Updated News From Kaup

ಡಾ| ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾಡ್೯ ನೋಂದಣಿ ಕಾರ್ಯಕ್ರಮ

Posted On: 10-11-2020 05:08PM

ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ‌.), ಮೊಗವೀರ ಯುವ ಸಂಘಟನೆ (ರಿ.), ರೋಟರಿ ಸಮುದಾಯ ದಳ ಇನ್ನಂಜೆ ಮತ್ತು ಯುವಕ ಮಂಡಲ (ರಿ.) ಇನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಇನ್ನಂಜೆ ದಾಸ ಭವನದಲ್ಲಿ ಡಾ| ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾಡ್೯ ನೋಂದಣಿ ಕಾರ್ಯಕ್ರಮ ಜರಗಿತು.

ಏಳು ತಿಂಗಳಿನಲ್ಲಿ ಲಕ್ಷಕ್ಕೂ ಮೀರಿ ಫಾಲೋವಸ್೯ ಪಡೆದ ಕರಾವಳಿಯ ಖ್ಯಾತ ಗಾಯಕ

Posted On: 10-11-2020 09:51AM

ಸಾಮಾಜಿಕ ಜಾಲತಾಣ ಅದೆಷ್ಟೋ ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳನ್ನು ಸರ್ವರೂ ಗುರುತಿಸುವಂತೆ ಮಾಡುವ ತಾಣವಾಗಿದೆ. ಕೋವಿಡ್ ಎಂಬ ಹೆಮ್ಮಾರಿಯು ಕಲಾವಿದರ ಬದುಕು ಕಸಿದ ಸಂದರ್ಭ ತಾವು ಕಷ್ಟದಲ್ಲಿದ್ದರೂ ತಮ್ಮ ಕಷ್ಟ ತೋರ್ಪಡಿಸದೆ ತಮ್ಮ ಕಲಾ ನೈಪುಣ್ಯತೆಯ ಮೂಲಕ ಅದೆಷ್ಟೋ ಜನ ಮನಗಳಿಗೆ ಸಾಮಾಜಿಕ ಜಾಲತಾಣಗಳ ಮುಖಾಂತರ ಮನ ತೃಪ್ತಿ ನೀಡಿದ ಕಲಾವಿದರ ಸಾಲಿನಲ್ಲಿ ಅಗ್ರಗಣ್ಯರಾದ ಹಾಡುಗಾರ ಅರವಿಂದ್ ವಿವೇಕ್.

ಪೋಲಿಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ ಸ್ವೀಕೃತ್ ರೈ ರಾಜ್ಯಕ್ಕೆ 54ನೇ ರಾಂಕ್

Posted On: 10-11-2020 08:28AM

2019-20ರ ಬ್ಯಾಚ್ ನ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಯ ಅಂತಿಮ ಪರೀಕ್ಷೆಯಲ್ಲಿ ದ.ಕ ಜಿಲ್ಲೆಯ ಪುತ್ತೂರಿನ ಸ್ವೀಕೃತ್ ರೈ ರಾಜ್ಯಕ್ಕೆ 54ನೇ ರಾಂಕ್ ಪಡೆದು ಬೆಂಗಳೂರು ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿಗೆ ಆಯ್ಕೆಯಾಗಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ತಜ್ಞರ ಸಲಹೆ ತಪ್ಪದೇ ಪಾಲಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

Posted On: 10-11-2020 08:22AM

ಉಡುಪಿ : ಜಿಲ್ಲೆಯಲ್ಲಿ 2 ನೇ ಹಂತದ ಕೋವಿಡ್ ಹರಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು ,ತಜ್ಞರ ಸಮಿತಿ ನೀಡುವಂತಹ ಸಲಹೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಅವರು ಸೋಮವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೇವಸ್ಥಾನ, ದೈವಸ್ಥಾನ, ಚಾವಡಿ, ಮನೆ ಹೆಸರನ್ನು ತುಳುವಿನಲ್ಲಿ ಬರೆಯೋಣ...

Posted On: 07-11-2020 10:32AM

ತುಳು ಭಾಷೆಯ ಲಿಪಿಯನ್ನು ಆಸಕ್ತಿಯಿಂದ ಗಮನಿಸುವ , ಕಲಿಯುವ ,ಬರೆಯುವ ,ಬರೆಯಿಸುವ ಒಂದು‌‌ ಅಭಿಯಾನ‌ ಆರಂಭವಾಗಿದೆ. ನಾವು ಮಾತನಾಡುವ ಭಾಷೆಯನ್ನು ಅದೇ ಭಾಷೆಯ ಲಿಪಿಯಲ್ಲಿ ಬರೆಯುವ ಅವಕಾಶವಿದೆ - ಅವಕಾಶವಿತ್ತು ; ಆದರೆ ನಾವದನ್ನು ಶತಮಾನಗಳಷ್ಟು ಹಿಂದೆಯೇ ಮರೆತಿದ್ದೆವು ಅಥವಾ ಕಲಿಯುವ ಕುರಿತು ನಿರ್ಲಕ್ಷ್ಯ ತಾಳಿದ್ದೆವೋ ಗೊತ್ತಿಲ್ಲ .ಅಂತೂ ತುಳುಲಿಪಿ‌ ಬಳಕೆಯಿಂದ ಮರೆಯಾಗಿತ್ತು. ಆದರೆ ಇತ್ತೀಚೆಗೆ ಬಹಳಷ್ಟು ಯುವಕರು ಸ್ವತಃ ತುಳುಲಿಪಿ ಕಲಿತು‌ ಅದನ್ನು ತಮ್ಮ ವ್ಯಾಪ್ತಿಯಲ್ಲಿ ಮಕ್ಕಳಿಗೆ ಕಲಿಸುವ ಕೆಲಸವನ್ನು ಆರಂಭಿಸಿದ್ದಾರೆ . ಕೆಲವು ಸಂಘಟನೆಗಳೂ ಬರೆಯುವ - ಕಲಿಸುವ ಕಾರ್ಯದಲ್ಲಿ ತೊಡಗಿರುವುದನ್ನು ಕಾಣುತ್ತೇವೆ . ಈ ಬೆಳವಣಿಗೆ ಸಂತೋಷದ ಸಂಗತಿ .

ಕಾಪು ಠಾಣಾಧಿಕಾರಿ ರಾಜಶೇಖರ್ ಸಾಗನೂರು ಕಾರವಾರಕ್ಕೆ ವರ್ಗಾವಣೆ

Posted On: 07-11-2020 10:28AM

ದಕ್ಷ ಅಧಿಕಾರಿಯಾಗಿ ಕಾಪು ಠಾಣೆಯಲ್ಲಿ ಕರ್ತವ್ಯವಹಿಸಿದ ಪಿಎಸ್ಐ ರಾಜಶೇಖರ್ ಸಗನೂರ್ ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ವರ್ಗಾವಣೆ ಆಗಿರುತ್ತಾರೆ. ರಾಜಶೇಖರ್ ರವರು ಬೀದರ್, ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. ಇವರಿಂದ ತೆರವಾದ ಸ್ಥಾನಕ್ಕೆ ಬ್ರಹ್ಮಾವರ ಠಾಣೆಯ ಪಿಎಸ್ಐ ರಾಘವೇಂದ್ರ ಬರಲಿದ್ದಾರೆ.

ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ರಾಘವೇಂದ್ರ ಪ್ರಭು, ಕರ್ವಾಲು ಆಯ್ಕೆ

Posted On: 06-11-2020 09:43PM

ಲೇಖಕ, ಸಾಮಾಜಿಕ ಕಾರ್ಯಕರ್ತ, ತರಬೇತುದಾರ ರಾಘವೇಂದ್ರ ಪ್ರಭು, ಕರ್ವಾಲುರವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಮಾಜ ಸೇವೆ ಮತ್ತು ಯುವಸಂಘಟನೆ ವಿಭಾಗದಲ್ಲಿ ನೀಡಲ್ಪಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಉಡುಪಿಯಲ್ಲಿ ಫರ್ನಿಚರ್ ಕ್ಲಸ್ಟರ್ ಆರಂಭಿಸಲು ಜಾಗ ಗುರುತಿಸಿ: ಜಗದೀಶ್ ಶೆಟ್ಟರ್

Posted On: 06-11-2020 05:51PM

ಉಡುಪಿ, ನವೆಂಬರ್ 6 : ಉಡುಪಿ ಜಿಲ್ಲೆಯಲ್ಲಿ ಮರದ ಸಾಮಗ್ರಿಗಳನ್ನು ತಯಾರಿಸುವ ಫರ್ನಿಚರ್ ಕ್ಲಸ್ಟರ್ ಆರಂಭಿಸಲು ಸೂಕ್ತ ಜಾಗವನ್ನು ಗುರುತಿಸುವಂತೆ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ಅವರು ಶುಕ್ರವಾರ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಕೈಗಾರಿಕಾಭಿವೃದ್ದಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲೆಗಳು ಅಧ೯ ಫೀಸ್ ಪಡೆಯಲಿ

Posted On: 06-11-2020 05:42PM

ಕರೋನಾ ಎಂಬ ಮಹಾಮಾರಿ ಜಗತ್ತನ್ನು ಹೈರಾಣಗೊಳಿಸಿದೆ.ಕಳೆದ 7 ತಿಂಗಳಿಂದ ಜನರು ಆಥಿ೯ಕ ಸಂಕಷ್ಟದಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ.ಈ ಅವಧಿಯಲ್ಲಿ ಖಾಸಗಿ ಶಾಲೆಗಳು ಶುಲ್ಕ ಪಾವತಿ ಮಾಡಲು ಪೋಷಕರನ್ನು ಒತ್ತಾಯಿಸುತ್ತಿದೆ.ಸಕಾ೯ರ ಶಾಲೆಗಳನ್ನು ತೆರೆಯಲು ತಯಾರಿ ನಡೆಸುತ್ತಿರುವ ಈ ಸಂದಭ೯ದಲ್ಲಿ ಶಾಲೆಗಳು ಕೂಡ ಶುಲ್ಕ ಪಾವತಿಸಲು ವಿದ್ಯಾಥಿ೯ಗಳ ಪೋಷಕರನ್ನು ಒತ್ತಾಯಿಸುತ್ತಿರುವುದು ಸರಿಯಲ್ಲ.

ನಿವೃತ್ತ ಉಪ ತಹಶೀಲ್ದಾರ್ ವೈ. ಭುಜಂಗ ಆಚಾರ್ಯ ನಿಧನ

Posted On: 06-11-2020 05:21PM

ಎಲ್ಲೂರು:ನಿವೃತ್ತ ಉಪತಹಶೀಲ್ದಾರ್ ವೈ. ಭುಜಂಗ ಆಚಾರ್ಯ (83) ಆವರು ಅಲ್ಪಕಾಲದ ಅಸೌಖ್ಯದಿಂದ ಎಲ್ಲೂರು ಕಂಚುಗರಕೇರಿಯ ಸ್ವಗೃಹ ಶ್ರೀ ದುರ್ಗಾಕೃಪಾದಲ್ಲಿ ಗುರುವಾರ ರಾತ್ರಿ ನಿಧನ ಹೊಂದಿದರು.