Updated News From Kaup

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಗೆ ಬಜೆಟ್ ನಲ್ಲಿ ಯಾವುದೇ ಘೋಷಣೆ ಇಲ್ಲ : ಉಡುಪಿ ಜಿಲ್ಲಾ NSUI ಉಪಾಧ್ಯಕ್ಷ ಮೊಹಮ್ಮದ್ ಝಮೀರ್

Thumbnail
Posted On: 09 Mar 2021, 10:23 AM

ಕೊರೊನ ಸಂಕಷ್ಟ ನಂತರ ಶಾಲಾ ಕಾಲೇಜು ಒಪನ್ ಆಗಿದೆ ಆದರೆ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಶಾಲಾ ಫೀಸ್ ಕಟ್ಟುವ ಪರಿಸ್ಥಿತಿಯಲ್ಲಿ ಇಲ್ಲ. ಬಸ್ ನಲ್ಲಿ ಬರುವ ಸಾಮರ್ಥ್ಯವು ಇಲ್ಲ ಹಾಗೂ ಕೊರೊನ ಸಂಕಷ್ಟದಿಂದ ಅನೇಕ ವಿಧ್ಯಾರ್ಥಿಗಳು ಶಾಲಾ ಕಾಲೇಜ್ ಗೆ ಹೋಗುವುದಕ್ಕೂ ಕಷ್ಟವಾಗಿದೆ. ಬಹುದಿನಗಳ ಬೇಡಿಕೆ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡಬೇಕು ಎಂದು ವಿದ್ಯಾರ್ಥಿ ಸಂಘಟನೆ ಸರ್ಕಾರಕ್ಕೆ ಮನವಿ ಮಾಡಿದ್ದರೂ ಕೂಡ ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡದೆ ಶಾಲಾ ಕಾಲೇಜು ವಿದ್ಯಾರ್ಥಿಗಳಾದ ನಮ್ಮ ಮನವಿಗೆ ಸ್ಪಂದಿಸದೇ ಇರುವುದು ಈ ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ. ಸರ್ಕಾರ ಕೂಡಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ಇಲ್ಲದಿದ್ದರೆ ಉಡುಪಿ ಜಿಲ್ಲಾದ್ಯಾಂತ NSUI ವತಿಯಿಂದ ಪ್ರತಿಭಟನೆಯನ್ನು ಮಾಡಲಿದ್ದೇವೆ ಎಂದು ಉಡುಪಿ ಜಿಲ್ಲಾ NSUI ವಿಧ್ಯಾರ್ಥಿ ಸಂಘಟನೆ ಉಪಾಧ್ಯಕ್ಷ ಮೊಹಮ್ಮದ್ ಝಮೀರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೋಂ ಡಾಕ್ಟರ್ ಫೌಂಡೇಶನ್ : ವೈಶಿಷ್ಟ್ಯ ಪೂರ್ಣ ವಿಶ್ವ ಮಹಿಳಾ ದಿನಾಚರಣೆ

Thumbnail
Posted On: 08 Mar 2021, 10:48 PM

ಉಡುಪಿ : 64 ರ ಇಳಿ ವಯಸ್ಸಲ್ಲೂ ಚರ್ಮುರಿ ಮಾರಿ ಒಳ್ಳೆಯ ರೀತಿಯಲ್ಲಿ ಇನ್ನೊಬ್ಬರ ಕೈ ನೋಡದೆ ಜೀವನ ನಡೆಸುತ್ತಿರುವ ಅಜ್ಜರಕಾಡು ಪಾರ್ಕ್ ಬಳಿ ಕಳೆದ 27 ವಷ೯ದಿಂದ ಚರ್ಮುರಿ ಮಾರಿ ಉಡುಪಿಯಲ್ಲಿ ಬಾಡಿಗೆ ಮನೆ ಯಲ್ಲಿ ಒಬ್ಬಂಟಿ ವಾಸ ವಿರುವ ಧೀರ ಮಹಿಳೆ ಶಿಕಾರಿಪುರ ಮೂಲದ ಶಾಕುಂತಲ ರವರನ್ನು ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಮಾ.8ರಂದು ಸ್ಪಂದನ ವಿಶೇಷ ಚೇತನ ಮಕ್ಕಳ ಶಾಲೆ ಉಪ್ಪುರುನಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾಯ೯ಕ್ರಮದಲ್ಲಿ ಸನ್ಮಾನಿಸಲಾಯಿತು. ಈ ಸಂದಭ೯ದಲ್ಲಿ ಜೇಸಿಐ ಉಡುಪಿ ಸಿಟಿ ವತಿಯಿಂದ ವೈದ್ಯಕೀಯ ರಂಗದಲ್ಲಿ ಸಾಧನೆ ಮಾಡಿದ ಡಾll ಸುಮಾ ಶೆಟ್ಟಿ, ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಸವಿತಾ ಶೆಟ್ಟಿ ಯವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸ್ಪಂದನಸಂಸ್ಥೆಯ ಮುಖ್ಯಸ್ಥರಾದ ಜನಾರ್ದನ್, ಉಮೇಶ್ ರಾಘವೇಂದ್ರಪೂಜಾರಿ , ಬಂಗಾರಪ್ಪ , ನಯನ ,ಶಶಿ ,ಕೀರ್ತಿರಾಜ್ ಸ್ವಚ್ಚ ಭಾರತ್ ಫ್ರೆಂಡ್ಸ್ ಸ್ಥಾಪಕ ಸಂಚಾಲಕ ಗಣೀಶ್ ಪ್ರಸಾದ್.ಜಿ ನಾಯಕ್, ಜಗದೀಶ್ ಶೆಟ್ಟಿ, ವಿಕ್ಷೀತ್ ಪೂಜಾರಿ, ನಯನಾ ಮಂತಾದವರುಉಪಸ್ಥಿತರಿದ್ದರು. ಡಾ|| ಶಶಿಕಿರಣ್ ಶೆಟ್ಟಿ ಪ್ರಸ್ತಾವನೆಗೈದರು. ರಾಘವೇಂದ್ರ ಪ್ರಭು,ಕವಾ೯ಲು ನಿರೂಪಿಸಿದರು.

ಮಕ್ಕಳ ಕೃಷಿ ಆಸಕ್ತಿಗೆ ನೆರವಾದ ಉಡುಪಿಯ ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ತಂಡ

Thumbnail
Posted On: 07 Mar 2021, 10:58 PM

ಉಡುಪಿ, ಮಾ.7 : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಬ್ರಹ್ಮಾವರದ ಮಠಪಾಡಿಯಲ್ಲಿ ಇರುವ ಕೂಲಿ ಕಾರ್ಮಿಕರ ವಸತಿ ಗೃಹಕ್ಕೆ ಭೇಟಿ ನೀಡಿದರು. ಈ ಸಂದರ್ಭ ಕಳೆದ ವರ್ಷ ಮಾಡಿದ ಕೃಷಿ -ಖುಷಿ ಕಾರ್ಯಕ್ರಮದ ಮಕ್ಕಳ ಉತ್ಸಾಹ ನೋಡಿ ಇಂದು ಅವರ ಅನುಕೂಲಕ್ಕೆ ಬೇಕಾದಂತೆ ಅಲ್ಲಿಯ ಜಾಗವನ್ನು ತರಕಾರಿ ಬೆಳೆ ಬೆಳೆಯಲು ಹದತಟ್ಟು ಮಾಡಿಕೊಡಲಾಯಿತು. ಈ ಕಾರ್ಯಕ್ರಮ ಆಸರೆ ತಂಡದ ಸ್ಥಾಪಕಧ್ಯಕ್ಷರ ಉಪಸ್ಥಿತಿಯಲ್ಲಿ ನಡೆಯಿತು. ಮಕ್ಕಳ ಉತ್ಸಾಹಕ್ಕೆ ಮುಂದಿನ ದಿನಗಳಲ್ಲಿ ನಮ್ಮ ಬೆಳೆ ನಾವು ಅನ್ನುವ ಮುಂದಿನ ಶೀರ್ಷಿಕೆಗೆ ಹೆಜ್ಜೆ ಇಡಲು ನಮ್ಮ ಆಸರೆ ತಂಡವು ಮುಂದಾಗಿದೆ. ಈ ಕಾರ್ಯಕ್ರಮದಲ್ಲಿ ಆಸರೆ ತಂಡದ ಸಂಸ್ಥಾಪಕಧ್ಯಕ್ಷರಾದ ಡಾ. ಕೀರ್ತಿ ಪಾಲನ್ ಅವರ ನೇತೃತ್ವದಲ್ಲಿ ನಡೆದಂತಹ ಈ ಕಾರ್ಯಕ್ರಮದಲ್ಲಿ ಜಯರಾಮ್ ನೈರಿ ಮಟಪಾಡಿ, ಸೂರ್ಯ ಗಾಣಿಗ,ಅಜಯ್ ರಾವ್, ವಿಜಯ ಬಾಲನಿಕೇತನ ಮಟಪಾಡಿಯ ಮಕ್ಕಳು ಉಪಸ್ಥಿತರಿದ್ದರು.

ಸುಳ್ಳು ಆರೋಪ ಹೊರಿಸಿದವರನ್ನು ಸತ್ಯ ಪ್ರಮಾಣಕ್ಕಾಗಿ ಆಹ್ವಾನಿಸಿದ ಶಂಕರ್ ಶಾಂತಿ

Thumbnail
Posted On: 06 Mar 2021, 08:19 PM

ಬ್ರಹ್ಮಾವರ : ಕಾಳಿಕಾಂಬಾ ದೇವಸ್ಥಾನದೊಳಗೆ ನನ್ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿಲ್ಲ ಎನ್ನುವ ಮೊಕ್ತೇಸರ ಶ್ರೀಧರ ಆಚಾರ್ಯ ಅವರು ಹೇಳಿರುವ ಹೇಳಿಕೆಯನ್ನು ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿ ಅವರು ಸಂಪೂರ್ಣ ಸುಳ್ಳಿನ ಆರೋಪವೆಂದು ಬಲವಾಗಿ ಖಂಡಿಸಿದ್ದು, ಇವಾಗ ಅವರು ಉಡುಪಿ, ದಕ್ಷಿಣ ಕನ್ನಡದ ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ್ದಾರೆ. ಕಚ್ಚೂರು ಕಾಳಿಕಾಂಬಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಮಾಹಿತಿ ಹಕ್ಕು ಕಾರ್ಯಕರ್ತ ಶಂಕರ್ ಶಾಂತಿ ಯವರಿಗೆ ಕಾಳಿಕಾಂಬಾ ದೇವಸ್ಥಾನದೊಳಗೆ ಹಲ್ಲೆಯಾಗಿದೆ ಎನ್ನುವ ವಿಚಾರ ಹರಿದಾಡುತ್ತಿದ್ದು ಇದು ಆಧಾರ ರಹಿತವಾಗಿದೆ. ಈ ಘಟನೆಗೂ ದೇವಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ, ಅನಾವಶ್ಯಕವಾಗಿ ವಿಶ್ವಕರ್ಮ ಸಮಾಜದ ಮೇಲೆ ಆರೋಪ ಮಾಡುತ್ತಿರುವುದು, ನಮ್ಮ ಸಮಾಜದ ಯುವಕರ ಮೇಲೆ ಕೇಸು ದಾಖಲಿಸಿರುವುದು ಸರಿಯಲ್ಲ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ವಡೇರಹೋಬಳಿ ಶ್ರೀಧರ ಆಚಾರ್ಯ ಅವರು ಮಾ.5, ರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ಈ ಬಗ್ಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಗಂಭೀರ ಸ್ವರೂಪದ ಗಾಯಾಳಾಗಿ ಚಿಕಿತ್ಸೆ ಪಡೆಯುತ್ತಿರುವ, ಸಾಮಾಜಿಕ ಕಾರ್ಯಕರ್ತ ಶಂಕರಶಾಂತಿ ಅವರು, ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಅಡುಗೆ ಕೋಣೆಯಲ್ಲಿ ಹಲ್ಲೆ ನಡೆಸಿ,ನಮ್ಮ ದೇವಸ್ಥಾನದಲ್ಲಿ ಯಾವುದೇ ಘಟನೆ ನಡೆದಿಲ್ಲ ಎಂದು ದೇವಸ್ಥಾನದ ಒಂದನೇ ಹಾಗೂ 3 ನೇ ಆಡಳಿತ ಮೊಕ್ತೇಸರ ಸುಳ್ಳು ಹೇಳಿಕೆ ಪತ್ರಿಕೆಗೆ ನೀಡಿರುತ್ತಾರೆ. ಈ ವಿಷಯದಲ್ಲಿ ಧರ್ಮಸ್ಥಳ ಮಂಜುನಾಥಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿಯಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮಂಡಳಿಯನ್ನು ಸತ್ಯ ಪ್ರಮಾಣಕ್ಕೆ ಕರೆಯುತ್ತಿದ್ದೇನೆ. ಕಾಳಿಕಾಂಬೆ ಹಾಗೂ ಕಲ್ಕುಡ ಸನ್ನಿಧಿಯಲ್ಲಿ ಸತ್ಯ ಪ್ರಮಾಣ ನಡೆಯಲಿ, ತಾವು ಬಾರದೆ ಇದ್ದಲ್ಲಿ ಧರ್ಮಸ್ಥಳ ಶ್ರೀ ಕ್ಷೇತ್ರದಲ್ಲಿ ಹಾಗೂ ಶಂಕರನಾರಾಯಣ ಕಲ್ಕುಡ ದೈವದಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ವಿರುದ್ಧ ಹುಯಿಲು (ದೂರು)ಕೊಡುತ್ತೇನೆಂದು ಹೇಳಿದ್ದಾರೆ.

ಇನ್ನಂಜೆ : ಪುರಾತನˌ ಕಂಚಿನಕೆರೆˌ ನಾಗಬನದ ಪ್ರಶ್ನಾಚಿಂತನೆ

Thumbnail
Posted On: 05 Mar 2021, 10:08 PM

ಇನ್ನಂಜೆ ಗ್ರಾಮದ ಉಂಡಾರು ದೇವಸ್ಡಾನ ದ ಈಶಾನ್ಯ ದಿಕ್ಕಿನಲ್ಲಿರುವ ಅತೀ ಪುರಾತನˌ ಕಂಚಿನಕೆರೆˌ ನಾಗಬನ ದ ಪ್ರಶ್ನಾಚಿಂತನೆಯು ಮಾಚ್೯ 14 ಆದಿತ್ಯವಾರ ಕಂಚಿನಕೆರೆ ಬನದ ಮುಂಭಾಗದಲ್ಲಿ ಜರಗಲಿರುವುದು. ನಾಗಬನಕ್ಕೆ ಸಂಬಂಧಿಸಿದವರು, ಊರ ಹತ್ತು ಸಮಸ್ತರು ಹಾಗೂ ನಾಗಬನ ಇಲ್ಲದೆ ಇರುವವರು ಈ ಪ್ರಶ್ನಾ ಚಿಂತನೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ಶ್ರೀ ವರ್ತೆಕಾಳಿ ಕಲ್ಕುಡ ದೈವಸ್ಥಾನ ಬನ್ನಂಜೆ, ಉಡುಪಿ ಕಾಲಾವಧಿ ಕೋಲ

Thumbnail
Posted On: 05 Mar 2021, 06:29 PM

ಶ್ರೀ ವರ್ತೆಕಾಳಿ ಕಲ್ಕುಡ ದೈವಸ್ಥಾನ ಬನ್ನಂಜೆ, ಉಡುಪಿ ಕಾಲಾವಧಿ ಕೋಲವು ಮಾಚ್೯ 7, ಆದಿತ್ಯವಾರ ನಡೆಯಲಿದೆ. ಮಧ್ಯಾಹ್ನ 12:30 ರಿಂದ 3 ರವರೆಗೆ ಅನ್ನಸಂತರ್ಪಣೆ, ರಾತ್ರಿ ಗಂಟೆ 7:30ಕ್ಕೆ ದರ್ಶನ ಮತ್ತು ಹೂವಿನ ಪೂಜೆ, ಪ್ರಸಾದ ವಿತರಣೆ ರಾತ್ರಿ 9:30ಕ್ಕೆ ದೈವಗಳ ಕೋಲ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕುತ್ಯಾರು : ಸಾಮೂಹಿಕ ಸತ್ಯನಾರಾಯಣ ಪೂಜೆ

Thumbnail
Posted On: 05 Mar 2021, 06:06 PM

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಕುತ್ಯಾರು ಮಹಿಳಾ ಬಳಗದ ವತಿಯಿಂದ ಗ್ರಾಮ ಪಂಚಾಯತ್ ಕುತ್ಯಾರು, ಯುವಕ ಮಂಡಲ, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು, ಗ್ರಾಮ ನೈರ್ಮಲ್ಯ ಸಮಿತಿಯ ಸಹಯೋಗದಲ್ಲಿ ವೇದ ಮೂರ್ತಿ ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಕೇಂಜ ಭಾರ್ಗವ ತಂತ್ರಿ ನೇತೃತ್ವದಲ್ಲಿ ಮಾರ್ಚ್ 6, ಶನಿವಾರ ಕುತ್ಯಾರು ಯುವಕ ಮಂಡಲದ ವೇದಿಕೆಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ, ರಾತ್ರಿ ಅನ್ನಸಂತರ್ಪಣೆ, ನೃತ್ಯ ವೈವಿಧ್ಯ, ನಿಮಿಷ ಕಲಾವಿದರು ಕಟಪಾಡಿ ಇವರಿಂದ ಏರೆಗ್ ಏರಾ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂತ ಮೇರಿ ಕಾಲೇಜು, ಶಿರ್ವ ಜಲಸಂರಕ್ಷಣೆ ಮಾಹಿತಿ ಕಾರ್ಯಕ್ರಮ

Thumbnail
Posted On: 03 Mar 2021, 10:09 PM

ಶಿರ್ವ: ಜಗತ್ತಿನಲ್ಲಿ ಮೂರನೇ ಯುದ್ಧ ಅಂತ ಹೆಸರಿಸುವುದಾದರೆ ಅದು ನೀರಿನ ಸಮಸ್ಯೆ.ಇಂದು ಪ್ರತಿವೊಂದು ರಾಷ್ಟ್ರವೂ ನೀರಿನ ಅಭಾವವನ್ನು ಅನುಭವಿಸುತ್ತಿದೆ. ನೀರಿನ ಸಮೃದ್ಧಿಯಲ್ಲಿ ಭಾರತವು ವಿಶ್ವದಲ್ಲಿ ಎರಡನೇ ದೇಶವಾಗಿದೆ. ಆದರೆ ಅದರ ಸರಿಯಾದ ಬಳಕೆ ಮತ್ತು ಸಂರಕ್ಷಣೆ ಇಲ್ಲದೆ ನೀರಿನ ಕ್ಷಾಮವನ್ನು ನಾವಿಂದು ಎದುರಿಸಬೇಕಾಗಿದೆ. ಇದರ ನಿವಾರಣೆಯಾಗಬೇಕಾದರೆ ನಾವಿಂದು ಮಳೆ ನೀರನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸಿ ಮರು ಬಳಕೆ ಮಾಡುವುದು ಅನಿವಾರ್ಯವಾಗಿದೆ ಎಂದು ರತ್ನ ಶ್ರೀ ಜೋಸೆಫ್ ಜಿ. ರೆಬೆಲ್ಲೊ ಅವರು ನೀರಿನ ಸಂರಕ್ಷಣೆ ಮತ್ತು ಮರುಪೂರಣದ ಬಗ್ಗೆ ಸಂತ ಮೇರಿ ಕಾಲೇಜಿನಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಪ್ರಾಯೋಗಿಕ ವಿವರಣೆಯ ಮೂಲಕ ನೀರಿನ ಸಂರಕ್ಷಣೆಯ ಬಗ್ಗೆ ಸವಿವರವಾದ ಮಾಹಿತಿ ನೀಡಿದರು. ನೀರಿನ ಬಳಕೆ ಮತ್ತು ಅದನ್ನು ಸರಿಯಾದ ರೀತಿಯಲ್ಲಿ ಶೇಖರಿಸಿ,ಮಿತವಾಗಿ ಬಳಸುವುದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಇಂದಿನ ತುರ್ತುಗಳಲ್ಲಿ ಒಂದು. ಇದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸ್‍ರವರು ಅಭಿಪ್ರಾಯಪಟ್ಟರು. ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಜೆಸಿಂತ ಡಿ’ಸೋಜ ಮಾತನಾಡಿ ಇಂತಹ ಕಾರ್ಯಕ್ರಮಗಳು ಹೆಚ್ಚು ಜನರಿಗೆ ತಲುಪುವುದು ನೀರಿನ ಬಳಕೆಯನ್ನು ಸಮರ್ಪಕವಾಗಿ ಮಾಡಲು ಅನುಕೂಲವಾಗುತ್ತದೆ ಹಾಗೂ ಈ ಕಾರ್ಯಕ್ರಮವನ್ನು ಕಾಲೇಜು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. ಈ ಕಾರ್ಯಕ್ರಮವನ್ನು ಕಾಲೇಜಿನ ರಕ್ಷಕ-ಶಿಕ್ಷಕ ಸಂಘ ಮತ್ತು ಗ್ರೀನ್ ಟೀಚರ್ ಪೋರಂ ಸಹಯೋಗದಲ್ಲಿ ಎನೆಸೆಸ್,ಎನ್‍ಸಿಸಿ,ರೋವರ್ಸ ಮತ್ತು ರೇಂಜರ್ಸ್,ಯೂತ್‍ರೆಡ್ ಕ್ರಾಸ್, ಘಟಕಗಳು ಜಂಟಿಯಾಗಿ ಏರ್ಪಡಿಸಿದವು. ವೇದಿಕೆಯಲ್ಲಿ ಘಟಕದ ಸಂಯೋಜಕರಾದ ಉಪನ್ಯಾಸಕರುಗಳಾದ ಯಶೋದ, ವಿಠಲ್ ನಾಯಕ್, ಪ್ರವೀಣ್ ಕುಮಾರ್, ಪ್ರೇಮನಾಥ್, ಮುರಳಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಅಧ್ಯಾಪಕ ಮತ್ತು ಅಧ್ಯಾಪಕ ಬಂಧುಗಳು ಹಾಗೂ ವಿವಿಧ ಘಟಕದ ವಿದ್ಯಾಥಿಗಳು ಭಾಗವಹಿಸಿದ್ದರು. ಸೌಜನ್ಯ ಕಾರ್ಯಕ್ರಮ ನಿರೂಪಿಸಿ, ಸಹನಾ ಸ್ವಾಗತಿಸಿ,ದೀಪ್ತಿ ವಂದಿಸಿದರು.

ಕಾಪು ಶ್ರೀ ಹೊಸಮಾರಿಗುಡಿ ಶಿಲಾ ಪುಷ್ಪ ಸಮರ್ಪಣಾ ಸಮಿತಿಯಿಂದ ಹೆಜಮಾಡಿ ಮಹಾಲಿಂಗೇಶ್ವರ ದೇವಳದಲ್ಲಿ ಗ್ರಾಮ ಸಮಿತಿ ರಚನಾ ಸಭೆ

Thumbnail
Posted On: 03 Mar 2021, 01:20 PM

ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಸುಗ್ಗಿ ಮಾರಿಪೂಜೆಯಂದು ನಡೆಯಲಿರುವ ಶಿಲಾ ಪುಷ್ಪ ಸಮರ್ಪಣೆಯ ಪ್ರಯುಕ್ತ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಸಮಾಜ ಸೇವಕ ಲೀಲಾದರ ಶೆಟ್ಟಿ ಯವರ ನೇತೃತ್ವದಲ್ಲಿ ಗ್ರಾಮ ಸಮಿತಿಯನ್ನು ರಚಿಸುವ ಬಗ್ಗೆ ಚರ್ಚಿಸಲಾಯಿತು. ಅರ್ಚಕ ಪದ್ಮನಾಭ ಅಚಾರ್ಯ, ಸಮಿತಿಯ ಸದಸ್ಯರುಗಳಾದ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ನಾಗೇಶ್ ಸುವರ್ಣ, ಮೋಹನ್ ಕಲ್ಯಾ, ಹರೀಶ್ ನಾಯಕ್ , ಸುಧಾಕರ್ ಶೆಟ್ಟಿ ಹೆಜಮಾಡಿ, ಭುಜಂಗ ಶೆಟ್ಟಿ ಹೆಜಮಾಡಿ,ರವೀಂದ್ರ ಮಲ್ಲಾರ್, ವಿಶ್ವನಾಥ್ ಶೆಟ್ಟಿ ಮಜೂರ್,ದಿವಾಕರ್ ಹೆಜಮಾಡಿ, ಶ್ರೀನಿವಾಸ ಕೋಟಿಯಾನ್, ಶುಭ ಬಂಗೇರ ಹೆಜಮಾಡಿ, ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಕೊರೊನ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅನ್ನದಾನ ಸೇವೆ ಇಂದಿನಿಂದ ಆರಂಭ

Thumbnail
Posted On: 02 Mar 2021, 02:42 PM

ಕೊರೊನ ಮಹಾಮಾರಿಯ ಹಿನ್ನೆಲೆಯಲ್ಲಿ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅನ್ನದಾನ ಸೇವೆ ಸ್ಥಗಿತಗೊಂಡಿದ್ದು.. ಒಂದು ವರ್ಷದ ಬಳಿಕ ಇಂದು ಅನ್ನದಾನ ಸೇವೆಗೆ ಚಾಲನೆ ನೀಡಲಾಯಿತು.. ಈ ಸಂದರ್ಭದಲ್ಲಿ ಅನ್ನಪ್ರಸಾದ ಸೇವೆಗೆ ದಾನಿಗಳಾದ ಬೋರ್ಗಲ್ಲು ಗುಡ್ಡೆ ಮನೆ ಪದ್ಮಾವತಿ ಪೂಜಾರ್ತಿ ಮತ್ತು ಮಕ್ಕಳು 1000 ಸ್ಟಿಲ್ ಪ್ಲೆಟ್ ಗಳನ್ನು ನೀಡಿದ್ದಾರೆ.. ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ..