Updated News From Kaup
ಕಾಪು : ಸೂರಜ್ ಮತ್ತು ವಿವೇಕ್ ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ ತರಬೇತಿಗೆ ಆಯ್ಕೆ
Posted On: 04 Apr 2021, 05:13 PM
ಕಾಪು : ಭಾರತೀಯ ಸಿ ಆರ್ ಪಿ ಎಫ್ (ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್) ತರಬೇತಿಗೆ ಕಾಪುವಿನ ಯುವಕರಾದ ಸೂರಜ್ ಮತ್ತು ವಿವೇಕ್ ಆಯ್ಕೆಯಾಗಿ, ತರಬೇತಿಗೆ ತೆರಳಿರುತ್ತಾರೆ. ಕಾಪು ತಾಲೂಕಿನ ಮಲ್ಲಾರ್ ನಿವಾಸಿ ರಾಧಾಕೃಷ್ಣ ಮತ್ತು ಜಯಂತಿಯವರ ಮಗ ಸೂರಜ್ ಹಾಗೂ ಕಳತ್ತೂರಿನ ಜಯರಾಮ್ ರಾವ್ ಮತ್ತು ಲೀಲಾವತಿಯವರ ಪುತ್ರ ವಿವೇಕ್ ಭಾರತ ಮಾತೆಯ ಸೇವೆ ಮಾಡಲು ಆಯ್ಕೆಯಾಗಿರುವುದು ಹೆತ್ತವರು ಮತ್ತು ಊರಿನವರಿಗೆ ಸಂತಸ ತಂದಿದೆ.
ಕಾಪುವಿನಲ್ಲಿ ಉದ್ಘಾಟನೆಗೊಂಡ ಬಲೆ ತುಲು ಲಿಪಿ ಕಲ್ಪುಗ ತರಬೇತಿ ಕಾರ್ಯಾಗಾರ
Posted On: 04 Apr 2021, 05:04 PM
ಕಾಪು : ತುಳು ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಅನಿವಾರ್ಯತೆಯಿದೆ. ನಮ್ಮ ಭಾಷೆಯನ್ನು ನಮ್ಮೂರಿನ ಫಲಕಗಳಲ್ಲಿ ಅಳವಡಿಸಬೇಕಾಗಿದೆ. ತುಳು ಲಿಪಿ ಕಲಿಕೆಯು ನಿರಂತರತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಪ್ರತಿ ಶಾಲೆಯಲ್ಲಿ ವಾರದಲ್ಲಿ ಒಂದು ದಿನವಾದರೂ ತುಳು ಲಿಪಿ ಕಲಿಕೆಯನ್ನು ಅಳವಡಿಸುವ ನಿಟ್ಟಿನಲ್ಲಿ ಯೋಚಿಸಬೇಕಾಗಿದೆ ಎಂದು ಕಾಪು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ಕಾಪು ಇದರ ಅಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ ಹೇಳಿದರು. ಅವರು ಕಾಪು ಸಿ.ಎ ಬ್ಯಾಂಕ್ ಕಟ್ಟಡದ ಭಾಸ್ಕರ ಸೌಧ ಸಭಾಂಗಣದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ (ರಿ.), ಜೇಸಿಐ ಕಾಪು, ಯುವವಾಹಿನಿ (ರಿ.) ಕಾಪು ಘಟಕ, ನಮ್ಮ ಕಾಪು ನ್ಯೂಸ್ ಸಂಯುಕ್ತ ಆಶ್ರಯದಲ್ಲಿ ಜರಗಿದ ಬಲೆ ತುಲು ಲಿಪಿ ಕಲ್ಪುಗ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ಆಕಾಶ್ ರಾಜ್ ಜೈನ್ ಮಾತನಾಡಿ ತುಳು ಭಾಷೆಯ ಶಬ್ದಗಳನ್ನು ಪ್ರದಕ್ಷಿಣಾಕಾರವಾಗಿ ಬರೆಯುವುದರಿಂದ ದೈವತ್ವದ ಭಾಷೆ, ಅಳುಪರ ಕಾಲದಲ್ಲಿ ಮನ್ನಣೆಯಿದ್ದ ಭಾಷೆ ಕಾಲಕ್ರಮೇಣ ಮನ್ನಣೆಯಿಲ್ಲದಾಯಿತು. ಇದೀಗ ಸರ್ವರೂ ಮನ್ನಣೆಯಿತ್ತರೂ ಸರಕಾರದ ಮಟ್ಟದಲ್ಲಿ ಅಧಿಕೃತ ಭಾಷೆಯ ಮನ್ನಣೆ ನೀಡುತ್ತಿಲ್ಲ ಈ ನಿಟ್ಟಿನಲ್ಲಿ ಸರ್ವರ ಪ್ರಯತ್ನ ಅಗತ್ಯ ಎಂದರು. ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ತಾರಾ ಉಮೇಶ್ ಆಚಾರ್ಯ, ಜೇಸಿಐ ವಲಯ 15ರ ಉಪಾಧ್ಯಕ್ಷರಾದ ಜೇಸಿ ಗಿರೀಶ್ ಎಸ್. ಪಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಉಪಾಧ್ಯಕ್ಷರಾದ ಉದಯ ಅಮೀನ್ ಮಟ್ಟು, ಜೈ ತುಳುನಾಡ್ ಸಂಘಟನೆಯ ಅಧ್ಯಕ್ಷರಾದ ಸುದರ್ಶನ್ ಸುರತ್ಕಲ್, ಯುವವಾಹಿನಿ ಕಾಪು ಘಟಕದ ಅಧ್ಯಕ್ಷೆ ಸೌಮ್ಯ ರಾಕೇಶ್, ಜೇಸಿಐ ಕಾಪು ಅಧ್ಯಕ್ಷೆ ಜೇಸಿ ಅರುಣಾ ಐತಾಳ್, ನಮ್ಮ ಕಾಪು ನ್ಯೂಸ್ ನ ಮುಖ್ಯಸ್ಥರಾದ ವಿಕ್ಕಿ ಮಡುಂಬು, ತುಳು ಶಿಕ್ಷಕರಾದ ರಾಜೇಶ್ ತುಳುವೆ, ಅಕ್ಷತಾ ಕುಲಾಲ್, ಪೂರ್ಣಿಮಾ ದಕ್ಷ, ನೀತಾ ಕೆಮ್ತೂರು ಉಪಸ್ಥಿತರಿದ್ದರು. ಸೌಮ್ಯ ರಾಕೇಶ್ ಸ್ವಾಗತಿಸಿ, ಪತ್ರಕರ್ತ ರಾಕೇಶ್ ಕುಂಜೂರು ಪ್ರಸ್ತಾವಿಸಿ, ಶಿವಣ್ಣ ಬಾಯಾರು ನಿರೂಪಿಸಿ, ವಿಕ್ಕಿ ಮಡುಂಬು ವಂದಿಸಿದರು.
ಬಹಳ ದಿನಗಳಿಂದ ಹಲವರನ್ನು ಕಾಡಿದ ವೆರಿಕೋಸ್ ವೇಯ್ನ್ ಗುಣಮುಖವಾಗುವ ಕಾಲ ಬಂದಿದೆ ಇದೀಗ ಮಂಗಳೂರಿನಲ್ಲಿ....ವೆರಿಕೋಸ್ ವೇಯ್ನ್ ಗೆ ಆಪರೇಷನ್ ರಹಿತ ಚಿಕಿತ್ಸೆ
Posted On: 03 Apr 2021, 02:17 PM
ಬಹಳ ದಿನಗಳಿಂದ ಹಲವರನ್ನು ಕಾಡುತ್ತಿರುವ ವೆರಿಕೋಸ್ ವೇಯ್ನ್ ಗೆ ಆಪರೇಷನ್ ರಹಿತ ಚಿಕಿತ್ಸೆಯ ಮೂಲಕ ಗುಣಮುಖವಾಗುವ ಕಾಲ ಬಂದಿದೆ. ಹೆಚ್ಚಾಗಿ ನಿಂತುಕೊಂಡು ಅಥವಾ ಕುಳಿತುಕೊಂಡು ಕೆಲಸ ಮಾಡುವುದು, ಕಲಬೆರಕೆ ಆಹಾರ, ಅತಿಯಾದ ಮಾಂಸ ಸೇವನೆ ಮಾಡುವವರಿಗೆ ಅಥವಾ ಗರ್ಭಿಣಿಯರಲ್ಲಿ ಈ ಖಾಯಿಲೆ ಹೆಚ್ಚು ಕಂಡುಬರುತ್ತದೆ. ವಂಶ ಪಾರಂಪರ್ಯವಾಗಿಯೂ ಈ ಕಾಯಿಲೆ ಬರುತ್ತದೆ ಎನ್ನುವುದನ್ನು ವೈದ್ಯರ ಅಭಿಪ್ರಾಯವಾಗಿದೆ. ವೆರಿಕೋಸ್ ವೇಯ್ನ್ chronic venous insufficiency ಎಂಬುದರ ಲಕ್ಷಣವಾಗಿದ್ದು, ಡಾ. ಉರಾಳ್ಸ್ ಅವರ ಚಿಕಿತ್ಸೆಯಿಂದ ಇದಕ್ಕೆ ಸಂಬಂಧಪಟ್ಟ ಬೇರೆ ಲಕ್ಷಣಗಳು ಸಹ ಗುಣವಾಗುತ್ತಿರುವುದನ್ನು ಖಚಿತಪಡಿಸಲಾಗಿದೆ. chronic venous insufficiency ಕಾಯಿಲೆಗೆ ಇಲ್ಲಿಯವರೆಗೆ ಕೇವಲ ರೋಗ ಲಕ್ಷಣಕ್ಕೆ ಮಾತ್ರ ಚಿಕಿತ್ಸೆ ನೀಡುತ್ತಿದ್ದುದು ಬಿಟ್ಟರೆ ರೋಗಕ್ಕೆ ಚಿಕಿತ್ಸೆ ದೊರೆಯುತ್ತಿರಲಿಲ್ಲ. ನಮ್ಮ ಚಿಕಿತ್ಸೆಯಲ್ಲಿ ಈ ರೋಗಕ್ಕೆ ಸಂಬಂಧಿತ ಇತರೇ ಕಾಯಿಲೆಗಳು ಗುಣವಾಗುತ್ತವೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9980362370
ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಮುಲ್ಕಾಡಿ : 29 ನೇ ವಾರ್ಷಿಕ ಭಜನಾ ಮಂಗಲೋತ್ಸವ
Posted On: 03 Apr 2021, 01:13 PM
ಕಾಪು : ಮುಲ್ಕಾಡಿ ಕೋಡಿ ಪಂಜಿಮಾರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ 29 ನೇ ವಾರ್ಷಿಕ ಭಜನಾ ಮಂಗಲೋತ್ಸವವು ಏಪ್ರಿಲ್ 3, ಶನಿವಾರ ಸಂಜೆ 4ರಿಂದ ರಾತ್ರಿ 8:30 ರವರೆಗೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ : ಫುಡ್ ಕೋರ್ಟ್, ಕಾಯಕಿಂಗ್, ಬೋಟಿಂಗ್ ವ್ಯವಸ್ಥೆಗಳ ಉದ್ಘಾಟನೆ
Posted On: 02 Apr 2021, 07:52 PM
ಕಾಪು : ಉಡುಪಿ ಜಿಲ್ಲೆಯ ಜನಾಕರ್ಷಣೆಯ ತಾಣ ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್ಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಭೇಟಿ ನೀಡಿ ಫುಡ್ ಕೋರ್ಟ್, ಪ್ರವಾಸೀ ಆಕರ್ಷಣೆಗಾಗಿ ಆರಂಭಿಸಲಾದ ಕಾಯಕಿಂಗ್, ಬೋಟಿಂಗ್ ವ್ಯವಸ್ಥೆಗಳನ್ನು ಉದ್ಘಾಟಿಸಿ, ಕಾಮಿನೀ ಹೊಳೆಯಲ್ಲಿ ಕಾಯಕಿಂಗ್ ಅನುಭವವನ್ನು ಆನಂದಿಸಿದರು. ಈ ಸಂದರ್ಭ ಮಾತನಾಡಿದ ಅವರು ಬ್ಲೂ ಫ್ಲ್ಯಾಗ್ ಬೀಚ್ನಲ್ಲಿ ರಾಜ್ಯ ಸರಕಾರದ ಅನುದಾನದೊಂದಿಗೆ ತೇಲುವ ರೆಸ್ಟೋರೆಂಟ್ ಪ್ರಾರಂಭ, ಈಗಿನ ೪೯ ಮಂದಿ ಸಿಬ್ಬಂದಿ ವರ್ಗವನ್ನು ಉಳಿಸಿಕೊಂಡು ಮುಂದಿನ ಎರಡು ವರ್ಷಗಳಲ್ಲಿ ೧೦೦ ಮಂದಿಗೆ ಉದ್ಯೋಗ ಸೃಷ್ಟಿ ಯೋಜನೆ, ಹೆಚ್ಚಿನ ಪ್ರವಾಸೀ ಆಕರ್ಷಣೆ ಹಾಗೂ ತೂಗು ಸೇತುವೆ ನಿರ್ಮಾಣದ ಮೂಲಕ ಅಭಿವೃದ್ಧಿಗಳಿಗೆ ಆದ್ಯತೆಯನ್ನು ನೀಡಲಾಗುತ್ತಿದೆ. ಇದೀಗ ಮೂರು ಕಾಯಕಿಂಗ್ ಬೋಟ್ಗಳಿದ್ದು ಇನ್ನೂ ಮೂರನ್ನು ಶೀಘ್ರದಲ್ಲೇ ಸೇರ್ಪಡೆಗೊಳಿಸಲಾಗುವುದು. ಕಾಯಕಿಂಗ್ಗೆ ಅರ್ಧ ಗಂಟೆಗೆ ೧೦೦ರೂ. ದರ ಹಾಗೂ ಬೋಟಿಂಗ್ಗೆ ಪ್ರತೀ ಪ್ರವಾಸಿಗರಿಗೆ ೫೦ರೂ. ದರ ನಿಗದಿಪಡಿಸಲಾಗಿದೆ ಎಂದೂ ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾಧಿಕಾರಿಗಳೊಂದಿಗೆ ಪ್ರವಾಸೋದ್ಯಮ ಇಲಾಖಾ ಉಪ ನಿರ್ದೇಶಕ ಸೋಮಶೇಖರ್, ಬ್ಲೂ ಫ್ಲ್ಯಾಗ್ ಬೀಚ್ ನೋಡೆಲ್ ಅಧಿಕಾರಿ ಚಂದ್ರಶೇಖರ್ ನಾಯಕ್, ಮೀನುಗಾರಿಕಾ ಇಲಾಖಾ ಉಪ ನಿರ್ದೇಶಕ ಗಣೇಶ್, ಜಿ. ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ, ಉಡುಪಿ ತಾ. ಪಂ. ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಮನೋಹರ ಶೆಟ್ಟಿ ಕಾಪು ಹಾಗೂ ಕಾರ್ಯದರ್ಶಿ ಗೌರವ್ ಶೇಣವ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಯಶೋದ ಮತ್ತಿತರು ಉಪಸ್ಥಿತರಿದ್ದರು.
ಏಪ್ರಿಲ್ 3 : ಇನ್ನಂಜೆಯ ವಿಠೋಭ ಭಜನಾ ಮಂಡಳಿ ವಾರ್ಷಿಕ ವರ್ಧಂತ್ಯೋತ್ಸವ, ಆಶ್ಲೇಷಾ ಬಲಿ, ಭಜನಾ ಮಂಗಳೋತ್ಸವ
Posted On: 02 Apr 2021, 05:36 PM
ಕಾಪು : ಇನ್ನಂಜೆ ಗೋಳಿಕಟ್ಟೆಯ ಶ್ರೀ ವಿಠೋಭ ಭಜನಾ ಮಂಡಳಿ (ರಿ.) ಇದರ ವಾರ್ಷಿಕ ವರ್ಧಂತ್ಯೋತ್ಸವ, ಆಶ್ಲೇಷಾ ಬಲಿ, ಭಜನಾ ಮಂಗಳೋತ್ಸವ ಮತ್ತು ಅನ್ನಸಂತರ್ಪಣೆಯು ಏಪ್ರಿಲ್ 3, ಶನಿವಾರ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತರಾದ ಸೆನ್ ಅಪರಾಧ ಪೋಲಿಸ್ ಠಾಣೆ ಉಡುಪಿಯ ರಾಮಚಂದ್ರ ನಾಯಕ್
Posted On: 02 Apr 2021, 04:43 PM
ಕಾಪು : ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಸೆನ್ ಅಪರಾಧ ಪೊಲೀಸ್ ಠಾಣೆ ಉಡುಪಿಯ ಪೊಲೀಸ್ ನಿರೀಕ್ಷಕರಾಗಿರುವ ರಾಮಚಂದ್ರ ನಾಯಕ್ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತರಾಗಿದ್ದಾರೆ. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ಹಲವಾರು ಅಪರಾಧ ಕೃತ್ಯಗಳನ್ನು ಭೇದಿಸಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಿದ ಹೆಗ್ಗಳಿಕೆ ಇವರದು. ಬ್ರಹ್ಮಾವರ ತಾಲೂಕಿನ ಬಾರಕೂರಿನ ನಿವಾಸಿಯಾಗಿರುವ ಇವರು 1993 ಕೆಲಸಕ್ಕೆ ಸೇರಿ, 2003ರಲ್ಲಿ ಪೊಲೀಸ್ ಉಪ ನಿರೀಕ್ಷಕರಾಗಿ, 2011ರಲ್ಲಿ ಪೊಲೀಸ್ ನಿರೀಕ್ಷಕರಾಗಿ ಶಿವಮೊಗ್ಗ, ಮೂಡಬಿದ್ರೆ, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಮತ್ತು ಕಾರವಾರ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಾರೆ.
ಪಡುಬಿದ್ರಿ : ಕೊರೊನಾ ತಡೆಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮ
Posted On: 02 Apr 2021, 03:49 PM
ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ, ಗ್ರಾಮ ಪಂಚಾಯತ್ ಪಡುಬಿದ್ರಿ, ನವಶಕ್ತಿ ಮಹಿಳಾ ಮಂಡಳಿ ಮತ್ತು ಭಜನಾ ಮಂಡಳಿ ಪಡುಬಿದ್ರಿ, ನವಶಕ್ತಿ ವಿಮೆನ್ಸ್ ವೆಲ್ಫೇರ್ ಸೊಸೈಟಿ (ರಿ.) ಪಡುಬಿದ್ರಿ ಸಂಯುಕ್ತ ಆಶ್ರಯದಲ್ಲಿ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಏಪ್ರಿಲ್ 5, ಸೋಮವಾರ ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ 9.30 ರಿಂದ ಮಧ್ಯಾಹ್ನ 1ರವರೆಗೆ ಕೊರೊನಾ ತಡೆಗೆ ಲಸಿಕೆಯೇ ಶ್ರೀರಕ್ಷೆ ಅಭಿಯಾನದನ್ವಯ ಉಚಿತ ಲಸಿಕೆ ನೀಡುವ ಕಾರ್ಯಕ್ರಮ ಜರಗಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು, ಆಸಕ್ತರು ಬರುವಾಗ ಕಡ್ಡಾಯವಾಗಿ ಆಧಾರ್ ಕಾಡ್೯ ತರಬೇಕು ಹಾಗೂ ಮೊಬೈಲ್ ನಂಬರ್ ನೀಡಬೇಕು, 28 ದಿನಗಳ ಬಳಿಕ ಎರಡನೆಯ ಹಂತದ ಲಸಿಕೆಯನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು : ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏಪ್ರಿಲ್ 4 ರಂದು ಬಲೆ ತುಲು ಲಿಪಿ ಕಲ್ಪುಗ ಶಿಬಿರ
Posted On: 02 Apr 2021, 03:28 PM
ಕಾಪು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ (ರಿ.), ಜೇಸಿಐ ಕಾಪು, ಯುವವಾಹಿನಿ (ರಿ.) ಕಾಪು ಘಟಕ, ನಮ್ಮ ಕಾಪು ನ್ಯೂಸ್ ಸಂಯುಕ್ತ ಆಶ್ರಯದಲ್ಲಿ ಉಚಿತವಾಗಿ ಬಲೆ ತುಲು ಲಿಪಿ ಕಲ್ಪುಗ ಶಿಬಿರವು ಏಪ್ರಿಲ್ 4, ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಕಾಪು ಸಿ.ಎ ಬ್ಯಾಂಕ್ ಕನ್ನಡ ಭಾಸ್ಕರ ಸೌಧ ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮವನ್ನು ಕಾಪು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ಕಾಪು ಇದರ ಅಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ಆಕಾಶ್ ರಾಜ್ ಜೈನ್ ಮತ್ತು ತಾರಾ ಉಮೇಶ್ ಆಚಾರ್ಯ, ಜೇಸಿಐ ವಲಯ 15ರ ಉಪಾಧ್ಯಕ್ಷರಾದ ಜೇಸಿ ಗಿರೀಶ್ ಎಸ್. ಪಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಉಪಾಧ್ಯಕ್ಷರಾದ ಉದಯ ಅಮೀನ್ ಮಟ್ಟು ಭಾಗವಹಿಸಲಿದ್ದಾರೆ. ತುಳು ಶಿಕ್ಷಕರಾದ ರಾಜೇಶ್ ತುಳುವೆ, ಅಕ್ಷತಾ ಕುಲಾಲ್, ಪೂರ್ಣಿಮಾ ದಕ್ಷ, ನೀತಾ ಕೆಮ್ತೂರು ಮಾರ್ಗದರ್ಶನದಲ್ಲಿ ಏಪ್ರಿಲ್ ತಿಂಗಳ ಪ್ರತಿ ಆದಿತ್ಯವಾರದಂದು ಮಧ್ಯಾಹ್ನ 2.30 ರಿಂದ ಸಂಜೆ 5ರವರೆಗೆ ತರಗತಿಗಳು ನಡೆಯಲಿದ್ದು, ವಾರದ ನಿರ್ಧಿಷ್ಟ ದಿನಗಳಲ್ಲಿ ಆನ್ಲೈನ್ ಮೂಲಕ ಪುನರಾವಲೋಕನ ನಡೆಯಲಿದೆ. ಶಿಬಿರದಲ್ಲಿ ಪಾಲ್ಗೊಂಡು ತೇರ್ಗಡೆಯಾದವರಿಗೆ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸರ್ಟಿಫಿಕೆಟ್ ನೀಡಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9448501172
ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಟೋಲ್ ಗೇಟ್ ನಿರ್ಮಾಣ ಮಾಡಲು ವಾಹನಗಳ ಗುಪ್ತ ಸರ್ವೆ : ಸಾರ್ವಜನಿಕರಿಂದ ಆಕ್ರೋಶ
Posted On: 02 Apr 2021, 12:43 PM
ಕಾಪು : ಪಡುಬಿದ್ರಿ ಸಮೀಪದ ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕ ಸಮೀಪ ಟೋಲ್ ಗೇಟ್ ನಿರ್ಮಾಣ ಮಾಡಲು ವಾಹನಗಳ ಸರ್ವೆ ಮಾಡುತ್ತಿದ್ದ ತಂಡವೊಂದನ್ನು ಸಾರ್ವಜನಿಕರು ತಡೆದ ಘಟನೆ ನಡೆದಿದೆ. ಗುಪ್ತವಾಗಿ ವಾಹನಗಳ ಸರ್ವೆ ನಡೆಸುತ್ತಿದ್ದ ತಂಡದ ಬಗ್ಗೆ ಸಂಶಯಗೊಂಡ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ಅವರನ್ನು ವಿಚಾರಿಸಿದಾಗ ಸತ್ಯ ವಿಚಾರ ಬಾಯ್ಬಿಟ್ಟಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪಡುಬಿದ್ರಿ ಪೊಲೀಸರು ತಂಡವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ರಾಜ್ಯ ಹೆದ್ದಾರಿಯ ಟೋಲ್ಗೇಟ್ ನಿರ್ಮಾಣದ ಬಗ್ಗೆ ಮತ್ತು ಗುಪ್ತವಾಗಿ ಸರ್ವೆ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
