Updated News From Kaup

ಯುವ ಶಕ್ತಿಯ ಸದ್ಬಳಕೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಜಿ.ಜಗದೀಶ್

Thumbnail
Posted On: 07 Dec 2020, 10:43 PM

ಉಡುಪಿ : ಜಿಲ್ಲೆಯ ಯುವಕ ಸಂಘಗಳಲ್ಲಿನ ಯುವಕರಿಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮತ್ತು ಅವರಿಗೆ ಅಗತ್ಯ ತರಬೇತಿಗಳನ್ನು ನೀಡುವ ಮೂಲಕ, ಅವರಲ್ಲಿರುವ ಯುವಶಕ್ತಿಯನ್ನು ಜಿಲ್ಲೆಯ ಅಭಿವೃಧ್ದಿ ಕಾರ್ಯಗಳಿಗೆ ಬಳಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ನೆಹರು ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆಹರು ಯುವಕೇಂದ್ರದ ಮೂಲಕ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಯುವಕ ಸಂಘಗಳ ಸದಸ್ಯರಿಗೆ ಅವರಲ್ಲಿನ ಸಮಾಜಸೇವೆಯ ಗುಣ, ಕೌಶಲ್ಯ ಮತ್ತು ಸಾಹಸ ಪ್ರವೃತ್ತಿಯನ್ನು ಅಭಿವೃದ್ಧಿಗೊಳಿಸುವಂತೆ ಚಟುವಟಿಕೆಗಳನ್ನು ಏರ್ಪಡಿಸಿ. ಯುವಕ ಯುವತಿಯರಿಗೆ ವಿಕೋಪ ನಿರ್ವಹಣೆ ಸೇರಿದಂತೆ ಅತ್ಯಾವಶ್ಯಕ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು ಸಮಾಜದ ನೆರವಿಗೆ ಧಾವಿಸುವಂತಹ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ, ತುರ್ತು ಸಂದರ್ಭದಲ್ಲಿ ಈ ರೀತಿಯ ತರಬೇತಿ ಪಡೆದ ಯುವಕರ ಸೇವೆಯನ್ನು ಜಿಲ್ಲಾಡಳಿತದ ನೆರವಿಗೆ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ನೆಹರು ಯುವ ಕೇಂದ್ರದಿಂದ ಸಿದ್ಧಪಡಿಸುವ ವಾರ್ಷಿಕ ಕಾರ್ಯಕ್ರಮಗಳಲ್ಲಿ, ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಯುವಕರು ತೊಡಗುವಂತಹ ಕಾರ್ಯಕ್ರಮಗಳನ್ನು ರೂಪಿಸಿ, ಉತ್ತಮವಾಗಿ ಕಾರ್ಯನಿರ್ವಹಿಸುವ ಯುವ ತಂಡಗಳನ್ನು ಸೂಕ್ತ ರೀತಿಯಲ್ಲಿ ಪ್ರೋತ್ಸಾಹಿಸಿ, ಯುವಕರಲ್ಲಿ ಆತ್ಮ ವಿಶ್ವಾಸ ಮೂಡಿಸುವಂತಹ ತರಬೇತಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಗತ್ಯವಾದ ತರಬೇತಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುವಂತಹ ತರಬೇತಿಗಳು, ತಮ್ಮ ಗ್ರಾಮಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಆ ಸೌಲಭ್ಯಗಳನ್ನು ಜನರಿಗೆ ದೊರಕಿಸುವ ಕಾರ್ಯಕ್ರಮ ಮತ್ತು ಯುವಕರ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬೆಳವಣಿಗೆಗೆ ಪೂರಕವಾಗುವಂತ ಯೋಜನೆಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಯುವ ಸಂಘಗಳ ಮಾಹಿತಿಯನ್ನು ಸಿದ್ಧಪಡಿಸಿಟ್ಟುಕೊಂಡು, ತುರ್ತು ಸಂದರ್ಭದಲ್ಲಿ ಅವರ ನೆರವು ಪಡೆಯಬೇಕು. ಯುವ ಜನತೆ ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯರ್ಥವಾಗಿ ಕಾಲ ಕಳೆಯದೇ, ಸಾಮಾಜಿಕ ಕಾರ್ಯಗಳಿಂದ ಸಮಾಜಕ್ಕೆ ಅಗತ್ಯ ನೆರವು ನೀಡಬೇಕು. ಯುವಕರು ಸದಾ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಂಡು, ತಮ್ಮಲ್ಲಿನ ಯುವಶಕ್ತಿಯ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತ ನೀಡುವ ಕರೆಗೆ ತಕ್ಷಣ ಸ್ಪಂದಿಸಬೇಕು ಎಂದು ಡಿಸಿ ಜಿ.ಜಗದೀಶ್ ಹೇಳಿದರು. ಜಿಲ್ಲಾ ನೆಹರು ಯುವ ಕೇಂದ್ರದ 2020-21 ನೇ ಸಾಲಿನಲ್ಲಿ ಏರ್ಪಡಿಸಲಾಗುವ ವಾರ್ಷಿಕ ಕಾರ್ಯಕ್ರಮಗಳ ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿ ಅನುಮೋದನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನೆಹರು ಯುವ ಕೇಂದ್ರದ ವಿಷ್ಣುಮೂರ್ತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ವಿಲ್ಪ್ರೆಡ್ ಡಿಸೋಜಾ ಸ್ವಾಗತಿಸಿ, ವಂದಿಸಿದರು.

ಕುಂಜಾರುಗಿರಿ ಪರಶುರಾಮಗೆ‌ ದೀಪೋತ್ಸವ

Thumbnail
Posted On: 07 Dec 2020, 09:45 PM

ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಕಾರ್ತಿಕ ಮಾಸದಲ್ಲಿ ದೇವಸ್ಥಾನದ ತಂತ್ರಿಗಳಾದ ವೇ.ಮೂ. ಪಾಡಿಗಾರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ರಂಗಪೂಜಾ ದೀಪೋತ್ಸವ ನಡೆಯಿತು.ಊರ ಪರಊರ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದರು.

ನೀಲಾವರ ಗೋಶಾಲೆಗೆ ಬೈಹುಲ್ಲು ಸಮರ್ಪಣೆ

Thumbnail
Posted On: 07 Dec 2020, 05:59 PM

ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವಹಿಂದು ಪರಿಷದ್, ಬಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ ಶಿರ್ವ ವಲಯ ಇವರ ವತಿಯಿಂದ ಗೋಶಾಲೆಗಾಗಿ ಬೈಹುಲ್ಲು ಸಂಗ್ರಹ ಅಭಿಯಾನವನ್ನು ಒಂದು ವಾರ ನಡೆಸಿ ಸುಮಾರು 325 ಕಟ್ಟು ಬೈಹುಲ್ಲನ್ನು ಸಂಗ್ರಹಿಸಿ ನೀಲಾವರ ಗೋಶಾಲೆಗೆ ಸಾಗಿಸಲು ಹಿರಿಯ ಹಿಂದೂ ನೇತಾರರಾದ ಬೆಳ್ಳೆಅಂಗಡಿ ಸದಾನಂದ ಶೆಣೈ ಹಾಗೂ ವಿಶ್ವಹಿಂದು ಪರಿಷದ್ ಶಿರ್ವ ವಲಯದ ಗೌರವಾಧ್ಯಕ್ಷರಾದ ಬೆಳ್ಳೆ ಮಧ್ವರಾಜ ಭಟ್ ಬೆಳ್ಳೆ ಚಾಲನೆ ನೀಡಿದರು. ದೇವಸ್ಥಾನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ,ಸೂರ್ಯೋದಯದಲ್ಲಿ ಎದ್ದು ಪ್ರತಿಯೊಬ್ಬ ಹಿಂದೂ 8 ಶುಭ ವಸ್ತುಗಳನ್ನು ದರ್ಶನ ಮಾಡಬೇಕು, ಅದರಲ್ಲಿ ಮೊದಲಿಗೆ ಗೋವಿನ ದರ್ಶನ ಮಾಡಬೇಕೆಂದು ಶಾಸ್ತ್ರ ತಿಳಿಸಿರುತ್ತದೆ.ಪ್ರಸ್ತುತ ಹೆಚ್ಚಿನವರು 3 ರಿಂದ 10 ಸೆಂಟ್ಸ್ ಜಾಗದಲ್ಲಿ ಮನೆಕಟ್ಟಿ ವಾಸ್ತವ್ಯವಿರುವುದರಿದ ಪ್ರತಿ ಮನೆಯವರು ಗೋವುಗಳನ್ನು ಸಾಕಲು ದರ್ಶನ ಮಾಡಲು ಕಷ್ಟಸಾಧ್ಯ.ಹಿಂದುವಾದವನು ಗೋಸೇವೆ ಮಾಡಲೇಬೇಕು ಸಾಕಲು ಆಗದಿದ್ದರೂ ಸಾಕುವವರಿಗೆ ಪ್ರೋತ್ಸಾಹ ನೀಡುವುದು,ಗೋಗ್ರಾಸ ನೀಡುವುದು ಮಾಡಬಹುದು.ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನೀಲಾವರದಲ್ಲಿ ಸಾವಿರಾರು ಅನಾಥ ಗೋವುಗಳನ್ನು ಸಾಕಾಲು ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ.ಅವರೊಂದಿಗೆ ನಾವು ಕೈಜೋಡಿಸಿ ಅಳಿಲುಸೇವೆ ಮಾಡುವುದು ನಮಗೆ ಸಿಕ್ಕಿರುವ ದೊಡ್ಡ ಅವಕಾಶ ಇದನ್ನು ಸದುಪಯೋಗ ಮಾಡಿಕೊಂಡು ನಿರಂತರವಾಗಿ ಸಮಾಜಕ್ಕಾಗಿ ಗೋವಿಗಾಗಿ ಇಂಥ ಕೆಲಸಗಳನ್ನು ಮಾಡಲು ನಮ್ಮನ್ನು ತೊಡಿಗಿಸಿಕೊಳ್ಳೋಣ ಎಂದು ಬೆಳ್ಳೆ ಮಧ್ವರಾಜ ಭಟ್ ತಿಳಿಸಿದರು. ಅವಿನಾಶ ಆಚಾರ್ಯ ಸ್ವಾಗತಿಸಿ ವಿಶ್ವಹಿಂದು ಪರಿಷದ್ ಶಿರ್ವ ವಲಯದ ಅಧ್ಯಕ್ಷರಾದ ಬೆಳ್ಳೆ ವಿಶ್ವನಾಥ ಶೆಟ್ಟಿ ಧನ್ಯವಾದ ನೀಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷದ್ ಕಾಪು ಪ್ರಖಂಡದ ಕಾರ್ಯದರ್ಶಿ ಜಯಪ್ರಕಾಶ್ ಪ್ರಭು,ಧರ್ಮಪ್ರಚಾರ ಪ್ರಮುಖ್ ರಾಘವೇಂದ್ರ ಶೆಟ್ಟಿ, ಸುರಕ್ಷಾ ಪ್ರಮುಖ್ ಆನಂದ, ವಿಶ್ವಹಿಂದು ಪರಿಷದ್ ಶಿರ್ವ ವಲಯದ ಗೌರವಾಧ್ಯಕ್ಷರಾದ ನಾಗರಾಜ ಭಟ್, ಶಿರ್ವ ವಲಯದ ಗೌರವಾಧ್ಯಕ್ಷರಾದ ನಾಗರಾಜ ಭಟ್,ರಾಷ್ಟ್ರಿಯ ಸ್ವಯಂ ಸೇವಾ ಸಂಘದ ಸೇವಾ ಪ್ರಮುಖ್ ಸುಬ್ರಹ್ಮಣ್ಯ ವಾಗ್ಲೆ, ಹಾಗೂ ಊರಿನ ಹಿರಿಯರಾದ ಪಟೇಲ್ ಮನೆ ದಯಾನಂದ ಶೆಟ್ಟಿ,ಭಟ್ರ ಮನೆ ಪುಂಡರೀಕಾಕ್ಷ ಭಟ್, ದೊಡ್ಡಮನೆ ಅಶೋಕ ಶೆಟ್ಟಿ,ಮತ್ತು ವಿಶ್ವಹಿಂದು ಪರಿಷದ್ ಬಜರಂಗದಳ ಮಟ್ಟಾರು, ಮೂಡುಬೆಳ್ಳೆ, ಬಂಟಕಲ್ಲು,ಎಡ್ಮೇರು,ವಿಷ್ಣುಮೂರ್ತಿ ಶಿರ್ವ,ಪಡುಬೆಳ್ಳೆ ಘಟಕದ ಅಧ್ಯಕ್ಷರು,ಗೋರಕ್ಷಾ ಪ್ರಮುಖ್,ಇನ್ನಿತರ ಪ್ರಮುಖರು,ಕಾರ್ಯಕರ್ತರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಇನ್ನಂಜೆ ಹಾಲು ಉತ್ಪಾದಕರ ಸಂಘಕ್ಕೆ ದ್ವಿತೀಯ ಅತ್ಯುತ್ತಮ ಸಂಘ ಪ್ರಶಸ್ತಿ

Thumbnail
Posted On: 07 Dec 2020, 12:31 PM

ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇನ್ನಂಜೆ ಹಾಲು ಉತ್ಪಾದಕರ ಸಂಘುವು 2019 - 2020 ಸಾಲಿನಲ್ಲಿ ದ್ವಿತೀಯ ಅತ್ಯುತ್ತಮ ಸಂಘವೆಂದು ಘೋಷಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಇನ್ನಂಜೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಲಕ್ಷ್ಮಣ ಶೆಟ್ಟಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

ರಾಜಕೀಯ ಪಕ್ಷಗಳಿಂದ ಕುಲಾಲರ ಬಗ್ಗೆ ನಿರ್ಲಕ್ಷ್ಯ ಸಲ್ಲದು -ಕಾಪು ಕುಲಾಲ ಸಂಘದ ಅಧ್ಯಕ್ಷ ಸಂದೀಪ್ ಬಂಗೇರ.

Thumbnail
Posted On: 07 Dec 2020, 07:59 AM

ಕಾಪು :(06/12/2020)ಕುಲಾಲ ಸಂಘ (ರಿ) ಕಾಪು ವಲಯದ ಸಾಮಾನ್ಯ ಸಭೆಯಲ್ಲಿ ಸಂಘದ ಅಧ್ಯಕ್ಷ ಸಂದೀಪ್ ಬಂಗೇರ ಮಾತನಾಡಿ ಕುಲಾಲ ಸಮುದಾಯವನ್ನು ರಾಜಕೀಯವಾಗಿ ಬಳಸಿ ನಮ್ಮ ಸತತ ಮನವಿಗೆ ರಾಜಕೀಯ ಪಕ್ಷಗಳು ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ತಿಳಿಸಿದರು. ಸಭೆಯಲ್ಲಿ ಕಾಪು ಕುಲಾಲ ಸಂಘದ ಪ್ರಧಾನ ಕಾರ್ಯದರ್ಶಿ ಉದಯ ಕುಲಾಲ್, ಕೋಶಧಿಕಾರಿ ಯೋಗೀಶ್ ಕುಲಾಲ್ ಉಳ್ಳೂರು, ಸಂಘದ ಮಾಜಿ ಅಧ್ಯಕ್ಷರು ರಾಜೇಶ್ ಕುಲಾಲ್ ಬೊಬ್ಬೆಟ್ಟು, ಮಹಿಳಾ ಘಟಕದ ಅಧ್ಯಕ್ಷರು ಗೀತಾ ಕುಲಾಲ್ ಶಿರ್ವ, ಕಾರ್ಯದರ್ಶಿ ಸುಮಲತಾ ಇನ್ನಂಜೆ ಸಂಘದ ಸಕ್ರಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು..

ಕಾಪು ಕಾಳಿಕಾಂಬಾ ದೇವಸ್ಥಾನದಲ್ಲಿ ರಾಜ್ಯಮಟ್ಟದ ಸರಸ್ವತೀ ಪ್ರಶಸ್ತಿ ಪುರಸ್ಕೃತೆ ವೈ.ಯು.ಯಶಸ್ವಿ ಆಚಾರ್ಯಳಿಗೆ ಸನ್ಮಾನ

Thumbnail
Posted On: 06 Dec 2020, 08:10 PM

ಕಾಪು : ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ 2019-20ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.98.24 ಅಂಕಗಳೊಂದಿಗೆ ದಾವಣಗೆರೆಯಲ್ಲಿ ಸರಸ್ವತೀ ಪುರಸ್ಕಾರ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ಸಾಧಕಿ ಕಾಪು ದಂಡತೀರ್ಥ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ವೈ.ಯು. ಯಶಸ್ವಿ ಆಚಾರ್ಯಳಿಗೆ ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಡಿ.5ರಂದು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆ. ಉಮೇಶ್ ತಂತ್ರಿ ಮಂಗಳೂರು, ಅಡಳಿತ ಮೊಕ್ತೇಸರ ಶೇಖರ ಆಚಾರ್ಯ, 2ನೇ ಮೊಕ್ತೇಸರ ಅಚ್ಚುತ ಆಚಾರ್ಯ, 3ನೇ ಮೊಕ್ತೇಸರ ಗಂಗಾಧರ ಆಚಾರ್ಯ ದಿಂಡಿಬೆಟ್ಟು, ಅಡಳಿತ ಮಂಡಳಿ, ಕ್ಷೇತ್ರದ ಪ್ರಧಾನ ಅರ್ಚಕ ಭಾಸ್ಕರ್ ಪುರೋಹಿತ್, ಯಶಸ್ವಿ ಆಚಾರ್ಯಳ ಪೋಷಕರು ವೈ. ಉಮೇಶ್ ಆಚಾರ್ಯ, ಶೀಲಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಬಬ್ಬರ್ಯ ಯುವ ಸೇವಾ ಸಮಿತಿ : ಸ್ವಚ್ಛತಾ ಕಾರ್ಯ

Thumbnail
Posted On: 06 Dec 2020, 06:35 PM

ಉಡುಪಿ : ಬಬ್ಬರ್ಯ ಯುವಸೇವಾ ಸಮಿತಿಯಿಂದ ಇಂದು ಬೆಳಿಗ್ಗೆ ದೈವಸ್ಥಾನ ಸ್ವಚ್ಛತಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಚಾಲನೆ ಕೊಡಲಾಯಿತು. ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಗಣಪತಿ ಕಾಮತ್, ವಿನೋದ್ ಶೆಟ್ಟಿ, ಅಧ್ಯಕ್ಷರಾದ ವರದರಾಜ್ ಕಾಮತ್ ಹಾಗೂ ಕಾರ್ಯದರ್ಶಿಯಾದ ಸಮಿತ ಶೆಟ್ಟಿ, ಗಣೇಶ್, ಯೋಗೀಶ್, ಸುಬ್ರಹ್ಮಣ್ಯ, ಮೋಹನ್ ಹಾಗೂ ಸರ್ವ ಸದಸ್ಯರು ಉಪಸ್ಥಿತಿ ಇದ್ದರು.

ಜನಸಾಮಾನ್ಯ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕಾರ್ಯಪ್ರವೃತ್ತರಾಗಿ : ಡಾ.ಎಂ.ಟಿ ರೇಜು

Thumbnail
Posted On: 05 Dec 2020, 08:49 PM

ಉಡುಪಿ : ಕೋವಿಡ್‌ನಿಂದಾಗಿ ಪ್ರಸ್ತುತ ಸಾಲಿನ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನ ನಿಗದಿತ ಗುರಿ ಸಾಧಿಸಿಲ್ಲ. ಡಿಸೆಂಬರ್ ಹಾಗೂ ಜನವರಿ ಮಾಹೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು ತಿಳಿಸಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಪ್ರಸ್ತುತ ಬಜೆಟ್‌ನಲ್ಲಿ ಜನಸಾಮಾನ್ಯ ಕಲ್ಯಾಣ ಯೋಜನೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನೇಕ ಯೋಜನೆಗಳು, ಕಾರ್ಯಕ್ರಮಗಳನ್ನು ರೂಪಿಸಿದೆ. ಇವುಗಳ ಅನುಷ್ಟಾನ ಕೋವಿಡ್ ಸಾಂಕ್ರಾಮಿಕ ರೋಗದಿಂದ ನಿಗದಿತ ಮಟ್ಟದಲ್ಲಿ ಆಗಿಲ್ಲ. ಡಿಸೆಂಬರ್ ಹಾಗೂ ಜನವರಿ ಮಾಹೆಯಲ್ಲಿ ಸಂಪೂರ್ಣಗೊಳಿಸಲು ಕಾರ್ಯಪ್ರವೃತರಾಗಬೇಕು ಎಂದರು. ಜಿಲ್ಲೆಯಲ್ಲಿ ಕಳೆದ 4 ತಿಂಗಳಿAದ ಹೆಚ್ಚಿನ ಮಳೆಯಿಂದಾಗಿ ಉಂಟಾದ ನೆರೆಯಿಂದಾದ ನಷ್ಟದ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ಮಳೆಯಿಂದ ಹಾನಿಯುಂಟಾದ ಮನೆಗಳ ನಿರ್ಮಾಣ ಕಾರ್ಯಗಳನ್ನು ಪೂರ್ಣಗೊಳಿಸಲು ಜನಸಾಮಾನ್ಯರಿಗೆ ಅಗತ್ಯ ನೆರವನ್ನು ಕಲ್ಪಿಸಬೇಕು ಎಂದರು. ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಕುಡಿಯುವ ನೀರಿನ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಂಡು, ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದರೊಂದಿಗೆ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರು. ಉದ್ಯೋಗ ಖಾತ್ರಿ ಯೋಜನೆಯಡಿ ಬಡ ಜನರಿಗೆ ಉದ್ಯೋಗ ನೀಡುವ ಜೊತೆಗೆ ಶಾಶ್ವತ ಅಭಿವೃದ್ಧಿಗಾಗಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಕೂಲಿ ಕಾರ್ಮಿಕರಿಗೆ ನಿಗದಿತ ಅವಧಿಯಲ್ಲಿ ಕೂಲಿ ಹಣವನ್ನು ನೀಡಬೇಕು ಎಂದರು. ಮಹಿಳೆಯರು ಸ್ವ-ಉದ್ಯೋಗ ಕೈಗೊಂಡು ಸ್ವಾವಲಂಬಿಗಳಾಗಲು ಸ್ವ-ಉದ್ಯೋಗ ಯೋಜನೆ ಜಾರಿಗೆ ತರಲಾಗಿದ್ದು, ಇದನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದರೊಂದಿಗೆ ಅವರು ಆರ್ಥಿಕರಾಗಿ ಸಬಲರಾಗಬೇಕು. ಇಂತವರ ಯಶೋಗಾಥೆಗಳನ್ನು ಪ್ರಚಾರ ಪಡಿಸಬೇಕು ಎಂದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜಾರಿ ಸೇರಿದಂತೆ ಅಂಗನವಾಡಿ ಮಕ್ಕಳಿಗೆ ಹಾಲು ಪೌಡರ್ ವಿತರಣೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಅವೈಜ್ಞಾನಿಕವಾಗಿ ನಿಯಮಗಳನ್ನು ಪಾಲಿಸದೇ ಅಕ್ರಮವಾಗಿ ಮಾಡುತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಇವುಗಳ ಬಗ್ಗೆ ಎಚ್ಚರಿಕೆ ಕ್ರಮ ವಹಿಸಬೇಕೆಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು. ಕಳೆದ ಎರಡು ವರ್ಷದ ಸಾಲಿನಲ್ಲಿ ಮೀನುಗಾರರ ಮಹಿಳೆಯರಿಗೆ ನೀಡಿದ ಅಲ್ಪಾವಧಿ ಸಾಲವನ್ನು ಮನ್ನ ಮಾಡಲು 38 ಕೋಟಿ ಬಿಡುಗಡೆಯಾಗಿದ್ದು, ಅದರಲ್ಲಿ 31 ಕೋಟಿ ಮಾತ್ರ 11000 ಜನರ ಖಾತೆಗೆ ಜಮಾ ಆಗಿದೆ. ಬಾಕಿ ಉಳಿದ 4050 ಜನರ ಖಾತೆಗೆ ಆಧಾರ್‌ಲಿಂಕ್ ಆಗದ ಕಾರಣ ಜಮೆಯಾಗಿಲ್ಲ. ಈ ಬಗ್ಗೆ ಕ್ರಮ ವಹಿಸಬೇಕು ಎಂದರು. ರಾಜ್ಯ ಮಟ್ಟದಲ್ಲಿ ಜಿಲ್ಲೆಯಲ್ಲಿ ಬರುವ ಮಾಹಿತಿಗಳ ಆಧಾರದ ಮೇಲೆ ಮುಂಬರುವ ಬಜೆಟ್‌ನಲ್ಲಿ ಯೋಜನೆಗಳನ್ನು ತಯಾರಿಸಲಾಗುವುದು. ಇದರ ಹಿನ್ನೆಲೆ ಪ್ರತಿಯೊಂದು ಇಲಾಖೆಯವರು ತಮ್ಮ ಇಲಾಖೆಗಳಲ್ಲಿನ ಯೋಜನೆಗಳ ಮಾಹಿತಿಯನ್ನು ನಿಗಧಿತ ಸಮಯದಲ್ಲಿ ರಾಜ್ಯ ಮಟ್ಟದ ಕಚೇರಿಗಳಿಗೆ ತಲುಪಿಸಬೇಕೆಂದು ಸೂಚನೆ ನೀಡಿದರು. ವಿಧಾನಸಭಾ ಅಧಿವೇಶನದಲ್ಲಿ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗಳ ಬಗ್ಗೆ ಉತ್ತರವನ್ನು ವಿಳಂಬವಿಲ್ಲದೇ ನಿಖರ ಮಾಹಿತಿಗಳನ್ನು ಕಳುಹಿಸಬೇಕು ಎಂದು ಸೂಚನೆ ನೀಡಿದರು. ಸಿ.ಆರ್.ಝೆಡ್ ಹಾಗೂ ನಾನ್ ಸಿ.ಆರ್.ಝೆಡ್ ವ್ಯಾಪ್ತಿಯಲ್ಲಿ ಮರಳು ಗಣಿಗಾರಿಕೆಯನ್ನು ಕೈಗೊಳ್ಳುತ್ತಿರುವುದು ಸೇರಿದಂತೆ ಮತ್ತಿತರ ಗಣಿಗಾರಿಕೆಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ಸರಕಾರದ ನಿಯಮಾನುಸಾರ ಸಾಂಪ್ರದಾಯಿಕ ಎಲ್ಲಾ ರೀತಿಯ ಗಣಿಗಾರಿಕೆಗೆ ಅವಕಾಶ ಮಾಡಿಕೊಡಬೇಕೆಂದು ತಿಳಿಸಿದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ ಅವಕಾಶಗಳಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಮೂಲಭೂತ ಅಭಿವೃದ್ಧಿ ಕಾಮಗಾರಿಗಳನ್ನು ಕಲ್ಪಿಸಬೇಕೆಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

ಇನ್ನಂಜೆ : ನೆರವಿನ ನಿರೀಕ್ಷೆಯಲ್ಲಿ ರಾಘವೇಂದ್ರ ಶೆಟ್ಟಿ ಕುಟುಂಬ

Thumbnail
Posted On: 05 Dec 2020, 09:28 AM

ಇನ್ನಂಜೆ ಮಂಡೇಡಿ ಮೂಡು ಮೇಲ್ಮನೆ ಕಿಟ್ಟಿ ಶೆಟ್ಟಿಯ ಮಗನಾದ ರಾಘವೇಂದ್ರ ಶೆಟ್ಟಿ (ರಾಘು) ಕಳೆದ ಹದಿನೈದು ವರ್ಷಗಳಿಂದ ಹೊಟ್ಟೆಪಾಡಿಗಾಗಿ ಮುಂಬೈಯಲ್ಲಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದಿಂದ ತನ್ನ ಮಗುವಿನ ಅನಾರೋಗ್ಯ ಕಾರಣದಿಂದಾಗಿ ಊರಿನಲ್ಲಿ ಇದ್ದು ಮಗುವಿನ ಆರೋಗ್ಯ ಸುಧಾರಣೆಗಾಗಿ ಸುಮಾರು 5 ಲಕ್ಷ ರೂಪಾಯಿ ಖರ್ಚು ಮಾಡಿದ್ದು, ಇವರ ದುರಾದೃಷ್ಟವೆಂಬಂತೆ ಈಗ ರಾಘವೇಂದ್ರ ಶೆಟ್ಟಿಯವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಅನ್ನನಾಳದಲ್ಲಿ ಗೆಡ್ಡೆಯಾಗಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು ಆರು ಲಕ್ಷದವರೆಗೆ ಖರ್ಚು ಆಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಈ ಕಾರಣದಿಂದ ಈ ಕುಟುಂಬವು ಕಂಗಾಲಾಗಿದೆ. ಒಂದೆಡೆ ಮಗುವಿನ ಚಿಕಿತ್ಸಾ ವೆಚ್ಚ ಮತ್ತೊಂದೆಡೆ ರಾಘವೇಂದ್ರ ಶೆಟ್ಟಿಯವರ ಚಿಕಿತ್ಸಾ ವೆಚ್ಚಕ್ಕೆ ಖರ್ಚು ಮಾಡಬೇಕಾಗಿದೆ. ಸಹೃದಯಿ ದಾನಿಗಳು ಈ ಕುಟುಂಬಕ್ಕೆ ನೆರವಾಗಬೇಕೆಂದು ವಿನಂತಿಸಿದ್ದಾರೆ. ವಿಳಾಸ: ರಾಘವೇಂದ್ರ ಎಮ್. ಶೆಟ್ಟಿ S/O ಮೋನಪ್ಪ ಶೆಟ್ಟಿ ಕೆನರಾ ಬ್ಯಾಂಕ್ ಖಾತೆ ಸಂಖ್ಯೆ : 0636101016370 IFSC Code : CNRB0000636 ಶಂಕರಪುರ ಶಾಖೆ ಉಡುಪಿ ಜಿಲ್ಲೆ, ಕಾಪು ತಾಲೂಕು MOb. NO : 7715951795

ಬೆಳಪು : ಜಾರಂದಾಯ ಬೋಟಿಂಗ್ ಪಾಯಿಂಟ್ ಗೆ ಚಾಲನೆ

Thumbnail
Posted On: 04 Dec 2020, 02:52 PM

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿ ಪ್ರವಾಸೋದ್ಯಮಕೆ ಉತ್ತೇಜನ ನೀಡುವ ಸಲುವಾಗಿ ಜಾರಂದಾಯ ಬೋಟಿಂಗ್ ಪಾಯಿಂಟ್ ಗೆ ಬೆಳಪು ಗ್ರಾಮಾಭಿವೃದ್ಧಿ ಯ ರೂವಾರಿ ಡಾ| ಬೆಳಪು ದೇವಿಪ್ರಸಾದ್ ಶೆಟ್ಟಿಯವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.