Updated News From Kaup
ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಅಧ್ಯಕ್ಷರಾಗಿ ದಾಮೋದರ ಕಲ್ಮಾಡಿ ಆಯ್ಕೆ
Posted On: 08 Dec 2020, 10:46 PM
ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ (ರಿ.) ಆದಿ ಉಡುಪಿ ಇದರ 2020-2023ರ ಮೂರು ವರ್ಷದ ಅವಧಿಗೆ ಅಧ್ಯಕ್ಷರಾಗಿ ದಾಮೋದರ ಕಲ್ಮಾಡಿ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಯು. ನಾರಾಯಣ ಉಪಾಧ್ಯಕ್ಷರಾಗಿ ಶೇಖರ್ ಮಾಸ್ಟರ್ ಕಲ್ಮಾಡಿ ಪ್ರಧಾನ ಕಾರ್ಯದರ್ಶಿಯಾಗಿ ಎಮ್. ಮಹೇಶ್ ಕುಮಾರ್, ಜತೆ ಕಾರ್ಯದರ್ಶಿ ಶೇಖರ್ ಪೂಜಾರಿ ಕಿದಿಯೂರ್, ಕೋಶಾಧಿಕಾರಿ ಮಹೇಶ್ ಎನ್. ಕಾರ್ಯಕಾರಿ ಸಮಿತಿ ಸದಸ್ಯರಾಗಿ ತೇಜಪ್ಪ ಬಂಗೇರ, ಶಿವರಾಮ ಪೂಜಾರಿ, ಗೋಪಾಲ್ ಕಾರ್ಕಳ, ಆ. ಮಾಧವ, ಬಿ. ಸಂಜೀವ ಪೂಜಾರಿ, ಚೆಲುವ ರಾಜ್ ಪೆರಂಪಳ್ಳಿ, ಗಂಗಾಧರ್ ಕಿದಿಯೂರ್, ಜಯಕರ ವಿ. ಸುವರ್ಣ, ಸುಲೋಚನಾ ತಿಲಕ್ ಕಾರ್ಕಳ, ಬಿ.ಬಿ ಪೂಜಾರಿ, ಲಕ್ಷ್ಮೀಶ ಬಂಗೇರ, ನವೀನ್ ತೋನ್ಸೆ ಆಯ್ಕೆ ಆಗಿದ್ದಾರೆ.
ಕ್ರಿಸ್ಮಸ್ ವೃಕ್ಷದೊಂದಿಗೆ ಸೆಲ್ಫಿ : ಫೊಟೋ ಸ್ಪರ್ಧೆ
Posted On: 08 Dec 2020, 04:32 PM
ಕಾಪು : ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕುರ್ಕಾಲು ಯುವಕ ಮಂಡಲದಿಂದ ಕ್ರಿಸ್ಮಸ್ ವೃಕ್ಷದೊಂದಿಗೆ ಸೆಲ್ಫಿ ಫೋಟೋ ಸ್ಪರ್ಧೆಯನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದು, ಪ್ರಥಮ ಬಹುಮಾನ ₹ 1,000 ಎರಡನೇ ಬಹುಮಾನ ₹750 ಮತ್ತು 3 ಸಮಾಧಾನಕರ ಬಹುಮಾನ ₹500 ಇರಲಿದೆ. ಸ್ಪರ್ಧೆಯ ನಿಯಮಗಳು ಇಂತಿವೆ : ತಮ್ಮ ಫೋಟೋವನ್ನು ಕೆಳಗೆ ನಮೂದಿಸಿದ ಯಾವುದೇ ಮೊಬೈಲ್ ಸಂಖ್ಯೆಗೆ ವಾಟ್ಸ್ಆಪ್ ಮಾಡಬಹುದು. ಸ್ಪರ್ಧಾಳುಗಳು ತಮ್ಮ ಪೂರ್ಣ ಹೆಸರು,ವಿಳಾಸ ಮತ್ತು ಮೊಬೈಲ್ ಸಂಖ್ಯೆ ನಮೂದಿಸಬೇಕು. ಸ್ಪರ್ಧಿಯು ಕೇವಲ ಒಂದು ಫೋಟೋವನ್ನು ಮಾತ್ರ ಕಳುಹಿಸಲು ಅವಕಾಶ. ಸ್ಪರ್ಧೆಯಲ್ಲಿ ಭಾಗವಹಿಸುವ ವ್ಯಕ್ತಿಯು ಫೋಟೋದಲ್ಲಿ ಇರಬೇಕು. ಈ ಸ್ಪರ್ಧೆಯು ಯಾವುದೇ ನಿರ್ದಿಷ್ಟ ಪ್ರದೇಶಕ್ಕೆ ಸೀಮಿತವಾಗಿಲ್ಲ. ಎಲ್ಲರಿಗೂ ಮುಕ್ತ ಅವಕಾಶ. ಡಿಸೇಂಬರ್ 24 ರಿಂದ 26 ಸಂಜೆ 6 ಗಂಟೆಯ ಒಳಗೆ ಮಾತ್ರ ಫೋಟೋ ಕಳುಹಿಸಲು ಅವಕಾಶ. ಸ್ಪರ್ಧೆಯಲ್ಲಿ ವಿಶೇಷವಾಗಿ ಕ್ರಿಸ್ಮಸ್ ವೃಕ್ಷದ ಅಲಂಕಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ನಿಮ್ಮ ಫೋಟೋಗಳನ್ನು ಈ ಕೆಳಗಿನ ಯಾವುದೇ ವಾಟ್ಸಪ್ ನಂಬರಿಗೆ ಕಳುಹಿಸಬಹುದಾಗಿದೆ. ಎಂದು ನಮ್ಮ ಕಾಪು ವೆಬ್ ಪೋರ್ಟಲ್ ಗೆ ತಿಳಿಸಿದ್ದಾರೆ. ರಾಯನ್ ಫೇರ್ನಾಂಡಿಸ್ 7760718898 ಸಂತೋಷ್ ಶೆಟ್ಟಿ 9980970615 ಸುವಿತ್ ಶೆಟ್ಟಿ 8150025768 ಕಿರಣ್ ಪೂಜಾರಿ 9902424715 ಪ್ರಶಾಂತ್ ಪೂಜಾರಿ 9535866383 ಆಕಾಶ್ ಪೂಜಾರಿ 9538016764
ಕುತ್ಯಾರಿನ ಹದಗೆಟ್ಟ ರಸ್ತೆಯ ದುರಸ್ತಿ ಎಂದು ಸಾರ್ವಜನಿಕರ ಪ್ರಶ್ನೆ
Posted On: 08 Dec 2020, 03:06 PM
ಶಿರ್ವ (ಕುತ್ಯಾರು) : ಪೈಪ್ ಅಳವಡಿಕೆಗೆ ರಸ್ತೆಯನ್ನು ಅಗೆದು ಹೊಂಡವಾಗಿ ತಿಂಗಳು ಕಳೆದರೂ ಅದನ್ನು ಮುಚ್ಚದೆ ವಾಹನ ಸವಾರರಿಗೆ ತೊಂದರೆಯಾಗಿ ಸಣ್ಣ ಪುಟ್ಟ ಅಪಘಾತಗಳಾಗುತ್ತಿರುವ ಸನ್ನಿವೇಶ ಮುದರಂಗಡಿ- ಶಿರ್ವ ಮುಖ್ಯ ರಸ್ತೆಯ ಕುತ್ಯಾರು ಬ್ಯಾಂಕ್ ಆಫ್ ಬರೋಡದ ಬಳಿ ಕಾಣಬಹುದಾಗಿದೆ. ರಾತ್ರಿ ವೇಳೆ ಹೊಂಡ ಗೋಚರಿಸದೆ ತೊಂದರೆಯಾಗುತ್ತಿದೆ. ಇನ್ನೊಂದೆಡೆ ರಸ್ತೆಯ ಇಕ್ಕೆಲಗಳಲ್ಲಿ ಡಾಮರೀಕರಣಕ್ಕಾಗಿ ಜಲ್ಲಿಯನ್ನು ಹಾಕಲಾಗಿದ್ದು ಇತ್ತ ಡಾಮರೀಕರಣವೂ ಆಗದೆ ಪರಿಸರವು ಧೂಳುಮಯವಾಗಿದೆ ಸಂಬಂಧಪಟ್ಟವರು ಇದರ ಬಗ್ಗೆ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಕೂಡಲೇ ಸರಿಪಡಿಸಬೇಕೆಂದು ಕುತ್ಯಾರು ಅರಮನೆಯ ಜಿನೇಶ್ ಬಲ್ಲಾಳ್ ಮತ್ತು ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸಂಪತ್ ಕುಮಾರ್ ಕೇಂಜ ಆಗ್ರಹಿಸಿದ್ದಾರೆ.
ಭಾರತ್ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ
Posted On: 08 Dec 2020, 01:36 PM
ಉಡುಪಿ: ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆಗಳು ಮಂಗಳವಾರ ದೇಶಾದ್ಯಂತ ಕರೆ ನೀಡಿರುವ ಭಾರತ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದ್ದು, ಎಂದಿನಂತೆ ಅಟೋಗಳು ಸಂಚರಿಸುತ್ತಿದ್ದು, ಪೊಲೀಸರು ನಗರದಾದ್ಯಂತ ಗಸ್ತು ತಿರುಗುತ್ತಿದ್ದಾರೆ. ಬಸ್ ನಿಲ್ದಾಣ ಸಮೀಪದ ಹೋಟೆಲ್, ಅಂಗಡಿಗಳು ತೆರೆದಿವೆ.
ಉದ್ಯಾವರ : ಮಕ್ಕಳಿಗಾಗಿ ಜಾದೂ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ
Posted On: 08 Dec 2020, 09:33 AM
ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿಯ ನೇತೃತ್ವದಲ್ಲಿ ಉದ್ಯಾವರದ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಸಭಾಭವನದಲ್ಲಿ ಸುವರ್ಣ ಮಹೋತ್ಸವ ವರ್ಷದ 35ನೇ ಕಾರ್ಯಕ್ರಮ ಮಕ್ಕಳಿಗಾಗಿ ಜಾದೂ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯು ಜರಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕಟಪಾಡಿಯ ಬಾಲ ಜಾದೂಗಾರ ಮಾಸ್ಟರ್ ಪ್ರಥಮ್ ಕಾಮತ್ ಜಾದೂ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನೀಡಿದರು. ಕಾರ್ಯಕ್ರಮದಲ್ಲಿ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಧರ್ಮಗುರುಗಳಾದ ರೊಲ್ವಿನ್ ಅರಾನ್ಹ, ಐಸಿವೈಎಂ ಸುವರ್ಣಮಹೋತ್ಸವದ ಅಧ್ಯಕ್ಷರಾದ ಮೈಕಲ್ ಡಿಸೋಜ ಸ್ಟೀವನ್ ಕುಲಸೋ, ಕಾರ್ಯಕ್ರಮದ ಪ್ರಾಯೋಜಕರು ಹಾಗು ಸಿವೈಎ ಮಾಜಿ ಅಧ್ಯಕ್ಷರಾದ ಮೈಕಲ್ ಮಜಾದೋ ಮತ್ತು ಕುಟುಂಬಸ್ಥರು ಮತ್ತಿತರರು ಉಪಸ್ಥಿತರಿದ್ದರು.
ಯುವ ಶಕ್ತಿಯ ಸದ್ಬಳಕೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಜಿ.ಜಗದೀಶ್
Posted On: 07 Dec 2020, 10:43 PM
ಉಡುಪಿ : ಜಿಲ್ಲೆಯ ಯುವಕ ಸಂಘಗಳಲ್ಲಿನ ಯುವಕರಿಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮತ್ತು ಅವರಿಗೆ ಅಗತ್ಯ ತರಬೇತಿಗಳನ್ನು ನೀಡುವ ಮೂಲಕ, ಅವರಲ್ಲಿರುವ ಯುವಶಕ್ತಿಯನ್ನು ಜಿಲ್ಲೆಯ ಅಭಿವೃಧ್ದಿ ಕಾರ್ಯಗಳಿಗೆ ಬಳಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ನೆಹರು ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆಹರು ಯುವಕೇಂದ್ರದ ಮೂಲಕ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಯುವಕ ಸಂಘಗಳ ಸದಸ್ಯರಿಗೆ ಅವರಲ್ಲಿನ ಸಮಾಜಸೇವೆಯ ಗುಣ, ಕೌಶಲ್ಯ ಮತ್ತು ಸಾಹಸ ಪ್ರವೃತ್ತಿಯನ್ನು ಅಭಿವೃದ್ಧಿಗೊಳಿಸುವಂತೆ ಚಟುವಟಿಕೆಗಳನ್ನು ಏರ್ಪಡಿಸಿ. ಯುವಕ ಯುವತಿಯರಿಗೆ ವಿಕೋಪ ನಿರ್ವಹಣೆ ಸೇರಿದಂತೆ ಅತ್ಯಾವಶ್ಯಕ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು ಸಮಾಜದ ನೆರವಿಗೆ ಧಾವಿಸುವಂತಹ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ, ತುರ್ತು ಸಂದರ್ಭದಲ್ಲಿ ಈ ರೀತಿಯ ತರಬೇತಿ ಪಡೆದ ಯುವಕರ ಸೇವೆಯನ್ನು ಜಿಲ್ಲಾಡಳಿತದ ನೆರವಿಗೆ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ನೆಹರು ಯುವ ಕೇಂದ್ರದಿಂದ ಸಿದ್ಧಪಡಿಸುವ ವಾರ್ಷಿಕ ಕಾರ್ಯಕ್ರಮಗಳಲ್ಲಿ, ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಯುವಕರು ತೊಡಗುವಂತಹ ಕಾರ್ಯಕ್ರಮಗಳನ್ನು ರೂಪಿಸಿ, ಉತ್ತಮವಾಗಿ ಕಾರ್ಯನಿರ್ವಹಿಸುವ ಯುವ ತಂಡಗಳನ್ನು ಸೂಕ್ತ ರೀತಿಯಲ್ಲಿ ಪ್ರೋತ್ಸಾಹಿಸಿ, ಯುವಕರಲ್ಲಿ ಆತ್ಮ ವಿಶ್ವಾಸ ಮೂಡಿಸುವಂತಹ ತರಬೇತಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಗತ್ಯವಾದ ತರಬೇತಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುವಂತಹ ತರಬೇತಿಗಳು, ತಮ್ಮ ಗ್ರಾಮಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಆ ಸೌಲಭ್ಯಗಳನ್ನು ಜನರಿಗೆ ದೊರಕಿಸುವ ಕಾರ್ಯಕ್ರಮ ಮತ್ತು ಯುವಕರ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬೆಳವಣಿಗೆಗೆ ಪೂರಕವಾಗುವಂತ ಯೋಜನೆಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಯುವ ಸಂಘಗಳ ಮಾಹಿತಿಯನ್ನು ಸಿದ್ಧಪಡಿಸಿಟ್ಟುಕೊಂಡು, ತುರ್ತು ಸಂದರ್ಭದಲ್ಲಿ ಅವರ ನೆರವು ಪಡೆಯಬೇಕು. ಯುವ ಜನತೆ ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯರ್ಥವಾಗಿ ಕಾಲ ಕಳೆಯದೇ, ಸಾಮಾಜಿಕ ಕಾರ್ಯಗಳಿಂದ ಸಮಾಜಕ್ಕೆ ಅಗತ್ಯ ನೆರವು ನೀಡಬೇಕು. ಯುವಕರು ಸದಾ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಂಡು, ತಮ್ಮಲ್ಲಿನ ಯುವಶಕ್ತಿಯ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತ ನೀಡುವ ಕರೆಗೆ ತಕ್ಷಣ ಸ್ಪಂದಿಸಬೇಕು ಎಂದು ಡಿಸಿ ಜಿ.ಜಗದೀಶ್ ಹೇಳಿದರು. ಜಿಲ್ಲಾ ನೆಹರು ಯುವ ಕೇಂದ್ರದ 2020-21 ನೇ ಸಾಲಿನಲ್ಲಿ ಏರ್ಪಡಿಸಲಾಗುವ ವಾರ್ಷಿಕ ಕಾರ್ಯಕ್ರಮಗಳ ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿ ಅನುಮೋದನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನೆಹರು ಯುವ ಕೇಂದ್ರದ ವಿಷ್ಣುಮೂರ್ತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ವಿಲ್ಪ್ರೆಡ್ ಡಿಸೋಜಾ ಸ್ವಾಗತಿಸಿ, ವಂದಿಸಿದರು.
ಕುಂಜಾರುಗಿರಿ ಪರಶುರಾಮಗೆ ದೀಪೋತ್ಸವ
Posted On: 07 Dec 2020, 09:45 PM
ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಕಾರ್ತಿಕ ಮಾಸದಲ್ಲಿ ದೇವಸ್ಥಾನದ ತಂತ್ರಿಗಳಾದ ವೇ.ಮೂ. ಪಾಡಿಗಾರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ರಂಗಪೂಜಾ ದೀಪೋತ್ಸವ ನಡೆಯಿತು.ಊರ ಪರಊರ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದರು.
ನೀಲಾವರ ಗೋಶಾಲೆಗೆ ಬೈಹುಲ್ಲು ಸಮರ್ಪಣೆ
Posted On: 07 Dec 2020, 05:59 PM
ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವಹಿಂದು ಪರಿಷದ್, ಬಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ ಶಿರ್ವ ವಲಯ ಇವರ ವತಿಯಿಂದ ಗೋಶಾಲೆಗಾಗಿ ಬೈಹುಲ್ಲು ಸಂಗ್ರಹ ಅಭಿಯಾನವನ್ನು ಒಂದು ವಾರ ನಡೆಸಿ ಸುಮಾರು 325 ಕಟ್ಟು ಬೈಹುಲ್ಲನ್ನು ಸಂಗ್ರಹಿಸಿ ನೀಲಾವರ ಗೋಶಾಲೆಗೆ ಸಾಗಿಸಲು ಹಿರಿಯ ಹಿಂದೂ ನೇತಾರರಾದ ಬೆಳ್ಳೆಅಂಗಡಿ ಸದಾನಂದ ಶೆಣೈ ಹಾಗೂ ವಿಶ್ವಹಿಂದು ಪರಿಷದ್ ಶಿರ್ವ ವಲಯದ ಗೌರವಾಧ್ಯಕ್ಷರಾದ ಬೆಳ್ಳೆ ಮಧ್ವರಾಜ ಭಟ್ ಬೆಳ್ಳೆ ಚಾಲನೆ ನೀಡಿದರು. ದೇವಸ್ಥಾನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ,ಸೂರ್ಯೋದಯದಲ್ಲಿ ಎದ್ದು ಪ್ರತಿಯೊಬ್ಬ ಹಿಂದೂ 8 ಶುಭ ವಸ್ತುಗಳನ್ನು ದರ್ಶನ ಮಾಡಬೇಕು, ಅದರಲ್ಲಿ ಮೊದಲಿಗೆ ಗೋವಿನ ದರ್ಶನ ಮಾಡಬೇಕೆಂದು ಶಾಸ್ತ್ರ ತಿಳಿಸಿರುತ್ತದೆ.ಪ್ರಸ್ತುತ ಹೆಚ್ಚಿನವರು 3 ರಿಂದ 10 ಸೆಂಟ್ಸ್ ಜಾಗದಲ್ಲಿ ಮನೆಕಟ್ಟಿ ವಾಸ್ತವ್ಯವಿರುವುದರಿದ ಪ್ರತಿ ಮನೆಯವರು ಗೋವುಗಳನ್ನು ಸಾಕಲು ದರ್ಶನ ಮಾಡಲು ಕಷ್ಟಸಾಧ್ಯ.ಹಿಂದುವಾದವನು ಗೋಸೇವೆ ಮಾಡಲೇಬೇಕು ಸಾಕಲು ಆಗದಿದ್ದರೂ ಸಾಕುವವರಿಗೆ ಪ್ರೋತ್ಸಾಹ ನೀಡುವುದು,ಗೋಗ್ರಾಸ ನೀಡುವುದು ಮಾಡಬಹುದು.ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನೀಲಾವರದಲ್ಲಿ ಸಾವಿರಾರು ಅನಾಥ ಗೋವುಗಳನ್ನು ಸಾಕಾಲು ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ.ಅವರೊಂದಿಗೆ ನಾವು ಕೈಜೋಡಿಸಿ ಅಳಿಲುಸೇವೆ ಮಾಡುವುದು ನಮಗೆ ಸಿಕ್ಕಿರುವ ದೊಡ್ಡ ಅವಕಾಶ ಇದನ್ನು ಸದುಪಯೋಗ ಮಾಡಿಕೊಂಡು ನಿರಂತರವಾಗಿ ಸಮಾಜಕ್ಕಾಗಿ ಗೋವಿಗಾಗಿ ಇಂಥ ಕೆಲಸಗಳನ್ನು ಮಾಡಲು ನಮ್ಮನ್ನು ತೊಡಿಗಿಸಿಕೊಳ್ಳೋಣ ಎಂದು ಬೆಳ್ಳೆ ಮಧ್ವರಾಜ ಭಟ್ ತಿಳಿಸಿದರು. ಅವಿನಾಶ ಆಚಾರ್ಯ ಸ್ವಾಗತಿಸಿ ವಿಶ್ವಹಿಂದು ಪರಿಷದ್ ಶಿರ್ವ ವಲಯದ ಅಧ್ಯಕ್ಷರಾದ ಬೆಳ್ಳೆ ವಿಶ್ವನಾಥ ಶೆಟ್ಟಿ ಧನ್ಯವಾದ ನೀಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷದ್ ಕಾಪು ಪ್ರಖಂಡದ ಕಾರ್ಯದರ್ಶಿ ಜಯಪ್ರಕಾಶ್ ಪ್ರಭು,ಧರ್ಮಪ್ರಚಾರ ಪ್ರಮುಖ್ ರಾಘವೇಂದ್ರ ಶೆಟ್ಟಿ, ಸುರಕ್ಷಾ ಪ್ರಮುಖ್ ಆನಂದ, ವಿಶ್ವಹಿಂದು ಪರಿಷದ್ ಶಿರ್ವ ವಲಯದ ಗೌರವಾಧ್ಯಕ್ಷರಾದ ನಾಗರಾಜ ಭಟ್, ಶಿರ್ವ ವಲಯದ ಗೌರವಾಧ್ಯಕ್ಷರಾದ ನಾಗರಾಜ ಭಟ್,ರಾಷ್ಟ್ರಿಯ ಸ್ವಯಂ ಸೇವಾ ಸಂಘದ ಸೇವಾ ಪ್ರಮುಖ್ ಸುಬ್ರಹ್ಮಣ್ಯ ವಾಗ್ಲೆ, ಹಾಗೂ ಊರಿನ ಹಿರಿಯರಾದ ಪಟೇಲ್ ಮನೆ ದಯಾನಂದ ಶೆಟ್ಟಿ,ಭಟ್ರ ಮನೆ ಪುಂಡರೀಕಾಕ್ಷ ಭಟ್, ದೊಡ್ಡಮನೆ ಅಶೋಕ ಶೆಟ್ಟಿ,ಮತ್ತು ವಿಶ್ವಹಿಂದು ಪರಿಷದ್ ಬಜರಂಗದಳ ಮಟ್ಟಾರು, ಮೂಡುಬೆಳ್ಳೆ, ಬಂಟಕಲ್ಲು,ಎಡ್ಮೇರು,ವಿಷ್ಣುಮೂರ್ತಿ ಶಿರ್ವ,ಪಡುಬೆಳ್ಳೆ ಘಟಕದ ಅಧ್ಯಕ್ಷರು,ಗೋರಕ್ಷಾ ಪ್ರಮುಖ್,ಇನ್ನಿತರ ಪ್ರಮುಖರು,ಕಾರ್ಯಕರ್ತರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಇನ್ನಂಜೆ ಹಾಲು ಉತ್ಪಾದಕರ ಸಂಘಕ್ಕೆ ದ್ವಿತೀಯ ಅತ್ಯುತ್ತಮ ಸಂಘ ಪ್ರಶಸ್ತಿ
Posted On: 07 Dec 2020, 12:31 PM
ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇನ್ನಂಜೆ ಹಾಲು ಉತ್ಪಾದಕರ ಸಂಘುವು 2019 - 2020 ಸಾಲಿನಲ್ಲಿ ದ್ವಿತೀಯ ಅತ್ಯುತ್ತಮ ಸಂಘವೆಂದು ಘೋಷಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಇನ್ನಂಜೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಲಕ್ಷ್ಮಣ ಶೆಟ್ಟಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.
ರಾಜಕೀಯ ಪಕ್ಷಗಳಿಂದ ಕುಲಾಲರ ಬಗ್ಗೆ ನಿರ್ಲಕ್ಷ್ಯ ಸಲ್ಲದು -ಕಾಪು ಕುಲಾಲ ಸಂಘದ ಅಧ್ಯಕ್ಷ ಸಂದೀಪ್ ಬಂಗೇರ.
Posted On: 07 Dec 2020, 07:59 AM
ಕಾಪು :(06/12/2020)ಕುಲಾಲ ಸಂಘ (ರಿ) ಕಾಪು ವಲಯದ ಸಾಮಾನ್ಯ ಸಭೆಯಲ್ಲಿ ಸಂಘದ ಅಧ್ಯಕ್ಷ ಸಂದೀಪ್ ಬಂಗೇರ ಮಾತನಾಡಿ ಕುಲಾಲ ಸಮುದಾಯವನ್ನು ರಾಜಕೀಯವಾಗಿ ಬಳಸಿ ನಮ್ಮ ಸತತ ಮನವಿಗೆ ರಾಜಕೀಯ ಪಕ್ಷಗಳು ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ತಿಳಿಸಿದರು. ಸಭೆಯಲ್ಲಿ ಕಾಪು ಕುಲಾಲ ಸಂಘದ ಪ್ರಧಾನ ಕಾರ್ಯದರ್ಶಿ ಉದಯ ಕುಲಾಲ್, ಕೋಶಧಿಕಾರಿ ಯೋಗೀಶ್ ಕುಲಾಲ್ ಉಳ್ಳೂರು, ಸಂಘದ ಮಾಜಿ ಅಧ್ಯಕ್ಷರು ರಾಜೇಶ್ ಕುಲಾಲ್ ಬೊಬ್ಬೆಟ್ಟು, ಮಹಿಳಾ ಘಟಕದ ಅಧ್ಯಕ್ಷರು ಗೀತಾ ಕುಲಾಲ್ ಶಿರ್ವ, ಕಾರ್ಯದರ್ಶಿ ಸುಮಲತಾ ಇನ್ನಂಜೆ ಸಂಘದ ಸಕ್ರಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು..
