Updated News From Kaup
ತುಳು ಹಾಸ್ಯಮಯ ನಾಟಕ ಪರಕೆ ಪೂವಕ್ಕೆಗೆ ಅದ್ದೂರಿ ಮುಹೂರ್ತ
Posted On: 06 Feb 2021, 11:08 PM
ಶಿವಾನಂದ ಶೆಟ್ಟಿ ಮಂಗಲ್ಪಾಡಿ ನಿರ್ಮಾಣದ ಅಮ್ಮ ಕಲಾವಿದರು ಕುಡ್ಲ ಅಭಿನಯದ ಸೋಮನಾಥ್ ಶೆಟ್ಟಿ ಮಂಗಲ್ಪಾಡಿ ರಚನೆಯ, ರಂಗ್ ದ ರಾಜೆ ಸುಂದರ್ ರೈ ಮಂದಾರ ನಿರ್ದೇಶಿಸಿ ಅಭಿನಯಿಸುವ ತುಳು ಹಾಸ್ಯಮಯ ನಾಟಕ ಪರಕೆ ಪೂವಕ್ಕೆಯ ಮುಹೂರ್ತ ಕಾರ್ಯಕ್ರಮ ಇಂದು ಬೆಳಿಗ್ಗೆ 10.30 ಕ್ಕೆ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪಳ ದಲ್ಲಿ ಅದ್ದೂರಿಯಾಗಿ ನೆರವೇರಿತು. ತದನಂತರ ನಡೆದ ಸಭಾಕಾರ್ಯಕ್ರಮದಲ್ಲಿ ತುಳುರಂಗಭೂಮಿ ಹಾಗು ಚಲನಚಿತ್ರ ನಿರ್ದೇಶಕರು ಆದ ವಿಜಯ್ ಕುಮಾರ್ ಕೊಡಿಯಾಲಬೈಲ್, ರಂಗಭೂಮಿ ಕಲಾವಿದರಾದ ಅರುಣ್ ಪೇಜಾವರ, ರಾಜೇಶ್ ಕಣ್ಣೂರ್, ಸುದ್ದಿಬಿಡುಗಡೆ ಚಾನೆಲ್ ನ ಹಮೀದ್ ಪುತ್ತೂರು, ಯಕ್ಷಗಾನ ನಾಟ್ಯಗುರು ರಾಮ ಸಾಲಿಯಾನ್ ಮಂಗಲ್ಪಾಡಿ, ಉದ್ಯಮಿ ಕಲಾ ಪೋಷಕರಾದ ವಾಸು ಬಾಯಾರ್, ಶ್ರೀಧರ ಶೆಟ್ಟಿ ಮುಟ್ಟಂ ಹಾಗು ಹಲವಾರು ಗಣ್ಯ ಅತಿಥಿಗಳು ಭಾಗವಹಿಸಿದರು. ಪ್ರಮುಖ ಕೇಂದ್ರಬಿಂದು ಸುಂದರ್ ರೈ ಮಂದಾರ ಮಾತನಾಡಿ ತಮ್ಮ ರಂಗ ಪಯಣ ಅಮ್ಮ ಕಲಾವಿದರು ಕುಡ್ಲ ತಂಡದಲ್ಲಿ ಮುಂದುವರಿಯಲಿದೆ, ಪ್ರಬುದ್ಧ ರಂಗಭೂಮಿ ಕಲಾವಿದರು ತಮ್ಮ ಜೊತೆ ಕೈಜೋಡಿಸಲಿದ್ದಾರೆ. ಉತ್ತಮ ಗುಣಮಟ್ಟದ ನಾಟಕವನ್ನು ಈ ತಂಡ ರಂಗಭೂಮಿಗೆ ನೀಡಲಿದೆ ಎಂದು ನುಡಿದರು. ನೆರೆದ ಎಲ್ಲ ಗಣ್ಯ ಅತಿಥಿಗಳು ಹೊಸ ನಾಟಕ ಪರಕೆ ಪೂವಕ್ಕೆ ಭರ್ಜರಿ ಯಶಸ್ಸು ಕಾಣಲೆಂದು ಹಾರೈಸಿದರು. ಸೋಮನಾಥ್ ಶೆಟ್ಟಿ ಮಂಗಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಸಂತ ಮೇರಿ ಕಾಲೇಜು, ಶಿರ್ವ: ಫೆಬ್ರವರಿ 11 ರಂದು ಕ್ಯಾಂಪಸ್ ಸಂದರ್ಶನ
Posted On: 06 Feb 2021, 02:25 PM
ಸಂತ ಮೇರಿ ಕಾಲೇಜು, ಶಿರ್ವ ಇಲ್ಲಿ ಫೆಬ್ರವರಿ 11 ರಂದು ಮಂಗಳೂರಿನ ಪ್ರತಿಷ್ಟಿತ ದಿಯಾ ಸಿಸ್ಟಮ್ ಸಂಸ್ಥೆ (ಗ್ಲೋ ಟಚ್ ಟೆಕ್ನಾಲಾಜಿಸ್)ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ನಡೆಸಲು ಉದ್ದೇಶಿಸಿದೆ. ಈಗಾಗಲೇ ಬಿ.ಸಿ.ಎ. (ಸಿ.ಎಸ್.), ಬಿ.ಎಸ್.ಸಿ (ಸಿ.ಎಸ್.), ಬಿ.ಇ. (ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಎಂ.ಎಸ್.ಸಿ, ಎಂ.ಸಿ.ಎ. ಸ್ನಾತಕೋತ್ತರ ಪದವಿ, ಡಿಪ್ಲೋಮಾ (ಸಿ.ಎಸ್.) ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪೂರ್ವಹ್ನ 9.30 ಗಂಟೆಗೆ ಕಾಲೇಜಿನ ಫಾ. ಹೆನ್ರಿ ಕ್ಯಾಸ್ತಲೀನೊ ಆಡಿಟೋರಿಯಂನಲ್ಲಿ ಸಂದರ್ಶನ ನಡೆಯಲಿದೆ. ಅಭ್ಯಾರ್ಥಿಗಳು ಆಧಾರ್ ಕಾರ್ಡ್, ಮೂಲ ಅಂಕಪಟ್ಟಿ, ಪದವಿ ಪ್ರಮಾಣ ಪತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 7975230201 ಸಂಪರ್ಕಿಸಬಹುದು.
ಬಬ್ಬು ಸ್ವಾಮಿ ದೈವಸ್ಥಾನ ಜೋಡುಕಟ್ಟೆ ಉಡುಪಿ ಹರಕೆಯ ನೇಮೋತ್ಸವ
Posted On: 05 Feb 2021, 05:37 PM
ನಾಳೆ ಶನಿವಾರ 6 ರಂದು ಮತ್ತು ಭಾನುವಾರ 7ನೇ ತಾರೀಖಿನಂದು ಬೆಳಿಗ್ಗೆ 10:00 ಗಂಟೆಗೆ ದೈವ ದರ್ಶನ ಮಧ್ಯಾಹ್ನ 12. 30ರಿಂದ ಮಹಾ ಅನ್ನಸಂತರ್ಪಣೆ 6:00 ಗಂಟೆಗೆ ಸರಿಯಾಗಿ ದೈವಸ್ಥಾನದಿಂದ ಭಂಡಾರ ಇಳಿಯುವುದು, ರಾತ್ರಿ 9 ರಿಂದ ಬಬ್ಬು ಸ್ವಾಮಿ ದೈವದ ನೇಮೋತ್ಸವ ಬೆಳಿಗ್ಗೆ ಮೂರು ಗಂಟೆಗೆ ತನ್ನಿಮಾನಿಗ ನೇಮೋತ್ಸವ ನಡೆಯಲಿದೆ. ಭಾನುವಾರ ಬೆಳಿಗ್ಗೆ 10 ಗಂಟೆಗೆ ಜುಮಾದಿ ಬಂಟ ದೈವಗಳ ನೇಮೋತ್ಸವ ಮಧ್ಯಾಹ್ನ 1:00 ಗಂಟೆಗೆ ಸರಿಯಾಗಿ ಗುಳಿಗ ದೈವದ ನೇಮೋತ್ಸವ ಸಂಜೆ 5 ಗಂಟೆಗೆ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆಯೆಂದು ಸೇವಾಕರ್ತರಾದ ಶ್ರೀಮತಿ ಜಲಜ ಆನಂದ ಶೆಟ್ಟಿ ದೊಡ್ಡಮನೆ ಮಕ್ಕಳು, ಅಳಿಯಂದಿರು, ಸೊಸೆಯಂದಿರು ಹಾಗೂ ಕುಟುಂಬಸ್ಥರು ತಿಳಿಸಿದ್ದಾರೆ. ದೈವದ ನೇಮೋತ್ಸವ ನ್ಯೂ ಸುದ್ದಿ ಕನ್ನಡ ಯುಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರವಾಗಲಿದೆ.
ಶ್ರೇಯಸ್ ಮೂಲ್ಯರ ಚಿಕಿತ್ಸೆಗಾಗಿ ಸಹಾಯದ ನಿರೀಕ್ಷೆಯಲ್ಲಿದೆ ಈ ಕುಟುಂಬ
Posted On: 05 Feb 2021, 04:06 PM
ಸಂಧ್ಯಾ ಮೂಲ್ಯರ ಮಗ ಶ್ರೇಯಸ್ ಮೂಲ್ಯ ಅಕ್ಯುಟ್ ಮೈಲೊಯ್ಡ್ ಲುಕೆಮಿಯ ರೋಗದಿಂದ ಬಳಲುತ್ತಿದ್ದು ಪುಣೆಯ ಸಹ್ಯಾದ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಸಂಪೂರ್ಣ ಚಿಕಿತ್ಸೆಗಾಗಿ 15 ಲಕ್ಷಕ್ಕಿಂತ ಅಧಿಕ ಹಣದ ಅವಶ್ಯಕತೆ ಇದೆ. ಇದೀಗ ಈ ಕುಟುಂಬ ಮಗನ ಚಿಕಿತ್ಸೆಗಾಗಿ ಹಣದ ನಿರೀಕ್ಷೆಯಲ್ಲಿದೆ.
ಸಹಾಯ ಮಾಡಲಿಚ್ಛಿಸುವ ಸಹೃದಯಿ ದಾನಿಗಳು ಈ ಕೆಳಗಿನ ಲಿಂಕ್ ಮೂಲಕ ಸಹಕರಿಸಬಹುದು
Read More
To DONATE click here
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ರೋಟರಿ ಸದಸ್ಯರ ಬಾಂಧವ್ಯ ವೃದ್ಧಿಗೆ ಸಹಕಾರಿ: ಡಾ| ಭರತೇಶ್ ಆದಿರಾಜ್
Posted On: 05 Feb 2021, 11:29 AM
ರೋಟರಿ ವಲಯ ೫ರ ಕ್ರೀಡಾಕೂಟ ಗೊಬ್ಬು ಗಮ್ಮತ್ತ್ ಬೆಳ್ಮಣ್ ರೋಟರಿಯ ಆತಿಥ್ಯದಲ್ಲಿ ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿದ್ದು ಈ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಅವಿಭಜಿತ ರೋಟರಿ ಜಿಲ್ಲೆ ೩೧೮೨ರ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ| ಭರತೇಶ್ ಆದಿರಾಜ್ ಕ್ರೀಡಾಕೂಟ ಉದ್ಘಾಟಿಸಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ರಿಂದ ರೋಟರಿ ಸದಸ್ಯರ ಬಾಂಧವ್ಯ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ನುಡಿಯುತ್ತ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸತೀಶ್ ಮಾಡ ರೋಟರಿ ಬೆಳ್ಮಣ್ಣಿನ ಕಾಯಕಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಲಯ ೫ರ ಸಾಹಯಕ ಗವರ್ನರ್ ರೋ| ನವೀನ್ ಅಮಿನ್ ಕ್ರೀಡಾಕೂಟದ ನಿಯಮಗಳ ಬಗ್ಗೆ ವಿವರಿಸಿದರು. ವಲಯ ಸೇನಾನಿ ರೋ| ಸುರೇಶ್ ರಾವ್ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಸ್ಪೂರ್ತಿಯ ಬಗ್ಗೆ ಮಾರ್ಮಿಕವಾಗಿ ನುಡಿದರು. ವಲಯ ೫ರ ಕ್ರೀಡಾ ಸಂಯೋಜಕ ರೋ| ದೇವೇಂದ್ರ ಶೆಟ್ಟಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿ, ಕ್ರೀಡಾಕೂಟದ ಊಟೋಪಚಾರದ ಸಂಪೂರ್ಣ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಬೆಳ್ಮಣ್ಣಿನ ಅಧ್ಯಕ್ಷ ರೋ| ಶುಭಾಷ್ ಕುಮಾರ್ ವಹಿಸಿ ಎಲ್ಲರನ್ನೂ ಸ್ವಾಗತಿಸಿದರು. ರೋ| ವಿಘ್ನೇಶ್ ಶೆಣೈ ಕಾರ್ಯಕ್ರಮ ನಿರೂಪಿಸಿ, ಸಂಸ್ಥೆಯ ಕಾರ್ಯದರ್ಶಿ ರೋ| ರವಿರಾಜ್ ಶೆಟ್ಟಿ ವಂದಿಸಿದರು.
ಮೊದಲ ಬಾರಿಗೆ ಉಡುಪಿಯಲ್ಲಿ ಶುಭಾರಂಭಗೊಂಡಿದೆ ದೊಣ್ಣೆ ಬಿರಿಯಾನಿ ಎಂಪೈರ್
Posted On: 04 Feb 2021, 07:38 PM
ಬೆಂಗಳೂರಿನಲ್ಲಿ ಹೆಸರು ವಾಸಿಯಾದ ಶುಚಿರುಚಿಯಾದ ದೊಣ್ಣೆ ಬಿರಿಯಾನಿ ಇದೀಗ ಉಡುಪಿಯ ಕಲ್ಪನಾ ಚಿತ್ರಮಂದಿರ ನಂತರದ ಬಂಧನ್ ಬ್ಯಾಂಕ್ ಹತ್ತಿರದ ದೊಣ್ಣೆ ಬಿರಿಯಾನಿ ಎಂಪೈರ್ ನಲ್ಲಿ ಸಿಗಲಿದೆ. ಇಲ್ಲಿ ದೊಣ್ಣೆ ಬಿರಿಯಾನಿ, ಸೀ ಫುಡ್, ಸೌತ್ ಇಂಡಿಯನ್, ತಂದೂರ್, ಚೈನಿಸ್ ಆಹಾರಗಳು ದೊರೆಯಲಿವೆ.
ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರು: ಮೇಯರ್ ದಿವಾಕರ್ ಅವರಿಗೆ ಅಭಿನಂದನೆ
Posted On: 03 Feb 2021, 05:27 PM
ಮಂಗಳೂರು: ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ಮರು ನಾಮಕರಣ ಮಾಡಲು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು ಈ ಪ್ರಯುಕ್ತ ಈ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರಿಡಲು ಹೋರಾಟ ನಡೆಸಿದ ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಲ್ ಬಾಗ್ ಇದರ ವತಿಯಿಂದ ಮೇಯರ್ ದಿವಾಕರ ಪಾಂಡೇಶ್ವರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸ್ಥಾಪಕಾಧ್ಯಕ್ಷ ಉದಯಪೂಜಾರಿ ಬಳ್ಳಾಲ್ ಬಾಗ್, ಸಮಾಜ ಸೇವಕ ಹನುಮಂತ ಕಾಮತ್,ಬಿರುವೆರ್ ಕುಡ್ಲ ಇದರ ಮಂಗಳೂರು ಘಟಕದ ನಿಯೋಜಿತ ಅಧ್ಯಕ್ಷ ರಾಕೇಶ್ ಸಾಲಿಯಾನ್,ರಿತೇಶ್ ಕೊಟ್ಟಾರಿ,ರಾಮ್ ಪ್ರಸಾದ್ ಎಕ್ಕೂರು,ಪ್ರಾಣೇಶ್ ಬಂಗೇರ,ರಾಜೇಶ್ ಉರ್ವ ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ಕಾಪು ವರದಿಗೆ ಸ್ಪಂದಿಸಿದ ಅಧಿಕಾರಿಗಳು - 5 ತಿಂಗಳಿಂದ ದುರಸ್ತಿ ಭಾಗ್ಯ ಕಾಣದಾಗಿದ್ದ ಕಾಪು ದೀಪಸ್ತಂಭದ ಮೆಟ್ಟಿಲುಗಳು ಮತ್ತು ಗೋಡೆಗಳು ದುರಸ್ತಿ
Posted On: 02 Feb 2021, 11:40 PM
ಅಸಂಖ್ಯಾತ ಪ್ರವಾಸಿಗರನ್ನು ಸೆಳೆಯುತ್ತಿದ್ದ ಪ್ರವಾಸಿ ತಾಣ ಉಡುಪಿ ಜಿಲ್ಲೆಯ ಕಾಪು ಕಡಲ ಕಿನಾರೆಯಲ್ಲಿರುವ ಬ್ರಿಟಿಷ್ ಕಾಲದಲ್ಲಿ ನಿರ್ಮಿಸಲ್ಪಟ್ಟ ಕಾಪು ದೀಪಸ್ತಂಭ. ಇತ್ತೀಚಿನ ಮಳೆಯ ಸಂದರ್ಭ ದೀಪಸ್ತಂಭದ ಆರಂಭದ ಮೆಟ್ಟಿಲುಗಳು ಮತ್ತು ಗೋಡೆ ಹಾನಿಗೊಂಡಿದ್ದವು. 5 ತಿಂಗಳಿಂದ ಈ ರೀತಿಯ ಅವಸ್ಥೆ ಇದ್ದರೂ ದುರಸ್ತಿ ಕಂಡಿರಲಿಲ್ಲ. ಈ ಬಗ್ಗೆ ಕೆಳ ತಿಂಗಳ ಹಿಂದೆ ಕೆಲವು ಪತ್ರಿಕೆಯಲ್ಲಿ ವರದಿ ಪ್ರಕಟವಾಗಿದ್ದರೂ ಪ್ರವಾಸೋದ್ಯಮ ಇಲಾಖೆ ಎಚ್ಚೆತ್ತುಕೊಂಡಿರಲಿಲ್ಲ. ಸ್ಥಳೀಯ ನಿವಾಸಿಯೊಬ್ಬರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಸಾಕಷ್ಟು ಮಾತುಕತೆ ಮತ್ತು ಪತ್ರವ್ಯವಹಾರ ನಡೆಸಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಅದೇ ರೀತಿ ಈ ಬಗ್ಗೆ ನಮ್ಮ ಕಾಪು ವೆಬ್ ಪೋರ್ಟಲ್ ಸಚಿತ್ರ ವರದಿ ಪ್ರಕಟಿಸಿ ತಲುಪಬೇಕಾದವರಿಗೆ ತಲುಪುವಲ್ಲಿಯೂ ಪ್ರಮುಖ ಪಾತ್ರ ವಹಿಸಿತ್ತು. ಸಂಬಂಧಪಟ್ಟ ಇಲಾಖೆಗೆ ತಲುಪಿಸಿ ಆ ಮೂಲಕ ದೀಪಸ್ತಂಭದ ಮೆಟ್ಟಿಲು ಮತ್ತು ಗೋಡೆ ದುರಸ್ತಿಯಾಗಿದೆ. ಸ್ಥಳೀಯ ನಿವಾಸಿ ಹಾಗೂ ನಮ್ಮ ಕಾಪುವಿನ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.
ಎಲ್ಲೂರು ವಿಶ್ವಕರ್ಮ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ವಿಶ್ವಕರ್ಮ ಪೂಜೆ
Posted On: 02 Feb 2021, 07:09 PM
ಕಾಪು ತಾಲೂಕಿನ ಎಲ್ಲೂರು ವಿಶ್ವಕರ್ಮ ಸಮಾಜ ಸೇವಾ ಸಂಘವು ಸಾಕಷ್ಟು ಚಟುವಟಿಕೆಯುಕ್ತವಾಗಿದ್ದು, ನಡೆಸುವ ಧಾರ್ಮಿಕ ಚಟುವಟಿಕೆಯು ಸಂಘಟನಾ ಶಕ್ತಿಗೆ ಪೂರಕವಾಗಲಿದೆ ಸ್ವಂತ ನಿವೇಶನದಲ್ಲಿ ಸಮುದಾಯ ಭವನ ನಿರ್ಮಾಣ ಶೀಘ್ರ ಕೈಗೂಡಲಿ ಎಂದು ಬಂಟಕಲ್ಲು ಶ್ರೀ ವಿಶ್ವಕರ್ಮ ಸಂಘದ ಅಧ್ಯಕ್ಷರಾದ ಮುರುಳೀಧರ ಆಚಾರ್ಯ ಇನ್ನಂಜೆ ಹೇಳಿದರು. ಅವರು ಎಲ್ಲೂರು ಕಂಚುಗರ ಕೇರಿಯ ಸ್ವಂತ ನಿವೇಶನದಲ್ಲಿ ನಡೆದ ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.) ಎಲ್ಲೂರು ಇದರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಕಾಪು ದಂಡತೀರ್ಥ ಶಾಲೆಯ ಚಿತ್ರಕಲಾ ಶಿಕ್ಷಕಿ ಅನುಪಮಾ ದೇವರಾಜ ಆಚಾರ್ಯ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿನ ಆಚಾರ-ವಿಚಾರವು ಕುಲದ ಶ್ರೇಷ್ಠತೆಗೆ ಮೌಲ್ಯ ನೀಡಲಿ ಎಂದು ಕರೆ ನೀಡಿದರು. ಪಡುಬಿದ್ರಿಯ ಉದಯ ಪುರೋಹಿತ್ ಆಶೀರ್ವಚನ ನೀಡಿದರು. ನಿವೃತ್ತ ತಹಶೀಲ್ದಾರ್ ಗಣೇಶ್ ಪಿ. ಆಚಾರ್ಯ ಪಡುಬಿದ್ರಿ, ಶಿಲ್ಪಿ ಗಣಪತಿ ಆಚಾರ್ಯ ಶಂಕರಪುರ ಸಂಘಕ್ಕೆ ಮಾರ್ಗದರ್ಶನದ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ವೈ. ಸತೀಶ ಎಂ.ಆಚಾರ್ಯ, ಗೌರವಾಧ್ಯಕ್ಷರಾದ ವೈ. ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು. ವಿಶ್ವಕರ್ಮ ಪೂಜೆ :ಎಲ್ಲೂರು ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಶ್ರೀ ವಿಶ್ವಕರ್ಮ ಪೂಜೆಯು ಉದಯ ಪುರೋಹಿತ್ ಪೌರೋಹಿತ್ಯದಲ್ಲಿ ಎಲ್ಲೂರು ಕಂಚುಗರ ಕೇರಿಯ ಸ್ವಂತ ನಿವೇಶನದಲ್ಲಿ ಜರಗಿತು. ಈ ಸಂದರ್ಭ ಸಂಘದ ಗೌರವಾಧ್ಯಕ್ಷರಾದ ವೈ. ರಾಘವೇಂದ್ರ ಆಚಾರ್ಯ, ಅಧ್ಯಕ್ಷರಾದ ವೈ. ಸತೀಶ ಎಂ.ಆಚಾರ್ಯ, ಕಾರ್ಯದರ್ಶಿ ವೈ. ಪ್ರಶಾಂತ್ ಆಚಾರ್ಯ, ಕೋಶಾಧಿಕಾರಿ ವೈ. ಕಿಶೋರ್ ಆಚಾರ್ಯ, ಗೌರವ ಸಲಹೆಗಾರ ವೈ. ವಾಸುದೇವ ಆಚಾರ್ಯ, ಪದಾಧಿಕಾರಿಗಳು, ಸದಸ್ಯರು, ಸಮಾಜ ಬಾಂಧವರು ಪಾಲ್ಗೊಂಡಿದ್ದರು.
ಕಲ್ಲುಗುಡ್ಡೆ ಕಿಂಗ್ಸ್ ವತಿಯಿಂದ ತುಳು ಲಿಪಿಯ ದಾರಿ ಫಲಕದ ಕೊಡುಗೆ
Posted On: 02 Feb 2021, 04:32 PM
ಕಾಪು ತಾಲೂಕಿನ 92 ನೇ ಹೇರೂರು ಗ್ರಾಮದ ಕಲ್ಲುಗುಡ್ಡೆ ಶ್ರೀ ಬ್ರಹ್ಮಬೈದರ್ಕಳ ಗರೋಡಿಗೆ ಹೋಗುವ ದಾರಿ ತೋರುವ ತುಳು ಲಿಪಿಯ ಫಲಕವನ್ನು ಕಲ್ಲುಗುಡ್ಡೆ ಕಿಂಗ್ಸ್ ಇಂದು ಕೊಡುಗೆಯಾಗಿ ನೀಡಿದರು.
