Updated News From Kaup
ಕಟಪಾಡಿ : ಪಾಡ್ದನ ಕಲಾವಿದೆ ಗೋಪಿ ಪಾಣಾರರಿಗೆ ಜಾನಪದ ಸಿರಿ ಪ್ರಶಸ್ತಿ ಪ್ರದಾನ
Posted On: 03-12-2020 06:00PM
ತಂತ್ರಜ್ಞಾನದ ಅತಿಯಾದ ಬಳಕೆಯನ್ನು ಯುವ ಸಮುದಾಯ ಮಾಡುತ್ತಿದ್ದು ಇದರಿಂದ ನಮ್ಮ ಸಂಸ್ಕೃತಿ, ಜಾನಪದ ವಿಚಾರಗಳ ಕಡೆಗೆ ನಿರಾಸಕ್ತರಾಗುತ್ತಿದ್ದಾರೆ. ಮಕ್ಕಳಲ್ಲಿ ಇವೆಲ್ಲದರ ಪರಿಚಯ ಮಾಡಿಕೊಡಬೇಕಾದ ಅನಿವಾರ್ಯತೆಯಿದೆ ಎಂದು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಸಖರಾಮ ಹಾವಂಜೆ ಹೇಳಿದರು. ಕಟಪಾಡಿಯ ಎಸ್ ವಿ ಎಸ್ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ತು, ಬೆಂಗಳೂರು ಕನ್ನಡ ಜಾನಪದ ಪರಿಷತ್ತು, ಉಡುಪಿ ಜಿಲ್ಲಾ ಘಟಕ ಮತ್ತು ಕನ್ನಡ ಜಾನಪದ ಪರಿಷತ್ತು, ಕಾಪು ತಾಲೂಕು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಜರಗಿದ ಕನಕದಾಸ ಜಯಂತಿ ಆಚರಣೆ, ಕನಕದಾಸರ ಗೀತೆಗಳ ಗಾಯನ, ಜಾನಪದ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸುಗಮ ಚುನಾವಣೆಗೆ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್
Posted On: 03-12-2020 09:10AM
ಉಡುಪಿ : ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಎರಡು ಹಂತದ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು, ಸುಗಮವಾಗಿ ಮತ್ತು ಯಾವುದೇ ಲೋಪಗಳಿಲ್ಲದೇ ನಡೆಸಲು ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ , ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಿರುವೆರ್ ಕುಡ್ಲ : ಪೊರ್ಲು ಬಾಲೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
Posted On: 02-12-2020 07:15AM
ಬಿರುವೆರ್ ಕುಡ್ಲ(ರಿ)ಫ್ರೆಂಡ್ಸ್ ಬಳ್ಳಾಲ್ ಬಾಗ್ ಇದರ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ(ರಿ) ಉಡುಪಿ ಘಟಕ" ಹಾಗೂ ಮಹಿಳಾ ವೇದಿಕೆ ಆಯೋಜಿಸಿದ್ದ ಬಿರುವೆರ್ ಕುಡ್ಲ ಪೊರ್ಲುಬಾಲೆ ಸ್ಪರ್ಧೆಯಲ್ಲಿ ವಿಜೇತರಾದ ಮುದ್ದು ಕಂದಮ್ಮಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಹಾಗೂ ಕು.ನಿಖಿತಾಳಿಗೆ ಸನ್ಮಾನ ಕಾರ್ಯಕ್ರಮ ನಿನ್ನೆ ಹಿಂದಿ ಪ್ರಚಾರ ಸಮಿತಿಯಲ್ಲಿ ನಡೆಯಿತು.
ಎರ್ಮಾಳು : ಲಕ್ಷ್ಮೀ ಮಾಧವ ಸಾಂಸ್ಕೃತಿಕ ಕೇಂದ್ರ ಉದ್ಘಾಟನೆ
Posted On: 01-12-2020 10:58PM
ಎರ್ಮಾಳಿನಲ್ಲಿ "ಲಕ್ಷ್ಮೀಮಾಧವ" ಸಾಂಸ್ಕೃತಿಕ ಕಲಾಕೇಂದ್ರವನ್ನು ನಾರ್ತ್ ಮುಂಬಯಿ ಬಿಜೆಪಿ ಉಪಾಧ್ಯಕ್ಷ ಹರೀಶ ಶೆಟ್ಟಿ ಅವರು ಉದ್ಘಾಟಿಸಿದರು .
ಏಡ್ಸ್ ತಡೆಗೆ ಜಾಗೃತಿ ಮೂಡಿಸುವುದು ಅಗತ್ಯ- ಜಿಲ್ಲಾಧಿಕಾರಿ ಜಿ. ಜಗದೀಶ್
Posted On: 01-12-2020 06:09PM
ಉಡುಪಿ, ಡಿ.1: ಏಡ್ಸ್ ಸೋಂಕು ತಡೆಗಟ್ಟಲು, ಸೋಂಕು ಹರಡುವಿಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಇಂದು ನಗರದ ಪುರಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ರೆಡ್ಕ್ರಾಸ್ ಮತ್ತು ಎನ್.ಎಸ್.ಎಸ್ ಘಟಕ ಉದ್ಯಾವರ, ನಾಗರಿಕ ಸಹಾಯವಾಣಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಉದ್ಭವ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಬೆಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ ಹೆಚ್.ಐ.ವಿ ಸೋಂಕಿನ ತಡೆಗಾಗಿ ಜಾಗತಿಕ ಒಗ್ಗಟ್ಟು ಹಾಗೂ ಜವಾಬ್ದಾರಿ ಹಂಚಿಕೆ ಎಂಬ ಘೋಷ ವಾಕ್ಯದೊಂದಿಗೆ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬೈಕಂಪಾಡಿ : ಬಲೆಗೆ ಸಿಲುಕಿ ಮೀನುಗಾರನ ಸಾವು
Posted On: 01-12-2020 05:26PM
ಮಂಗಳೂರು: ಮೀನು ಹಿಡಿಯಲು ಹರಡುತ್ತಿದ್ದ ಬಲೆಗೆ ಮೀನುಗಾರನೋರ್ವ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಭಾನುವಾರ ಬೈಕಂಪಾಡಿ ಬಳಿ ಸಮುದ್ರದಲ್ಲಿ ನಡೆದಿದೆ.
ಉಡುಪಿ ಕೃಷ್ಣ ಮಠದ ನಾಮಫಲಕದಲ್ಲಿ ಮರೆಯಾದ ಕನ್ನಡ
Posted On: 01-12-2020 05:18PM
ಉಡುಪಿ: ವಿಶ್ವಪ್ರಸಿದ್ದ ಉಡುಪಿ ಶ್ರೀ ಕೃಷ್ಣ ಮಠದ ಮಹಾದ್ವಾರದಲ್ಲಿ ಇದ್ದ ಕನ್ನಡ ಫಲಕವನ್ನು ತೆಗೆದು ತುಳು ಮತ್ತು ಸಂಸ್ಕೃತದಲ್ಲಿ ಹೊಸ ನಾಮ ಫಲಕ ಅಳವಡಿಸಿದ್ದು ಕನ್ನಡ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಕೇಶ್ ಕುಂಜೂರು ಆಯ್ಕೆ
Posted On: 01-12-2020 05:09PM
ಕಾಪು, ಡಿ. ೧ : ಕಾಪು ತಾಲೂಕು ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ಕಾಪು ವರದಿಗಾರ, ಜೇಸಿಐನ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು ಆಯ್ಕೆಯಾಗಿದ್ದಾರೆ.
ಕುತ್ಯಾರು ವೀರಭದ್ರ ದೇವಸ್ಥಾನ : ದೀಪೋತ್ಸವ
Posted On: 01-12-2020 11:15AM
ಕುತ್ಯಾರು ಅರಮನೆಯ ಆಡಳಿತಕ್ಕೊಳಪಟ್ಟ ಇತಿಹಾಸ ಪ್ರಸಿದ್ಧ ಕುತ್ಯಾರು ವೀರಭದ್ರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ಕುತ್ಯಾರು ಅರಮನೆ ಜಿನೇಶ್ ಬಲ್ಲಾಳ್ ರವರ ಮುಂದಾಳತ್ವದಲ್ಲಿ, ಕೇಂಜ ಶ್ರೀಧರ ತಂತ್ರಿಯವರ ಉಪಸ್ಥಿತಿಯಲ್ಲಿ, ಕುತ್ಯಾರು ರಾಮಕೃಷ್ಣ ತಂತ್ರಿ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು, ಸ್ಥಳೀಯ ಭಜನಾ ತಂಡದಿಂದ ಭಜನೆ ಮತ್ತು ಅನ್ನದಾನವು ನೆರವೇರಿತು.
ಕುತ್ಯಾರು ವೀರಭದ್ರ ದೇವಸ್ಥಾನದಲ್ಲಿ ಕಾರ್ತಿಕಮಾಸದ ದೀಪೋತ್ಸವ
Posted On: 30-11-2020 11:02AM
ಕುತ್ಯಾರು ಅರಮನೆಯ ಆಡಳಿತಕ್ಕೊಳಪಟ್ಟ ಇತಿಹಾಸ ಪ್ರಸಿದ್ಧ ಕುತ್ಯಾರು ವೀರಭದ್ರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ಇಂದು (ನವೆಂಬರ್ 30 ಸೋಮವಾರ) ಸಂಜೆ 7:30 ಕ್ಕೆ ಸರಿಯಾಗಿ ಕುತ್ಯಾರು ಅರಮನೆ ಜಿನೇಶ್ ಬಲ್ಲಾಳ್ ರವರ ಮುಂದಾಳತ್ವದಲ್ಲಿ, ಕುತ್ಯಾರು ರಾಮಕೃಷ್ಣ ತಂತ್ರಿ ನೇತೃತ್ವದಲ್ಲಿ, ಕುತ್ಯಾರು ಯುವಕ ಮಂಡಲ ಮತ್ತು ಗ್ರಾಮಸ್ಥರ ಸಹಕಾರದಿಂದ ಜರಗಲಿದೆ ಎಂದು ನಮ್ಮ ಕಾಪುವಿಗೆ ತಿಳಿಸಿದ್ದಾರೆ.
