Updated News From Kaup

ಎಂ.ಕೆ.ರಮೇಶ ಆಚಾರ್ಯ ಕೊಲೆಕಾಡಿ ಅವರಿಗೆ ಸಮ್ಮಾನ

Posted On: 29-11-2020 10:08PM

ಉಡುಪಿ ಕಿದಿಯೂರು ಇಲ್ಲಿಯ 'ಯಕ್ಷ ಆರಾಧನಾ ಟ್ರಸ್ಟ್' ವತಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಯಕ್ಚಗಾನ ವೇಷಧಾರಿ ಎಂ .ಕೆ .ರಮೇಶ ಆಚಾರ್ಯ ಹಾಗೂ ಮಂಗಳೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಛಾಂದಸ ಗಣೇಶ ಕೊಲೆಕಾಡಿಯವರನ್ನು ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಸಮ್ಮಾನಿಸಲಾಯಿತು.

ಕೀಳಂಜೆ ದೇವಳ: ಸ್ವಚ್ಛತಾ ಅಭಿಯಾನ

Posted On: 29-11-2020 09:49PM

ಸ್ವರ್ಣಾರಾಧನಾ ಅಭಿಯಾನದ ಪ್ರಯುಕ್ತ ಸ್ವಚ್ಛ ಭಾರತ್ ಫ್ರೆಂಡ್ಸ್, ಯುವ ವಿಚಾರ ವೇದಿಕೆ ಉಪ್ಪೂರು ಜಂಟಿ ಆಶ್ರಯದಲ್ಲಿ ಕೀಳಂಜೆ ಮಹಾವಿಷ್ಣು ಮಹೇಶ್ವರ ದೇವಾಲಯದ ವಠಾರದಲ್ಲಿ ಇಂದು ಸ್ವಚ್ಛತಾ ಅಭಿಯಾನ ನಡೆಯಿತು.

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸುರೇಶ್ ಪಿ. ಶೆಟ್ಟಿ ಗುರ್ಮೆ ಆಯ್ಕೆ

Posted On: 29-11-2020 07:39PM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸುರೇಶ್ ಪಿ. ಶೆಟ್ಟಿ ಗುರ್ಮೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ಜರಗಿದ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ನೂತನ ಕಾರ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿ, ಘೋಷಿಸಲಾಯಿತು.

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ :ನನ್ನ ಬೀಚ್ ಸ್ವಚ್ಛ ಬೀಚ್ ಅಭಿಯಾನ

Posted On: 29-11-2020 05:21PM

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡದಿಂದ ನನ್ನ ಬೀಚ್ ಸ್ವಚ್ಛ ಬೀಚ್ ಅಭಿಯಾನದ ಮೂಲಕ ಪರಿಸರಕ್ಕೆ ಅಳಿಲು ಸೇವೆ ಮಾಡಲಾಯಿತು. ಹೂಡೆಯ ಬೀಚ್ ಅನ್ನು ಪ್ಲಾಸ್ಟಿಕ್ ಮುಕ್ತ ಮಾಡುವಲ್ಲಿ ಈ ತಂಡವು ಶ್ರಮಿಸಿತು. ಈ ಸಂದರ್ಭದಲ್ಲಿ ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡದ ಸ್ಥಾಪಕಾಧ್ಯಕ್ಷರಾದ ಡಾ. ಕೀರ್ತಿ ಪಾಲನ್ ಹಾಗೂ ಜಗದೀಶ್ ಬಂಟಕಲ್ ಉಪಸ್ಥಿತರಿದ್ದರು.

ಸಂತೆಕಟ್ಟೆ : ಸ್ವರ್ಣೆಯ ಸ್ವಚ್ಛತೆ ಅಭಿಯಾನ

Posted On: 29-11-2020 02:08PM

ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ ತಂಡದ ವತಿಯಿಂದ ಸಂತೆಕಟ್ಟೆಯ ಸ್ವರ್ಣ ನದಿಯ ಸೇತುವೆಯ ಇಕ್ಕೆಲಗಳಲ್ಲಿ ಪ್ರಜ್ಞಾವಂತ ನಾಗರೀಕರು ಎಸೆದ ಕಸ ಕಶ್ಮಲ ಗಳನ್ನೂ ಒಟ್ಟು ಮಾಡಿ ಸ್ವರ್ಣೆಯ ನ್ನು ಶುದ್ದೀಕರಿಸುವ ಕಾರ್ಯಕ್ರಮ ನ.29 ಆದಿತ್ಯವಾರ ನಡೆಯಿತು.

ಇನ್ನಂಜೆ : ಅಧಿಕಾರಿಗಳಿಂದ ಕ್ರಾಸಿಂಗ್ - ಪಾಸಿಂಗ್ ಸ್ಟೇಷನ್ ಕಾಮಗಾರಿ ಪರಿಶೀಲನೆ

Posted On: 29-11-2020 02:00PM

ಕಾಪು ತಾಲೂಕಿನ ಇನ್ನಂಜೆ ರೈಲ್ವೇ ನಿಲ್ದಾಣ ರಚನೆ ಸಹಿತವಾಗಿ ಕ್ರಾಸಿಂಗ್ ಮತ್ತು ಪಾಸಿಂಗ್ ಸ್ಟೇಷನ್ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವಾಗಿ ಮೈನ್ ಲೈನ್‌ನಿಂದ ಕ್ರಾಸಿಂಗ್ ಲೈನ್‌ಗೆ ಸಂಪರ್ಕ ಕಲ್ಪಿಸಲಾಗುವುದು ಎಂದು ಕೊಂಕಣ್ ರೈಲ್ವೇ ಕಾರವಾರ ರೀಜನ್ ರೀಜನಲ್ ಪ್ರಬಂಧಕ ಬಿ. ಬಿ. ನಿಕ್ಕಂ ಹೇಳಿದ್ದಾರೆ. ಇನ್ನಂಜೆ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೇ ನಿಲ್ದಾಣ ಮತ್ತು ಕ್ರಾಸಿಂಗ್-ಪಾಸಿಂಗ್ ಸ್ಟೇಷನ್ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಅವರು ಈ ಬಗ್ಗೆ ಮಾಹಿತಿ ನೀಡಿದರು.

ಹಳೆಯಂಗಡಿ : ನೂತನ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಯಾನಾರಂಭ ಕಾರ್ಯಕ್ರಮ

Posted On: 29-11-2020 09:16AM

ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ದಲ್ಲಿ ನೂತನ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಯಾನಾರಂಭ ಕಾರ್ಯಕ್ರಮ ಶ್ರೀ ನಾಗವೃಜ ಕ್ಷೇತ್ರ ಪಾವಂಜೆ ಯಲ್ಲಿ ನಡೆಯಿತು.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

Posted On: 27-11-2020 09:07PM

2019-20 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಕಾಪು ತಾಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾಗಿ ಪತ್ರಕರ್ತ, ಚಿತ್ರ ನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆ.

Posted On: 27-11-2020 02:18PM

ಕಾಪು ತಾಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾಗಿ ಪತ್ರಕರ್ತ, ಸಿನೆಮಾ ನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಉದ್ಯಮಿ ಕೆ.ಸತ್ಯೇಂದ್ರ ಪೈ ಕಟಪಾಡಿ, ಗೌರವ ಸಲಹೆಗಾರರಾಗಿ ಹಿರಿಯ ಚಿಂತಕ ಬಿ.ಪುಂಡಲೀಕ ಮರಾಠೆ ಶಿರ್ವ, ಪ್ರಧಾನ ಕಾರ್ಯದರ್ಶಿಯಾಗಿ ಭುವನೇಶ್ ಪ್ರಭು ಹಿರೇಬೆಟ್ಟು, ಜತೆ ಕಾರ್ಯದರ್ಶಿಯಾಗಿ ಕಲಾವಿದೆ ಪವಿತ್ರ ಶೆಟ್ಟಿ ಕಟಪಾಡಿ, ಕೋಶಾಧಿಕಾರಿಯಾಗಿ ರಂಗನಟ ಕೆ.ನಾಗೇಶ್ ಕಾಮತ್ ಕಟಪಾಡಿ, ಮಾಧ್ಯಮ ಕಾರ್ಯದರ್ಶಿಯಾಗಿ ಪತ್ರಕರ್ತ ರಾಕೇಶ್ ಕುಂಜೂರ್, ಸಂಘಟನಾ ಕಾರ್ಯದರ್ಶಿಯಾಗಿ ಸಮಾಜಸೇವಕ ರಾಘವೇಂದ್ರ ಪ್ರಭು ಕರ್ವಾಲ್, ಸಂಚಾಲಕರಾಗಿ ಉಡುಪಿ ಬಾಲಕಿಯರ ಪದವಿಪೂರ್ವ ಕಾಲೇಜು ಉಪನ್ಯಾಸಕ ದಯಾನಂದ ಡಿ, ಸಂಪಾದಕರಾಗಿ ಯುವಸಾಹಿತಿ ದೀಪಕ್ ಕೆ. ಬೀರ ಪಡುಬಿದ್ರಿ, ಸಮಿತಿ ಸದಸ್ಯರಾಗಿ ಸಮಾಜಸೇವಕ ಸುನೀಲ್ ಜಾನ್ ಡಿಸೋಜಾ ಶಂಕರಪುರ, ಜಾನಪದ ಕಲಾವಿದ ಹರೀಶ್ ಹೇರೂರು, ಆಕಾಶವಾಣಿ ಕಲಾವಿದೆ ಭಾಗ್ಯಲಕ್ಷ್ಮೀ ಉಪ್ಪೂರು, ಶಂಕರ್ ಶೇರಿಗಾರ್ ಮಟ್ಟು, ನ್ಯತ್ಯಕಲಾವಿದೆ ಕಾವ್ಯ ಪೈ ಕುತ್ಯಾರು, ಗೀತಾ ಆಚಾರ್ಯ ಕಾಪು, ಲಕ್ಷ್ಮಣ್ ಟಿ ಕಟಪಾಡಿ ಇವರನ್ನು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಗಣೇಶ್ ಗಂಗೊಳ್ಳಿ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯಾಧ್ಯಕ್ಷ ಡಾ.ಬಾಲಾಜಿ ಎಸ್. ಆಯ್ಕೆಮಾಡಿದ್ದಾರೆ ಎಂದು ವಿಭಾಗೀಯ ಸಂಚಾಲಕಿ ಡಾ.ಭಾರತಿ ಮರವಂತೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

101 ವರ್ಷ ಹಳೆಯ ಯೆಲ್ಲೂರು ಮಹಾತ್ಮ್ಯಂ

Posted On: 26-11-2020 05:24PM

ಉಡುಪಿ ಜಿಲ್ಲೆ , ಕಾಪು ತಾಲೂಕಿನ‌ ಎಲ್ಲೂರಿನಲ್ಲಿರುವ ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನದ ಕುರಿತಂತೆ ವಿಶೇಷ ಆಸಕ್ತಿಯಿಂದ ನಿರಂತರ ಶೋಧನೆಗಳು ನಡೆಯುತ್ತಿದ್ದು ಹೊಸಹೊಸ ವಿಚಾರಗಳು , ಪ್ರಸ್ತುತ ರೂಢಿಯಲ್ಲಿರುವ ಸಂಪ್ರದಾಯ - ಶಿಷ್ಟಾಚಾರಗಳಿಗೆ ಹಾಗೂ ನಂಬಿಕೊಂಡು ಬಂದಿರುವ ಒಡಂಬಡಿಕೆಗಳಿಗೆ ಪೂರಕವಾದ ಅಂಶಗಳು ಬೆಳಕಿಗೆ ಬರುತ್ತಲೇ ಇವೆ. ಈಗಾಗಲೇ ದಾಖಲೆಯಾಗಿರುವ ದೇವಾಲಯದ ಇತಿಹಾಸ , ಪೌರಾಣಿಕ ಹಿನ್ನೆಲೆಗಳು ಮತ್ತಷ್ಟು ಹೆಚ್ಚು ಆಧಾರಗಳೊಂದಿಗೆ ದೃಢವಾಗುತ್ತಿವೆ . ಹಿರಿಯ ಶಿಕ್ಷಕ - ವೈದಿಕ ವಿದ್ವಾಂಸರಾಗಿದ್ದ ಮಾಣಿಯೂರು ಮಠದ ಮುಖ್ಯಪ್ರಾಣಾಚಾರ್ಯರು 1918ರಲ್ಲಿ ದೇವಾಲಯದ ಆಗ ಮ್ಯಾನೇಜರ್ ಆಗಿದ್ದ ರಾಘವೇಂದ್ರರಾಯರ ಮೂಲಕ‌ ಒಂದು ಸಣ್ಣ ಪುಸ್ತಕವನ್ನು ನನಗೆ ಕಳುಹಿಸಿದ್ದರು . "ಈ ಪುಸ್ತಕ ಅವನಿಗೆ ಬೇಕಾದೀತು‌ , ಹೊಸ ವಿಷಯ ಏನಾದರೂ ಸಿಗಬಹುದು" ಎಂದೂ ಸೂಚಿಸಿದ್ದರು . ಸಂಸ್ಕೃತ ಶ್ಲೋಕಗಳಿರುವ ಪುಸ್ತಕವು ಹಳೆಯ ಮಗ್ಗಿ ಪುಸ್ತಕದ ಅಳತೆಯಲ್ಲಿದ್ದು ಇದರ ಹೆಸರು‌ "ಯೆಲ್ಲೂರು ಮಹಾತ್ಮ್ಯಂ‌". ಕೇವಲ ೨೦+೨ ಹಾಗೂ ಹೊದಿಕೆಯ ನಾಲ್ಕು ಪುಟಗಳನ್ನು ಹೊಂದಿದೆ .11- 2- 1919 ರಂದು ಪ್ರಕಟವಾಗಿತ್ತು .ಆಗ ಪುಸ್ತಕದ ಬೆಲೆ ಎರಡಾಣೆ. 2020 ನೇ ಇಸವಿಯ ಫೆಬ್ರವರಿ ಎರಡನೇ ತಾರೀಕಿಗೆ ಈ ಪುಸ್ತಕಕ್ಕೆ 101 (ನೂರ ಒಂದು) ವರ್ಷವಾಯಿತು .