Updated News From Kaup

ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಮುಲ್ಕಾಡಿ : 29 ನೇ ವಾರ್ಷಿಕ ಭಜನಾ ಮಂಗಲೋತ್ಸವ

Thumbnail
Posted On: 03 Apr 2021, 01:13 PM

ಕಾಪು : ಮುಲ್ಕಾಡಿ ಕೋಡಿ ಪಂಜಿಮಾರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ 29 ನೇ ವಾರ್ಷಿಕ ಭಜನಾ ಮಂಗಲೋತ್ಸವವು ಏಪ್ರಿಲ್ 3, ಶನಿವಾರ ಸಂಜೆ 4ರಿಂದ ರಾತ್ರಿ 8:30 ರವರೆಗೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ : ಫುಡ್ ಕೋರ್ಟ್, ಕಾಯಕಿಂಗ್, ಬೋಟಿಂಗ್ ವ್ಯವಸ್ಥೆಗಳ ಉದ್ಘಾಟನೆ

Thumbnail
Posted On: 02 Apr 2021, 07:52 PM

ಕಾಪು : ಉಡುಪಿ ಜಿಲ್ಲೆಯ ಜನಾಕರ್ಷಣೆಯ ತಾಣ ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್‌ಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಭೇಟಿ ನೀಡಿ ಫುಡ್ ಕೋರ್ಟ್, ಪ್ರವಾಸೀ ಆಕರ್ಷಣೆಗಾಗಿ ಆರಂಭಿಸಲಾದ ಕಾಯಕಿಂಗ್, ಬೋಟಿಂಗ್ ವ್ಯವಸ್ಥೆಗಳನ್ನು ಉದ್ಘಾಟಿಸಿ, ಕಾಮಿನೀ ಹೊಳೆಯಲ್ಲಿ ಕಾಯಕಿಂಗ್ ಅನುಭವವನ್ನು ಆನಂದಿಸಿದರು. ಈ ಸಂದರ್ಭ ಮಾತನಾಡಿದ ಅವರು ಬ್ಲೂ ಫ್ಲ್ಯಾಗ್ ಬೀಚ್‌ನಲ್ಲಿ ರಾಜ್ಯ ಸರಕಾರದ ಅನುದಾನದೊಂದಿಗೆ ತೇಲುವ ರೆಸ್ಟೋರೆಂಟ್ ಪ್ರಾರಂಭ, ಈಗಿನ ೪೯ ಮಂದಿ ಸಿಬ್ಬಂದಿ ವರ್ಗವನ್ನು ಉಳಿಸಿಕೊಂಡು ಮುಂದಿನ ಎರಡು ವರ್ಷಗಳಲ್ಲಿ ೧೦೦ ಮಂದಿಗೆ ಉದ್ಯೋಗ ಸೃಷ್ಟಿ ಯೋಜನೆ, ಹೆಚ್ಚಿನ ಪ್ರವಾಸೀ ಆಕರ್ಷಣೆ ಹಾಗೂ ತೂಗು ಸೇತುವೆ ನಿರ್ಮಾಣದ ಮೂಲಕ ಅಭಿವೃದ್ಧಿಗಳಿಗೆ ಆದ್ಯತೆಯನ್ನು ನೀಡಲಾಗುತ್ತಿದೆ. ಇದೀಗ ಮೂರು ಕಾಯಕಿಂಗ್ ಬೋಟ್‌ಗಳಿದ್ದು ಇನ್ನೂ ಮೂರನ್ನು ಶೀಘ್ರದಲ್ಲೇ ಸೇರ್ಪಡೆಗೊಳಿಸಲಾಗುವುದು. ಕಾಯಕಿಂಗ್‌ಗೆ ಅರ್ಧ ಗಂಟೆಗೆ ೧೦೦ರೂ. ದರ ಹಾಗೂ ಬೋಟಿಂಗ್‌ಗೆ ಪ್ರತೀ ಪ್ರವಾಸಿಗರಿಗೆ ೫೦ರೂ. ದರ ನಿಗದಿಪಡಿಸಲಾಗಿದೆ ಎಂದೂ ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾಧಿಕಾರಿಗಳೊಂದಿಗೆ ಪ್ರವಾಸೋದ್ಯಮ ಇಲಾಖಾ ಉಪ ನಿರ್ದೇಶಕ ಸೋಮಶೇಖರ್, ಬ್ಲೂ ಫ್ಲ್ಯಾಗ್ ಬೀಚ್ ನೋಡೆಲ್ ಅಧಿಕಾರಿ ಚಂದ್ರಶೇಖರ್ ನಾಯಕ್, ಮೀನುಗಾರಿಕಾ ಇಲಾಖಾ ಉಪ ನಿರ್ದೇಶಕ ಗಣೇಶ್, ಜಿ. ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ, ಉಡುಪಿ ತಾ. ಪಂ. ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಮನೋಹರ ಶೆಟ್ಟಿ ಕಾಪು ಹಾಗೂ ಕಾರ್ಯದರ್ಶಿ ಗೌರವ್ ಶೇಣವ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಯಶೋದ ಮತ್ತಿತರು ಉಪಸ್ಥಿತರಿದ್ದರು.

ಏಪ್ರಿಲ್ 3 : ಇನ್ನಂಜೆಯ ವಿಠೋಭ ಭಜನಾ ಮಂಡಳಿ ವಾರ್ಷಿಕ ವರ್ಧಂತ್ಯೋತ್ಸವ, ಆಶ್ಲೇಷಾ ಬಲಿ, ಭಜನಾ ಮಂಗಳೋತ್ಸವ

Thumbnail
Posted On: 02 Apr 2021, 05:36 PM

ಕಾಪು : ಇನ್ನಂಜೆ ಗೋಳಿಕಟ್ಟೆಯ ಶ್ರೀ ವಿಠೋಭ ಭಜನಾ ಮಂಡಳಿ (ರಿ.) ಇದರ ವಾರ್ಷಿಕ ವರ್ಧಂತ್ಯೋತ್ಸವ, ಆಶ್ಲೇಷಾ ಬಲಿ, ಭಜನಾ ಮಂಗಳೋತ್ಸವ ಮತ್ತು ಅನ್ನಸಂತರ್ಪಣೆಯು ಏಪ್ರಿಲ್ 3, ಶನಿವಾರ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತರಾದ ಸೆನ್ ಅಪರಾಧ ಪೋಲಿಸ್ ಠಾಣೆ ಉಡುಪಿಯ ರಾಮಚಂದ್ರ ನಾಯಕ್

Thumbnail
Posted On: 02 Apr 2021, 04:43 PM

ಕಾಪು : ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಸೆನ್ ಅಪರಾಧ ಪೊಲೀಸ್ ಠಾಣೆ ಉಡುಪಿಯ ಪೊಲೀಸ್ ನಿರೀಕ್ಷಕರಾಗಿರುವ ರಾಮಚಂದ್ರ ನಾಯಕ್ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತರಾಗಿದ್ದಾರೆ. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ಹಲವಾರು ಅಪರಾಧ ಕೃತ್ಯಗಳನ್ನು ಭೇದಿಸಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಿದ ಹೆಗ್ಗಳಿಕೆ ಇವರದು. ಬ್ರಹ್ಮಾವರ ತಾಲೂಕಿನ ಬಾರಕೂರಿನ ನಿವಾಸಿಯಾಗಿರುವ ಇವರು 1993 ಕೆಲಸಕ್ಕೆ ಸೇರಿ, 2003ರಲ್ಲಿ ಪೊಲೀಸ್ ಉಪ ನಿರೀಕ್ಷಕರಾಗಿ, 2011ರಲ್ಲಿ ಪೊಲೀಸ್ ನಿರೀಕ್ಷಕರಾಗಿ ಶಿವಮೊಗ್ಗ, ಮೂಡಬಿದ್ರೆ, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಮತ್ತು ಕಾರವಾರ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಾರೆ.

ಪಡುಬಿದ್ರಿ : ಕೊರೊನಾ ತಡೆಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮ

Thumbnail
Posted On: 02 Apr 2021, 03:49 PM

ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ, ಗ್ರಾಮ ಪಂಚಾಯತ್ ಪಡುಬಿದ್ರಿ, ನವಶಕ್ತಿ ಮಹಿಳಾ ಮಂಡಳಿ ಮತ್ತು ಭಜನಾ ಮಂಡಳಿ ಪಡುಬಿದ್ರಿ, ನವಶಕ್ತಿ ವಿಮೆನ್ಸ್ ವೆಲ್ಫೇರ್ ಸೊಸೈಟಿ (ರಿ.) ಪಡುಬಿದ್ರಿ ಸಂಯುಕ್ತ ಆಶ್ರಯದಲ್ಲಿ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಏಪ್ರಿಲ್ 5, ಸೋಮವಾರ ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ 9.30 ರಿಂದ ಮಧ್ಯಾಹ್ನ 1ರವರೆಗೆ ಕೊರೊನಾ ತಡೆಗೆ ಲಸಿಕೆಯೇ ಶ್ರೀರಕ್ಷೆ ಅಭಿಯಾನದನ್ವಯ ಉಚಿತ ಲಸಿಕೆ ನೀಡುವ ಕಾರ್ಯಕ್ರಮ ಜರಗಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು, ಆಸಕ್ತರು ಬರುವಾಗ ಕಡ್ಡಾಯವಾಗಿ ಆಧಾರ್ ಕಾಡ್೯ ತರಬೇಕು ಹಾಗೂ ಮೊಬೈಲ್ ನಂಬರ್ ನೀಡಬೇಕು, 28 ದಿನಗಳ ಬಳಿಕ ಎರಡನೆಯ ಹಂತದ ಲಸಿಕೆಯನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು : ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏಪ್ರಿಲ್ 4 ರಂದು ಬಲೆ ತುಲು ಲಿಪಿ ಕಲ್ಪುಗ ಶಿಬಿರ

Thumbnail
Posted On: 02 Apr 2021, 03:28 PM

ಕಾಪು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ (ರಿ.), ಜೇಸಿಐ ಕಾಪು, ಯುವವಾಹಿನಿ (ರಿ.) ಕಾಪು ಘಟಕ, ನಮ್ಮ ಕಾಪು ನ್ಯೂಸ್ ಸಂಯುಕ್ತ ಆಶ್ರಯದಲ್ಲಿ ಉಚಿತವಾಗಿ ಬಲೆ ತುಲು ಲಿಪಿ ಕಲ್ಪುಗ ಶಿಬಿರವು ಏಪ್ರಿಲ್ 4, ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಕಾಪು ಸಿ.ಎ ಬ್ಯಾಂಕ್ ಕನ್ನಡ ಭಾಸ್ಕರ ಸೌಧ ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮವನ್ನು ಕಾಪು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ಕಾಪು ಇದರ ಅಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ಆಕಾಶ್ ರಾಜ್ ಜೈನ್ ಮತ್ತು ತಾರಾ ಉಮೇಶ್ ಆಚಾರ್ಯ, ಜೇಸಿಐ ವಲಯ 15ರ ಉಪಾಧ್ಯಕ್ಷರಾದ ಜೇಸಿ ಗಿರೀಶ್ ಎಸ್. ಪಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಉಪಾಧ್ಯಕ್ಷರಾದ ಉದಯ ಅಮೀನ್ ಮಟ್ಟು ಭಾಗವಹಿಸಲಿದ್ದಾರೆ. ತುಳು ಶಿಕ್ಷಕರಾದ ರಾಜೇಶ್ ತುಳುವೆ, ಅಕ್ಷತಾ ಕುಲಾಲ್, ಪೂರ್ಣಿಮಾ ದಕ್ಷ, ನೀತಾ ಕೆಮ್ತೂರು ಮಾರ್ಗದರ್ಶನದಲ್ಲಿ ಏಪ್ರಿಲ್ ತಿಂಗಳ ಪ್ರತಿ ಆದಿತ್ಯವಾರದಂದು ಮಧ್ಯಾಹ್ನ 2.30 ರಿಂದ ಸಂಜೆ 5ರವರೆಗೆ ತರಗತಿಗಳು ನಡೆಯಲಿದ್ದು, ವಾರದ ನಿರ್ಧಿಷ್ಟ ದಿನಗಳಲ್ಲಿ ಆನ್ಲೈನ್ ಮೂಲಕ ಪುನರಾವಲೋಕನ ನಡೆಯಲಿದೆ. ಶಿಬಿರದಲ್ಲಿ ಪಾಲ್ಗೊಂಡು ತೇರ್ಗಡೆಯಾದವರಿಗೆ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸರ್ಟಿಫಿಕೆಟ್ ನೀಡಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9448501172

ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಟೋಲ್ ಗೇಟ್ ನಿರ್ಮಾಣ ಮಾಡಲು ವಾಹನಗಳ ಗುಪ್ತ ಸರ್ವೆ : ಸಾರ್ವಜನಿಕರಿಂದ ಆಕ್ರೋಶ

Thumbnail
Posted On: 02 Apr 2021, 12:43 PM

ಕಾಪು : ಪಡುಬಿದ್ರಿ ಸಮೀಪದ ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕ ಸಮೀಪ ಟೋಲ್ ಗೇಟ್ ನಿರ್ಮಾಣ ಮಾಡಲು ವಾಹನಗಳ ಸರ್ವೆ ಮಾಡುತ್ತಿದ್ದ ತಂಡವೊಂದನ್ನು ಸಾರ್ವಜನಿಕರು ತಡೆದ ಘಟನೆ ನಡೆದಿದೆ. ಗುಪ್ತವಾಗಿ ವಾಹನಗಳ ಸರ್ವೆ ನಡೆಸುತ್ತಿದ್ದ ತಂಡದ ಬಗ್ಗೆ ಸಂಶಯಗೊಂಡ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ಅವರನ್ನು ವಿಚಾರಿಸಿದಾಗ ಸತ್ಯ ವಿಚಾರ ಬಾಯ್ಬಿಟ್ಟಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪಡುಬಿದ್ರಿ ಪೊಲೀಸರು ತಂಡವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ರಾಜ್ಯ ಹೆದ್ದಾರಿಯ ಟೋಲ್ಗೇಟ್ ನಿರ್ಮಾಣದ ಬಗ್ಗೆ ಮತ್ತು ಗುಪ್ತವಾಗಿ ಸರ್ವೆ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿವರ್ಷವೂ ಕೋಮು ಸೌಹಾರ್ದತೆಗೆ ಸಾಕ್ಷಿಯಾಗುತ್ತಿರುವ ಉದ್ಯಾವರ ಸಂಪಿಗೆ ನಗರದ‌ ಉರೂಸ್ ಮುಬಾರಕ್

Thumbnail
Posted On: 02 Apr 2021, 12:23 PM

ಕಾಪು : ಸರ್ವ ಧರ್ಮ ಭಾವೈಕ್ಯತೆಗೆ ಸಾಕ್ಷಿಯಾದ ಇತಿಹಾಸ ಪ್ರಸಿದ್ಧ ಸೂಫಿ ಶಹೀದ್ ಹಝ್ರತ್ ಫಖ್ರು ಶಹೀದ್ ವಲೀಯುಲ್ಲಾಹೀ ದರ್ಗಾ ಶರೀಫ್ ಉದ್ಯಾವರ ಸಂಪಿಗೆ ನಗರದ ಉರೂಸ್ ಮುಬಾರಕ್ ಏಪ್ರಿಲ್ 3 ಮತ್ತು 4 ರಂದು ಡಾ| ಖಾಝಿ ರಫಿಲ್ ಸಾಹೇಬ್ ಹಾಗೂ ಮುಕ್ತರ್ ಅಹಮ್ಮದ್ ಸಾಹೇಬ್, ಅಧ್ಯಕ್ಷರು ದರ್ಗಾ ಕಮಿಟಿ, ಸಂಪಿಗೆ ನಗರ ಉದ್ಯಾವರ ಇವರ ನೇತೃತ್ವದಲ್ಲಿ ನಡೆಯಲಿದೆ. ಏಪ್ರಿಲ್ 3, ಶನಿವಾರ ಮಧ್ಯಾಹ್ನ 2ಕ್ಕೆ ಬೃಹತ್ ಝಿಕ್ರ್ ಮಜ್ಲೀಸ್, ಸಂಜೆ 3ಕ್ಕೆ ಸಂದಲ್, ಮಗ್ರಿಬ್ ನಮಾಜಿನ ನಂತರ ಫಕ್ರೆ ಆಲಂ ರಝ್ವಿ ಮುಂಬಾಯಿ ಇವರಿಂದ (ನಾಥೇ ಶರೀಫ್) ಮಹ್ಯುದ್ದೀನ್ ಕಾಮಿಲ್ ಸಖಾಫಿ ತೋಕೆ, ದಾರುಲ್ ಮುಸ್ತಫ ಮೋರಲ್ ಅಕಾಡಮಿ ನಚ್ಚಬೆಟ್ಟು ಇವರಿಂದ ಪ್ರವಚನ ಅಲ್ ಹಾಜಿ ಸೆಲೀಂ ಮದನಿ ದಾರುಲ್ ಅಮಾನ್ ಎಲ್ಲೂರು ದುವಾ ಮಾಡಲಿದ್ದಾರೆ. ಏಪ್ರಿಲ್ 4, ಆದಿತ್ಯವಾರ ಬೆಳಿಗ್ಗೆ 10ಕ್ಕೆ ಮಜ್ಲೀಸ್ ಮೌಲೂದ್, ಮಧ್ಯಾಹ್ನ 12 ರಿಂದ ಸಂಜೆ 3ರವರೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಪ್ರತಿ ವರ್ಷವು ಆರ್ ಜೆ ಎರೋಲ್ ಕುಟುಂಬಸ್ಥರಿಗೆ ಸೇರಿದ ಜಾಗದಲ್ಲಿ ಈ ಸೇವೆಯು ನಡೆಯುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಖಾಸಗಿ ಬಸ್ಸಿನಲ್ಲಿ ಅನ್ಯಕೋಮಿನ ಜೋಡಿ‌ ಪತ್ತೆ ಪೋಲಿಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು

Thumbnail
Posted On: 02 Apr 2021, 11:13 AM

ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕ ಯುವತಿಯನ್ನು ಸುರತ್ಕಲ್ ಬಳಿ ಬಜರಂಗದಳದ ಕಾರ್ಯಕರ್ತರು ಪೋಲಿಸರಿಗೆ ಒಪ್ಪಿಸಿದ ಘಟನೆ ನಿನ್ನೆ‌ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಈ ಜೋಡಿಯನ್ನು ಪೋಲಿಸರಿಗೆ ಒಪ್ಪಿಸಿ ಮಾತನಾಡಿದ ಬಜರಂಗದಳ ಪ್ರಮುಖರು ಲವ್ ಜಿಹಾದ್ ನಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಾದರೆ ನೇರವಾಗಿ ಕಾರ್ಯಾಚರಣೆಗೆ ಇಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಭಕ್ತಾದಿಗಳಿಗೆ ನಿತ್ಯ - ನಿರಂತರವಾಗಿ ಶಿಲಾಸೇವೆ ನೀಡಲು ಅವಕಾಶ

Thumbnail
Posted On: 01 Apr 2021, 03:34 PM

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಉಪ ಸಮಿತಿಯಾದ ಆರ್ಥಿಕ ಸಮಿತಿಯಲ್ಲಿ 9 ತಂಡಗಳಿದ್ದು ಒಂಬತ್ತು ತಂಡಗಳಲ್ಲಿ ಒಂದಾದ ಶೈಲಪುತ್ರಿ ತಂಡವು ಇಂದಿನಿಂದ ಒಂದು ವಾರದವರೆಗೆ ಕಾರ್ಯಚರಿಸಲಿದ್ದು ಶಿಲಾಸೇವಾ ಕೌಂಟರ್ ಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಶ್ರೀ ರಮೇಶ್ ಹೆಗ್ಡೆ ಕಲ್ಯಾ ಹಾಗೂ ಶೈಲಪುತ್ರಿ ತಂಡದ ಮುಖ್ಯ ಸಂಚಾಲಕರಾದ ಶ್ರೀ ವಿದ್ಯಾಧರ ಪುರಾಣಿಕ್ ಉಪಸ್ಥಿತರಿದ್ದರು. ಇಂದಿನಿಂದ ಶಿಲಾಸೇವಾ ಕೌಂಟರ್ ನಲ್ಲಿ ಕಾರ್ಯ ನಿರ್ವಹಿಸಲಿರುವ ತಂಡಗಳ ವಿವರ ಇಂತಿದೆ (ಸಮಯ ಪೂರ್ವಾಹ್ನ ಗಂಟೆ 09:00 ರಿಂದ ಅಪರಾಹ್ನ ಗಂಟೆ 07:00ರ ವರೆಗೆ) 01-04-2021 : 06-04-2021 ಶೈಲಪುತ್ರಿ 07-04-2021 : 13-04-2021 ಬ್ರಹ್ಮಚಾರಿಣಿ 14-04-2021 : 20-04-2021 ಚಂದ್ರಘಂಟಾ 21-04-2021 : 27-04-2021 ಕುಷ್ಮಾಂಡ 28-04-2021 : 04-05-2021 ಸ್ಕಂದಮಾತಾ 05-05-2021 : 11-05-2021 ಕತ್ಯಾಯಿನಿ 12-05-2021 : 18-05-2021 ಕಾಲರಾತ್ರಿ 19-05-2021 : 25-05-2021 ಮಹಾಗೌರಿ 26-05-2021 : 01-06-2021 ಸಿದ್ದಿದಾತ್ರಿ ಪ್ರತಿ ದಿನವೂ ಭಕ್ತರಿಗಾಗಿ ಆರ್ಥಿಕ ಸಮಿತಿಯ ಸೇವಾ ಕೌಂಟರ್ ತೆರೆದಿರುವುದರಿಂದ ಭಕ್ತರು ನಿತ್ಯ ನಿರಂತರವಾಗಿ ಶಿಲಾ ಸೇವೆಯನ್ನು ನೀಡಲು ಕ್ಷೇತ್ರಕ್ಕೆ ಬರಬಹುದು ದೇವಳದ ಅಭಿವೃದ್ಧಿ ಕಾರ್ಯದ ಆರ್ಥಿಕ ಕ್ರೋಡಿಕರಣಕ್ಕೆ ವಾರಕ್ಕೊಂದು ತಂಡವು ದೇವಸ್ಥಾನದ ಮುಂಭಾಗದಲ್ಲಿರುವ ಕೌಂಟರ್ ನಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ವಾಸುದೇವ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.