Updated News From Kaup
34 ವರ್ಷಗಳ ಹಿಂದೆ ವಿದ್ಯೆ ಕಲಿಸಿದ ಗುರುಗಳನ್ನು ಸಮ್ಮಾನಿಸಿದ ಉಡುಪಿಯ ತಂಡ
Posted On: 08-09-2020 12:49PM
ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ಮತ್ತು ಹತ್ತನೇ ತರಗತಿ (1986.87 ) ವಿದ್ಯಾರ್ಥಿ ಗಳು ಸರಕಾರಿ ಪ. ಪೂ. ಕಾಲೇಜ್ ಫಿಶರೀಸ್ ಮಲ್ಪೆ ಇವರ ವತಿಯಿಂದ ಗುರುವಂದನಾ ಕಾರ್ಯಕ್ರಮದಲ್ಲಿ ವಿದ್ಯೆ ಕಲಿಸಿದ ಗುರುಗಳಾದ ಲೀಲಾ ಟೀಚರ್ ಮತ್ತು ಭಾಸ್ಕರ್ ಶೆಟ್ಟಿಯವರನ್ನು ಗೌರವಿಸಲಾಯಿತು.
ಹರಿದಾಸ ಬಿ. ಸಿ. ರಾವ್ ದಂಪತಿಗಳಿಗೆ ಕಲ್ಯಾಣಪುರ ರೋಟರಿ ವತಿಯಿಂದ ಸಮ್ಮಾನ
Posted On: 07-09-2020 01:16PM
ಉಡುಪಿ ಕಲ್ಯಾಣಪುರ ರೋಟರಿ ಕ್ಲಬ್ ಮತ್ತು ಶ್ರೀ ವಿಘ್ನೇಶ್ವರ ಪ್ರಿಂಟರ್ಸ್, ಮಲ್ಪೆ ಇವರ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ನಡೆಸಲಾಯ್ತು. ಈ ಸಲುವಾಗಿ ಹೆಬ್ರಿ ಸಮೀಪದ ಶಿವಪುರದ ವಿಶ್ರಾಂತ ಶಿಕ್ಷಕ, ಹರಿದಾಸ ಬಿ. ಸಿ. ರಾವ್, ಶಿವಪುರ ದಂಪತಿಗಳನ್ನು ಅವರ ಶಿವಪುರದ ಪಾಂಡುಕಲ್ಲಿನ ಸ್ವಗೃಹ ‘ಗುರುಪದ’ ದಲ್ಲಿ ಯಥೋಚಿತ ಗೌರವಿಸಿ ಸಂಮಾನಿಸಲಾಯ್ತು. ರೋಟರಿ ಅಧ್ಯಕ್ಷ ಡೆಸ್ಮಂಡ್ ವಾಸ್ ಸ್ವಾಗತಿಸಿದರು, ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ಮಾಲಕ, ರೋಟರಿ ಸದಸ್ಯ ಎಂ. ಮಹೇಶ್ ಕುಮಾರ್ ಮಲ್ಪೆ ಪ್ರಸ್ತಾವನೆಗೈದು, ಅಭಿನಂದನ ಪತ್ರ ವಾಚಿಸಿ, ಸನ್ಮಾನಿತರನ್ನು ಕುರಿತು ಮಾತನಾಡಿದರು. ಸಭೆಯಲ್ಲಿ ರೋಟರಿ ಕಾರ್ಯದರ್ಶಿ, ಲಿಯೋ ವಿಲಿಯಂ ಅಂದ್ರಾದೆ, ಶ್ರೀಮತಿ ಅಹಲ್ಯಾ ಸಿ. ರಾವ್ ಟಿಸಿಎಸ್ ಉದ್ಯೋಗಿ, ಬಿ. ಆದರ್ಶ ರಾವ್ ಉಪಸ್ಥಿತರಿದ್ದರು. ಸನ್ಮಾನಿತರು ಈ ಗೌರವ ಮುದ ನೀಡಿದೆ ಎಂದು ಹೇಳಿ ಕೃತಜ್ಞತೆ ಸೂಚಿಸಿದರು. ಚೆಲುವರಾಜ್ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು, ಶೇಖರ ಪೂಜಾರಿ ವಂದಿಸಿದರು.
ಕುಲಾಲ ಸಮಾಜ ಕಳತ್ತೂರು ನೂತನ ಅಧ್ಯಕ್ಷರಾಗಿ ರಾಜೇಶ್ ಕುಲಾಲ್ ಪೈಯಾರು ಆಯ್ಕೆ
Posted On: 06-09-2020 06:12PM
ಕುಲಾಲ ಸಮಾಜ ಕಳತ್ತೂರು ಇದರ ನೂತನ ಅಧ್ಯಕ್ಷರಾಗಿ ರಾಜೇಶ್ ಕುಲಾಲ್ ಪೈಯಾರು ಹಾಗೂ ಕಾರ್ಯದರ್ಶಿಯಾಗಿ ಶಕ್ತಿ.ಆರ್. ಕುಲಾಲ್ ಮತ್ತು ಕೋಶಾಧಿಕಾರಿಯಾಗಿ ಹರೀಶ್ ಕೆ ಮೂಲ್ಯ ಇವರುಗಳು ಅಯ್ಕೆಯಾಗಿರುತ್ತಾರೆ. ತಮ್ಮ ಅವಧಿಯಲ್ಲಿ ಕುಲಾಲ ಸಂಘಟನೆಯು ಇನ್ನಷ್ಟು ಸುಘಟಿತವಾಗಲಿ, ಉತ್ತಮ ಸಮಾಜಮುಖಿ ಕಾರ್ಯಕ್ರಮದೊಂದಿಗೆ ಸಾಗಲಿ ತಮಗಿದೋ ಹಾರ್ದಿಕ ಅಭಿನಂದನೆಗಳು.
ಶಿರ್ವ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರಿಂದ ರಸ್ತೆ ಸ್ವಚ್ಛತಾ ಕಾರ್ಯ
Posted On: 06-09-2020 03:01PM
ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಶಿರ್ವ ವಿಷ್ಣುಮೂರ್ತಿ ಘಟಕ ದ ನೇತೃತ್ವದಲ್ಲಿ ಸತತ 3 ಭಾನುವಾರ ಭೂತಬೆಟ್ಟುನಿಂದ ಶಿರ್ವ ವಿಷ್ಣುಮೂರ್ತಿ ದೇವಸ್ಥಾನ ಮತ್ತು ಕೊಪ್ಪದಿಂದ ನಡಿಬೆಟ್ಟು ತನಕ ರಸ್ತೆ ಸ್ವಚ್ಛತಾ ಕಾರ್ಯ ನಡೆಯಿತು.ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಕಾರ್ಯದರ್ಶಿ ಜಯಪ್ರಕಾಶ್ ಪ್ರಭು,ಶಿರ್ವ ವಲಯ ಅಧ್ಯಕ್ಷ ವಿಶ್ವನಾಥ ಶೆಟ್ಟಿ,ಬಜರಂಗದಳ ವಲಯ ಸಂಯೋಜಕ ಪ್ರಕಾಶ್ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನು ಅಭಿನಂದಿಸಿ ಶುಭಹಾರೈಸಿದರು.ಕಾಪು ಪ್ರಖಂಡ ಸುರಕ್ಷಾ ಪ್ರಮುಖ್ ಆನಂದ ಕೊಪ್ಪ,ವಿಷ್ಣುಮೂರ್ತಿ ಘಟಕದ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷ ಆನಂದ ಶೆಟ್ಟಿ,ಬಜರಂಗದಳ ಸಂಯೋಜಕ ರಾಕೇಶ್ ಶೆಟ್ಟಿ,ಸೇವಾ ಪ್ರಮುಖ್ ಅವಿನಾಶ್ ಶೆಟ್ಟಿ,ಗೋರಕ್ಷಾ ಪ್ರಮುಖ್ ಸುಕೇಶ್ ಶೆಟ್ಟಿ,ಮಾತೃಶಕ್ತಿ ಸಂಯೋಜಕಿ ಚಂದ್ರಾವತಿ,ದುರ್ಗಾವಾಹಿನಿ ಸಂಯೋಜಕಿ ಸುಮಲತಾ,ಘಟಕದ ಜವಾಬ್ದಾರಿಯುತರು ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಗುರುವಂದನೆ ಕಾರ್ಯಕ್ರಮದಲ್ಲಿ ಸನ್ಮಾನಿತರಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಲ್ಪೆ ರಾಘವೇಂದ್ರ
Posted On: 05-09-2020 03:13PM
ರೋಟರಿ ಕಲ್ಯಾಣಪುರ ಮತ್ತು ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರು ವಂದನೆ ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಲ್ಪೆ ರಾಘವೇಂದ್ರ ಹಾಗೂ ಅವರ ಪತ್ನಿ ಕೆ ರತ್ನ ಎಮ್ ಆರ್ ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅರಿವು ಸಾಲದ ಮೊತ್ತ ವಿಳಂಬ ಬಿಡುಗಡೆಗೆ ಒತ್ತಾಯಿಸಿ ಮನವಿ
Posted On: 05-09-2020 01:12PM
ಕರ್ನಾಟಕ ಸರ್ಕಾರದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವು ವಿದ್ಯಾರ್ಥಿ ವೇತನ ಮತ್ತು ಶೈಕ್ಷಣಿಕ ಅರಿವು ಸಾಲದ ಮೊತ್ತ ಜೂನ್ ತಿಂಗಳಲ್ಲಿ ಮಂಜೂರು ಆಗುತ್ತಿದ್ದು ಆದರೆ ಈ ಬಾರಿ ಬಹಳ ವಿಳಂಬವಾಗಿದ್ದು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಬಹಳ ಕಷ್ಟಕರವಾಗುತ್ತಿದೆ ಎಂದು ಎಸ್ ಐ ಓ ಜಿಲ್ಲಾದ್ಯಕ್ಷ ನಾಸೀರ್ ಹೂಡೆ ತಿಳಿಸಿದ್ದಾರೆ.
ಮನದ ಕತ್ತಲೆ ತೊಲಗಿಸಿ ಭರವಸೆಯ ದೀಪ ಬೆಳಗಿದ ಗುರುವನ್ನು ನೆನೆಯೋಣ
Posted On: 04-09-2020 01:42PM
ಗುರುವಿನ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ ಅದಕ್ಕಾಗಿ ನಾವು ಗುರುವಿನ ಸಮಾನ ನಾಗುವ ವರೆಗೆ ಕೆಲಸ ಮಾಡಿದರೆ ಅದುವೇ ಗುರುವಿಗೆ ನೀಡುವ ದೊಡ್ಡ ಕೊಡುಗೆ. ರಾಮಕೃಷ್ಣ ಆಶ್ರಮದ ಸ್ವಾಮಿ ಪುರುಷೋತ್ತಮಾನಂದರು ವಿದ್ಯೆಯ ವೈಭವವನ್ನು, ಮಹತ್ವನ್ನು ಕುರಿತು ತಮ್ಮ ಪುಸ್ತಕದಲ್ಲಿ ಹೀಗೆ ಹೇಳಿದ್ದಾರೆ "ಕಲಿಯಲು ಉತ್ಸಾಹ ಉಳ್ಳವರೇ ಕಲಿಸಲು ಯೋಗ್ಯರು " ಉತ್ತಮ ಗುರುಗಳು ಅದೇ ರೀತಿ ಉತ್ತಮ ಶಿಷ್ಯರಿದ್ದರೆ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗಬಹುದು.
ಹೆಜಮಾಡಿಯ ಗಜಷೃಷ್ಠಾಕಾರದ ಗರ್ಭಗುಡಿಯ ಗ್ರೀವದಲ್ಲಿ ಶಿಲ್ಪಗಳ ಕುಸುರಿ
Posted On: 01-09-2020 08:20PM
ದೇವಾಲಯ ರಚನೆಯಲ್ಲಿ ಶಿಲ್ಪದ
ಸೊಗಸು ಸೊಗಯಿಸುವುದು ಸಹಜ ಮತ್ತು
ಅನಿವಾರ್ಯ. ಇಂತಹ ಒಂದು ಅಪೂರ್ವ ಕುಶಲ ಕುಸುರಿಯ ರಚನಾಕಾರ್ಯವು ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮರುನಿರ್ಮಾಣದಲ್ಲಿ ನಡೆಯತ್ತಿದೆ .
ಗಜಪೃಷ್ಠಾಕಾರದ ಗರ್ಭಗುಡಿಯ ನಿರ್ಮಾಣ ನಡೆಯುತ್ತಿದ್ದು ಪ್ರತಿಬಂಧ ಕ್ರಮದ ಅಧಿಷ್ಠಾನ , ಭಿತ್ತಿ ಸ್ತಂಭ - ಪಂಜರ - ಘನದ್ವಾರ - ಉತ್ತರವಲ್ಲಭೀಕಪೋತ ಮುಂತಾದ ಶಾಸ್ತ್ರೀಯ ನಿರ್ಮಿತಿಗಳಿಂದ ಭಿತ್ತಿಯು ಸ್ದಿದ್ಧಗೊಂಡಿದೆ .ಈಗ ಗ್ರೀವದಲ್ಲಿ ( ಪ್ರಸ್ತರ ಮತ್ತು ಸ್ತೂಪಿಯ ಎರಡು ಛಾವಣಿಯ ಮಧ್ಯದ ಸ್ಥಳಾವಕಾಶ) ಇಟ್ಟಿಗೆ , ಸಿಮೆಂಟ್ ಬಳಸಿ ಅಸಾಧಾರಣ ಕುಸುರಿನ ಕಲೆಯ ಕೌಶಲ್ಯ ಪಡಿಮೂಡುತ್ತಿವೆ.
ಗ್ರೀವದಲ್ಲಿ ಕೂಟಗಳ( ಪುಟ್ಟ ಸ್ತಂಭಗಳ ಚೌಕಟ್ಟಿನಿಂದಾದ ಗೂಡು) ರಚನೆ . ಇಲ್ಲಿ ಭಿತ್ತಿ ಸ್ತಂಭವನ್ನು ವಿಸ್ತರಿಸಿ ಕೂಟವಾಗಿ ಮಾಡುವ , ಘನದ್ವಾರವನ್ನು ಹಿಗ್ಗಿಸಿ 'ಶಾಲಾ'
(ಇಳಿಜಾರಾಗಿರುವಂತಹ ಮಾಡನ್ನು ಹೊಂದಿರುವ ಆಯತಾಕಾರದ ಗೂಡು) ನಿರ್ಮಾಣ. ಪಂಜರಗಳನ್ನು ನಾಸಿಕಗಳಾಗಿ ಪರಿವರ್ತಿಸಿ ಅಂತಸ್ತವಾಗಿ ಪಂಜರ , ಕುಂಭಲತೆಗಳಿಂದ ಅಲಂಕೃತವಾಗಿದೆ .ಕೂಟ ಮತ್ತು ನಾಸಿಕಗಳ ಮಧ್ಯೆ ಒದಗುವ ಅವಕಾಶದಲ್ಲಿ ಸ್ತಂಭ ಗೋಪುರಗಳನ್ನು ಅಳವಡಿಸಲಾಗಿದೆ .ಈ ರಚನೆಯು ಶಿಲ್ಪದ ಶ್ರೀಮಂತಿಕೆಯ ಅಭಿವ್ಯಕ್ತಿಯಾಗಿದೆ .
ನೋಂಪು, ಅನಂತವ್ರತ, ಅನಂತಾನಂತ ದೇವೇಶ - ಕೆ ಎಲ್ ಕುಂಡಂತಾಯ
Posted On: 01-09-2020 11:57AM
' ಕ್ಷೀರಸಾಗರದಲ್ಲಿ ಮಹಾಶೇಷನ ಮೇಲೆ ಮಲಗಿರುವ ಶ್ರೀಮನ್ನಾರಾಯಣ' ಈ ಸನ್ನಿವೇಶದ ಯಥಾವತ್ತಾದ ಪರಿಕಲ್ಪನೆಯೊಂದಿಗೆ ನೆರವೇರುವ ಉಪಾಸನೆಯ ಅಲೌಕಿಕ ಅನುಸಂಧಾನವೇ 'ಶ್ರೀಮದನಂತವ್ರತ' , 'ಅನಂತವ್ರತ, ಅಥವಾ 'ನೋಂಪು'. ಭಾದ್ರಪದ ಶುದ್ಧ ಚತುರ್ದಶಿ ತಿಥಿಯಲ್ಲಿ 'ಅನಂತ ಚತುರ್ದಶಿ' ಆಚರಣೆ .
ಇದು ವ್ರತವಾಗಿ ನೆರವೇರುತ್ತದೆ .
ಕ್ಷೀರ ಸಾಗರವನ್ನು ಸಾಂಕೇತಿಸುವ ಜಲ ಪೂರಿತ ಕಲಶ . ಅದರ ಮೇಲೆ ದರ್ಭೆಯಿಂದ ನಿರ್ಮಿಸಿರುವ ಏಳು ಹೆಡೆಯುಳ್ಳ ಶೇಷಾಕೃತಿ . ಈ ಶೇಷಾಕೃತಿಯ ಮೇಲೆ ಶಾಲಗ್ರಾಮ .ಈ ಪರಿಕಲ್ಪನೆಯಲ್ಲಿ ಅನಂತನಾಮಕನಾದ ಶೇಷನ ಮೇಲೆ ಶಯನ ಮಾಡಿದ ಅನಂತಪದ್ಮನಾಭನ ಚಿಂತನೆಯೊಂದಿಗೆ ಆರಾಧನೆ ನೆರವೇರುವುದು .ವೈಕುಂಠವನ್ನೆ ಸಾಕಾರ ಗೊಳಿಸುವ , ವಾಸ್ತವದ ಸ್ಥಾಪನೆಯಾಗಿ ವ್ರತ ನಡೆಯುವುದು . ಲೌಕಿಕದಲ್ಲಿ ಅಲೌಕಿಕವನ್ನು ನಿರ್ಮಿಸುವ ವೈದಿಕದ ಉಪಾಸನಾ ವಿಧಾನ ಅದ್ಭುತ .
ಹದಿನಾಲ್ಕು ಗಂಟುಗಳುಳ್ಳ ಕೆಂಪು ಬಣ್ಣದ "ದಾರ ಅಥವಾ ದೋರ"ವನ್ನು ಪ್ರತಿಷ್ಠಾಪಿತ ಕಲಶದಲ್ಲಿ ಪ್ರಧಾನ ಪೂಜಾಕಾಲದಲ್ಲಿ ಇರಿಸಿ ಪೂಜಾನಂತರದಲ್ಲಿ ಧರಿಸಿಕೊಳ್ಳುವುದು ಅನಂತವ್ರತದ ಮುಖ್ಯ ಅಂಗ .ಪುರುಷರಾದರೆ ಬಲಕೈಯ ತೋಳಿನಲ್ಲಿ , ಸ್ತ್ರೀಯರಾದರೆ ಎಡಕೈಯ ತೋಳಿನಲ್ಲಿ ಕಟ್ಟಿಕೊಳ್ಳುವುದು ಸಂಪ್ರದಾಯ .
ಎಲ್ಲರಿಗೂ ಮಾದರಿಯಾದ ವಿಶೇಷ ಅಭಿಯಾನ ಗೋವಿಗಾಗಿ ಮೇವು
Posted On: 29-08-2020 09:12PM
ಗೋವನ್ನು ಹಿಂದೂ ಧಮ೯ದಲ್ಲಿ ಪ್ರಾಮುಖ್ಯವಾದ ಸ್ಥಾನದಲ್ಲಿ ನೋಡಲಾಗುತ್ತದೆ ಆದರೆ ದೇಶದಲ್ಲಿ ಇಂದು ಗಣನೀಯ ಪ್ರಮಾಣದಲ್ಲಿ ಗೋವುಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ದು:ಖದ ವಿಚಾರ. ಸ್ವಾತಂತ್ರ್ಯ ಪೂವ೯ದಲ್ಲಿ ದೇಶದಲ್ಲಿ ಜನರ ಸಂಖ್ಯೆಗಿಂತ ಜಾನುವಾರುಗಳ ಸಂಖ್ಯೆ ಹೆಚ್ಚಾಗಿತ್ತು ಆದರೆ ಇಂದು ತದ್ವಿರುದ್ಧವಾಗಿದೆ. ಕೃಷಿಯು ಕಡಿಮೆಯಾದ ಪರಿಣಾಮ ಗೋವನ್ನು ಸಾಕಣೆಕೆ ಮಾಡುವವರು ಕಡಿಮೆಯಾಗಿದ್ದಾರೆ.
