Updated News From Kaup

ಕಾಪು : ಜಾರ್ದೆ ಮಾರಿಪೂಜೆ ಸಂಪನ್ನ

Posted On: 25-11-2020 08:34PM

ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಜಾರ್ದೆ ಮಾರಿಪೂಜೆಯು ಧಾರ್ಮಿಕ ಪೂಜಾ ವಿಧಾನಗಳೊಂದಿಗೆ ಕಾಪುವಿನ ಹಳೆ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಗಳಲ್ಲಿ ಸಂಪನ್ನಗೊಂಡಿತು.

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ : ಕಟಪಾಡಿ ಕಾರುಣ್ಯ ವೃದ್ಧಾಶ್ರಮ ಭೇಟಿ

Posted On: 25-11-2020 04:53PM

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಕಟಪಾಡಿಯ ಕಾರುಣ್ಯ ವೃದ್ಧಾಶ್ರಮಕ್ಕೆ ಇಂದು ಭೇಟಿ ನೀಡಿ ಪ್ರತಿ ತಿಂಗಳು ನಡೆಸುವ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ಔಷಧಿ ನೀಡುವ ಜೊತೆಗೆ ತಂಡದ ಚಿರಪರಿಚಿತರಾದ ಸಿಲೋಮ್ ಅವರ ಹುಟ್ಟುಹಬ್ಬವನ್ನು ಅಲ್ಲಿಯ ವೃದ್ಧರಿಗೆ ಊಟ ಹಾಗೂ ಸಿಹಿ ಹಂಚುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು.

ಉಡುಪಿ : ಎರಡು ಕಾಲಿಲ್ಲದ ಯುವತಿಗೆ ಬಾಳು ನೀಡಿದ ದುಬೈ ಉದ್ಯೋಗಿ

Posted On: 25-11-2020 01:27PM

ಉಡುಪಿಯ‌ ಕರಂಬಳ್ಳಿ ಗ್ರಾಮದ ನಿವಾಸಿಯಾಗಿರುವ ಸುನೀತಾ ಹುಟ್ಟಿನಿಂದಲೇ ಸೌಂದರ್ಯವತಿಯಾಗಿದ್ದರೂ ಪೋಲಿಯೋ ಎಂಬ ಮಹಾಮಾರಿ ಆಕೆಯ ಎರಡೂ ಕಾಲುಗಳನ್ನ ಕಿತ್ತುಕೊಂಡಿತ್ತು. ಈ ಅಂಗವೈಕಲ್ಯತೆ ಆಕೆಯ ನೆಮ್ಮದಿ ಹಾಳುಮಾಡಿತ್ತು.‌ ಪಿಯುಸಿವರೆಗೆ ಓದಿಕೊಂಡು ತಂದೆ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡಾ ನಿರಾಧಾರವಾಗುತ್ತೆ ಎಂದು ಖಿನ್ನತೆಗೆ ಜಾರಿದ್ದಳು. ಆದರೆ ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಈಕೆಯ ಭಾಗ್ಯದ ಬಾಗಿಲು ತೆರೆದಿದ್ದಾರೆ. ದುಬೈನ ಆಯಿಲ್ ಕಂಪೆನಿಯಲ್ಲಿ ಉದ್ಯೋಗ ಮಾಡುತ್ತಿರುವ ಮಂಗಳೂರಿನ ನಿವಾಸಿ‌ ಸಂದೀಪ್ ತಾನೇ ಮುಂದೆ ಬಂದು ಈಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ.

ಮಲೈಕಾ ಸೊಸೈಟಿ : ಮಂಗಳೂರು ಶಾಖೆ ಮ್ಯಾನೇಜರ್ ಬಂಧನ

Posted On: 25-11-2020 01:21PM

ಮಲೈಕಾ ಸೊಸೈಟಿ ಹೆಸರಲ್ಲಿ ಗ್ರಾಹಕರಿಂದ ಕೋಟ್ಯಂತರ ರೂ. ಠೇವಣಿ ಸಂಗ್ರಹಿಸಿ ಅವಧಿ ಪೂರ್ಣಗೊಂಡಾಗ ಅದನ್ನು ಹಿಂದಿರುಗಿಸದೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಂಸ್ಥೆಯ ಮಂಗಳೂರು ಶಾಖೆಯ ಮ್ಯಾನೇಜರ್‌ವೊಬ್ಬರನ್ನು ಆರ್ಥಿಕ ಮತ್ತು ಮಾದಕದ್ರವ್ಯ ಅಪರಾಧಗಳ ಪೊಲೀಸರು ಬಂಧಿಸಿ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಕಾಪು ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಸರಳ ರೀತಿಯಲ್ಲಿ ಮಾರಿಪೂಜೆ ಆಚರಣೆ

Posted On: 25-11-2020 12:27AM

ಕಾಪು ಶ್ರೀ ಹಳೇ ಮಾರಿಯಮ್ಮ ದೇವಳದಲ್ಲಿ ಇಂದು ಕಾಲಾವಧಿ ಜಾರ್ದೆ ಮಾರಿಪೂಜಾ ಜಾತ್ರೆ.

ಕರಾವಳಿಯಲ್ಲಿ 3986 ಕೋಟಿ ರೂ ವೆಚ್ಚದಲ್ಲಿ 1348 ಕಿಂಡಿ ಅಣೆಕಟ್ಟು: ಸಚಿವ ಮಾಧುಸ್ವಾಮಿ

Posted On: 24-11-2020 10:55PM

ಉಡುಪಿ : ರಾಜ್ಯಾದ್ಯಂತ ಅಂರ್ತಜಲವನ್ನು ಹೆಚ್ಚಿಸುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆವತಿಯಿಂದ ಅನೇಕ ಯೋಜನೆಗಳನ್ನು ರೂಪಿಸಿ, ಕೃಷಿ ಮತ್ತು ಕುಡಿಯುವ ನೀರಿನ ಬಳಕೆಗೆ ಆದ್ಯತೆ ನೀಡಿ, ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಹೇಳಿದರು. ಅವರು ಮಂಗಳವಾರ ಬೈಂದೂರಿನ ಪಡುವರಿಯಲ್ಲಿ 35 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಕಿಂಡಿ ಅಣೆಕಟ್ಟು ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಮಟ್ಟು ಪರಿಸರದ ಜನತೆಯನ್ನು ಭಯಭೀತರನ್ನಾಗಿಸಿದ ಬಯೋಲುಮಿನೆಸೆಂಟ್ ನೀಲಿ ಸಮುದ್ರ

Posted On: 23-11-2020 05:28PM

ರಾತ್ರಿಯಲ್ಲಿ ನೀವು ಸಮುದ್ರ ತೀರಕ್ಕೆ ಹೋದಾಗ ಸಮುದ್ರ ನೀಲಿ ಹೊಳಪಿನಿಂದ ಪ್ರಕಾಶಿಸಲ್ಪಟ್ಟಾಗ ನೀವು ಹೇಗೆ ಭಾವಿಸುತ್ತೀರಿ? ನೀವು ಸ್ವಲ್ಪ ಭಯಭೀತರಾಗಬಹುದು? ಚಿಂತಿಸಬೇಕಾಗಿಲ್ಲ. ಇದು ನಿಜವಾಗಿಯೂ ನೈಸರ್ಗಿಕ ಮತ್ತು ವೈಜ್ಞಾನಿಕವಾಗಿದೆ.

ಉಚ್ಚಿಲ: ಲಾರಿ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಮೃತ್ಯು

Posted On: 23-11-2020 12:57PM

ಉಚ್ಚಿಲ : ಸ್ಕೂಟರ್ ಸವಾರನೋರ್ವ ಲಾರಿ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ.

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ : ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ

Posted On: 22-11-2020 09:40PM

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಬಿದ್ಕಲಕಟ್ಟೆ ಮೊಳಹಳ್ಳಿ, ಕೋಣಿಹಾರ ಗ್ರಾಮಕ್ಕೆ ಭೇಟಿನೀಡಿ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ಔಷದಿಗಳನ್ನು ನೀಡಲಾಯಿತು.

ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು : ರಾಘವೇಂದ್ರ ಪ್ರಭು,ಕವಾ೯ಲುಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Posted On: 22-11-2020 02:25PM

ಉಡುಪಿ. :- ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ನ .22 ರಂದು ಯಲಹಂಕ ಉಪನಗರ ಪ್ರಖ್ಯಾತಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಧಕರಿಗೆ ಗೌರವ ಕಾಯ೯ಕ್ರಮದಲ್ಲಿ ಸಾಮಾಜಿಕ ಕಾಯ೯ಕತ೯ ತರಬೇತಿದಾರ ರಾಘವೇಂದ್ರ ಪ್ರಭು,ಕವಾ೯ಲು ರವರಿಗೆ ಸಾಮಾಜಿಕ ಸೇವೆ ಮತ್ತು ಯುವ ಸಂಘಟನೆ ವಿಭಾಗದಲ್ಲಿ " ಕನ್ನಡ ರಾಜ್ಯೋತ್ಸವ " ಪ್ರಶಸ್ತಿ ಪ್ರದಾನ ಮಾಡಲಾಯಿತು.