Updated News From Kaup

ಅಲ್ಪಸಂಖ್ಯಾತ ಕಾರ್ಯಕರ್ತರಿಗೆ ಸರ್ಕಾರ, ಪಕ್ಷದಲ್ಲಿ ಸೂಕ್ತ ಸ್ಥಾನ ಮಾನಕ್ಕಾಗಿ ಉಪಮುಖ್ಯಮಂತ್ರಿಗೆ ಮನವಿ

Thumbnail
Posted On: 02 Mar 2025, 04:06 PM

ಕಾಪು : ಕೆಪಿಸಿಸಿ ರಾಜ್ಯಾದ್ಯಕ್ಷರು,ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ರವರು ಉಡುಪಿ ಜಿಲ್ಲೆಗೆ ಆಗಮಿಸಿದ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿದಾಗ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ರವರ ನೇತೃತ್ವದಲ್ಲಿ ಜಿಲ್ಲೆಯ ಪಕ್ಷದ ಅಲ್ಪಸಂಖ್ಯಾತ ಕಾರ್ಯಕರ್ತರಿಗೆ ಸರ್ಕಾರದಲ್ಲಿ ಹಾಗೂ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡಬೇಕೆಂದು ಮನವಿ ನೀಡಲಾಯಿತು. ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಂಜುನಾಥ್ ಭಂಡಾರಿ, ಜಯಪ್ರಕಾಶ್ ಹೆಗ್ಡೆ, ಅಶೋಕ್ ಕುಮಾರ್ ಕೊಡವೂರು, ಎಂ ಎ ಗಫೂರ್, ಅಲ್ಪಸಂಖ್ಯಾತರ ಘಟಕದ ನಾಯಕರಾದ ಇಸ್ಮಾಯಿಲ್ ಆತ್ರಾಡಿ, ವಹೀದ್ ಶೇಖ್, ಯು ಎಂ ಫಾರೂಕ್ ಚಂದ್ರನಗರ, ಹಬೀಬ್ ಆಲಿ, ಪ್ರಶಾಂತ್ ಜತ್ತನ್ನ, ವಿಲ್ಸನ್, ನಿಯಾಜ್, ರಿಯಾಜ್, ಫೈಝಲ್ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಧರ್ಮದಿಂದಲೇ ವಿಶ್ವಕ್ಕೆ ಶಾಂತಿ - ಡಿ.ಕೆ.ಶಿವಕುಮಾರ್

Thumbnail
Posted On: 02 Mar 2025, 03:40 PM

ಕಾಪು : ಕಾಪು ಮಾರಿಯಮ್ಮ ದೇವರ ಗದ್ದುಗೆ ಪ್ರತಿಷ್ಠಾನೆಯ ಮೊದಲ ಪ್ರಸಾದ ಸಿಕ್ಕಿದ್ದು ನನ್ನ ಭಾಗ್ಯ. ಸರಕಾರದ ಹಣವಿಲ್ಲದೆ ಭಕ್ತರು ಸ್ವ ಇಚ್ಛೆಯಿಂದ ನೀಡಿದ ಹಣದಲ್ಲಿ ಇಷ್ಟು ದೊಡ್ಡ ದೇವಳ ಕಟ್ಟಿದ್ದು ಅದ್ಭುತ. ಕಷ್ಟ ದೂರ ಮಾಡಿ, ರಕ್ಷಿಸುವ ಸನ್ನಿಧಾನ ಕಾಪು. ಇಲ್ಲಿ ಜಾತಿ ಇಲ್ಲ. ಎಲ್ಲರೂ ಮಾನವ ಜಾತಿ. ಧರ್ಮ ಎದ್ದು ಕಾಣುತ್ತಿದೆ. ಧರ್ಮದಿಂದಲೇ ವಿಶ್ವಕ್ಕೆ ಶಾಂತಿ. ಎಲ್ಲರಿಗೂ ಒಳಿತಾಗಲಿ ಎಂದು ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಆದಿತ್ಯವಾರ ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಶ್ರೀ ಮಾರಿಯಮ್ಮ ದೇವರ ಮಹಾಸ್ವರ್ಣಪೀಠದೊಂದಿಗೆ (ಗದ್ದಿಗೆ) ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಮಾರಿಯಮ್ಮನ ಪ್ರತಿಷ್ಠೆ, ಶ್ರೀ ಉಚ್ಚಂಗಿದೇವಿಯ ಸ್ವರ್ಣ ಪೀಠದೊಂದಿಗೆ ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಉಚ್ಚಂಗಿದೇವಿಯ ಪ್ರತಿಷ್ಠೆಯಲ್ಲಿ ಪಾಲ್ಗೊಂಡ ಬಳಿಕ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭ ದೇವಳದ ವತಿಯಿಂದ ಡಿ.ಕೆ.ಶಿವಕುಮಾರ್ ರವರಿಗೆ ದೇವಳದ ತಂತ್ರಿವರ್ಯರು, ಪ್ರಧಾನ ಅರ್ಚಕರು ಅನುಗ್ರಹ ಪ್ರಸಾದ ನೀಡಿ, ಗೌರವಿಸಿದರು. ಡಿ.ಕೆ.ಶಿವಕುಮಾರ್ ರೂ.9,99,999ರೂ. ಮೌಲ್ಯದ ಸ್ವರ್ಣ ಲೇಪಿತ ರಜತ ಬ್ರಹ್ಮಕಲಶ ಸಮರ್ಪಿಸಿದರು. ಈ ಸಂದರ್ಭ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾಪು ಹೊಸಮಾರಿಗುಡಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಜಯಪ್ರಕಾಶ್ ಹೆಗ್ಡೆ, ಮಾಧವ ಪಾಲನ್, ಡಾ. ಸುನೀತಾ ಶೆಟ್ಟಿ, ಮಿಥುನ್ ರೈ,ಮುನಿಯಾಲು ಉದಯ ಕುಮಾರ್ ಶೆಟ್ಟಿ, ಬೆಳಪು ದೇವಿಪ್ರಸಾದ್ ಶೆಟ್ಟಿ, ಯೋಗೀಶ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತಿಕ್ ಬಾಯಲ್, ಕಾಪು ತಹಶಿಲ್ದಾರ್ ಡಾ.ಪ್ರತಿಭ ಆರ್.,ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಕೊರಂಗ್ರಪಾಡಿ ವೇದಮೂರ್ತಿ ಕೆ ಜಿ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೆಪಿ. ಕುಮಾರ ಗುರು ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಸಹಕಾರದಲ್ಲಿ ರವಿವಾರದ ಧಾರ್ಮಿಕ ವಿಧಿಗಳು ನಡೆದವು. ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

ನಾಗಸ್ವರ ವಾದಕ ಸುನಿಲ್ ಸೇರಿಗಾರ ಸೂಡ, ಬಹುಮುಖ ಪ್ರತಿಭೆ ಕು. ಶ್ರೀನಿಧಿ ಪಾನಾರ ಇವರಿಗೆ ಸನ್ಮಾನ

Thumbnail
Posted On: 28 Feb 2025, 01:30 PM

ಕಾಪು : ಶಿರ್ವ ಸಮೀಪದ ಪಳ್ಳಿ ಶ್ರೀಕ್ಷೇತ್ರ ಅಡಪಾಡಿ ಉಮಾಮಹೇಶ್ವರ, ಶ್ರೀದುರ್ಗಾಪರಮೇಶ್ವರೀ ದೇವೀ ಸನ್ನಿಧಿಯಲ್ಲಿ ಜರುಗುತ್ತಿರುವ ಮಹಾಶಿವರಾತ್ರಿ, ಮತ್ತು ರಥೋತ್ಸವ ಸಂದರ್ಭದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ವಿಜೇತ ಖ್ಯಾತ ಸ್ಯಾಕ್ಸೋಫೋನ್ ಹಾಗೂ ನಾಗಸ್ವರ ವಾದಕ ಸುನಿಲ್ ಸೇರಿಗಾರ ಸೂಡ ಮತ್ತು ಕ್ಷೇತ್ರದ ದೈವ ನರ್ತಕ ರವಿ ಪಾನಾರ ಪಡ್ಡಂ ಇವರ ಪುತ್ರಿ ಬಹುಮುಖ ಪ್ರತಿಭಾ ಸಂಪನ್ನೆ ಯಕ್ಷಗಾನ, ಭರತನಾಟ್ಯ, ಕರಾಟೆಪಟು ಕು. ಶ್ರೀನಿಧಿ ಪಾನಾರ ಇವರನ್ನು ಕ್ಷೇತ್ರದ ವತಿಯಿಂದ ಧರ್ಮದರ್ಶಿಗಳಾದ ಪುಂಡಲೀಕ ನಾಯಕ್ ಇವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಕ್ಷೇತ್ರದ ಶಾಸಕರು, ಮಾಜಿ ಸಚಿವ ವಿ.ಸುನಿಲ್ ಕುಮಾರ್, ಆರ್‌ಎಸ್‌ಬಿ ಸಂಘ ಮಣಿಪಾಲ ಇದರ ಅಧ್ಯಕ್ಷರು ಹಾಗೂ ಉದ್ಯಮಿ ಶ್ರೀಶ ನಾಯಕ್ ಪೆರ್ನಂಕಿಲ, ಉದ್ಯಮಿ ರಾಜಶೇಖರ ಚೌಟ ದುಬೈ, ಮಂಜುನಾಥ ಶೆಟ್ಟಿ ಉದ್ಯಮಿ ಮುಂಬಯಿ, ಬಾಲಕೃಷ್ಣ ಪ್ರಭು ಮಣಿಪಾಲ, ನೀರೆ ವ್ಯ,ಸೇ.ಸ.ಸಂಘದ ಅಧ್ಯಕ್ಷ ನೀರೆ ರವೀಂದ್ರ ನಾಯಕ್ ವೇದಿಕೆಯಲ್ಲಿದ್ದರು.

ಸಮಾಜ ಸೇವಾ ವೇದಿಕೆ ಕಾಪು ಅಧ್ಯಕ್ಷ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರಿಗೆ ಸನ್ಮಾನ

Thumbnail
Posted On: 27 Feb 2025, 11:02 AM

ಕಾಪು : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಸಮಾಜ ಸೇವಾ ವೇದಿಕೆ ಕಾಪು ಅಧ್ಯಕ್ಷರಾದ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ಸಾಮಾಜಿಕ ಹೋರಾಟಗಾರರಾದ ಫಾದರ್ ವಿಲಿಯಮ್ ಮಾರ್ಟೀಸ್, ಕಿಶನ್ ಹೆಗ್ಡೆ ಕೊಲ್ಕೆಬೈಲ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷರಾದ ಮೊಹಮ್ಮದ್ ಮೌಲ, ಸಾಪಳ್ಯ ಟ್ರಸ್ಟ್ ನ ನಿರೂಪಮ ಪ್ರಸಾದ್ ಶೆಟ್ಟಿ, ಸಾಮಾಜಿಕ ಹೋರಾಟಗಾರ್ತಿ ಮಮತಾ ಗಟ್ಟಿ, ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವ್ಯವಸ್ಥಾಪಕರಾದ ಹಫೀಜ್ ರೆಹಮಾನ್, ರಾಘವೇಂದ್ರ ನಾಯಕ್, ತಂಜಿಮ್ ಶಿರ್ವ ಮತ್ತಿತರರು ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿ ಪ್ರತಿಷ್ಠಾ ಬ್ರಹ್ಮಲಕಶೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

Thumbnail
Posted On: 25 Feb 2025, 10:27 PM

ಕಾಪು : ಭಾರತದಲ್ಲಿ ಸಮುದಾಯಕ್ಕಿಂತ ಮೀರಿದ್ದು ಧರ್ಮ. ಹಿಂದು ಧರ್ಮ ದೇಶಕ್ಕೆ ಅವಶ್ಯಕ. ತಾಯಿ ಸ್ವರೂಪಿಯಾದ ಮಾರಿಯಮ್ಮ ದೊಡ್ಡ ಶಕ್ತಿ. ತಾಯಿಯನ್ನು ನೋಡಲು ಗರ್ಭ ಗುಡಿಗೆ ಪ್ರವೇಶ ಮಾಡಿ ಸಮೀಪದಿಂದ ನೋಡುವ ಭಾಗ್ಯ ಸಮಾನತೆಯ ಪ್ರತೀಕವಾಗಿದೆ ಎಂದು ಬೆಳಗಾವಿಯ ಹಿರೇಮಠ ಹುಕ್ಕೇರಿ ಶ್ರೀ ಗುರು ಶಾಂತೇಶ್ವರ ಸಂಸ್ಥಾನದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದಶ್ರೀರು. ಅವರು ಮಂಗಳವಾರ ಸಂಜೆ ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಪ್ರತಿಷ್ಠಾ ಬ್ರಹ್ಮಲಕಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವದಿಸಿದರು. ವೇದಿಕೆಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಉದ್ಯಮಿ ಉದಯ ಸುಂದರ ಶೆಟ್ಟಿ, ಉದ್ಯಮಿ ನಾರಾಯಣ ಶೆಟ್ಟಿ ಮುಂಬೈ, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾದ ಅಧ್ಯಕ್ಷ ರವಿ ಶೆಟ್ಟಿಗಾರ್, ದೇವಳದ ಅಭಿವೃದ್ಧಿ ಸಮಿತಿ ಮಾಧವ ಆರ್ ಪಾಲನ್ ಉಪಸ್ಥಿತರಿದ್ದರು. ಯೋಗೀಶ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಅಶೋಕ್ ಪಕ್ಕಳ ಮುಂಬೈ, ದಾಮೋದರ ಶರ್ಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಟೇಶ ನೃತ್ಯನಿಕೇತನ ಉಚ್ಚಿಲ-ವಿದುಷಿ ಮಂಗಳಾ ಕಿಶೋರ್ ದೇವಾಡಿಗ ಮತ್ತು ಬಳಗದವರಿಂದ ನೃತ್ಯ ವೈಭವ, ತೋನ್ಸೆ ಪುಷ್ಕಳ ಕುಮಾರ್ ಮತ್ತು ಬಳಗದವರಿಂದ ಭಕ್ತಿ ನಾಮಾಮೃತಂ, ಜಗದೀಶ್ ಪುತ್ತೂರು ಬಳಗದವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರಗಿತು.

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಲಕಶೋತ್ಸವಕ್ಕೆ ಚಾಲನೆ

Thumbnail
Posted On: 25 Feb 2025, 04:38 PM

ಕಾಪು : ಸಂಪೂರ್ಣ ಶಿಲಾಮಯದೊಂದಿಗೆ ನಿರ್ಮಾಣಗೊಂಡ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತಿಷ್ಠಾ ಬ್ರಹ್ಮಲಕಶೋತ್ಸವಕ್ಕೆ ಚಾಲನೆ ನೀಡಲಾಯಿತು. ಕೊರಂಗ್ರಪಾಡಿ ವೇದಮೂರ್ತಿ ಕೆ ಜಿ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೆಪಿ. ಕುಮಾರ ಗುರು ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಸಹಕಾರದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಚಾಲನೆ ನೀಡಲಾಯಿತು. ಋತ್ವಿಜರ ಸ್ವಾಗತ, ಋತ್ವಿಗೊರಣ, ವಿಶ್ವಕರ್ಮ ಪೂಜೆ, ಗರ್ಭಗೃಹ ಪರಿಗ್ರಹ, ಸಾಮೂಹಿಕ ಫಲನ್ಯಾಸ, ಪ್ರಾರ್ಥನೆ ಆದ್ಯಶುದ್ಧಿ, ಪುಣ್ಯಾಹ ನಾಂದಿ, ಉಗ್ರಾಣ ಮಹೂರ್ತ, ಪಾಕಶಾಲಾ ಮುಹೂರ್ತ, ನೂತನ ಮಂದಿರ ಪ್ರವೇಶ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಕೆ‌. ಪ್ರಕಾಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ,  ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯ ಮಾಧವ ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್,  ರಮೇಶ್‌ ಹೆಗಡೆ ಕಲ್ಯ, ಹೊರೆಕಾಣಿಕೆ ಸಮರ್ಪಣಾ ಸಮಿತಿಯ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್‌ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ, ಹರೀಶ್ ನಾಯಕ್ ಕಾಪು, ರವಿ ಸುಂದರ ಶೆಟ್ಟಿ, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಉದಯ ಸುಂದರ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಸುಗ್ಗಿ ಸುಧಾಕರ ಶೆಟ್ಟಿ, ರೋಷನ್‌ ಕುಮಾರ್ ಶೆಟ್ಟಿ, ಭಗವಾನ್ ದಾಸ್ ಶೆಟ್ಟಿಗಾರ್,  ಸಂದೀಪ್ ಶೆಟ್ಟಿ ಮುಂಬಯಿ, ಮಾಧವ ಆರ್. ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಡಾ. ಸುನೀತಾ ಶೆಟ್ಟಿ, ಶಾಂತಲತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ದೈವರಾಜ ಕೋರ್ದ್ದಬ್ಬು ದೈವಸ್ಥಾನ ಮೂಡುಕರೆ ಹೆಜಮಾಡಿ : ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ

Thumbnail
Posted On: 24 Feb 2025, 10:44 PM

ಹೆಜಮಾಡಿ : ಶ್ರೀ ದೈವರಾಜ ಕೋರ್ದ್ದಬ್ಬು ದೈವಸ್ಥಾನ ಮೂಡುಕರೆ ಹೆಜಮಾಡಿ ಇದರ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಸುಧೀಶ್ ಜೆ ಶೆಟ್ಟಿ ಮಟ್ಟಿಮನೆ ಹೆಜಮಾಡಿ ಆಯ್ಕೆಯಾಗಿದ್ದಾರೆ. ದೈವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಗರಡಿಮನೆ, ಪ್ರ.ಕಾರ್ಯದರ್ಶಿಯಾಗಿ ರಘುನಾಥ್ ಎಚ್, ಕೋಶಾಧಿಕಾರಿಯಾಗಿ ಶ್ರೀನಿವಾಸ ಪೂಜಾರಿ ಹೆಜಮಾಡಿ, ಉಪಾಧ್ಯಕ್ಷರಾಗಿ ಪ್ರೇಮನಾಥ್ ಶೆಟ್ಟಿ, ಶಿವಾನಂದ ಹೆಜಮಾಡಿ, ಚಂದ್ರ ಪೂಜಾರಿ, ಮೋಹನ್ ಆಳ್ವ, ಲಕ್ಷ್ಮಣ್ ಶೆಟ್ಟಿ, ದೊಂಬ ಕೆ ಪೂಜಾರಿ, ವಾಮನ್ ಕೋಟ್ಯಾನ್ ನಡಿಕುದ್ರು, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ದೇವಾಡಿಗ ಹೆಜಮಾಡಿ, ರಾಧಾಕೃಷ್ಣ ಮಲ್ಯ, ಜೊತೆ ಕೋಶಾಧಿಕಾರಿಯಾಗಿ ಮಹೇಶ್ ಶೆಟ್ಟಿ ಗರಡಿ ಮನೆ ಹೆಜಮಾಡಿ, ಸುಧಾಕರ್ ಕೆ, ನವೀನ್ ಕುಮಾರ್, ವಿಶಾಲ್, ವಿತೇಶ್, ಗುಣಪಾಲ್, ಸುಂದರ, ಅರುಣ್ ಕುಮಾರ್, ಮಹೇಶ್, ಉಮೇಶ್, ಶರತ್, ಸುಂದರ, ರಮೇಶ್, ಗಿರೀಶ್ ಹಾಗೂ ಸುಮ ಕೆ, ಸುಂದರಿ ಆಯ್ಕೆಗೊಂಡಿದ್ದಾರೆ.

ಶಿರ್ವ : ಮಣಿಪುರ ಕೂಡುರಸ್ತೆಯಲ್ಲಿ ವೈಜ್ಞಾನಿಕ ಮಾದರಿಯ ರೋಟರಿ ಸರ್ಕಲ್ ಉದ್ಘಾಟನೆ

Thumbnail
Posted On: 24 Feb 2025, 05:06 PM

ಶಿರ್ವ : ಮಣಿಪುರ ರೋಟರಿ ಸಂಸ್ಥೆಯ ವತಿಯಿಂದ ಅಂತಾರಾಷ್ಟ್ರೀಯ ರೋಟರಿಯ 121ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಮಣಿಪುರ ಪೇಟೆಯಲ್ಲಿ ವೈಜ್ಞಾನಿಕ ಮಾದರಿಯಲ್ಲಿ ನಿರ್ಮಿಸಿದ ರೋಟರಿ ಶಾಂತಿ ವೃತ್ವನ್ನು ರೋಟರಿ ಅ. ಜಿಲ್ಲೆ 3182 ಇದರ ಜಿಲ್ಲಾ ಗವರ್ನರ್ ಸಿಎ.ದೇವ್‌ಆನಂದ್ ಉದ್ಘಾಟಸಿದರು. ಈ ಸಂದರ್ಭ ಅವರು ಮಾತನಾಡಿ, ರೋಟರಿಯ ಜಿಲ್ಲಾಯೋಜನೆ ರಸ್ತೆ ಸುರಕ್ಷಾ ಜಾಗೃತಿ ಹಾಗೂ ರೋಟರಿ ವರ್ಚಸ್ಸನ್ನು ವೃದ್ಧಿಸುವ ನಿಟ್ಟಿನಲ್ಲಿ ಕೈಗೊಂಡ ಅತ್ಯುತ್ತಮ ಕಾರ್ಯ ಇದಾಗಿದ್ದು, ಮೂರು ಪ್ರಮುಖ ರಸ್ತೆಗಳು ಕೂಡುವ ಈ ಭಾಗದಲ್ಲಿ ರಸ್ತೆಗೆ ಬೆಳಕು, ರಸ್ತೆ ಸೂಚನಾ ಫಲಕಗಳು ಹಾಗೂ ಸಿಸಿ ಕ್ಯಾಮರಾಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕರಿಗೆ ಪ್ರಯೋಜನವಾಗುವ ಸ್ತುತ್ಯ ಕಾರ್ಯವನ್ನು ಮಾಡಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಪ್ರಬಂಧಕ ನಿರಂಜನ ಆಚಾರ್ಯ, ರೋಟರಿ ಜಿಲ್ಲಾ ಪ್ರಥಮ ಮಹಿಳೆ ರೇಖಾ ದೇವಾನಂದ್, ವಲಯದ ಎಲ್ಲಾ ರೋಟರಿ ಪದಾಧಿಕಾರಿಗಳು, ಕ್ಲಬ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಶಾಂತಿ ಸಂಗಮ -2025 : ರೋಟರಿ ಭವನದಲ್ಲಿ ಜಿಲ್ಲಾ ವಲಯ ಐದರ ರೋಟರಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜರುಗಿದ ಶಾಂತಿ ಸಂಗಮ -2025 ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ವೃತ್ತಿಸೇವಾ ಜಾಗೃತಿ ಸಮಿತಿಯ ಜಿಲ್ಲಾ ಛರ‍್ಮನ್ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ವಿಶ್ವ ಶಾಂತಿಗಾಗಿಯೇ ಸಂಘಟನೆಗೊಂಡ ಅಂತಾರಾಷ್ಟ್ರೀಯ ರೋಟರಿ ಕಳೆದ 120 ವರ್ಷಗಳಲ್ಲಿ ಯಾವುದೇ ಜಾತಿ, ಮತ, ಧರ್ಮ, ವರ್ಣ ರಾಜಕೀಯದ ಲೇಪವಿಲ್ಲದೆ ಜಾಗತಿಕ ಶಾಂತಿ ಮತ್ತು ಮನುಕುಲದ ಸೇವೆಗಾಗಿ ಅರ್ಪಣಾ ಮನೋಭಾವದಿಂದ ನೂರಾರು ಕಾರ್ಯಗಳನ್ನು ಮಾಡುತ್ತಿದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಮಣಿಪುರ ರೋಟರಿ ಅಧ್ಯಕ್ಷ ಸುಧೀರ್ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ರೋಟರಿ ವಲಯ ಸಹಾಯಕ ಗವರ್ನರ್ ಅನಿಲ್ ಡೇಸಾ, ವಲಯ ತರಬೇತುದಾರ ಶೈಲೇಂದ್ರ ರಾವ್, ವಲಯ ಸೇನಾನಿಗಳಾದ ಮೆಲ್ವಿನ್ ಡಿಸೋಜ, ಸುರೇಶ್ ನಾಯಕ್, ಜೋನ್ ಸಿಕ್ವೇರಾ, ವಲಯ ಕಾರ್ಯದರ್ಶಿ ಚಂದ್ರ ಪೂಜಾರಿ, ಕ್ಲಬ್ ಕಾರ್ಯದರ್ಶಿ ಗುರುರಾಜ್ ಭಟ್, ವಲಯ ನಿರ್ದೇಶಕ ಶೇಖರ ಎಚ್, ಕ್ಲಬ್ ಸೇನಾ ನಿರ್ದೇಶಕ ಮೊಹಮ್ಮದ್ ಶರೀಫ್,ಶುಭ ಹಾರೈಸಿದರು. ಚಂದ್ರಶೇಖರ ಸಾಲಿಯಾನ್ ನಿರೂಪಿಸಿದರು. ವಲಯ ಕಾರ್ಯದರ್ಶಿ ಚಂದ್ರ ಪೂಜಾರಿ ವಂದಿಸಿದರು.

ಫೆ.25 ರಿಂದ ಮಾ.5 : ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Thumbnail
Posted On: 24 Feb 2025, 04:41 PM

ಕಾಪು : ಸಂಪೂರ್ಣ ಶಿಲಾಮಯವಾಗಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 5 ವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜರಗಲಿದ್ದು, ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಕೆ‌. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಕಾಪುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪ್ರತಿನಿತ್ಯ ಬೆಳಿಗ್ಗೆ ಕ್ಷೇತ್ರದ ತಂತಿವರ್ಯರು, ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು, ಅನ್ನಸಂತರ್ಪಣೆ, ಸಂಜೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಾಪು ಸಮೃದ್ಧಿ, ಸಾಮರಸ್ಯದ ಊರಾಗಿದೆ. ಅನ್ಯ ಧರ್ಮೀಯರು ಹೊರೆಕಾಣಿಕೆ ನೀಡಿದ್ದಾರೆ. ಹೆಜಮಾಡಿಯಿಂದ ಉದ್ಯಾವರದವರೆಗೆ ಪತಾಕೆ ಹಾಕಲಾಗಿದ್ದು, 8 ಕಿ.ಮೀ. ವ್ಯಾಪ್ತಿಯವರೆಗೆ ವಿದ್ಯುದ್ದೀಪಾಲಂಕಾರ ಮಾಡಲಾಗಿದೆ. ಸ್ಥಳೀಯರಿಂದ ರಾಷ್ಟ್ರಮಟ್ಟದ ಪ್ರತಿಭೆಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೆಲವು ಕಡೆಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಂದ ದೇವಳಕ್ಕೆ ಭಕ್ತರನ್ನು ಕರೆದುತರುವ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ಟೆಂಡರ್ ಪ್ರಕ್ರಿಯೆಯ ಮೂಲಕ 30 ಕೋಟಿಯಲ್ಲಿ ದೇವಳದ ಪ್ರಥಮ ಹಂತದ ಕಾಮಗಾರಿ ಮುಗಿದಿದ್ದು, ಭಕ್ತರ ಸಂಕಲ್ಪದಿಂದ ರಾಜಗೋಪುರ, ಸ್ವರ್ಣ ಗದ್ದುಗೆ, ದೇವಿಗೆ ಚಿನ್ನದ ಮುಖ, ರಜತ ರಥ, ಉಚ್ಚಂಗಿ ಚಿನ್ನದ ಮುಖ ಸೇರಿದಂತೆ 65 ಕೋಟಿಯ ಕೆಲಸವಾಗಿದೆ. ಅನಂತ ಉಗ್ರಾಣದಲ್ಲಿ ದಾಖಲೆ ಸಂಖ್ಯೆಯಲ್ಲಿ ಹಸುರುವಾಣಿ ಹೊರೆಕಾಣಿಕೆ ಸಂಗ್ರಹವಾಗಿದೆ. ಉತ್ತಮ ವ್ಯವಸ್ಥೆಗೆ ಸ್ವಯಂ ಸೇವಕರು ಸಹಕರಿಸಲಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಅಶ್ವ ಪೂಜೆ, ಗಜೆ ಪೂಜೆಯು ನಡೆಯಲಿದೆ. ಬ್ರಹ್ಮಕಲಶೋತ್ಸವದ ಬಳಿಕ 48 ದಿನ ಕ್ಷೇತ್ರದ ದಾನಿಗಳಿಂದ ಚಂಡಿಕಾಯಾಗವೂ ನಡೆಯಲಿದೆ ಎಂದರು. ಉದಯ ಸುಂದರ್ ಶೆಟ್ಟಿ ಮಾತನಾಡಿ, ಬೆಳಗ್ಗೆ ಮತ್ತು ಸಂಜೆ ಉಪಾಹಾರ, ಮಧ್ಯಾಹ್ನ ಮತ್ತು ಸಂಜೆ ಊಟದ ವ್ಯವಸ್ಥೆ ಮಾಡಲಾಗಿದೆ. ದೇವಳದ 4 ಕಡೆಗಳಲ್ಲಿ ಬಫೆ ಮತ್ತು ಎಲೆಯ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯ ಮಾಧವ ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್ ಉಪಸ್ಥಿತರಿದ್ದರು.

ಜಯ ಪೂಜಾರಿ ಮತ್ತು ಸಂಕ್ರಿ ಜೆ. ಪೂಜಾರಿ ದಂಪತಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Thumbnail
Posted On: 24 Feb 2025, 07:39 AM

ಉಡುಪಿ : ಹೋಟೆಲ್ ಶ್ರೀ ಜಯದುರ್ಗಾ ಬೋರ್ಡಿಂಗ್ ಮತ್ತು ಲಾಡ್ಜಿಂಗ್ ಮಾಲಕ ಜಯ ಪೂಜಾರಿ ಮತ್ತು ಸಂಕ್ರಿ ಜೆ. ಪೂಜಾರಿ ದಂಪತಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವವನ್ನು ಸ್ಪಂದನ ದಿವ್ಯಾಂಗರ ಸಂರಕ್ಷಣ ಸಂಸ್ಥೆಯಲ್ಲಿ ನಡೆಯಿತು. ಈ ಸಂದರ್ಭ ಸಂಸ್ಥೆಯ ಮುಖ್ಯಸ್ಥರು, ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.