Updated News From Kaup
2020ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಪು ತಾಲೂಕಿನ ಸಾಧಕರು

Posted On: 30-10-2020 08:04PM
2020 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ಕಾಪು ತಾಲೂಕಿನಲ್ಲಿ ರಂಗಭೂಮಿ ಕ್ಷೇತ್ರದಲ್ಲಿ ಶ್ರೀ ದಿನಕರ ಭಂಡಾರಿ ಕಣಜಾರು, ಸಾಹಿತ್ಯ ಕ್ಷೇತ್ರದಲ್ಲಿ ನವೀನ್ ಸುವರ್ಣ ಪಡ್ರೆ, ನೃತ್ಯ ಕ್ಷೇತ್ರದಲ್ಲಿ ಶ್ರೀಮತಿ ಮಂಗಳ ಕಿಶೋರ್ ದೇವಾಡಿಗ ಉಚ್ಚಿಲ, ಕ್ರೀಡಾ ಕ್ಷೇತ್ರದಲ್ಲಿ ಶರತ್ ಶೆಟ್ಟಿ ಪಡುಬಿದ್ರಿ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಇದನ್ನು ನವೆಂಬರ್ ಒಂದು ಕನ್ನಡ ರಾಜ್ಯೋತ್ಸವದಂದು ಉಡುಪಿಯಲ್ಲಿ ನಡೆಯುವ ಸಮಾರಂಭದಲ್ಲಿ ನೀಡಲಾಗುವುದು.
ಕಾಪು ಪುರಸಭೆಯ ನೂತನ ಅಧ್ಯಕ್ಷರಿಗೆ ಜೆಸಿ ವತಿಯಿಂದ ಗೌರವಾಪ೯ಣೆ

Posted On: 30-10-2020 07:55PM
ಕಾಪು:- ಕಾಪು ಜೇಸಿಐ ನ ಪೂವ೯ ಅಧ್ಯಕ್ಷ ಹಾಗೂ ಪೂವ೯ ವಲಯಾಧಿಕಾರಿ ಯಾಗಿ ಉತ್ತಮ ಸೇವೆ ಸಲ್ಲಿಸಿದ ಕಾಪು ಪುರಸಭೆಯ ನೂತನ ಅಧ್ಯಕ್ಷ ಅನಿಲ್ ಕುಮಾರ್ ರವರನ್ನು ಜೇಸಿ ವತಿಯಿಂದ ಅ.30 ರಂದು ಶುಕ್ರವಾರ ಸನ್ಮಾನಿಸಲಾಯಿತು.
ಈ ಸಂದಭ೯ದಲ್ಲಿ ಮಾತನಾಡಿದ ಪೂವ೯ ರಾಷ್ಟ್ರೀಯ ಉಪಾಧ್ಯಕ್ಷ ಸದಾನಂದ ನಾವಡ, ಜೇಸಿಯಲ್ಲಿ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ಇವರು ಮಾದರಿ ಅಧ್ಯಕ್ಷರಾಗಿ ಮೂಡಿ ಬರಲಿ ಎಂದು ಶುಭ ಹಾರೈಸಿದರು.
ಈ ಸಂದಭ೯ದಲ್ಲಿ ಪುರಸಭಾ ಅಧ್ಯಕ್ಷರು ಕೃತಜ್ಞತೆ ವ್ಯಕ್ತಪಡಿಸಿದರು.ಈ ಸಂದಭ೯ದಲ್ಲಿ ರಾಷ್ಟ್ರೀಯ ಕಾಯ೯ನಿವಾ೯ಹಕ ಉಪಾಧ್ಯಕ್ಷ ಸಂದೀಪ್ ಕುಮಾರ್, ಪೂವ೯ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರು, ಸಂತೋಷ್ ಜಿ, ಪೂವ೯ ವಲಯಾಧಿಕಾರಿಗಳಾದ ಸುಹಾನ್ ಸಾಸ್ತಾನ, ಸತೀಶ್ ಪೂಜಾರಿ, ಸೌಮ್ಯ ರಾಕೇಶ್, ಸುಧಾಕರ್ ಕಾಕ೯ಳ,ರಾಘವೇಂದ್ರ ಪ್ರಭು,ಕವಾ೯ಲು, ಆಡಳಿತ ವಿಭಾಗದ ನಿದೇ೯ಶಕ ರಾಯನ್ ಕ್ರಾಸ್ತಾ ಮುಂತಾದವರಿದ್ದರು
ಹುಟ್ಟು ಹಬ್ಬದಂದು ಬಂಟಕಲ್ಲ್ ಲಯನ್ಸ್ ಅಧ್ಯಕ್ಷರಾದ ವಿಜಯ್ ಧೀರಜ್ ರಿಂದ ಶ್ಲಾಘನೀಯ ಕಾರ್ಯ

Posted On: 30-10-2020 07:45PM
ಸಮಾಜಸೇವೆಯ ಬಗ್ಗೆ ಆಸಕ್ತಿಯಿದ್ದು ಈಗಾಗಲೇ ಹಲವಾರು ಸಮಾಜಮುಖಿ ಸೇವೆಗಳನ್ನು ಮಾಡಿರುವ ಬಂಟಕಲ್ಲ್ ಲಯನ್ಸ್ ಕ್ಲಬ್ ಅಧ್ಯಕ್ಷರಾದ ವಿಜಯ್ ಧೀರಜ್ ಬಂಟಕಲ್ಲ್ ಇಂದು ತಮ್ಮ ಹುಟ್ಟು ಹಬ್ಬದ ಅಂಗವಾಗಿ ಜೀವ ನಿಧಿ ಸಂಘಟನೆಯೊಂದಿಗೆ MY BIRTHDAY BLOOD DONATION ಎಂಬ ಪೋಸ್ಟರ್ ಅನ್ನು ಬಿಡುಗಡೆ ಮಾಡುವುದರೊಂದಿಗೆ ಪ್ರತಿಯೊಬ್ಬರೂ ನಿಮ್ಮ ಜನ್ಮದಿನದ ಸಂದರ್ಭದಲ್ಲಿ ದಯವಿಟ್ಟು ರಕ್ತದಾನ ಮಾಡಿ ಮತ್ತು ನೀವು 3 ಜನರಿಗೆ ಜೀವ ನೀಡುವ ಮೂಲಕ ಅದನ್ನು ಆಚರಿಸಿ ಎಂದು ವಿನಂತಿಸಿದ್ದಾರೆ.

ಇದಲ್ಲದೆ ತೀರಾ ಬಡ ಕುಟುಂಬದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳ ಒಂದು ವರ್ಷದ ಸಂಪೂರ್ಣ ಶಾಲೆಯ ಖರ್ಚು ವೆಚ್ಚದ ಜವಾಬ್ಧಾರಿ ತೆಗೆದುಕೊಂಡು ಅವರಿಗೆ ಈಗಾಗಲೇ 20 ಸಾವಿರದ ಚೆಕ್ ಹಸ್ತಾಂತರಿಸಿರುತ್ತಾರೆ. ಇವರ ಈ ಕಾರ್ಯಕ್ಕೆ ಸರ್ವರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.
ಪ್ರಾಮಾಣಿಕತೆ ಮೆರೆದ ಕಾಪು ಪುರಸಭೆಯ ಪೌರ ಕಾರ್ಮಿಕರು

Posted On: 30-10-2020 01:21PM
ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು ಕೊಪ್ಪಲಂಗಡಿ ಅನಸೂಯ ಎನ್ ಕ್ಲೇವ್ ನಲ್ಲಿ ಕಸದ ಜತೆ ಕಳೆದು ಹೋಗಿರುವ 16 ಗ್ರಾಂ ತೂಕದ ಚಿನ್ನದ ಬ್ರಾಸ್ ಲೆಟ್ ನ್ನು ಅದರ ವಾರಸುದಾರರಿಗೆ ವಾಪಾಸು ನೀಡುವ ಮೂಲಕ ಕಾಪು ಪುರಸಭಾ ಕಾರ್ಮಿಕರು ಪ್ರಾಮಾಣಿಕತೆ ಮೆರೆದಿದ್ದಾರೆ. ವಾರಸುದಾರರು ನಗದು ಪುರಸ್ಕಾರ ನೀಡಿ ಗೌರವಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು.
25ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ವಿಕ್ರಂ ಕಾಪು ಮತ್ತು ಸುಜಯ ವಿಕ್ರಂ ದಂಪತಿ

Posted On: 29-10-2020 11:34PM
ಪ್ರೀತಿಯ ಮಧುರತೆಗೆ ಮದುವೆಯೆಂಬ ಬೆಸುಗೆಯು ಕೂಡಿ ಸುಂದರ ಸಂಸಾರಕ್ಕೆ ದೀವಿಗೆಯ ಜೋಡಿಯಾದ ವಿಕ್ರಂ ಕಾಪು ಮತ್ತು ಸುಜಯ ವಿಕ್ರಂರವರಿಗೆ ಸಂತಸದ ಸಂಭ್ರಮ ಅದುವೇ ಮದುವೆ ವಾರ್ಷಿಕೋತ್ಸವವ ನೆನಪಿಸುವ ದಿನ. ಕಾಪು ಬಿಲ್ಲವ ಸಂಘದ ಅಧ್ಯಕ್ಷರಾಗಿ, ಜನಾನುರಾಗಿಯಾಗಿರುವ ವಿಕ್ರಂ ಕಾಪು ಅವರಿಗೆ ಸಹಧರ್ಮಿಣಿಯಾಗಿ ಸುಜಯ ವಿಕ್ರಂರವರ ಸಂಪೂರ್ಣ ಸಹಕಾರವಿದೆ. ಇವರ ಮದುವೆಯ 25ನೇ ವಾರ್ಷಿಕೋತ್ಸವವನ್ನು ಆಚರಿಸಲಿದ್ದಾರೆ.
ಕೋವಿಡ್ ಲಸಿಕೆ ನೀಡಲು ಡೇಟಾ ಬೇಸ್ ಸಿದ್ದಪಡಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

Posted On: 29-10-2020 06:50PM
ಉಡುಪಿ : ಕೋವಿಡ್19 ಗೆ ಲಸಿಕೆ ತಯಾರಿಕೆಯು ಅಂತಿಮ ಹಂತದಲ್ಲಿದ್ದು, ಕೇಂದ್ರ ಸರ್ಕಾರದ ನಿರ್ದೇಶನದಂತೆ, ಲಸಿಕೆಯನ್ನು ಪ್ರಾಥಮಿಕ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು, ಮತ್ತು ಸಹಾಯಕ ಸಿಬ್ಬಂದಿಗಳಿಗೆ ನೀಡಬೇಕಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳ ಮಾಹಿತಿಯ ಡೇಟಾಬೇಸ್ ನ್ನು ಶೀಘ್ರದಲ್ಲಿ ಸಿದ್ದಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ , ಕೋವಿಡ್ ಲಸಿಕಾ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್19 ಲಸಿಕೆ ನೀಡಲು ಜಿಲ್ಲೆಯಲ್ಲಿ ಕೆಪಿಎಂಇ ಕಾಯ್ದೆಯಡಿ ನೊಂದಣಿಯಾಗಿ ವೈದ್ಯಕೀಯ ಸೇವೆ ಒದಗಿಸುತ್ತಿರುವ 982 ಖಾಸಗಿ ಸಂಸ್ಥೆಗಳು ಹಾಗೂ 92 ಸರಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ, ವೈದ್ಯರು, ಶುಶ್ರೂಶಕರು, ಲ್ಯಾಬ್ ಟೆಕ್ನೀಷಿಯನ್ ಗಳು, ಸಹಾಯಕ ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರ ವಿವರಗಳನ್ನು ಸಮಗ್ರವಾಗಿ ದಾಖಲಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ನಂತರದ ಹಂತದಲ್ಲಿ ವೃದ್ದರು ಮತ್ತು ದುರ್ಬಲ ವ್ಯಕ್ತಿಗಳಿಗೆ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಮಕ್ಕಳಿಗೆ ನೀಡುವ ನಿಗಧಿತ ಲಸಿಕೆಗಳನ್ನು ಯಾವುದೇ ಕಾರಣಕ್ಕೂ ತಪ್ಪಿಸದಂತೆ ಸೂಚಿಸಿದ ಜಿಲ್ಲಾಧಿಕಾರಿ ನಿರಂತರವಾಗಿ ಕಾಯಕ್ರಮಗಳನ್ನು ಆಯೋಜಿಸಿ ಲಸಿಕೆ ನೀಡಿ, ಲಾಕ್ಡೌನ್ ಸಮಯದಲ್ಲಿ ಕುಂಠಿತಗೊAಡಿರುವ ಗುರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು. ಹೆರಿಗೆ ವೇಳೆ ತಾಯಿ ಮರಣವನ್ನು ತಪ್ಪಿಸಲು ಎಲ್ಲಾ ರೀತಿಯ ಗರಿಷ್ಠ ಪ್ರಯತ್ನ ಮಾಡಿ, ಗರ್ಭಿಣಿಯರಿಗೆ ಹೆರಿಗೆ ವೇಳೆ ಸಮಸ್ಯೆ ಕಂಡು ಬರುವ ಸಾಧ್ಯತೆಯಿದ್ದಲ್ಲಿ ಅವರ ಚಿಕಿತ್ಸೆಗೆ ಮುಂಚಿತವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್ -19 ಪ್ರಮಾಣ ಕಡಿಮೆಯಾಗುತ್ತಿದ್ದು, ಸಾವುಗಳು ಸಹ ಕಡಿಮೆಯಾಗಿವೆ, ಸಾರ್ವಜನಿಕರು , ಕೋವಿಡ್ ಸಂಪೂರ್ಣವಾಗಿ ನಾಶವಾಗುವವರೆಗೆ ಸಾಮಾಜಿಕ ಅಂತರ ಪಾಲನೆ ಮತ್ತು ಮಾಸ್ಕ್ ಧರಿಸುವುದನ್ನು ನಿತ್ಯದ ರೂಡಿಯನ್ನಾಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಡಿಹೆಚ್ಓ ಡಾ. ಸುಧೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಆರೋಗ್ಯ ಇಲಾಖೆಯ ಅಧಿಕಾರಿಗಳು , ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ.ರಾಮ ಸ್ವಾಗತಿಸಿ, ವಂದಿಸಿದರು.
ಕಾಪು ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Posted On: 29-10-2020 11:07AM
23 ಸದಸ್ಯ ಬಲ ಹೊಂದಿರುವ ಕಾಪು ಪುರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅನಿಲ್ ಕುಮಾರ್ ಹಾಗೂ ಕಾಂಗ್ರೆಸ್ ಬೆಂಬಲಿತ ಮಾಲಿನಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಪುರಸಭಾ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಕ್ಕೆ ಒತ್ತು ನೀಡುವಲ್ಲಿ ಶ್ರಮಿಸುವುದಾಗಿ ನೂತನ ಅಧ್ಯಕ್ಷರಾದ ಅನಿಲ್ ಕುಮಾರ್ ತಿಳಿಸಿದ್ದಾರೆ.
ಕಾಪುವಿನಲ್ಲಿ ಶಾಸಕರಿಂದ ವಿದ್ಯುತ್ಚಾಲಿತ ಸೈಕಲ್ ಶೋರೂಮ್ ಉದ್ಘಾಟನೆ

Posted On: 29-10-2020 10:36AM
ಕಾಪು ತಾಲೂಕು ಕಚೇರಿ ಹತ್ತಿರದ ಪೊಲಿಪು ಮೀನುಗಾರರ ಸಹಕಾರಿ ಸಂಘ ಕಟ್ಟಡದಲ್ಲಿರುವ ಎಸ್ಸೆಲ್ ಎನರ್ಜಿ ಮುದ್ರೆಯ ಎಲೆಕ್ಟ್ರಿಕಲ್ ಸೈಕಲ್ ಶೋರೂಮ್ ವಿಘ್ನೇಶ್ವರ ಎಂಟರ್ಪ್ರೈಸಸ್ ನ್ನು ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್ ಉದ್ಘಾಟಿಸಿ ಸಂಸ್ಥೆಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಗಂಗಾಧರ ಸುವರ್ಣ, ಲೀಲಾಧರ್ ಶೆಟ್ಟಿ, ಕೇಶವ ಜಿ ಮೆಂಡನ್, ಕೃಷ್ಣ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಹಾಗೂ ಒಂದು ಸಂಸ್ಥೆ ಆಯ್ಕೆ

Posted On: 29-10-2020 10:18AM
ಕರ್ನಾಟಕ ಸರಕಾರದಿಂದ ನೀಡಲ್ಪಡುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ರಾಜ್ಯೋತ್ಸವ ಪ್ರಶಸ್ತಿಯಾಗಿದೆ. ಈ ಬಾರಿ 65ನೇ ವರ್ಷಾಚರಣೆಯ ಪ್ರಯುಕ್ತ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ., ಕಲೆ, ಸಾಹಿತ್ಯ, ರಂಗಭೂಮಿ,ಸಿನಿಮಾ, ಸಂಗೀತ,ನೃತ್ಯ, ಜಾನಪದ, ಯಕ್ಷಗಾನ, ಬಯಲಾಟ, ಶಿಲ್ಪಕಲೆ, ಚಿತ್ರಕಲೆ, ಸಮಾಜಸೇವೆ, ಸಂಕೀರ್ಣ, ಪತ್ರಿಕೋದ್ಯಮ/ ಮಾಧ್ಯಮ, ಕ್ರೀಡೆ, ವೈದ್ಯಕೀಯ, ಶಿಕ್ಷಣ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಾಧಕರನ್ನು ಆಯ್ಕೆ ಮಾಡಲಾಗುತ್ತದೆ.

ಉಡುಪಿ ಜಿಲ್ಲೆಗೆ ಈ ಬಾರಿ ಸಮಾಜಸೇವೆಯಲ್ಲಿ ಮಣೆಗಾರ್ ಮೀರಾನ್ ಸಾಹೇಬ್, ನ್ಯಾಯಾಂಗದಲ್ಲಿ ಎಂ.ಕೆ.ವಿಜಯಕುಮಾರ್ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ವಲೇರಿಯನ್ ಡಿಸೋಜ (ವಲ್ಲಿ ವಗ್ಗ), ಸಂಗೀತ ಕ್ಷೇತ್ರದಲ್ಲಿ ಕೆ. ಲಿಂಗಪ್ಪ ಶೇರಿಗಾರ ಕಟೀಲು, ಹೊರನಾಡು ಕನ್ನಡಿಗ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ಕುಸುಮೋದರದೇರಣ್ಣ ಶೆಟ್ಟಿ ಕೇಲ್ತಡ್ಕ, ಸಂಘ-ಸಂಸ್ಥೆಯಲ್ಲಿ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದುಕೊಂಡಿದೆ. ನವೆಂಬರ್ ಒಂದು ಕನ್ನಡ ರಾಜ್ಯೋತ್ಸವದಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಾಪುವಿನಲ್ಲಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದ ಕುಡಿಯುವ ನೀರಿನ ಯಂತ್ರ ಶೋಗೆ ಇಟ್ಟಿದ್ದಾರೆಯೇ ?

Posted On: 28-10-2020 09:10AM
ಕಳೆದ ಕೆಲವು ತಿಂಗಳ ಹಿಂದಷ್ಟೇ ನಮ್ಮ ಕಾಪು ವೆಬ್ ಪೋರ್ಟಲ್ ನಲ್ಲಿ ಕುಡಿಯುವ ನೀರಿನ ಯಂತ್ರದ ಬಗ್ಗೆ ವರದಿ ಮಾಡಿತ್ತು.. ಇಲ್ಲಿಯವರೆಗೆ ಯಾವುದೇ ಅಧಿಕಾರಿಗಳ ಪ್ರತಿಕ್ರಿಯೆಯೂ ವ್ಯಕ್ತವಾಗಿಲ್ಲ.

ಸರ್ವಿಸ್ ರೋಡ್ ನಲ್ಲಿ ಉಡುಪಿ, ಮಂಗಳೂರು ಎಕ್ಸ್ಪ್ರೆಸ್ ಬಸ್ ನಿಲ್ಲುವ ಜಾಗದಲ್ಲಿ ಈ ಯಂತ್ರ ಇದೆ. ಉದಯ ಕಿಚನೆಕ್ಸ್ಟ್ ಎದುರುಗಡೆ ಮತ್ತು ಅಯ್ಯಂಗಾರ್ ಬೇಕರಿಯ ಹತ್ತಿರದಲ್ಲಿ ಇರುವ ಕುಡಿಯುವ ನೀರಿನ ಯಂತ್ರ ಇದಾಗಿದ್ದು.. ಈ ಯಂತ್ರ ಸರ್ಕಾರದಿಂದ ಅಥವಾ ದಾನಿಗಳಿಂದ ಬಂದ ಯಂತ್ರ ಆಗಿರಬಹುದು ಆದರೇ ಅಧಿಕಾರಿಗಳ ನಿರ್ಲಕ್ಷ್ಯತನ ನೋಡಿ ಯಂತ್ರ ವರ್ಕ್ ಆಗದೇ ಇದ್ದರು ಕೂಡಾ ಹಾಗೆ ಬಿಟ್ಟಿದ್ದಾರೆ.. ಒಂದೋ ಯಂತ್ರವನ್ನು ಅಲ್ಲಿಂದ ಎತ್ತಂಗಡಿ ಮಾಡಿ ಅಥವಾ ಸಾರ್ವಜನಿಕರಿಗೆ ಉಪಯೋಗವಾಗುವಂತೆ ದಿನದ 24 ಗಂಟೆ ನೀರು ಬರುವಂತೆ ಮಾಡಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.