Updated News From Kaup
ಯುವವಾಹಿನಿ ಪಡುಬಿದ್ರಿ ಘಟಕದಿಂದ ಶ್ರಮದಾನ
Posted On: 13-12-2020 01:20PM
ಯುವವಾಹಿನಿ ಪಡುಬಿದ್ರಿ ಘಟಕದ ಸದಸ್ಯರು ಕಲ್ಲಟ್ಟೆ ಜಾರಂದಾಯ ದೈವಸ್ಥಾನಕ್ಕೆ ಹೋಗುವ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಿತ್ರಾಕ್ಷಿ ಕೆ. ಕೋಟ್ಯಾನ್ , ಕಾರ್ಯದರ್ಶಿ ಶಾಶ್ವತ್ ಎಸ್. ಪೂಜಾರಿ, ಸಮಾಜ ಸೇವಾ ನಿರ್ದೇಶಕಿ ಶ್ರೀಮತಿ ಲತಾ ವಸಂತ್ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ನಿಧನ
Posted On: 13-12-2020 12:53PM
ಕನ್ನಡ ಮತ್ತು ಸಂಸ್ಕೃತ ಭಾಷೆಯಲ್ಲಿ ಅಮೋಘ ಪಾಂಡಿತ್ಯದ ಮೂಲಕ ವಿದ್ವಾಂಸರಾದ ಬನ್ನಂಜೆ ಗೋವಿಂದಾಚಾರ್ಯರು ಇಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯ ಅಂಬಲಪಾಡಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿತ್ತು. ಹಲವು ತಿಂಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಕರಾವಳಿ ಶಾಸಕರುಗಳ ಪ್ರಯತ್ನ ಶ್ಲಾಘನೀಯ : ಪ್ರವೀಣ್ ಎಂ. ಪೂಜಾರಿ
Posted On: 13-12-2020 12:20PM
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಮರ ವೀರರಾದ ಕೋಟಿ ಚೆನ್ನಯರ ಹೆಸರನ್ನಿಡಬೇಕೆಂದು ಕರಾವಳಿಯ ಶಾಸಕರು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮಾನ್ಯ ಮುಖ್ಯಮಂತ್ರಿಗೆ ಮನವಿ ನೀಡಿರುವುದು ಅಭಿನಂದನಾರ್ಹ ಸಂಗತಿ.ಸಮಸ್ತ ಸಮಾಜದ ಸಮಂಜಸವಾದ ಬೇಡಿಕೆಯನ್ನು ಈಡೇರಿಸುವ ಕುರಿತಾದ ಜನಪ್ರತಿನಿಧಿಗಳ ನಿರ್ಧಾರ ಮೆಚ್ಚುವಂತದ್ದು.
ಕಲ್ಲುಗುಡ್ಡೆ : ದೀಪ ಸಂಭ್ರಮ, ನೂತನ ಪಂಚಮಿ ಭಜನಾ ಮಂಡಳಿ ಉದ್ಘಾಟನೆ
Posted On: 12-12-2020 06:48PM
ಶ್ರೀ ಪಂಚದೈವಿಕ ನಾಗಬ್ರಹ್ಮಸ್ಥಾನ ಕುಂಜ ಕಲ್ಲುಗುಡ್ಡೆ ಕ್ಷೇತ್ರದಲ್ಲಿ ನೂತನ ಪಂಚಮಿ ಭಜನಾ ಮಂಡಳಿಯನ್ನು ದೀಪ ಬೆಳಗಿ ಉದ್ಘಾಟಿಸಲಾಯಿತು.
ಸಮಾಜದ ಶಾಂತಿ ಕಾಪಾಡುವಲ್ಲಿ ಗೃಹರಕ್ಷಕರ ಕೊಡುಗೆ ಅಪಾರ-ಜಿಲ್ಲಾಧಿಕಾರಿ ಜಿ. ಜಗದೀಶ್
Posted On: 11-12-2020 05:19PM
ಉಡುಪಿ, ಡಿಸೆಂಬರ್ 11 : ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ರಕ್ಷಕದಳವು ಪೊಲೀಸರಿಗೆ ಸಮನ್ವಯದೊಂದಿಗೆ ಪೂರಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಇಂದು ಜಿಲ್ಲಾ ಗೃಹ ರಕ್ಷಕದಳದ ಕಚೇರಿ ಆವರಣದಲ್ಲಿ ನಡೆದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಕುತ್ಯಾರು : ಕೊನೆಗೂ ರಸ್ತೆ ಹೊಂಡಕ್ಕೆ ಸಿಕ್ಕಿತು ಮುಕ್ತಿ
Posted On: 11-12-2020 01:41PM
ಮುದರಂಗಡಿ- ಶಿರ್ವ ಮುಖ್ಯರಸ್ತೆಯ ಕುತ್ಯಾರು ಬ್ಯಾಂಕ್ ಆಫ್ ಬರೋಡ ಬಳಿ ಪೈಪ್ ಅಳವಡಿಸಲು ಅಗೆಯಲಾಗಿದ್ದ ರಸ್ತೆಯನ್ನು ಇಲಾಖೆ ಗುರುವಾರ ಸರಿಪಡಿಸಿ ಡಾಮರೀಕರಣಗೊಳಿಸಿದೆ.
ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
Posted On: 10-12-2020 09:55PM
ಲಿಯೋ ಕ್ಲಬ್ ಯುವ ಶಕ್ತಿ Dist 317C ಆರ್ಡಿ-ಬೆಳ್ವೆ-ಗೋಳಿಯಂಗಡಿ ಅರ್ಪಿಸುವ ರಾಜ್ಯ ಮಟ್ಟದ ಕೋವಿಡ್ -19ರಿಂದ ನಾನು ಕಲಿತ ಪಾಠ (Lesson I learnt from covid -19) ಎಂಬ ವಿಷಯದ ಪ್ರಬಂಧ ಸ್ಪರ್ಧೆಯು ಕರ್ನಾಟಕ ರಾಜ್ಯದಲ್ಲಿ ಕಲಿಯುತ್ತಿರುವ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರವಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಇದ್ದು, ಪ್ರತಿ ಭಾಷಾ ವಿಭಾಗದಲ್ಲಿ ಎರಡು ಬಹುಮಾನಗಳಿವೆ, ತೀರ್ಪುಗಾರರ ನಿರ್ಧಾರ ಅಂತಿಮವಾಗಿರುತ್ತದೆ. ಪ್ರಬಂಧದಲ್ಲಿ ಕನಿಷ್ಠ 500 ಪದಗಳು ಮತ್ತು ಗರಿಷ್ಠ 1000 ಪದಗಳು ಇರಬೇಕು. ಪ್ರಬಂಧವನ್ನು ಪಿಡಿಎಫ್ ರೂಪದಲ್ಲಿ lcyuvashakthi20@gmail.com ಗೆ ಕಳುಹಿಸಬೇಕು.
ಬಂಟಕಲ್ಲು ದಿ. ಬಿ ರಾಮಚಂದ್ರ ಪ್ರಭು ಶ್ರದ್ಧಾಂಜಲಿ - ನುಡಿ ನಮನ ಕಾರ್ಯಕ್ರಮ
Posted On: 10-12-2020 08:09PM
ಕಳೆದ ಶುಕ್ರವಾರದಂದು ನಿಧನರಾದ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪದಾಯರಾಗಿದ್ದ ಪಂಜಿಮಾರು ಕುರುಡೈ ರಾಮಚಂದ್ರ ಪ್ರಭುರವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಾರ್ವಜನಿಕ ನುಡಿ ನಮನ ಕಾರ್ಯಕ್ರಮವು ಶಾಲಾ ಆಡಳಿತ ಮಂಡಳಿ, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬಂಟಕಲ್ಲು2 ಶಾಲೆಯಲ್ಲಿ ನಡೆಯಿತು.
ಬೆಳಪು : ೬ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ರಹಮತ್ ನೂತನ ಮನೆ ಹಸ್ತಾಂತರ
Posted On: 10-12-2020 07:54PM
ಕಾಪು, ಡಿ. ೧೦ : ಬೆಳಪು ದೇವೇಗೌಡ ಬಡಾವಣೆಯಲ್ಲಿ ಸಮಾಜ ಸೇವಾ ಘಟಕ, ಜಮಾಅತೆ ಇಸಾಮೀ ಹಿಂದ್, ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ ಇವರ ವತಿಯಿಂದ ಬಡ ಕುಟುಂಬವೊಂದಕ್ಕೆ ಸುಮಾರು ೬ ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿಕೊಡಲಾದ ನೂತನ ಮನೆ ರಹಮತ್ ಅನ್ನು ಡಿ. ೧೦ರಂದು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಮನೆ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಪು ಸಿಎ ಬ್ಯಾಂಕ್ ಅಧ್ಯಕ್ಷ / ಗ್ರಾ.ಪಂ. ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಬೆಳಪು ಗ್ರಾಮದಲ್ಲಿ ೬೦೦ಕ್ಕೂ ಅಽಕ ಬಡಕುಟುಂಬಗಳಿಗೆ ಮನೆ ನಿವೇಶನವನ್ನು ಒದಗಿಸಿಕೊಡಲಾಗಿದ್ದು, ಸರಕಾರದ ವಿವಿಧ ಮೂಲಗಳಿಂದ ಗೃಹ ನಿರ್ಮಾಣಕ್ಕೆ ಸರಕಾರ ಮತ್ತು ದಾನಿಗಳಿಂದ ಹಣಕಾಸಿನ ನೆರವನ್ನೂ ದೊರಕಿಸಿಲಾಗಿದೆ. ಮನೆ ನಿವೇಶನ ದೊರಕಿದರೂ, ಮನೆ ನಿರ್ಮಾಣಕ್ಕೆ ಕಷ್ಟ ಪಡುತ್ತಿದ್ದ ಕೆಲವರಿಗೆ ದಾನಿಗಳ ನೆರವಿನೊಂದಿಗೆ ಮನೆ ನಿರ್ಮಾಣದ ಸಂಕಲ್ಪ ಮಾಡಲಾಗಿದ್ದು, ಅದಕ್ಕೆ ಅನುಗುಣವಾಗಿ ಜಮಾಅತೆ ಇಸಾಮೀ ಹಿಂದ್ ಸಹಿತ ವಿವಿಧ ಸಂಸ್ಥೆಗಳು ನಮ್ಮೊಂದಿಗೆ ಕೈ ಜೋಡಿಸಿರುವುದು ಶ್ಲಾಘನೀಯ ಎಂದರು.
ವರ್ಕರ ಗುಂಡಿದ ಮುಗೇರ ಪಂಜುರ್ಲಿ (ದೈವದ ಪ್ರಾದೇಶಿಕ ಪ್ರಸರಣ ಕಥೆ)
Posted On: 10-12-2020 05:14PM
ತೆಂಕಣ ಭಾಗದ ಮೊಗರ್ನಾಡು ಸಾವಿರ ಸೀಮೆಯ ಒಂದು ವಿಶಿಷ್ಟವಾದ ಸತ್ಯ,ನಾಡು ದೈವ ಪಂಜುರ್ಲಿ. ಈ ಪಂಜುರ್ಲಿಯು ನಾವು ಹೇಳುವ ಕುಪ್ಪೆ ಪಂಜುರ್ಲಿ, ವರ್ಣಾರ ಪಂಜುರ್ಲಿ,ಅಣ್ಣಪ್ಪ ಪಂಜುರ್ಲಿಯ ರೂಪ ಸಂದಿ ಪಾರ್ಧನದಲ್ಲಿ ಎಂದು ಗಣನೆಗೆ ತೆಗೆದುಕೊಂಡರೂ,ಮೂಲ ಸುಳ್ಳಮಲೆಯ" ಅರದ್ದೆರೆ ಪಂಜುರ್ಲಿ" ಎಂದೂ, ಸಂಧಿಯಲ್ಲಿ ಈ ದೈವಕ್ಕೆ ಸುಳ್ಳಮಲೆಯೆ ಮೂಲ ಅಗಿದೆ. ಅರದ್ದರು ಹಾಕಿ ಜಪಂಧ ಕಲ್ಲಿನಲ್ಲಿ ಉದ್ಯ ಉದಿಪನ ಆದ ಈ ಮೂರು ದೈವಗಳು ಇವು ಎಂದು ಸಂಧಿ ಉಲ್ಲೇಖ . ಅ ಮೂರು ದೈವಗಳಲ್ಲಿ "ಅರದ್ದೆರೆ ಪಂಜುರ್ಲಿ"ಯು ಒಂದು. ಒಬ್ಬರು ದೇವರು ವಿಷ್ಣುಮೂರ್ತಿ,ಚಿತ್ತರಿಗೆ ಬೂಡಿನ ಒಬ್ಬರು ಉಲ್ಲಾಲ್ತಿ, ಅರಸು,ಪ್ರಧಾನಿ,ಬಂಟ ಎಂಬ ಮೂವರು ದೈವಂಕ್ಲು.(ಗುಡ್ಡ ಚಾಮುಂಡಿ,ಮುಗೇರ ಪಂಜುರ್ಲಿ,ಮಲೆಕೊರತಿ) ಮೂರುಗ್ರಾಮ,ನಾಲ್ಕು ಮನೆ,ಐವರು ಸತ್ಯಗಳು.ಪೆರಾಜೆ,ಮಾಣಿ,ಅರೆಬೆಟ್ಟು ಎಂಬ ಮೂರು ಗ್ರಾಮಗಳನ್ನು ತನ್ನ ನಿಲೆಗಾಗಿ ಇಟ್ಟುಕೊಂಡ ದೈವಗಳು.ಅದರಲ್ಲಿ ಅರಸು ಗುಡ್ಡ ಚಾಮುಂಡಿ,ಪ್ರಧಾನಿ,ಬಂಟೆದಿ ಎಂಬ ಮೂವರು ದೈವಗಳು.ಅದರಲ್ಲಿ ಪ್ರಧಾನಿ ದೈವ ಮುಗೇರ ಪಂಜುರ್ಲಿ ತುಲುನಾಡಿನಲ್ಲಿ ಅರಾಧನೆ ಗೊಳ್ಳುವ ಪಂಜುರ್ಲಿಯ(ಪ್ರಾಣಿ ಸ್ವರೂಪದ ದೈವ ಅಲ್ಲ) ಒಂದು ಸ್ವರೂಪ. ಅರ್ಥಾತ್ ಸುಳ್ಳಮಲೆತ್ತ ಪಂಜುರ್ಲಿ ಎಂದು ಈ ದೈವವನ್ನು ಕರೆಯುತ್ತಾರೆ.ಇಲ್ಲಿ "ಅರದ್ದೆರ್" ಯಾರು ಎಂಬುದು ಎಲ್ಲಾರಿಗೂ ಜಿಜ್ಞಾಸೆ ಹುಟ್ಟುವುದು ಸಹಜ.ಕೆಲವರ ಪ್ರಕಾರ ಅವರು ಜೈನರು ಆಗಿದ್ದಿರಬಹುದು,ಇಲ್ಲವೇ ಪಾರ್ಷಿಗಳು ಆಗಿದ್ದಿರಬಹುದು ಎಂಬ ಉತ್ತರ ಬರುತ್ತವೆ. ಆದರೆ ಅವರು ಯಾರೆಂಬುವುದು ಇಲ್ಲಿಯವರೆಗೆ ಸರಿಯಾದ ಉತ್ತರ ಮಾತ್ರ ಶೂನ್ಯ.
