Updated News From Kaup
ರೋಟರಿ ಕ್ಲಬ್ ಬೆಳ್ಮಣ್ ಗೆ ಇಂದು ರೋಟರಿ ಜಿಲ್ಲಾ ಗವರ್ನರ್ ಭೇಟಿ
Posted On: 23 Jan 2021, 11:58 AM
ಇಂದು ರೋಟರಿ ಕ್ಲಬ್ ಬೆಳ್ಮಣ್ ಕ್ಲಬ್ ಗೆ ರೋಟರಿ ಜಿಲ್ಲಾ ಗವರ್ನರ್ ರೋ. ರಾಜಾರಾಮ್ ಭಟ್ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಶಾಶ್ವತ ಯೋಜನೆಗಳು ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಕ್ಲಬ್ ನ ಅಧ್ಯಕ್ಷರಾದ ರೋ.ಸುಭಾಷ್ ಕುಮಾರ್ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಜಿಲ್ಲಾ ಉಪ ಗವರ್ನರ್ ರೋ.ನವೀನ್ ಅಮೀನ್ , ವಲಯ ಸೇನಾನಿ ರೋ. ಸುರೇಶ್ ರಾವ್ ಭಾಗವಹಿಸಲಿದ್ದಾರೆ.
ಕಾಪು ತಾಲೂಕು ಗ್ರಾಮ ಪಂಚಾಯತ್ ಗಳ ಅಧ್ಯಕ್ಷ -ಉಪಾಧ್ಯಕ್ಷ ಮೀಸಲಾತಿಗಳ ಆಯ್ಕೆ ಪ್ರಕಟ
Posted On: 21 Jan 2021, 04:25 PM
ಕಾಪು ತಾಲೂಕಿನ 2020ನೇ ಸಾಲಿನ ಚುನಾವಣೆ ಮುಗಿದ 16 ಗ್ರಾಮಪಂಚಾಯತ್ ಗಳ 30 ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಇಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ತಾಲೂಕಿನ ಗ್ರಾಮ ಪಂಚಾಯತಿಯ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಇಂದು ಉಚ್ಚಿಲ ಮಹಾಲಕ್ಷ್ಮಿ ಸಭಾ ಭವನದಲ್ಲಿ ನಡೆಯಿತು. ಬೆಳ್ಳೆ : ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಕುರ್ಕಾಲು: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ. ಶಿರ್ವ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಇನ್ನಂಜೆ: ಅಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ. ಕಟಪಾಡಿ: ಅಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ. ಕೋಟೆ: ಅಧ್ಯಕ್ಷ -ಹಿಂದುಳಿದ ವರ್ಗ ಅ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಮಜೂರು :ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ. ಕುತ್ಯಾರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ. ಮುದರಂಗಡಿ: ಅಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ – ಸಾಮಾನ್ಯ. ಬೆಳಪು: ಅಧ್ಯಕ್ಷ – ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ. ಬಡಾ: ಅಧ್ಯಕ್ಷ -ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ. ಎಲ್ಲೂರು: ಅಧ್ಯಕ್ಷ – ಸಾಮಾನ್ಯ, ಉಪಾಧ್ಯಕ್ಷ- ಅನುಸೂಚಿತ ಜಾತಿ ಮಹಿಳೆ. ಪಲಿಮಾರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ. ತೆಂಕ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ. ಪಡುಬಿದ್ರಿ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ. ಹೆಜಮಾಡಿ: ಅಧ್ಯಕ್ಷ – ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ. ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಅಧಿಕಾರಿಗಳನ್ನು ನೇಮಿಸಿ ಏಳು ದಿನ ಮುಂಚಿತವಾಗಿ ಗ್ರಾಮ ಪಂಚಾಯತಿಗಳಿಗೆ ನೋಟಿಸ್ ನೀಡಲಾಗುವುದು. 15 ದಿನಗಳ ಒಳಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧಕ್ಷರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಈ ಸಂದರ್ಭ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು : ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷರಾದ ಎಮ್. ಮಹೇಶ್ ಕುಮಾರ್ ಗೆ ಸನ್ಮಾನ
Posted On: 20 Jan 2021, 09:37 PM
ಬೆಂಗಳೂರು ಪ್ರಿಂಟೇಕ್ ಪಾರ್ಕ್ ಉದ್ಘಾಟನಾ ಸಮಾರಂಭ ದಲ್ಲಿ ಕರ್ನಾಟಕ ಸ್ಟೇಟ್ ಪ್ರಿಂಟರ್ಸ್ ಅಸೋಸಿಯೇಷನ್ ಬೆಂಗಳೂರು ಇವರಿಂದ ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ (ರಿ.) ಉಡುಪಿ ಜಿಲ್ಲಾಧ್ಯಕ್ಷರಾದ ಎಮ್. ಮಹೇಶ್ ಕುಮಾರ್ ರವರನ್ನು ಪ್ರಿಂಟಕ್ ಪಾರ್ಕ್ ಅಧ್ಯಕ್ಷರಾದ ಸಿ. ಆರ್. ಜನಾರ್ದನ ಹಾಗೂ ಕರ್ನಾಟಕ ಸ್ಟೇಟ್ ಪ್ರಿಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ರಾದ ಅಶೋಕ್ ಕುಮಾರ್ ರವರು ಸನ್ಮಾನ ಮಾಡಿದರು. ವೇದಿಕೆಯಲ್ಲಿ ಅಶೋಕ್ ಶೆಟ್ಟಿ. ರಮೇಶ್ ತಿಂಗಳಾಯ. ಶಿವರಾಮ್ ಆಚಾರ್ಯ. ವಿವೇಕಾನಂದ ಕಾಮತ್. ದಿನೇಶ್ ಆಚಾರ್ಯ. ನಾಗರಾಜ್ ಸುದರ್ಶನ್.ರಾಮಚಂದ್ರ ಉಪಾಧ್ಯ. ಅಬ್ದುಲ್ ಹಮೀದ್. ವಾಸುದೇವ ಕಾಮತ್. ಭುವನೇಂದ್ರ. ಪದ್ಮನಾಭ. ಸುಧೀರ್ ಡಿ ಬಂಗೇರ. ಮೋಹನ್ ಶೆಟ್ಟಿಗಾರ್.ಉದಯ್ ಅಬ್ದುಲ್ ಖಲೀಲ್ ಉಪಸ್ಥಿತರಿದ್ದರು.
ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ
Posted On: 20 Jan 2021, 08:50 PM
ಕೋಟ: ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬುಧವಾರ ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘ ಆಕ್ರೋಶ ವ್ಯಕ್ತಪಡಿಸಿ ಕೋಟ ಆರಕ್ಷಕ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ ಇವರಿಗೆ ದೂರು ನೀಡಿದೆ. ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಸಚಿವ ಕೋಟ ಈವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ. ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಸಮುದಾಯ ಅಥವಾ ಅವರ ಅಭಿಮಾನಿಗಳು ಸಹಿಸಲ್ಲ ಈ ರೀತಿಯ ಬರಹಯುಕ್ತ ಪೋಸ್ಟರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಸಂಘದ ಅಧ್ಯಕ್ಷ ಜಿ.ಸದಾನಂದ ಪೂಜಾರಿ ತಮ್ಮ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಬಿಲ್ಲವ,ಕಾರ್ಯದರ್ಶಿ ಮನೋಹರ್ ಪೂಜಾರಿ, ಯುವ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ,ಸಂತೋಷ್ ಪೂಜಾರಿ ತೆಕ್ಕಟ್ಟೆ ಉಪಸ್ಥಿತರಿದ್ದರು.
ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ
Posted On: 20 Jan 2021, 08:50 PM
ಕೋಟ: ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬುಧವಾರ ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘ ಆಕ್ರೋಶ ವ್ಯಕ್ತಪಡಿಸಿ ಕೋಟ ಆರಕ್ಷಕ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ ಇವರಿಗೆ ದೂರು ನೀಡಿದೆ. ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಸಚಿವ ಕೋಟ ಈವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ. ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಸಮುದಾಯ ಅಥವಾ ಅವರ ಅಭಿಮಾನಿಗಳು ಸಹಿಸಲ್ಲ ಈ ರೀತಿಯ ಬರಹಯುಕ್ತ ಪೋಸ್ಟರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಸಂಘದ ಅಧ್ಯಕ್ಷ ಜಿ.ಸದಾನಂದ ಪೂಜಾರಿ ತಮ್ಮ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಬಿಲ್ಲವ,ಕಾರ್ಯದರ್ಶಿ ಮನೋಹರ್ ಪೂಜಾರಿ, ಯುವ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ,ಸಂತೋಷ್ ಪೂಜಾರಿ ತೆಕ್ಕಟ್ಟೆ ಉಪಸ್ಥಿತರಿದ್ದರು.
ಮಂಗಳೂರು ಮಡಗಾಂವ್ ಪ್ಯಾಸೆಂಜರ್ ರೈಲು ಪುನರಾರಂಭಿಸುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ
Posted On: 18 Jan 2021, 09:58 PM
ಮಂಗಳೂರು ಮಡಗಾಂವ್ ಪ್ಯಾಸೆಂಜರ್ ರೈಲು ಸ್ಥಗಿತಗೊಂಡು 9 ತಿಂಗಳು ಕಳೆದಿದ್ದು ಕರಾವಳಿ ಕರ್ನಾಟಕ ಭಾಗದ ರೈತರು, ಆರ್ಥಿಕವಾಗಿ ಹಿಂದುಳಿದವರು ಹಾಗೂ ಸಣ್ಣ ವ್ಯಾಪಾರಿಗಳ ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದೆ. ಸಾಮಾನ್ಯ ಜನರ ಹಿತದೃಷ್ಟಿಯಿಂದ ಈ ರೈಲನ್ನು ಅತಿ ಶೀಘ್ರದಲ್ಲಿ ಪುನರಾರಂಭಗೊಳಿಸಲು ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಕೆ. ರಘುಪತಿ ಭಟ್, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಚಾಲಕ ಗಣೇಶ್ ಪ್ರಸಾದ್ ಜಿ. ನಾಯಕ್, ಜಿಲ್ಲಾ ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು, ತಾಲೂಕು ಸಂಯೋಜಕರುಗಳಾದ ಜಗದೀಶ್ ಶೆಟ್ಟಿ, ಉದಯ ನಾಯ್ಕ್ ಉಪಸ್ಥಿತರಿದ್ದರು.
ಸಹಸ್ರ ಪೂರ್ಣ ಚಂದ್ರ ದರ್ಶನ ಹಾಗೂ ಕನಕಾಭಿಷೇಕ ಧಾರ್ಮಿಕ ಕಾರ್ಯಕ್ರಮದಲ್ಲಿ ಗಿಡಗಳ ವಿತರಣೆ
Posted On: 18 Jan 2021, 06:32 PM
ಪಡುಬಿದ್ರಿ : ಇಲ್ಲಿಯ ಗಂಗೂ ಹೊಸಮನೆಯ ಪಿ.ಎಚ್.ಪಾರ್ಥಸಾರಥಿ - ಶ್ರೀಮತಿ ಶಾಂತಾ ಪಾರ್ಥಸಾರಥಿ ಅವರು ತಮ್ಮ 'ಸಹಸ್ರ ಪೂರ್ಣ ಚಂದ್ರ ದರ್ಶನ ಹಾಗೂ ಕನಕಾಭಿಷೇಕ' ಧಾರ್ಮಿಕ ಕಾರ್ಯಕ್ರಮದಲ್ಲಿ ಮುನ್ನೂರು ವಿವಿಧ ಜಾತಿಯ ಗಿಡಗಳನ್ನು ವಿತರಿಸಿ ತಮ್ಮ ಪರಿಸರ ಪ್ರೀತಿಯನ್ನು ಮೆರೆದರು. ಭಾರತೀಯ ಕಿಸಾನ್ ಸಂಘದ ಪಡುಬಿದ್ರಿ ವಿಭಾಗದ ಮಾಜಿ ಅಧ್ಯಕ್ಷರಾಗಿದ್ದ ಪಾರ್ಥಸಾರಥಿಯವರು ಕಿಸಾನ್ ಸಹಜ ಪರಿಸರ ರಕ್ಷಣೆ - ಪರಿಸರ ಬೆಳವಣಿಗೆಯ ಕಾಳಜಿವುಳ್ಳವರಾಗಿದ್ದು ಬಂಧು ಬಾಂಧವರು ,ಅಭಿಮಾನಿಗಳು ,ಸಮಾಜದ ಗಣ್ಯರು ಭಾಗವಹಿಸುವ ಈ ಸಂದರ್ಭವನ್ನು ಸಸಿಗಳ ವಿತರಣೆಗೆ ಬಳಸಿಕೊಂಡಿದ್ದು ಧಾರ್ಮಿಕ ಕಾರ್ಯಕ್ರಮದಲ್ಲಿ ಪರಿಸರ ರಕ್ಷಣೆ ಅಭಿಯಾನದ ಅಳವಡಿಕೆಯ ಸಾಧ್ಯತೆಯನ್ನು ಸ್ವತಃ ಕಾರ್ಯಗತಗೊಳಿಸಿ ಕಿರಿಯರಿಗೆ ಮಾದರಿಯಾದರು. ವೇ.ಮೂ. ಶ್ರೀನಿವಾಸ ಭಟ್ ಅವರಿಗೆ ಮೊದಲು ಪಾರಿಜಾತ ಹೂವಿನ ಗಿಡವನ್ನು ವಿತರಿಸಿ ಗಿಡಗಳನ್ನು ವಿತರಿಸುವ ಪ್ರಕ್ರಿಯೆಆರಂಭಿಸಲಾಯಿತು .ಭಾರತ ಕಿಸಾನ್ ಸಂಘದ ಮಾಜಿ ಕಾರ್ಯದರ್ಶಿ ಸದಾಶಿವ ಆಚಾರ್ಯ ಅವರು ಉಪಸ್ಥಿತರಿದ್ದರು.ವಿಘ್ನೇಶ ಕುಮಾರ್ ,ಸಂಪತ್ ಕುಮಾರ್, ಮತ್ತು ಗಣೇಶ ಐತಾಳ್ ಕಾರ್ಯಕ್ರಮ ಸಂಯೋಜಿಸಿದ್ದರು.
ಮಟ್ಟು ಗುಳ್ಳ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಸುನೀಲ್ ಡಿ. ಬಂಗೇರ
Posted On: 18 Jan 2021, 06:22 PM
ಮಟ್ಟು ಗುಳ್ಳ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಸುನೀಲ್ ಡಿ. ಬಂಗೇರ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮೋಹನ್ ರಾವ್, ಕಾರ್ಯದರ್ಶಿ ರೋಷನ್ ಮಟ್ಟು, ಜೊತೆ ಕಾರ್ಯದರ್ಶಿ ಜಗದೀಶ್ ಬಿ. ಪೂಜಾರಿ, ಖಜಾಂಚಿಯಾಗಿ ಎಮ್. ಲಕ್ಷ್ಮಣ ರಾವ್, ಸದಸ್ಯರಾಗಿ ಐಲಿನ್ ಪ್ರಭಾವತಿ, ಮಹೇಶ್ ಪೂಜಾರಿ, ಶಶಿಧರ್ ಡಿ. ಕೋಟ್ಯಾನ್, ಪ್ರಶಾಂತ್ ಕುಮಾರ್, ಸದಾನಂದ ಸಾಲಿಯಾನ್, ಅವಿನಾಶ್ ಮಟ್ಟು, ಅಶೋಕ್ ಡಿ. ಕೋಟ್ಯಾನ್, ಸದಾನಂದ ಡಿ. ಸುವರ್ಣ, ಉಮೇಶ್, ವಿಠ್ಠಲ ಪೂಜಾರಿ ಆಯ್ಕೆಯಾಗಿರುತ್ತಾರೆ.
ಹೆಜಮಾಡಿ ಬಂದರಿಗೆ 19ರಂದು ಮುಖ್ಯಮಂತ್ರಿಯಿಂದ ಶಿಲಾನ್ಯಾಸ
Posted On: 17 Jan 2021, 01:24 PM
ಮೀನುಗಾರರ ಸುದೀರ್ಘ ಹೋರಾಟದ ಫಲವಾಗಿ ಕಾಪು ತಾಲೂಕಿನ ಹೆಜಮಾಡಿ ಕೋಡಿಯಲ್ಲಿ ₹ 180.8 ಕೋಟಿಯ ವಿವಿಧ ಸವಲತ್ತುಗಳ ಕಾರ್ಯಯೋಜನೆಯ ಮೀನುಗಾರಿಕಾ ಬಂದರು ಕಾಮಗಾರಿಗೆ ಇದೇ ಬರುವ 19ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಲಾನ್ಯಾಸ ಮಾಡಲಿದ್ದಾರೆ.
ಪಡುಬಿದ್ರಿ : ಜನವರಿ 19ರಿಂದ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ಢಕ್ಕೆಬಲಿ ಸೇವೆ ಆರಂಭ
Posted On: 17 Jan 2021, 01:15 PM
ಇತಿಹಾಸ ಪ್ರಸಿದ್ಧ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ದ್ವೈವಾರ್ಷಿಕವಾಗಿ ನಡೆಯುವ ಢಕ್ಕೆಬಲಿ ಸೇವೆಯು ಇದೇ ಬರುವ ಜನವರಿ 19 ಮಂಗಳವಾರದಿಂದ ಆರಂಭವಾಗಿ ಮಾರ್ಚ್ 6 ನೇ ತಾರೀಖಿಗೆ ಹಗಲು ತಂಬಿಲ ಸೇವೆ ನೀಡಿದ ಭಕ್ತಾದಿಗಳ ಸೇವೆಯೊಂದಿಗೆ ಮಂಡಲ ವಿಸರ್ಜನೆ ನಡೆಯಲಿದೆ. ಈ ಬಾರಿ ಒಟ್ಟು 24 ಢಕ್ಕೆ ಬಲಿ ಸೇವೆಗಳು ನಡೆಯಲಿದ್ದು, ಇದರಲ್ಲಿ ಇದೇ ಬರುವ 23 ರಂದು ಮುರುಡಿ ಬ್ರಹ್ಮಸ್ಥಾನದಲ್ಲಿ ಮತ್ತು 26ರಂದು ಹೆಜಮಾಡಿ ಬ್ರಹ್ಮಸ್ಥಾನದಲ್ಲಿ ಢಕ್ಕೆ ಬಲಿ ಸೇವೆ ನಡೆಯಲಿದೆ. ಈ ಬಾರಿ ಕೋವಿಡ್ -19 ಹಿನ್ನೆಲೆಯಲ್ಲಿ ಸರಳವಾಗಿ ನಡೆಯಲಿದೆ ಎಂದು ತಿಳಿಸಿದ್ದಾರೆ.
