಾಂಕ 27/2021 ಕಲಂ: 143, 147, 148, 341, 323, 324, 326, 307, 506 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದ ಬಾರಕೂರಿನ ಆರ್ ಟಿ ಐ ಕಾರ್ಯಕರ್ತ ನನ್ನ ಗಂಡ ಶಂಕರ ಶಾಂತಿಯವರು ಈಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಮತ್ತು ಪದಾಧಿಕಾರಿಗಳ ಜೊತೆಗೆ ನಾನು ತೆರಳಿ ದಿನಾಂಕ 25/02/2020 ರಂದು ಮನವಿ ಸಲ್ಲಿಸಿದ್ದೇವೆ. ತದನಂತರ ಉಡುಪಿ ಬನ್ನಂಜೆ ಬಿಲ್ಲವ ಸಂಘದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು, ಪ್ರತಿಭಟನೆಯಲ್ಲಿ ಜೈನ್ ಸಮುದಾಯದ ಆಕಾಶ್ ರಾಜ್ ಜೈನ್ ರವರು ಸಹ ಭಾಗಿಯಾಗಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ದ.ಸಂ.ಸ.ಕ ರಾಜ್ಯಾಧ್ಯಕ್ಷರಾದ ಶೇಖರ್ ಹಾವಂಜೆ, ಅ.ಭಾ.ಹಿಂ.ಮ.ಸ ಸಹ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು, ಹೋರಾಟದ ಮಾರನೇ ದಿನ ಹಲ್ಲೆಯ ಪ್ರಮುಖ ಆರೋಪಿ ಪ್ರವೀಣ್ ಆಚಾರ್ಯನನ್ನು ಬಂಧಿಸಿದ್ದಾರೆ. ದಿನಾಂಕ 04/03/2021 ರಂದು ಬ್ರಹ್ಮವಾರ ಠಾಣೆ ಎದುರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಹಲವು ಬಿಲ್ಲವ ಸಂಘಟನೆ ಮುಖಂಡರು, ದ.ಸಂ.ಸ.ಕ, ಜೈನ್ ಸಮುದಾಯದ ಪ್ರಮುಖರೂ ಜೊತೆಗೆ ನಾನು ಮತ್ತು ನನ್ನ ಮಕ್ಕಳು ಹಾಗೂ ಪರಿವಾರ ಸದಸ್ಯರು ಸೇರಿ ಪ್ರತಿಭಟನೆ ಮಾಡಿದ್ದೆವು ನಂತರ ಮತ್ತೆ ಹಲ್ಲೆಗೆ ಸಂಬಂಧಿಸಿದ ಮೂವರು ಆರೋಪಿಗಳ ಬಂಧನವಾಗಿದೆ. ಆದರೂ ಈ ಹಲ್ಲೆ ಸಂಬಂಧಿಸಿದ ಪ್ರಮುಖ 4 ಜನ ಆರೋಪಿಗಳಾದ ಮಂಜಪ್ಪ ಪೂಜಾರಿ, ಶಾಂತರಾಮ್ ಶೆಟ್ಟಿ, ಪ್ರಸಾದ್ ಆಚಾರ್ಯ ಮತ್ತು ದಿವಾಕರ ಆಚಾರ್ಯರವರ ಬಂಧನ ಇನ್ನು ಆಗಿಲ್ಲ. ನನ್ನ ಗಂಡನ ಮೇಲೆ ಹಲ್ಲೆ ನಡೆದ್ದು ಇಂದಿಗೆ 19 ದಿನಗಳು ಕಳೆದರು ಪ್ರಮುಖ ಆರೋಪಿಗಳ ಬಂಧನವಾಗದೆ ಇರುವುದು ವಿಷಾದನೀಯ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾವಿ ವ್ಯಕ್ತಿಗಳು, ರಾಜಕೀಯ ಪ್ರೇರಿತ ಶಕ್ತಿಗಳು ಪೊಲೀಸ್ ಇಲಾಖೆಯ ಕಾರ್ಯಚರಣೆ ಅಡ್ಡಿ ಪಡಿಸುತ್ತಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಮೂಲಕ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಹಿಂದುಳಿದ ಜಾತಿ ಸಚಿವರು ಮತ್ತು ಉಡುಪಿ ಜಿಲ್ಲೆ ಎಲ್ಲ ಶಾಸಕರಲ್ಲಿ ನನ್ನ ಗಂಡನಿಗೆ ಆದ ಅನ್ಯಾಯಕ್ಕೆ, ನ್ಯಾಯ ದೊರಕಿಸಿ ಕೊಡಬೇಕು ಮತ್ತು ಕೂಡಲೇ ಪ್ರಮುಖ ಆರೋಪಿಗಳನ್ನು ಬಂಧಿಸಬೇಕೆಂದು ವಿನಂತಿಸುತ್ತೇನೆ. ಆದಿತ್ಯವಾರದೊಳಗೆ ಪ್ರಮುಖ ಆರೋಪಿಗಳ ಬಂಧನವಾಗದಿದ್ದಲ್ಲಿ ದಿನಾಂಕ 15-03-2021ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಾನು ಮತ್ತು ನನ್ನ ಮಕ್ಕಳು ಜೊತೆಗೆ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತೇನೆ ಮತ್ತು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಮತ್ತು ಎಲ್ಲಾ ಇತರ ಸಂಘಟನೆಗಳ ಮುಖಂಡರ ಬೆಂಬಲದೊಂದಿಗೆ ಪ್ರತಿಭಟನೆ ನಡೆಸುತ್ತೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಎಲ್ಲೂರು : ಮಹಾ ಶಿವರಾತ್ರಿಯ ಪ್ರಯುಕ್ತ ನಿರಂತರ ಭಜನೆ
Posted On: 11 Mar 2021, 02:55 PM
ಎಲ್ಲೂರು ,ಮಾ.11: ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ 'ಮಹಾ ಶಿವರಾತ್ರಿ'ಯ ಪ್ರಯುಕ್ತ ವಿವಿಧ ಆಹ್ವಾನಿತ ತಂಡಗಳಿಂದ ನಿರಂತರ ಭಜನಾ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಶ್ರೀ ವಿಶ್ವೇಶ್ವರ ದೇವಸ್ಥಾನ ಎಲ್ಲೂರು ಹಾಗೂ ಎಲ್ಲೂರು ಯುವಕ ಮಂಡಲ(ರಿ) ಜಂಟಿಯಾಗಿ ಹಮ್ಮಿಕೊಂಡಿದ್ದು ದೇವಳದ ಪವಿತ್ರಪಾಣಿ ಕೆ.ಎಲ್.ಕುಂಡಂತಾಯ ಮತ್ತು ಎಲ್ಲೂರುಗುತ್ತು ಪ್ರಪುಲ್ಲ ಶೆಟ್ಟಿ ಅವರು ಉದ್ಘಾಟಿಸಿದರು. ಪಂ.ಸದಸ್ಯ ವೈ.ರವಿರಾಜ್, ವಿಶ್ವೇಶ್ವರ ಭಜನಾ ಮಂಡಳಿಯ ಹಿರಿಯ ಸದಸ್ಯರಾದ ವೈ.ಸೀತಾರಾಮ ರಾವ್ ಹಾಗೂ ರಾಮಚಂದ್ರ ರಾವ್ , ನರಸಿಂಹ ಜೆನ್ನಿ , ಯುವಕ ಮಂಡಲದ ಅಧ್ಯಕ್ಷ ನಾಗೇಶ ಕೊಡಂಗೆ ಹಾಗೂ ಸದಸ್ಯರು ಭಾಗವಹಿಸಿದ್ದರು. ಪರಿಸರದ ಭಜನಾ ಮಂಡಳಿಗಳು ನಿರಂತರ ಭಜನೆಯಲ್ಲಿ ಪಾಲ್ಗೊಂಡವು.
