Updated News From Kaup
ಉಡುಪಿ : ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಹಾಗೂ ವಿಜಯ ಪೇಪರ್ಸ್ ಜಂಟಿಯಾಗಿ ಜಿಲ್ಲಾ ಆಸ್ಪತ್ರೆ ಮತ್ತು ಸ್ಪಂದನ ವಿಶೇಷ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ
Posted On: 26 Jan 2021, 09:45 PM
ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಹಾಗೂ ವಿಜಯ ಪೇಪರ್ಸ್ ಉಡುಪಿ ಜಂಟಿ ಯಾಗಿ ಗಣರಾಜ್ಯೋತ್ಸವದ ಪ್ರಯುಕ್ತ ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಅನಾರೋಗ್ಯದಲ್ಲಿ ದಾಖಲಾಗಿರುವವರಿಗೆ ಹಾಗೂ ಉಪ್ಪುರು ಸ್ಪಂದನ ದ ವಿಶೇಷ ಮಕ್ಕಳಿಗೆ ಹಣ್ಣು ಹಂಪಲು ವಿತರಣ ಕಾರ್ಯಕ್ರಮ ನಡೆಸಲಾಯಿತು. ಜಿಲ್ಲಾಧ್ಯಕ್ಷರಾದ ಎಮ್. ಮಹೇಶ್ ಕುಮಾರ್, ಗೌರವ ಸಲಹೆಗಾರರಾದ ಅಶೋಕ್ ಶೆಟ್ಟಿ, ವಿಜಯ ಪೇಪರ್ಸ್ ಮಾಲಕರಾದ ಮಹೇಶ್ ಶೆಣೈ, ಮಾಜಿ ಅಧ್ಯಕ್ಷರಾದ ರಮೇಶ್ ತಿಂಗಳಾಯ, ಕಾರ್ಯದರ್ಶಿ ಮನೋಜ್ ಕಡಬ, ಕೋಶಾಧಿಕಾರಿ ಸುಧೀರ್ ಡಿ. ಬಂಗೇರ, ಸಮಿತಿ ಸದಸ್ಯರಾದ ಶಿವರಾಮ್ ಆಚಾರ್ಯ, ರಮೇಶ್ ಕುಂದರ್, ಸದಸ್ಯರಾದ ಶಿವಪ್ರಸಾದ್ ಉಪಸ್ಥಿತರಿದ್ದರು.
ಇಂದಿಗೆ 200 ವರ್ಷ ಪೂರೈಸಿದ ಸಂಭ್ರಮದಲ್ಲಿ ಶ್ರೀವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆ ಅವರಾಲುಮಟ್ಟು
Posted On: 26 Jan 2021, 06:11 PM
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಲಿಮಾರು ಪಂಚಾಯಿತಿ ವ್ಯಾಪ್ತಿಯ ಹಲವಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಶಾಲೆ ಅನುದಾನಿತ ಶ್ರೀ ವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆ ಇಂದು 200 ವರ್ಷ ಪೂರೈಸಿದ ಸಂಭ್ರಮದಲ್ಲಿದೆ. 1821 ಜನವರಿ 27ರಂದು ಆರಂಭವಾದ ಈ ಶಾಲೆಯು ಗ್ರಾಮೀಣ ಭಾಗದ ಮಕ್ಕಳಿಗೆ ಒಂದನೇ ತರಗತಿಯಿಂದ ಏಳನೇ ತರಗತಿವರೆಗಿನ ಶಿಕ್ಷಣದ ಕನಸನ್ನು ನನಸು ಮಾಡಿತ್ತು. ಇಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ವೃತ್ತಿ ನಿರತರಾಗಿದ್ದಾರೆ. ಆಂಗ್ಲ ಮಾಧ್ಯಮದ ಭರಾಟೆಯಲ್ಲಿ ಅಪರೂಪವೆನ್ನುವಂತೆ ಗ್ರಾಮೀಣ ಭಾಗದಲ್ಲಿ ಕನ್ನಡ ಮಾಧ್ಯಮದ ಶಾಲೆಯೊಂದು 200 ವರ್ಷ ಪೂರೈಸಿರುವುದು ಅವರಾಲುಮಟ್ಟು ಗ್ರಾಮದ ಜನತೆಗೆ ಹೆಮ್ಮೆಯೊಂದಿಗೆ ಖುಷಿಯನ್ನು ಉಂಟುಮಾಡಿದೆ.
ಉಡುಪಿ : ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಬಗ್ಗೆ ಕ್ಷೇತ್ರ ಮಟ್ಟದ ಕಾರ್ಯಕರ್ತರಿಗೆ ತರಬೇತಿ
Posted On: 25 Jan 2021, 09:33 AM
ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಬಗ್ಗೆ ಕ್ಷೇತ್ರ ಮಟ್ಟದ ಕಾರ್ಯಕರ್ತರಿಗೆ ತರಬೇತಿ ಕಾರ್ಯಕ್ರಮ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಶ್ರೀ ರಾಜಾರವರು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಜಲಜೀವನ್ ಮಿಷನ್ ಯೋಜನೆಯ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಶ್ರೀ ಜೋಸೆಫ್ ರೆಬೊಲ್ಲೋ ಜಲ ಸಂರಕ್ಷರಣೆ ಹಾಗೂ ಅಂತರ್ಜಲ ಪುನಶ್ಚೇತನ ವಿಷಯದ ಬಗ್ಗೆ ತರಬೇತಿ ನಡೆಸಿಕೊಟ್ಟರು. ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಉಡುಪಿಯ ಪ್ರಯೋಗಶಾಲಾ ತಂತ್ರಜ್ಙರು FTK ಕಿಟ್ ಮೂಲಕ ಗ್ರಾ.ಪಂ ಮಟ್ಟದಲ್ಲಿ ನೀರಿನ ಗುಣಮಟ್ಟ ಪರೀಕ್ಷೆಯ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. 80 ಬಡಗಬೆಟ್ಟು ಗ್ರಾ.ಪಂ ನ SLRM ಮೇಲ್ವಿಚಾರಕಿ ಶ್ರೀಮತಿ ನೀರಜಾ ರವರು ತ್ಯಾಜ್ಯ ವಿಂಗಡಣೆ ಹಾಗೂ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು. ಪುಣ್ಯಕೋಟಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಉಡುಪಿ ವಿಭಾಗದ ಮುಖ್ಯಸ್ಥ ಶ್ರೀ ಗಿರೀಶ್ ಟಿ.ವಿ ತರಬೇತಿಯಲ್ಲಿ ಸಮನ್ವಯಕಾರರಾಗಿ ಭಾಗವಹಿಸಿದರು. ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಮೋಹನ್ ರಾಜ್, ಜಿಲ್ಲಾ ಪಂಚಾಯತ್ ಜಲಜೀವನ್ ಮಿಷನ್ ಯೋಜನಾ ವ್ಯವಸ್ಥಾಪಕ ಶ್ರೀ ಸುಧೀರ್ ಎ.ಕೆ, ಸ್ವಚ್ಛ ಭಾರತ್ ಮಿಷನ್ ವಿಭಾಗದ ಶ್ರೀ ಪ್ರದೀಪ್, ಪುಣ್ಯಕೋಟಿ ಸಂಸ್ಥೆಯ ಕಾರ್ಯದರ್ಶಿ ಶ್ರೀ ಲಕ್ಷ್ಮೀ ನರಸಿಂಹಯ್ಯ, ಶ್ರೀ ನರೇಂದ್ರಬಾಬು ಹಾಗೂ ಸಿಬ್ಬಂಧಿಯವರು ಭಾಗವಸಿದರು. ತರಬೇತಿ ಕಾರ್ಯಾಗಾರದಲ್ಲಿ ಉಡುಪಿ ಆಸುಪಾಸಿನ 8 ಗ್ರಾಮ ಪಂಚಾಯತ್ ಗಳ 40 ಮಂದಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ ನೀರು ನಿರ್ವಾಹಕರು ಪಾಲ್ಗೊಂಡರು.
ಉಂಡಾರು ಶ್ರೀವಿಷ್ಣುಮೂರ್ತಿ ದೇವಸ್ಥಾನದಲ್ಲಿ ತುಳು ಲಿಪಿ ನಾಮಫಲಕದ ಉದ್ಘಾಟನೆ
Posted On: 24 Jan 2021, 07:51 PM
ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ತುಳು ಲಿಪಿಯ ನಾಮಫಲಕವನ್ನು ಸೋದೆ ಶ್ರೀವಾದಿರಾಜ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ಇದೇ ಸಂದರ್ಭ ಇನ್ನಂಜೆಯಲ್ಲಿ ನಡೆದ ತುಳುಲಿಪಿ ಕಲಿಕಾ ತರಬೇತಿಯಲ್ಲಿ ಪಾಲ್ಗೊಂಡು ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ಶ್ರೀಗಳು ವಿತರಿಸಿದರು. ಈ ಸಂದರ್ಭ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶ್ರೀಮತಿ ತಾರಾ ಆಚಾರ್ಯ, ಜೈ ತುಲುನಾಡ್ ಸಂಸ್ಥೆಯ ಅಧ್ಯಕ್ಷರಾದ ಸುದರ್ಶನ್ ಸುರತ್ಕಲ್, ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕರಾದ ವಿಷ್ಣುಮೂರ್ತಿ ಮಂಜಿತ್ತಾಯ, ಇನ್ನಂಜೆಯ ಯುವತಿ ಮಂಡಲದ ಅಧ್ಯಕ್ಷೆ ಕುಮಾರಿ ಅನಿತಾ ಆಚಾರ್ಯ ಇನ್ನಂಜೆ ಮತ್ತಿತರರು ಉಪಸ್ಥಿತರಿದ್ದರು.
ಜೇಸಿಐ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ನಿಧಿ ಶೆಟ್ಟಿ ಪುಳಿಂಚ ಅವರಿಗೆ ಪ್ರಥಮ ಸ್ಥಾನ
Posted On: 23 Jan 2021, 12:10 PM
ಮಂಗಳೂರು : ಜೇಸಿಐ ಭಾರತದ 65ನೇ ರಾಷ್ಟ್ರೀಯ ಅಧಿವೇಶನದ ಪ್ರಯುಕ್ತ ಯುವ ಜೇಸಿ ಸದಸ್ಯರಿಗಾಗಿ ಆನ್ ಲೈನ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರ ಮಟ್ಟದ ಪ್ರತಿಭಾನ್ವೇಷಣಾ ಭಾಷಣ ಸ್ಪರ್ಧೆಯಲ್ಲಿ ಜೇಸಿಐ ಮಂಗಳೂರು ಇಂಪ್ಯಾಕ್ಟ್ ಘಟಕದ ಪ್ರತಿನಿಧಿಯಾಗಿ ಭಾಗವಹಿಸಿದ್ದ ನಿಧಿ ಶೆಟ್ಟಿ ಪುಳಿಂಚ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ. ರಾಷ್ಟ್ರ ಮಟ್ಟದ ಪ್ರತಿಭಾನ್ವೇಷಣಾ ಭಾಷಣ ಸ್ಪರ್ಧೆಯಲ್ಲಿ ಜೇಸಿಐ ಮಂಗಳೂರು ಇಂಪ್ಯಾಕ್ಟ್ ಘಟಕದ ಪ್ರತಿನಿಧಿಯಾಗಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ ನಿಧಿ ಶೆಟ್ಟಿ ಪುಳಿಂಚ ಅವರನ್ನು ಜೇಸಿಐ ಮಂಗಳೂರು ಇಂಪ್ಯಾಕ್ಟ್ ಮತ್ತು ಜೇಸಿಐ ಮಂಗಳೂರು ಇನ್ ಸ್ಪೈರ್ ಘಟಕದ ವತಿಯಿಂದ ಜಂಟಿಯಾಗಿ ಸನ್ಮಾನಿಸಲಾಯಿತು. ಜೇಸಿಐ ಮಂಗಳೂರು ಇಂಪ್ಯಾಕ್ಟ್ ಘಟಕದ ಸ್ಥಾಪಕಾಧ್ಯಕ್ಷ ದೀಪಕ್ ಗಂಗೂಲಿ, 2020ರ ಅಧ್ಯಕ್ಷ ಸೂರಜ್ ಆರ್. ಶೆಟ್ಟಿ, ಮಂಗಳೂರು ಇನ್ ಸ್ಫೈರ್ ಘಟಕದ ಸ್ಥಾಪಕಾಧ್ಯಕ್ಷೆ ಸಾರಿಕಾ ಪೂಜಾರಿ, ಕೋಶಾಧಿಕಾರಿ ಪ್ರಾರ್ಥನಾ, ನಿಧಿ ಶೆಟ್ಟಿ ಅವರ ಹೆತ್ತವರಾದ ಶ್ರೀಧರ ಶೆಟ್ಟಿ ಪುಳಿಂಚ, ಪ್ರತಿಭಾ ಶೆಟ್ಟಿ ಪುಳಿಂಚ, ಸಹೋದರ ನಿನಾದ್ ಶೆಟ್ಟಿ ಉಪಸ್ಥಿತರಿದ್ದರು. ಮಂಗಳೂರು ಬೆಂದೂರು ಸೈಂಟ್ ತೆರೆಸಾ'ಸ್ ಸ್ಕೂಲ್ ನ ಎಂಟನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ವಲಯ ಮಟ್ಟದಲ್ಲಿ ಆಯೋಜಿಸಲಾಗಿದ್ದ ಅರ್ಹತಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದರು. ಪ್ರಸ್ತುತ ಗುಜರಾತ್ ನ ವಡೋಧರಾದಲ್ಲಿ ನಡೆಯುತ್ತಿರುವ 65 ನೇ ರಾಷ್ಟ್ರೀಯ ಸಮ್ಮೇಳನದ ಪ್ರಯುಕ್ತ ಆನ್ ಲೈನ್ ಮೂಲಕ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ದೇಶದ ವಿವಿಧೆಡೆಗಳಿಂದ ಯುವ ಜೇಸಿ ಸದಸ್ಯರು ಭಾಗವಹಿಸಿದ್ದರು.
ರೋಟರಿ ಕ್ಲಬ್ ಬೆಳ್ಮಣ್ ಗೆ ಇಂದು ರೋಟರಿ ಜಿಲ್ಲಾ ಗವರ್ನರ್ ಭೇಟಿ
Posted On: 23 Jan 2021, 11:58 AM
ಇಂದು ರೋಟರಿ ಕ್ಲಬ್ ಬೆಳ್ಮಣ್ ಕ್ಲಬ್ ಗೆ ರೋಟರಿ ಜಿಲ್ಲಾ ಗವರ್ನರ್ ರೋ. ರಾಜಾರಾಮ್ ಭಟ್ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಶಾಶ್ವತ ಯೋಜನೆಗಳು ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಕ್ಲಬ್ ನ ಅಧ್ಯಕ್ಷರಾದ ರೋ.ಸುಭಾಷ್ ಕುಮಾರ್ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಜಿಲ್ಲಾ ಉಪ ಗವರ್ನರ್ ರೋ.ನವೀನ್ ಅಮೀನ್ , ವಲಯ ಸೇನಾನಿ ರೋ. ಸುರೇಶ್ ರಾವ್ ಭಾಗವಹಿಸಲಿದ್ದಾರೆ.
ಕಾಪು ತಾಲೂಕು ಗ್ರಾಮ ಪಂಚಾಯತ್ ಗಳ ಅಧ್ಯಕ್ಷ -ಉಪಾಧ್ಯಕ್ಷ ಮೀಸಲಾತಿಗಳ ಆಯ್ಕೆ ಪ್ರಕಟ
Posted On: 21 Jan 2021, 04:25 PM
ಕಾಪು ತಾಲೂಕಿನ 2020ನೇ ಸಾಲಿನ ಚುನಾವಣೆ ಮುಗಿದ 16 ಗ್ರಾಮಪಂಚಾಯತ್ ಗಳ 30 ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಇಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ತಾಲೂಕಿನ ಗ್ರಾಮ ಪಂಚಾಯತಿಯ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಇಂದು ಉಚ್ಚಿಲ ಮಹಾಲಕ್ಷ್ಮಿ ಸಭಾ ಭವನದಲ್ಲಿ ನಡೆಯಿತು. ಬೆಳ್ಳೆ : ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಕುರ್ಕಾಲು: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ. ಶಿರ್ವ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಇನ್ನಂಜೆ: ಅಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ. ಕಟಪಾಡಿ: ಅಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ. ಕೋಟೆ: ಅಧ್ಯಕ್ಷ -ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಮಜೂರು :ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ. ಕುತ್ಯಾರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ. ಮುದರಂಗಡಿ: ಅಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ – ಸಾಮಾನ್ಯ. ಬೆಳಪು: ಅಧ್ಯಕ್ಷ – ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ. ಬಡಾ: ಅಧ್ಯಕ್ಷ -ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ. ಎಲ್ಲೂರು: ಅಧ್ಯಕ್ಷ – ಸಾಮಾನ್ಯ, ಉಪಾಧ್ಯಕ್ಷ- ಅನುಸೂಚಿತ ಜಾತಿ ಮಹಿಳೆ. ಪಲಿಮಾರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ. ತೆಂಕ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ. ಪಡುಬಿದ್ರಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಹೆಜಮಾಡಿ: ಅಧ್ಯಕ್ಷ – ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ. ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಅಧಿಕಾರಿಗಳನ್ನು ನೇಮಿಸಿ ಏಳು ದಿನ ಮುಂಚಿತವಾಗಿ ಗ್ರಾಮ ಪಂಚಾಯತಿಗಳಿಗೆ ನೋಟಿಸ್ ನೀಡಲಾಗುವುದು. 15 ದಿನಗಳ ಒಳಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧಕ್ಷರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಈ ಸಂದರ್ಭ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು : ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷರಾದ ಎಮ್. ಮಹೇಶ್ ಕುಮಾರ್ ಗೆ ಸನ್ಮಾನ
Posted On: 20 Jan 2021, 09:37 PM
ಬೆಂಗಳೂರು ಪ್ರಿಂಟೇಕ್ ಪಾರ್ಕ್ ಉದ್ಘಾಟನಾ ಸಮಾರಂಭ ದಲ್ಲಿ ಕರ್ನಾಟಕ ಸ್ಟೇಟ್ ಪ್ರಿಂಟರ್ಸ್ ಅಸೋಸಿಯೇಷನ್ ಬೆಂಗಳೂರು ಇವರಿಂದ ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ (ರಿ.) ಉಡುಪಿ ಜಿಲ್ಲಾಧ್ಯಕ್ಷರಾದ ಎಮ್. ಮಹೇಶ್ ಕುಮಾರ್ ರವರನ್ನು ಪ್ರಿಂಟಕ್ ಪಾರ್ಕ್ ಅಧ್ಯಕ್ಷರಾದ ಸಿ. ಆರ್. ಜನಾರ್ದನ ಹಾಗೂ ಕರ್ನಾಟಕ ಸ್ಟೇಟ್ ಪ್ರಿಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ರಾದ ಅಶೋಕ್ ಕುಮಾರ್ ರವರು ಸನ್ಮಾನ ಮಾಡಿದರು. ವೇದಿಕೆಯಲ್ಲಿ ಅಶೋಕ್ ಶೆಟ್ಟಿ. ರಮೇಶ್ ತಿಂಗಳಾಯ. ಶಿವರಾಮ್ ಆಚಾರ್ಯ. ವಿವೇಕಾನಂದ ಕಾಮತ್. ದಿನೇಶ್ ಆಚಾರ್ಯ. ನಾಗರಾಜ್ ಸುದರ್ಶನ್.ರಾಮಚಂದ್ರ ಉಪಾಧ್ಯ. ಅಬ್ದುಲ್ ಹಮೀದ್. ವಾಸುದೇವ ಕಾಮತ್. ಭುವನೇಂದ್ರ. ಪದ್ಮನಾಭ. ಸುಧೀರ್ ಡಿ ಬಂಗೇರ. ಮೋಹನ್ ಶೆಟ್ಟಿಗಾರ್.ಉದಯ್ ಅಬ್ದುಲ್ ಖಲೀಲ್ ಉಪಸ್ಥಿತರಿದ್ದರು.
ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ
Posted On: 20 Jan 2021, 08:50 PM
ಕೋಟ: ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬುಧವಾರ ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘ ಆಕ್ರೋಶ ವ್ಯಕ್ತಪಡಿಸಿ ಕೋಟ ಆರಕ್ಷಕ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ ಇವರಿಗೆ ದೂರು ನೀಡಿದೆ. ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಸಚಿವ ಕೋಟ ಈವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ. ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಸಮುದಾಯ ಅಥವಾ ಅವರ ಅಭಿಮಾನಿಗಳು ಸಹಿಸಲ್ಲ ಈ ರೀತಿಯ ಬರಹಯುಕ್ತ ಪೋಸ್ಟರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಸಂಘದ ಅಧ್ಯಕ್ಷ ಜಿ.ಸದಾನಂದ ಪೂಜಾರಿ ತಮ್ಮ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಬಿಲ್ಲವ,ಕಾರ್ಯದರ್ಶಿ ಮನೋಹರ್ ಪೂಜಾರಿ, ಯುವ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ,ಸಂತೋಷ್ ಪೂಜಾರಿ ತೆಕ್ಕಟ್ಟೆ ಉಪಸ್ಥಿತರಿದ್ದರು.
ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ
Posted On: 20 Jan 2021, 08:50 PM
ಕೋಟ: ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬುಧವಾರ ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘ ಆಕ್ರೋಶ ವ್ಯಕ್ತಪಡಿಸಿ ಕೋಟ ಆರಕ್ಷಕ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ ಇವರಿಗೆ ದೂರು ನೀಡಿದೆ. ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಸಚಿವ ಕೋಟ ಈವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ. ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಸಮುದಾಯ ಅಥವಾ ಅವರ ಅಭಿಮಾನಿಗಳು ಸಹಿಸಲ್ಲ ಈ ರೀತಿಯ ಬರಹಯುಕ್ತ ಪೋಸ್ಟರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಸಂಘದ ಅಧ್ಯಕ್ಷ ಜಿ.ಸದಾನಂದ ಪೂಜಾರಿ ತಮ್ಮ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಬಿಲ್ಲವ,ಕಾರ್ಯದರ್ಶಿ ಮನೋಹರ್ ಪೂಜಾರಿ, ಯುವ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ,ಸಂತೋಷ್ ಪೂಜಾರಿ ತೆಕ್ಕಟ್ಟೆ ಉಪಸ್ಥಿತರಿದ್ದರು.
