Updated News From Kaup

ಶಂಕರಪುರ : ರಾಷ್ಟ್ರಿಯ ರಸ್ತೆ ಸುರಕ್ಷತಾ ಸಪ್ತಾಹ -2021 ಮಾಹಿತಿ ಕಾರ್ಯಕ್ರಮ ಮತ್ತು ಜಾಥಾ

Thumbnail
Posted On: 29 Jan 2021, 11:38 PM

ರೋಟರಿ ಶಂಕರಪುರ, ಶಿರ್ವ ಪೊಲೀಸ್ ಠಾಣೆ, ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ, ಟ್ಯಾಕ್ಸಿ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ ಮತ್ತು ಶ್ರೀ ದುರ್ಗಾ ಗೂಡ್ಸ್ ಟೆಂಪೋ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರ ಇವರ ಸಹಯೋಗದಲ್ಲಿ ರಾಷ್ಟ್ರಿಯ ರಸ್ತೆ ಸುರಕ್ಷತಾ ಸಪ್ತಾಹ -2021ರ ಮಾಹಿತಿ ಕಾರ್ಯಕ್ರಮ ಮತ್ತು ಜಾಥಾ ಕಾರ್ಯಕ್ರಮವು ಶಂಕರಪುರ ರೋಟರಿ ಭವನದಲ್ಲಿ ನಡೆಯಿತು. ಉದ್ಘಾಟನೆಯನ್ನು ಶಿರ್ವ ಠಾಣಾ ಅಧಿಕಾರಿಯಾದ ಶ್ರೀ ಶೈಲ ಮುರಗೋಡ ಇವರು ಮಾಡಿದರು. ರಸ್ತೆ ಸುರಕ್ಷತಾ ಜಾಥಾ ಚಾಲನೆಯನ್ನು ವಲಯ 5.ರ ಅಸಿಸ್ಟೆಂಟ್ ಗವರ್ನರ್ ಆದ ರೋ ನವೀನ್ ಅಮೀನ್ ಮಾಡಿದರು.ಜಾಥಾವನ್ನು ಶಂಕರಪುರ ರೋಟರಿಯಿಂದ ಸೈoಟ್ ಜೋನ್ಸ್ ಚರ್ಚ್ ನವರೆಗೆ ಜಾಥಾವನ್ನು ನಡೆಸಲಾಯಿತು, ಈ ಸಂದರ್ಭದಲ್ಲಿ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘ ಅಧ್ಯಕ್ಷರು ಆದ ಕರುಣಾಕರ್, ಟ್ಯಾಕ್ಸಿ ಚಾಲಕರ ಮತ್ತು ಮಾಲಕರ ಸಂಘ ಅಧ್ಯಕ್ಷರು ಆದ ಶ್ರೀವತ್ಸ ಮತ್ತು ಶ್ರೀ ದುರ್ಗಾ ಗೂಡ್ಸ್ ಟೆಂಪೋ ಚಾಲಕರ ಮತ್ತು ಮಾಲಕರ ಸಂಘ ಶಂಕರಪುರದ ಅಧ್ಯಕ್ಷರು ಆದ ರಮೇಶ್ ನಾಯಕ್ ಮತ್ತು ಕಾರ್ಯಕ್ರಮದ ಸಂಯೋಜಕರು ಆದ ರೋ ಡೆನ್ಜಿಲ್ ಕ್ಯಾಸ್ತಲಿನೊ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಾಥಾ ಕಾರ್ಯಕ್ರಮದಲ್ಲಿ ಸೈಂಟ್ ಜೋನ್ಸ್ ಪಿ ಯು ಕಾಲೇಜು ಮತ್ತು ಕನ್ನಡ ಮೀಡಿಯಂನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮತ್ತು ರೋಟರಿ ಶಂಕರಪುರದ ಸದಸ್ಯರು, ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಸದಸ್ಯರು, ಟ್ಯಾಕ್ಸಿ ಚಾಲಕರ ಮತ್ತು ಮಾಲಕರ ಸಂಘದ ಸದಸ್ಯರು, ಶ್ರೀ ದುರ್ಗಾ ಗೂಡ್ಸ್ ಟೆಂಪೋ ಚಾಲಕರ ಮತ್ತು ಮಾಲಕರ ಸಂಘದ ಸದಸ್ಯರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಶಂಕರಪುರದ ಅಧ್ಯಕ್ಷರು ಆದ ರೋ ವಿಕ್ಟರ್ ಮಾರ್ಟಿಸ್ ವಹಿಸಿದ್ದರು. ಮುಖ್ಯ ಅತಿಥಿಗಳನ್ನು ರೋ. ಸಂದೀಪ್ ಬಂಗೇರ ಇವರು ವೇದಿಕೆಗೆ ಆಹ್ವಾನಿಸಿ, ರೋಟರಿ ಪ್ರಾರ್ಥನೆಯನ್ನು ರೋ. ಮಾಲಿನಿ ಶೆಟ್ಟಿ ಮಾಡಿದರು. ರೋಟರಿ ಶಂಕರಪುರ ದ ಕಾರ್ಯದರ್ಶಿಯಾದ ರೋ ಜೆರಾಮ್ ರೋಡ್ರಿಗೆಸ್ ಇವರು ಧನ್ಯವಾದಗೈದರು.

ಜನವರಿ 31ರಂದು ಬೆಳ್ಮಣ್ಣು ರೋಟರಿ ಕ್ಲಬ್ ಆತಿಥ್ಯದಲ್ಲಿ ವಲಯ ಕ್ರೀಡಾ ಕೂಟ ಗೊಬ್ಬು ಗಮ್ಮತ್ 2021

Thumbnail
Posted On: 29 Jan 2021, 11:10 PM

ಬೆಳ್ಮಣ್ಣು ರೋಟರಿ ಕ್ಲಬ್ ಆತಿಥ್ಯದಲ್ಲಿ 3182 ಜಿಲ್ಲೆ ವಲಯ 5 ರಲ್ಲಿ ಒಳಗೊಂಡ ವಲಯ ಕ್ರೀಡಾಕೂಟ ಗೊಬ್ಬು ಗಮ್ಮತ್ 2021 ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಇದೇ ಬರುವ ದಿನಾಂಕ 31ಜನವರಿ ಆದಿತ್ಯವಾರದಂದು ನಡೆಯಲಿದೆ. 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ನಡೆಯಲಿದ್ದು ರೋ.ಡಾ ಭರತೇಶ್ ಮಾಜಿ ಜಿಲ್ಲಾ ಗವರ್ನರ್ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಸಭಾಧ್ಯಕ್ಷತೆಯನ್ನು ರೋಟರಿ ಕ್ಲಬ್ ಬೆಳ್ಮಣ್ಣು ಅಧ್ಯಕ್ಷರಾದ ರೋಟೇರಿಯನ್ ಸುಭಾಷ್ ಕುಮಾರ್ ನಂದಳಿಕೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಾಯಕ ಗವರ್ನರ್ ರೋಟೇರಿಯನ್ ನವೀನ್ ಅಮೀನ್, ವಲಯ ತರಬೇತುದಾರರು ರೋಟೇರಿಯನ್ ಪುಂಡಲಿಕ ಮರಾಠೆ, ವಲಯ ಸೇನಾನಿ ರೋಟೇರಿಯನ್ ಸುರೇಶ್ ರಾವ್, ವಲಯ ಕ್ರೀಡಾ ನಿರ್ದೇಶಕರು ರೋಟೇರಿಯನ್ ದೇವೇಂದ್ರ ಶೆಟ್ಟಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸತೀಶ್ ಮಾಡ, ಪ್ರೌಢಶಾಲೆ ಬೆಳ್ಮಣ್ಣುಮುಖ್ಯ ಶಿಕ್ಷಕರಾದ ಶ್ರೀಮತಿ ಮಾಲತಿ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ರೋಟರಿ ಜಿಲ್ಲಾ ಕಾರ್ಯದರ್ಶಿ ರೋಟೇರಿಯನ್ ಅಲ್ಲೆನ್ ಲೂಯಿಸ್, ಮಾಜಿ ಜಿಲ್ಲಾ ಸಹಾಯಕ ಗವರ್ನರ್ ರೋಟೇರಿಯನ್ ಸೂರ್ಯಕಾಂತ್ ಶೆಟ್ಟಿ, ವಲಯ ಸೇನಾನಿ ರೊ. ಮಾದೇಗೌಡ, ಶ್ರೀ ದುರ್ಗಾ ಫೂಲ್ಸ್ ಮಾಲಕರಾದ ರೋಟೇರಿಯನ್ ನಿತ್ಯಾನಂದ ಶೆಟ್ಟಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ರೂಪ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯದರ್ಶಿ ರವಿ ರಾಜ್ ಶೆಟ್ಟಿ, ಕಾರ್ಯಕ್ರಮ ನಿರ್ದೇಶಕರಾದ ರೋಟೇರಿಯನ್ ವಿಘ್ನೇಶ್ ಶೆಣೈ ಉಪಸ್ಥಿತರಿರುವರು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಲಜೀವನ್ ಮಿಷನ್ ಯಶಸ್ವಿ ಅನುಷ್ಠಾನ ನಮ್ಮೆಲ್ಲರ ಗುರಿ: ನವೀನ್ ಭಂಡಾರಿ

Thumbnail
Posted On: 29 Jan 2021, 08:30 PM

ಪುತ್ತೂರು : ಪ್ರತಿ ಮನೆಗೆ, ವ್ಯಕ್ತಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಜನಜೀವನ್ ಮಿಷನ್ನಿನ ಮುಖ್ಯ ಗುರಿಯಾಗಿದೆ ಎಂದು ಪುತ್ತೂರು ತಾಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿ ಶ್ರೀ ನವೀನ್ ಭಂಡಾರಿ ಹೇಳಿದರು. ಪುತ್ತೂರು ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ಕ್ಷೇತ್ರ ಮಟ್ಟದ ಕಾರ್ಯಕರ್ತರಿಗೆ ಪುತ್ತೂರು ತಾ.ಪಂ‌.ನಲ್ಲಿ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಕಾರ್ಯತ್ಮಕ ನಳ ಸಂಪರ್ಕ, ಕುಡಿಯುವ ನೀರು ಪೂರೈಕೆ ಜಲಜೀವನ್ ಮಿಷನ್ ಯೋಜನೆ ಉದ್ದೇಶವಷ್ಟೇ ಅಲ್ಲದೇ ಅಂತರ್ಜಲ ಮರುಪೂರಣವೂ ಆಗಿದೆ. ಈಗಾಗಲೇ ತಾಲೂಕಿನಲ್ಲಿ ಇಂಗುಗುಂಡಿಗಳ ನಿರ್ಮಾಣ ಬಹುತೇಕ ಯಶಸ್ವಿ ಕಂಡಿದೆ ಎಂದವರು ಹೇಳಿದರು. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಶ್ರೀ ಭರತ್ ಅವರು ಮಾತನಾಡಿದ ಜಲಜೀವನ್ ಮಿಷನ್ ಕಾರ್ಯನುಷ್ಠಾನ ಮತ್ತು ತಾಂತ್ರಿಕ ಅಡೆತಡೆಗಳ ಬಗೆಹರಿಸುವಿಕೆ ಕುರಿತು ಸ್ಪಷ್ಟ ಮಾಹಿತಿ ನೀಡಿದರು. ನೀರು ಪರೀಕ್ಷಾ ವಿಧಾನದ ಕುರಿತು ತಜ್ಞರಾದ ಕೃಷ್ಣ ಅವರು ಪ್ರಾತ್ಯಕ್ಷಿಕೆ ಮಾಡಿದರು. ಜಲಜೀವನ್ ಮಿಷನ್ ದ್ಯೇಯೋದ್ದೇಶಗಳ ಕುರಿತು ಜೆಜೆಎಮ್ ಜಿಲ್ಲಾ ಮುಖ್ಯಸ್ಥ ಶಿವರಾಮ್ ಪಿ.ಬಿ ಅವರು ಮಾತನಾಡಿದರು. ಸ್ವಚ್ಛ ಭಾರತ್ ಇದರ ಜಿಲ್ಲಾ ಐಇಸಿ ಡೊಂಬಯ್ಯ ಅವರು ತ್ಯಾಜ್ಯ ವಿಂಗಡನೆ ಬಗ್ಗೆ ಅರಿವು ಮೂಡಿಸಿದರು. ಜಲಜೀವನ್ ಮಿಷನ್ ಅಡಿಯಲ್ಲಿ ಹಮ್ಮಿಕೊಂಡ ಚಟುವಟಿಕೆಗಳ ಕುರಿತು ಡಬ್ಲ್ಯೂಎಸ್.ಇ ಎಂಜಿನಿಯರ್ ಅಶ್ವಿನ್ ಕುಮಾರ್ ಮತ್ತು ಜಿಲ್ಲಾ ಐಇಸಿ ಮಹಾಂತೇಶ್ ಹಿರೇಮಠ್ ತಿಳಿಸಿದರು. ಜೆಜೆಎಮ್ ಸಿಬ್ಬಂದಿಗಳಾದ ದಯಾನಂದ ಮಯ್ಯಾಳ ಮತ್ತು ಈಶ್ವರ್ ಅವರು ಸಹಕರಿಸಿದರು.ದ.ಕ ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾ.ಕು.ನೀ,ನೈ ಇಲಾಖೆ, ಪುತ್ತೂರು ತಾಲೂಕು ಪಂಚಾಯತ್ ಮತ್ತು ಸಮುದಾಯ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ತರಬೇತಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ಸುಮಾರು 150 ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.

ಜನವರಿ 31ರಂದು ಕುತ್ಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಜನಾ ಮಂಗಳೋತ್ಸವ

Thumbnail
Posted On: 28 Jan 2021, 03:44 PM

ಕಾಪು ತಾಲೂಕಿನ ಕುತ್ಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಟ್ಟಡದ ಸುವರ್ಣ ಮಹೋತ್ಸವದ ಪ್ರಯುಕ್ತ ಭಜನಾ ಮಂಗಳೋತ್ಸವವು ಜನವರಿ 31ರಂದು ದೇವಸ್ಥಾನದಲ್ಲಿ ನಡೆಯಲಿದೆ. ಬಳಿಕ ರಾತ್ರಿ ನಡೆಯುವ ಧಾರ್ಮಿಕ ಸಮಾರಂಭದಲ್ಲಿ ಶ್ರೀ ಆನೆಗುಂದಿ ಮಠಾಧೀಶರಾದ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಶೀರ್ವಚನ ನೀಡಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.30 ರಂದು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ : ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು

Thumbnail
Posted On: 28 Jan 2021, 12:42 PM

ಉಡುಪಿ : ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚೂರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಿ, ಸದ್ರಿ ಗ್ರಾಮಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ ಒದಗಿಸಲಿದ್ದಾರೆ, ಇಡೀ ರಾಜ್ಯದಲ್ಲಿ ಇದು ಪ್ರಥಮ ಪೈಲಟ್ ಕಾರ್ಯಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಗ್ರಾಮ ವಾಸ್ತವ್ಯ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು, ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನವರಿ 30 ರಂದು ಗ್ರಾಮ ವಾಸ್ತವ್ಯ ನಡೆಯುವ ನೆಂಚೂರು ಮತ್ತು ನಾಲ್ಕೂರು ಗ್ರಾಮಗಳ ಸಾರ್ವಜನಿಕರ ಕುಂದು ಕೊರತೆಗಳ ಕುರಿತಂತೆ ಸಂಬAದಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳು 3 ದಿನಗಳ ಮುಂಚಿತವಾಗಿಯೇ ಅರ್ಜಿಗಳನ್ನು ಸ್ವೀಕರಿಸಿ, ಅಗತ್ಯ ಕ್ರಮ ಕೈಗೊಳ್ಳಿ. ಸದ್ರಿ ಗ್ರಾಮ ವಾಸ್ತವ್ಯದ ದಿನ ಫಲಾನುಭವಿಗಳಿಗೆ ಅರ್ಜಿಗೆ ಸಂಬAಧಿಸಿAತೆ ಸೂಕ್ತ ಸೌಲಭ್ಯ ಒದಗಿಸುವ ಕುರಿತು ಕ್ರಮ ಕೈಗೊಳ್ಳಿ. ಸಂಬಂದಪಟ್ಟ ತಾಲೂಕಿನ ತಹಸೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಎಲ್ಲಾ ಅಧಿಕಾರಿಗಳು ವಾಸ್ತವ್ಯ ಕಾರ್ಯಕ್ರಮದಲ್ಲಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು. ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು ಮತ್ತು ಆಕಾರ್ ಬಂದ್ ತಾಳೆ ಹೊಂದುವ ಕುರಿತು ಖಚಿತಪಡಿಸಿಕೊಳ್ಳಬೇಕು. ಪೌತಿ ಹೊಂದಿದ ಖಾತೆದಾರರ ಹೆಸರನ್ನು, ನೈಜ ವಾರಿಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ ಕೈಗೊಳ್ಳಬೇಕು. ಗ್ರಾಮದ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ದೊರೆಯುತ್ತಿರುವ ಬಗ್ಗೆ ಪರಿಶೀಲನೆ, ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು, ಗ್ರಾಮದಲ್ಲಿನ ಸ್ಮಶಾನ ಲಭ್ಯತೆ ಬಗ್ಗೆ ಪರಿಶೀಲನೆ, ಆಶ್ರಯ ಯೋಜನೆಗೆ ಸಂಬAಧಿಸಿದAತೆ ಅಗತ್ಯ ಜಮೀನು ಕಾದಿರಿಸಲು ಕ್ರಮ ಕೈಗೊಳ್ಳುವುದು, ಸರ್ಕಾರಿ ಜಮೀನಿನ ಅಕ್ರಮ ಒತ್ತುವರಿ ತೆರವು, ಆಧಾರ್ ಕಾರ್ಡ್ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಮತದಾರರ ಪಟ್ಟಿ ಪರಿಷ್ಕರಣೆ, ಅತಿವೃಷ್ಠಿ/ಅನಾವೃಷ್ಠಿ ಎದುರಿಸಲು ಮುಂಜಾಗ್ರತಾ ಕ್ರಮಗಳು, ಬರ/ಪ್ರವಾಹ ಇದ್ದಲ್ಲಿ ಪರಿಹಾರ, ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ, ಆಹಾರ, ಕಲಿಕಾ ಕ್ರಮಗಳ ಬಗ್ಗೆ ಪರಿಶೀಲನೆ, ಗ್ರಾಮದಲ್ಲಿನ ವಸತಿ ನಿಲಯಗಳಿಗೆ ಭೇಟಿ ನೀಡಿ, ಸುಸ್ಥಿತಿಯಲ್ಲಿರುವ ಕುರಿತು ಪರಿಶೀಲನೆ, ಗ್ರಾಮದ ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು ಹಾಗೂ ಅನರ್ಹರು ಬಿ.ಪಿ.ಎಲ್ ಕಾರ್ಡ್ ಪಡೆದಿದ್ದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳುವುದು, ಗುಡಿಸಲು ಇರುವ ವಾಸದ ಮನೆಗಳನ್ನು ಪತ್ತೆ ಹಚ್ಚಿ ಸರ್ಕಾರದ ವಿವಿಧ ಯೋಜನೆಯಡಿ ಮನೆ ಕಟ್ಟಲು ಅನುದಾನ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದು ಹಾಗೂ ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯುವ ಸವಲತ್ತುಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸದಾಶಿವ ಪ್ರಭು ತಿಳಿಸಿದರು. ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಸಂಬಂದಪಟ್ಟ ಗ್ರಾಮದ ಪಿಡಿಓಗಳು ಮತ್ತು ಪಂಚಾಯತ್‌ಗಳ ಆಡಳಿತಾಧಿಕಾರಿಗಳು, ಕಂದಾಯ ಸಿಬ್ಬಂದಿ ಕಡ್ಡಾಯವಾಗಿ ಸ್ಥಳದಲ್ಲಿ ಹಾಜರಿರಬೇಕು. ಸಾರ್ವಜನಿಕರು ತಮ್ಮ ಕುಟುಂಬದ ವ್ಯಕ್ತಿ ಮರಣ ಹೊಂದಿದ್ದಲ್ಲಿ ಸಂಬಂದಪಟ್ಟ ಇಲಾಖೆಯಿಂದ ಮರಣ ಪ್ರಮಾಣ ಪತ್ರ ಪಡೆದು, ಪೌತಿ ಖಾತೆ ಬದಲಾವಣೆ ಮಾಡಿಕೊಳ್ಳಬೇಕು. ಸಾಮಾಜಿಕ ಭದ್ರತಾ ಯೋಜನೆಯಗಳಡಿಯಲ್ಲಿ ಪಿಂಚಣಿ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟಲ್ಲಿ ಕೂಡಲೇ ಮಾಹಿತಿ ನೀಡಿ, ಅನವಶ್ಯಕವಾಗಿ ಪಿಂಚಣಿ ಹಣ ಅನರ್ಹರಿಗೆ ತಲುಪಿ ದುರುಪಯೋಗವಾಗದಂತೆ ಎಚ್ಚರವಹಿಸಬೇಕು, ಇಲ್ಲವಾದಲ್ಲಿ ಮೃತರ ಹೆಸರಿನಲ್ಲಿ ಪಿಂಚಣಿ ಪಡೆದವರಿಂದಲೇ ಮೊತ್ತವನ್ನು ವಸೂಲಿ ಮಾಡಲಾಗುವುದು ಮತ್ತು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಸಿದರು. ಪ್ರತೀ ತಿಂಗಳ 3 ನೇ ಶನಿವಾರ ಜಿಲ್ಲಾಧಿಕಾರಿಗಳು, ಭೂ ದಾಖಲೆಗಳ ಉಪ ನಿರ್ದೇಶಕರು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಉಪ ವಿಭಾಗದ ಸಹಾಯಕ ಆಯುಕ್ತರು, ಸಂಬಂದಪಟ್ಟ ತಹಸೀಲ್ದಾರ್ ಮತ್ತು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರೊಂದಿಗೆ ಗ್ರಾಮ ವಾಸ್ತವ್ಯ ನಡೆಯಲಿದ್ದು, ಜಿಲ್ಲಾಧಿಕಾರಿ ಭೇಟಿ ನೀಡುವ ತಾಲೂಕಿನ ತಹಸೀಲ್ದಾರ್ ಹೊರತುಪಡಿಸಿ, ಉಳಿದ ತಾಲೂಕುಗಳ ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡಲಿದ್ದು, ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ವಾಸ್ತವ್ಯ ಮಾಡಲಿದ್ದಾರೆ ಎಂದರು. ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಕಾಪು ದೀಪಸ್ತಂಭ 5 ತಿಂಗಳ ಹಿಂದೆ ಹಾನಿಯಾದ ಮೆಟ್ಟಿಲು, ಗೋಡೆ ಇನ್ನೂ ದುರಸ್ತಿಯಾಗಿಲ್ಲ ಪ್ರವಾಸೋದ್ಯಮ ಇಲಾಖೆಯ ಜಾಣ ಮೌನ

Thumbnail
Posted On: 28 Jan 2021, 12:36 PM

ಉಡುಪಿ ಜಿಲ್ಲೆಯ ಕಾಪು ಕಡಲ ಕಿನಾರೆಯಲ್ಲಿರುವ ಬ್ರಿಟಿಷ್ ಕಾಲದಲ್ಲಿ ನಿರ್ಮಿಸಲ್ಪಟ್ಟ ಕಾಪು ದೀಪಸ್ತಂಭ ವೀಕ್ಷಿಸಲು ದಿನನಿತ್ಯ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಇತ್ತೀಚಿನ ಮಳೆಯ ಸಂದರ್ಭ ದೀಪಸ್ತಂಭದ ಆರಂಭದ ಮೆಟ್ಟಿಲುಗಳು ಮತ್ತು ಗೋಡೆ ಹಾನಿಗೊಂಡಿದೆ. 5 ತಿಂಗಳಿಂದ ಈ ರೀತಿಯ ಅವಸ್ಥೆ ಇದ್ದರೂ ಈವರೆಗೂ ದುರಸ್ತಿ ಕಂಡಿಲ್ಲ. ಈ ಬಗ್ಗೆ ಕೆಳ ತಿಂಗಳ ಹಿಂದೆ ಪತ್ರಿಕೆಯಲ್ಲಿ ವರದಿ ಪ್ರಕಟವಾದರೂ ಇನ್ನೂ ಎಚ್ಚೆತ್ತು ಕೊಳ್ಳದ ಪ್ರವಾಸೋದ್ಯಮ ಇಲಾಖೆ ಸುಂದರ ಪ್ರವಾಸಿ ತಾಣವಾದ ಈ ಸ್ಥಳದ ಇಂತಹ ಸ್ಥಿತಿಯನ್ನು ಈವರೆಗೂ ಗಮನಿಸದಂತಿದ್ದು, ಆದಷ್ಟು ಬೇಗ ಸರಿಪಡಿಸಬೇಕಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುತ್ಯಾರು : ಭಾರತ ಮಾತಾ ಪೂಜನಾ ಕಾರ್ಯಕ್ರಮ

Thumbnail
Posted On: 27 Jan 2021, 07:37 PM

ಅಯೋಧ್ಯಾ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಭಾರತಮಾತಾ ಪೂಜನಾ ಕಾರ್ಯಕ್ರಮವು ಪಡು ಕುತ್ಯಾರು ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದಲ್ಲಿ ಜರಗಿತು. ಹಿಂದುಗಳು ಬಿಂದು ಬಿಂದುವಾಗಿ ಸಂಘಟಿತರಾಗಿ ಆದರ್ಶಪುರುಷ ಶ್ರೀರಾಮನ ತತ್ವ, ಪರಸ್ಪರ ಪ್ರೇಮ, ಸ್ನೇಹ, ಸದ್ಭಾವ, ಕರುಣೆ, ಮಮತೆ, ಬಂಧುತ್ವ, ಆರೋಗ್ಯಗಳಿಂದ ಕೂಡಿದ ಸಂತೃಪ್ತ ಜೀವನ ನಡೆಸುವಂತಾಗಲಿ. ಗಾಂಧೀಜಿಯವರ ರಾಮರಾಜ್ಯದ ಕನಸು ನನಸಾಗಲಿ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಮಾತೃ ಮಂಡಳಿಯ ಪ್ರಮುಖ್ ಶ್ರೀಮತಿ ರಾಜಲಕ್ಷ್ಮಿ ಸತೀಶ್ ಕರೆ ನೀಡಿದರು. ಈ ಸಂದರ್ಭ ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ದೇವರಾಜ್ ಬಿ. ಶೆಟ್ಟಿ, ಸಂಪತ್ ಕುಮಾರ್, ಭಾರತಿ ರಾಘವೇಂದ್ರ, ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಆಚಾರ್ಯ ಹಾಗೂ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರಾದ ಪವನ್ ಶೆಟ್ಟಿ ಕೇಂಜ, ಸುಂದರಿ ಕುಲಾಲ್, ಪ್ರವೀಣ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಗಂಗಾಧರ ಆಚಾರ್ಯ ಸ್ವಾಗತಿಸಿ, ಶಶಿರಾಜ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಸುಶಾಂತ್ ಶೆಟ್ಟಿ ವಂದಿಸಿದರು.

ಕುತ್ಯಾರು ಗ್ರಾಮಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

Thumbnail
Posted On: 27 Jan 2021, 07:19 PM

ಕುತ್ಯಾರು ಗ್ರಾಮಪಂಚಾಯತ್ ಆಡಳಿತಾಧಿಕಾರಿ ಅರುಣ್ ಕುಮಾರ್ ಹೆಗ್ಡೆ ಧ್ವಜಾರೋಹಣ ಮಾಡುವ ಮೂಲಕ ಕುತ್ಯಾರು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭ ನೂತನ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಪಿಡಿಒ ರಜನಿ ಭಟ್ ಸ್ವಾಗತಿಸಿ, ವಂದಿಸಿದರು.

ಕಳತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ

Thumbnail
Posted On: 27 Jan 2021, 07:15 PM

ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಿವೃತ್ತ ಶಿಕ್ಷಕರಾದ ಶ್ರೀಕರಯ್ಯ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಕುತ್ಯಾರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಅರುಣ್ ಕುಮಾರ್ ಹೆಗ್ಡೆ, ಪಿಡಿಒ ರಜನಿ ಭಟ್, ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಮಟ್ಟಾರು : ಶ್ರೀ‌ರಾಮ ನಾಮ ಜಪದೊಂದಿಗೆ ಶ್ರೀರಾಮೋತ್ಸವ

Thumbnail
Posted On: 27 Jan 2021, 06:42 PM

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ವಿಶ್ವ ಹಿಂದು ಪರಿಷದ್ ಬಜರಂಗದಳ ಮಾತೃಶಕ್ತಿ ಮಟ್ಟಾರು ಘಟಕದ ನೇತೃತ್ವದಲ್ಲಿ ಶ್ರೀರಾಮೋತ್ಸವ ಜರಗಿತು. ಸಾಮೂಹಿಕವಾಗಿ ದೀಪ ಪ್ರಜ್ವಲನೆಯೊಂದಿಗೆ ಶ್ರೀರಾಮ ನಾಮ ಜಪ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯ ಕರಸೇವಕರಾದ ಪಾಂಡುರಂಗ ಶ್ಯಾನಭಾಗ್ ಮಾರ್ಗದರ್ಶನ ಮಾಡಿದರು. ಕರಾವಳಿ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ,ಅಯೋಧ್ಯೆ ಕರಸೇವಕರಾದ ರಮೇಶ ಪ್ರಭು, ದಿನೇಶ ಪಾಟ್ಕರ್, ವಿಶ್ವ ಹಿಂದು ಪರಿಷದ್ ಮಟ್ಟಾರು ಘಟಕದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು. ವಿಶ್ವ ಹಿಂದು ಪರಿಷದ್ ಕಾಪು ತಾಲೂಕು ಧರ್ಮಾಚಾರ್ಯ ಪ್ರಮುಖ್ ವೇದಮೂರ್ತಿ ಪ್ರಸನ್ನ ಭಟ್ ಶ್ರೀರಾಮ ನಾಮ ಮಂತ್ರ ಭೋಧಿಸಿದರು.ವಿಶ್ವ ಹಿಂದು ಪರಿಷದ್ ಕಾಪು ತಾಲೂಕು ಕಾರ್ಯದರ್ಶಿ ಜಯಪ್ರಕಾಶ್ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಸುಮಾರು 200 ರಷ್ಟು ಜನರು ಸಾಮೂಹಿಕವಾಗಿ ಶ್ರೀರಾಮ ನಾಮ ಜಪ ಮಾಡಿದರು.