Updated News From Kaup
ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ : ಹಿರಿಯ ಮುದ್ರಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ
Posted On: 22-11-2020 01:36PM
ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಇವರ ವತಿಯಿಂದ ಹಿರಿಯ ಮುದ್ರಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವಿಶ್ರಾಂತ ಉಪಸಂಪಾದಕರು, ಉದಯವಾಣಿ ಮಣಿಪಾಲದ ನಿತ್ಯಾನಂದ ಪಡ್ರೆ ಭಾಗವಹಿಸಿದ್ದರು.
ಬಂಟಕಲ್ಲು : ನೀರು ಕೇಳುವ ನೆಪದಲ್ಲಿ ಹಾಡಹಗಲೇ ಮಹಿಳೆಯ ಚಿನ್ನ ದೋಚಿದ ಅಪರಿಚಿತ
Posted On: 21-11-2020 11:03PM
ಇಂದು ಸಂಜೆ ಗಂಟೆ 6.30 ರ ಹೊತ್ತಿಗೆ ಬಂಟಕಲ್ಲು ದೇವಸ್ಥಾನದ ಬಳಿಯಲ್ಲಿ ವಾಸವಿರುವ ಒಬ್ಬಂಟಿ ಮಹಿಳೆಯ ಮನೆ ಬಳಿ ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳುವ ನೆಪದಲ್ಲಿ ಬಂದು ಆ ಮಹಿಳೆ ನೀರು ತರಲು ಮನೆಯೊಳಗೆ ಹೋದಾಗ ಆ ವ್ಯಕ್ತಿ ಅವರನ್ನು ಹಿಂಬಾಲಿಸಿ ಮನೆಯೊಳಗೆ ಹೋಗಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 1.75 ಲಕ್ಷ ರೂ ಮೌಲ್ಯದ ಬಂಗಾರದ ಚೈನನ್ನು ಎಳೆದು ಕೊಂಡು ಬೈಕಿನಲ್ಲಿ ಪರಾರಿಯಾದ ಘಟನೆ ನಡೆದಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
Posted On: 21-11-2020 08:47AM
ಉಡುಪಿ : ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು, ಆಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ, 115 ಕೋಟಿ ರೂ. ವೆಚ್ಚದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆಯನ್ನು ನಿರ್ಮಿಸಲು ಲಭ್ಯವಿರುವ ಸ್ಥಳದ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಗುರುವಾರ ನಡೆಸಿದರು.
ಇನ್ನಂಜೆ ಮಾತೃಶಕ್ತಿ, ದುರ್ಗಾವಾಹಿನಿ ಘಟಕಕ್ಕೆ ಆಯ್ಕೆಯಾದ ಪದಾಧಿಕಾರಿಗಳು
Posted On: 19-11-2020 09:53PM
ಇನ್ನಂಜೆ ವಿಷ್ಣುವಲ್ಲಭ ಘಟಕದ ಮಾತೃ ಶಕ್ತಿ ಸಂಚಾಲಕರಾಗಿ ಶ್ರೀಮತಿ ಆಶಾ, ಸಹ ಸಂಚಾಲಕರಾಗಿ ಶ್ರೀಮತಿ ಲಕ್ಷ್ಮಿ. ದುರ್ಗಾವಾಹಿನಿ ಸಂಚಾಲಕರಾಗಿ ಕುಮಾರಿ ವಿದ್ಯಾ, ಸಹ ಸಂಚಾಲಕರಾಗಿ ಕುಮಾರಿ ಪದ್ಮ ಶ್ರೀ ಆಯ್ಕೆಯಾಗಿದ್ದಾರೆ
ಪಡುಬಿದ್ರಿ : ಕನ್ನಂಗಾರ್ ಜುಮ್ಮಾ ಮಸೀದಿಗೆ ಆಡಳಿತಾಧಿಕಾರಿ ನೇಮಕ
Posted On: 19-11-2020 09:28PM
ಪಡುಬಿದ್ರಿ: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಜುಮ್ಮಾ ಮಸೀದಿಗಳಲ್ಲಿ ಒಂದಾದ ಕಣ್ಣಂಗಾರ್ ಜುಮ್ಮಾ ಮಸೀದಿಗೆ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಎಲ್ಲೂರಿನ ದೀಪೋತ್ಸವ ಮಹತ್ವ
Posted On: 18-11-2020 11:03PM
ಉಮಯಾ ಸಹವರ್ತತೇ ಇತಿ ಸೋಮಃ : ಶಿಷ್ಟ ಸಂಪ್ರದಾಯ ,ನಡೆದು ಬಂದ ಪದ್ಧತಿ , ನಡವಳಿಕೆ ,ಕ್ರಮಬದ್ಧತೆಗಳೇ ಪ್ರಧಾನವಾಗಿದ್ದು , "ಸೀಯಾಳ ಅಭಿಷೇಕ"ದ ಸೇವೆಯಿಂದ ಪ್ರಸಿದ್ಧವಾದ ಎಲ್ಲೂರಿನ ಮಹತೋಭಾರ ಶ್ರೀ ವಿಶ್ವೇಶ್ವರ ದೇವಳವು 900 - 1000 ವರ್ಷ ಪುರಾತನ ಸೀಮೆಯ ದೇವಾಲಯ . ಇಲ್ಲಿ ನೆರವೇರುವ ಪ್ರತಿಯೊಂದು ಪರ್ವಗಳಿಗೆ , ಆಚರಣೆಗಳಿಗೆ, ಉತ್ಸವಾದಿಗಳಿಗೆ ಅವುಗಳದ್ದೇ ಆದ ಹಿನ್ನೆಲೆಗಳಿವೆ. ನಿಯಮ ನಿಬಂಧನೆಗಳಿವೆ . ಕಾರ್ತಿಕ ಮಾಸದ ಸೋಮವಾರಗಳು ಮತ್ತು ಕಾರ್ತಿಕದ ಕೊನೆಯ ದಿನವಾದ ಅಮಾವಾಸ್ಯೆಯಂದು ಪೂರ್ಣಗೊಳ್ಳುವ 'ಲಕ್ಷದೀಪೋತ್ಸವ' ಧಾರ್ಮಿಕ - ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ ,ಅಸಾಮಾನ್ಯ ಲಕ್ಷಣವುಳ್ಳದ್ದಾಗಿದೆ . ಈ ನಂಬಿಕೆ - ಶಿಸ್ತು ಉಳಿದು ಕೊಂಡಿದೆ ; ನಡೆದುಬರುತ್ತಿವೆ. ವಾರಕ್ಕೊಮ್ಮೆ ಬರುವ ಸೋಮವಾರವೂ ಶಿವನ ಆರಾಧಕರಿಗೆ ಹಬ್ಬದ ದಿನವೇ . "ಉಮಯಾ ಸಹವರ್ತತೇ ಇತಿ ಸೋಮಃ" ಉಮೆಯೊಂದಿಗೆ ಈಶ್ವರನು ಸೇರಿದಾಗ 'ಸೋಮ'ನೆಂದು ಕರೆಯಲ್ಪಡುತ್ತಾನೆ .ಉಮೆಯೊಂದಿಗೆ ಆತನು ವಿಹರಿಸುವ ,ಅವನಿಗೆ ಪ್ರಿಯವೆನಿಸಿದ ಸೋಮವಾರದಂದು ನಡೆಸುವ ಉಪವಾಸ ,ಪೂಜೆ , ಅಭಿಷೇಕ ಇತ್ಯಾದಿಗಳು ಅವನನ್ನು ಪ್ರಸನ್ನಗೊಳಿಸುತ್ತದೆ. ಸೋಮವಾರ ಅಥವಾ ಶನಿವಾರ ದಿನಗಳಂದು ತ್ರಯೋದಶಿ ತಿಥಿ ಕೂಡಿ ಬಂದರೆ ಅದು 'ಪ್ರದೋಷ'. ಈ ಪವಿತ್ರ ಮುಹೂರ್ತದಲ್ಲಿ ವಿಶ್ವೇಶ್ವರನನ್ನು ಆರಾಧಿಸಿದರೆ ದೇವರ ದೇವನು ಶೀಘ್ರ ಅನುಗ್ರಹಿಸುತ್ತಾನೆ. ಕಾರ್ತಿಕ ಮಾಸದಲ್ಲಿ ಬರುವ ಎಲ್ಲಾ ಸೋಮವಾರಗಳು ವಿಶ್ವನಾಥನ ಆರಾಧನೆಯಿಂದ ಸಂತೃಪ್ತಿ ಪಡೆಯಲು ಬಯಸುವ ಭಕ್ತರ ಪಾಲಿಗೆ ಅತ್ಯುತ್ಕ್ರಷ್ಟವೆಂದು ವೇದಗಳು ಹೇಳಿವೆ. ಕಾರ್ತಿಕ ಸೋಮವಾರಗಳಲ್ಲಿ ಶತರುದ್ರಾಭಿಷೇಕ , ದೀಪೋತ್ಸವ , ಲಕ್ಷ ಬಿಲ್ವಾರ್ಚನೆಗಳಿಂದ ಶಿವಾರಾಧನೆ ಮಾಡುವುದು ಶ್ರೇಯಸ್ಕರವೆನಿಸಿದೆ .
ಇನ್ನಂಜೆಯಲ್ಲಿ ಮಾತೃಶಕ್ತಿ, ದುರ್ಗಾವಾಹಿನಿ ಘಟಕ ಉದ್ಘಾಟನೆ
Posted On: 18-11-2020 10:38PM
ಹಿಂದುತ್ವದ ಭದ್ರಕೋಟೆ ಇನ್ನಂಜೆಯಲ್ಲಿ ಕಳೆದ ಒಂದೆರಡು ತಿಂಗಳ ಹಿಂದೆಯಷ್ಟೇ ವಿಶ್ವ ಹಿಂದೂ ಪರಿಷತ್, ಭಜರಂಗದಳದ ವಿಷ್ಣು ವಲ್ಲಭ ಘಟಕ ಉದ್ಘಾಟನೆಯಾಗಿದ್ದು ಇದೀಗ ಮಾತೃ ಶಕ್ತಿ ಮತ್ತು ದುರ್ಗಾ ವಾಹಿನಿ ಘಟಕ ಉದ್ಘಾಟನೆಗೊಂಡಿತು.
ಬಿರುವೆರ್ ಕುಡ್ಲ ಸಂಘಟನೆಯ ನೂತನ ಪಲಿಮಾರು ಘಟಕದ ಅಧ್ಯಕ್ಷರಾಗಿ ಪ್ರಸಾದ್ ಪೂಜಾರಿ ಪಲಿಮಾರು ಆಯ್ಕೆ
Posted On: 18-11-2020 10:33PM
ಪಡುಬಿದ್ರಿ : ಸಮಾಜ ಸೇವೆಯಲ್ಲಿ ತೊಡಗಿರುವ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಬಿರುವೆರ್ ಕುಡ್ಲ ಸಂಘಟನೆಯ ನೂತನ ಪಲಿಮಾರು ಘಟಕದ ಅಧ್ಯಕ್ಷರನ್ನಾಗಿ ಪ್ರಸಾದ್ ಪೂಜಾರಿ ಪಲಿಮಾರು ಇವರನ್ನುಸರ್ವಾನುಮತದಿಂದ ಆಯ್ಕೆಮಾಡಲಾಯಿತು.
ಬಿಲ್ಲವ - ಈಡಿಗ ಅಭಿವೃದ್ಧಿ ಪ್ರಾಧಿಕಾರ ರಚನೆ, ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಆಗ್ರಹ
Posted On: 18-11-2020 11:37AM
ಕಾಪು : ಬಿಲ್ಲವ ಈಡಿಗ ಸಮಾಜದ ಸಾಮಾಜಿಕ ಶೈಕ್ಷಣಿಕ ಔದ್ಯೋಗಿಕ ಅಭಿವೃದ್ಧಿಗೆ ಪೂರಕವಾಗಿ ಬಿಲ್ಲವ ಈಡಿಗ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾನಕ್ಕೆ ಕೋಟಿ ಚೆನ್ನಯರ ಹೆಸರಿಡ ಬೇಕೆಂಬ ಗ್ರಾಮ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಪ್ರಸ್ತಾವನೆಯನ್ನು ಪರಿಗಣಿಸಿ ಮರುನಾಮಕರಣಕ್ಕೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಆಗ್ರಹಿಸಿದೆ. ಬಿಲ್ಲವ ಸಮಾಜದ ನಿರ್ಣಯ ಮತ್ತು ಬೇಡಿಕೆಗಳ ಬಗ್ಗೆ ಸರಕಾರಗಳ ನಿರ್ಲಕ್ಷ್ಯ ಬಗ್ಗೆ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ. ರಾಜಶೇಖರ್ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದು, ತೀವ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಶಂಕರಪುರದಲ್ಲಿ ಎಂಟು ಅಡಿ ಎತ್ತರದ ಗೂಡುದೀಪ - ನಿಸರ್ಗ ಫ್ರೆಂಡ್ಸ್ ಪಾದೆಕೆರೆ
Posted On: 16-11-2020 07:30PM
ಕಳೆದ ಹತ್ತು ಹದಿನೈದು ವರ್ಷಗಳಿಂದ ಶಂಕರಪುರ ಸಮೀಪದ ಇನ್ನಂಜೆಯ ಪಾದೇಕೆರೆ ಎಂಬ ಸಣ್ಣ ಊರಿನಲ್ಲಿ ಯುವಕರು ಕಟ್ಟಿದ ತಂಡವೊಂದು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅನೇಕ ಪ್ರತಿಭೆಗಳನ್ನು ಗುರುತಿಸಿ ಜನಮನ್ನಣೆಗೆ ಪಾತ್ರರಾಗಿರುತ್ತಾರೆ.
