Updated News From Kaup
ಯುವ ಪ್ರಸಂಗಕರ್ತರು ಮಿಥುನ್ ಪೂಜಾರಿ ಕೋಣಿ
Posted On: 17-09-2020 09:58PM
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಣಿ ಗ್ರಾಮದ ಗೋಪಾಲ ಪೂಜಾರಿ ಮತ್ತು ಪ್ರೇಮಾ ಪೂಜಾರಿ ದಂಪತಿಗಳ ನಾಲ್ಕು ಮಕ್ಕಳಲ್ಲಿ ದ್ವಿತೀಯ ಪುತ್ರರಾಗಿ , ಮೇಘರಾಜ್ ಇವರ ತಮ್ಮನಾಗಿ , ನವ್ಯ ಮತ್ತು ಕಾವ್ಯ ರಿಗೆ ಅಣ್ಣನಾಗಿ ಸಪ್ಟೆಂಬರ್ ೨೩ ರ ೧೯೯೫ ರಂದು ಜನಿಸಿದರು.
ರೋಟರಿಕ್ಲಬ್ ಮಣಿಪುರ ವತಿಯಿಂದ ಹೀಗೊಂದು ಸಮಾಜಸೇವೆ.
Posted On: 17-09-2020 05:23PM
ರೋಟರಿ ಕ್ಲಬ್ ಮಣಿಪುರ ವತಿಯಿಂದ ಕಾರುಣ್ಯ ವೃದ್ದಾಶ್ರಮ ಏಣಗುಡ್ಡೆ ಕಟಪಾಡಿ ಇಲ್ಲಿಗೆ ಒಂದು ತಿಂಗಳಿಗೆ ಆಗುವಷ್ಟು ಅಕ್ಕಿಯನ್ನು ವಿತರಿಸಲಾಯಿತು ಅಧ್ಯಕ್ಷರಾದ ಮೊಹಮ್ಮದ್ ಷರೀಫ್ ಕಾರ್ಯದರ್ಶಿ ಸುಧೀರ್ ಕುಮಾರ್ ಹಾಗೂ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.
ಇಂದ್ರಾಳಿ ಘಟಕದ 2020ನೇ ಸಾಲಿನ ಜೆಸಿಐ ಸಪ್ತಾಹದ ಸಮಾರೋಪ ಸಮಾರಂಭ
Posted On: 16-09-2020 05:49PM
ಉಡುಪಿ :- ಜೆಸಿಐ ಉಡುಪಿ ಇಂದ್ರಾಳಿ ಘಟಕದ 2020ನೇ ಸಾಲಿನ ಜೆಸಿಐ ಸಪ್ತಾಹದ ಸಮಾರೋಪ ಸಮಾರಂಭವು ಘಟಕದ ಅಧ್ಯಕ್ಷ ಎಂ ಎನ್ ನಾಯಕ್ ಮತ್ತು ಸರ್ವ ಸದಸ್ಯರ ಸಹಭಾಗಿತ್ವ ದೊಂದಿಗೆ ವಲಯಾಧ್ಯಕ್ಷ ಕಾತಿ೯ಕೇಯ ಮಧ್ಯಸ್ಥ ಹಾಗೂ ವಲಯ ಉಪಾಧ್ಯಕ್ಷ ಮೇಧಾವಿ ಇವರ ವಿಶೇಷ ಉಪಸ್ಥಿತಿಯಲ್ಲಿ ಸೆ.15ರಂದು ಮಣಿಪಾಲದ ಹೋಟೆಲ್ ಮಧುವನ ಸೇರಾಯ್ ನ " ಮೈತ್ರಿ ಹಾಲ್" ನಲ್ಲಿ ನಡೆಯಿತು.
ವೆರಿಕೋಸ್ ವೇಯ್ನ್ ಗೆ ಸಾಧ್ಯವಾದಷ್ಟು ಆಪರೇಷನ್ ಇಲ್ಲದೆ ಚಿಕೆತ್ಸೆ
Posted On: 16-09-2020 02:50PM
ವೆರಿಕೋಸ್ ವೇಯ್ನ್ ಈವಾಗ ಸಾಮಾನ್ಯ ವಾದ ಖಾಯಿಲೆ ಯಂತಾಗಿದೆ .ಇದೆಕ್ಕೆಲ್ಲಾ ಕಾರಣ ಜನರ ಅಸಮರ್ಪಕ ಜೀವನ ಶೈಲಿ, ವ್ಯಾಯಾಮ ರಹಿತ ಜೀವನ, ಜಾಸ್ತಿ ನಿಂತುಕೊಂಡೆ ಅಥವಾ ಕುಳಿತುಕೊಂಡೆ ಕೆಲಸ ಮಾಡುವುದು, ಸತ್ವ ರಹಿತ ಕಲಬೆರಿಕೆ ಆಹಾರ ಸೇವನೆ, ವಂಶಪಾರಂಪರ್ಯವಾಗಿ ಹಾಗೂ ಗರ್ಭಿಣಿ ಯರಿಗೆ ಸಾಮಾನ್ಯ ವಾಗಿ ಕಂಡು ಬರುವುದು.
ಪಡುಬಿದ್ರಿ ರೋಟರಿ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ
Posted On: 15-09-2020 11:52PM
ಇಂಜಿನಿಯರ್ಸ್ ಡೇ ಅಂಗವಾಗಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದು ಇಂಜಿನಿಯರಿಂಗ್ ವೃತ್ತಿ ಯನ್ನು ನಡೆಸುತಿರುವ ರಮೀಜ್ ಹುಸೇನ್ ಮತ್ತು ಮಹಮ್ಮದ್ ನಿಯಾಜ್ ರವರಿಗೆ ಪಡುಬಿದ್ರಿ ರೋಟರಿ ವತಿಯಿಂದ ಸಮ್ಮಾನಿಸಲಾಯಿತು.
ಕರೋನಾ ಮೈಮರೆವು ಅಪಾಯಕ್ಕೆ ದಾರಿಯಾಗಬಹುದು
Posted On: 15-09-2020 06:44PM
ಇತ್ತಿಚೆಗೆ ನಾವು ನೋಡುತ್ತಿರುವ ಸಂಗತಿ ಯಂತೆ ಕರೋನಾದ ಬಗ್ಗೆ ಜನರಿಗೆ ಅಸಡ್ಡೆ ಎದುರಾಗಿದೆ.ಪರಿಣಾಮ ಕರೋನಾ ಮತ್ತು ನಮಗೆ ಯಾವುದೇ ಸಂಬಂಧವಿಲ್ಲದಂತೆ ಹೆಚ್ಚಿನ ಜನರು ವತಿ೯ಸುತ್ತಿದ್ದಾರೆ ಇದು ಸರಿಯಲ್ಲ. ಮುಖ್ಯವಾಗಿ ಮಾಸ್ಕ್ ಹಾಕುವುದು ಸಾಮಾಜಿಕ ಅಂತರ ಕಾಪಾಡುವುದು ನಿಧಾನವಾಗಿ ಕಡಿಮೆಯಾಗಿರುದನ್ನು ನಾವು ಗಮನಿಸುತ್ತಿದ್ದೇವೆ.ಸಕಾ೯ರ ದ ನೀತಿ ನಿಯಮಗಳನ್ನು ಮೀರಿ ಸಮಾರಂಭಗಳ ಆಯೋಜನೆ, ಕಾಯ೯ಕ್ರಮಗಳಲ್ಲಿ ಯಾವುದೇ ರೀತಿಯ ಕರೋನಾ ಮುಂಜಾಗ್ರತೆ ವಹಿಸದಿರುವುದು ಸಾಮಾನ್ಯವಾಗುತ್ತಿದೆ ಇದು ಅಪಾಯಕ್ಕೆ ಎಡೆ ಮಾಡುವ ಸಂಭವವಿದೆ ಎಂದು ಈಗಾಗಲೇ ತಜ್ಞರು ಎಚ್ಚರಿಸಿದ್ದಾರೆ.ಆದರೂ ನಮವರಿಗೆ ಎಚ್ಚರವಾಗಿಲ್ಲ. ಕರೋನಾದ ಲಕ್ಷಣ ಕಂಡು ಬಂದರೂ ಕೂಡ ಅದನ್ನು ಮುಚ್ಚಿಟ್ಟು ಸುರಕ್ಷತೆ ವಹಿಸದ ಪರಿಣಾಮ ಸೋoಕಿತರ ಸಂಖ್ಯೆ ಹೆಚ್ಚಾಗುತ್ತಿದೆ.ಅಲ್ಲದೆ ಐಸಿಯು ವೆಂಟಿಲೇಟರ್ ನಲ್ಲಿ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚುತ್ತಿರುವ ಕಾರಣ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಕಡಿಮೆಯಾಗುತ್ತಿರುವುದು ಅಪಾಯದ ಸಂಕೇತ. ಹೀಗಾಗಿ ಜನರು ಸಕಾ೯ರ ದ ನೀತಿ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಬೇಕು.
ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಕರ್ನಾಟಕಕ್ಕೆ ಆಂಧ್ರಪ್ರದೇಶ ಮಾದರಿಯಾಗಲಿ
Posted On: 15-09-2020 06:06PM
ಇಚ್ಚಾಶಕ್ತಿಯ ರಾಜಕೀಯ ನಿಲುವುಗಳಲ್ಲಿ ಮಾತ್ರ ಇಂತಹದ್ದು ಸಾಧ್ಯ. ವೈ.ಎಸ್.ಜಗನ್ಮೋಹನ್ ರೆಡ್ಡಿ ಯವರನ್ನು ಅಭಿನಂದಿಸೋಣ. ಈ ದೇಶದಲ್ಲಿಯೆ ಅವಿಸ್ಮರಣೀಯವಾಗುಳಿಯುವಂತೆ ಕಳೆದ ಸಾಲಿನಲ್ಲಿ ಐವತ್ತು ಸಾವಿರದಷ್ಟು ಸಮಸ್ತ ಸಮಾಜಬಾಂಧವರು ಏಕ ಉದ್ದೇಶದಿಂದ ಒಗ್ಗೂಡಿ "ಬಿಲ್ಲವ ಮಹಾ ಸಮಾವೇಶ" ದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಎನ್ನುವ ಪರಿಕಲ್ಪನೆಯ ಮನವಿಯನ್ನು ಪ್ರಪ್ರಥಮ ಬಾರಿ ನೀಡಲಾಗಿತ್ತು.ಈವರೆಗೆ ಬೇರೆ ಬೇರೆ ಸಮಾಜಕ್ಕೆ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಲಾಗಿದೆ.ಇದಕ್ಕೆ ವಿರೋಧವಲ್ಲ ಮತ್ತು ಸಂತಸವೆ.ಆದರೆ ಈ ಸಮಾವೇಶದ ಪ್ರಭಾವದಿಂದಾಗಿ ಆಂಧ್ರಪ್ರದೇಶ ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡಿರುವುದನ್ನು ಮೆಚ್ಚುವಂತದ್ದು. ಹಿಂದುಳಿದ ಸಮುದಾಯವಾಗಿ ರಾಜ್ಯಾದ್ಯಂತ ಬಹಳ ದೊಡ್ಡ ಸಂಖ್ಯೆಯಲ್ಲಿದ್ದು ರಾಜಕೀಯ ನಿರ್ಣಾಯಕರಾಗಿರುವ ನಾವು ಪ್ರತಿ ಭಾರಿಯೂ ಮನವಿ ಮತ್ತು ಆಶ್ವಾಸನೆಗಷ್ಟೆ ಸೀಮಿತರಾಗುತ್ತಿದ್ದೇವೆ. ಸಂಘಟನಾತ್ಮಕ ಭೇದ ಭಾವಗಳನ್ನು ಮರೆತು ಸಮಾಜಕ್ಕೋಸ್ಕರ ನೀಡಿರುವ ಮನವಿಯನ್ನು ಪಕ್ಷಭೇದವಿಲ್ಲದೆ ಸರ್ಕಾರಗಳು ಪರಿಗಣಿಸುವುದು ಅತ್ಯಂತ ಅಗತ್ಯ. ಇನ್ನಾದರೂ ಬೃಹತ್ ಬಿಲ್ಲವ ಸಮುದಾಯಕ್ಕಾಗುತ್ತಿರುವ ಅನ್ಯಾಯ ,ಅವಮಾನವನ್ನು ಖಂಡಿಸುತ್ತಾ ಕರ್ನಾಟಕ ಘನ ಸರ್ಕಾರವು ಪಕ್ಷಾತೀತವಾಗಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ದಿಟ್ಟ ಕ್ರಮ ಕೈಗೊಳ್ಳುವಂತಾಗಲಿ.
ಉಡುಪಿಯಲ್ಲಿ ಹೀಗೊಂದು ಮಾದರಿ ಕಾಯ೯ ಸಾವ೯ಜನಿಕರ ಮೆಚ್ಚುಗೆ
Posted On: 14-09-2020 09:17PM
ಉಡುಪಿ: -ಹೋಮ್ ಡಾಕ್ಟರ್ ಫೌಂಡೇಶನ್ ಇದರ ವತಿಯಿಂದ ಯಂತ್ರದೊಂದಿಗೆ ಕೆಲಸ ಮಾಡುವ ಸಂದಭ೯ ಒಂದು ಕೈಯನ್ನು ಕಳೆದುಕೊಂಡು ಕಳೆದ 10 ವಷ೯ಗಳಿಂದ ಕಷ್ಟಪಡುತ್ತಿದ್ದ ಪೇತ್ರಿ ನಟರಾಜ ರವರಿಗೆ ಬ್ಯಾಟರಿ ಸೆನ್ಸಾರ್ ಒಪೆರಾಟೆಡ್ ಕೃತಕ ಕೈ ಅಳವಡಿಸಿ ಅವರ ಜೀವನಕ್ಕೆ ಆಧಾರವಾಗುವ ಪ್ರಾಮುಖ್ಯವಾದ ಕಾಯ೯ವನ್ನು ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.ಸುಮಾರು 2 ಲಕ್ಷ ರೂ ಮೌಲ್ಯದ ಈ ಕೃತಕ ಕೈಜೋಡಣೆಗೆ ಅಜು೯ನ್ ಭಂಡಾರ್ಕಾರ್ ನೇತೃತ್ವದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಅದೇ ರೀತಿ ರೋಶನ್ ಬೆಲ್ಮನ್ ನೇತೃತ್ವದ ಹ್ಯುಮಾನಿಟಿ ಟ್ರಸ್ಟ್ ರವರ ಸಹಕಾರದೊಂದಿಗೆ ಅದೇ ರೀತಿ ದಾನಿಗಳ ಸಹಕಾರದಲ್ಲಿ ಈ ಕಾಯ೯ ನೆರವೇರಿದೆ. ಇದರಿಂದ ಈ ಬಡ ಕುಟುಂಬದ ನಟರಾಜ್ ರವರು ಸ್ವತಂತ್ರವಾಗಿ ಬದುಕಲು ಸಾಧ್ಯವಾಗಿದೆ.
ಮಹಾಯೋಗಿ ಚಾಪಮ್ಮ ದೇವಿಯ ಕೈಯಲ್ಲಿ ಬಿಡುಗಡೆಯಾಗಲಿದೆ ಕರಾವಳಿಯ ಆದ್ಯಾತ್ಮ App
Posted On: 14-09-2020 11:10AM
ಉಡುಪಿ: ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿಬಾಬಾ ಮಂದಿರ ಧರ್ಮದರ್ಶಿ ಗುರೂಜೀ ಸಾಯಿ ಈಶ್ವರ್ ಇವರು ಆಧ್ಯಾತ್ಮಿಕ ಸಾಧಕರಿಗಾಗಿ ಮಾಡಿದ ಕರಾವಳಿಯ ಪ್ರಥಮ ಆಧ್ಯಾತ್ಮಿಕ Android Mobile App ಅನ್ನು ಮಹಾಯೋಗಿ ಶ್ರೀ ಶ್ರೀ ಚಾಪ್ಪಮ್ಮ ದೇವಿಯವರ ದಿವ್ಯ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ.
