Updated News From Kaup
ರಾಘವೇಂದ್ರ ಪ್ರಭು,ಕವಾ೯ಲು - ಸಿರಿಗನ್ನಡ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಗೆ ಆಯ್ಕೆ
Posted On: 25 Feb 2021, 03:42 PM
ಉಡುಪಿ : ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು, ಕನಾ೯ಟಕ ರಕ್ಷಣಾ ವೇದಿಕೆ' ಸಪ್ತಸ್ವರ ಸಂಗೀತ ಕಲಾ ಬಳಗ ಬೆಳಗಾವಿ ಮತ್ತು ಮರಳ ಸಿದ್ದೇಶ್ವರ ಕಲಾ ಪೋಷಕ ಸಂಘ ವತಿಯಿoದ ಫೆ.28 ರಂದು ಬೆಳಗಾವಿಯಲ್ಲಿ ನಡೆಯುವ ರಾಷ್ಟ್ರೀಯ ಕಲಾ ಉತ್ಸವ -2021 ಕಾಯ೯ಕ್ರಮದಲ್ಲಿ ಸಾಧಕರಿಗೆ ಗೌರವ ವಿಭಾಗದಲ್ಲಿ ಉಡುಪಿ ಜಿಲ್ಲೆಯ ರಾಘವೇಂದ್ರ ಪ್ರಭು,ಕವಾ೯ಲು ರವರು ಸಿರಿಗನ್ನಡ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ. ಸ್ವಚ್ಚ ಭಾರತ್ ಫ್ರ್oಡ್ಸ್ ಸಂಯೋಜಕರಾಗಿರುವ ಇವರು ಸಮಾಜಮುಖಿ ಕಾಯ೯ಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಕುರ್ಕಾಲು : ಡಿಜಿಟಲ್ ಗ್ರಂಥಾಲಯ ಉದ್ಘಾಟನೆ
Posted On: 25 Feb 2021, 03:38 PM
ಕಾಪು :ಕುರ್ಕಾಲು ಗ್ರಾಮ ಪಂಚಾಯತ್ ನ ಕಟ್ಟಡದಲ್ಲಿರುವ ಸಾರ್ವಜನಿಕ ಗ್ರಂಥಾಲಯವನ್ನು ಡಿಜಿಟಲ್ ಗ್ರಂಥಾಲಯವನ್ನಾಗಿ ಪರಿವರ್ತಿಸಲಾಗಿದ್ದು ದಿನಾಂಕ 24/02/2021ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಹೇಶ್ ಶೆಟ್ಟಿ ಹಾಗೂ ಕಾಪು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿಯವರಾದ ಶ್ರೀ ವಿವೇಕಾನಂದ ಗಾಂವ್ಕರ್ ಉದ್ಘಾಟನೆ ಮಾಡಿದರು. ತಾರಾ ಪ್ರಕಾಶನ, ಬೆಂಗಳೂರು ಇದರ ಟ್ರಸ್ಟಿಯವರಾದ ಅಮೇರಿಕಾದಲ್ಲಿ ಪ್ರಾಧ್ಯಾಪಕರಾಗಿರುವ ಮುಕುಂದ್ ರವರು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿರುವ ಕಂಪ್ಯೂಟರ್ ನ್ನು ಅಳವಡಿಸಿದ್ದು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿಯವರಾಗಿದ್ದ ಕಾಪು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿಯವರಾದ ಶ್ರೀ ವಿವೇಕಾನಂದ ಗಾಂವ್ಕರ್ ರವರನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಮತಿ ಮಾರ್ಗರೇಟ್ ಸೀಮಾ ಡಿ ಸೋಜ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಸುದರ್ಶನ ರಾವ್, ಸರಿತ, ನಥಾಲಿಯ ಮಾರ್ಟಿಸ್, ಸರೋಜ, ಸ್ವಪ್ನ, ವಿನ್ಸೆಂಟ್ ರೋಡ್ರಿಗಸ್, ಶೋಭಾ, ಮಹೇಶ್ ಶೆಟ್ಟಿ, ಪ್ರಶಾಂತ್, ಸಿಂಧೂ ಪೂಜಾರ್ತಿ, ಪ್ರವೀಣ್, ಮಲ್ಲಿಕಾ, ಗ್ರಂಥಾಲಯ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ಶ್ರೀಮತಿ ಪುಷ್ಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ, ಕಾರ್ಯದರ್ಶಿ ಗಾಯತ್ರಿ, ಪಂಚಾಯತ್ ಸಿಬ್ಬಂದಿಗಳಾದ ಶ್ರೀ ಸತೀಶ್, ಶ್ರೀ ಹೇಮನಾಥ್ ಉಪಸ್ಥಿತರಿದ್ದರು.
ಅಸಮಾನ್ಯರಾಗಿ ಬೆಳೆದು ನಿಂತ ಮೇರು ವ್ಯಕ್ತಿ ಸತೀಶ್ ಕುಮಾರ್ ಅಂಚನ್, ಬಜಾಲ್
Posted On: 24 Feb 2021, 02:53 PM
ಶ್ರೀ ಸತೀಶ್ ಕುಮಾರ್ ಬಜಾಲ್ , ಸೌದಿ ಅರೇಬಿಯಾ ಮೂಲತ: ಅಂಚನ್ಸ್ ಹೌಸ್ ಕಂಕನಾಡಿ ಪಕ್ಕಲಡ್ಕ ಬಜಾಲ್ ನವರು. ತಂದೆ ದಿ! ಚಂದ್ರಶೇಖರ್ ಕುಂದರ್ ಕೊಡಿಯಲ್ ಬೈಲ್, ತಾಯಿ ದಿ! ಶಾರದ ಅಂಚನ್, ಕಂಕನಾಡಿ ಪಕ್ಕಲಡ್ಕ, ಬಜಾಲ್. 3ಗಂಡು ಮಕ್ಕಳಲ್ಲಿ ಕಿರಿಯವನು ಸತೀಶ್ ಕುಮಾರ್ ಬಜಾಲ್. ತನ್ನ 3ನೇ ವಯಸಿನಲ್ಲೇ ತಾಯಿಯನ್ನು ಕಳೆದುಕೊಂಡು ನಂತರ ತನ್ನ ಅಜ್ಜಿ ಹಾಗೂ ಮಾವ ಶ್ರೀ ರಾಘವ ಅಂಚನ್ ಆರೈಕೆಯಲ್ಲಿ -ಬಜಾಲ್ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಹಾಗೂ ರೋಸಾರಿಯೊ ಹೈಸ್ಕೂಲ್ ನಲ್ಲಿ ಪ್ರೌಢಶಿಕ್ಷಣ. ಸಂತ ಅಲೋಸಿಯಸ್ ಕಾಲೇಜಿನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಸಂತ ಅಲಾಸಿಯಸ್ ಸಂಧ್ಯಾ ಕಾಲೇಜ್. ಅಂತಿಮ B.A ಕಲಿಯುತ್ತಿರುವಾಗ ಅಲ್ಲಿನ ಆಡಳಿತ ಮಂಡಳಿ ಸಂಧ್ಯಾ ಕಾಲೇಜನ್ನು ಸರಕಾರಿ ಅನುದಾನವಿಲ್ಲದ ಕಾರಣ ಮುಚ್ಚುವ ನಿರ್ಧಾರ ಮಾಡಿ, ಮೊದಲು ಪ್ರಥಮ ಪಿಯುಸಿ, ಪ್ರಥಮ ಪದವಿ ಕಾಲೇಜನ್ನು ನಿಲ್ಲಿಸಿದಾಗ ಎಲ್ಲಾ ವಿದ್ಯಾರ್ಥಿ ಸಂಘಗಳನ್ನು ಒಗ್ಗೂಡಿಸಿ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ 50 ದಿನಗಳ ಅವಿರತ ಹೋರಾಟದ ಫಲವಾಗಿ ಸರಕಾರದಿಂದ ಕಾಲೇಜಿಗೆ ಅನುದಾನ ಬಿಡುಗಡೆ. ಹಾಗೂ 1991-92 ಸಾಲಿನ ಕಾಲೇಜು ವಿದ್ಯಾರ್ಥಿ ಸಂಘಕ್ಕೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆ. ಕಾಲೇಜಿನ 25 ವರ್ಷದ ಬೆಳ್ಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ. ಸರ್ವ ಕಾಲೇಜು ವಿದ್ಯಾರ್ಥಿ ಸಂಘಕ್ಕೆ ಉಪಾಧ್ಯಕ್ಷಾರಾಗಿ ಆಯ್ಕೆ. ಸರ್ವ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘಕ್ಕೆ-3 ವರ್ಷಗಳ ಸತತವಾಗಿ ಸಂಚಾಲಕಾರಾಗಿ ಆಯ್ಕೆ. ನಂತರ ಸಲಹೆಗರರಾಗಿ ಸೇವೆಸಲ್ಲಿಸಿ. ವೃತ್ತಿಪರ ಕಾಲೇಜು ಶಿಕ್ಷಣ ವಿದ್ಯಾರ್ಥಿ ಸಂಘದ ಸಂಚಾಲಕಾರಾಗಿ ಹಾಗು ಭಾರತ ವಿದ್ಯಾರ್ಥಿ ಫೆಡರೇಶ್ ಮಂಗಳೂರು ಅಧ್ಯಕ್ಷರಾಗಿ, ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ. ಹಲವು ಹೋರಾಟ ಚಳುವಳಿಗಳಿಗೆ ನಾಯಕತ್ವವನ್ನು ನೀಡಿದ್ದಾರೆ. ದ.ಕ ಜಿಲ್ಲೆಯಲ್ಲಿ ತ್ರೋಬಾಲ್ ಅಸೋಷ್ಷಯೇಷನ್ ಸ್ಥಾಪಕಲ್ಲಿ ಒಬ್ಬರಾಗಿದ್ದಾರೆ ತನ್ನ ಊರಿನ ಪಕ್ಕಲಡ್ಕ ಯುವಕ ಮಂಡಲದ (ರಿ) ಇದರ ಕಾರ್ಯದರ್ಶಿಯಾಗಿರುವಾಗ ಇಡೀ ಬಜಾಲ್ ಗ್ರಾಮವನ್ನು ಸಾಕ್ಷರತ ಅಂದೋಲನದ ಸಮಯ ದತ್ತು ಸ್ವೀಕಾರ ಮಾಡಿ. ತಾಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಬಜಾಲ್, ಕಂಕನಾಡಿ ಮತ್ತು ಜಪ್ಪಿನ ಮೊಗರು ಗ್ರಾಮದಲ್ಲಿ ಪ್ರಥಮ ಬಾರಿಗೆ ಲೋಕ ಅದಾಲತ್ ಕಾರ್ಯಕ್ರಮವನ್ನು PYM ಮತ್ತು SDM ಕಾಲೇಜಿನ ಸಹಯೋಗದಿಂದ ಆಗಿನ ಜಿಲ್ಲಾಧಿಕಾರಿ ಭರತ್ ಲಾಲ್ ಮೀನರಿಂದ ಉದ್ಘಾಟಿಸಿ. ಜಿಲ್ಲಾ ಮಾಜಿಸ್ಟೇಟ್, ಅಸಿಸ್ಟೆಂಟ್ ಕಮಿಷನರ್ ತಹಸೀಲ್ದಾರ್, ಇನ್ನಿತರ ಎಲ್ಲಾ ಅಧಿಕಾರಿಗಳನ್ನು-ಬಜಾಲಿನ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಸೇರಿಸಿ ಒಂದೇ ದಿನ 460ಅರ್ಜಿಗಳನ್ನು ಸ್ವೀಕರಿಸಿ ಅದೇ ದಿನ 270 ಅರ್ಜಿಗಳ ಸಮಸ್ಯೆಗಳನ್ನು ಪರಿಹರಿಸಿ ಇನ್ನುಳಿದ ಅರ್ಜಿಗಳ ಸೊಕ್ತ ದಾಖಲೆಗಳು ಬಟ್ಟುಗೂಡಿಸಿ ನಂತರ ದಿನಗಳಲ್ಲಿ ಸರಿಪಡಿಸಿದ ಪರಿಹರಿಸಿ ಬಗೆಹರಿಸುವುದರಲ್ಲಿ ಇವರು ಶ್ರಮಿಸಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿ ಬಜಾಲ್ ಗ್ರಾಮದ 48 ಸ್ಥಳಗಳನ್ನು ಗುರುತಿಸಿ ಒಂದೇ ದಿನ ಒಂದೇ ಸಮಯದಲ್ಲಿ -ಪಕ್ಕಲಡ್ಕ ಯುವಕ ಮಂಡಲ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಕಾಲೇಜಿನ NSS ವಿದ್ಯಾರ್ಥಿಗಳು ಹಾಗೂ ಊರಿನ ಸಂಘ ಸಂಸ್ಥೆಯ ಯುವಕರನ್ನು ಸೇರಿಸಿ ಬ್ರಹತ್ ಶ್ರಮದಾನ ಆಂದೋಲನವನ್ನು ಮಾಡಿದ ಕೀರ್ತಿ ಅವರದು. ಅದಕ್ಕೆ ಆಗಿನ ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಶಾಲಿನಿ ಗೋಯಲ್, ಜಿಲ್ಲಾಧಿಕಾರಿ ಭರತ್ ಲಾಲ್ ಮೀನರಿಂದ ಪ್ರಶಂಸೆಗೆ ಪಾತ್ರ. ಜಲ್ಲಿಗುಡ್ಡೆ ಮಾರಿಯಮ್ಮ ಸೇವಾ ಮಂದಿರದಲ್ಲಿ ಹಲವು ಕಂದಾಯ ಶಿಬಿರ ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ಇದರ ಸಹಯೋಗದಿಂದ ಹಲವು ನೇತ್ರ ಚಿಕಿತ್ಸೆ, ವೈದ್ಯಕೀಯ ಶಿಬಿರಗಳನ್ನು ಮಾಡಿ ಹಲವರಿಗೆ, ನೇತ್ರ ಶಸ್ತಚಿಕಿತ್ಸೆ, ಕನ್ನಡಕ್ಕ ನೀಡುವಲ್ಲಿ ನೆರವಾಗಿದ್ದಾರೆ. ಗ್ರಾಮೀಣ ಯುವಕರಿಗೆ ಕಲಾ ಪ್ರತಿಭೆಗೆ ಪೋತ್ಸಾಹಿಸಲು PYM ಡಾನ್ಸ್ ಗ್ರೂಪ್ ಸ್ಥಾಪನೆ -ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆದಿರುತ್ತಾರೆ. ಹಲವು ಬಾರಿ ಯುವಕ ಮಂಡಲ ಹಾಗೂ ಶಾಲೆಗಳಲ್ಲಿ ರಕ್ತದಾನ ಶಿಬಿರವನ್ನು ಮಾಡಿ ಹಾಗೂ ಇತರ ಸಮಯದಲ್ಲಿ ರಕ್ತದಾನಿಗಳನ್ನು ಸಂಪರ್ಕಿಸಿ ರಕ್ತದ ವ್ಯವಸ್ಥೆ ಮಾಡುತಿದ್ದ ಮಂಗಳೂರಿನ 24*7 ಆಗಿದ್ದ ಅಸಮಾನ್ಯ ವ್ಯಕ್ತಿ. ಸಂದೇಶ ಬಜ್ಜೋಡಿ ನಂತೂರು, ಹಾಗೂ ದ. ಕ. ಪತ್ರಕರ್ತರ ಸಂಘದ ವತಿಯಿಂದ -ಪತ್ರಿಕೋದ್ಯಮ ತರಬೇತಿಯನ್ನು ಪಡೆದು ಅದರ ಪ್ರಮಾಣ ಪತ್ರವನ್ನು -ಸಂತ-ಮದರ್ ತೆರೇಸಾರವರ ದಿವ್ಯಹಸ್ತದಿಂದ ಆಶೀರ್ವಾದ ಪಡೆದಿರುತ್ತಾರೆ. ನಂತರ ಮಂಗಳೂರು ಮಿತ್ರ, ಕರಾವಳಿ ಮಾರುತ ಇದರ ವರದಿಗಾರರಾಗಿ. ಹಾಗೂ ಮಂಗಳೂರು ಯೂನಿಟಿ ಹೆಲ್ತ್ ಕಾಂಪ್ಲೆಕ್ಸ್ ನಲ್ಲಿ 3 ವರ್ಷಗಳ ಕಾಲ Front Office incharge ಹಾಗೂ A.M.O ರವರ ಆಪ್ತಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿರುತ್ತಾರೆ. ಮಧ್ಯಮ ಕುಟುಂಬದಿಂದ ಬಂದು- ತನ್ನ ಮನೆಯ ಆರ್ಥಿಕ ಪರಿಸ್ಥಿತಿಯನ್ನು ಮನಗಂಡು ತನ್ನ ಗೆಳೆಯರು ಮತ್ತು ಕುಟುಂಬಸ್ತರ ಒತ್ತಾಯದ ಮೇರೆಗೆ -1996ಕ್ಕೆ ಸೌಧಿ ಅರೇಬಿಯಾಕ್ಕೆ ಉದ್ಯೋಗ ನಿಮಿತ್ತ ಪ್ರಯಾಣ. -ಸೌಧಿಯ ಜಿದ್ದ ,ರಿಯಾದ್ ,ದಮ್ಮಾಮ್ ಅಲ್ ಹಸಾ ರಲ್ಲಿ , Reginal Sales Manager/Business Development Manager, Brach Manager ಆಗಿ -ಒಟ್ಟು 12 ವರ್ಷಗಳ ಸೇವೆ ಮಾಡಿ ನಂತರ. ದಮ್ಮಾಮ್ ನಲ್ಲಿ ತನ್ನ ಸ್ವಂತ ಉದ್ದಿಮೆಯಲ್ಲಿ ತೊಡಗಿರುತ್ತಾರೆ. ಸೌದಿಯಲ್ಲಿ 2010ರಲ್ಲಿ ಊರಿನ ಯುವಕರು ಮತ್ತು ಮಕ್ಕಳ ಕಲಾಪ್ರತಿಭೆಯನ್ನು ಪೋತ್ಸಾಹಿಸುವ ನಿಟ್ಟಿನಲ್ಲಿ -ಕುಡ್ಲ ಅಡ್ವೆಂಚರ್ ದಮ್ಮಮ್ (KAD)ನ್ನು ಸ್ಥಾಪಿಸಿದವರಲ್ಲಿ ಪ್ರಮುಖರು 2015ರಲ್ಲಿ (ಯಕ್ಷಗಾನ ಕಲಾವಿದರಿಗೆ ಪೋತ್ಸಾಹಿಸುವ ನಿಟ್ಟಿನಲ್ಲಿ) ಹವ್ಯಾಸಿ ಕಲಾವಿದರು ಸೌದಿ ಅರೇಬಿಯಾ ತಂಡದ ಸ್ಥಾಪಕರಲ್ಲೊಬ್ಬರು ಹಾಗೂ ಪ್ರಧಾನಕಾರ್ಯದರ್ಶಿಯಾಗಿದ್ದರು. ಅದರಿಂದ 3 ಬಾರಿ ಯಕ್ಷಗಾನ ಪ್ರದರ್ಶನವನ್ನು ಬಹರೈನ್ ನಲ್ಲಿ ಕನ್ನಡ ಸಂಘ ಬಹರೈನ್ ಸಹಕಾರದಿಂದ ಮಾಡಿಸಿರುತ್ತಾರೆ. 2016ರಲ್ಲಿ-(Damman Jubail )ದಮ್ಮಮ್ ಜುಬೈಲ್ ಬಿಲ್ಲವಾಸ್ ನ ಮುಖ್ಯ ಸಂಸ್ಥಾಪಕರಲ್ಲೊಬ್ಬರು. 2010ರಿಂದ ಸೌದಿ ಅರೇಬಿಯಾದ ಪ್ರತಿಸ್ಥಿತ charity organisation, ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ (MASA)ದ ಸಂಸ್ಕೃತಿಕ ಕಾರ್ಯದರ್ಶಿ, ಉಪ ಖಜಾಂಚಿ, ಸಹ ಕಾರ್ಯದರ್ಶಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಹಾಗೂ 2020 ನೇ ಇಸವಿಯಲ್ಲಿ MASA ವರ್ಷದ ವ್ಯಕ್ತಿ (Man Of The Year ) ಪ್ರಶಸ್ತಿಯನ್ನು ಪಡೆದಿರುತ್ತಾರೆ. ಇದು ಅವರ ಸಮಾಜ ಸೇವೆಗೆ ಸಂದ ಗೌರವ ಸೌದಿ ಅರೇಬಿಯಾದ ದಮ್ಮಮ್ ನಲ್ಲಿ 24*7 ಲಭ್ಯವಾಗುವ ಆಶ್ತರ ಪಾಲಿಗೆ ಆಸರೆಯಾಗುವ ಏಕೈಕ ವ್ಯಕ್ತಿ -ಸದಾ ಸಮಾಜ ಸೇವೆಗೆ ತನ್ನನ್ನು ತಾನು ತೊಡಗಿಸಿಕೊಂಡಿರುವರು. ಇವರು ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗ ದೊರಕಿಸಿ ಕೊಡುವಲ್ಲಿ ಮಹತ್ಥರ ಪಾತ್ರ, ಕಾನೂನು ಸಲಹೆ ಸಹಕಾರ ಹಾಗೂ ಮುಖ್ಯವಾಗಿ Dead Body ಯನ್ನು ತನ್ನ ಹುಟ್ಟುರಿಗೆ ಕಳುಹಿಸಿ ಕೊಡುವ ಪುಣ್ಯದ ಕೆಲಸವನ್ನು ಯಾವುದೇ ಪ್ರತಿಫಲ, ಅಪೇಕ್ಷೆಯಿಲ್ಲದೆ ಸದಾ ಮಾಡುತಿರುತ್ತಾರೆ. Covid-19 ಸಂಧಿಗ್ದ ಸಮಯದಲ್ಲಿ ದಮ್ಮಮ್ ಹಾಗೂ ಊರಿನಲ್ಲಿ ಆಹಾರ ಕಿಟ್ ಹಂಚುವ ವ್ಯವಸ್ಥೆ ಹಾಗೂ ಸೌದಿ ಯಿಂದ ಊರಿಗೆ ಹೋಗುವ ನಮ್ಮ ಸಮುದಾಯದವರಿಗೆ ಸಹಕಾರ, ಪ್ರಯಾಣ ವ್ಯವಸ್ಥೆಯನ್ನು ಮಾಡಿ ಎಲ್ಲರಾ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲದೆ ಇತ್ತಿಚೆಗೆ CARDTS Pompwel ಏಡ್ಸ್ ಪೀಡಿತ ಮಕ್ಕಳ ಆರೈಕೆ ಮಾಡಲು ದಾನಿಗಳ ಕೊರತೆ ಇದ್ದಾಗ ತನ್ನನ್ನು ಸಂಪರ್ಗಿಸಿದ ತಕ್ಷಣವೇ ಸ್ಪಂದಿಸಿ ಸೌದಿಯ ಮಾಸ ಸಂಸ್ಥೆಯ ಹಾಗು ಇತರ ದಾನಿಗಳನ್ನು ಒಟ್ಟುಸೇರಿಸಿ ದೋಡ್ಡ ಮೊತ್ತದ ಧನಸಹಾಯ ನೀಡಿ ಸಹಕರಿಸಿ ಮಾನವೀಯತೆ ಮೆರೆದಿದ್ದಾರೆ. ತನ್ನ ಹುಟ್ಟುರಿನಲ್ಲಿ ಇರುವ ಬಡ ವಿಧ್ಯಾರ್ಥಿಗಳು ಮತ್ತು ಬಡ ರೋಗಿಗಳ ಚಿಕಿಸ್ಸ್ತಯ ಆರ್ಥಿಕ ನೆರವಿಗಾಗಿ ಊರಿನ ಸಂಘ ಸಂಸ್ಥಗಳಿಂದ ಬಂದ ವಿನಂತಿ ಪತ್ರಗಳಿಗೆ ಸ್ಪಂದಿಸಿ ಸೌದಿಯ ಮುಖ್ಯವಾಗಿ MASA ಹಾಗೂ ಇನ್ನಿತರ ಸಂಸ್ಥೆಗಳ ಮೂಲಕ ಪ್ರತೀ ವರ್ಷವೂ ನೆರವನ್ನು ನೀಡುತಿದ್ದಾರೆ. ಹಾಗೂ ಕಂಕನಾಡಿ ವಲಯ ಬಂಟರ ಸಂಘದ (ಅಳಪೆ,ಕಂಕನಾಡಿ,ಬಜಾಲ್ )ವತಿಯಿಂದ ಸಂತ ಜೋಸೆಫ್ ರ ಪ್ರೌಡ ಶಾಲೆಯಲ್ಲಿ ನಡೆದ ವಾರ್ಪಿಕೋತ್ಸವ ಹಾಗೂ ಕಾರ್ಯಕ್ರಮದಲ್ಲಿ ಇವರು ಮಾಡುತ್ತಿರುವ ಸಮಾಜ ಮುಖಿ ಕೆಲಸಗಳನ್ನು ಗುರುತಿಸಿ 2017 ರಲ್ಲಿ ಸನ್ಮಾನಿಸಲಾಗಿದೆ. ಇಂತಹ ಮೇರು ವ್ಯಕ್ತಿತ್ವ ಕೊಡುಗೈ ಧಾನಿಗಳು, ನಿಸ್ವಾರ್ಥ ಸೌದಿ ಅರೇಬಿಯಾದ ಪ್ರತಿಸ್ಥಿತ charity organisation, ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ (MASA)ದ ಸಂಸ್ಕೃತಿಕ ಕಾರ್ಯದರ್ಶಿ, ಉಪ ಖಜಾಂಚಿ, ಸಹ ಕಾರ್ಯದರ್ಶಿ, ಉಪಾಧ್ಯಕ್ಷ) ಸೇವೆ ಸಲ್ಲಿಸಿರುತ್ತಾರೆ. ಹಾಗೂ 2020 ನೇ ಇಸವಿಯಲ್ಲಿ MASA ವರ್ಷದ ವ್ಯಕ್ತಿ (Man Of The Year ) ಪ್ರಶಸ್ತಿಯನ್ನು ಪಡೆದಿರುತ್ತಾರೆ.ಸೌದಿ ಅರೇಬಿಯಾದ ಪ್ರತಿಷ್ಠಿತ Charity Organization ಮಂಗಳೂರು ಆಸೋಷಿಯೇಷನ್ (ರಿ) (MASA) ಇದರ ವತಿಯಿದ ನಡೆದ ವಾರ್ಷಿಕ ಮಹಾ ಸಭೆಯಲ್ಲಿ COVID-19 ಸಮಯದಲ್ಲಿ ಅವರು ಮಾಡುತ್ತಿರುವ ಸಕ್ರೀಯ ಸೇವೆಯನ್ನು ಗುರುತಿಸಿ COVID-19 Warriors ಪ್ರಶಸ್ತಿಯನ್ನು 28/09/2021 ರಂದು ನೀಡಿ ಗೌರವಿಸಲಾಯಿತು.ಹಾಗೂ Charity Organization ಮಂಗಳೂರು ಆಸೋಷಿಯೇಷನ್ (ರಿ) (MASA) ನೂತನ ಅಧ್ಯಕ್ಷರಾಗಿ ಸರ್ವಾನು ಮತದಿಂದ ಅವಿರೋದವಾಗಿ ಆಯ್ಕೆಯಾದ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಹಲವಾರು ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಸಹಕಾರವನ್ನು ನೀಡಿದ ಕೊಡುಗೈ ದಾನಿ. ಮಂಗಳೂರಿನ ಹೃದಯ ಭಾಗದಲ್ಲಿರುವ ಕಾರಣಿಕದ ಪುಣ್ಯ ಕ್ಷೇತ್ರ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ ಮತ್ತು ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್’ಲ್ ಇದರ ಕ್ಷೇತ್ರಾಭಿವೃದ್ಧಿಗೆ ತನ್ನ ಕೈಲಾದಷ್ಟು ಸಹಕಾರ ನೀಡಿದಲ್ಲದೆ ಇತರರನ್ನು ಒಗ್ಗೂಡಿಸಿ ಕ್ಷೇತ್ರದ ಬಗ್ಗೆ ಮನವರಿಕೆ ಮಾಡುವುದರೊಂದಿಗೆ ಧನ ಸಂಗ್ರಹ ಮಾಡಿ ಕ್ಷೇತ್ರಕ್ಕೆ ಸಮರ್ಪಿಸಿದ್ದಾರೆ. ಶ್ರೀಯುತರು ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಸೌದಿ ಅರೇಬಿಯಾದ ಸಂಚಾಲಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಶ್ರೀಯುತರ ಧರ್ಮ ಪತ್ನಿ ಶ್ರೀಮತಿ ಸುಚಿತ್ರ ಸತೀಶ್ ಬಜಾಲ್ ಮತ್ತು ಇಬ್ಬರು ಮಕ್ಕಳು ಶ್ರೀನಿಧಿ & ಶ್ರೇಯ ಅವರೊಂದಿಗೆ ದಮ್ಮಾಮ್ ಸೌದಿ ಅರೇಭಿಯ ದಲ್ಲಿ ಸುಖಿ ಜೀವನವನ್ನು ನಡೆಸುತ್ತಿದ್ದಾರೆ. ಇಂತಹ ಮೇರು ವ್ಯಕ್ತಿತ್ವ ಕೊಡುಗೈ ಧಾನಿಗಳು, ನಿಸ್ವಾರ್ಥ ಸಮಾಜ ಸೇವಕರು ಸಮಾಜಕ್ಕೆ ಮಾದರಿ. ಇವರ ನಿಸ್ವಾರ್ಥ ಸೇವೆಗೆ ಡೊಡ್ಡ ಸಲಾಂ.
ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕ ಹಲ್ಲೆ
Posted On: 23 Feb 2021, 10:25 PM
ಬಾರ್ಕೂರು : ಜನಸಾಮಾನ್ಯರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಾ ಕಾನೂನು, ನಿಯಮ ಪಾಲನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಶಂಕರ ಶಾಂತಿಯವರ ಮೇಲೆ ದಿನಾಂಕ ಫೆಬ್ರವರಿ 20, ಆದಿತ್ಯವಾರದಂದು ಮನೆಯ ಸಮೀಪದ ಸಭಾಭವನದ ಅಡುಗೆ ಕೋಣೆಯಲ್ಲಿ ಕೂಡಿ ಹಾಕಿ, ಚಿತ್ರ ಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅದೇ ಸಮಯಕ್ಕೆ ಬೊಬ್ಬೆ ಕೇಳಿ ಸ್ಥಳಕ್ಕಾಗಮಿಸಿದ ಶಂಕರ ಶಾಂತಿಯವರ ಹೆಂಡತಿ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತನ್ನ ಗಂಡನನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದಾರೆ. RTI ಕಾರ್ಯಕರ್ತನಾಗಿ ಸಾಮಾಜಿಕ ನೆಲೆಯಲ್ಲಿ ತನ್ನ ಊರಿನಲ್ಲಿ ಹಾಗೂ ಸುತ್ತಮುತ್ತ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದವರು ಶಂಕರ ಶಾಂತಿ. ರಸ್ತೆ ಸಾರಿಗೆ ಸುರಕ್ಷತೆ ವಿಷಯ, ಕಾಂಕ್ರೀಟ್ ರಸ್ತೆ ಕಳಪೆ ವಿಷಯ, ಬಾರ್ಕೂರು ಜೈನ ಬಸದಿ ಆಕ್ರಮಣ ತೆರವು, ಹೊಸಾಳ ಗರಡಿಯಲ್ಲಿ ವೈದಿಕನೋರ್ವನ ಅನಾಚಾರ ಪ್ರಶ್ನಿಸುವಿಕೆ, ಇಂತಹದ್ದೆ ಅನೇಕ ಜನಪರ ಸೇವೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದವರು ಶಂಕರ ಶಾಂತಿ. ರಸ್ತೆ ಬದಿಯಲ್ಲಿ ಬ್ಯಾನರ್ ಅಳವಡಿಸಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರ ಕುರಿತು ಕ್ರಮ ಕೈಗೊಂಡಿದ್ದರಿಂದ ದುಷ್ಕರ್ಮಿಗಳಾದ ಪ್ರವೀಣ ಆಚಾರ್ಯ, ಪ್ರಸಾದ್ ಆಚಾರ್ಯ, ಶಾಂತರಾಮ ಶೆಟ್ಟಿ, ಮಂಜಪ್ಪ ಪೂಜಾರಿ, ದಿವಾಕರ ಒಟ್ಟು ಸೇರಿ ಕಬ್ಬಿಣದ ರಾಡ್ನಿಂದ ಕೊಲೆಯತ್ನ ನಡೆಸಿರುವುದು ದುಷ್ಟಕೂಟದ ರಾಜಕೀಯ ಪ್ರೇರಿತ ದುಷ್ಟಕೃತಕ್ಕೆ ಈ ಪ್ರಕರಣ ಪುರಾವೆ ಒದಾಗಿಸಿದೆ. ಮನುಷ್ಯತ್ವವಿಲ್ಲದ ವರ್ತನೆಯಾಗಿದೆ ಇದರಲ್ಲಿ ಅವರ ಸಂಬಂಧಿಯಾದ ಮಂಜಪ್ಪ ಪೂಜಾರಿ ಇತರರ ಜೊತೆ ಸೇರಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಶಂಕರ ಶಾಂತಿಯವರ ಹೆಂಡತಿಯವರು ಬಾರದೆ ಹೋದಲ್ಲಿ ಶಂಕರ ಶಾಂತಿ ಶಿವನ ಪಾದ ಸೇರುತ್ತಿದ್ದರೇನೋ? ಸಾಧ್ಯ ಶಂಕರ ಶಾಂತಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದು, ಈ ಹಲ್ಲೆ ಪ್ರಕರಣ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 27/2021 ಕಲಂ: 143, 147, 148, 341, 323, 324, 326, 307, 506 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. ಸ್ವಾರ್ಥ ಸಾಧನೆಯಿಂದ ತಪ್ಪು ಯಾರೇ ಮಾಡಿರಲಿ ಅದಕ್ಕೆ ಶಿಕ್ಷೆಯಾಗಲಿ ಎನ್ನುವುದೇ ನಮ್ಮ ಇರಾದೆ. ತಪ್ಪುಗಳನ್ನು, ಸಾರ್ವಜನಿಕ ಅನ್ಯಾಯಗಳನ್ನು ಪ್ರಶ್ನಿಸಿದಾಕ್ಷಣ ಕೊಲೆ ಮಾಡುವ ಮಟ್ಟಕ್ಕೆ ತಲುಪಿರುವುದು ಈ ಪ್ರಜಾಪ್ರಭುತ್ವ ವ್ಯವಸ್ಥೆಯ ದುರಂತವೆ ಸರಿ. ಇದೀಗ ಅಗರ್ಭ ಶ್ರೀಮಂತಿಕೆಯ ಮತ್ತು ರಾಜಕೀಯ ಪ್ರಭಾವ ಬಳಸಿ ತಪ್ಪಿತಸ್ಥರು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎನ್ನುವುದು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಇವರನ್ನು ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಬೇಕು. ಇಂತಹ ಸಮಾಜ ದ್ರೋಹಿ ಕೆಲಸಮಾಡುವವರನ್ನು ಸುಮ್ಮನೆ ಬಿಟ್ಟರೆ ಮುಂದೆ ಇನ್ನಷ್ಟು ಲೋಕಕಂಠಕರಾಗಿ ಅದೆಷ್ಟೋ ಪಾಪದವರ ಮನೆ ಹಾಳುಮಾಡಲು ಹಿಂಜರಿಯುವುದಿಲ್ಲ. ಸಮಾಜಸೇವಕ, ಬಿಲ್ಲವ ಸಮಾಜದ ಹೋರಾಟಗಾರ ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ. ಈ ದುಷ್ಕೃತ್ಯವೆಸಗಿದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ. ಪೋಲಿಸ್ ಇಲಾಖೆ ಮತ್ತು ಜನಪ್ರತಿನಿಧಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಶಂಕರ ಶಾಂತಿಗೆ ನ್ಯಾಯ ಒದಗಿಸುವಂತಾಗಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸುಗ್ಗಿ ಮಾರಿಪೂಜೆಯಂದು ನಡೆಯಲಿರುವ ಶಿಲಾ ಪುಷ್ಪ ಸಮರ್ಪಣೆಯ ಪೂರ್ವಭಾವಿ ಸಮಾಲೋಚನಾ ಸಭೆ
Posted On: 23 Feb 2021, 10:15 PM
ಕಾಪು : ಮಾರ್ಚ್ 23/24 ರಂದು ನಡೆಯುವ ಸುಗ್ಗಿ ಮಾರಿಪೂಜೆಯಂದು ಜರಗಲಿರುವ ಶಿಲಾ ಪುಷ್ಪ ಸಮರ್ಪಣಾ ಬಗ್ಗೆ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.
ಎಲ್ಲೂರುದ ಉಲ್ಲಾಯೆ ತುಳು ಭಕ್ತಿಗೀತೆಯ ಸಿಡಿ ಬಿಡುಗಡೆ
Posted On: 23 Feb 2021, 08:24 PM
ಕಾಪು : ಕುಂಜೂರಿನ ಮೋಕೆದ ಕಲಾವಿದರು ಸಿದ್ಧಗೊಳಿಸಿದ ಎಲ್ಲೂರುದ ಉಲ್ಲಾಯೆ ತುಳು ಭಕ್ತಿಗೀತೆಯ ಸಿಡಿಯನ್ನು ಎಲ್ಲೂರು ಮಹತೋಭಾರ ದೇವರ ಸನ್ನಿಧಿಯಲ್ಲಿ ನೆರವೇರುತ್ತಿರುವ ಸೀಮೆಯ ರಾಶಿಪೂಜೆಯ ಸಂದರ್ಭ ಸೀಮೆಯ ತಂತ್ರಿಗಳಾದ ವೇ.ಮೂ . ಲಕ್ಷ್ಮೀನಾರಾಯಣ ತಂತ್ರಿಯವರು ಹಾಗೂ ಶ್ರೀ ಕೆ.ಎಲ್. ಕುಂಡತಾಯರವರು ಬಿಡುಗಡೆಗೊಳಿಸಿ ಹರಸಿದರು. ರಾಜೇಶ್ ಆರ್.ಕೆ ಸಾಹಿತ್ಯದಲ್ಲಿ , ರತ್ನಾಕರ ಆಚಾರ್ಯ ಕುಂಜೂರು ಮತ್ತು ರವಿರಾಜ್ ಕುಲಾಲ್ ಎರ್ಮಾಳ್ ರವರ ಗಾಯನವಿದೆ. ಸಿಡಿ ಬಿಡುಗಡೆ ಸಂದರ್ಭದಲ್ಲಿ ಎಲ್ಲೂರುಗುತ್ತು ಪ್ರಪುಲ್ಲ ಶೆಟ್ಟಿ, ನಡಿಮನೆ ದೇವರಾಜ್ ರಾವ್, ಎಲ್ಲೂರು ಯುವಕ ಮಂಡಲದ ಅಧ್ಯಕ್ಷರು ನಾಗರಾಜ್, ನಮ್ಮ ಕಾಪು ನ್ಯೂಸ್ ತಂಡದ ಉದಯ ಕುಲಾಲ ಉಪಸ್ಥಿತರಿದ್ದರು.
ಎಲ್ಲೂರು ಸೀಮೆಯ ವಾದ್ಯವಾದಕ ಶ್ರೀ ಲಕ್ಷ್ಮಣ ಸೇರಿಗಾರಗೆ ಸಮ್ಮಾನ
Posted On: 21 Feb 2021, 09:00 PM
ಕಾಪು : ಎಲ್ಲೂರು ಸೀಮೆಯ ಶ್ರೀ ವಿಶ್ವೇಶ್ವರ ದೇವಳದ ಪವಿತ್ರಪಾಣಿ ಮನೆತನದ ಶುಭ ಸಮಾರಂಭದಲ್ಲಿ ಎಲ್ಲೂರು ಸೀಮೆಯ ವಾದ್ಯವಾದಕ ಶ್ರೀ ಲಕ್ಷ್ಮಣ ಸೇರಿಗಾರ ಅವರನ್ನು ಕಟೀಲಿನ ಆನುವಂಶಿಕ ಅರ್ಚಕ ವೇ.ಮೂ. ಅನಂತ ಪದ್ಮನಾಭ ಆಸ್ರಣ್ಣ ಅವರು ಸಮ್ಮಾನಿಸಿದರು. ನಿವೃತ್ತ ಪ್ರಾಂಶುಪಾಲ ಸುದರ್ಶನ ವೈ.ಎಸ್, ಕೆ.ಎಲ್.ಕುಂಡಂತಾಯ, ಪುಷ್ಪಲತಾ ಎಲ್. ಕುಂಡಂತಾಯ , ಸತೀಶ ಕುಂಡಂತಾಯ, ಭಾರ್ಗವ ಎಲ್. ಕುಂಡಂತಾಯ ,ರಮ್ಯಾ ಬಿ. ಕುಂಡಂತಾಯ , ಶ್ರೀಕಾಂತ ಕುಂಡಂತಾಯ ಮುಂತಾದವರು ಉಪಸ್ಥಿತರಿದ್ದರು .
ಬಿರುವೆರ್ ಕಾಪು ಸೇವಾ ಟ್ರಸ್ಟ್ : ಜ್ಞಾನದೀವಿಗೆ ವಿದ್ಯಾರ್ಥಿವೇತನ ವಿತರಣೆ
Posted On: 21 Feb 2021, 08:14 PM
ಕಾಪು : ಸಮಾಜದಲ್ಲಿ ಜ್ಞಾನ ಸಂಪತ್ತನ್ನು ಹೊಂದಿರುವ ಪ್ರತಿಭೆಗಳಿಗೆ ಕೊರತೆಯಿಲ್ಲ. ಅವರ ಗುರುತಿಸುವಿಕೆ ಹಾಗೂ ಅವರಿಗೆ ಸರಿಯಾದ ಮಾರ್ಗದರ್ಶನವನ್ನು ಹೆತ್ತವರು,ಗುರುಗಳು ಮತ್ತು ಸಂಘ-ಸಂಸ್ಥೆಗಳು ಮಾಡಬೇಕಾಗಿದೆ. ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ, ಆಶಕ್ತರ ಪಾಲಿನ ಸೇವಾ ಸಂಸ್ಥೆಯಾಗಿ ದುಡಿಯುತ್ತಿರುವ ಬಿರುವೆರ್ ಕಾಪು ಸೇವಾ ಟ್ರಸ್ಟ್ ನ ಕಾರ್ಯ ಶ್ಲಾಘನೀಯ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಬಿರುವೆರ್ ಕಾಪು ಸೇವಾ ಟ್ರಸ್ಟ್ ಆಶ್ರಯದಲ್ಲಿ ಕಾಪು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಜರಗಿದ ಕಾಪು ತಾಲೂಕಿನ ಪ್ರತಿಭಾವಂತ ಬಿಲ್ಲವ ಹಾಗೂ ಇತರ ಸಮಾಜದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನ ಜ್ಞಾನದೀವಿಗೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಗೀತಾಂಜಲಿ ಸುವರ್ಣ ಮಾತನಾಡಿ ಹೆತ್ತವರು ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿ ಮೂಲಕ ಅವರ ಭವಿಷ್ಯ ರೂಪಿಸಬೇಕಾಗಿದೆ. ಮಕ್ಕಳು ಕಲಿತು ಉದ್ಯೋಗ ಸೇರಿ ತಮಗೆ ಸಹಾಯ ನೀಡಿದ ಸಂಸ್ಥೆಗಳಿಗೆ ತಮ್ಮಿಂದಾದ ಸಹಾಯ ಮಾಡಬೇಕಾಗಿದೆ ಎಂದರು. ಕಲಿಕೆಯ ಹಂತದಲ್ಲಿಯೇ ಮುಂದಿನ ಗುರಿಯ ಬಗ್ಗೆ ದೃಢ ನಿರ್ಧಾರ ಮಕ್ಕಳಲ್ಲಿ ಇರಬೇಕು. ನಾಗರಿಕ ಸೇವಾ ಪರೀಕ್ಷೆಗಳ ಕಡೆಗೂ ಮಕ್ಕಳು ಗಮನಹರಿಸ ಬೇಕಾಗಿದೆ. ಕಲಿಕೆಯೊಂದಿಗೆ ವೃತ್ತಿಪರ ಕೌಶಲ್ಯವು ಇಂದು ಅನಿವಾರ್ಯ ಎಂದು ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ರಮೇಶ್ ಜಿ. ಅಂಚನ್ ಹೇಳಿದರು. ಕಾಪು ಪುರಸಭೆಯ ಅಧ್ಯಕ್ಷರಾದ ಅನಿಲ್ ಕುಮಾರ್ ಟ್ರಸ್ಟ್ ನ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು. ವಿದ್ಯಾರ್ಥಿ ವೇತನ ವಿತರಣೆ : ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಆರ್ಥಿಕವಾಗಿ ಹಿಂದುಳಿದ ಸುಮಾರು 40 ವಿದ್ಯಾರ್ಥಿಗಳಿಗೆ 1ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿವೇತನ ವಿತರಿಸಲಾಯಿತು. ಗೌರವ ವಂದನೆ : ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ಮಕ್ಕಳಿಗೆ ಹಾಗೂ ಕಾರಣಿಕ ಕ್ಷೇತ್ರ ಶ್ರೀ ಪೊಯ್ಯ ಪೊಡಿಕಲ್ಲ ಗರಡಿಯ ಪಾತ್ರಿಗಳಾದ ಜಗ್ಗು ಪೂಜಾರಿ, ಶ್ರೀನಿವಾಸ ಪೂಜಾರಿ ಹಾಗೂ ಕಾಪುಕ್ಷೇತ್ರಕ್ಕೆ ಅಧಿಕಾರ ಪಟ್ಟದಲ್ಲಿರುವ ಶ್ರೀ ಧೂಮಾವತಿ ದೇವಸ್ಥಾನದ ಅರ್ಚಕರಾದ ಹರಿಶ್ಚಂದ್ರ ಕೋಟ್ಯಾನ್ ಮತ್ತು ವಿದ್ಯಾರ್ಥಿವೇತನಕ್ಕೆ ಧನ ಸಹಾಯ ಮಾಡಿದವರನ್ನು ಗೌರವಿಸಲಾಯತು. ಇದೇ ಸಂದರ್ಭ ಆರೋಗ್ಯ ಸಮಸ್ಯೆಯಿರುವ ವ್ಯಕ್ತಿಯೊರ್ವರಿಗೆ ಟ್ರಸ್ಟಿನಿಂದ ಆರ್ಥಿಕ ಸಹಾಯ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರಾದ ವಿಕ್ರಂ ಕಾಪು ವಹಿಸಿದ್ದರು. ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಬಿರುವೆರ್ ಕಾಪು ಸೇವಾ ಟ್ರಸ್ಟ್ ನ ಅಡ್ಮಿನ್ ಸುಧಾಕರ ಸಾಲ್ಯಾನ್ ಹಾಗೂ ಟ್ರಸ್ಟ್ ನ ಸದಸ್ಯರು ಉಪಸ್ಥಿತರಿದ್ದರು. ಸುಧಾಕರ್ ಪೂಜಾರಿ ಸ್ವಾಗತಿಸಿ, ಅತಿಥ್ ಸುವರ್ಣ ಪಾಲಮೆ ಪ್ರಾರ್ಥಿಸಿ, ಚೇತನ್ ಶೆಟ್ಟಿ ನಿರೂಪಿಸಿದರು.
ಮುಂಡ್ಕೂರಿನ ವಿದ್ಯಾವರ್ಧಕ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಸುದರ್ಶನ ವೈ.ಎಸ್ ರವರಿಗೆ ಬೀಳ್ಕೊಡುಗೆ
Posted On: 21 Feb 2021, 08:04 PM
ಕಾರ್ಕಳ ತಾಲೂಕು ಮುಂಡ್ಕೂರಿನ ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನಲ್ಲಿ ಮೂವತ್ತು ವರ್ಷ ಉಪನ್ಯಾಸಕರಾಗಿ,ಆರು ವರ್ಷ ಪ್ರಾಂಶುಪಾಲರಾಗಿ ಸೇವೆಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಸುದರ್ಶನ ವೈ.ಎಸ್.ಅವರನ್ನು ವಿದ್ಯಾವರ್ಧಕ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ , ವಿದ್ಯಾಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿ ಸಂಘ ಸಂಯೋಜಿಸಿರುವ ಸಮಾರಂಭದಲ್ಲಿ ಸಮ್ಮಾನಿಸಿ ಬೀಳ್ಕೊಡಲಾಯಿತು .
ಸೀತಾ ನದಿಗೆ ವಿಷವಿಕ್ಕುವ ಸ್ಥಿತಿಗೆ ಅಂತ್ಯ ಯಾವಾಗ ...?
Posted On: 19 Feb 2021, 10:23 PM
ಬ್ರಹ್ಮಾವರ ಮಾಬುಕಳ ಸೀತಾನದಿ ಸೇತುವೆಯ ಎರಡೂ ಬದಿಯಲ್ಲಿ ಕಸದ ರಾಶಿಯೇ ನಿಮಾ೯ಣವಾಗಿದೆ. ಈ ಕಸವು ಸಾವಿರಾರು ಜನರಿಗೆ ನೀರು ಒದಗಿಸುವ ಸೀತಾ ನದಿಗೆ ಸೇರುತ್ತಿರುವುದು ಅತ್ಯಂತ ದುಃಖದ ವಿಚಾರ.ಸಾವ೯ಜಿಕರು ಎಲ್ಲೆoದಲ್ಲಿ ಪ್ಯಾಸ್ಟಿಕ್ ಸಹಿತ ಕಸಬಿಸಾಡುವ ಸ್ಥಿತಿಯಿಂದ ಜಲಚರಗಳು ಸೇರಿದಂತೆ ಸಾವಿರಾರು ಜನರಿಗೆ ವಿಷ ಸೇರುತ್ತಿದೆ. ಮೂರು ನಾಲ್ಕು ತಿಂಗಳ ಹಿಂದೆ ವಿವಿಧ ಸಂಘ ಸಂಸ್ಥೆಗಳು ಸೇರಿ ಸ್ವಚ್ಚತಾ ಕಾಯ೯ಕ್ರಮ ನಡೆಸಿ , ಸಾವ೯ಜನಿಕರಿಗೆ ಅರಿವು ಮೂಡಿಸಲು ಬ್ಯಾನರ್ ಅಳವಡಿಸಿದ್ದರು ಆದರೆ ಇದೀಗ ಬ್ಯಾನರ್ ಕಾಣಿಯಾಗಿದೆ ಈ ಸ್ಥಳದಲ್ಲಿ ಕಸದ ರಾಶಿಯೇ ನಿಮಾ೯ಣವಾಗಿದೆ! ಇಲ್ಲಿ ಬಿಸಾಡುವ ಕಸವನ್ನು ನಾಯಿಗಳು ರಸ್ತೆಯಲ್ಲಿ ಚೆಲ್ಲಾಡಿ ವಾಹನಗಳು ಸಂಚರಿಸಲು ಕಷ್ಟ ಪಡಬೇಕಾದ ಸ್ಥಿತಿ ನಿಮಾ೯ಣವಾಗಿದೆ. ಕಸದ ವಾಸನೆಯಿಂದ ರಸ್ತೆಯಲ್ಲಿ ನಡೆದಾಡುವವರು ಮೂಗು ಮುಚ್ಚಿ ಸಾಗಬೇಕಾದ ಪರಿಸ್ಥಿತಿಯಿದೆ. ಕಸ ಬಿಸಾಡುವವರಿಗೆ ಸರಿಯಾದ ಶಿಕ್ಷೆಯಾಗಲಿ : ಈ ಪರಿಸರದಲ್ಲಿ ಸಿಸಿ ಟಿವಿ ಅಳವಡಿಸಿ ಕಸ ಬಿಸಾಡುವ ದುರುಳರಿಗೆ ಶಿಕ್ಷೆ ನೀಡಬೇಕು. ಸಾವ೯ಜನಿಕರು ಕಸ ಬಿಸಾಡುವವರನ್ನು ನೋಡಿದಾಗ ಅವರ ಭಾವಚಿತ್ರವನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟು ಜನ ಜಾಗೃತಿ ಮೂಡಿಸಬೇಕು. ಜಿಲ್ಲಾಡಳಿತ ಸೇರಿದಂತೆ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರವು ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಈ ಪರಿಸರವನ್ನು ಅದೇ ರೀತಿ ನದಿಯನ್ನು ರಕ್ಷಣೆ ಮಾಡಬೇಕಾಗಿದೆ ಎಂದು ಲೇಖಕ, ಸಮಾಜ ಸೇವಕ ರಾಘವೇಂದ್ರ ಪ್ರಭು,ಕವಾ೯ಲು ಒತ್ತಾಯಿಸಿದ್ದಾರೆ.
