Updated News From Kaup
ಸ್ವಚ್ಛತೆ ಮನೆಯಿಂದಲೇ ಆರಂಭವಾಗಲಿ - ಸ್ವಚ್ಚ ಭಾರತ್ ಫ್ರೆಂಡ್ಸ್ ಸಂಯೋಜಕ
Posted On: 02-10-2020 03:52PM
ಉಡುಪಿ :- ಸ್ವಚ್ಚತೆ ಎಂಬುದು ನಮ್ಮ ಮನೆಯಿಂದ ಪ್ರಾರಂಭವಾಗಬೇಕು.ಪ್ರತಿ ಪ್ರಜೆಯೂ ಸ್ವಯಂಪ್ರೇರಿತನಾಗಿ ತನ್ನ ಸಮಾಜವನ್ನು ಶುಚಿಯಾಗಿಟ್ಟುಕೊಂಡರೆ ಆಗ ಯಾವುದೋ ಸಂಘ ಸಂಸ್ಥೆಗಳು ಸ್ವಚ್ಛಭಾರತ ಅಭಿಯಾನ ಮಾಡುವ ಅಗತ್ಯವೇ ಇಲ್ಲ ಎಂದು ಸ್ವಚ್ಚ ಭಾರತ್ ಫ್ರೆಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು ಕವಾ೯ಲು ಹೇಳಿದರು.
ಇನ್ನಂಜೆ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಂದ ಇನ್ನಂಜೆ ಬಾಲವನದಲ್ಲಿ ಸ್ವಚ್ಛತಾ ಕಾರ್ಯಕ್ರಮ
Posted On: 02-10-2020 03:14PM
ಇನ್ನಂಜೆ ಗ್ರಾಮ ಪಂಚಾಯತ್ ಪ್ರತಿ ಬಾರಿಯೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದ ಹಾಗುಹೋಗುಗಳಿಗೆ ತನ್ನನ್ನು ತಾನು ತೊಡಗಿಸಿಕೊಂಡು ಮಾದರಿ ಗ್ರಾಮ ಅನಿಸಿಕೊಂಡಿದೆ.
ಮಂಗಳೂರು ಡ್ರಗ್ಸ್ ಪ್ರಕರಣ ಭೇದಿಸುವರೇ ನೂತನ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ?
Posted On: 01-10-2020 06:35PM
ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರ ತಂಡದಲ್ಲಿದ್ದ ಸಿಸಿಬಿ ಇನ್ಸ್ಪೆಕ್ಟರ್ ಶಿವಪ್ರಕಾಶ ರಾಜೇಂದ್ರ ನಾಯಕ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಕಾಪು ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ಶಿವಪ್ರಕಾಶ್ ಅವರ ಸ್ಥಾನಕ್ಕೆ ನಿಯೋಜಿಸಲಾಗಿದೆ.
ಕುಡಿಯುವ ನೀರು ಪೋಲು ಕೇಳುವವರು ಯಾರು ಇಲ್ಲವೇ ?
Posted On: 30-09-2020 09:55PM
ಹಿರಿಯಡಕ -ಉಡುಪಿ ಮುಖ್ಯ ರಸ್ತೆಯಲ್ಲಿ (ಅಂಜಾರು ಕ್ರಾಸ್) ಸ್ಯಾಬ್ ಒಡೆದು ಕಳೆದ 10 ದಿನದಿಂದ ನಿರಂತರವಾಗಿ ಕುಡಿಯುವ ನೀರು ಚರಂಡಿ ಸೇರುತ್ತಿದೆ. ಸ್ಥಳೀಯರ ಪ್ರಕಾರ ದಿನಕ್ಕೆ ಅಂದಾಜು ಹತ್ತು ಸಾವಿರ ಲೀಟರ್ ನೀರು ಚರಂಡಿಗೆ ಹೋಗುತ್ತಿದೆ.ಈ ರಸ್ತೆಯ ಪಕ್ಕದಲ್ಲಿ ನಿರಂತರವಾಗಿ ನೀರು ಹರಿಯುತ್ತಿರುದರಿಂದ ಕೆಸರು ಉಂಟಾಗಿ ರಸ್ತೆಯಲ್ಲಿ ನಡೆದಾಡುವ ಪಾದಚಾರಿಗಳಿಗೂ ತೊಂದರೆಯಾಗಿದೆ.
ಅಕ್ಟೋಬರ್ 19ರವರೆಗೆ 20% ರಿಯಾಯಿತಿ ದರದಲ್ಲಿ ಮೂಡುಬಿದ್ರಿಯ ತೆನಸ್ ರೆಸ್ಟೋರೆಂಟ್
Posted On: 30-09-2020 01:36PM
ಪಿಜ್ಜಾಪ್ರಿಯರಿಗೆ ಶುಭಸುದ್ದಿ.ಮೂಡಬಿದ್ರೆ ಪರಿಸರದ ಜನತೆ ಇನ್ನುಮುಂದೆ ಸುಪೀರಿಯರ್ ಕ್ವಾಲಿಟಿ ಯ ಪ್ಯಾನ್ ಪಿಜ್ಜಾದ ರುಚಿ ಸವಿಯಲು ದೂರದ ಮಂಗಳೂರಿಗೋ ಇಲ್ಲ ಬೇರಾವುದೋ ಊರಿಗೆ ಹೋಗಬೇಕಾಗಿಲ್ಲ.ಗ್ರಾಹಕರ ಅಗತ್ಯತೆಗಳನ್ನು ಗಮನದಲ್ಲಿ ಇಟ್ಟುಕೊಂಡು , ಕೈಗೆಟುಕುವ ದರದಲ್ಲಿ ಉತ್ಕೃಷ್ಟ ಗುಣಮಟ್ಟದ ಸೇವೆಯನ್ನು ಒದಗಿಸುವ ಉದ್ದೇಶದೊಂದಿಗೆ ಮೂಡುಬಿದಿರೆ ನಗರದ ಹೃದಯಭಾಗದಲ್ಲಿರುವ ಸಿಟಿ ಪಾಯಿಂಟ್ ಕಾಂಪ್ಲೆಕ್ಸ್(ಬದ್ರಿಯಾ ಜುಮ್ಮಾ ಮಸೀದಿ ಬಳಿ) ನಲ್ಲಿ ನೂತನ ಪಿಜ್ಜಾ ರೆಸ್ಟೋರೆಂಟ್ ‘ತೆನಸ್’ ಶುಭಾರಂಭಗೊಂಡಿದೆ.
ಕುಂಜೂರಿನಲ್ಲಿ ತುಳು ಬರೆಕ ಅಭಿಯಾನ, ತುಳು ಲಿಪಿ ಫಲಕ ಅಳವಡಿಕೆಗೆ ಚಾಲನೆ
Posted On: 30-09-2020 11:49AM
ಕಾಪು : ತುಳು ಭಾಷೆ - ಸಂಸ್ಕೃತಿಯ ಮೂಲ ಮೌಲ್ಯವನ್ನು ತಿಳಿಯುವ ಉದ್ದೇಶದಿಂದ 'ತುಳು ಲಿಪಿ' ಕಲಿಯಬೇಕು. ಜನರಿಗೆ ಕಲಿಸಬೇಕು, ತುಳುಲಿಪಿಯಲ್ಲಿ ಬರೆಯಲಾದ ಸಾಹಿತ್ಯವನ್ನು ಓದಬೇಕು ಎಂಬ ಉದ್ದೇಶಗಳಿಂದ ತುಳುವಾಸ್ ಕೌನ್ಸಿಲ್ ಆಯೋಜಿಸಿರುವ "ತುಳು ಬರೆಕ" ಅಭಿಯಾನಕ್ಕೆ ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಚಾಲನೆ ನೀಡಲಾಯಿತು.
ಮಾನವೀಯತೆ ಮೆರೆದ ಸುರತ್ಕಲ್ ನ ವೆಂಕಟೇಶ್
Posted On: 30-09-2020 10:08AM
ಪಲಿಮಾರು ಗ್ರಾಮದ ಅವರಾಲುಮಟ್ಟು ನಿವಾಸಿ ಸುನೀತ ಇವರು ಮೂರು ಸಾವಿರದಷ್ಟು ಹಣ, ದಾಖಲೆಗಳಿರುವ ಪರ್ಸ್ ನ್ನು ಮೂರು ಕಾವೇರಿ ಬಳಿ ಕಳೆದುಕೊಂಡಿದ್ದರು. ಈ ಪಸ್೯ ಸುರತ್ಕಲ್ ನ ಪಡ್ರೆ ಪುಣೋಡಿ ಮನೆಯ ವೆಂಕಟೇಶ್ ಗೆ ಸಿಕ್ಕಿತ್ತು. ಅದರಲ್ಲಿದ್ದ ಮಾಹಿತಿಯ ಆಧಾರದ ಮೇಲೆ ಪರ್ಸನ್ನು ಸುನೀತಾರವರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಕಾಪು ಹಳೆಮಾರಿಗುಡಿಯಲ್ಲಿ ಲೋಕಕಲ್ಯಾಣಾರ್ಥಕ್ಕಾಗಿ ವಿಶೇಷ ಚಂಡಿಕಾಯಾಗ
Posted On: 29-09-2020 02:36PM
ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ,ಕಾಪು, ಅಧಿಕ ಆಶ್ವೀಜ ಪುರುಷೋತ್ತಮ ಮಾಸ ಅಂಗವಾಗಿ ಶ್ರೀ ದೇವಳದಲ್ಲಿ ಲೋಕಕಲ್ಯಾಣಾರ್ಥಕ್ಕಾಗಿ ವಿಶೇಷ ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಇಂದು ಜರಗಿತು.
ಉಚ್ಚಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವರಿಗೆ ಅಪ್ಪ ಸೇವೆ
Posted On: 29-09-2020 01:35PM
ಉಚ್ಚಿಲ ಮಹಾಲಿಂಗೇಶ್ವರ, ಮಹಾಗಣಪತಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಅಪ್ಪ ಸೇವೆಯು ದಿನಾಂಕ 28.9.2020 ನೇ ಸೋಮವಾರ ನಡೆಯಿತು. ಒಟ್ಟು 1115 ಅಪ್ಪ ಸೇವೆಯು ಭಕ್ತರಿಂದ ಬಂದಿದ್ದು. (ಸುಮಾರು 13,000 ಅಪ್ಪ ತಯಾರಿಸಲಾಗಿತ್ತು)
ಬಂಟಕಲ್ಲು ಶರ್ಮರ ತೋಟದಲ್ಲಿ ಸಮಗ್ರ ಕೃಷಿ ಮಾಹಿತಿ ಮತ್ತು ಪ್ರಾತ್ಯಕ್ಷತೆ
Posted On: 29-09-2020 01:59AM
ವೈಜ್ಞಾನಿಕ ಕೃಷಿ ಪದ್ದತಿಯಿಂದ ಯಶಸ್ವಿ ಕೃಷಿ ಮಾಹಿತಿ ಕಾರ್ಯಕ್ರಮದಲ್ಲಿ ಶ್ರೀ ರಾಮಕೃಷ್ಣ ಶರ್ಮ.
ಪ್ರಸ್ತುತ ದಿನಗಳಲ್ಲಿ ಕೃಷಿಕರು ವೈಜ್ಞಾನಿಕ ಕೃಷಿ ಪದ್ದತಿಯನ್ನು ಅಳವಡಿಸುವುದರಿಂದ ಕೃಷಿಯಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯ ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಶ್ರೀ ರಾಮಕೃಷ್ಣ ಶರ್ಮರವರು ತಿಳಿಸಿದರು. ಬಂಟಕಲ್ಲು ನಾಗರೀಕ ಸೇವಾ ಸಮಿತಿ(ರಿ) ಆಶ್ರಯದಲ್ಲಿ ಇಂದು ಬಂಟಕಲ್ಲು ಶರ್ಮರವರ ಕೃಷಿ ತೋಟದಲ್ಲಿ ನಡೆದ ಸಮಗ್ರ ಕೃಷಿ ಮಾಹಿತಿ ಮತ್ತು ಪ್ರಾತ್ಯಕ್ಷತೆ ಕಾರ್ಯಕ್ರಮದಲ್ಲಿ ಕೃಷಿ ಮಾಹಿತಿ ನೀಡಿ ಮಾತನಾಡುತಿದ್ದರು. ಮಲ್ಲಿಗೆ ಕೃಷಿ, ತೆಂಗು, ಕಂಗು ಕೃಷಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
