Updated News From Kaup
ಪ್ರತಿ ಗ್ರಾಮದಲ್ಲಿ ಗೋಶಾಲೆ ಪ್ರಾರಂಭವಾಗಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಂದ ಕರೆ
Posted On: 14-09-2020 08:54AM
ಉಡುಪಿ :- ಹಿಂದೆ ಪ್ರತಿ ಮನೆಯಲ್ಲಿಯೂ ಗೋವುಗಳಿದ್ದವು. ಆದರೆ ಯಂತ್ರಾಧಾರಿತ ಕೃಷಿ ಎಲ್ಲೆಡೆ ವ್ಯಾಪಿಸಿದ ಬಳಿಕ ಮನೆಯಲ್ಲಿ ಗೋವುಗಳ ಸಂಖ್ಯೆಯೂ ಕಡಿಮೆಯಾಗಿದೆ. ಗೋವುಗಳು ನಮ್ಮ ಜೀವನದ ಅವಿಭಾಜ್ಯ ಅಂಗ. ನಮ್ಮ ಸನಾತನ ಸಂಸ್ಕೃತಿಯ ಪ್ರತೀಕವಾಗಿರುವ ಗೋವುಗಳಿಗಾಗಿಯೇ ಇರುವಂತಹ ಗೋಮಾಳಗಳನ್ನು ಅನ್ಯ ಕಾರ್ಯಕ್ಕಾಗಿ ನೀಡದೆ ಅದನ್ನು ಗ್ರಾಮಗಳಲ್ಲಿ ಉಳಿಸುವ ಮೂಲಕ ಪ್ರತಿ ಗ್ರಾಮಗಳಲ್ಲಿಯೂ ಗೋಶಾಲೆಯನ್ನು ನಿರ್ಮಿಸಿ ಗ್ರಾಮಗಳ ನಿಜವಾದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕರೆ ನೀಡಿದರು.
ಇಂಡಿಯನ್ ಹ್ಯೂಮಾನಿಟೇರಿಯನ್ ಆಫ್ ದ ಇಯರ್ ಪ್ರಶಸ್ತಿ ಪ್ರಧಾನ
Posted On: 13-09-2020 11:48PM
ಉಡುಪಿ :- ಇಂಡಿಯನ್ ಬುಕ್ ಆಫ್ ರೆಕಾಡ್೯ ಸಂಸ್ಥೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ "ಇಂಡಿಯನ್ ಹ್ಯೂಮಾನಿಟೇರಿಯನ್ ಆಫ್ ದ ಇಯರ್" ಪ್ರಶಸ್ತಿ ಗೆ ಯುವ ಲೇಖಕ ರಾಘವೇಂದ್ರ ಪ್ರಭು, ಕವಾ೯ಲು ರವರು ಆಯ್ಕೆಯಾಗಿದ್ದು ಅದನ್ನು ಸೆ.13 ರಂದು ನೀಲಾವರ ಗೋಶಾಲೆಯಲ್ಲಿ ಅಯೋಧ್ಯೆ ರಾಮ ಕ್ಷೇತ್ರದ ಟ್ರಸ್ಟಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀಥ೯ ಶ್ರೀಪಾದರು ಪ್ರಧಾನ ಮಾಡಿದರು.
ಶಿರ್ವದಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಐದನೇ ವರ್ಷದ ಪಾದಯಾತ್ರೆ
Posted On: 12-09-2020 06:38PM
ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ಮುಲ್ಕಾಡಿ ಕೋಡು ಪಂಜಿಮಾರು ಶಿರ್ವ ಇವರ ವತಿಯಿಂದ 5 ನೇ ವರ್ಷದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ, ಮುಲ್ಕಾಡಿ ಉಧ್ಬವ ದುರ್ಗಾಪರಮೇಶ್ವರೀ ದೇವಸ್ಥಾನ ಕೋಡು ಪಂಜಿಮಾರುವಿನಿಂದ ಊರ ಪರವೂರ ಭಕ್ತರ ಕೂಡುವಿಕೆಯಿಂದ ಪಾದಯಾತ್ರೆ ಇಂದು ಸಂಜೆ 5 ಗಂಟೆಗೆ ನಡೆಯಿತು.. ಕಟೀಲು ಶ್ರೀ ದುರ್ಗಾ ಪರಮೇಶ್ವರಿಯ ಭಕ್ತರು ಐದನೇ ವರ್ಷದ ಸುಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಮುಲ್ಕಾಡಿ ಭಜನಾ ಮಂಡಳಿಯ ಸದಸ್ಯರಿಗೆ ಸಂತಸ ತಂದಿದೆ..
ಕಾಪುವಿನ ರಾಣ್ಯಕೇರಿಯಲ್ಲಿ ವಿದ್ಯುತ್ ಇಲ್ಲದ ಬಡ ಕುಟುಂಬಕ್ಕೆ ವಿದ್ಯುತ್ ಸಂಪರ್ಕ
Posted On: 11-09-2020 05:05PM
ಕಾಪು ಕ್ಷೇತ್ರದ ಪುರಸಭಾ ವ್ಯಾಪ್ತಿಯ ರಾಣ್ಯಕೇರಿ ಎಂಬಲ್ಲಿ ಜಯಲಕ್ಷ್ಮಿ ಎನ್ನುವರವರ ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದ್ದನ್ನು ಗಮನಿಸಿದ ಕಾಪುವಿನ ಸಾಮಾಜಿಕ ಕಾರ್ಯಕರ್ತೆ ನೀತಾ ಪ್ರಭುರವರು ಶ್ರೀಕಾಂತ್ ನಾಯಕ್ ಅವರಿಗೆ ತಿಳಿಸಿದಾಗ ಸ್ಥಳೀಯ ಪ್ರಮುಖರಾದ ಸುಧಾಮ ಶೆಟ್ಟಿ ಹಾಗೂ ಪ್ರಶಾಂತ್ ಪೂಜಾರಿ ಇವರೊಂದಿಗೆ ಮನೆಗೆ ಭೇಟಿ ನೀಡಿ ವಿದ್ಯುತ್ ಸಂಪರ್ಕ ಕೊಡಿಸುವ ಭರವಸೆ ನೀಡಿದ್ದರು.
ಕಾಪು ರಾಷ್ಟ್ರೀಯ ಹೆದ್ದಾರಿ ವಿಭಾಜಕದಲ್ಲಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ
Posted On: 11-09-2020 04:34PM
ರಾ.ಹೆ. 66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ಕಾಪುವಿನಲ್ಲಿ ನಡೆದಿದೆ.
ಕಾಪುವಿನ ಮಜೂರಿನಲ್ಲಿ ಕೃಷ್ಣ ಜನ್ಮಾಷ್ಟಮಿಯಂದು ಮೂರು ಕರುಗಳಿಗೆ ಜನ್ಮ ನೀಡಿದ ಹಸು
Posted On: 10-09-2020 02:06PM
ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಅಂದರೆ ರೋಹಿಣಿ ನಕ್ಷತ್ರ ವೃಷಭ ರಾಶಿಯ ಪವಿತ್ರವಾದ ಅಷ್ಪಮಿಯ ದಿನದಂದು ಶ್ರೀ ಕೃಷ್ಣನ ಜನನವಾಗಿತ್ತು. ಕೃಷ್ಣನಿಗೆ ಗೋವುಗಳೆಂದರೆ ಅಚ್ಚು ಮೆಚ್ಚು.. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರಿನ ಸಾನದ ಮನೆಯಲ್ಲಿ ಹಸುವೊಂದು ಮೂರು ಕರುಗಳಿಗೆ ಜನ್ಮ ನೀಡಿದ್ದು. ಮಜೂರು ಗ್ರಾಮಸ್ಥರು ಕರುಗಳನ್ನು ನೋಡಲು ಮುಗಿಬಿದ್ದಿದ್ದಾರೆ.
ಬೆಳ್ಮಣ್ಣು ರೋಟರಿಯಿಂದ ನಂದಳಿಕೆ ಚಂದ್ರಶೇಖರ್ ರಾವ್ ಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
Posted On: 10-09-2020 01:12PM
ಬೆಳ್ಮಣ್ಣು: ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿ ಕ್ಲಬ್ ಬೆಳ್ಮಣ್ಣು , ಶಿಕ್ಷಕರ ದಿನಾಚರಣೆ ಅಂಗವಾಗಿ ಅತ್ಯುತ್ತಮ ಶಿಕ್ಷಕ ಪುರಸ್ಕೃತರಾಗಿರುವ ನಂದಳಿಕೆ ಪಡುಬೆಟ್ಟು ಶಾಲೆಯ ಮುಖ್ಯಶಿಕ್ಷಕ ರಾಗಿರುವ ನಂದಳಿಕೆ ಚಂದ್ರಶೇಖರ್ ರಾವ್ ಇವರನ್ನು ರೋಟರಿ ಸಂಸ್ಥೆ ಈ ವರ್ಷದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರೋಟರಿ ಕ್ಲಬ್ಬಿನ ಅಧ್ಯಕ್ಷರಾಗಿರುವ ರೋ. ಸುಭಾಷ್ ಕುಮಾರ್ ನಂದಳಿಕೆ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೂರ್ವ ಜಿಲ್ಲಾ ಉಪ ಗವರ್ನರ್ ಆಗಿರುವ ರೋ ಸೂರ್ಯಕಾಂತ್ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ರೋಟೇರಿಯನ್ ಸತ್ಯಪ್ರಸಾದ್ ಶೆಟ್ಟಿ, ರೋ ರಾಜೇಶ್ ಸಾಲಿಯನ್ ಉಪಸ್ಥರಿದ್ದರು, ಕಾರ್ಯದರ್ಶಿ ರೋ ರವಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ,ವಂದಿಸಿದರು
ಜನರು ಸ್ವಯಂ ಪ್ರೇರಿತವಾಗಿ ಕರೋನಾ ಪರೀಕ್ಷೆ ಮಾಡಲು ಮುಂದೆ ಬರಬೇಕಾಗಿದೆ
Posted On: 09-09-2020 06:12PM
ಕೋವಿಡ್ ಸೋoಕು ಜನರ ಜೀವನದ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ಆದರೆ ಇತ್ತಿಚಿಗೆ ಈ ಸೋಂಕು ಸಮುದಾಯಕ್ಕೆ ಹಬ್ಬಿರುವ ಕಾರಣ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ವೈದ್ಯರು ಈಗಾಗಲೇ ತಿಳಿಸಿದ್ದಾರೆ, ಆದರೆ ಈ ಸೋಂಕಿನ ಬಗ್ಗೆ ಜನರು ನಿಲ೯ಕ್ಷ ವಹಿಸುದನ್ನು ನಾವು ಕಾಣಬಹುದು.ಮುಖ್ಯವಾಗಿ ಸಾವ೯ಜನಿಕ ಸಮೂಹದಲ್ಲಿ ಮಾಸ್ಕ್ ಇಲ್ಲದೆ ಓಡಾಟ, ಕಾಯ೯ಕ್ರಮ ಅಯೋಜನೆ ಜೊತೆಗೆ ಯಾವುದೇ ರೀತಿಯ ಕರೋನಾ ನಿಯಮಗಳನ್ನು ಪಾಲನೆ ಮಾಡದಿರುವುದು. ಕರೋನಾದ ಲಕ್ಷಣ ಇದ್ದರೂ ಅದನ್ನು ಮರೆ ಮಾಚಿ ಸಾವ೯ಜನಿಕವಾಗಿ ಓಡಾಟ ಇದನ್ನು ನಾವು ಕಾಣುತ್ತಿದ್ದೇವೆ ಇದು ಸರಿಯಲ್ಲ ಕರೋನಾದ ಕುರಿತು ನಾವು ನಿಲ೯ಕ್ಷ ವಹಿಸಿದರೆ ಅದರ ಪರಿಣಾಮ ಹೆಚ್ಚಾಗಿರುತ್ತದೆ.
ಭಗವಂತನ ಧರ್ಮಾವತಾರ ಅದು ಕೃಷ್ಣನೆಂಬ ಬೆರಗು
Posted On: 09-09-2020 06:01PM
ಭಗವಂತ . ಭಗವಂತನೇ ಧರ್ಮ.
ಧರ್ಮ ಭಗವಂತನಾಗುವುದು . ಧರ್ಮದಲ್ಲಿ ಭಗವಂತ ಸಂಭವಿಸುವುದು.
ಭಗವಂತನಲ್ಲಿ ಅವಿನಾಭಾವವಾಗಿ ಧರ್ಮವಿರುವುದು . ಅದು ಪ್ರಕಟಗೊಳ್ಳುವುದು - ದರ್ಶನ ಸಾಧ್ಯವಾಗುವುದು . ಈ ನಿರೂಪಣೆಯ ಸಾಕಾರವಾಗಿ ಮೂಡಿ ಬರುತ್ತದೆ ಒಂದು 'ಬೆರಗು' ....ಅದೇ ಕೃಷ್ಣ .
ಲಾಲಿತ್ಯ - ಲಾವಣ್ಯಗಳ ಆಕರ್ಷಕ ರೂಪದಿಂದ ಜಗತ್ತನ್ನು ಗೆಲಿದವನಾಗಿ ,
ಮನುಕುಲದ ಪ್ರಿಯಬಂಧುವಾಗಿ ,ಚಾಣಾಕ್ಷ ಸೂತ್ರಧಾರನಾಗಿ , ಮಲ್ಲಯುದ್ಧ ಪ್ರವೀಣನಾಗಿ , ರಾಜಕೀಯ ಮುತ್ಸದ್ಧಿಯಾಗಿ , ಗೀತಾಚಾರ್ಯನಾಗಿ ಭಾರತೀಯರ ಆರಾಧ್ಯನಾದ ಕೃಷ್ಣನ ಜನನ ಭೀತಿಯ ಪರಿಸರದಲ್ಲಿ , ಕಾಲದ ಅಗತ್ಯವಾಗಿ , ಸಜ್ಜನರ ನಿರೀಕ್ಷೆಯಾಗಿ ನೆರವೇರುತ್ತದೆ . ಋಷಿಮುನಿಗಳ ಪ್ರಾರ್ಥನೆ ,
ಶುಭ ಪ್ರತೀಕ್ಷೆ ಹುಸಿಯಾಗದೇ 'ಧರ್ಮ'ವಾಗಿ ಆವಿರ್ಭವಿಸುತ್ತಾನೆ ಕೃಷ್ಣ.
ಮತ್ಸ್ಯ , ಕೂರ್ಮ , ವರಾಹ , ನರಸಿಂಹ ಅವತಾರಗಳು ಕ್ಷಣದಲ್ಲಿ ನಡೆದು ಧರ್ಮವನ್ನು ಉದ್ಧರಿಸಿ ಮೂಲದಲ್ಲಿ ಸೇರಿಹೋಗುತ್ತದೆ .ವಾಮನಾವತಾರ ಏಕೋದ್ದೇಶದಿಂದ ನಡೆದು ಪಾತಾಳ ಸೇರಿಹೋಗುತ್ತದೆ .ಭಾರ್ಗವರಾಮನಾಗಿ ಆಯುಧ ಗ್ರಹಣ ನಿಷಿದ್ಧವಾಗಿದ್ದರೂ ಸಂದರ್ಭದ ಅನಿವಾರ್ಯವಾಗಿ ಕ್ಷತ್ರಿಯ ಸಂಹಾರವಾಗುತ್ತದೆ .ಇಲ್ಲಿ ಧರ್ಮ ಸ್ಥಾಪನೆಯೇ ಪರಮಲಕ್ಷ್ಯವಾಗಿ ನಿರ್ವಹಿಸಲ್ಪಡುತ್ತದೆ . ಬಹುಶಃ ಆಕಾಲಕ್ಕೆ ಅದೇ ಮಾನ್ಯತೆಯ ಮೌಲ್ಯವಾಗಿದ್ದಿರಬೇಕು.
ಮರ್ಯಾದಾ ಪುರುಷೋತ್ತಮನಾದ ಶ್ರೀ ರಾಮಚಂದ್ರ ಮೆರೆದ ಆದರ್ಶ ,ಪಾಲಿಸಿದ ಮಾನವ ಧರ್ಮ,ಬದುಕಿನ ವಿಧಾನಗಳೆಲ್ಲ ಮಾನವ ಜೀವನ ಶೈಲಿಯ ಅಪೂರ್ವ ಸಾಧ್ಯತೆಗಳನ್ನೆಲ್ಲ ಸಾಧಿಸಿದುದು ,ಹೀಗೂ ಬದುಕಬಹುದೇ ? ಎಂದು ಉದ್ಗರಿಸುವುದು ಬಿಟ್ಟರೆ ಆ ವ್ಯಕ್ತಿತ್ವ ಕಷ್ಟಸಾಧ್ಯವೆಂದು ನೆಲ ನೋಟಕರಾಗಬೇಕಾಗುತ್ತದೆ .
ಕೃಷ್ಣಾವತಾರ ಪರಿಪೂರ್ಣವಾಗುತ್ತದೆ
ಶಿರ್ವ ಗ್ರಾ.ಪಂ SLRM ಘಟಕಕ್ಕೆ ಲಯನ್ಸ್ ಜಿಲ್ಲಾ ಗವರ್ನರ್ ಭೇಟಿ
Posted On: 09-09-2020 05:43PM
ಜಿಲ್ಲಾ ಲಯನ್ಸ್ ನ "ಸ್ವಚ್ಚನಾಡು - ನಮ್ಮ ನಾಡು" ಕಾರ್ಯಕ್ರಮದಡಿ ಲಯನ್ಸ್ ಕ್ಲಬ್ ಬಂಟಕಲ್ಲು - ಬಿ.ಸಿ ರೋಡು ಇವರ ಆಶ್ರಯದಲ್ಲಿ ಶಿರ್ವ ಗ್ರಾಮ ಪಂಚಾಯತ್ ನ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ, ಸ್ವಚ್ಚತಾ ವಾರಿಯರ್ಸ್ ರವರಿಗೆ ಗೌರವ ಸಲ್ಲಿಸುವ ವಿನೂತನ ಕಾರ್ಯಕ್ರಮವು ಲಯನ್ಸ್ ಜಿಲ್ಲಾ ಗವರ್ನರ್ ಲ.ಎನ್.ಎಮ್ ಹೆಗಡೆಯವರ ಉಪಸ್ಥಿತಿಯಲ್ಲಿ ಇಂದು ನಡೆಯಿತು.
