Updated News From Kaup

ಎಂ. ಬಿ. ಕುಕ್ಯಾನ್ ನಿಧನ

Thumbnail
Posted On: 09 Jan 2021, 08:57 PM

ಸಾಹಿತಿ, ಅಕ್ಷಯ ಪತ್ರಿಕೆಯ ಸಂಪಾದಕರು, ಭಾರತ್ ಬ್ಯಾಂಕ್ ನ ಮಾಜಿ ಕಾರ್ಯಧ್ಯಕ್ಷರು ಆದ ಎಂ. ಬಿ. ಕುಕ್ಯಾನ್ ರವರು ಇಂದು ಮುಂಜಾನೆ 4-30 ಕ್ಕೆ ನಿಧನರಾಗಿದ್ದಾರೆ.

ಪಡುಬಿದ್ರಿ : ಕಲ್ಲಟ್ಟೆ ಶ್ರೀ ಜಾರಂದಾಯ ಬಂಟ ದೈವದ ವಾರ್ಷಿಕ ನೇಮೋತ್ಸವ

Thumbnail
Posted On: 07 Jan 2021, 03:44 PM

ಕಲ್ಲಟ್ಟೆ ಶ್ರೀ ಜಾರಂದಾಯ ಬಂಟ ದೈವದ ನೇಮೋತ್ಸವವು ಇದೇ ಬರುವ ಶನಿವಾರ 16ರಂದು ನಡೆಯಲಿದೆ. ಬೆಳಿಗ್ಗೆ 9ಕ್ಕೆ ಕಲ್ಲಟ್ಟೆ ಗುತ್ತು ಮೂಲ ಕುಟುಂಬಸ್ಥರಿಂದ ಕಲ್ಲಟ್ಟೆಗುತ್ತು ನಾಗಬನದಲ್ಲಿ ಆಶ್ಲೇಷಾ ಬಲಿ ಸೇವೆ,10:30 ಕ್ಕೆ ಚಪ್ಪರ ಮುಹೂರ್ತ, ಮಧ್ಯಾಹ್ನ 12 ಗಂಟೆಗೆ ಕಲ್ಲಟ್ಟೆ ಶ್ರೀ ಜಾರಂದಾಯ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಸಂಜೆ 6ಕ್ಕೆ ಭಂಡಾರ ಇಳಿಯುವುದು, 10 ರಿಂದ ನೇಮೋತ್ಸವ, ರಾತ್ರಿ ಗಂಟೆ 2ರಿಂದ ಶ್ರೀ ಜಾರಂದಾಯ ಬಂಟ ದೈವ ಮತ್ತು ಸಂತೆಕಟ್ಟೆ ಶ್ರೀ ಕೋರ್ದಬ್ಬು ದೈವಗಳ ಭೇಟಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ತೊಕ್ಕೊಟ್ಟು ಅಕ್ರಮ ಗೋ ಮಾಂಸ‌ ಸ್ಟಾಲ್ ವಿರುದ್ಧ ದೂರು

Thumbnail
Posted On: 07 Jan 2021, 03:01 PM

ತೊಕ್ಕೊಟ್ಟು ಒಳಪೇಟೆ ಮೀನುಮಾರುಕಟ್ಟೆ ಹತ್ತಿರ ರೈಲ್ವೆಗೆ ಸೇರಿದ ಸ್ಥಳದಲ್ಲಿ ಅಕ್ರಮವಾಗಿ ದನದ ಮಾಂಸದ ಸ್ಟಾಲ್ ತೆರೆದಿದ್ದು,ಇದರ ವಿರುದ್ಧ ಉಳ್ಳಾಲ ನಗರಸಭೆಯ ಅಧ್ಯಕ್ಷರಿಗೆ, ಪೌರಾಯುಕ್ತರಿಗೆ ಹಾಗೂ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ರವರಿಗೆ ವಿಶ್ವ ಹಿಂದು ಪರಿಷತ್ ಬಜರಂಗದಳದ ಉಳ್ಳಾಲ ನಗರ ಪ್ರಖಂಡ ವತಿಯಿಂದ ಮನವಿ ಸಲ್ಲಿಸಲಾಯಿತು. ಉಳ್ಳಾಲ ನಗರ ಪ್ರಖಂಡದ ಸಂಚಾಲಕ್ ಅರ್ಜುನ್ ಮಾಡೂರು ಜಿಲ್ಲಾ ಸಹಗೋರಕ್ಷ ಪ್ರಮುಖ್ ಪವಿತ್ರ್ ಕೆರೆಬೈಲ್,ಪ್ರಖಂಡ ಗೋರಕ್ಷ ಪ್ರಮುಖ್ ರಕ್ಷಿತ್ ತೊಕ್ಕೊಟ್ಟು, ಸಾಪ್ತಾಹಿಕ ಪ್ರಮುಖ್ ಕೌಶಿಕ್ ಉಳ್ಳಾಲ ಬೈಲ್ ಉಪಸ್ಥಿತರಿದ್ದರು.

ಪಣಿಯೂರು : ಪಡುಬಿದ್ರಿ ರೈಲು ನಿಲ್ದಾಣದ ಹೆಸರು ಬದಲಾವಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಮಾಲೋಚನಾ ಸಭೆ

Thumbnail
Posted On: 07 Jan 2021, 10:55 AM

ಕಾಪು : ಬೆಳಪು ಗ್ರಾಮದ ಪಣಿಯೂರಿನಲ್ಲಿ ಇರುವ ಪಡುಬಿದ್ರಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ, ಬೆಳಪು ರೈಲು ನಿಲ್ದಾಣ ಎಂದು ಪುನರ್ ನಾಮಕರಣ ಮಾಡುವಂತೆ ಹಾಗೂ ರೈಲ್ವೇ ನಿಲ್ದಾಣದಲ್ಲಿ ಮೂಲ ಸೌಕರ್ಯಗಳನ್ನು ಜೋಡಿಸಿ ಮುಂಬಯಿ - ಬೆಂಗಳೂರು ರೈಲುಗಳಿಗೆ ನಿಲುಗಡೆಗೆ ಒತ್ತಾಯಿಸಿ ಸುತ್ತಲಿನ ಗ್ರಾಮದ ಜನರನ್ನು ಸೇರಿಸಿಕೊಂಡು ಪಣಿಯೂರು ನಾಂಜಾರು ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ವಠಾರದಲ್ಲಿ ಮಂಗಳವಾರ ಸಮಾಲೋಚನಾ ಸಭೆ ನಡೆಸಲಾಯಿತು. ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಬೆಳಪು ಗ್ರಾ.ಪಂ. ಮಾಜಿ ಸದಸ್ಯ ಕರುಣಾಕರ ಶೆಟ್ಟಿ ಪಣಿಯೂರು ಮಾತನಾಡಿ, ಬೆಳಪು ಗ್ರಾಮದಲ್ಲಿ ಇರುವ ರೈಲು ನಿಲ್ದಾಣವು ಪಡುಬಿದ್ರಿ ನಿಲ್ದಾಣ ಎಂಬ  ಹೆಸರಿನೊಂದಿಗೆ ಕರೆಯಲ್ಪಡುತ್ತಿದ್ದು ಇದರೊಂದಿಗೆ ವಿವಿಧ ಮೂಲಭೂತ ಸೌಕರ್ಯಗಳಿಂದಲೂ ವಂಚಿತವಾಗಿದೆ. ಮುಂಬಯಿಗೆ ಹೋಗುವ ರೈಲು ಆದರೂ ನಿಲುಗಡೆಯಾಗುತ್ತದೆ ಎಂಬ ನಿರೀಕ್ಷೆಯೂ ಹುಸಿಯಾಗಿದೆ. ಈ ಬಗ್ಗೆ ಬೆಳಪು ಗ್ರಾ.ಪಂ. ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ಹಲವಾರು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿದ್ದು, ನಾವೆಲ್ಲರೂ ಈಗಲೂ ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದೆ ಇದ್ದ ರೈಲುಗಳ ನಿಲುಗಡೆಯ ಅವಕಾಶದಿಂದಲೂ ವಂಚಿತರಾಗಬೇಕಾದೀತು ಎಂದರು. ಪತ್ರಕರ್ತ ರಾಕೇಶ್ ಕುಂಜೂರು ಬೆಳಪು ರೈಲು ನಿಲ್ದಾಣ, ರೈಲ್ವೇ ಟ್ರಾಕ್ ನ್ನು ದಾಟಿಕೊಂಡು ಹತ್ತಾರು ಕುಟುಂಬಗಳು ನಡೆದಾಡುತ್ತಿದ್ದು, ಕೃಷಿ ಕೆಲಸ ಕಾರ್ಯಗಳಿಗೂ ತೊಂದರೆಯುಂಟಾಗುತ್ತಿದೆ. ಕೊಂಕಣ ರೈಲು ಮಾರ್ಗಕ್ಕಾಗಿ ಹಲವಾರು ಕುಟುಂಬಗಳು ಭೂಮಿಯನ್ನು ಕಳೆದುಕೊಂಡಿದ್ದು, ಅವರಿಗೆ ಸರಿಯಾಗಿ ಉದ್ಯೋಗವೂ ಸಿಕ್ಕಿಲ್ಲ. ಕನಿಷ್ಟ ಪಕ್ಷ ಸ್ಥಳೀಯ ಜನರ ಬೇಡಿಕೆಯಂತೆ ಮುಂಬಯಿ - ಬೆಂಗಳೂರು ರೈಲುಗಳ ನಿಲುಗಡೆಯ ಬೇಡಿಕೆಯಾದರೂ ಈಡೇರಲಿ ಎಂಬ ಆಶಯದೊಂದಿಗೆ ನಾವು ಹೋರಾಟ ನಡೆಸಬೇಕಿದೆ ಎಂದರು. ಬಿಜೆಪಿ ಮುಖಂಡ ಸುರೇಂದ್ರ ಪಣಿಯೂರು ಮಾತನಾಡಿ, ಬೆಳಪು ಮಾತ್ರವಲ್ಲದೇ ಸುತ್ತಲಿನ ಉಚ್ಚಿಲ, ಎರ್ಮಾಳು, ಪಡುಬಿದ್ರಿ, ಎಲ್ಲೂರು, ಮುದರಂಗಡಿ, ಮಜೂರು, ಕುತ್ಯಾರು, ಶಿರ್ವ ಆಸುಪಾಸಿನ ಗ್ರಾಮಗಳ ಜನತೆಯ ಅನುಕೂಲಕ್ಕಾಗಿ ಬೆಳಪು ರೈಲು ನಿಲ್ದಾಣ ಮೇಲ್ದರ್ಜೆಗೇರಬೇಕಿದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಜೊತೆಗೆ ಮಾತುಕತೆ ನಡೆಸಲು, ವಿವಿಧ ಜನಪ್ರತಿನಿಧಿಗಳ ಬಳಿಗೆ ನಿಯೋಗ ತೆರಳುವ ಅಗತ್ಯತೆಯಿದೆ. ರೈಲು ನಿಲ್ದಾಣ ಮೇಲ್ದರ್ಜೆಗೇರುವ ಮತ್ತು ರೈಲು ನಿಲುಗಡೆಯ ಹೋರಾಟಕ್ಕೆ ನಾವೆಲ್ಲರೂ ಜೊತೆಗೂಡಿ ಕೈ ಜೋಡಸಿಸಬೇಕಿದೆ ಎಂದರು.   ಬೆಳಪು ರೈಲ್ವೇ ನಿಲ್ದಾಣ ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿ ಮತ್ತು ಮುಂಬಯಿ-ಬೆಂಗಳೂರು ರೈಲು ನಿಲುಗಡೆಗೆ ಹಕ್ಕೊತ್ತಾಯ ಮಂಡಿಸಲು ಮುಂದಿನ ದಿನಗಳಲ್ಲಿ ಬೆಳಪು ಸುತ್ತಲಿನ ಪ್ರತೀ ಗ್ರಾಮಗಳಲ್ಲಿ ಮತ್ತು ಮುಂಬಯಿ ಮಹಾನಗರದಲ್ಲೂ ಸಭೆ ನಡೆಸಲು ತೀರ್ಮಾನಿಸಲಾಯಿತು. ಅಂಚೆ ಕಾರ್ಡ್ ಮೂಲಕ ಹಕ್ಕೊತ್ತಾಯ ಮಂಡಿಸಲು ಮತ್ತು ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ಹಕ್ಕೊತ್ತಾಯ ಮಂಡನೆಗೆ ಪ್ರಮುಖರನ್ನು ಸೇರಿಸಿಕೊಂಡು ಕಾರ್ಯಕಾರಿ ಸಮಿತಿ ರಚಿಸಲು ನಿರ್ಧರಿಸಲಾಯಿತು. ಬೆಳಪು ಗ್ರಾಮದ ಪ್ರಮುಖರಾದ ಯೋಗೀಶ್ ಶೆಟ್ಟಿ ಪಣಿಯೂರುಗುತ್ತು, ನಿರಂಜನ್ ಶೆಟ್ಟಿ ಪಣಿಯೂರು, ಆನಂದ ಶೆಟ್ಟಿ ಕಬೇರಗುತ್ತು, ಸುಕುಮಾರ ಶೆಟ್ಟಿ ನಡಿಮನೆ, ವಸುಂಧರ್ ಶೆಟ್ಟಿ ಬುಳಿಬೆಟ್ಟುಗುತ್ತು, ದಿವಾಕರ ಶೆಟ್ಟಿ, ಶಿವ ಕುಮಾರ್, ವಸಂತ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು. ಸಂಘಟಕ ಕರುಣಾಕರ ಶೆಟ್ಟಿ ಪಣಿಯೂರುಗುತ್ತು ಸ್ವಾಗತಿಸಿ, ವಂದಿಸಿದರು. ಪತ್ರಕರ್ತ ರಾಕೇಶ್ ಕುಂಜೂರು ಪ್ರಸ್ತಾವನೆಗೈದು, ಕಾರ್ಯಕ್ರಮ ನಿರೂಪಿಸಿದರು.

ಬಂಟಕಲ್ಲು : ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದಿಂದ ಸಿಸಿ ಟಿವಿ ಕೊಡುಗೆ ಹಾಗೂ ಪೊಲೀಸ್ ಜನ ಸಂಪರ್ಕ ಸಭೆ

Thumbnail
Posted On: 06 Jan 2021, 09:14 PM

ಬಂಟಕಲ್ಲು ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದವರು ಬಂಟಕಲ್ಲು ಆಸುಪಾಸು ನಡೆಯಬಹುದಾದ ಅಪರಾಧ ಕೃತ್ಯ, ಕಳ್ಳತನ , ದರೋಡೆಯಂತಹ ಅಪರಾಧಗಳ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟುವ ಸಲುವಾಗಿ ಬಂಟಕಲ್ಲು ಪೇಟೆಯಲ್ಲಿ ಅಳವಡಿಸಿದ ಸಿ.ಸಿ ಕೆಮಾರ ವ್ಯವಸ್ಥೆಯನ್ನು ಶಿರ್ವ ಪೊಲೀಸ್ ಠಾಣಾಧಿಕಾರಿ ಶ್ರೀ ಶ್ರೀಶೈಲರವರು ಉದ್ಘಾಟಿಸಿದರು. ತದನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಠಾಣಾಧಿಕಾರಿಯವರು ಇಲಾಖಾಮಾಹಿತಿಯನ್ನು ನೀಡಿ ರಸ್ತೆ ಸುರಕ್ಷತೆ, ಚಾಲನಾ ನಿಯಮಗಳನ್ನು ತಪ್ಪದೆ ಪಾಲಿಸುವಂತೆ ತಿಳಿಸಿದರು. ಇದೇ ಸಂಧರ್ಭದಲ್ಲಿ ಇತ್ತೀಚೆಗೆ ನಡೆದ ಪಂಚಾಯತ್ ಚುಣಾವಣೆಯಲ್ಲಿ ವಿಜಯಶಾಲಿಯಾದ ಸಂಘದ ಸದಸ್ಯ ಶ್ರೀ ಸತೀಶ್ ರವರನ್ನು ಸಂಘದವತಿಯಿಂದ ಅಭಿನಂದಿಸಲಾಯಿತು. ವೇದಿಕೆಯಲ್ಲಿದ್ದ ನಾಗರಿಕ ಸೇವಾ ಸಮಿತಿ (ರಿ) ಬಂಟಕಲ್ಲು ಇದರ ಅಧ್ಯಕ್ಷ ಶ್ರೀ ಕೆ. ಆರ್. ಪಾಟ್ಕರ್ ರವರು ರಿಕ್ಷಾ ಚಾಲಕ ಮಾಲಕರ ಸಂಘದವರು ನೀಡಿದ ಸಿ.ಸಿ ಕೆಮಾರ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು. ಬಂಟಕಲ್ಲು ಸಾರ್ವಜನಿಕ ಗಣೆಶೋತ್ಸವ ಸಮಿತಿ ಅಧ್ಯಕ್ಷ ಶ್ರೀ ಮಾಧವ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ ಸದಸ್ಯೆ ಶ್ರೀಮತಿ ವೈಲೆಟ್ ಕ್ಯಾಸ್ತಲಿನೊ, ಬಂಟಕಲ್ಲು ಕಾರು ಚಾಲಕ ಮಾಲಕರ ಸಂಘದ ಅಧ್ಯಕ್ಷ ಶ್ರೀ ಉಮೇಶ್ ರಾವ್ , ಶ್ರೀ ಉಮೇಶ್ ಪ್ರಭು, ಲಯನ್ಸ್ ಕ್ಲಬ್ ಉಡುಪಿ ಕರಾವಳಿ ಅಧ್ಯಕ್ಷ ಲ. ಅನಂತರಾಮ ವಾಗ್ಲೆ, ರವೀಂದ್ರ ಆಚಾರ್ಯ, ವಿನ್ಸಂಟ್ ಕ್ಯಾಸ್ತಲಿನೊ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ನವೀನ್ ಸನಿಲ್ ರವರು ಸ್ವಾಗತಿಸಿ, ಹರೀಶ್ ರವರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಶ್ರೀ ಗೋಪಾಲ ದೇವಾಡಿಗ ರವರು ವಂದಿಸಿದರು.

ದೇರಳಕಟ್ಟೆ ಸೇವಾಶ್ರಮದಲ್ಲಿ ವೃದ್ಧರೊಂದಿಗೆ ನಗು ನಲಿವು, ಆರೋಗ್ಯ ಮಾಹಿತಿ ಶಿಬಿರ

Thumbnail
Posted On: 05 Jan 2021, 07:20 PM

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ) ಬಾಳ್ತಿಲ ಮತ್ತು ಸೇವಾಶ್ರಮ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಸೇವಾಶ್ರಮ ದೇರಳಕಟ್ಟೆ ಇಲ್ಲಿ ಉಚಿತ ರಕ್ತಪರೀಕ್ಷೆ , ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ಹಾಗೂ ವೃದ್ಧರೊಂದಿಗೆ ನಗು ನಲಿವು ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮೆಸ್ಕಾಂನ ಇಂಜಿನಿಯರ್ ಶ್ರೀ ನಿತೇಶ್ ಕುಮಾರ್ ನೆರವೇರಿಸಿ ಸಂಸ್ಥೆಯ ಸೇವೆ ಶ್ಲಾಘನೀಯ ಎಂದು ಹೇಳಿ ಸಂಸ್ಥೆಯ ಸೇವೆಗೆ ಶುಭ ಹಾರೈಸಿದರು. ಟ್ರಸ್ಟಿ ಹಾಗೂ ಖ್ಯಾತ ವೈದ್ಯರಾದ ಶ್ರೀ ಡಾ.ರಾಜೇಶ್ ಪೂಜಾರಿ ಆರೋಗ್ಯ ಮಾಹಿತಿ ನೀಡಿ ಹಾಗೂ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ನಡೆಸಿದರು. ಕಾರ್ಯಕ್ರಮದಲ್ಲಿ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ(ರಿ). ಬಾಳ್ತಿಲ. ಇದರ ಸಂಸ್ಥಾಪಕಿಯಾಗಿರುವ ವಕೀಲರಾದ ಶ್ರೀಮತಿ ಶ್ಯೆಲಜಾ ರಾಜೇಶ್ ರವರು ಮಾತಾನಾಡಿ ಅಮ್ಮಂದಿರು ನಮ್ಮನ್ನು ಹೊತ್ತು ಹೆತ್ತು ಸಾಕಿ ಸಲಹುತ್ತಾರೆ. ಆದರೆ ಅವರನ್ನು ಆಶ್ರಮಕ್ಕೆ ಬಿಟ್ಟು ಪ್ರೀತಿಯಿಂದ ವಂಚಿತಗೊಳಿಸುವುದು ಎಷ್ಟು ಸರಿ. ಎಂದು ಪ್ರಶ್ನಿಸಿದರು. ಅಲ್ಲದೇ ನಾವು ಮಗುವಾಗಿರುವಾಗ ಒಬ್ಬ ತಾಯಿ ನಮಗೋಸ್ಕರವಾಗಿಯೇ ಜೀವಿಸುತ್ತಾಳೆ. ಆಕೆಗೆ ವಯಸ್ಸಾದಾಗ ಅವಳನ್ನು ನಮ್ಮ ಮಗುವಂತೆ ಪ್ರೀತಿಸಿ ಎಂದು ಹೇಳಿದರು. ಆಶ್ರಮವಾಸಿಗಳಿಗೆ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಆಶ್ರಮದ ಎಲ್ಲರಿಗೂ ಅವಶ್ಯಕ ದಿನ ಬಳಕೆ ಸಾಮಾಗ್ರಿಗಳ ಕಿಟ್ ನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟಿ ಶ್ರೀಮತಿ ಅನ್ನಪೂರ್ಣ ರಾಜೇಶ್ ಬಿ. ಸೇವಾಶ್ರಮದ ಮೇಲ್ವಿಚಾರಕ ಶ್ರೀ ಬಾಲಕೃಷ್ಣ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಮಾರಣಕಟ್ಟೆ : ಸರಳ ಮಕರ ಸಂಕ್ರಾಂತಿ ಉತ್ಸವ

Thumbnail
Posted On: 05 Jan 2021, 04:49 PM

ಕುಂದಾಪುರ ತಾಲೂಕಿನ ಚಿತ್ತೂರು ಶ್ರೀ ಕ್ಷೇತ್ರ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಉತ್ಸವವು ಜನವರಿ 14ರಿಂದ 16ರವರೆಗೆ ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲಾಗುವುದು. ಸಾರ್ವಜನಿಕರಿಗೆ ಗೆಂಡ ಸೇವೆಗೆ ಅವಕಾಶವಿಲ್ಲ. ಉಳಿದಂತೆ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ಜರಗಲಿರುವುದು. ಮಹಾಮಂಗಳಾರತಿ ಜನವರಿ 14ರಂದು ಪೂರ್ವಾಹ್ನ 8:30 ಕ್ಕೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು : ಸಹಸ್ರ ಚಂಡಿಕಾಯಾಗ ಮಹೋತ್ಸವದ ಇಪ್ಪತ್ತನೇ ವರ್ಧಂತಿ ಉತ್ಸವ ಸಂಪನ್ನ

Thumbnail
Posted On: 05 Jan 2021, 04:27 PM

ಕಾಪು ಶ್ರೀ ಹಳೇ ಮಾರಿಗುಡಿ ದೇವಳದಲ್ಲಿ ಇಂದು ದೇವಿಯ ಸನ್ನಿಧಾನದಲ್ಲಿ ಕಾಪುವಿನ ಇತಿಹಾಸದಲ್ಲೇ ಮೊದಲೆಂಬಂತೆ ಲಕ್ಷಾಂತರ ಭಕ್ತಾದಿಗಳ ಕೂಡುವಿಕೆಯಿಂದ ಒಂಬತ್ತು ದಿನಗಳ ಕಾಲ ಬಹು ವಿಜೃಂಭಣೆಯಿಂದ ಜರುಗಿದ ಸಹಸ್ರ ಚಂಡಿಕಾಯಾಗ ಮಹೋತ್ಸವದ ಇಪ್ಪತ್ತನೆಯ ವರ್ಧಂತಿ ಉತ್ಸವ ಜರಗಿತು. ಈ ಪ್ರಯುಕ್ತ ಶ್ರೀ ದೇವಿಯ ಸನ್ನಿಧಿಯಲ್ಲಿ ಪಂಚದುರ್ಗಾ ಹವನ ಪೂರ್ಣಾಹುತಿ, ಅನ್ನಸಂತರ್ಪಣೆ, ವಿಶೇಷ ಪೂಜೆ ಇತ್ಯಾದಿಗಳು ಜರುಗಿದವು.

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲಕ್ಕೆ ದಿನ ನಿಗದಿ

Thumbnail
Posted On: 05 Jan 2021, 02:36 PM

ಬೈರುಗುತ್ತು, ದೊರೆಗಳ ಗುತ್ತು, ಪಿಲಿಚಂಡಿ ಮನೆ, ಸಾನದ ಮನೆ, ಗರಡಿ ಮನೆ ಇತ್ಯಾದಿ ಒಟ್ಟು 16 ಕಾಣಿಕೆಯ ಮನೆಗಳ ಸೇರುವಿಕೆಯಲ್ಲಿ ಇಂದು ಕಾಪು ಮಾರಿಗುಡಿಯಲ್ಲಿ ದೇವಿಯ ನುಡಿಯಂತೆ ಸರಕಾರದ ನಿಯಮಾವಳಿಗಳ ಪ್ರಕಾರ ಮೇ 18ರಿಂದ ಪ್ರಾರಂಭವಾಗಿ 22 ರಂದು ಇತಿಹಾಸ ಪ್ರಸಿದ್ಧ ಪಿಲಿ ಕೋಲ ನಡೆಸುವುದೆಂದು ದಿನ ನಿಗದಿಪಡಿಸಲಾಯಿತು. ಈ ಬಗ್ಗೆ ನಮ್ಮ ಕಾಪು ವೆಬ್ ಪೋರ್ಟಲ್ ಗೆ ತಿಳಿಸಿದ್ದಾರೆ.

ಬಂಟಕಲ್ : ಝಿಝೋ ಎಜುಕೇಷನ್ ಸೆಂಟರ್ ಉದ್ಘಾಟನೆ

Thumbnail
Posted On: 04 Jan 2021, 07:00 PM

ಕಾಪು ತಾಲೂಕಿನ ಬಂಟಕಲ್ ಮುಖ್ಯರಸ್ತೆಯ ಮೈತ್ರಿ 3 ಕಾಂಪ್ಲೆಕ್ಸಿನ ಝಿಝೋ ಎಜುಕೇಷನ್ ಸಂಸ್ಥೆಯನ್ನು ಝಿಝೋ ಸಿಸ್ಟರ್ಸ್ ಝಿಯಾ ಮತ್ತು ಝೋ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸೈಂಟ್ ಅಲೋಶಿಯಸ್ ಕಾಲೇಜ್ ಮಂಗಳೂರಿನ ಪ್ರಾಂಶುಪಾಲರಾದ ರೆ. ಡಾ. ಪ್ರವೀಣ್ ಮಾರ್ಟಿಸ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ, ಪಾಂಬೂರು ಹೋಲಿ ಚರ್ಚಿನ ಧರ್ಮಗುರುಗಳಾದ ರೆ. ಫಾ. ಹೆನ್ರಿ ಮಸ್ಕರೇನಸ್ ಉಪಸ್ಥಿತರಿದ್ದರು. ವಿಜಯ್ ಧೀರಜ್ ಸ್ವಾಗತಿಸಿದರು , ರಿಚಿ ವಂದಿಸಿದರು. ವಿದ್ಯಾಶ್ರೀ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.