Updated News From Kaup

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Posted On: 05-01-2025 06:58AM

ಕಾಪು : ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಪೂರ್ವಭಾವಿ ಸಮಾಲೋಚನಾ ಸಭೆ

Posted On: 04-01-2025 06:25PM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂದರ್ಭ ‌ವಿವಿಧ ಮೂಲ ಸೌಕರ್ಯಗಳ ಜೋಡಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಶನಿವಾರ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.

ದಿವ್ಯಾಂಗ ಬಾಲಕನ ಮನೆ ಬಾಗಿಲಿಗೆ ಬಂದು ಅಂಗವಿಕಲ ವೇತನ ಮಂಜೂರು ಮಾಡಿದ ತಹಶಿಲ್ದಾರ್ ಡಾ.ಪ್ರತಿಭಾ ಆರ್.

Posted On: 03-01-2025 07:02PM

ಕಾಪು : ಕೆಲ ದಿನಗಳ ಹಿಂದೆ ಫಲಿಮಾರು ಗ್ರಾಮದ ಅಡ್ವೆಯ ದಿವ್ಯಾಂಗ ಬಾಲಕನಿಗೆ ಮನೆ ಬಾಗಿಲಿಗೆ ಬಂದು ಆಧಾರ್ ಮಾಡಿಸಿಕೊಟ್ಟಿದ್ದ ತಹಶಿಲ್ದಾರ್ ಡಾ. ಪ್ರತಿಭಾರವರು ಗುರುವಾರ ಅದೇ ಬಾಲಕನ ಮನೆ ಬಾಗಿಲಿಗೆ ಬಂದು ಅಂಗವಿಕಲ ವೇತನವನ್ನೂ ಮಂಜೂರು ಮಾಡಿ ಮಾನವೀಯತೆ ಮೆರೆದಿದ್ದಾರೆ.

ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ

Posted On: 03-01-2025 06:58PM

ಪಡುಬಿದ್ರಿ : ಬೆಳಪು ವ್ಯವಸಾಯ ಸಹಕಾರಿ ಸಂಘದ ಚುನಾವಣೆಯಲ್ಲಿ ಸಹಕಾರಿ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಬಳಗದ ಎಲ್ಲಾ 12 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಆಡಳಿತ ಮಂಡಳಿಯ ಮುಂದಿನ ಅವಧಿಗೆ ಸತತವಾಗಿ 9 ನೇ ಅವಧಿಗೆ ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹಾಗೂ ಉಪಾಧ್ಯಕ್ಷರಾಗಿ ದ್ಯುಮಣಿ ಆರ್ ಭಟ್ ಉಚ್ಚಿಲರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ಪಣಿಯೂರಿನಲ್ಲಿರುವ ಸಂಘದ ಕೇಂದ್ರ ಕಛೇರಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.

ಜ.5 : ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಮಹಾಸಭೆ

Posted On: 02-01-2025 10:50PM

ಉಡುಪಿ : ನಾಯಕ ಸಮುದಾಯ ಸಂಘ (ರಿ.) ಉಡುಪಿ ಜಿಲ್ಲೆ ಇದರ ಮಹಾಸಭೆ ಜನವರಿ 5, ಆದಿತ್ಯವಾರ ಪೂರ್ವಾಹ್ನ ಘಂಟೆ 10 ಕ್ಕೆ ವೀರಭದ್ರ ದೇವಸ್ಥಾನ, ಕಲ್ಯಾಣಪುರ ಇಲ್ಲಿ ಜರಗಲಿದೆ.

ಕಾಪು : ಹದಿಹರೆಯದ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ಮತ್ತು ವೃತ್ತಿ ಸಮಾಲೋಚನೆ ಕಾರ್ಯಕ್ರಮ

Posted On: 02-01-2025 12:40PM

ಕಾಪು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಪ್ರಯುಕ್ತ ಗುರುವಾರ ಪೊಲಿಪು ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ "ಹದಿಹರೆಯದ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ಮತ್ತು ವೃತ್ತಿ ಸಮಾಲೋಚನೆ ಕಾರ್ಯಕ್ರಮನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಜಗತ್ತಿನಲ್ಲಿ ಹೆಣ್ಣು ಮಕ್ಕಳು ಪಾತ್ರ ಬಹುಮುಖ್ಯವಾದದ್ದು. ಹೆಣ್ಣು ಮಕ್ಕಳನ್ನು ರಕ್ಷಿಸುವ ಕಾರ್ಯವಾಗಬೇಕು. ಪ್ರಸ್ತುತ ಸಮಾಜದಲ್ಲಿ ವಿವಿಧ ಪಾಳಿಯಲ್ಲಿ ಉದ್ಯೋಗ ಮಾಡುವಂತ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಅತ್ಯಗತ್ಯ ಎಂದರು.

ಮತ್ತೆ ಬಂದಿದೆ ಹೊಸ ವರ್ಷ, ತರಲಿ ಹೊಸ ಹರ್ಷ

Posted On: 01-01-2025 09:27AM

ಹೊಸ ವರ್ಷಕ್ಕೆ ಸ್ವಾಗತ. 2025 ಹೊಸತನ ಅನ್ನುವುದು ಸೃಷ್ಟಿಯ ನಿಯಮ. ಹೀಗಾಗಿಯೇ ಸದಾ ಒಂದಲ್ಲ ಒಂದು ಹೊಸತನಕ್ಕಾಗಿ ನಾವು ಕಾಯುತ್ತಿರುತ್ತೇವೆ. ಹೊಸ ಜೀವನ, ಹೊಸ ಕಾರು, ಹೊಸ ಮನೆ, ಹೊಸ ಹುದ್ದೆ, ಹೊಸ ಗೆಳೆಯರು, ಹೊಸ ಸ್ಥಳಗಳು, ಹೊಸ ಮೊಬೈಲ್ ಹೀಗೆ ಹೊಸ ಬಟ್ಟೆಯಿಂದ ಹಿಡಿದು ಹೊಸ ಚಪ್ಪಲಿಯವರೆಗಿನ ಪ್ರತಿಯೊಂದು ಹೊಸತನಗಳನ್ನು ನಾವು ತುಂಬಾ ಹರ್ಷದಿಂದ ಸ್ವಾಗತಿಸುತ್ತೇವೆ. ಅದೇ ರೀತಿ ಈಗ ಹಳೆಯ ನೋವು, ನೆನಪುಗಳನ್ನೆಲ್ಲಾ ಬದಿಗೆ ಸರಿಸಿ ಹೊಸ ನಿರೀಕ್ಷೆ ಹಾಗೂ ಕನಸುಗಳೊಂದಿಗೆ ಮತ್ತೊಂದು ಹೊಸ ವರ್ಷವನ್ನು ನಾವು ಬರಮಾಡಿಕೊಳ್ಳುತ್ತಿದೇವೆ. ಈ ಹೊಸ ವರ್ಷ ನಿಮ್ಮ ಜೀವನದಲ್ಲಿ ಹಲವು ಹೊಸತನಗಳೊಂದಿಗೆ ಹೊಸ ಹರ್ಷ ತರಲಿ.

ಶಿರ್ವ : ರೋಟರಿ ಸಮುದಾಯದಳ ಜಿಲ್ಲಾ ಸಮ್ಮೇಳನ 2024-25 ಸಂಪನ್ನ

Posted On: 01-01-2025 09:19AM

ಶಿರ್ವ : ಅಂತಾರಾಷ್ಟ್ರೀಯ ರೋಟರಿ ಮಾರ್ಗದರ್ಶನದಲ್ಲಿ ಗ್ರಾಮೀಣ ಸಮುದಾಯ ದಳಗಳು ಗ್ರಾಮೀಣ ಭಾಗದ ಸೇವಾಸಕ್ತರ ಒಂದು ಒಕ್ಕೂಟವಾಗಿದ್ದು, ರೋಟರಿ ಸಮುದಾಯ ಸೇವೆಯ ಒಂದು ಭಾಗವಾಗಿದೆ. ರೋಟರಿಯ ಮಾರ್ಗದರ್ಶನದಲ್ಲಿ ಸಮರ್ಥ ನಾಯಕತ್ವ, ಸ್ವಾವಲಂಬಿ ಜೀವನಕ್ಕೆ ಪೂರಕ ವಾತಾವರಣದ ನಿರ್ಮಾಣದ ಜೊತೆಗೆ ಗ್ರಾಮೀಣ ಪರಿಸರದ ಸುಧಾರಣೆ, ಅಭಿವೃದ್ಧಿಗೆ ಸಮುದಾಯದಳಗಳ ಪುನಶ್ಚೇತನ ಅಗತ್ಯವಾಗಿದೆ ಎಂದು ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3182 ಇದರ ಜಿಲ್ಲಾ ಗವರ್ನರ್ ಸಿಎ. ದೇವ್ ಆನಂದ್ ನುಡಿದರು. ಅವರು ಶಿರ್ವ ರೋಟರಿಯ ಸಂಸ್ಥಾಪಕರು, ಬಹುಮುಖಿ ಪ್ರತಿಭಾ ಸಂಪನ್ನರಾದ ದಿ.ಪಾಂಗಾಳ ವಿಟ್ಠಲ ಶೆಣೈ ಜನ್ಮ ಶತಮಾನೋತ್ಸವದ ಸವಿನೆನಪಿನಲ್ಲಿ ಶಿರ್ವ ರೋಟರಿ ಕ್ಲಬ್, ಪಾದೂರು ರೋಟರಿ ಸಮುದಾಯದಳದ ನೇತೃತ್ವ ಹಾಗೂ ರೋಟರಿ ಶಂಕರಪುರ ಇದರ ಸಹಕಾರದಲ್ಲಿ ಶಂಕರಪುರ ಸೈಂಟ್ ಜೋನ್ಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಸನ ಜಿಲ್ಲೆಗಳನ್ನು ಒಳಗೊಂಡ ರೋಟರಿ ಅ.ರಾ.ಜಿಲ್ಲೆ 3182 ಇದರ ರೋಟರಿ ಸಮುದಾಯದಳ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಆರಂಭದಲ್ಲಿ ದಿ.ಪಾಂಗಾಳ ವಿಟ್ಠಲ್ ಶೆಣೈಯವರ ಸಂಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ದಿಕ್ಸೂಚಿ ಭಾಷಣ ಮಾಡಿದ ರೋಟರಿ ಜಿಲ್ಲಾ ಮಾಜಿ ಗವರ್ನರ್ ಡಾ.ದೇವದಾಸ್ ರೈ ಮಂಗಳೂರು ಇವರು ಮಾತನಾಡಿ ರೋಟರಿ ಸಮುದಾಯದಳದ ಸಂಘಟನೆ,ಕಾರ್ಯವ್ಯಾಪ್ತಿ, ಮತ್ತು ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಣ, ಕೃಷಿ, ಸಾಹಿತ್ಯ, ರಂಗಭೂಮಿ ಸಂಘಟನೆ, ಸಮಾಜಸೇವೆ ಸಹಿತ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗಾಗಿ ನೀಡಲಾಗುತ್ತಿರುವ ಪಾಂಗಾಳ ವಿಟ್ಠಲ ಶೆಣೈ ಸ್ಮರಣಾರ್ಥ "ಸಾಧನಾ-ಪ್ರೇರಣಾ ಪುರಸ್ಕಾರ"ವನ್ನು ನಿವೃತ್ತ ಶಿಕ್ಷಕ,ಕಲಾವಿದ ಕೃಷ್ಣಕುಮಾರ್ ರಾವ್ ಮಟ್ಟುರವರಿಗೆ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಆರ್‌ಸಿಸಿ ಜಿಲ್ಲಾ ಛೆರ‍್ಮನ್ ಬಿ.ಪುಂಡಲೀಕ ಮರಾಠೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪಡುಬಿದ್ರಿಯಲ್ಲಿ ಕೃಷಿ ಮೇಳಕ್ಕೆ ಚಾಲನೆ

Posted On: 28-12-2024 06:47PM

ಪಡುಬಿದ್ರಿ : ಆಧುನಿಕ ತಂತ್ರಜ್ಞಾನವನ್ನು ಕೃಷಿಯಲ್ಲೂ ಬಳಸುವುದು ಅನಿವಾರ್ಯ. ಅದರ ಬಳಕೆಗೆ ರೈತರನ್ನು ಉತ್ತೇಜಿಸಬೇಕಾಗಿದೆ. ಕೃಷಿ ಮೇಳಗಳು ಇದಕ್ಕೆ ಪೂರಕವಾಗಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಅಬ್ದುಲ್ ಬಶೀರ್ ಅಭಿಪ್ರಾಯಪಟ್ಟರು. ಅವರು ಶನಿವಾರ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಉದಯಾದ್ರಿ ಪ್ರಸನ್ನ ಪಾರ್ವತಿ ದೇವಸ್ಥಾನದ ಸಹಯೋಗದೊಂದಿಗೆ ಕೊಲ್ನಾಡು ಮುಲ್ಕಿಯ ನಿತ್ಯಾನಂದ ಆಗ್ರೋ ಲಿ. ಇದರ ವತಿಯಿಂದ ದ್ವಿತೀಯ ಬಾರಿಗೆ ಕೃಷಿ ಮೇಳ 2024ದಲ್ಲಿ ಮಾಹಿತಿ ನೀಡಿದರು.

ಕಂಬಳದಲ್ಲಿ ಗಳಿಸಿದ ಚಿನ್ನದ ಪದಕ ಕಾಪು ಮಾರಿಯಮ್ಮನಿಗೆ ಸಮರ್ಪಿಸಿದ ಎರ್ಮಾಳು ಪುಚ್ಚೊಟ್ಟು ಬೀಡು ಬಾಲಚಂದ್ರ ಶೆಟ್ಟಿ

Posted On: 28-12-2024 05:21PM

ಕಾಪು : ತುಳುನಾಡಿನ ಜಾನಪದ ಕ್ರೀಡೆ ಕಂಬಳ, ಇತ್ತೀಚಿನ ದಿನಗಳಲ್ಲಿ ಕಂಬಳ ಬಹಳಷ್ಟು ಜನಮನ್ನಣೆಯನ್ನು ಗಳಿಸುತ್ತಿದ್ದು, ರಾಜ್ಯ ರಾಜಧಾನಿಯಲ್ಲೂ ಕಂಬಳದ ಸುದ್ಧಿ ಬಹಳವಾಗಿ ಕೇಳಿ ಬರುತ್ತಿದೆ, ದೂರದ ಮಹಾರಾಷ್ಟ್ರದ ಪುಣೆಯ ಖ್ಯಾತ ಉದ್ಯಮಿ, ಕಂಬಳ ಪ್ರೇಮಿ ಎರ್ಮಾಳು ಪುಚ್ಚೊಟ್ಟು ಬೀಡು ಬಾಲಚಂದ್ರ ಶೆಟ್ಟಿ ದಂಪತಿ ಸಮೇತರಾಗಿ ಮಕ್ಕಳೊಂದಿಗೆ ಜಿರ್ಣೋದ್ಧಾರಗೊಳ್ಳುತ್ತಿರುವ ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.