Updated News From Kaup

ಕಟಪಾಡಿ : ನಾಪತ್ತೆಯಾದ ಯುವಕನ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ

Thumbnail
Posted On: 12 Apr 2021, 07:47 PM

ಕಾಪು : ಕಟಪಾಡಿ ಸರ್ವಿಸ್ ರಸ್ತೆಯ ನಾಗಬನದ ಹತ್ತಿರ ಮರಕ್ಕೆ ಬೆಲ್ಟಿನಿಂದ ನೇಣು ಹಾಕಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ. ಮೃತ ದೇಹವು ಕೊಳೆತ ಸ್ಥಿತಿಯಲ್ಲಿದ್ದು ವಾಸನೆ ಬರುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಕಾಪು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಟಪಾಡಿ : ನಾಪತ್ತೆಯಾದ ಯುವಕನ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ

Thumbnail
Posted On: 12 Apr 2021, 07:44 PM

ಕಾಪು : ಕಟಪಾಡಿ ಸರ್ವಿಸ್ ರಸ್ತೆಯ ನಾಗಬನದ ಹತ್ತಿರ ಮರಕ್ಕೆ ಬೆಲ್ಟಿನಿಂದ ನೇಣು ಹಾಕಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ. ಮೃತ ದೇಹವು ಕೊಳೆತ ಸ್ಥಿತಿಯಲ್ಲಿದ್ದು ವಾಸನೆ ಬರುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಕಾಪು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯನ್ನು ಸಂದೀಪ್ ದೇವಾಡಿಗ ಕಟಪಾಡಿ ಮಟ್ಟು ನಿವಾಸಿ ಎಂದು ತಿಳಿದು ಬಂದಿದ್ದು, ಈ ಯುವಕನ ಬಗ್ಗೆ ಏಪ್ರಿಲ್ 7ರಂದು ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿರುತ್ತದೆ. ಘಟನೆಯ ಬಗ್ಗೆ ಮುಂದಿನ ತನಿಖೆಯಿಂದ ನಿಖರ ಮಾಹಿತಿ ತಿಳಿದು ಬರಬೇಕಾಗಿದೆ. ಘಟನಾ ಸ್ಥಳಕ್ಕೆ ಪೋಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಪು ಎಸ್ಐ ರಾಘವೇಂದ್ರ, ಆಸ್ಟಿನ್ ಹಾಗೂ ಆಪತ್ಬಾಂಧವ ಸೂರಿ ಶೆಟ್ಟಿ ಕಾಪು ಅವರು ಮೃತದೇಹವನ್ನು ಇಳಿಸಲು ಸಹಕರಿಸಿದರು.

ಉಡುಪಿ ಜಿಲ್ಲೆಯನ್ನು ಕುರುಡು ಮುಕ್ತ ಜಿಲ್ಲೆಯನ್ನಾಗಿಸಲು ಪ್ರಯತ್ನ : ಡಾ. ಕೃಷ್ಣಪ್ರಸಾದ್

Thumbnail
Posted On: 12 Apr 2021, 11:55 AM

ಉಡುಪಿ : ಉಚಿತ ನೇತ್ರ ತಷಾಸಣಾ ಶಿಬಿರಗಳ ಮೂಲಕ ಉಡುಪಿ ಜೆಲ್ಲೆಯನ್ನು ಕುರುಡುಮುಕ್ತ ಜೆಲ್ಲೆಯನ್ನಾಗಿಸಲು ಪ್ರಯತ್ನಿಸುತ್ತಿರುವುದಾಗಿ ಉಡುಪಿ ಪ್ರಸಾದ್ ನೇತ್ರಾಲಯದ ನೇತ್ರ ತಜ್ಞ ನಾಡೋಜ ಗೌರವ ಪಡೆದ ಡಾ ಕೃಷ್ಣ ಪ್ರಸಾದ್ ತಿಳಿಸಿದರು. ಅವರು ಬಂಟಕಲ್ಲು ಜಿಝೊ ಎಜುಕೇಶನ್ ಸಭಾಂಗಣದಲ್ಲಿ ನಾಗರಿಕ ಸೇವಾ ಸಮಿತಿ (ರಿ.) ಬಂಟಕಲ್ಲು ಇವರ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಲಯನ್ಸ್ ಕ್ಲಬ್ ಬಂಟಕಲ್ಲು - ಬಿ.ಸಿ ರೋಡು, ರಾಜಾಪುರ ಸಾರಸ್ವತ ಯುವ ವೃಂದ ಬಂಟಕಲ್ಲು , ಶ್ರೀ ಗುರುರಾಘವೇಂದ್ರ ಸಮಾಜಸೇವಾ ಮಂಡಳಿ (ರಿ.) ಹೇರೂರು, ಕಥೋಲಿಕ್ ಸ್ತ್ರೀ ಸಂಘಟನೆ ಪಾಂಬೂರು ಘಟಕ, ಉಡುಪಿ ಜಿಲ್ಲಾ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಬಂಟಕಲ್ಲು ಘಟಕ, ಸ್ವಾಸ್ಥ್ಯ ಆಯೋಗ ಪಾಂಬೂರು ಚರ್ಚ್ ಇವರ ಸಹಯೋಗದೊಂದಿಗೆ ನಡೆದ ಉಚಿತ ನೇತ್ರ ತಪಾಸಣೆ ಶಿಬಿರ, ರಕ್ತದೊತ್ತಡ, ಮಧುಮೇಹ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರದ ಆಯುಷ್ಮಾನ್ ಯೋಜನೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಅವಕಾಶ ಮಾಡಿಕೊಡುವಂತೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಿರುವುದಾಗಿ ತಿಳಿಸಿ, ಎಲ್ಲರೂ ಕರೋನಾ ಲಸಿಕೆಯನ್ನು ಪಡೆಯುವಂತೆ ತಿಳಿಸಿದರು. ಅಭಿನಂದನೆ : ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಗೌರವ ಪಡೆದ ಡಾ. ಕೃಷ್ಣಪ್ರಸಾದ್ ರವರನ್ನು ನಾಗರಿಕ ಸಮಿತಿ ಪರವಾಗಿ ಕೆ.ಆರ್ ಪಾಟ್ಕರ್ ರವರು ಶಾಲು ಹೊದಿಸಿ ಅಭಿನಂದಿಸಿದರು. ಬಂಟಕಲ್ಲು ನಾಗರಿಕ ಸೇವಾ ಸಮಿತಿ ಅಧ್ಯಕ್ಷ , ಶಿರ್ವ ಗ್ರಾ.ಪಂ ಸದಸ್ಯ ಕೆ. ಆರ್. ಪಾಟ್ಕರ್ ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಟಕಲ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಲ. ವಿಜಯ್ ಧೀರಾಜ್, ರಾಜಾಪುರ ಸಾರಸ್ವತ ಯುವ ವೃಂದದ ಅಧ್ಯಕ್ಷ ವಿಶ್ವನಾಥ ಬಾಂದೇಲ್ಕರ್, ಹೇರೂರು ಶ್ರೀ ಗುರುರಾಘವೇಂದ್ರ ಸಮಾಜಸೇವಾ ಮಂಡಳಿ ಅಧ್ಯಕ್ಷ ಶ್ರೀನಿವಾಸ ದೇವಾಡಿಗ, ಉಡುಪಿ ಜಿಲ್ಲಾ ಟ್ಯಾಕ್ಸಿ ಮತ್ತು ಕ್ಯಾಬ್ ಎಸೋಷಿಯೇಶನ್ ಬಂಟಕಲ್ಲು ಘಟಕದ ಅಧ್ಯಕ್ಷ ಉಮೇಶ್ ರಾವ್, ಪಾಂಬೂರ್ ಕಥೋಲಿಕ್ ಸ್ತ್ರಿ ಸಂಘಟನೆ ಅಧ್ಯಕ್ಷೆ ಶ್ರೀಮತಿ ಜೂಲಿಯೆಟ್ ರೀಟಾ ಮೋನಿಸ್, ಪಾಂಬೂರ್ ಸ್ವಾಸ್ಥ್ಯ ಆಯೋಗದ ಅಧ್ಯಕ್ಷೆ ಶ್ರೀಮತಿ ಜೆಸಿಂತಾ ಸಲ್ಡಾನ್ನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾಗರಿಕ ಸಮಿತಿ ಕೋಶಾಧಿಕಾರಿ ಜಗದೀಶ ಆಚಾರ್ಯ, ಗ್ರಾ ಪಂ ಸದಸ್ಯೆ ವೈಲೆಟ್ ಕಸ್ತಲಿನೊ, ಯುವ ವೃಂದದ ಕಾರ್ಯದರ್ಶಿ ಆಶಿಷ್ ಪಾಟ್ಕರ್, ಬಂಟಕಲ್ಲು ದೇವಸ್ಥಾನದ ಆಡಳಿತ ಮಂಡಳಿ ಉಪಾಧ್ಯಕ್ಷ ಉಮೇಶ್ ಪ್ರಭು, ಪ್ರಸಾದ್ ನೇತ್ರಾಲಯದ ಪಿ.ಆರ್ ಓ ಶ್ರೀ ಹರ್ಷ, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂಧಿ ವರ್ಗ, ಉಪಸ್ಥಿತರಿದ್ದರು. ಸುಮಾರು 125 ನಾಗರಿಕರು ಶಿಬಿರದ ಪ್ರಯೋಜನ ಪಡೆದರು. ರೋಹಿಣಿ ನಾಯಕ್ ಪ್ರಾರ್ಥಿಸಿ, ನಾಗರಿಕ ಸೇವಾ ಸಮಿತಿ ಕಾರ್ಯದರ್ಶಿ ದಿನೇಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ವಿರೇಂದ್ರ ಪಾಟ್ಕರ್ ಧನ್ಯವಾದವಿತ್ತರು.

ಅಂದು ಕೊರೊನ ಲಾಕ್ಡೌನ್ ಸಮಯ ಇಂದು ತಾರಸಿ ತುಂಬಾ ತರಕಾರಿಮಯ...

Thumbnail
Posted On: 12 Apr 2021, 10:58 AM

ಕಾಪು : ಕೊರೊನ ಸಮಯ ಕಷ್ಟಮಯವಾಗಿದ್ದಂತು ನಿಜ. ಆದರೆ ಆ ಸಮಯವನ್ನು ಒಂದಷ್ಟು ಉಪಯುಕ್ತವಾಗಿಸಿಕೊಂಡು ಇಷ್ಟಮಯವಾಗಿಸಿ ತರಕಾರಿಗಳನ್ನು ಬೆಳೆಸಿದ ಕಟಪಾಡಿಯ ನಾಟಕ ಕಲಾವಿದ ನಾಗೇಶ್ ಕಾಮತ್ ಮತ್ತು ಅವರ ಮಗ ಬಾಲ ಜಾದುಗಾರ ಪ್ರಥಮ್ ಕಾಮತ್. ಬಹಳಷ್ಟು ಮಂದಿಗೆ ತರಕಾರಿ ಬೆಳೆಯಲು ಜಾಗದ ಸಮಸ್ಯೆ ಎದುರಾಗಬಹುದು ಆದರೆ ಇವರು ಆಯ್ದುಕೊಂಡದ್ದು ಮನೆಯ ತಾರಸಿ ಹಾಗೂ ಅಂಗಳ. ಕೊರೋನ ಸಮಯದಲ್ಲಿ ಮೊದಲು ಬೇಸತ್ತು ಏನಾದರೂ ಸಾಧನೆ ಮಾಡಬೇಕೆಂದು ತಮ್ಮಲ್ಲಿರುವ ತೋಟದಲ್ಲಿ ಗಿಡಗಳನ್ನು ನೆಟ್ಟರು ಆದರೆ ನೆರಳು ಜಾಸ್ತಿ ಇದ್ದ ಕಾರಣ ಯಾವುದೇ ಫಲ ಕೊಡಲಿಲ್ಲ ಆನಂತರ ಛಲಬಿಡದೆ ತಮ್ಮ ಮನೆಯ ತಾರಸಿಯಲ್ಲಿ ಹಳೆ ಪ್ಲಾಸ್ಟಿಕ್ ಚೀಲ ಸಿಮೆಂಟ್ ಚೀಲಗಳಲ್ಲಿ ಕೆಂಪು ಮಣ್ಣು ತುಂಬಿ ಸಾವಯವ ಗೊಬ್ಬರ ತಯಾರಿಸಿ ಬೆಂಡೆ, ಮಟ್ಟುಗುಳ್ಳ, ಕುಂಬಳಕಾಯಿ, ಹರಿವೆ ಸೊಪ್ಪು, ಬಸಳೆ ಸೊಪ್ಪು, ಟೊಮೆಟೊ, ಮೆಣಸಿನಕಾಯಿ, ಕಲ್ಲಂಗಡಿ ಇನ್ನಿತರ ಮನೆಗೆ ಬೇಕಾಗುವ ತರಕಾರಿಗಳನ್ನು ಅತಿ ಕಡಿಮೆ ಖರ್ಚಿನಲ್ಲಿ ಬೆಳೆಸುತ್ತಿದ್ದಾರೆ. ಪ್ರತಿದಿನ ಬೆಳಿಗ್ಗೆ ಒಂದು ಅರ್ಧ ಗಂಟೆ ಗಿಡದ ನಿರ್ವಹಣೆಯ ಕೆಲಸ ಹಾಗೆಯೇ ಸಂಜೆ ಗಿಡಕ್ಕೆ ಒಂದು ಗಂಟೆ ನೀರು ಉಣಿಸುವ ಕಾರ್ಯವನ್ನು ತಂದೆ ಮತ್ತು ಮಗ ನಿರ್ವಹಿಸುತ್ತಿದ್ದಾರೆ. ಇದೀಗ ಡಿಸೆಂಬರ್ ಜನವರಿಯಲ್ಲಿ ನೆಟ್ಟ ಗಿಡಗಳು ಒಳ್ಳೆಯ ಕಾಯಿಗಳನ್ನು ಕೊಟ್ಟು ಮನೆಗೆ ಬೇಕಾದಷ್ಟು ತರಕಾರಿ ಗಳನ್ನೂ ಬೆಳೆಸಿ ಇತರರಿಗೂ ಕೊಡುವಷ್ಟು ತರಕಾರಿ ಬೆಳೆಯುತ್ತಿದ್ದಾರೆ. ತಾರಸಿ ಕೃಷಿ ಮಾಡುವುದರಿಂದ ದೇಹಕ್ಕೆ ವ್ಯಾಯಾಮ ಅಲ್ಲದೆ ಮನಸಿಗೆ ಖುಷಿಯಾಗುತ್ತೆ ಅಲ್ಲದೆ ಮನೆಯಲ್ಲೇ ಬೆಳೆದ ತಾಜಾ ಸಾವಯವ ತರಕಾರಿ ತಿನ್ನುವುದರಿಂದ ಆರೋಗ್ಯದ ವಿಚಾರದಲ್ಲೂ ಬಹಳ ಉತ್ತಮ ಎಂದು‌ ಹೇಳುತ್ತಾರೆ ನಾಗೇಶ್ ಕಾಮತ್. ಇವರ ಈ ವ್ಯವಸ್ಥೆ ಇತರರಿಗೂ ಮಾದರಿಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ನಾಗೇಶ್ ಕಾಮತ್ : 9886432197

ಶಿರ್ವ : ಉಚಿತ ಕೊರೊನಾ ಲಸಿಕಾ ಕಾರ್ಯಕ್ರಮ

Thumbnail
Posted On: 12 Apr 2021, 09:47 AM

ಕಾಪು : ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇವರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ಮಟ್ಟಾರು ಸಹಯೋಗದಲ್ಲಿ ಉಚಿತ ಕೊರೊನಾ ಲಸಿಕಾ ಕಾರ್ಯಕ್ರಮವು ಮಟ್ಟಾರು ಉಪ ಆರೋಗ್ಯ ಕೇಂದ್ರದಲ್ಲಿ ಜರಗಿತು. ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇದರ ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ರಾವ್,ವಿಶ್ವ ಹಿಂದೂ ಪರಿಷದ್ ಕಾಪು ತಾಲೂಕು ಧರ್ಮಾಚಾರ್ಯ ಪ್ರಮುಖರಾದ ವೇದಮೂರ್ತಿ ಪ್ರಸನ್ನ ಭಟ್,ಕಾರ್ಯದರ್ಶಿ ಜಯಪ್ರಕಾಶ್ ಪ್ರಭು,ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಆಶಾ ಆಚಾರ್ಯ,ಕಿರಿಯ ಆರೋಗ್ಯ ಸಹಾಯಕಿಯರಾದ ಶ್ರೀಮತಿ ಕಲ್ಪನಾ ನಾಯಕ್,ಶ್ರೀಮತಿ ಗೀತಾ,ಆಶಾ ಕಾರ್ಯಕರ್ತರಾದ ನಿರ್ಮಲಾ ನಾಯಕ್,ಸಂಧ್ಯಾ,ಸುಮತಿ,ಬಜರಂಗದಳ ಶಿರ್ವ ವಲಯ ಗೋರಕ್ಷಾ ಪ್ರಮುಖರಾದ ರಮೇಶ್ ಶೆಟ್ಟಿ, ರಂಜಿತ್ ಪ್ರಭು,ಭರತ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು. 45 ವರ್ಷ ಮೇಲ್ಪಟ್ಟ ನಾಗರಿಕ ಬಂಧುಗಳು ಆಗಮಿಸಿ ಕೊರೊನಾ ಲಸಿಕೆ ಹಾಕಿಸಿಕೊಂಡರು.

ಕಾಪು : ಉಂಡಾರು ಶ್ರೀವಿಷ್ಣುಮೂರ್ತಿ ದೇವರ ವಾರ್ಷಿಕ ಶ್ರೀಮನ್ಮಹಾರಥೋತ್ಸವ, ಶ್ರೀಮದ್ಭಾಗವತ ಸಪ್ತಾಹ

Thumbnail
Posted On: 11 Apr 2021, 04:01 PM

ಕಾಪು : ಏಪ್ರಿಲ್ 12, ಸೋಮವಾರ ಮೊದಲ್ಗೊಂಡು ಏಪ್ರಿಲ್ 18, ಭಾನುವಾರ ಪರ್ಯಂತ ಶ್ರೀ ಕ್ಷೇತ್ರ ಉಂಡಾರು ಶ್ರೀವಿಷ್ಣುಮೂರ್ತಿ ದೇವರ ವಾರ್ಷಿಕ ಶ್ರೀಮನ್ಮಹಾರಥೋತ್ಸವವು ಪರಮಪೂಜ್ಯ ಶ್ರೀಶ್ರೀಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ವೇದಮೂರ್ತಿ ಪುತ್ತೂರು ಮಧುಸೂದನ ತಂತ್ರಿಯವರ ನೇತೃತ್ವದಲ್ಲಿ ಅಗಮೋಕ್ತ ವಿಧಿ-ವಿಧಾನಗಳೊಂದಿಗೆ ಜರಗಲಿರುವುದು. ಏಪ್ರಿಲ್ 09 ರಿಂದ ಏಪ್ರಿಲ್ 15 ರ ವರೆಗೆ ಶ್ರೀಮದ್ಭಾಗವತ ಸಪ್ತಾಹ ನಡೆಯಲಿದೆ. ಏಪ್ರಿಲ್ 09 ರಿಂದ ಏಪ್ರಿಲ್ 15 ರ ವರೆಗೆ ಪ್ರತಿದಿನ ಸಾಯಂಕಾಲ 4.30 ರಿಂದ 6.30ರ ವರೆಗೆ ವಿದ್ವಾನ್ ಡಾ.ಉದಯಕುಮಾರ್ ಸರಳತ್ತಾಯ ರಿಂದ ಶ್ರೀಮದ್ಭಾಗವತ ಕಥಾ ಪ್ರವಚನ ನಡೆಯಲಿರುವುದು. ಏಪ್ರಿಲ್ 12, ಸೋಮವಾರ ಸಾಯಂಕಾಲ 6ರಿಂದ ಫಲನ್ಯಾಸಪೂರ್ವಕ ಮುಹೂರ್ತ ಬಲಿ, ಅಂಕುರಾರೋಪಣ, ಸಂಜೆ: 6.30 ರಿಂದ 7.30 ಶ್ರೀ ವಿಷ್ಣು ಭಗಿನಿ ಭಜನಾ ಮಂಡಳಿ ಉಂಡಾರು ಹಾಗೂ 7.30 ರಿಂದ 8.30 ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಉಂಡಾರು, ಇವರಿಂದ ಭಜನೆ. ಏಪ್ರಿಲ್ 13, ಮಂಗಳವಾರ ಮೇಷ ಸಂಕ್ರಮಣ: ಪ್ರಾತ: 8-15ಕ್ಕೆ ಧ್ವಜಾರೋಹಣ. ಸಾಯಂಕಾಲ 7-30ಕ್ಕೆ ಬಲಿ. ರಾತ್ರಿ 9 ಕ್ಕೆ ಮಹಾರಂಗಪೂಜೆ, ಭೂತಬಲಿ, ಸಂಜೆ: 6.30 ರಿಂದ 7.30 ಶ್ರೀವಿಷ್ಣುವಲ್ಲಭ ವಿಶ್ವಹಿಂದೂ ಪರಿಷತ್ ಇನ್ನಂಜೆ ಘಟಕ ಹಾಗೂ 7.30 ರಿಂದ 8.30 ಶ್ರೀ ಧೂಮಾವತಿ ಭಜನ ಮಂಡಳಿ ಕಲ್ಯಾಲು, ಇವರಿಂದ ಭಜನೆ, ರಾತ್ರಿ 9ಕ್ಕೆ ವಿಧಾತ್ರಿ ಕಲಾವಿದೆರ್ ಕೈಕಂಬ-ಕುಡ್ಲ ಅವರಿಂದ ವಿಜಯಕುಮಾರ್ ಕೊಡಿಯಾಲ್‌ಬೈಲ್ ರಚನೆ ಮತ್ತು ನಿರ್ದೇಶನದ ತುಳು ಹಾಸ್ಯ ನಾಟಕ ಒರಿಯರ್ದೊರಿ ಅಸಲ್, ಶಶಿಧರ ಕೆ.ಶೆಟ್ಟಿ ಮಂಡೇಡಿ ಮತ್ತು ಕಲಾಭಿಮಾನಿಗಳ ಪ್ರಾಯೋಜಕತ್ವದಲ್ಲಿ ನಡೆಯಲಿದೆ. ಏಪ್ರಿಲ್ 14, ಬುಧವಾರ ಸಾಯಂಕಾಲ 7-30ಕ್ಕೆ ತಪ್ಪಂಗಾಯಿ ಬಲಿ, ಕಟ್ಟೆಪೂಜೆಗಳು ಸಂಜೆ 6.30 ರಿಂದ 7.30 ಶ್ರೀ ನಾರಾಯಣ ಗುರು ಭಜನಾ ಮಂಡಳಿ ಇನ್ನಂಜೆ ಹಾಗೂ 7.30 ರಿಂದ 8.30 ಶ್ರೀ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ, ಮಡುಂಬು, ಅವರಿಂದ ಭಜನೆ. ಸಂಜೆ 6.30 ಶ್ರೀ ರವಿಶಂಕರ ಗುರೂಜಿಯವರ ಶಿಷ್ಯರಾದ ಸ್ವಾಮಿ ಸೂರ್ಯಪಾದರಿಂದ ಸತ್ಸಂಗ (ಸಹಯೋಗ: ಜೀವನಕಲಾ ಸಂಸ್ಥೆ, ಇನ್ನಂಜೆ) ರಾತ್ರಿ 9 ರಿಂದ ಶಾಂಭವೀ ನೃತ್ಯನಿಕೇತನ ಕಾಪು ಇದರಿಂದ ನೃತ್ಯ ವೈವಿಧ್ಯ. ಪ್ರಾಯೋಜಕರು: ಶ್ರೀ ಉದಯ ಟಿ. ಮತ್ತು ಸಹೋದರರು ಇನ್ನಂಜೆ. ಏಪ್ರಿಲ್ 15, ಗುರುವಾರ ಪ್ರಾತ: 9ಕ್ಕೆ ಆಶ್ಲೇಷಾ ಬಲಿ, ಸಾಯಂಕಾಲ 7-30ಕ್ಕೆ ಬಲಿ, ಕಟ್ಟೆಪೂಜೆಗಳು. ಸಂಜೆ 6.30 ರಿಂದ 7.30 ಶ್ರೀ ಅಶ್ವತ್ಥನಾರಾಯಣ ಭಜನಾ ಮಂಡಳಿ, ಮಜಲು ಹಾಗೂ 7.30 ರಿಂದ 8.30 ಶ್ರೀದೇವಿ ಭಜನಾ ಮಂಡಳಿ ಮಂಡೇಡಿ, ಅವರಿಂದ ಭಜನೆ ರಾತ್ರಿ 7-30ಕ್ಕೆ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳಿಂದ ಕಾರ್ಯಕ್ರಮಗಳು.ರಾತ್ರಿ 9 ಕ್ಕೆ ಶ್ರೀಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಇವರಿಂದ ಯಕ್ಷಗಾನ ಶುಕ್ರನಂದನೆ. ಏಪ್ರಿಲ್ 16, ಶುಕ್ರವಾರ ಪ್ರಾತ: 8-30ಕ್ಕೆ ಶ್ರೀಶ್ರೀಗಳವರಿಂದ ಸಂಸ್ಥಾನ ದೇವರಿಗೆ ಮಹಾಪೂಜೆ 9ಕ್ಕೆ 108 ಕಾಯಿ ಗಣಯಾಗದ ಪೂರ್ಣಾಹುತಿ ಪೂರ್ವಾಹ್ನ 10-30ಕ್ಕೆ ಮಹಾಪೂಜೆ, 11-45 ಕ್ಕೆ ರಥಾರೋಹಣ, ಮಧ್ಯಾಹ್ನ 12-30ಕ್ಕೆ ಮಹಾಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5.30ಕ್ಕೆ ಉಡುಪಿಯ ಪ್ರಸಿದ್ಧ ಕಲಾವಿದರಾದ ವಿ. ಓಬು ಸೇರಿಗಾರರ ಮೊಮ್ಮಗಳು ಅಕ್ಷತಾ ದೇವಾಡಿಗ ರಿಂದ ಸ್ಯಾಕ್ರೋಫೋನ್ ವಾದನ, ಸಂಜೆ 7 ಶ್ರೀಭೂತರಾಜರಿಗೆ ವಿಶೇಷ ಪೂಜೆ ಶ್ರೀಮನ್ಮಹಾರಥೋತ್ಸವ ಮಹಾಭೂತಬಲಿ, ಶಯನೋತ್ಸವ, ಕವಾಟಬಂಧನ. ಏಪ್ರಿಲ್ 17, ಶನಿವಾರ ಪ್ರಾತ 7 ಕ್ಕೆ ಕವಾಟೋದ್ಘಾಟನೆ, ಸಾಯಂಕಾಲ 6-30ಕ್ಕೆ ಅವಚ್ಛತಾನ-ಧ್ವಜಾವರೋಹಣ-ಪೂರ್ಣಾಹುತಿ- ಮಹಾಮಂತ್ರಾಕ್ಷತೆ ಸಂಜೆ 6.30 ರಿಂದ 7.30 ಇನ್ನಂಜೆ ಯುವತಿಮಂಡಳಿ, ಇನ್ನಂಜೆ ಹಾಗೂ 7.30 ರಿಂದ 8.30 ಶ್ರೀ ವಿಠೋಭ ಭಜನಾ ಮಂಡಳಿ, ಗೋಳಿಕಟ್ಟೆ, ಇವರಿಂದ ಭಜನೆ, ರಾತ್ರಿ 9 ಕ್ಕೆ ಇನ್ನಂಜೆ ಯುವಕ ಮಂಡಳಿಯ ಸದಸ್ಯರಿಂದ ಸಾಮಾಜಿಕ ಹಾಸ್ಯ ತುಳು ನಾಟಕ ಅಮ್ಮೆರ್ ನೆರ್ಪೆರ್ ಪ್ರದರ್ಶನವಾಗಲಿದೆ. ಏಪ್ರಿಲ್ 18, ಭಾನುವಾರ ಬೆಳಗ್ಗೆ 6 ರಿಂದ ಗಣಯಾಗ ಮಹಾಸಂಪ್ರೋಕ್ಷಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

ಏಪ್ರಿಲ್ 10, ಶನಿವಾರ : ಶ್ರೀ ಗುರು ನಾಸಿಕ್ ಗ್ರೂಪ್ ಶಿರ್ವ ಇದರ 13ನೇ ವರ್ಷದ ವಾರ್ಷಿಕೋತ್ಸವ

Thumbnail
Posted On: 07 Apr 2021, 03:14 AM

ಕಾಪು : ಶ್ರೀ ಗುರು ನಾಸಿಕ್ ಗ್ರೂಪ್ ಶಿರ್ವ ಇದರ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಏಪ್ರಿಲ್ 10, ಶನಿವಾರ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಚೆಕ್ ಪಾದೆ, ಶಿರ್ವ ಇಲ್ಲಿ ನಡೆಯಲಿದೆ. ಬೆಳಿಗ್ಗೆ 10 ರಿಂದ ಶನಿಕಥಾಪಾರಾಯಣ, ಮಧ್ಯಾಹ್ನ 12:30 ಕ್ಕೆ ಅನ್ನಸಂತರ್ಪಣೆ, ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ರಾತ್ರಿ 7.30ರಿಂದ ಸಭಾ ಕಾರ್ಯಕ್ರಮ ಜರಗಲಿದ್ದು ಉದ್ಘಾಟಕರಾಗಿ ಮಹೇಶ್ ಶಾಂತಿ ಹೆಜಮಾಡಿ, ಮುಖ್ಯ ಅತಿಥಿಗಳಾಗಿ ಬಿಲ್ಲವ ಪರಿಷತ್ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ನವೀನ್ ಆಮೀನ್ ಶಂಕರಪುರ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಮಿತಿ ಶಿರ್ವ ಇದರ ಅಧ್ಯಕ್ಷರಾದ ದೇವಿಪ್ರಸಾದ್ ಪೂಜಾರಿ, ದಿಕ್ಸೂಚಿ ಭಾಷಣಕಾರರಾಗಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ ಸರ್ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಗುರುವಂದನಾ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ನಡೆಯಲಿದ್ದು, ರಾತ್ರಿ 9:30 ರಿಂದ ನಮ್ಮ ಕಲಾವಿದೆರ್ ಬೆದ್ರ ತಂಡದ ಸಾಮಾಜಿಕ ಹಾಸ್ಯಮಯ ನಾಟಕ ಕುಸಲ್ದ ಗೊಬ್ಬು ಪ್ರದರ್ಶನವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬೆಳ್ಮಣ್ಣು : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೋತ್ಸವ, ಸಭಾಕಾರ್ಯಕ್ರಮ, ಸನ್ಮಾನ

Thumbnail
Posted On: 06 Apr 2021, 11:30 AM

ಕಾಪು : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬೆಳ್ಮಣ್ಣು ಸಭಾಭವನದಲ್ಲಿ ಏಪ್ರಿಲ್ 11, ಆದಿತ್ಯವಾರ ಪೂರ್ವಾಹ್ನ ಘಂಟೆ 9.00ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೋತ್ಸವ, ಸಭಾಕಾರ್ಯಕ್ರಮ, ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಏಪ್ರಿಲ್ 11, ಆದಿತ್ಯವಾರ ಬೆಳಿಗ್ಗೆ ಘಂಟೆ 9 ರಿಂದ ಪೂಜಾರಂಭ, ಬೆಳಿಗ್ಗೆ ಘಂಟೆ 10-30ಕ್ಕೆ ಮಹಾಪೂಜೆ, ಬೆಳಿಗ್ಗೆ ಘಂಟೆ 11ರಿಂದ ಸಭಾಕಾರ್ಯಕ್ರಮ, ಮಧ್ಯಾಹ್ನ ಘಂಟೆ 1ರಿಂದ ಅನ್ನಸಂತರ್ಪಣೆ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಸತೀಶ್ ಎರ್ಮಾಳ್ ಅಧ್ಯಕ್ಷರು, ಬ್ರಹ್ಮಶ್ರೀ ನಾ.ಗು.ಸ. ಸೇವಾ ಸಂಘ (ರಿ.) ಬೆಳ್ಳಣ್ಣು, ಎಸ್. ಕೆ. ಸಾಲ್ಯಾನ್ ಉದ್ಯಮಿ, ಶ್ರೀ ಕೃಷ್ಣ ಸಮೂಹ ಸಂಸ್ಥೆಗಳು, ಸುನೀಲ್ ಕುಮಾರ್ ಶಾಸಕರು ಕಾರ್ಕಳ ವಿಧಾನ ಸಭಾ ಕ್ಷೇತ್ರ, ಡಾ| ವಿಜಯ ಕುಮಾರ್ ಮಕ್ಕಳ ಶಸ್ತ್ರ ಚಿಕಿತ್ಸಾ ತಜ್ಞರು, ಕೆ.ಎಂ.ಸಿ. ಮಣಿಪಾಲ್, ಶ್ರೀ ಪರಮಾನಂದ ಸಾಲ್ಯಾನ್ ರಂಗ ನಿರ್ದೇಶಕರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಡಾ| ಬಾಲಕೃಷ್ಣ ರಾವ್ ವೈದ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಣ್ಣು, ಡಾ| ಶ್ವೇತಾ ವೈದ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ನಂದಳಿಕೆ, ಡಾ| ಸತೀಶ್ ವೈದ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಚೇರಿಪೇಟೆ, ಡಾ| ಗುರುದತ್ ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಾ, ಜನಪ್ರತಿನಿಧಿಗಳಾಗಿ ಆಯ್ಕೆಗೊಂಡ ಬೆಳ್ಳಣ್ಣು ಪಂಚಾಯತ್‌ನ ಎಲ್ಲಾ ಸದಸ್ಯರಿಗೂ ಹಾಗೂ ಬೆಳ್ಮಣ್ಣು ಸಂಘದ ವ್ಯಾಪ್ತಿಯ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ಬಿಲ್ಲವ ಸಮಾಜ ಬಾಂಧವರಿಗೂ ಅಭಿನಂದನಾಪೂರ್ವಕ ಗೌರವ ಸಮರ್ಪಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ : ಪಕ್ಷಿ ರಕ್ಷಿಸಿ ಅಭಿಯಾನ

Thumbnail
Posted On: 05 Apr 2021, 09:50 PM

ಉಡುಪಿ : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ವತಿಯಿಂದ ಹಕ್ಕಿಗಳಿಗೆ ಕಾಳು ನೀರು ಒದಗಿಸುವ ಪಕ್ಷಿ ರಕ್ಷಿಸಿ ಅಭಿಯಾನ ಇಂದು ಅಜ್ಜರಕಾಡು ಭುಜಂಗ ಪಾರ್ಕ್ ಪರಿಸರದಲ್ಲಿ ನಡೆಯಿತು. ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮನುಷ್ಯನ ರಕ್ಷಣೆಗೆ ಬೇರೆ ಬೇರೆ ಇಲಾಖೆಗಳಿವೆ. ಆದರೆ ನಿಸರ್ಗದಲ್ಲಿ ಅತ್ಯಂತ ಸುಂದರ ಜೀವಿಗಳಾದ ಪಕ್ಷಿ ಸಂಕುಲವನ್ನು ರಕ್ಷಿಸುವ ಮಹತ್ವದ ಜವಾಬ್ದಾರಿ ಬುದ್ಧಿವಂತ ಜೀವಿಗಳಾದ ನಮ್ಮೆಲ್ಲರ ಮೇಲಿದೆ. ಅವುಗಳ ರಕ್ಷಣೆ ಮತ್ತು ಸಂತತಿ ವೃದ್ಧಿಯಾಗುವಂತೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಿಸರ್ಗವನ್ನು ರಕ್ಷಿಸಿದರೆ ನಿಸರ್ಗವೇ ನಮ್ಮನ್ನು ರಕ್ಷಿಸುತ್ತದೆ ಎಂದರು. ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಸ್ಥಾಪಕ ಅಧ್ಯಕ್ಷರಾದ ಡಾ. ಕೀರ್ತಿ ಪಾಲನ್ ಅಭಿಯಾನದ ಬಗ್ಗೆ ವಿಸ್ತ್ರತವಾಗಿ ಮಾಹಿತಿ ನೀಡಿದರು. ಸ್ವಯಂ ಸೇವಕರು ಗಿಡಮರಗಳಲ್ಲಿ ಹಕ್ಕಿಗಳಿಗೆ ಕಾಳು ಮತ್ತು ನೀರು ಇಡಲು ವ್ಯವಸ್ಥೆ ಮಾಡಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಮ್ ಆಯುರ್ವೇದ ಕಾಲೇಜಿನ ಪ್ರಾಧ್ಯಾಪಕ ಡಾ. ವಿಜಯ್ ನೆಗಳೂರು, ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಚಾಲಕ ಗಣೇಶ್ ಪ್ರಸಾದ್ ಜಿ. ನಾಯಕ್, ನ್ಯಾಯವಾದಿ ರಫೀಕ್ ಖಾನ್, ಜಗದೀಶ್ ಶೆಟ್ಟಿ, ಜೇಸಿಐ ಉಡುಪಿ ಸಿಟಿ ಅಧ್ಯಕ್ಷ ಉದಯ ನಾಯ್ಕ್, ಕಾರ್ಯದರ್ಶಿ ವೀಕ್ಷಿತ್, ಮಾಜಿ ಸೈನಿಕ ವಾದಿರಾಜ ಹೆಗ್ಡೆ, ಜಗದೀಶ್ ಬಂಟಕಲ್, ಬೇಬಿ ಶೆಟ್ಟಿ, ಕಾರ್ತಿಕ್ ಆಚಾರ್ಯ, ಸಂಗೀತ, ಮೋಕ್ಷಾ, ಶ್ಲೋಕ ಮುಂತಾದವರು ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕರ್ವಾಲು ಸ್ವಾಗತಿಸಿ, ನಿರೂಪಿಸಿದರು.

ಕುಲಾಲ ಸಂಘ ಪೆರ್ಡೂರು ಹಾಗೂ ಕಾಪು ಕುಲಾಲ ಯುವ ವೇದಿಕೆಯಿಂದ ವೈದ್ಯಕೀಯ ಚಿಕಿತ್ಸೆಗೆ ನೆರವು

Thumbnail
Posted On: 05 Apr 2021, 10:44 AM

ಕಾಪು : ಮಹೇಶ ಕುಲಾಲ್ ಗೋರೆಲು ಇವರ ಶಸ್ತ್ರಚಿಕಿತ್ಸೆ ಗೆ ನೆರವು ನೀಡುವಂತೆ ಕುಲಾಲ ಸಂಘ ಪೆರ್ಡೂರು(ರಿ) ಮತ್ತು ಕುಲಾಲ ಯುವವೇದಿಕೆ ಕಾಪು ಘಟಕ ಮಾಡಿಕೊಂಡ ವಾಟ್ಸಾಪ್ ಮನವಿಗೆ ಸ್ಪಂದಿಸಿ ಒಟ್ಟುಗೂಡಿದ ನಗದು ಮೊತ್ತವನ್ನು ಏಪ್ರಿಲ್ 4, ಆದಿತ್ಯವಾರ ಕುಲಾಲ ಸಂಘದ ಕಾರ್ಯಕಾರಿ ಮಂಡಳಿಯ ಮಾಸಿಕ ಸಭೆಯಲ್ಲಿ ಅವರ ಮನೆಯವರಿಗೆ ಅಧ್ಯಕ್ಷರಾದ ಐತು ಕುಲಾಲ್ ಕನ್ಯಾನ ಮತ್ತು ಇತರ ಪದಾಧಿಕಾರಿಗಳ ಸಮ್ಮುಖದಲ್ಲಿ ಹಸ್ತಾ0ತರಿಸಲಾಯಿತು. ವಿವಿಧ ಸಂಘಸಂಸ್ಥೆಗಳಿಂದ 80,000₹ ,google pay/account pay,ನಗದು ರೂಪದಲ್ಲಿ 1,05,174₹ ಇದುವರೆಗೆ ಒಟ್ಟುಗೂಡಿದ್ದು, ಒಟ್ಟು 1,85,174₹ ಧನ ಸಹಾಯವನ್ನು ಮಾಡಿದ ಎಲ್ಲ ಸಹೃದಯರನ್ನು ಕುಲಾಲ ಸಂಘ ಪೆರ್ಡೂರು ಆತ್ಮೀಯವಾಗಿ ಧನ್ಯವಾದವನ್ನು ಅರ್ಪಿಸುತ್ತಿದೆ. ಇನ್ನು ಮುಂದೆ ಧನಸಹಾಯ ನೀಡುವವರು ನೇರವಾಗಿ ಮಹೇಶ್ ಕುಲಾಲ್ ಅಕೌಂಟ್ ಗೆ ನೆರವು ನೀಡಬಹುದು ಎಂದು ಕುಲಾಲ ಸಂಘ ಪೆರ್ಡೂರು(ರಿ.) ಕುಲಾಲ ಯುವವೇದಿಕೆ ಕಾಪು ಘಟಕ ವಿನಂತಿಸಿದ್ದಾರೆ.