Updated News From Kaup

ಕಳತ್ತೂರು ಟೈಗರ್ಸ್ ವತಿಯಿಂದ ಕಳತ್ತೂರು ಗರಡಿ ಜೀರ್ಣೋದ್ಧಾರಕ್ಕೆ ರೂ. 1ಲಕ್ಷ 60 ಸಾವಿರ ದೇಣಿಗೆ

Posted On: 28-12-2024 12:54PM

ಕಾಪು : ಕಳತ್ತೂರು ಟೈಗರ್ಸ್ ವತಿಯಿಂದ ನಡೆದ ದ್ವಿತೀಯ ವರ್ಷದ ಪಿಲಿನಲಿಕೆ ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣದಲ್ಲಿ ಕಳತ್ತೂರು ಬ್ರಹ್ಮ ಬೈದರ್ಕಳ ಗರಡಿ ಜೀರ್ಣೋದ್ಧಾರ ಕಾರ್ಯಕ್ಕೆ ರೂ. 1,60,000 ವನ್ನು ದೇಣಿಗೆ ನೀಡಲಾಯಿತು.

ಪಲಿಮಾರು : ಮುರಿದು ಬೀಳುವಂತಿದ್ದ ಸಂಕ - ವೃದ್ಧರ ಕಷ್ಟಕ್ಕೆ ಸ್ಪಂದಿಸಿದ ಕಾಪು ತಹಶಿಲ್ದಾರ್

Posted On: 28-12-2024 12:39PM

ಪಲಿಮಾರು : ಗಲ್ಲಿ ಗಲ್ಲಿಗೂ ರಸ್ತೆಗಳಿರುವ ಈ ಕಾಲದಲ್ಲಿ ಒಂದೆಡೆ ರಸ್ತೆ ಸಂಪರ್ಕವೂ ಇಲ್ಲ. ಮತ್ತೊಂದೆಡೆ ಹೊಳೆಯ ಮೇಲಿನ ಶಿಥಿಲಗೊಂಡ ಕಾಲು ಸಂಕ ದಾಟಿ ಮನೆ ಸೇರಬೇಕಾದ ವೃದ್ಧ ದಂಪತಿಗಳು ಇಂತಹ ಸ್ಥಿತಿ ಕಂಡು ಬಂದದ್ದು ಪಲಿಮಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅವರಾಲು ಮಟ್ಟುವಿನಲ್ಲಿ. ಇದೀಗ ಸುರಕ್ಷಿತ ಸೇತುವೆ ನಿರ್ಮಿಸಿಕೊಡುವ ಭರವಸೆ ಕಾಪು ತಾಲೂಕು ತಹಶಿಲ್ದಾರ್ ಮೂಲಕ ದೊರಕಿದೆ.

ಕಾಪು : ತೆಂಗು, ಮಲ್ಲಿಗೆ, ಭತ್ತ ಬೆಳೆಯ ಮಾಹಿತಿ ; ಅತ್ಯುತ್ತಮ ಕೃಷಿಕ ಪ್ರಶಸ್ತಿ ಪ್ರಧಾನ

Posted On: 26-12-2024 03:52PM

ಕಾಪು : ಕಾಪು ಸಹಕಾರಿ ವ್ಯವಸಾಯಿಕ ಸಂಘ (ನಿ.) ಕಾಪು ಉಳಿಯಾರಗೋಳಿ ವತಿಯಿಂದ ವೈಜ್ಞಾನಿಕ ತೆಂಗು ಬೇಸಾಯ ಮತ್ತು ಮಲ್ಲಿಗೆ ಕೃಷಿ, ಭತ್ತದ ಬೆಳೆಯಲ್ಲಿ ಲಾಭದಾಯಕ ಕ್ರಮಗಳು ಹಾಗೂ ಹೈನುಗಾರಿಕೆಯ ಬಗ್ಗೆ ಸಮಗ್ರ ಮಾಹಿತಿ ಕಾರ್ಯಕ್ರಮ ಮತ್ತು ಅತ್ಯುತ್ತಮ ಕೃಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕಾಪು ಶ್ರೀ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಕಾಪು ಇದರ ಆಡಳಿತ ಮೊಕ್ತೇಸರ ಮನೋಹರ ಎಸ್ ಶೆಟ್ಟಿ, ಕೃಷಿಕರ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ಬೆಲೆ ದೊರೆಯುತ್ತಿಲ್ಲ. ಸಹಕಾರಿ ವ್ಯವಸಾಯಿಕ ಸಂಘಗಳ ಮೂಲಕ ರೈತರಿಗೆ ಬೆಳೆ ಕಟಾವು, ಇನ್ನಿತರ ಯಂತ್ರಗಳನ್ನು ರಿಯಾಯಿತಿ ದರದಲ್ಲಿ ನೀಡುವ ಮೂಲಕ ಮಧ್ಯವರ್ತಿಗಳಿಂದ ಆಗುವ ನಷ್ಟ ತಪ್ಪಿಸಬೇಕಾಗಿದೆ. ಯುವಕರು ಕೃಷಿ ಬಗ್ಗೆ ಆಸಕ್ತಿ ವಹಿಸಬೇಕಿದೆ ಎಂದರು.

ಡಿ.29 : ಶಂಕರಪುರದಲ್ಲಿ ರೋಟರಿ ಸಮುದಾಯದಳ ಜಿಲ್ಲಾ ಸಮ್ಮೇಳನ

Posted On: 26-12-2024 03:09PM

ಕಾಪು : ರೋಟರಿ ಕ್ಲಬ್ ಶಿರ್ವ ಮತ್ತು ರೋಟರಿ ಸಮುದಾಯದಳ ಪಾದೂರು ಇದರ ಆಶ್ರಯದಲ್ಲಿ ಒಂದು ದಿನದ ರೋಟರಿ ಸಮುದಾಯದಳ ಜಿಲ್ಲಾ ಸಮ್ಮೇಳನ 2024-25 "ಬೆಸುಗೆ" ಡಿ.29, ರವಿವಾರ ಶಂಕರಪುರ ಸೈಂಟ್ ಜೋನ್ಸ್ ಶಾಲಾ ಸಭಾಂಗಣದಲ್ಲಿ ಜರುಗಲಿದೆ ಎಂದು ರೋಟರಿ ಸಮುದಾಯದಳದ ಜಿಲ್ಲಾ ಛೆರ್ಮನ್ ಬಿ.ಪುಂಡಲೀಕ ಮರಾಠೆ ತಿಳಿಸಿದರು. ಅವರು ಗುರುವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಎಪಿಜೆ ಅಬ್ದುಲ್ ಕಲಾಂ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಡಾ.ಯು.ಎಂ ಫಾರೂಕ್ ಚಂದ್ರನಗರ ಆಯ್ಕೆ

Posted On: 25-12-2024 07:21AM

ಕಾಪು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಬೆಂಗಳೂರು (ರಿ.) ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ-2024 ಹಾಗೂ ವಿಶ್ವ ಮಾನವ ದಿನಾಚರಣೆಯ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆ ಕಾಪುವಿನ ಸಮಾಜ ಸೇವಕ ಬಟರ್ ಫ್ಲೈ ಗೆಸ್ಟ್ ಹೌಸ್ ನ ಆಡಳಿತ ನಿರ್ದೇಶಕರಾದ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆಗಾಗಿ ಕೊಡಲ್ಪಡುವ ಡಾ. ಎಪಿಜೆ ಅಬ್ದುಲ್ ಕಲಾಂ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ಡಿ.29 ರಂದು ಕಲಾಗ್ರಾಮ ಜ್ಞಾನಭಾರತಿ ಯೂನಿವರ್ಸಿಟಿ ಸಭಾಂಗಣದಲ್ಲಿ ರಾಜ್ಯದ ಸ್ವಾಮೀಜಿಗಳು ರಾಜಕೀಯ ಗಣ್ಯತಿಗಣ್ಯರು ಸಾಹಿತಿಗಳು ನೀಡಿ ಗೌರವಿಸಲಿದ್ದಾರೆಂದು ಸಂಘದ ಅಧ್ಯಕ್ಷರಾದ ಕು| ನಿತ್ಯ ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂಬೈ :14ನೇ ರಾಜ್ಯಮಟ್ಟದ ಓಪನ್ ಸೀ ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ ದಿಶಿತಾ ಚಂದ್ರಶೇಖರ್ ಗೆ ಫಿನಿಶರ್ ಪದಕ

Posted On: 24-12-2024 08:04PM

ಮುಂಬೈ : ಸಿಂಧುದುರ್ಗ್ ಜಿಲ್ಲಾ ಅಕ್ವೆಟಿಕ್ ಅಸೋಸಿಯೇಷನ್ ಆಶ್ರಯದಲ್ಲಿ ಚಿವ್ಲ ಬೀಚ್ ಮಾಲವಣದಲ್ಲಿ ಜರುಗಿದ 14ನೇ ರಾಜ್ಯಮಟ್ಟದ ಓಪನ್ ಸೀ ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ ದಿಶಿತಾ ಚಂದ್ರಶೇಖರ್ ಫಿನಿಶರ್ ಪದಕ ಗಳಿಸಿರುತ್ತಾರೆ.

ರಜತ ಸಂಭ್ರಮದಲ್ಲಿ ದಿ. ಸೂರ್ಯ ಕುಲಾಲ್ ಸ್ಥಾಪನೆಯ ಕಳತ್ತೂರು ಕುಕ್ಕುಂಜ ಅಯ್ಯಪ್ಪ ಶಿಬಿ

Posted On: 24-12-2024 03:57PM

ಕಾಪು : ಇಲ್ಲಿಯ ಕುತ್ಯಾರು ಕುಕ್ಕುಂಜದ ದಿ. ಸೂರ್ಯ ಕುಲಾಲ್ ಅವರ ಮುಖೆನ ಆರಂಭಗೊಂಡ ಶ್ರೀ ಅಯ್ಯಪ್ಪ ಭಕ್ತವೃಂದ (ರಿ.) ಕುಕ್ಕುಂಜ ಕಳತ್ತೂರು ಇದರ 25 ನೇ ವರ್ಷದ ಕಾರ್ಯಕ್ರಮ ಜ.10 ರಂದು ನಡೆಯಲಿದ್ದು ಆ ಪ್ರಯುಕ್ತ ಜ. 8 ರ ಬುಧವಾರ ರಾತ್ರಿ 9 ಗಂಟೆಗೆ ಶ್ರೀ ಅಯ್ಯಪ್ಪ ದೇವರ ದೀಪೋತ್ಸವ, ಜ.10 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ, ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಹಾಗೂ ಅಂದು ರಾತ್ರಿ 9 ಗಂಟೆಗೆ ಸಸಿಹಿತ್ಲು ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ಅಯ್ಯಪ್ಪ ಕ್ಷೇತ್ರ ಮಹಾತ್ಮೆ,ರಾತ್ರಿ 8.30 ರಿಂದ ಅನ್ನ ಸಂತರ್ಪಣೆ ನಡೆಯಲಿದ್ದು ಭಕ್ತರು ಆಗಮಿಸಿ, ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶಿಬಿರದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುವರು.

ಭಾರತ ತಂಡಕ್ಕೆ ಕಾಪು ಮೂಲದ ತನುಷ್ ಕೋಟ್ಯಾನ್ ಆಯ್ಕೆ

Posted On: 24-12-2024 03:51PM

ಕಾಪು : ಕಾಪು ಮೂಲದ ತನುಷ್ ಕೋಟ್ಯಾನ್ ಭಾರತ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಸಮಾಲೋಚನಾ ಸಭೆ

Posted On: 24-12-2024 03:31PM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ (ರಿ.) ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು ಇದರ ವ್ಯವಸ್ಥಾಪನಾ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯಿಂದ ಜಂಟಿ ಸಭೆಯು ಸೋಮವಾರ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಲಯದಲ್ಲಿ ನಡೆಯಿತು.

ಸರಕಾರಿ ಸಂಯುಕ್ತ ಪ್ರೌಢ ಶಾಲೆ ಬೆಳಪು : ಶಾಲಾ ವಾರ್ಷಿಕೋತ್ಸವ

Posted On: 24-12-2024 02:56PM

ಕಾಪು : ಸರಕಾರಿ ಸಂಯುಕ್ತ ಪ್ರೌಢ ಶಾಲೆ ಬೆಳಪು ಇದರ ಶಾಲಾ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರಗಿತು. ಕಾರ್ಯಕ್ರಮವನ್ನು ಕಾಪು ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿ ಶುಭ ಹಾರೈಸಿದರು.