Updated News From Kaup

ಕಾಪು : SSLC ವಿದ್ಯಾರ್ಥಿಗಳಿಗೆ ಕಲಿಕಾ ಪೂರಕ TAB ನೀಡಲು ಹಳೆವಿದ್ಯಾರ್ಥಿಗಳಿಗೆ ಮನವಿ

Posted On: 08-12-2020 11:01PM

ಪಬ್ಲಿಕ್ ಟೀವಿ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ SSLC ಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ , ಪಠ್ಯ ವಿಷಯಗಳನ್ನು ಹಾಕಲಾದ ಪೂರಕ ಟ್ಯಾಬ್ಲೆಟ್ ಗಳನ್ನು ವಿತರಿಸಲು ನಿರ್ಧರಿಸಲಾಗಿತ್ತು.

ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಅಧ್ಯಕ್ಷರಾಗಿ ದಾಮೋದರ ಕಲ್ಮಾಡಿ ಆಯ್ಕೆ

Posted On: 08-12-2020 10:46PM

ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ (ರಿ.) ಆದಿ ಉಡುಪಿ ಇದರ 2020-2023ರ ಮೂರು ವರ್ಷದ ಅವಧಿಗೆ ಅಧ್ಯಕ್ಷರಾಗಿ ದಾಮೋದರ ಕಲ್ಮಾಡಿ ಆಯ್ಕೆಯಾಗಿದ್ದಾರೆ.

ಕ್ರಿಸ್ಮಸ್ ವೃಕ್ಷದೊಂದಿಗೆ ಸೆಲ್ಫಿ : ಫೊಟೋ ಸ್ಪರ್ಧೆ

Posted On: 08-12-2020 04:32PM

ಕಾಪು : ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕುರ್ಕಾಲು ಯುವಕ ಮಂಡಲದಿಂದ ಕ್ರಿಸ್ಮಸ್ ವೃಕ್ಷದೊಂದಿಗೆ ಸೆಲ್ಫಿ ಫೋಟೋ ಸ್ಪರ್ಧೆಯನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದು, ಪ್ರಥಮ ಬಹುಮಾನ ₹ 1,000 ಎರಡನೇ ಬಹುಮಾನ ₹750 ಮತ್ತು 3 ಸಮಾಧಾನಕರ ಬಹುಮಾನ ₹500 ಇರಲಿದೆ.

ಕುತ್ಯಾರಿನ ಹದಗೆಟ್ಟ ರಸ್ತೆಯ ದುರಸ್ತಿ ಎಂದು ಸಾರ್ವಜನಿಕರ ಪ್ರಶ್ನೆ

Posted On: 08-12-2020 03:06PM

ಶಿರ್ವ (ಕುತ್ಯಾರು) : ಪೈಪ್ ಅಳವಡಿಕೆಗೆ ರಸ್ತೆಯನ್ನು ಅಗೆದು ಹೊಂಡವಾಗಿ ತಿಂಗಳು ಕಳೆದರೂ ಅದನ್ನು ಮುಚ್ಚದೆ ವಾಹನ ಸವಾರರಿಗೆ ತೊಂದರೆಯಾಗಿ ಸಣ್ಣ ಪುಟ್ಟ ಅಪಘಾತಗಳಾಗುತ್ತಿರುವ ಸನ್ನಿವೇಶ ಮುದರಂಗಡಿ- ಶಿರ್ವ ಮುಖ್ಯ ರಸ್ತೆಯ ಕುತ್ಯಾರು ಬ್ಯಾಂಕ್ ಆಫ್ ಬರೋಡದ ಬಳಿ ಕಾಣಬಹುದಾಗಿದೆ.

ಭಾರತ್ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

Posted On: 08-12-2020 01:36PM

ಉಡುಪಿ: ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆಗಳು ಮಂಗಳವಾರ ದೇಶಾದ್ಯಂತ ಕರೆ ನೀಡಿರುವ ಭಾರತ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಉದ್ಯಾವರ : ಮಕ್ಕಳಿಗಾಗಿ ಜಾದೂ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ

Posted On: 08-12-2020 09:33AM

ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿಯ ನೇತೃತ್ವದಲ್ಲಿ  ಉದ್ಯಾವರದ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಸಭಾಭವನದಲ್ಲಿ ಸುವರ್ಣ ಮಹೋತ್ಸವ ವರ್ಷದ 35ನೇ ಕಾರ್ಯಕ್ರಮ ಮಕ್ಕಳಿಗಾಗಿ ಜಾದೂ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯು ಜರಗಿತು.

ಯುವ ಶಕ್ತಿಯ ಸದ್ಬಳಕೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಜಿ.ಜಗದೀಶ್

Posted On: 07-12-2020 10:43PM

ಉಡುಪಿ : ಜಿಲ್ಲೆಯ ಯುವಕ ಸಂಘಗಳಲ್ಲಿನ ಯುವಕರಿಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮತ್ತು ಅವರಿಗೆ ಅಗತ್ಯ ತರಬೇತಿಗಳನ್ನು ನೀಡುವ ಮೂಲಕ, ಅವರಲ್ಲಿರುವ ಯುವಶಕ್ತಿಯನ್ನು ಜಿಲ್ಲೆಯ ಅಭಿವೃಧ್ದಿ ಕಾರ್ಯಗಳಿಗೆ ಬಳಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ನೆಹರು ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಂಜಾರುಗಿರಿ ಪರಶುರಾಮಗೆ‌ ದೀಪೋತ್ಸವ

Posted On: 07-12-2020 09:45PM

ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಕಾರ್ತಿಕ ಮಾಸದಲ್ಲಿ ದೇವಸ್ಥಾನದ ತಂತ್ರಿಗಳಾದ ವೇ.ಮೂ. ಪಾಡಿಗಾರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ರಂಗಪೂಜಾ ದೀಪೋತ್ಸವ ನಡೆಯಿತು.ಊರ ಪರಊರ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದರು.

ನೀಲಾವರ ಗೋಶಾಲೆಗೆ ಬೈಹುಲ್ಲು ಸಮರ್ಪಣೆ

Posted On: 07-12-2020 05:59PM

ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವಹಿಂದು ಪರಿಷದ್, ಬಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ ಶಿರ್ವ ವಲಯ ಇವರ ವತಿಯಿಂದ ಗೋಶಾಲೆಗಾಗಿ ಬೈಹುಲ್ಲು ಸಂಗ್ರಹ ಅಭಿಯಾನವನ್ನು ಒಂದು ವಾರ ನಡೆಸಿ ಸುಮಾರು 325 ಕಟ್ಟು ಬೈಹುಲ್ಲನ್ನು ಸಂಗ್ರಹಿಸಿ ನೀಲಾವರ ಗೋಶಾಲೆಗೆ ಸಾಗಿಸಲು ಹಿರಿಯ ಹಿಂದೂ ನೇತಾರರಾದ ಬೆಳ್ಳೆಅಂಗಡಿ ಸದಾನಂದ ಶೆಣೈ ಹಾಗೂ ವಿಶ್ವಹಿಂದು ಪರಿಷದ್ ಶಿರ್ವ ವಲಯದ ಗೌರವಾಧ್ಯಕ್ಷರಾದ ಬೆಳ್ಳೆ ಮಧ್ವರಾಜ ಭಟ್ ಬೆಳ್ಳೆ ಚಾಲನೆ ನೀಡಿದರು.

ಇನ್ನಂಜೆ ಹಾಲು ಉತ್ಪಾದಕರ ಸಂಘಕ್ಕೆ ದ್ವಿತೀಯ ಅತ್ಯುತ್ತಮ ಸಂಘ ಪ್ರಶಸ್ತಿ

Posted On: 07-12-2020 12:31PM

ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇನ್ನಂಜೆ ಹಾಲು ಉತ್ಪಾದಕರ ಸಂಘುವು 2019 - 2020 ಸಾಲಿನಲ್ಲಿ ದ್ವಿತೀಯ ಅತ್ಯುತ್ತಮ ಸಂಘವೆಂದು ಘೋಷಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಇನ್ನಂಜೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಲಕ್ಷ್ಮಣ ಶೆಟ್ಟಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.