Updated News From Kaup
ಬದ್ರೀಯಾ ಜುಮ್ಮಾ ಮಸೀದಿ ಮಜೂರು ಮಲ್ಲಾರು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ
Posted On: 17 Mar 2025, 11:10 AM
ಕಾಪು : ಬದ್ರೀಯಾ ಜುಮ್ಮಾ ಮಸೀದಿ ಮಜೂರು ಮಲ್ಲಾರು ಇದರ ನೂತನವಾಗಿ ಆಯ್ಕೆಯಾದ ಜಮಾತ್ ಆಡಳಿತ ಸಮಿತಿ ಹಾಗೂ ಜಮಾತ್ ಅಭಿವೃದ್ದಿ ಸಮಿತಿಯ ವತಿಯಿಂದ ದಾನಿಗಳ ನೆರವಿನಿಂದ ವಿವಿದ ಅಭಿವೃದ್ಧಿ ಕಾಮಗಾರಿಗಳನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಈ ಸಂದರ್ಭ ಅವರು ಅಭಿವೃದ್ದಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಜಮಾತ್ ಸಮಿತಿ ಮತ್ತು ಅಬಿವೃದ್ದಿ ಸಮಿತಿ ಹಾಗೂ ದಾನಿಗಳು, ಎಲ್ಲಾ ಜಮಾತಿಗರ ಒಗ್ಗಟ್ಟನ್ನು ಶ್ಲಾಘಿಸಿದರು. ಜಮಾತಿನ ಹಲವಾರು ದಾನಿಗಳ ಮುಖಾಂತರ ಸಮಾರು 10 ಲಕ್ಷದ ಅಭಿವೃದ್ಧಿ ಕಾರ್ಯಗಳು ನಡೆಯಿತು. ಜಮಾತಿನ ಅಧ್ಯಕ್ಷರಾದ ಡಾ. ಯು.ಎಂ.ಫಾರೂಕ್ ಚಂದ್ರನಗರರವರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ರಜಬ್ ಪರ್ಕಳ, ಅಶ್ರಫ್ ಮೂಸ ಮಜೂರು, ಹಸನಬ್ಬ ಸಾಹೇಬ್, ಹಾಜಿಮೋನು, ಉ ಎ ರಶೀದ್, ಸಾದಿಕ್ ಕೆ ಪಿ, ಮಹಮ್ಮದ್, ಶೌಕತ್ ಅಲಿ ಬಾವ, ಅಬ್ದುಲ್ ರಹೀಂ, ಜಮಾತ್ ಆಡಳಿತ ಸಮಿತಿಯ ಸದಸ್ಯರುಗಳು, ಮಾಜಿ ಅಧ್ಯಕ್ಷರುಗಳು ಹಾಗೂ ಜಮಾತಿನ ಸದಸ್ಯರು ಉಸಸ್ಥಿತರಿದ್ದರು. ಮಸೀದಿಯ ಖತೀಬರಾದ ಅಬ್ದುಲ್ ರಶೀದ್ ಸಖಾಫಿ ದುವಾ ಮಾಡಿದರು. ಶರ್ಫುದ್ದೀನ್ ಶೇಖ್ ಸ್ವಾಗತಿಸಿ, ಅಶ್ರಫ್ ಖಾಸಿಂ ಕರಂದಾಡಿ ವಂದಿಸಿದರು.
ತೇಜಸ್ವಿ ಸೂರ್ಯ ದಂಪತಿ : ಕಾಪು ಶ್ರೀ ಹೊಸ ಮಾರಿಗುಡಿ ದೇವಳ ಭೇಟಿ
Posted On: 16 Mar 2025, 10:14 PM
ಕಾಪು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ದಂಪತಿ ಆದಿತ್ಯವಾರ ಸಂಜೆ ದೆಹಲಿಗೆ ಹೊರಡುವ ಮುನ್ನ ಕಾಪು ಮಾರಿಯಮ್ಮನ ದರುಶನ ಪಡೆದರು. ಈ ಸಂದರ್ಭ ದಂಪತಿಗಳಿಗೆ ಅಮ್ಮನ ಅನುಗ್ರಹ ಪ್ರಸಾದವನ್ನು ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ನೀಡಿದರು. ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ದುರ್ಗಾ ಸ್ತುತಿಯನ್ನು ಹಾಡಿದರು. ತೇಜಸ್ವಿ ಸೂರ್ಯ ದೇವಳದ ಶಿಲ್ಪಕಲೆಯ ಕೆತ್ತನೆಯ ವೈಭವವಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಾಧವ ಆರ್. ಪಾಲನ್, ಕಚೇರಿ ನಿರ್ವಹಣಾ ಸಮಿತಿಯ ಮುಖ್ಯ ಸಂಚಾಲಕ ಸುನಿಲ್ ಎಸ್. ಪೂಜಾರಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾಂಜಲಿ ಎಂ. ಸುವರ್ಣ, ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಸಂಚಾಲಕಿ ಅನಿತಾ ಹೆಗ್ಡೆ, ದೇವಳದ ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿ ಭೇಟಿ
Posted On: 16 Mar 2025, 10:45 AM
ಕಾಪು : ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಪ್ರಹ್ಲಾದ್ ಜೋಶಿ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿಯವರು ಪ್ರಹ್ಲಾದ್ ಜೋಶಿ ದಂಪತಿಯನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ಶ್ರೀಧರ ತಂತ್ರಿಯವರು ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು. ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ದೇವಸ್ಥಾನವು ಭಕ್ತಾದಿಗಳ ದೇಣಿಗೆಯಿಂದ ಅತ್ಯಧ್ಭುತವಾಗಿ ಮೂಡಿ ಬಂದಿದೆ. ದೈವ ಭಕ್ತನಾದ ನಾನು ಅತ್ಯಂತ ಭಕ್ತಿಯಿಂದ ಇಲ್ಲಿಗೆ ಬಂದಿದ್ದೇನೆ ಎಂದರು. ಕೇಂದ್ರ ಅಥವಾ ರಾಜ್ಯ ಸರಕಾರದ ಅನುದಾನ ಬಂದಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ, ಕೇಂದ್ರ ಸರಕಾರ ನೇರವಾಗಿ ನೀಡಲಾಗದು, ಆದರೆ ರಾಜ್ಯ ಸರಕಾರದ ಮೂಲಕ ಮನವಿ ಬಂದರೆ ನೋಡೋಣ ಎಂದರು. ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಯೋಗೀಶ್ ವಿ. ಶೆಟ್ಟಿ, ರಮೇಶ್ ಹೆಗಡೆ ಕಲ್ಯ, ಉಡುಪಿ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಜಿತೇಂದ್ರ ಶೆಟ್ಟಿ, ಗೀತಾಂಜಲಿ ಸುವರ್ಣ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಮಾ.13 :ಪಾಂಗಾಳದಲ್ಲಿ ನಡೆಯಲಿದೆ ವೈಭವದ ಸಿರಿಜಾತ್ರೆ
Posted On: 12 Mar 2025, 10:00 AM
ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಮಾ.13, ಗುರುವಾರದಂದು ಜರಗಲಿದೆ. ಮಾ.13, ಗುರುವಾರದಂದು ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣದಿಂದ ಪ್ರಾರಂಭಗೊಂಡು ಮಧ್ಯಾಹ್ನ 12-30 ಕ್ಕೆ ಮಹಾಪೂಜೆ, 12-45 ಕ್ಕೆ ಬ್ರಾಹ್ಮಣ ಸುಹಾಸಿನಿ ಆರಾಧನೆ, ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ. ರಾತ್ರಿ 08:30 ಕ್ಕೆ ಭಂಡಾರ ಚಾವಡಿಯಿಂದ ಪರಿವಾರ ದೈವಗಳ ಭಂಡಾರ ಹೊರಟು ರಾತ್ರಿ 09-30 ಕ್ಕೆ ವೈಭವ್ ಬೈಗಿನ ಬಲಿ ನಡೆಯಲಿರುವುದು. ರಾತ್ರಿ 11 ಕ್ಕೆ ಕುಮಾರ ದರ್ಶನ , ರಾತ್ರಿ 1 ಕ್ಕೆ ರಂಗಪೂಜೆ, ರಾತ್ರಿ 2:30 ಕ್ಕೆ ಬ್ರಹ್ಮಮಂಡಲ, ರಾತ್ರಿ 3:30 ಕ್ಕೆ ಭೂತಬಲಿ, ರಾತ್ರಿ 4:30 ರಿಂದ ತುಲಾಭಾರ ಸೇವೆಗಳು ನಡೆಯಲಿದೆ. ಮಾ.14, ಶುಕ್ರವಾರ ಬೆಳಿಗ್ಗೆ 11ಕ್ಕೆ ಮಹಾಪೂಜೆ, ಸಂಜೆ 7 ಕ್ಕೆ ತಪ್ಪಂಗಾಯಿ ಬಲಿ, ರಾತ್ರಿ 8:30 ಕ್ಕೆ ದೂಳು ಮಂಡಲ, ನಂತರ ಭೂತಬಲಿ, ಕವಾಟಬಂಧನ, ಶಯನೋತ್ಸವ ಮಾ.15, ಶನಿವಾರ ಬೆಳಿಗ್ಗೆ 07-00 ಕ್ಕೆ ಕವಾಟೋದ್ಘಾಟನೆ, ನಂತರ ಮಹಾಪೂಜೆ, ಸಾಯಂಕಾಲ 05:00 ಕ್ಕೆ ಬಲಿ ಹೊರಟು ಕಟ್ಟೆಪೂಜೆ, ಅವಭೃತ ಸ್ನಾನ ನಡೆದು ಧ್ವಜಾವರೋಹಣಗೊಳ್ಳುವುದರ ಮೂಲಕ ಮೂರು ದಿನಗಳ ಗೌಣೋತ್ಸವು ಸಮಾಪ್ತಿಯಾಗುತ್ತದೆ. ಭಕ್ತಾದಿಗಳು ಕುಟುಂಬ ಸಮೇತರಾಗಿ ಆಗಮಿಸಿ, ಮಹೋತ್ಸವದಲ್ಲಿ ಭಾಗಿಯಾಗಿ ಶ್ರೀ ಬ್ರಹ್ಮಲಿಂಗೇಶ್ವರ ದೇವರ, ನಾಗದೇವರ ಹಾಗೂ ಶ್ರೀ ಧರ್ಮ ದೈವಗಳ ಕೃಪೆಗೆ ಪಾತ್ರರಾಗಿ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಬೇಕಾಗಿ ದೇವಸ್ಥಾನದ ಪ್ರಕಟಣೆಯು ತಿಳಿಸಿದೆ.
ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ : 21ನೇ ವರ್ಷದ ಸಂಭ್ರಮ ಕಲಾಸಂಗಮ -2025
Posted On: 11 Mar 2025, 10:50 AM
ಉಡುಪಿ : ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ 21ನೇ ವರ್ಷದ ಸಂಭ್ರಮ ಕಲಾಸಂಗಮ -2025 ಕಾರ್ಯಕ್ರಮವು ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಸರ್ವೋದಯ ಶೆಟ್ಟಿಗಾರ್ ಪರ್ಕಳ ಮತ್ತು ಸ್ವಾಗತ ಹೋಟೆಲ್ ಮಾಲಕ ಮೋಹನ್ ದಾಸ್ ನಾಯಕ್ ಪರ್ಕಳ ಉದ್ಘಾಟಿಸಿ ಶುಭ ಹಾರೈಸಿದರು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ ಗೌರವಾಧ್ಯಕ್ಷರಾದ ಶ್ರೀನಿವಾಸ ಉಪಾಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮದ್ವರಾಜ್, ತುಳು ಚಲನಚಿತ್ರ, ನಾಟಕ ಕಲಾವಿದ ಭೋಜರಾಜ ವಾಮಂಜೂರು, ಆಧುನಿಕ ಭಗೀರಥ ಪದ್ಮಶ್ರೀ ಅಮೈ ಮಾಲಿಂಗ ನಾಯ್ಕ್, ಚಲನಚಿತ್ರ ನಟ ಯೋಗೇಶ್ ಶೆಟ್ಟಿ ಧರ್ಮೆಮಾರ್, ಕವಿ ಸಾಹಿತಿ ವಸಂತ್ ಕುಮಾರ್ ಪೆರ್ಲ, ಬೂಧ ಶೆಟ್ಟಿಗಾರ್, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಘವೇಂದ್ರ ಪ್ರಭು ಕರ್ವಾಲು, ಎಂ ಮನೋಹರ್, ಮಹೇಶ್ ಮರ್ಣೆ, ಕೇಶವ ಕೋಟ್ಯಾನ್ ಇವರನ್ನು ಸನ್ಮಾನಿಸಲಾಯಿತು. ಸಾನ್ವಿ ಪ್ರಾರ್ಥಿಸಿದರು. ರವೀಂದ್ರ ನಾಯಕ್ ಸಣ್ಣಕಿಬೆಟ್ಟು ಸ್ವಾಗತಿಸಿದರು. ಶ್ರೀನಿವಾಸ್ ನಾಯಕ್ ಚಕ್ರತೀರ್ಥ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತೋನ್ಸೆ ಪುಷ್ಕಲ್ ಕುಮಾರ್ ಇವರಿಂದ ಹರಿಕಥಾ ಕಾಲಕ್ಷೇಪ, ಮಹಾಲಿಂಗೇಶ್ವರ ನಾಟ್ಯ ತಂಡ ಇವರಿಂದ ದೀಕ್ಷಾ ಗುಂಡುಪಾದೆ ಇವರ ನಿರ್ದೇಶನದಲ್ಲಿ ನೃತ್ಯರೂಪಕ, ಸಿಂಚನ ಮ್ಯೂಸಿಕಲ್ಸ್ ಇವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.
ಕಾಪು ಲಯನ್ಸ್ ಕ್ಲಬ್ : ಜಿಲ್ಲಾ ಗವರ್ನರ್ ಭೇಟಿ
Posted On: 10 Mar 2025, 11:20 PM
ಕಾಪು : ಕಾಪು ಲಯನ್ಸ್ ಕ್ಲಬ್ ಗೆ ಜಿಲ್ಲಾ ಗವರ್ನರ್ ಭೇಟಿ ಕಾರ್ಯಕ್ರಮ ಸೋಮವಾರ ಕಾಪುವಿನ K1 ಹೋಟೆಲ್ ಸಭಾಂಗಣದಲ್ಲಿ ಜರಗಿತು. ಜಿಲ್ಲಾ ಗವರ್ನರ್ ಹನೀಫ್ ಮೊಹಮ್ಮದ್ ರವರು ಮಾತನಾಡಿ, ಕಾಪು ಲಯನ್ಸ್ ಸುಮಾರು 48 ವರ್ಷಗಳ ಇತಿಹಾಸವುಳ್ಳ ಕ್ಲಬ್ ಆಗಿದು, ಉತ್ತಮ ಸಮಾಜ ಸೇವೆ ಮಾಡುವ ಮೂಲಕ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಕ್ಲಬ್ಬಿಗೆ ಒಳ್ಳೆಯ ಸದಸ್ಯರನ್ನು ಸೇರಿಸಿ ಗೋಲ್ಡನ್ ಜುಬ್ಲಿಯನ್ನು ಆಚರಿಸುವಂತಾಗಲಿ ಎಂದು ಹಾರೈಸಿದರು. ಸನ್ಮಾನ : ಕರ್ನಾಟಕ ಸರಕಾರದಿಂದ ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ಆಯ್ಕೆಯಾದ ಹರೀಶ್ ನಾಯಕ್ ಕಾಪು ರವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಪ್ರಥಮ ಉಪ ಡಿಸ್ಟ್ರಿಕ್ಟ್ ಗವರ್ನರ್ ಸಪ್ನಾ ಸುರೇಶ್ ರವರು ಕಾಪು ಕ್ಲಬ್ಬಿನ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು. ಮಾಜಿ ಜಿಲ್ಲಾ ಗವರ್ನರ್ ಸುರೇಶ್ ಶೆಟ್ಟಿ , ಕ್ಯಾಬಿನೆಟ್ ಸೆಕ್ರೆಟರಿ ಗಿರೀಶ್ ರಾವ್, ವಲಯ ಅಧ್ಯಕ್ಷ ಮೇಲ್ವಿನ್ ಮ್ಯಾಕ್ಸಿಮ್ ಡಿಸೋಜಾ, ಎಲ್ಸಿಎಫ್ ಕೋಆರ್ಡಿನೇಟರ್ ಹರಿಪ್ರಸಾದ್ ರೈ, ಶೇಖರ್ ಶೆಟ್ಟಿ, ಚಾರ್ಟರ್ ಸದಸ್ಯ ಡಾ. ಗಂಗಾಧರ್ ಶೆಟ್ಟಿ, ನಾಗರಾಜ ರಾವ್ ಉಪಸ್ಥಿತರಿದ್ದರು. ಅಧಕ್ಷರಾದ ಉದಯ ಶೆಟ್ಟಿ ಸ್ವಾಗತಿಸಿ, ಪ್ರಾಂತ್ಯ ಅಧ್ಯಕ್ಷರಾದ ವರುಣ್ ಶೆಟ್ಟಿ ವರದಿ ವಾಚಿಸಿದರು. ಕಾರ್ಯದರ್ಶಿ ಸಂತೋಷ್ ಶೆಟ್ಟಿ ವಂದಿಸಿದರು.
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ : ಬಾಲಾಲಯಗಳ ಶಿಲಾನ್ಯಾಸ
Posted On: 06 Mar 2025, 09:18 PM
ಪಡುಬಿದ್ರಿ : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಸಮಗ್ರ ಜೀರ್ಣೋದ್ದಾರವು ಶೀಘ್ರದಲ್ಲಿ ನಡೆಯಲ್ಲಿದ್ದು ಅದರ ಪೂರ್ವಭಾವಿಯಾಗಿ ಮಾ.6ರ ಪೂರ್ವಾಹ್ನ ವೃಷಭ ಲಗ್ನ ಸುಮೂರ್ತದಲ್ಲಿ ಶ್ರೀ ದೇವಳದ ತಂತ್ರಿಗಳಾದ ಕಂಬಳ ಕಟ್ಟ ಶ್ರೀ ರಾಧಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಶ್ರೀ ದೇವರ ಬಾಲಾಲಯಗಳ ಶಿಲಾನ್ಯಾಸದ ಧಾರ್ಮಿಕ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ನೆರವೇರಿತು. ಈ ಸಂದರ್ಭ ಶ್ರೀ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.
ಮಾತೃಭಾಷೆಯೇ ಇತರ ಭಾಷಾ ಕಲಿಕೆಯ ತಳಹದಿ : ಬಿ.ಪುಂಡಲೀಕ ಮರಾಠೆ ಶಿರ್ವ
Posted On: 06 Mar 2025, 09:14 PM
ಶಿರ್ವ : ಶತಮಾನೋತ್ಸವ ಸಂಭ್ರಮದ ಹೊಸ್ತಿಲಲ್ಲಿರುವ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ಹಿ.ಪ್ರಾ.ಶಾಲಾ ಶಿಕ್ಷಕ, ಪೋಷಕರ ಸಭೆ ಗುರುವಾರ ಜರಗಿತು. ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಶಿರ್ವ ಮಾತನಾಡಿ, ಮನೆಯ ವಾತಾವರಣ, ಸಂಸ್ಕಾರ, ಪರಿಸರ ಮಗುವಿನ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. 9 ವರ್ಷದ ಒಳಗೆ ಮಕ್ಕಳಿಗೆ ಕೊಡುವ ಬಾಲ್ಯದ ಸಂಸ್ಕಾರಯುಕ್ತ ಶಿಕ್ಷಣವೇ ಭವಿಷ್ಯದ ದಿಕ್ಸೂಚಿಯಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಣ ವ್ಯಕ್ತಿಯ ಭವಿಷ್ಯದ ಭದ್ರ ಬುನಾದಿಯಾಗಿದೆ. ಮಗುವಿಗೆ ಆರಂಭದ ಶಿಕ್ಷಣ ಮಾತೃಭಾಷೆಯಲ್ಲಿಯೇ ನೀಡಬೇಕು. ಮಾತೃಭಾಷೆಯೇ ಇತರ ಭಾಷಾ ಕಲಿಕೆಯ ತಳಹದಿ ಎಂದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ರಾಮದಾಸ್ ಪ್ರಭು ವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶಶಿಧರ ವಾಗ್ಲೆ, ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ ಪ್ರಭು ಪಾಲಮೆ, ಎಸ್ಡಿಎಮ್ಸಿ ಅಧ್ಯಕ್ಷ ರವೀಂದ್ರ ಪಾಟ್ಕರ್, ಶ್ರೀದೇವಳದ ಆಡಳಿತ ಮೊಕ್ತೇಸರ ಗಂಪದಬೈಲು ಜಯರಾಮ ಪ್ರಭು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಹಬ್ಬದ ಪ್ರಮಾಣಪತ್ರವನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಸಂಗೀತಾ ಆರ್. ಪಾಟ್ಕರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ರೇಶ್ಮಾ ಪರಿಚಯಿಸಿದರು. ಶಿಕ್ಷಕಿ ಸುಮತಿ ಸಹಕರಿಸಿದರು. ಶಿಕ್ಷಕಿ ಶಾಲಿನಿ ಜಿ. ನಿರೂಪಿಸಿ, ಶಿಕ್ಷಕಿ ವಿನುತಾ ಆರ್. ವಂದಿಸಿದರು.
ಬೆಳ್ಳೆ ಗ್ರಾ.ಪಂ.ಪರಿಸರದಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ
Posted On: 06 Mar 2025, 09:01 PM
ಶಿರ್ವ : ಬೆಳ್ಳೆ ಗ್ರಾಮ ಪಂಚಾಯತ್ ಬೆಳ್ಳೆ, ಉಷಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ನಿಟ್ಟೆ ಇದರ "ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ-2025" ಬೆಳ್ಳೆಯಲ್ಲಿ ಜರುಗುತ್ತಿದ್ದು, ಬುಧವಾರ ವಿದ್ಯಾರ್ಥಿಗಳು ಬೆಳ್ಳೆ ಗ್ರಾಮ ಪಂಚಾಯತ್ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು. ಪರಿಸರ ಸ್ವಚ್ಛತಾ ಸೇವೆಗಾಗಿ ಶಿಬಿರಾರ್ಥಿಗಳನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಿಬಿರಾಧಿಕಾರಿಗಳು, ಸಂಸ್ಥೆಯ ಉಪನ್ಯಾಸಕರು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿವರ್ಗ,ಆರೋಗ್ಯ ಇಲಾಖೆ ಕಾರ್ಯಕರ್ತರು, ಎಸ್ಎಲ್ಆರ್ಎಮ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶಾಭಿಷೇಕ ಸಂಪನ್ನ
Posted On: 05 Mar 2025, 11:08 PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಮಾರಿಯಮ್ಮನ ಬ್ರಹ್ಮಕಲಶಾಭಿಷೇಕವು ವಿಜ್ರಂಭಣೆಯಿಂದ ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಪನ್ನಗೊಂಡಿತು. ಕೊರಂಗ್ರಪಾಡಿ ವೇ.ಮೂ. ಕೆ ಜಿ. ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿಗಳ ನೇತೃತ್ವದಲ್ಲಿ ಅರ್ಚಕರಾದ ವೇ.ಮೂ. ಕಲ್ಯ ಶ್ರೀನಿವಾಸ ತಂತ್ರಿಗಳ ಸಹಯೋಗದೊಂದಿಗೆ ಬೆಳಿಗ್ಗೆ ಮಂಗಲಗಣಯಾಗ, ಶಾಂಭವೀಕಲಾ ಮಾತೃ ಕಾರಾಧನಮ್, ಕಾಲ ರಾತ್ರಿ ಕಲಾಮಾತೃಕಾ ಮಂಡಲಾರ್ಚನಮ್, ಕಾಪು ಮಾರಿಯಮ್ಮನ ಮಹಾ ಬ್ರಹ್ಮಕಲಶಾಭಿಷೇಕ, ಪ್ರತ್ಯಂಗಿರಾ ಕಲಾಮಾತೃಕಾ ಮಂಡಲಪೂಜನಮ್, ನ್ಯಾಸ ಪೂಜಾ ಮಹಾಪೂಜಾ ಮಂಗಲ ಮಂತ್ರಾಕ್ಷತೆ ಜರಗಿತು. ಪಲ್ಲ ಪೂಜೆ ನಡೆದ ಬಳಿಕ ಮಹಾ ಅನ್ನ ಸಂತರ್ಪಣೆ ನಡೆಯಿತು. ಉಡುಪಿ, ದ.ಕ, ಮುಂಬಯಿ, ವಿದೇಶದಿಂದಲೂ ಬಂದ ಲಕ್ಷಾಂತರ ಮಂದಿ ಭಕ್ತರು ಶ್ರೀ ಮಾರಿಯಮ್ಮನ ದರ್ಶನ ಪಡೆದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಬ್ರಹ್ಮ ಕಲಶೋತ್ಸವ ಸಮಿತಿಯ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾಪು ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರು ಗುರ್ಮೆ ಸುರೇಶ್ ಶೆಟ್ಟಿ, ಉಪಾಧ್ಯಕ್ಷರುಗಳಾದ ಕಾಪು ದಿವಾಕರ ಶೆಟ್ಟಿ ಕೊತ್ವಾಲ ಗುತ್ತು, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಮೆಂಡನ್, ರಘುಪತಿ ಭಟ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಮಾಧವ ಆರ್ ಪಾಲನ್, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಗಂಗಾಧರ ಸುವರ್ಣ, ಮನೋಹರ್ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ರವಿಕಿರಣ್, ಸದಸ್ಯರುಗಳಾದ ಕೆ.ಚಂದ್ರಶೇಖರ್ ಅಮೀನ್, ನಿರ್ಮಲ್ ಕುಮಾರ್ ಹೆಗ್ಡೆ, ಯೋಗೀಶ್ ವಿ. ಶೆಟ್ಟಿ, ರಾಜೇಶ್ ಕಾಂಚನ್, ವಿದ್ಯಾಧರ್ ಪುರಾಣಿಕ್, ಬ್ರಹ್ಮ ಕಲಶೋತ್ಸವ ಸಮಿತಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಉದಯ್ ಸುಂದರ ಶೆಟ್ಟಿ, ಜಯ ಸಿ. ಕೋಟ್ಯಾನ್, ಭಾಸ್ಕರ್ ಎಮ್. ಸಾಲಿಯಾನ್, ಭಗವಾನ್ ದಾಸ್ ಶೆಟ್ಟಿಗಾರ್, ಯೋಗೀಶ್ ಪಿ ಶೆಟ್ಟಿ ಬಾಲಾಜಿ, ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ಜೊತೆ ಕಾರ್ಯದರ್ಶಿ ಅರುಣ್ ಶೆಟ್ಟಿ ಪಾದೂರು, ಕೋಶಾಧಿಕಾರಿ ಸಿಎ ಸುದೇಶ್ ರೈ, ವ್ಯವಸ್ಥಾಪನಾ ಸಮಿತಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಸದಸ್ಯರುಗಳಾದ ಶ್ರೀನಿವಾಸ ತಂತ್ರಿ ಕಲ್ಯ, ಶೇಖರ್ ಸಾಲಿಯಾನ್, ಮನೋಹರ್ ರಾವ್, ರವೀಂದ್ರ ಮಲ್ಲಾರ್, ಶ್ರೀಧರ್ ಕಾಂಚನ್, ಜಯಲಕ್ಷ್ಮಿ ಶೆಟ್ಟಿ, ಚರಿತ ದೇವಾಡಿಗ, ಮುಂಬಯಿ ಸಮಿತಿ ಅಲ್ಲದೆ ಇತರ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾವಿರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು. ಧಾರ್ಮಿಕ ಸಭಾ ಕಾರ್ಯಕ್ರಮದ ಜೊತೆಗೆ ಖ್ಯಾತ ಸ್ಯಾಕ್ಸೋಫೋನ್ ವಾದಕಿ ಭಾರತಿ ಗೋಪಾಲ್ ಶಿವಪುರ ಇವರಿಂದ ಸ್ಯಾಕ್ಸೋಫೋನ್ ವಾದನ ಮತ್ತು ಖ್ಯಾತ ಸಂಗೀತ ಕಲಾವಿದ ರಘು ದೀಕ್ಷಿತ್ ಮತ್ತು ಬಳಗದವರಿಂದ ಸಂಗೀತ ಸಂಜೆ ಜರಗಿತು.
