Updated News From Kaup

2020 ಪರೀಕ್ಷೆಯ ವಷ೯ದಲ್ಲಿ ಕಲಿತ ಪಾಠವನ್ನು 2021ಕ್ಕೆ ಮರೆಯದಿರೋಣ

Thumbnail
Posted On: 01 Jan 2021, 10:29 AM

ಹೊಸ ವರುಷ, ಪ್ರತಿ ನಿಮಿಷ, ತರಲಿ ಹರುಷ, ಇರಲಿ ಸರಸ, ಬೇಡ ವಿರಸ ಎಂಬ ಶುಭಕಾಮನೆಯೊಂದಿಗೆ ಹೊಸ ವರ್ಷ 2021 ಕ್ಕೆ ಕಾಲಿಡೋಣ. ಈಗ ಕಾಡುವ ಒಂದು ಪ್ರಶ್ನೆಯೇನೆಂದರೆ ನಮ್ಮ ಕೈಗೂಡದ ಆಸೆಗಳ ಪೂರೈಕೆಗೆ ಹೊಸ ವರ್ಷಕ್ಕೆ ಕಾಯಬೇಕೇ? ಈ ಕಾಯ೯ವನ್ನು ಇಂದೇ ಪ್ರಾರಂಭಿಸೋಣ ಇನ್ನು ನಾವು ಹೊಸ ವರ್ಷವನ್ನು ಅಷ್ಟೊಂದು ಸಂಭ್ರಮದಿಂದ, ಸಡಗರದಿಂದ ಆಚರಿಸಲು ಕಾರಣವಾದರೂ ಏನು? ಏಕೆಂದರೆ ಈ ಹೊಸ ವರ್ಷದ ಆಚರಣೆ ಸಂಪ್ರದಾಯವು ನಮ್ಮ ಪೂರ್ವಿಕರಿಂದ ಬಳುವಳಿಯಾಗಿ ಬಂದಿದೆ. ವಿವಿಧ ಪಂಗಡದ ಜನರ ಸಂಪ್ರದಾಯಗಳು ಮತ್ತು ಸಂಸ್ಕೃತಿ ಅದಾಗಿದೆ. ವಿವಿಧ ಜನರ ಶೈಲಿ ಮತ್ತು ಪದ್ಧತಿಗಳಲ್ಲಿ ಸ್ವಲ್ಪ ಭಿನ್ನತೆಯಿದ್ದರೂ, ಹೊಸ ವರ್ಷದ ಆಚರಣೆ ಬಂತೆಂದರೆ ಸಾಕು ಎಲ್ಲರದ್ದೂ ಒಂದೇ ರೂಪ, ಒಂದೇ ಗುರಿ. ಪ್ರತಿ ವರ್ಷದ ಜನವರಿ ಒಂದರಂದು ಹೊಸ ವರ್ಷದ ಆಚರಣೆ ಶುರುವಾಗುತ್ತದೆ. ಹೊಸ ವರ್ಷವನ್ನು ಹೊಸ ಜೀವನದೊಂದಿಗೆ ಆರಂಭಿಸಲು ಜನತೆ ಬಯಸುತ್ತದೆ. ಅದು ಮಾನವನ ಸಹಜ ಸ್ವಭಾವ. ಜನರು ಹೊಸತಿನ ಬಗ್ಗೆ ಹೊಸ ವಿಷಯಗಳನ್ನು ನಿರೀಕ್ಷಿಸುತ್ತಾರೆ. ಈ ಪರಿಕಲ್ಪನೆಯು ನ್ಯೂ ಇಯರ್‌ಗೆ ಅನ್ವಯವಾಗುತ್ತದೆ. ಹಳೆಯ ವರ್ಷದಲ್ಲಿ ಮಾಡಲಾಗದ್ದನ್ನು ಈ ವರ್ಷ ಮಾಡಿ ತೋರಿಸುವುದಾಗಿ ಕೆಲವರು ಹೊಸ ವರ್ಷಕ್ಕೆ ಪ್ರತಿಜ್ಞೆ ಮಾಡುತ್ತಾರೆ. ಆದರೆ ಬರೀ ಪ್ರತಿಜ್ಞೆಯಲ್ಲೇ ಕಾಲಕಳೆದು ಅದು ಹೊಸ ವರ್ಷಕ್ಕೆ ನೆರವೇರದಿದ್ದಾಗ ಛೇ, ಈ ವರ್ಷ ಅದೃಷ್ಟ ಸರಿಯಿಲ್ಲ. ಬರುವ ವರ್ಷ ನಮ್ಮ ಅದೃಷ್ಟ ಪರೀಕ್ಷೆ ಮಾಡೋಣ ಎಂದು ಬರುವ ವರ್ಷಕ್ಕೆ ಮುಂದೂಡುತ್ತೇವೆ. ಆದರೆ ಯಾವುದೇ ಕೆಲಸಕ್ಕೆ ಬೇಕಾದ ಅರ್ಹತೆ, ಕೌಶಲ್ಯ ಪಡೆಯದೆ ವರ್ಷ, ವರ್ಷವೂ ಮುಂದೂಡುತ್ತಾ ಹೋಗುವಷ್ಟರಲ್ಲಿ ವೃದ್ಧಾಪ್ಯಕ್ಕೆ ಕಾಲಿರಿಸಿರುತ್ತೇವೆ. ಹಿಂದಿನ ವರ್ಷವು ಅಷ್ಟೇನೂ ಭರವಸೆದಾಯಕವಾಗಿಲ್ಲದಿದ್ದರೆ ನೀವು ಹೊಸ ಜೀವನಕ್ಕೆ ಕಾಲಿರಿಸಲು ಹೊಸ ವರ್ಷವು ಒಂದು ಎಕ್ಸ್‌ಕ್ಯೂಸ್ ಎನ್ನಬಹುದು. ನಿಮ್ಮ ಹಿಂದಿನ ವರ್ಷವು ಚೆನ್ನಾಗಿದ್ದರೆ, ಈ ವರ್ಷವು ಇನ್ನೂ ಹೆಚ್ಚು ಸಮೃದ್ಧಿ ಮತ್ತು ಅದೃಷ್ಟಕ್ಕಾಗಿ ಆಶಿಸುತ್ತೀರಿ. ಇನ್ನು ಕೆಲವರಿಗೆ ಇಡೀ ವರ್ಷದ ಶ್ರಮದಾಯಕ ದುಡಿಮೆ ಬಳಿಕ ಮನಸ್ಸು ಸ್ವಲ್ಪ ವಿಶ್ರಾಂತಿಯನ್ನು, ಮನೋರಂಜನೆಯನ್ನು ಬಯಸುತ್ತದೆ. ಕುಟುಂಬದ ಬಂಧವನ್ನು ಗಟ್ಟಿಗೊಳಿಸಲು ಮತ್ತು ಪ್ರೀತಿ,ಅನುಬಂಧವನ್ನು ಬಿತ್ತಲು ಸ್ನೇಹಿತರಿಗೆ ಮತ್ತು ಕುಟುಂಬಗಳಿಗೆ ಹೊಸವರ್ಷವೊಂದು ಸುವರ್ಣಾವಕಾಶ. ನಮ್ಮ ಎಲ್ಲ ಕೆಲಸಕ್ಕೆ ಸ್ವಲ್ಪ ಸಮಯ ವಿಶ್ರಾಂತಿ ಕೊಟ್ಟು ರಿಲಾಕ್ಸ್ ಮಾಡುವ ಮೂಲಕ ಸಂಭ್ರಮ, ಸಡಗರಕ್ಕೆ ಇದೊಂದು ಶುಭಗಳಿಗೆ. ಎಂದು ಹೇಳಬಹುದಾಗಿದೆ. ಹಳೆ ವಷ೯ದಿಂದ ಪಾಠ ಕಲಿಯಬೇಕಾಗಿದೆ :- 2020 ರ ಇಸವಿ ಪರೀಕ್ಷೆಯ ಕಾಲವಾಗಿತ್ತು ಒಂದೆಡೆ ಕರೋನಾ ಕಾಟದಿಂದ ಎಲ್ಲರೂ ತೊಂದರೆ ಅನುಭವಿಸಿದರೆ, ಮತ್ತೊoದೆಡೆ ಪ್ರವಾಹ ಪ್ರಾಕೃತಿಕ ವಿಕೋಪದ ರುದ್ರ ನತ೯ನ ಎಲ್ಲರನ್ನು ಹೈರಾಣಾಗಿಸಿದೆ. ಒಡವ ಶ್ರೀಮಂತ ಒಂದೇ ಎಂಬ oತಾಗಿದ್ದಾರೆ.ಪ್ರಕೃತಿಯಿಂದ ನಾವೆಲ್ಲರೂ ಪಾಠ ಕಲಿತು 2021ಕ್ಕೆ ಅದನ್ನು ಅನುಷ್ಟಾನಗೊಳಿಸೋಣ. ಹೊಸ ವರುಷವದೇನೋ ಸಂಭ್ರಮ, ಅದೇನೋ ಸಡಗರ, ಹಳೆಯ ನೆನಪಿನ ಬುತ್ತಿಯನ್ನು ಮುಚ್ಚಿ, ಹೊಸ ಜೀವನದ ಪಯಣಕ್ಕೆ ಅದೇನೋ ಕಾತುರ, ಅದೇನೋ ಆತುರ, ಹಾದಿಯಲ್ಲಿ ಮುಳ್ಳುಕಲ್ಲುಗಳಿರಬಹುದು, ಎಚ್ಚರ, ಎದುರಿಸಿ ಮುನ್ನಡೆದಾಗಲೇ ಸುಖಸಾಗರ. ಕ್ಯಾಲೆಂಡರ್ ಬದಲಾದಾಗ ನಮ್ಮ ಜೀವನ ಕ್ರಮ ವಿಚಾರ ವೈವಿದ್ಯತೆ ಕೂಡ ಬದಲಾಗಲಿ' ಬದಲಾವಣೆ ನಮ್ಮದಾಗಲಿ' ರಾಘವೇಂದ್ರ ಪ್ರಭು, ಕವಾ೯ಲು ಯುವ ಲೇಖಕ

ಪಂಚಾಯತ್ ಚುನಾವಣೆ ಪಕ್ಷರಹಿತ : ಚುನಾವಣಾ ಆಯೋಗ

Thumbnail
Posted On: 30 Dec 2020, 11:14 PM

ಗ್ರಾಮ ಪಂಚಾಯತ್ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿದ್ದು ಟಿ.ವಿ ವಾಹಿಗಳಲ್ಲಿ ಪಕ್ಷಬಿಂಬಿತವಾಗುತ್ತಿದ್ದು ಇದು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿರುವ ಬಗ್ಗೆ ರಾಜ್ಯ ಚುನಾವಣಾ ಆಯೋಗ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾಪು : ಕೋವಿಡ್ ನಿಯಮ ಉಲ್ಲಂಘನೆ, ಅಧಿಕಾರಿಗಳ ಮೌನ

Thumbnail
Posted On: 30 Dec 2020, 09:45 PM

ಕಾಪು : ಕಾಪು ತಾಲೂಕಿನ ಗ್ರಾಮ ಪಂಚಾಯತ್ ಗಳ ಮತ ಎಣಿಕೆ ಇಂದು ಮುಂಜಾನೆಯಿಂದ ಆರಂಭಗೊಂಡಿದ್ದು, ಅನೇಕ ಗ್ರಾಮ ಪಂಚಾಯತ್ ಗಳ ಮತ ಎಣಿಕೆ ಮತ್ತು ವಿಜೇತರ ಘೋಷಣೆಯಾಗಿದೆ. ಇನ್ನು ಕೆಲವೇ ಕೆಲವು ಗ್ರಾ. ಪ ಗಳ ಮತ ಎಣಿಕೆ ಮತ್ತು ವಿಜೇತರ ಘೋಷಣೆ ಬಾಕಿ ಇದೆ. ಇಂದು ಬೆಳಿಗ್ಗಿನಿಂದ ಮತ ಎಣಿಕೆಯ ಕೇಂದ್ರದ ವಠಾರದಲ್ಲಿ ಜನರು ಗುಂಪು ಗುಂಪಾಗಿ ಸೇರುತ್ತಿದ್ದು. ಸರಕಾರ ಕೋವಿಡ್ ಗಾಗಿ ಉಲ್ಲೆಖಿಸಿರುವ ಯಾವುದೇ ನಿಯಮಗಳನ್ನು ಜನರು ಪಾಲಿಸುತ್ತಿಲ್ಲ ಮತ್ತು ಯಾರು ಕೂಡಾ ಈ ಬಗ್ಗೆ ಕ್ರಮ ಕೈಗೊಂಡಿಲ್ಲ.. ಸರಕಾರದ ಸೂಚನೆಯನ್ನು ನಿರ್ಲಕ್ಷಿಸುವುದು ಕಾನೂನರ್ಹ ಅಪರಾಧವಾಗಿದೆ.. ಇಂತಹ ಸಮಯದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿದಿಗಳು ಮೌನವಾಗಿರುವುದು ಬೇಜವಾಬ್ದಾರಿಯನ್ನು ತೋರಿದಂತಿದೆ..

ಅದಾನಿ ಫೌಂಡೇಶನ್ ಉಡುಪಿ ಪವರ್ ಕಾರ್ಪೋರೇಶನ್ ಲಿಮಿಟೆಡ್ ಇದರ ವಿದ್ಯಾರ್ಥಿವೇತನ ದ 2020-21 ನೇ ಸಾಲಿನ ಅರ್ಜಿ ಆಹ್ವಾನ

Thumbnail
Posted On: 29 Dec 2020, 08:48 PM

ಅದಾನಿ ಫೌಂಡೇಶನ್ ಉಡುಪಿ ಪವರ್ ಕಾರ್ಪೋರೇಶನ್ ಲಿಮಿಟೆಡ್ ಇದರ ವಿದ್ಯಾರ್ಥಿವೇತನ ದ 2020-21 ನೇ ಸಾಲಿನ ಅರ್ಜಿ ಆಹ್ವಾನ

ಕಾಪು : ಶ್ರೀ ವಿಷ್ಣು ಮೊಬೈಲ್ಸ್ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಸರ್ವಿಸ್ ಸೆಂಟರ್ ನಾಳೆ ಶುಭಾರಂಭ

Thumbnail
Posted On: 29 Dec 2020, 02:09 PM

ಕಾಪು ಸುಪ್ರಿಮ್ ಮೆಡಿಕಲ್ ಹತ್ತಿರದ ಜನಾರ್ದನ ಕಾಂಪ್ಲೆಕ್ಸ್ ನಲ್ಲಿ ನೂತನ ಶ್ರೀ ವಿಷ್ಣು ಮೊಬೈಲ್ಸ್ ಮೊಬೈಲ್ ಫೋನ್ ಸರ್ವಿಸ್ ಮತ್ತು ಎಲೆಕ್ಟ್ರಾನಿಕ್ ಸರ್ವಿಸ್ ಸೆಂಟರ್ ನಾಳೆ ಬೆಳಿಗ್ಗೆ 9 ಗಂಟೆಗೆ ಶುಭಾರಂಭಗೊಳ್ಳಲಿದೆ. ಕಾಪುವಿನಲ್ಲಿ ಪ್ರಥಮ ಬಾರಿಗೆ ಪ್ರಸ್ತುತಪಡಿಸುತ್ತಿರುವ OCA ಲ್ಯಾಮಿನೇಷನ್ ಮಿಷಿನ್ (ಮೊಬೈಲ್ ಟಚ್ ಸ್ಕ್ರೀನ್ ಬದಲಾಯಿಸುವ ಯಂತ್ರ) ಇಲ್ಲಿಯ ವಿಶೇಷತೆಯಾಗಿದೆ. ಇದಲ್ಲದೆ ಎಲ್ಲಾ ಕಂಪನಿಯ ಮೊಬೈಲ್ ಫೋನ್ ಗಳ ರಿಪೇರಿ, ಮೊಬೈಲ್ ಸಾಫ್ಟ್ವೇರ್ ಅಪ್ಡೇಟ್, ಲ್ಯಾಪ್‌ಟಾಪ್, ಕಂಪ್ಯೂಟರ್ ಸರ್ವಿಸ್ ಮತ್ತು ಸಾಫ್ಟ್ವೇರ್ ಅಪ್ಡೇಟ್, ಮೊಬೈಲ್ ಗಳ ಬಿಡಿಭಾಗಗಳು ಲಭ್ಯವಿದ್ದು, ಹೊಸ ಫೋನ್ ಗಳ ಮಾರಾಟ, ಸಿಮ್ ಸಂಪರ್ಕ, ರಿಚಾರ್ಜ್, ಡಿಶ್ ಟಿ. ವಿ ರಿಚಾರ್ಜ್ ಗಳು ಗ್ರಾಹಕರಿಗೆ ದೊರೆಯಲಿದೆ ಎಂದು ಮಾಲಕರಾದ ವಿಜಯ್ ಉಂಡಾರು ನಮ್ಮ ಕಾಪು ವೆಬ್ ಪೋರ್ಟಲ್ ಗೆ ತಿಳಿಸಿದ್ದಾರೆ.

ಅಸಹಾಯಕ ಮಹಿಳೆಯ ರಕ್ಷಿಸಿದ ಸಮಾಜ ಸೇವಕ‌ ವಿಶು ಶೆಟ್ಟಿ

Thumbnail
Posted On: 29 Dec 2020, 12:24 PM

ಕಾಪು : ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿಯ ನಡುವಿನ ಡಿವೈಡರ್ ನಲ್ಲಿ ಕಳೆದ ನಾಲ್ಕು ದಿನಗಳಿಂದ ರಾತ್ರಿ-ಹಗಲು ಮಲಗಿದ್ದ ಮನೋರೋಗಿ, ಅಪರಿಚಿತ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಮಹಿಳೆಯು ತಮಿಳು ಭಾಷೆಯವರಾಗಿದ್ದು ಸುಮಾರು ಐವತ್ತರ ಹರೆಯದವರಾಗಿದ್ದಾರೆ. ರಕ್ಷಣೆ ಕಾರ್ಯಾಚರಣೆಯ ಸಮಯದಲ್ಲಿ ಇಲಾಖಾ ಮಹಿಳಾ ಸಿಬ್ಬಂದಿಯು ದೊರೆಯದೇ ಇದ್ದುದರಿಂದ ಕಿದಿಯೂರು ಐರಿನ್ ಅಂದ್ರಾದೆಯವರು ಹಾಗೂ ಕಾಪು ಪೊಲೀಸರ ಸಹಾಯ ಪಡೆಯಲಾಯಿತು. ಮಹಿಳೆಯು ಗಲಾಟೆ ಮಾಡುವುದರ ಜೊತೆಗೆ ಹಲ್ಲೆಗೂ ಮುಂದಾಗಿದ್ದರು. ಬಹಳ ಸಮಯದ ಹೋರಾಟದ ಬಳಿಕ ಮಹಿಳೆಯನ್ನು ವಶಕ್ಕೆ ಪಡೆದು ವಿಶು ಶೆಟ್ಟಿಯವರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದರು.

9 ಗಂಟೆಯಲ್ಲಿ ಸಂಪೂರ್ಣ ಕುರಾನ್ ಓದಿದ ಮುಹಮ್ಮದ್ ಮುಝಮ್ಮಿಲ್

Thumbnail
Posted On: 29 Dec 2020, 12:10 PM

ಕಾಪು : ಕುರಾನ್ ಕಂಠಪಾಠ ಮಾಡಿದ 15ವರ್ಷದ ಬಾಲಕ ಮುಹಮ್ಮದ್ ಮುಝಮ್ಮಿಲ್ ಪವಿತ್ರ ಕುರಾನಿನ ಮೂವತ್ತು ಕಾಂಡವನ್ನು ಕೇವಲ 9 ಗಂಟೆಯಲ್ಲಿ ತನ್ನ ಉಸ್ತಾದರ ಮುಂದೆ ಓದಿ ಪೂರ್ತಿಗೊಳಿಸಿದ್ದಾರೆ. ಮೂಳೂರಿನ ಅಲ್ಇಹ್ಸಾನ್ ಹಿಫ್ಲ್ ವಿಭಾಗದ ವಿದ್ಯಾರ್ಥಿಯಾಗಿರುವ ಮುಝಮ್ಮಿಲ್, ಕೇವಲ ಒಂಬತೇ ತಿಂಗಳಲ್ಲಿ ಕುರಾನ್ (ಮೂವತ್ತು ಕಾಂಡವನ್ನು) ಸಂಪೂರ್ಣ ಕಂಠಪಾಠ ಮಾಡಿದ್ದನು. ಇತ್ತೀಚೆಗೆ ಮೂಳೂರು ಸುನ್ನೀ ಸೆಂಟರ್ನಲ್ಲಿ ನಡೆದ ವಿಶೇಷ ಮಜ್ಲಿಸ್ನಲ್ಲಿ ತನ್ನ ಗುರುಗಳಾದ ಹಾಫಿಲ್ ಹಾರಿಸ್ ಸಅದಿಯವರ ಮುಂದೆ 600 ಪುಟ, 114 ಅಧ್ಯಾಯಗಳ, 6666 ಶ್ಲೋಕಗಳಿರುವ ಕುರಾನ್ ತಪ್ಪು ಬಾರದಂತೆ ಓದಿ ಮುಗಿಸುವ ಮೂಲಕ ಗಮನಸೆಳೆದಿದ್ದಾನೆ. ಬೆಳಿಗ್ಗೆ 6.30 ಕ್ಕೆ ಕುರಾನ್ ಪಠಣ ಆರಂಭಿಸಿದ ಮುಝಮ್ಮಿಲ್ ಊಟ, ತಿಂಡಿ ಹಾಗು ಅತ್ಯವಶ್ಯ ಕೆಲಸಕ್ಕೆ 4 ಗಂಟೆ ವಿನಿಯೋಗಿಸಿ ಸಂಜೆ 7.30ರ ವೇಳೆಗೆ ಪೂರ್ಣಗೊಳಿಸಿದ್ದಾನೆ. ಒಟ್ಟು 9ಗಂಟೆಯಲ್ಲಿ ತಾನು ಕಂಠಪಾಠ ಮಾಡಿದ ಸಂಪೂರ್ಣ ಕುರಾನನ್ನು ಪಠಿಸಿದ್ದಾನೆ. ಈ ಸಂದರ್ಭದಲ್ಲಿ ಪ್ರಾರಂಭದಿಂದ ಅಂತ್ಯದವರೆಗೆ ಒಮ್ಮೆಯೂ ಕುರಾನ್ ನೋಡಲು ಅವಕಾಶವಿರಲಿಲ್ಲ. ಕೊನೆಗೆ ಉಸ್ತಾದರವರ ಹಾಗೂ ಹಿಫ್ಲ್ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಖತಮ್ ಸಮಾಪನಗೊಳಿಸಲಾಯಿತು. ಅಸಿಸ್ಟೆಂಟ್ ಮ್ಯಾನೇಜರ್ ಸಿದ್ದೀಕ್ ಸಅದಿ ಉಸ್ತಾದ್, ದಅವ ಕಾಲೇಜು ಮುಖ್ಯಸ್ಥರಾದ ಸ್ವಾಬಿರ್ ಸಅದಿ ಉಸ್ತಾದ್, ಇತರ ಸಿಬ್ಬಂದಿಗಳಾದ ಹಾಫಿಲ್ ಹಾರಿಸ್ ಸಅದಿ, ಹಾಫಿಲ್ ರಫೀಕ್ ನಿಝಾಮಿ, ಶಫೀಕ್ ಅಹ್ಸನಿ, ಹಸೀಬ್ ಅಹ್ಸನಿ ಹಾಗೂ ಸುಮಾರು ೨೭ ರಷ್ಟು ಹಿಫ್ಲ್ ವಿದ್ಯಾರ್ಥಿಗಳು ಹಾಜರಿದ್ದರು. ಖತ್ಮುಲ್ ಕುರಾನ್ ದುಆದೊಂದಿಗೆ ವಿದ್ಯಾರ್ಥಿಗೆ ಶುಭ ಹಾರೈಸಿ ಸನ್ಮಾನಿಸಲಾಯಿತು. ಬಡ ಕುಟುಂಬದ ವಿದ್ಯಾರ್ಥಿ: ಬೋಳಿಯಾರ್ ಗ್ರಾಮದ ರಂತಡ್ಕ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದರ ಪುತ್ರನಾದ ಮುಝಮ್ಮಿಲ್, ಆರ್ಥಿಕ ಮುಗ್ಗಟ್ಟಿನಿಂದ ಶಿಕ್ಷಣ ಮುಂದುವರಿಸಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಮೂಳೂರು ಸುನ್ನೀ ಸೆಂಟರ್ ಸಂಸ್ಥೆಯ ಶರೀಅತ್ ಕಾಲೇಜಿನ ಪ್ರಿನ್ಸಿಪಾಲ್ ಅಳಕೆ ಮಜಲ್ ಮುಹಮ್ಮದ್ ಮುಸ್ಲಿಯಾರ್ ಅಲ್-ಖಾಸಿಮಿರವರು ವಿದ್ಯಾರ್ಥಿಯನ್ನು ಹಾಗೂ ಅವನೊಂದಿಗಿದ್ದ ಇಬ್ಬರು ಅಣ್ಣಂದಿರನ್ನು ಮೂಳೂರು ಸುನ್ನೀ ಸೆಂಟರ್ ಹಿಫ್ಳುಲ್ ಕುರಾನ್ ಕಾಲೇಜಿನಲ್ಲಿ ಸೇರಿಸಿದ್ದರು.