Updated News From Kaup

ಶಿರ್ವ ಗ್ರಾಮ ಪಂಚಾಯತ್ ಎಸ್ ಎಲ್ ಆರ್ ಎಮ್ ಕಾರ್ಯಕರ್ತರಿಂದ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ

Thumbnail
Posted On: 13 Feb 2021, 11:26 PM

ಶಿರ್ವ ಗ್ರಾಮ ಪಂಚಾಯತ್ ಎಸ್ ಎಲ್ ಆರ್ ಎಮ್ ಕಾರ್ಯಕರ್ತರಿಂದ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ವಿಶೇಷ ಆಂದೋಲನದ ಪ್ರಯುಕ್ತ ಸ್ವಚ್ಛತಾ ಶ್ರಮದಾನ ನಡೆಯಿತು. ನಮ್ಮ ಗ್ರಾಮ ನಮ್ಮ ಜವಾಬ್ದಾರಿ ದ್ಯೇಯ ದೊಂದಿಗೆ ಶಿರ್ವ ಗ್ರಾಮದ ಶಿರ್ವ- ಕುತ್ಯಾರ್ ರಸ್ತೆ, ಶಿರ್ವ-ಕಾಪು ರಸ್ತೆ, ನ್ಯಾರ್ಮ ರಸ್ತೆ, ಮಟ್ಟಾರ್-ಮೂಡುಬೆಳ್ಳೆ ರಸ್ತೆ ಬದಿಯ ತ್ಯಾಜ್ಯವನ್ನು ಸ್ವಚ್ಛಗೊಳಿಸಿ ವೈಜ್ಞಾನಿಕ ರೀತಿಯಲ್ಲಿ ನಿರ್ವಹಣೆ ಮಾಡಲಾಯಿತು.

ಟ್ರೀ ಹೌಸ್ ಕೆಫೆ NH66 ಎರ್ಮಾಳು-ಉಚ್ಚಿಲ ಗ್ರಾಹಕರ ಸೇವೆಗೆ ಲಭ್ಯ

Thumbnail
Posted On: 13 Feb 2021, 11:13 PM

ಮಂಗಳೂರು ಉಡುಪಿ NH66 ರಾಷ್ಟ್ರೀಯ ಹೆದ್ದಾರಿಯಲ್ಲಿ ಎರ್ಮಾಳು ಬಡದಿಂದ ಉಚ್ಚಿಲದ ಕಡೆಗೆ ಹೋಗುವಾಗ ದಮನಿಕಾ ಪ್ಲಾಜಾದ ಎದುರು ತನ್ನ ವಿಶಿಷ್ಟ ರೀತಿಯ ವಿನ್ಯಾಸದ ಕಟ್ಟಡದಿಂದ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಪೀಜಾ, ಮೊಮೊಸ್,ಪಾಸ್ತಾ,ಬರ್ಗರ್, ಸ್ಯಾಂಡ್ವಿಚ್, ರೊಲ್ಸ್, ಸಾಲಡ್ಸ್ , ಟೀ, ಕಾಪಿ, ಸ್ಮೂತೀಸ್, ಸೋಡಾ, ಜ್ಯೂಸ್,ಮಿಲ್ಕ್ ಶೇಕ್, ಐಸ್ ಕ್ರೀಮ್ ಮುಂತಾದ ಬಗೆ ಬಗೆಯ ತಿನಿಸುಗಳಿಂದ ಗ್ರಾಹಕರನ್ನು ಸಂತ್ರಪ್ತಿಗೊಳಿಸುತ್ತಿದೆ. ಹೋಮ್ ಡೆಲಿವರಿಗಾಗಿ ಕರೆ ಮಾಡಿ- 733815698/8139923922. ಇಂದೇ ಬೇಟಿ ನೀಡಿ ಟ್ರೀ ಹೌಸ್ ಕೆಫೆ. The real Tree House with Pizza, Mommos, Pasta's, Burger's, Sandwiche's, Roll's,Salad's,Tea, Coffee, Smoothly's, Soda's, Juices', Milkshakes...and many more. At Damanica plazza,Yermal bad a, uchila (Manglore-udupi Highway) Call us for Door Delivery-733815698/8139923922.

ಬಿರುವೆರ್ ಕಾಪು ಸೇವಾ ಟ್ರಸ್ಟ್ : ಜ್ಞಾನದೀವಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮ

Thumbnail
Posted On: 13 Feb 2021, 03:10 PM

ಕಾಪು ತಾಲೂಕಿನ ಪ್ರತಿಭಾವಂತ ಬಿಲ್ಲವ ಹಾಗೂ ಇತರ ಸಮಾಜದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ 2020 -21 ನೇ ಸಾಲಿನ ಜ್ಞಾನದೀವಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮವು ಬಿರುವೆರ್ ಕಾಪು ಸೇವಾ ಟ್ರಸ್ಟ್ ಇವರ ಆಶ್ರಯದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಇದರ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಫೆಬ್ರವರಿ 21, ಆದಿತ್ಯವಾರ ಸಂಜೆ 3.30 ರಿಂದ 6 ಗಂಟೆಯ ತನಕ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಇದರ ಅಧ್ಯಕ್ಷರಾದ ವಿಕ್ರಂ ಕಾಪು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗೀತಾಂಜಲಿ ಸುವರ್ಣ, ಕಾಪು ಪುರಸಭೆ ಅಧ್ಯಕ್ಷರಾದ ಅನಿಲ್ ಕುಮಾರ್, ಶ್ರೀ ಗುರುಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರಿನ ರಮೇಶ್ ಜಿ. ಅಮೀನ್, ಕಾಪು ಬಿಲ್ಲವರ ಸಹಾಯಕ ಸಂಘ (ರಿ.)ದ ಗೌರವ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಕಾಪುವಿನ ಉದ್ಯಮಿ ದೀಪಕ್ ಕುಮಾರ್ ಎರ್ಮಾಳ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕೆಡ್ಡಸ ಮರೆತು ಹೋಗುತ್ತಿರುವ ಆಚರಣೆ - ಭೂಮಿತಾಯಿ ಪುಷ್ಪವತಿ ಎಂಬ ಒಸಗೆ

Thumbnail
Posted On: 13 Feb 2021, 02:00 PM

[ಫೆ.10,11,12 ಅಂದರೆ ಮಕರಮಾಸದ ಕೊನೆಯ ಮೂರು ದಿನ,ಪುಯಿಂತೆಲ್ ತಿಂಗಳ ಅಂತ್ಯದ ದಿನಗಳು ಭೂರಜಸ್ವಲಾ ದಿನ.] ‌‌‌ ನಿಸರ್ಗ ದೇಶಕ್ಕೆ ಸೌಭಾಗ್ಯವನ್ನು ಕೊಡುತ್ತದೆ ಎಂಬುದು ಒಂದು ಹಳೆಯ ರೂಢಿಯ ಮಾತು. ಕಾಡು ನಾಡಾಗುತ್ತಾ ಕೃಷಿ ಲಾಭಕಾರಿ ಎನಿಸದೆ, ಅವಗಣನೆಗೆ ಒಳಗಾಗಿರುವ ಅಭಿವೃದ್ಧಿಯ ಭರಾಟೆಯ ಈ ಕಾಲಘಟ್ಟದಲ್ಲಿ ಒಂದು ಪುರಾತನ ಸಾಂಸ್ಕೃತಿಕ ಸಂಭ್ರಮ ಮರೆಯಾಗುತ್ತಿದೆ. ಆದುದರಿಂದಲೇ ನಮ್ಮ ಆಚರಣೆಗಳು ಮೂಲ ಆಶಯ ಕಳೆದುಕೊಳ್ಳುತ್ತಿವೆ, ಔಪಚಾರಿಕವಾಗುತ್ತಿವೆ. ಅಥವಾ ಮರೆತೇ ಹೋಗುತ್ತಿವೆ. ಮರೆತು ಹೋದ - ಹೋಗುತ್ತಿರುವ ಆಚರಣೆಗಳಲ್ಲಿ ತುಳುವರ ‘ಕೆಡ್ಡಸ’ ಒಂದು; ಹೌದು... ಕೆಡ್ಡಸ ಹಾಗಂದರೆ ಏನು, ಯಾವಾಗ ಸನ್ನಿಹಿತವಾಗುತ್ತದೆ ಎಂದು ಪ್ರಶ್ನಿಸುವಂತಾದ ಈ ಸ್ಥಿತಿಗೆ ನಮ್ಮ ಬದುಕಿನ ರೀತಿ-ನೀತಿ-ರಿವಾಜುಗಳು ಬದಲಾದುದೇ ಕಾರಣ. ಮನಸ್ಸು - ಮನಸ್ಸುಗಳ ನಡುವಿನ ಮಾನಸಿಕ ಅಂತರ ಹಿಗ್ಗುತ್ತಾ ಭಾವನಾತ್ಮಕ ಸಂಬಂಧಗಳು ಕೇವಲ ‘ಸೋಗು ಅನ್ನಿಸುತ್ತಾ’ ಮುಂದೆ ಗಮಿಸುವ ಅತಿ ಉತ್ಸಾಹದಲ್ಲಿ ನೆಲ, ಜಲ, ಮರಮಟ್ಟು ,ಒಟ್ಟಿನಲ್ಲಿ ಪ್ರಕೃತಿಯನ್ನು ಕಾಣುವ ದೃಷ್ಟಿಯೂ ಬದಲಾಗಿದೆ. ಒಂದು ಕಾಲಕ್ಕೆ ಪ್ರಕೃತಿ ನಮ್ಮನ್ನು ಪೋಷಿಸುವ, ಜೀವನಾಧಾರಳಾಗಿರುವ ತಾಯಿ. ನೆಲದವ್ವೆಯನ್ನು ನಂಬಿದ್ದು ಎಲ್ಲಿಯವರೆಗೆ ಎಂದರೆ ‘ಭೂಮಿಸಾಕ್ಷಿಯಾಗಿ ಹೇಳುತ್ತೇನೆ' ಎಂದು ಭೂಮಿಯನ್ನು ಸ್ಪರ್ಶಿಸಿ ಸಾಕ್ಷಿ ಹೇಳುವ ಮಾತು ಜನಮಾನಸದಲ್ಲಿ ಸಹಜವಾಗಿ ಚಾಲ್ತಿಯಲ್ಲಿತ್ತು. ನಾವು ಭೂಮಿಯನ್ನು ಗೌರವಿಸುತ್ತಿದ್ದೆವು, ಪೂಜಿಸುತ್ತಿದ್ದೆವು.ಜನಪದರ ಜೀವನ ಭೂಮಿಗೆ ಅಂತಹ ಮಹತ್ತರ ಪ್ರಾಶಸ್ತ್ಯ ಕೊಟ್ಟಿತ್ತು ಎಂಬುದಕ್ಕೆ ‘ಕೆಡ್ಡಸ’ ಆಚರಣೆಯ ಸ್ವರೂಪ, ಕಲ್ಪನೆ, ಅನುಸಂಧಾನಕ್ಕೆ ಆಧಾರವಾಗುತ್ತದೆ. ಭೂಮಿ ಹೆಣ್ಣು ಎಂದು ಪರಿಗ್ರಹಿಸಿದ ಮಾನವ ಭೂಮಿಯಂತೆ ಫಲಸಮೃದ್ಧಿಯನ್ನು ನೀಡುವ, ಜನ್ಮ ನೀಡಿದ ತಾಯಿಯ ಔದಾರ್ಯಕಂಡ; ‘ನೆಲವನ್ನು ಅಬ್ಬೆ ಎಂದು ಪ್ರೀತಿಸಿದ. ಆಕೆಯ ಉತ್ಪನ್ನಗಳೆಲ್ಲ ‘ಫಲವೆಂದು ಪರಿಗ್ರಹಿಸಿ ತಾಯಿಯಿಂದ ತಾನು, ಭೂಮಿಯಿಂದ ಫಲವಂತಿಕೆ’ ಎಂದು ಸಮೀಕರಿಸಿ ಆರಾಧಿಸತೊಡಗಿದ. ಜನಪದರ ಸರಳ, ಮುಗ್ಧ ಆದರೆ ಗಾಢವಾದ ಚಿಂತನೆಯುಳ್ಳ ಪ್ರಕೃತಿ ಪರ ಕಾಳಜಿ ಎಷ್ಟು ಭವ್ಯವಾಗಿದೆ ತಾನೆ! ಸ್ತ್ರೀ ಸಹಜ ದೈಹಿಕ ಬದಲಾವಣೆಯನ್ನು ಗಮನಿಸುತ್ತಾ ಪ್ರಕೃತಿಯ ಋತುಚಕ್ರಕ್ಕನುಗುಣವಾಗಿ ಭೂಮಿತಾಯಿಯಲ್ಲಿ ಕಾಣುವ ಸ್ಥಿತ್ಯಂತರಗಳನ್ನು ಕ್ರೋಡೀಕರಿಸಿಕೊಂಡ ಜನಪದರು ತನ್ನ ತಾಯಿಯಂತೆಯೇ ಭೂಮಿದೇವಿಯೂ 'ಋತುಮತಿ'ಯಾಗುವ ಕಾಲವನ್ನು, ಮತ್ತೆ ಸೃಷ್ಟಿಗೆ ಅಣಿಯಾಗುವ ಸಂದರ್ಭವನ್ನು ಪ್ರಾಕೃತಿಕ ಋತುಮಾನಕ್ಕೆ ಅನುಗುಣವಾಗಿ ನಿಗದಿಪಡಿಸಿ ಆಚರಿಸತೊಡಗಿದ , ಹೇಗಿದೆ ಮುಗ್ಧ ಹೃದಯಗಳ ಕಲ್ಪನೆ? ನಮ್ಮವ್ವೆ ತಿಂಗಳಿಗೊಮ್ಮೆ ಪುಷ್ಪವತಿಯಾಗುವುದಾದರೆ, ‘ಭೂಮಿ ಅವ್ವೆ ವರ್ಷಕ್ಕೊಮ್ಮೆ ಋತುಮತಿಯಾಗುವುದು. ನಮ್ಮ ಜೀವನ ವಿಧಾನದಲ್ಲಿ ಇರುವ ಎಲ್ಲ ವಿಧಿ-ನಿಷೇಧಗಳೂ ಭೂಮಿತಾಯಿಗೂ ಇದೆ ಎಂದು ನಿರ್ಧರಿಸಿ ಭೂಮಿಯನ್ನು ಅಗೆಯಬಾರದು, ಕೃಷಿಗೆಂದು ಉಳಬಾರದು, ಮರಗಿಡಗಳನ್ನು ಕಡಿಯಬಾರದು , ಬದಲಾಗುವ ನಿಸರ್ಗದ ಸೌಂದರ್ಯ ನೋಡುತ್ತಾ ಸೌಭಾಗ್ಯ ರೂಪದ ಕೃಷಿ ಸಮೃದ್ಧಿ ನೀಡಲು ಭೂಮಿತಾಯಿ ಪ್ರಕೃತಿಯ ಮಡಿಲಲ್ಲಿ ಮತ್ತೆ ಅಣಿಯಾದಳು ಎಂಬ ಸಂಕೇತವಾಗಿ ಫಲೀಕರಣಕ್ಕೆ ಮುನ್ನ ಪುಷ್ಪವತಿಯಾಗಿ ತಾನು ಸಿದ್ಧಳಾಗುತ್ತಿದ್ದಾಳೆ ಎಂದು ಭವದ ಭವ್ಯತೆಯನ್ನು ನಿರೂಪಿಸಿರಬೇಕು. 'ಭೂದೇವಿ ಪುಷ್ಪವತಿ' ಎಂಬ ಸಡಗರವಾದರೆ ಈ ಸಂಭ್ರಮಾಚರಣೆಗೆ ‘ಬೇಟೆ’ ಒಂದು ಪೂರಕ ಅಂಗ. ‘ಪುಂಡದ’ ಎಂಬ ಹಕ್ಕಿಗೆ ಜ್ವರ ಬರುವ ದಿನಗಳಂತೆ, ಉಳಿದಂತೆ ಕಾಡು ಪ್ರಾಣಿಗಳ ಕಾಲಿನ ಪಾದದ (ಗೊರಸು, ಪಂಜ ಇತ್ಯಾದಿ) ಅಡಿಭಾಗ ಬಿರಕು ಬಿಟ್ಟು ಓಡಲು ಕಷ್ಟವಾಗುವ ಸಂದರ್ಭವು ಕಾಲಮಾನಕ್ಕೆ ಸರಿಯಾಗಿ ಒದಗುತ್ತದದಂತೆ. ಊರಿನ ಜನರೆಲ್ಲ ಸಾಮೂಹಿಕವಾಗಿ ಬೇಟೆಯಾಡುತ್ತಾ ಬೇಟಯನ್ನು ಸಂಭ್ರಮಿಸುತ್ತಾರೆ. ಊರಿನ ಮುಖ್ಯಸ್ಥನ ಅಥವಾ ಅರಸನ ಅಪ್ಪಣೆಯೂ ಬೇಟೆಯಾಟಕ್ಕೆ ಇತ್ತಂತೆ. ಒಟ್ಟಿನಲ್ಲಿ ಸ್ತ್ರೀಯರ ಆಚರಣೆಯಲ್ಲಿ ಪುರುಷರಿಗೆ ಬೇಟೆಯ ಅವಕಾಶ. ಮನೆಯಂಗಳದಲ್ಲಿ ‘ಕೆಡ್ಡಸ’ ಬರೆದು ಅದರ ಮೇಲೆ ಮಾಂಗಲ್ಯ ಸೂಚಕ ವಸ್ತುಗಳನ್ನು ಕೊಡಿಬಾಳೆ ಎಲೆಯಲ್ಲಿಡುವ, ಸ್ನಾನಕ್ಕೆ ಬೇಕಾದ ಪ್ರಕೃತಿಜನ್ಯ ಸವಲತ್ತುಗಳನ್ನು ಒದಗಿಸುತ್ತಾ ಫುಷ್ಪವತಿಯಾದ ತಾಯಿ ಮಡಿಸ್ನಾನದಿಂದ ಪರಿಶುದ್ಧಳಾಗಿ ಮನೆಯೊಳಗೆ ಬರುವ ಮುಂತಾದ ವಿವಿಧ ಆಚರಣೆಗಳು ನಡೆಯುತ್ತವೆ. ಫಲವತಿಯಾಗುವ ಸರ್ವ ಲಕ್ಷಣ ಸಂಪನ್ನೆಯಾಗಿ ಪುಷ್ಪವತಿಯಾಗುವ ಪೂರ್ವಭಾವೀ ಚಿಂತನೆ, ಸ್ನಾನದ ಸಡಗರ, ಈ ನಡುವೆ ತಿನ್ನಲು ನೀಡುವ ,ಆ ಕಾಲದಲ್ಲಿ ಲಭ್ಯವಿರುವ ಧಾನ್ಯಗಳನ್ನು ಹುರಿದು ತಯಾರಿಸಿದ ವಿಶೇಷ ತಿನಿಸುಗಳು ತುಳುನಾಡಿನ ‘ಕೆಡ್ಡಸ’ ಆಚರಣೆಯ ವಿಶಿಷ್ಟ ವಿಷಯಗಳು. ಧಾನ್ಯಗಳಲ್ಲಿ ‘ಜೀವ’ವನ್ನು, ದೈಹಿಕ ಕಾಮನೆಗಳನ್ನು ಪ್ರಚೋದಿಸುವ ಗುಣಗಳು ಇವೆ ಎಂಬುದೂ ಒಂದು ಆಯಾಮದ ಚಿಂತನೆ. ಭೂ ದೇವಿಗೆ ಪುಷ್ಪವತಿ ಎಂಬ ಸಂಭ್ರಮ ಮುಗಿದು ಜಳಕದ ಸಿದ್ಧತೆಗಳಾಗುತ್ತಿವೆ. ಇದು ‘ಕೆಡ್ಡಸ’. ಕುಡುವರಿ - ನನ್ನೆರಿ :ಕುಡುವರಿ ನನ್ನೆರಿ ಅಕ್ಕಿ, ಹುರುಳಿ, ಹೆಸರು ಮುಂತಾದ ಧಾನ್ಯಗಳನ್ನು ಹುರಿದು ತೆಂಗಿನ ಕಾಯಿ ತುಂಡುಗಳನ್ನು ಬೆರೆಸಿ ತಯಾರಿಸುವ ವಿಶಿಷ್ಟ ತಿನಿಸು 'ಕೆಡ್ಡಸದ ಕುಡುವರಿ'. ಹೀಗೆ ಹುರಿದ ಧಾನ್ಯಗಳನ್ನು ಕುಟ್ಟಿಪುಡಿ ಮಾಡಿ ಬೆಲ್ಲ ಮತ್ತು ತೆಂಗಿನ ಕಾಯಿ ಬೆರೆಸಿ ಸಿದ್ಧಗೊಳಿಸುವ ‘ನನ್ನೆರಿ’ ಎಂಬುದು ಪ್ರಾದೇಶಿಕ ಭಿನ್ನತೆಯಾಗಿ ರೂಢಿಯಲ್ಲಿದೆ. • ಕುಡುವರಿಯನ್ನು ಎಲ್ಲರೂ ತಿನ್ನಬೇಕು. ಊರಿನಲ್ಲಿಲ್ಲದಿದ್ದರೆ ತೆಗೆದಿಟ್ಟು ಬಂದಾಗ ಕೊಡಬೇಕು. ಚೊಚ್ಚಲ ಮಕ್ಕಳಿಗೆ ಇದರಲ್ಲೂ ಆದ್ಯತೆ. • ಕೆಡ್ಡಸದ ಗಾಳಿ, ಕೆಡ್ಡಸ ಬರೆಪುನಿ ಮುಂತಾದುವು ಕೇಳಿಬರುತ್ತಿರುವ ಶಬ್ದಗಳು. ಈಗ ಗಾಳಿಯೂ ಬೀಸುವುದಿಲ್ಲ. ಭೂಮಿಯೂ ಪರಿಮಳ ಬೀರುವುದಿಲ್ಲ. ಮಂದಾರ ರಾಮಾಯಣದಲ್ಲಿ ‘ಬನ್ನಗನೆ ಕೆಡ್ಡಸದ ಪೊತ್ತುದಿನರಿ, ಕುಡುಕಡಲೆ, ಪೇರ‍್ಪದೆಂಗಿದ ಪೊದಿಕೆನ್ ಕಣತ್ ದೀದ್' ಎಂಬ ಉಲ್ಲೇಖವಿದೆ. • ಕೆಡ್ಡಸ ಒಂದು ಕಾಲದ ವಿಜೃಂಭಣೆಯ ಆಚರಣೆಯಾಗಿತ್ತು. ಆದರೆ ಈಗ ನೆನಪೇ ಆಗದ ಪರ್ವ ದಿನ’ವಾಗಿದೆ. ಒಂದು ವ್ಯತ್ಯಾಸವಾದರೆ ಅದನ್ನು ಆಧರಿಸಿದ ಎಲ್ಲವೂ ವ್ಯತ್ಯಸ್ತಗೊಂಡಂತೆ ತಾನೆ? ಪ್ರಕೃತಿಯ ಮಡಿಲಲ್ಲಿ ನಿಸರ್ಗದ ನಿಶ್ಚಿತ ಸ್ಥಿತ್ಯಂತರಗಳ ವಿಸ್ಮಯಗಳನ್ನು ಗಮನಿಸುತ್ತಾ ಮನುಷ್ಯ ಬದುಕು ಕಟ್ಟಿದ. • ಪುಯಿಂತೆಲ್ ಅಥವಾ ಪೊನ್ನಿ ತಿಂಗಳ (ಮಕರಮಾಸ) ಇಪ್ಪತ್ತೇಳನೇ ದಿನ ಸಂಜೆಯಿಂದ ಮಾಯಿ ತಿಂಗಳು ಬರುವ ಸಂಕ್ರಮಣ (ಕುಂಭ ಸಂಕ್ರಮಣ)ದವರೆಗೆ ಮೂರು-ನಾಲ್ಕು ದಿನ 'ಕೆಡ್ಡಸ'. ಸುರುಕೆಡ್ಡಸ-ನಡುಕೆಡ್ಡಸ-ಕಡೆಕೆಡ್ಡಸವೆಂದು ಮೂರು ದಿನ ಆಚರಣೆ. ಫಲವಂತಿಕೆಯನ್ನು ನೀಡುವ ಭೂದೇವಿ ಬೆಳೆ ಸಮೃದ್ಧಿಯನ್ನು ನೀಡಲು ಮತ್ತೆ ಸನ್ನದ್ಧಳಾದಳೆಂಬ ಸಂದರ್ಭದ ಆರಾಧನಾ ವಿಧಿಯಾಗಿ ‘ಕೆಡ್ಡಸ’ ತುಳುವರ ವಿಶಿಷ್ಟ ಹಬ್ಬ. • ಮಳೆಗಾಲದ ಪ್ರಧಾನ ಕೃಷಿಗೆ (ಕರಾವಳಿಯಲ್ಲಿ ಹೆಚ್ಚಾಗಿ ಭತ್ತ) ಪೂರ್ವಭಾವಿ ಸಿದ್ಧತೆಯನ್ನು ಚಳಿಗಾಲ ಮುಗಿದು ಧಾನ್ಯಗಳ ಬೆಳೆಯ ಬಳಿಕ ಆರಂಭಿಸಲಾಗುತ್ತದೆ. ಪೊನ್ನಿ ತಿಂಗಳ (ಜನವರಿ ತಿಂಗಳ ಮಧ್ಯದಿಂದ ಫೆಬ್ರವರಿ ತಿಂಗಳ ಮಧ್ಯದವರೆಗೆ) ಆರಂಭವು ಬೇಸಗೆ ಕಾಲವನ್ನು ಘೋಷಿಸುತ್ತದೆ.ಮುಂದಿನ ಮಳೆಗಾಲದಲ್ಲಿ ಭೂಮಿ (ಗದ್ದೆಯನ್ನು) ಉತ್ತು, ನೇಜಿ ನೆಡಲು ಸಿದ್ಧತೆ ನಡೆಸಲು ಜಾಗೃತನಾಗುವಂತೆ ಕೃಷಿಕನನ್ನು ಎಚ್ಚರಿಸುತ್ತಾಳೆ ಪ್ರಕೃತಿ. • ಮೂಡು ದಿಕ್ಕಿನಿಂದ ವಿಶಿಷ್ಟವಾದ ಗಾಳಿ ಬೀಸತೊಡಗುತ್ತದೆ. ಭೂಮಿಗೆ ವಿಶೇಷ ಕಂಪು ಬರುತ್ತದೆ. ಇದು ಪುಯಿಂತೆಲ್ ಕೊನೆಯ ದಿನಗಳಾಗಿರುತ್ತವೆ. • ಇದು 'ಭೂ ರಜಸ್ವಲಾ' ಪರ್ವ ಕಾಲವಾಗಿರುತ್ತದೆ. ಭೂದೇವಿ ರಜಸ್ವಲೆಯಾದಳೆಂದು ನಂಬಲಾಗುವ ಈ ದಿನಗಳು ಪರ್ವವಾಗಿ ಸ್ವೀಕರಿಸಲ್ಪಟ್ಟ ಕಲ್ಪನೆ ಹಾಗೂ ಕೃಷಿ ಆಧಾರಿತ ಜೀವನ ಶೈಲಿ. • ಭೂಮಾತೆಗೆ ಬಡಿಸುವ ಆಹಾರ (ಕುಡುಅರಿ - ನನ್ನೆರಿ) ವಸ್ತುಗಳೆಲ್ಲ ಫಲವಂತಿಕೆಯ ಬಯಕೆಯ ಸಂಕೇತಗಳೇ ಆಗಿರುತ್ತವೆ. ಹಲಸಿನ ಎಳಸು ಕಾಯಿ ಹಾಕಿದ ಪದಾರ್ಥ, ಉದ್ದಿನ ದೋಸೆ, ನುಗ್ಗೆ ಕೋಡು ಹಾಕಿದ ಪಲ್ಯಗಳು ಪ್ರಧಾನ. • ಕೆಡ್ಡಸದ ಅವಧಿಯಲ್ಲಿ ಹೆಂಗಸರು ಮುಟ್ಟಾದರೆ ಹಸಿ ಸೋಗೆಯಲ್ಲಿ ಮಲಗಬೇಕು. ತಾನು ಮುಟ್ಟಾಗುವ ವೇಳೆ ಇತರ ಹೆಣ್ಣು ಮಕ್ಕಳುಮುಟ್ಟಾಗುವುದನ್ನು ಭೂಮಿತಾಯಿ ಸಹಿಸಲಾರಳೆಂಬ ಕಲ್ಪನೆ ಜನಪದರಲ್ಲಿದೆ. ಕೈಯಲ್ಲಿ ಹಿಡಿದುಕೊಂಡೇ ತಿಂಡಿ ತಿನ್ನುವ, ಊಟ ಮಾಡುವ ಸಂಪ್ರದಾಯವೂ ಇದೆ‌ (ಇತ್ತು). • ಭೂಮಿಯನ್ನು ಯಾವುದೇ ಕಾರಣಕ್ಕೆ ಅಗೆಯಬಾರದು ಎಂಬ ನಿಷೇಧ ಕೆಡ್ಡಸದ ಅವಧಿಯಲ್ಲಿ ಅನುಸರಿಸಲಾಗುತ್ತದೆ ಅಥವಾ ಅನುಸರಿಸಲಾಗುತ್ತಿತ್ತು. • ಭೂದೇವಿ ಪುಷ್ಪವತಿಯಾಗುವಳೆಂಬ ಕಲ್ಪನೆಯೇ ಅನನ್ಯವಾದುದು. ಬೆಳೆ ಆಕೆಯ ಫಲವಂತಿಕೆಯ ಫಲಗಳೆಂಬುದು ವಿಶಿಷ್ಟ ಕಲ್ಪನೆ. ಕೆಡ್ಡಸದ ಬೋಂಟೆ : ‘ಕೆಡ್ಡಸ’ ಎಂದರೆ ಬೇಟೆ ಸಂಬಂಧಿಯಾದುದು ಎಂಬ ನಿರ್ವಚನವೂ ಇದೆ. ಆದುದರಿಂದಲೇ ಬೇಟೆಯೂ ಕೆಡ್ಡಸದ ಅವಿಭಾಜ್ಯ ಅಂಗ. ‘ಪುಂಡದ’ ಎಂಬ ಹಕ್ಕಿಗೆ ಈ ಶ್ರಾಯದಲ್ಲಿ ಜ್ವರ ಬರುತ್ತದೆಯಂತೆ. ‘ಪುಂಡದ ಬೋಟೆ’ ಎಂಬುದು ವಾಡಿಕೆ. ‘ಕೆಡ್ಡಸ’ ಎಂದರೆ ತೊಡಗು ಎಂಬ ಅರ್ಥವೂ ಇದೆ. ತೊಡಗುವುದು ಎಂದರೆ ಕೃಷಿ ಆರಂಭಿಸು ಎಂದು ಪರಿಗ್ರಹಿಸಬಹುದು. ಕೆಡ್ಡಸದ ನೇಮ, ಕೆಡ್ಡಸದ ಆಯನ, ಕೆಡ್ಡಸದ ಗಾಳಿ, ಕೆಡ್ಡಸದ ಕುಡುಅರಿ ಮುಂತಾದವು ಜನಪದರಲ್ಲಿ ರೂಢಿಯಲ್ಲಿರುವ ಆಡು ಮಾತು. ಸಂಪ್ರದಾಯ : ಮೂರುದಿನ ಹಸಿ ಕಡಿಯಬಾರದು, ಒಣಗಿರುವುದನ್ನು ಮುರಿಯಬಾರದು ಎಂಬ ನಂಬಿಕೆಇದೆ. ಲೇಖನ : ಕೆ.ಎಲ್.ಕುಂಡಂತಾಯ

ಶ್ರೀ ಸಿರಿ ಕುಮಾರ ಮಾಯಕಲ್ಲು : ಹುರುಳಿ (ಕುಡು) ಅಗೆಲ್ ಸೇವೆ

Thumbnail
Posted On: 12 Feb 2021, 12:02 AM

ಉಡುಪಿ : ಕನರ ಗುಂಡಿ ಗರ್ಡೆ, ಲಕ್ಷ್ಮೀನಗರ ಶ್ರೀ ಸಿರಿ ಕುಮಾರ ಮಾಯಕಲ್ಲು ಕ್ಷೇತ್ರದಲ್ಲಿ ಹುರುಳಿ (ಕುಡು) ಅಗೆಲ್ ಸೇವೆ ಫೆಬ್ರವರಿ 12 ಶುಕ್ರವಾರ ಮಧ್ಯಾಹ್ನ 3ಗಂಟೆಗೆ ನಡೆಯಲಿದ್ದು, ಸೇವಾ ರೂಪದಲ್ಲಿ ಹುರುಳಿ (ಕುಡು) ನೀಡುವವರು 1 ಕಾಯಿ, ಬೆಲ್ಲದೊಂದಿಗೆ 2 ಗಂಟೆಯ ಒಳಗೆ ಶ್ರೀ ಕ್ಷೇತ್ರಕ್ಕೆ ತಲುಪಿಸಬೇಕು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಲ್ಲಾರು : ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ವಾರ್ಷಿಕ ಮಹೋತ್ಸವ

Thumbnail
Posted On: 11 Feb 2021, 11:44 PM

ಕಾಪು ತಾಲೂಕಿನ ಮಲ್ಲಾರು ಗ್ರಾಮದ ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ದೇವರ ಉತ್ಸವವು ಫೆಬ್ರವರಿ 12, ಶುಕ್ರವಾರದಿಂದ ಮೊದಲ್ಗೊಂಡು 18 ಗುರುವಾರ ಶ್ರೀ ಮನ್ಮಹಾರಥೋತ್ಸವ ಮತ್ತು ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಟ್ಟಾರು : ಹಿಂದೂ ಮಿಲನ, ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ

Thumbnail
Posted On: 11 Feb 2021, 08:55 PM

ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ಮಟ್ಟಾರು ಘಟಕದ ನೇತೃತ್ವದಲ್ಲಿ ಹಿಂದೂ ಮಿಲನ ಕಾರ್ಯಕ್ರಮ ಫೆಬ್ರವರಿ 26, ಶುಕ್ರವಾರ ಮಟ್ಟಾರಿನಲ್ಲಿ ನಡೆಯಲಿದೆ. ಸಂಜೆ ಗಂಟೆ 3 ರಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಪ್ರಧಾನ ಅರ್ಚಕರಾದ ಶ್ರೀ ವಿಷ್ಣುಮೂರ್ತಿ ಉಪಾಧ್ಯಾಯರ ನೇತೃತ್ವದಲ್ಲಿ ಅಸ್ಟಮ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ನಡೆಯಲಿದೆ. ಸಂಜೆ 6.30 ರಿಂದ 7.30 ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 7:30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಆಶೀರ್ವಚನ, ಮಂಗಳೂರು ವಿಭಾಗ ಧರ್ಮ ಜಾಗರಣ ಸಂಯೋಜಕರಾದ ಪ್ರಕಾಶ್ ಮಲ್ಪೆ ಇವರಿಂದ ದಿಕ್ಸೂಚಿ ಭಾಷಣ ಹಾಗೂ ರಾತ್ರಿ 9 ರಿಂದ ಅನ್ನಸಂತರ್ಪಣೆ ನಡೆಯಲಿದೆ. 9.30 ರಿಂದ ಕಲರ್ಸ್ ಕನ್ನಡ ಖ್ಯಾತಿಯ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಕರುನಾಡ ಗಾನ ಗಂಧರ್ವ ಬಿರುದಾಂಕಿತ ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಶಿರ್ವ : ಸಂತ ಮೇರಿ ಕಾಲೇಜಿನಲ್ಲಿ ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನ

Thumbnail
Posted On: 11 Feb 2021, 03:40 PM

ಫೆಬ್ರವರಿ 11 ಸಂತ ಮೇರಿ ಕಾಲೇಜು, ಶಿರ್ವ ಇಲ್ಲಿ ಮಂಗಳೂರಿನ ಪ್ರತಿಷ್ಟಿತ ದಿಯಾ ಸಿಸ್ಟಮ್ ಸಂಸ್ಥೆ (ಗ್ಲೋ ಟಚ್ ಟೆಕ್ನಾಲಾಜಿಸ್)ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ಕಾಲೇಜಿನ ಗಣಕ ವಿಜ್ಞಾನ ವಿಭಾಗ, ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶವತಿಯಿಂದ ಏರ್ಪಡಿಸಲಾಯಿತು. ಈಗಾಗಲೇ ಬಿ.ಸಿ.ಎ., ಡಿಪ್ಲೊಮಾ(ಸಿ.ಎಸ್.), ಬಿ.ಎಸ್ಸಿ (ಸಿ.ಎಸ್.), ಬಿ.ಎಸ್ಸಿ (ಐ.ಟಿ), ಬಿ.ಇ, ಎಂ.ಎಸ್ಸಿ, ಎಂ.ಸಿ.ಎ, ಸ್ನಾತಕೋತ್ತರ ಪದವಿ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪೂರ್ವಹ್ನ 9.30 ಗಂಟೆಗೆ ಕಾಲೇಜಿನ ಫಾ. ಹೆನ್ರಿ ಕ್ಯಾಸ್ತಲೀನೊ ಆಡಿಟೋರಿಯಂನಲ್ಲಿ ಮಂಗಳೂರಿನ ದಿಯಾ ಸಿಸ್ಟಮ್‍ನವರು ಕ್ಯಾಂಪಸ್ ಸಂದರ್ಶನವನ್ನು ನಡೆಸಿಕೊಟ್ಟರು. ನಮ್ಮ ಮುಂದೆ ಪೂರ್ವಯೋಜಿತ ಆಧುನಿಕ ತಾಂತ್ರಿಕತೆ ಇದ್ದರೂ ದೋಷಗಳು ಕಂಡುಬರುವುದು ಸಹಜ. ದೋಷಗಳನ್ನು ಕಂಡುಹಿಡಿದು ಅದಕ್ಕೆ ಸೂಕ್ತವಾದ ಪರಿಹಾರೋಪಾಯಗಳನ್ನು ಕಾಲೇಜಿನ ಕಲಿಕಾ ಸಂದರ್ಭದಲ್ಲಯೇ ಯುವಜನತೆ ತಾಂತ್ರಿಕ ಕೌಶಲ್ಯಗಳನ್ನು ಅರಿತುಕೊಂಡರೆ ಮುಂದೆ ಉದ್ಯೋಗವನ್ನು ಪಡೆದಾಗ ಕಂಪೆನಿಗೆ ಅದರಿಂದ ಮುಂದೆ ಅಭ್ಯರ್ಥಿಗೆ ಮತ್ತು ಕಂಪೆನಿಗೆ ಲಾಭವಾಗುತ್ತದೆ ಎಂದು ದಿಯಾ ಸಿಸ್ಟಮ್ಸ್ ಸೀನಿಯರ್ ಮ್ಯಾನೆಜರ್ ಶ್ರೀಶ್ರೀನಿವಾಸ ಭಟ್‍ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಹೆರಾಲ್ಡ್ ಐವನ್ ಮೋನಿಸ್‍ರವರು ಭವಿಷ್ಯದಲ್ಲಿ ಸೂಕ್ತವಾದ ಉದ್ಯೋಗವನ್ನು ಪಡೆದುಕೊಳ್ಳಲು ಇಂತಹ ಕ್ಯಾಂಪಸ್ ನೇರನೇಮಕಾತಿ ಕಾರ್ಯಕ್ರಮಗಳು ಹೆಚ್ಚು ಪ್ರಯೋಜನಕಾರಿ ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನಲ್ಲಿ ಕ್ಯಾಂಪಸ್ ನೇರನೇಮಕಾತಿ ಕಾರ್ಯಕ್ರಮವನ್ನು ಹಮ್ಮಿಕೊಂಡ ದಿಯಾ ಸಿಸ್ಟಮ್ ಕಂಪೆನಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಅಭ್ಯರ್ಥಿಗಳಿಗೆ ನಡೆದ ಈ ಕ್ಯಾಂಪಸ್ ಸಂದರ್ಶನದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿಗಳು ಮತ್ತು ರಾಜ್ಯದ ವಿವಿಧ ಜಿಲ್ಲೆಗಳಾದ ಹುಬ್ಬಳ್ಳಿ, ಗದಗ, ಬೆಂಗಳೂರು, ಹಾಸನ, ಬಳ್ಳಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಪರಿಸರದ ಕಾಲೇಜುಗಳ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಸುಮಾರು 190 ವಿದ್ಯಾರ್ಥಿಗಳು ನೊಂದಾಯಿಸಿ , ಭಾಗವಹಿಸಿದರು. ಇದರ ಸದುಪಯೋಗವನ್ನು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ದಿಯಾ ಸಿಸ್ಟಮ್ಸ್ ಹಿರಿಯ ನೇಮಕಾತಿ ಕಾರ್ಯನಿರ್ವಾಹಕರಾದ ಶ್ರಿ. ಲಕ್ಷ್ಮಿಶ್ ಬಿ.ಎನ್, ಕು.ಸಮೃಧಿ, ಶ್ರೀರಾಘವೇಂದ್ರ, ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮತ್ತು ಮಾಹಿತಿ ತಂತ್ರಜ್ಞಾನಕೋಶದ ನಿರ್ದೇಶಕರಾದ ಲೆಫ್ಟಿನೆಂಟ್ ಶ್ರಿ ಕೆ.ಪ್ರವೀಣ್ ಕುಮಾರ್, ವಿದ್ಯಾರ್ಥಿಗಳು, ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ಬಂಧುಗಳು ಉಪಸ್ಥಿತರಿದ್ದರು. ಕು.ಚಂದನಾ ಮತ್ತು ಬಳಗ ಪ್ರಾರ್ಥಿಸಿ, ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶದ ಸಂಯೋಜಕಿ ತನುಜಾ ಎನ್ ಸುವರ್ಣ ವಂದಿಸಿ, ಉಪನ್ಯಾಸಕಿ ಸುಷ್ಮಾ ಸ್ವಾಗತಿಸಿ, ದಿವ್ಯಶ್ರಿ ಕಾರ್ಯಕ್ರಮ ನಿರೂಪಿಸಿದರು.

ಮಣಿಪಾಲ : 8 ಕೆ.ಜಿ ಗಾಂಜಾ ವಶ

Thumbnail
Posted On: 10 Feb 2021, 03:03 PM

ಉಡುಪಿ ಜಿಲ್ಲಾ ಪೋಲೀಸ್ ಅಧೀಕ್ಷಕರಾದ ಶ್ರೀ. ವಿಷ್ಣುವರ್ಧನ್ ಐ.ಪಿ.ಎಸ್‌ರವರ ಮಾರ್ಗದರ್ಶನದಲ್ಲಿ ಮಣಿಪಾಲ ಪೊಲೀಸರು ಮಹಾರಾಷ್ಟ್ರದಿಂದ ಮಣಿಪಾಲಕ್ಕೆ ಮಾರಾಟ ಮಾಡಲು ತಂದಿದ್ದ 8 ಕೆ.ಜಿ ಗಾಂಜಾ ಮೌಲ್ಯ ಸುಮಾರು 2,66000/- ರೂ ಹಾಗೂ ಕೃತ್ಯಕ್ಕೆ ಬಳಸಿದ ಆಟೋರಿಕ್ಷಾವನ್ನು ವಶಪಡಿಸಿಕೊಂಡಿದ್ದು ಮಣಿಪಾಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮುದರಂಗಡಿ : ಬಿಲ್ಲವ ಸಂಘದ 8ನೇ ವರ್ಷದ ವರ್ಧಂತ್ಯುತ್ಸವ , ಪ್ರಭಾವಳಿ ಸಮರ್ಪಣೆ

Thumbnail
Posted On: 09 Feb 2021, 05:17 PM

ಕಾಪು ತಾಲೂಕಿನ ಮುದರಂಗಡಿ ಬಿಲ್ಲವ ಸಂಘದ 8ನೇ ವರ್ಷದ ವರ್ಧಂತ್ಯುತ್ಸವ , ಪ್ರಭಾವಳಿ ಸಮರ್ಪಣೆಯು ಫೆಬ್ರವರಿ 20, ಶನಿವಾರದಂದು ನಡೆಯಲಿದೆ. ಬೆಳಿಗ್ಗೆ 9:30ಕ್ಕೆ ಪ್ರಭಾವಳಿಯನ್ನು ಮುದರಂಗಡಿ ಅಶ್ವತ್ಥ ಕಟ್ಟೆಯಿಂದ ಶೋಭಾಯಾತ್ರೆಯ ಮೂಲಕ ನಾರಾಯಣಗುರುಗಳ ಮಂದಿರಕ್ಕೆ ತರಲಾಗುವುದು. ಬೆಳಿಗ್ಗೆ 11 ರಿಂದ ಸಭಾ ಕಾರ್ಯಕ್ರಮ, 12:30ಕ್ಕೆ ಮಹಾಪೂಜೆ ಹಾಗೂ ಮಧ್ಯಾಹ್ನ 1ರಿಂದ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.