Updated News From Kaup

ಬಂಟಕಲ್ಲು ಪರಿಸರದ ನಾಗರಿಕರಿಗೆ ಪೊಲೀಸ್ ಮಾಹಿತಿ ಕಾರ್ಯಕ್ರಮ

Posted On: 13-08-2020 10:13PM

ನಾಗರಿಕ ಸೇವಾ ಸಮಿತಿ ರಿ ಬಂಟಕಲ್ಲು ಇವರ ಆಶ್ರಯದಲ್ಲಿ ಬಂಟಕಲ್ಲು ಪರಿಸರದ ನಾಗರಿಕರಿಗೆ ಪೊಲೀಸ್ ಮಾಹಿತಿ ಕಾರ್ಯಕ್ರಮ ಇಂದು ಬಂಟಕಲ್ಲು ದೇವಸ್ಥಾನದ ವಠಾರದಲ್ಲಿ ನಡೆಯಿತು ಸಮಿತಿಯ ಅಧ್ಯಕ್ಷರಾದ ಕೆ ಆರ್ ಪಾಟ್ಕರ್ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು ಶಿರ್ವ ಠಾಣಾಧಿಕಾರಿ ಶ್ರೀ ಶೈಲ ಮುರುಗೋಡು ಇವರು ಪೊಲೀಸ್ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು ಬಂಟಕಲ್ಲು ನಾಗರಿಕ ಸಮಿತಿಯ ಉಚಿತ ಆಂಬುಲೆನ್ಸ್ ಯೋಜನೆ ಹಾಗೂ ಕೊರೋನಾ ಜಾಗೃತಿಯ ಬಗ್ಗೆ ಸ್ಟಿಕ್ಕರ್ ಬಿಡುಗಡೆಗೊಳಿಸಿದರು ಬಂಟಕಲ್ಲು ದೇವಸ್ಥಾನದ ಆಡಳಿತ ಮಂಡಳಿಯ ಶ್ರೀ ಸುರೇಂದ್ರ ನಾಯಕ್ ರವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಕಾರ್ಯದರ್ಶಿ ಶ್ರೀ ದಿನೇಶ್ ದೇವಾಡಿಗ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ನೀಡಿದರು ಬಂಟಕಲ್ಲು ಪರಿಸರದ ನಾಗರಿಕರು ರಿಕ್ಷಾ ಚಾಲಕ ಮಾಲಕ ಸಂಘದ ಪದಾಧಿಕಾರಿಗಳು ಕಾರು ಚಾಲಕ ಮತ್ತು ಮಾಲಕರ ಸಂಘದ ಪದಾಧಿಕಾರಿಗಳು ಯುವ ವೃಂದ ಬಂಟಕಲ್ಲು ಪದಾಧಿಕಾರಿಗಳು ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು

ಭಾರತ ಮತ್ತೆ ಎದ್ದು ನಿಲ್ಲಲು ಸ್ವಾತಂತ್ರ್ಯ ದಿನ ದಾರಿ ದೀಪವಾಗಲಿ

Posted On: 13-08-2020 09:27PM

ಬ್ರಿಟೀಷರ ಆಡಳಿತದಿಂದ ಭಾರತ ಸ್ವತಂತ್ರವಾದ ದಿನವನ್ನು ನಾವೆಲ್ಲರೂ ಪ್ರತಿ ವರ್ಷ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾ 1ಗಿ ಆಚರಿಸಲಾಗುತ್ತದೆ. ಎಲ್ಲಾ ಕಡೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ. ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಗೀತೆ "ಜನ ಗಣ ಮನ"ವನ್ನು ಹಾಡಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣದಲ್ಲಿ ದೇಶದ ಸಾಧನೆ, ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಡಿದ ನಾಯಕರನ್ನು ಸ್ಮರಿಸಲಾಗುತ್ತದೆ. ಅವರೆಲ್ಲರ ತ್ಯಾಗ ಮತ್ತು ಬಲಿದಾನದ ಮೂಲಕ ನಾವೆಲ್ಲರೂ ಇಂದು ಖುಷಿಯಾಗಿ ಜೀವಿಸುತ್ತಿದ್ದೇವೆ. ದೇಶದ ಪ್ರಥಮ ಪ್ರಧಾನಿ ಜವಾಹರ್ ‌ಲಾಲ್ ನೆಹರು ರವರ ಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣ ಜೂನ್ 3,1947 ರಂದು ಅಂದಿನ ಗವರ್ನರ್ ಜನರಲ್ ಆಗಿದ್ದ ಲಾರ್ಡ್ ಮೌಂಟ್‌ಬ್ಯಾಟನ್, ಬ್ರಿಟಿ‍ಷ್ ಭಾರತ ಸಾಮ್ರಾಜ್ಯವನ್ನು ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳಾಗಿ ವಿಭಜಿಸುವುದಾಗಿ ಘೋಷಿಸಿದನು. ಇದರ ನಂತರ ಭಾರತದ ಸ್ವಾತ್ರಂತ್ರ್ಯ ಕಾಯಿದೆ 1947 ರ ಅನ್ವಯ ಆಗಸ್ಟ್ 15, 1947 ರಂದು ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಘೋಷಿಸಲಾಯಿತು. ಅಂದಿನ ಮದ್ಯರಾತ್ರಿ, ನೆಹರು ರವರು ದೇಶದ ಪ್ರಥಮ ಪ್ರಧಾನ ಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಂದು ಅವರು ರಾಷ್ಟ್ರವನ್ನುದ್ದೇಶಿಸಿ, ಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣ ( 'ಭಾಗ್ಯದೊಡನೆ ಒಪ್ಪಂದ' ಭಾಷಣ) ಮಾಡಿದರು. ನಮ್ಮ ದೇಶದ ಸ್ವಾತಂತ್ರ್ಯ ದಿನಾಚರಣೆ ಮಧ್ಯರಾತ್ರಿಯ ಗಂಟೆ ಹೊಡೆಯುತ್ತಿದ್ದಂತೆ ಜಗತ್ತು ಮಲಗಿರುವಾಗ ಭಾರತವು ಚಲನಶೀಲತೆ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಳ್ಳುತ್ತದೆ. ಇತಿಹಾಸದಲ್ಲಿ ಬಹಳ ಅಪರೂಪವಾಗಿ ಬರುವ ಇಂಥ ಈ ಗಳಿಗೆಯಲ್ಲಿ ಹಳತಿನಿಂದ ಹೊಸತಿಗೆ ಕಾಲಿಡುತ್ತಿದ್ದೇವೆ . ಹಳೆಯ ಯುಗ ಮುಗಿದು ಬಹುಕಾಲ ಅದುಮಿಟ್ಟ ದೇಶವೊಂದರ ಚೇತನವು ತನ್ನ ಅಭಿವ್ಯಕ್ತಿಯನ್ನು ಕಂಡುಕೊಳ್ಳುತ್ತಿದೆ..... ಇವತ್ತು ನಾವು ನಮ್ಮ ದುರಾದೃಷ್ಟದ ಕಾಲವನ್ನು ಮುಗಿಸುತ್ತಿದ್ದೇವೆ ಮತ್ತು ಭಾರತವು ತನ್ನನ್ನು ತಾನು ಮತ್ತೆ ಹೊಸತನ ಕಂಡುಕೊಳ್ಳುತ್ತಿದೆ . ಭಾರತದ ಸ್ವಾತಂತ್ರ್ಯ ದಿನಾಚರಣೆ ಪ್ರಧಾನಮಂತ್ರಿ ನೆಹರು ಮತ್ತು ಉಪಪ್ರಧಾನಮಂತ್ರಿ ಸರ್ದಾರ್ ವಲ್ಲಭಭಾಯ್ ಪಟೇಲ್ ರು ಲಾರ್ಡ್ ಮೌಂಟ್ ಬ್ಯಾಟನ್ನರನ್ನು ಭಾರತದ ಗವರ್ನರ್ ಜನರಲ್ ಆಗಿ ಮುಂದುವರೆಯಲು ಕೋರಿದರು. ಆದರೆ ಜೂನ್ 1948 ರಲ್ಲಿ ಅವರ ಸ್ಥಾನಕ್ಕೆ ಚಕ್ರವರ್ತಿ ರಾಜಗೋಪಾಲಾಚಾರಿ ಅಧಿಕಾರ ಸ್ವೀಕರಿಸಿದರು. ಪಟೇಲರು 565 ರಾಜಸಂಸ್ಥಾನಗಳ ಭಾರತದ ರಾಜಕೀಯ ಏಕೀಕರಣ ದ ಜವಾಬ್ದಾರಿಯನ್ನು ವಹಿಸಿಕೊಂಡರು, ನಂತರ ಕಾಯ೯ ಪ್ರವೃತ್ತರಾದ ಅವರು ಜುನಾಗಢ, ಜಮ್ಮು ಮತ್ತು ಕಾಶ್ಮೀರ, ಮತ್ತು ಹೈದರಾಬಾದ್ ಸಂಸ್ಥಾನ ಗಳನ್ನು ಭಾರತಕ್ಕೆ ಸೇರ್ಪಡೆ ಮಾಡುವಲ್ಲಿ ಸೈನಿಕ ಬಲವನ್ನು ಉಪಯೋಗಿಸಿ "ರೇಷ್ಮೆ ಕೈಗವಸಿನಲ್ಲಿ ಉಕ್ಕಿನ ಮುಷ್ಠಿ" ತಂತ್ರವನ್ನು ಉಪಯೋಗಿಸಿದರು.ಈ ಮೂಲಕ ಭಾರತದ ಏಕೀಕರಣದ ಯುಗ ಪುರುಷರಾದರು.ನಂತರ ಭಾರತವು ಸಂವಿಧಾನ ರಚನೆ ಮಾಡುವ ಸಲುವಾಗಿ, ಸಂವಿಧಾನ ರಚನಾಸಭೆಯು ಸಂವಿಧಾನದ ಕರಡು ಸಭೆಯನ್ನು 26 ನವೆಂಬರ್ 1949; ರಂದು ಸಿದ್ಧಗೊಳಿಸುವ ಕಾರ್ಯವನ್ನು ಸಂಪೂರ್ಣಗೊಳಿಸಿತು . 26 ಜನವರಿ 1950 ರಂದು ಭಾರತೀಯ ಗಣರಾಜ್ಯ ವನ್ನು ಅಧಿಕೃತವಾಗಿ ಘೋಷಿಸಲಾಯಿತು. ಸಂವಿಧಾನ ರಚನಾಸಭೆಯು ಡಾ. ರಾಜೇಂದ್ರಪ್ರಸಾದರನ್ನು ದೇಶದ ಪ್ರಥಮ ರಾಷ್ಟ್ರಪತಿ ಯನ್ನಾಗಿ ಚುನಾಯಿಸಿತು . ಅವರು ಗವರ್ನರ್ ಜನರಲ್ ರಾಜಗೋಪಾಲಾಚಾರಿಯವರಿಂದ ಅಧಿಕಾರವನ್ನು ಸ್ವೀಕರಿಸಿದರು .ನಂತರ ಸ್ವತಂತ್ರ ಸಾರ್ವಭೌಮ ಭಾರತವು ಪಟೇಲರ ಸಾಧನೆಯ ಮೂಲಕ ಇನ್ನೆರಡು ಪ್ರದೇಶಗಳನ್ನು ತನ್ನಲ್ಲಿ ಸೇರಿಸಿಕೊಂಡಿತು . ಅವು 1961ರಲ್ಲಿ ಪೋರ್ಚುಗೀಸ್ ನಿಯಂತ್ರಣದಿಂದ ವಿಮೋಚನೆಗೊಳಿಸಿದ ಗೋವಾ ಮತ್ತು ಫ್ರೆಂಚರು 1954ರಲ್ಲಿ ಒಪ್ಪಿಸಿದ ಪಾಂಡಿಚೇರಿ ಯನ್ನು ದೇಶದಲ್ಲಿ ಸೇರಿಸಲಾಯಿತು. 1952 ರಲ್ಲಿ ಭಾರತವು ತನ್ನ ಮೊದಲ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಿತು . ಶೇ. 62ಕ್ಕೂ ಹೆಚ್ಚು ಮತದಾರರು ಅದರಲ್ಲಿ ಭಾಗವಹಿಸಿದರು. ಅದರಿಂದಾಗಿ ಭಾರತವು ವಾಸ್ತವದಲ್ಲಿ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾಯಿತು.ಈ ಚುನಾವಣೆಯು ದೇಶದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆಯಲು ನೆರವಾಯಿತು.

ಇನ್ನಂಜೆ ವಿಷ್ಣುವಲ್ಲಭ ಘಟಕದಿಂದ ವಿ.ಎಚ್.ಪಿ ಸಂಸ್ಥಾಪನಾ ದಿನಾಚರಣೆ

Posted On: 11-08-2020 10:28PM

ಇನ್ನಂಜೆ, 11.ಆಗಸ್ಟ್ : ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳದ ಇನ್ನಂಜೆಯ "ವಿಷ್ಣು ವಲ್ಲಭ" ಘಟಕದಲ್ಲಿ ಸಂಸ್ಥಾಪನಾ ದಿನದ ಅಂಗವಾಗಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಕಾರ್ಯಕರ್ತರು ಭಾರತಮಾತೆಗೆ ಪುಷ್ಪರ್ಚಾನೆ ಮಾಡಿದ ನಂತರ ಅಧ್ಯಕ್ಷರಾದ ವಿದ್ವಾನ್ ಕೆ.ಪಿ ಶ್ರೀನಿವಾಸ್ ತಂತ್ರಿಯವರು ದೀಪ ಪ್ರಜ್ವಲಿಸುವ ಮೂಲಕ ಮಾತನಾಡಿ ಹಿಂದೂ ಧರ್ಮದ ಬಗ್ಗೆ ಅಪಹಾಸ್ಯ ಅಥವಾ ಅವಹೇಳನ ಮಾಡಿದ್ದಲ್ಲಿಅವರು ಯಾರೇ ಆಗಿರಲಿ ಅವರ ವಿರುದ್ಧ ನಾವು ಹೋರಾಡಬೇಕು, ಹಿಂದೂ ಧರ್ಮದ ಐಕ್ಯತೆ, ಒಗ್ಗಟ್ಟನ್ನು ಇಡೀ ವಿಶ್ವಕ್ಕೆ ತೋರಿಸಬೇಕು ಎಂದರು. ಕಾಪು ಪ್ರಖಂಡ ಕಾರ್ಯದರ್ಶಿ ಕಾರ್ಯದರ್ಶಿ ಜಯಪ್ರಕಾಶ್ ಪ್ರಭು ಇವರು ಮಾತನಾಡಿ ವಿಶ್ವ ಹಿಂದೂ ಪರಿಷತ್ 56 ವರ್ಷಗಳನ್ನು ಪೂರೈಸಿದೆ . ಈ ಸಂದರ್ಭದಲ್ಲಿ 55 ವರ್ಷ ವಿಶ್ವ ಹಿಂದೂ ಪರಿಷದ್ಗೆ ಮಾರ್ಗದರ್ಶನ ನೀಡಿದ ಪೇಜಾವರದ ವಿಶ್ವೇಶ ತೀರ್ಥ ಸ್ವಾಮೀಜಿಗಳನ್ನು ಸ್ಮರಿಸಿದರು. ಗೋಹತ್ಯೆ, ಲವ್ ಜಿಹಾದ್ ನಂತಹ ಧರ್ಮ ವಿರೋಧಿ ಕಾರ್ಯಗಳನ್ನು ನಿಲ್ಲಿಸಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು, ವಿದ್ಯಾರ್ಥಿ ಪ್ರಮುಖ್ ಸ್ವಸ್ತಿಕ್ ಮಡುಂಬು ಇವರು ಹಿಂದೂ ಸಮಾಜದ ಬಗ್ಗೆ ಒಂದೆರಡು ಮಾತುಗಳನಾಡಿದರು.. ಈ ಸಂದರ್ಭದಲ್ಲಿ ಭಜರಂಗ ದಳದ ಸಂಚಾಲಕರು ರಾಜೇಶ್ ನಿಸರ್ಗ, ವಿ ಹಿಂ ಪ ಉಪಾಧ್ಯಕ್ಷರು ಆದ ರಾಘುವೇಂದ್ರ ಶೆಟ್ಟಿ, ಮಾಲಿನಿ ಇನ್ನಂಜೆ, ದಿವೇಶ್ ಕಲ್ಯಾಲು, ವರುಣ್ ಮಡುಂಬು, ವಿ ಹಿಂ ಪ ಪದಾಧಿಕಾರಿಗಳು ಭಜರಂಗದಳ ಕಾರ್ಯಕರ್ತರು , ಮತ್ತಿತರು ಉಪಸ್ಥಿತರಿದ್ದರು. ಕಾರ್ಯದರ್ಶಿಯಾದ ನಿತೀಶ್ ಕಲ್ಯಾಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿಕೇಶ್ ಮಡುಂಬು ಇವರು ಧನ್ಯವಾದಗೈದರು.

ಸಂಕಷ್ಟದಲ್ಲಿರುವ ಕಾರ್ಕಳದ ಇನ್ನಾ ನಿವಾಸಿ ಪ್ರವೀಣ್ ಕುಟುಂಬಕ್ಕೆ ನೆರವಾಗುವಿರಾ?

Posted On: 11-08-2020 03:48PM

ಜಗತ್ತನ್ನೇ ತಲ್ಲಣಗೊಳಿಸುತ್ತಿರುವ ಈ ಮಹಾಮಾರಿ ಕೊರೋನಾ ಈಗಾಗಲೇ ಸ್ಥಿತಿವಂತರ ಜಂಘಾಬಲವನ್ನೇ ಉಡುಗಿಸಿ ಜನಸಾಮಾನ್ಯರ ಪಾಡಂತೂ ದೇವರೂ ಕೇಳದಂತಹಾ ಈ ಕೆಟ್ಟ ದಿನಗಳಲ್ಲಿ ಸಣ್ಣ ಅನಾರೋಗ್ಯ ಕಾಡಿದರೂ ಕೇಳುವವರಿಲ್ಲ.ಕೊರೋನಾ ನಿಯಮಗಳ ಹೆಸರಲ್ಲಿ ,ಇನ್ನಿಲ್ಲದಷ್ಟು ಕಾಟ ನೀಡುವ ನಮ್ಮ ವ್ಯವಸ್ಥೆಯ ನಡುವೆ ದೊಡ್ಡ ಆರೋಗ್ಯ ಸಮಸ್ಯೆ ಬಂದರೆ ಹೇಗಾದೀತು ಯೋಚಿಸಿ.

ಯುವವಾಹಿನಿ ಕಾಪು ಘಟಕದ ನೂತನ ಅಧ್ಯಕ್ಷರಾಗಿ ಸೌಮ್ಯ ರಾಕೇಶ್ ಕುಂಜೂರು ಆಯ್ಕೆ

Posted On: 10-08-2020 10:59PM

ಶುಭ ಸತ್ಕಾರ 'ಕಾಪುದಪ್ಪೆ'..,ಈ ಭಕ್ತಿ ಶ್ರದ್ಧೆಯಲ್ಲಿ ನಮ್ಮನ್ನುದ್ಧರಿಸುವ ಮಹಾನ್ ಶಕ್ತಿ ಮಾತೆಯ ಪುಣ್ಯ ನೆಲೆ ಬೀಡೇ ಕಾಪು. ಹಲವು ವೈಶಿಷ್ಟ್ಯಗಳಿಂದಾವೃತ್ತವಾದ ಈ ಊರಿನ ಹೆಗ್ಗಳಿಕೆಯಲ್ಲಿ ಬಹುರೂಪಿ ಸಂಘ ಸಂಸ್ಥೆಗಳ ಪಾತ್ರವೂ ಗಣನೀಯ. ಕಾಪುವಿನಲ್ಲಿರುವ *ಯುವವಾಹಿನಿ* ಯಂತಹ ಅಪ್ಪಟ ಸಮಾಜಾಭ್ಯುದಯದ ಬಳಗಕ್ಕೆ ಪ್ರಸ್ತುತ ಸಾಲಿನ ಅಧ್ಯಕ್ಷರಾಗಿ ಅಲಂಕೃತರಾದವರು ಶ್ರೀಮತಿ ಸೌಮ್ಯ ರಾಕೇಶ್

ಇಪ್ಪತ್ತು ವರ್ಷ ಹಿಂದೆ ಹಡಿಲು ಬಿದ್ದಿದ್ದ ಗದ್ದೆಯನ್ನು ಹಸುರಾಗಿಸಿದ ಬೆಳ್ಮಣ್ ರೋಟರಿ ಕ್ಲಬ್

Posted On: 10-08-2020 06:38PM

ರೋಟರಿ ಕೃಷಿ ಕ್ರಾಂತಿ 2020 - 21 ಬೆಳ್ಮಣ್ಣು: ರೋಟರಿ ಕ್ಲಬ್ ಬೆಳ್ಮಣ್ ಒಂದಲ್ಲ ಒಂದು ವಿಶೇಷ ಸಾರ್ವಜನಿಕ ಕಾರ್ಯಕ್ರಮದಿಂದ ಕ್ಲಬ್ ಗುರುತಿಸಿಕೊಂಡಿದ್ದು, ಸಾರ್ವಜನಿಕ ರಂಗಮಂದಿರ, ಬಾಲವನ, ಸುಮಾರು ಲಕ್ಷದಲ್ಲಿ ಸುಸಜ್ಜಿತ ಪಾರ್ಕಿಂಗ್, ಸುಮಾರು ಲಕ್ಷ ವೆಚ್ಚದಲ್ಲಿ ಸಾರ್ವಜನಿಕ ರುದ್ರಭೂಮಿ, ರಸ್ತೆ ವಿಭಜಕದ ಅಳವಡಿಕೆ ಮುಂತಾದ ಶಾಶ್ವತ ಯೋಜನೆಯೊಂದಿಗೆ ಮನೆಮಾತಾಗಿದೆ.

ಜೀವನ್ಮರಣ ಸ್ಥಿತಿಯಲ್ಲಿದ್ದ ರಾಷ್ಟ್ರಪಕ್ಷಿಯನ್ನು ಉಳಿಸಲು ಪ್ರಯತ್ನ ಪಟ್ಟ ಕಾಪು ತುಳುನಾಡು ಹಿಂದೂ ಸೇನೆ

Posted On: 10-08-2020 05:04PM

ಪಡುಬಿದ್ರಿಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದ್ದ ರಾಷ್ಟ್ರ ಪಕ್ಷಿ ನವಿಲಿನ ಜೀವ ಉಳಿಸಲು ಪ್ರಯತ್ನ ಪಟ್ಟ ಕಾಪು ತುಳುನಾಡು ಹಿಂದೂ ಸೇನೆಯ ಕಾರ್ಯಕರ್ತರು.

ಚಾಂದ್ರ ಕೃಷ್ಣಾಷ್ಟಮಿ : ಕೃಷ್ಣ ಸ್ಮರಣೆ 'ಜಾನಪದ' ಮನಸ್ಸಿನ 'ಜಗನ್ನಾಥ'

Posted On: 10-08-2020 04:34PM

ಮೋಹಕ ಮಹಿಮಾತಿಶಯದ ವಿಸ್ಮಯ ಪುರುಷ ಕೃಷ್ಣನ‌ ಬದುಕು‌ ಅದ್ಭುತವೆನಿಸಿದಾಗ , ಅಗಾಧ ಹರವನ್ನು ಪಡೆದುಕೊಂಡಾಗ ಲೋಕ ಕ್ಷೇಮಾರ್ಥಕ್ಕೆ ತೊಡಗಿಕೊಂಡಾಗ ಸಹಜವೆಂಬಂತೆ ಸಜ್ಜನರು ಉದ್ಗರಿಸಿದ್ದು "ಕೃಷ್ಣಾವತಾರ ಪರಿಪೂರ್ಣ ಅವತಾರವೆಂದು" . ಈ ಪರಿಪೂರ್ಣತೆಯು ಒಂದು ಸಾಧನೆಯಾಗಿ ,ಜಗನ್ಮೋಹಕವಾಗಿ‌ ಸ್ಥಾಪನೆಯಾಗುವುದು ಜನಸಾಮಾನ್ಯತೆಯ ಮುಗ್ಧ ಮನಸ್ಸುಗಳೊಂದಿಗೆ - ಜನಪದರ ಸಾಂಗತ್ಯದಲ್ಲಿ. ಬಹುಶಃ ಪರಿಪೂರ್ಣತೆಯು ಪರಾಕಾಷ್ಠೆಯನ್ನು ತಲುಪಲು‌ ದೇಸಿ ಪರಿಸರವೇ ಪೂರಕವಾಗುತ್ತದೆ. ಈ ಮನಃಸ್ಥಿತಿಯ ವ್ಯಕ್ತಿತ್ವವೇ ಕೃಷ್ಣನಾಗಿ ಆಕರ್ಷಿಸಲ್ಪಡುತ್ತದೆ , 'ಜಗನ್ನಾಥ' ಎಂಬ ಎತ್ತರಕ್ಕೆ ಏರಿಬಿಡುತ್ತದೆ . ಕೃಷ್ಣ ಬೆಳೆದದ್ದು ,ಆಟವಾಡಿದ್ದು , ಅಪೂರ್ವ ಸಾಧನೆಗಳನ್ನು ಮಾಡಿದ್ದು ಆ ಮೂಲಕ‌ ಜನಜನಿತನಾಗಿ ಜಗದೋದ್ದಾರನೆನ್ನಿಸಿದ್ದು ಗೋಪಾಲಕರ ನಡುವೆ ,ಗೋ ಸಮೂಹದ ಸನ್ನಿಧಿಯಲ್ಲಿ , ಸೆಗಣಿ - ಗಂಜಳಗಳ ಸುವಾಸನೆಯಲ್ಲಿ . ನುಡಿಸಿದ್ದು ಬಿದಿರಿನ ಓಟೆಯನ್ನು ,ಧರಿಸಿದ್ದು ನವಿಲುಗರಿಯನ್ನು . ಬಿದಿರ ಓಟೆ ಮುರಲಿಯಾಗಿ ಉಲಿದಾಗ ಆ ಅನುರಣನ‌ ಅಥವಾ ಸುಶ್ರಾವ್ಯ ನಾದ ಸಮ್ಮೋಹನವಾಯಿತು .ಗೋವುಗಳು - ಗೋಪಾಲಕರು - ಗೋಪಿಯರು ಮಂತ್ರಮುಗ್ಧರಾದರು ,ಆತ್ಮೀಯ ಆನಂದ ಪರವಶರಾದರು. ಕೃಷ್ಣ ಗೋಕುಲವನ್ನು ತೊರೆದು ಮಧುರೆಗೆ ಹೊರಟಾಗ ತನ್ನ ನೆನಪಾಗಿ ಗೋಕುಲದಲ್ಲಿ ಉಳಿಸಿದ್ದು ಕೊಳಲನ್ನು . ತಾನು ಜೊತೆಗೆ ಒಯ್ದದದ್ದು ನವಿಲುಗರಿಯನ್ನು ಮತ್ತು 'ಜನಪದ' ಮನಸ್ಸನ್ನು . ಆದರೆ ಮುಂದಿನ ಕೃಷ್ಣಕಥೆಯ ಯಾವ ದೃಶ್ಯವನ್ನೆ ಕಲಾವಿದ ಚಿತ್ರಿಸಿದರೂ ಕೃಷ್ಣನ ಕೈಯಲ್ಲಿ ಕೊಳಲು ಅನಿವಾರ್ಯ . ಇದು ಮೂಲದ ಜನಪದರ ಮನಸ್ಸುಗಳು ಕೃಷ್ಣನನ್ನು ಅನುಸರಿಸಿದ ಸಂಕೇತವೇ ? ಅಥವಾ ಕೃಷ್ಣ ಅದನ್ನು ಒಪ್ಪಿದ್ದೇ ಆಗಿರಬಹುದಲ್ಲ . ಅಂದರೆ ಕೃಷ್ಣ ಚಿತ್ರದ ಕಲಾವಿದ ಒಬ್ಬ ಜನಪದನೇ ತಾನೆ ? ಗೋಕುಲವನ್ನು ಬಿಟ್ಟ ಬಳಿಕ ಕೃಷ್ಣ ಕೊಳಲು ಊದಿಲ್ಲ . ಆದರೆ ಮರೆತಿಲ್ಲ ಎಂದು ಕೃಷ್ಣಪ್ರೀತಿಯ ಮಂದಿಗೆ ಕೊಳಲು ಇಲ್ಲದ ಕೃಷ್ಣನನ್ನು ಕಲ್ಪಿಸಲಾಗಲೇ ಇಲ್ಲ .

ಕಾಪು ನಿಕಿಲ ಚಿಕನ್ ಸ್ಟಾಲ್ ಹೊಸ ಮಾರಿಗುಡಿ, ಬೀಚ್ ರೋಡ್ ಇಲ್ಲಿಗೆ ಸ್ಥಳಾಂತರಗೊಂಡಿರುತ್ತದೆ

Posted On: 10-08-2020 02:46PM

ಕಾಪು ಮೂರನೇ ಮಾರಿಗುಡಿ ಹತ್ತಿರದಲ್ಲಿ ಇದ್ದ ನಿಕಿಲ ಚಿಕನ್ ಸ್ಟಾಲ್ ಈಗ ಹೊಸಮಾರಿಗುಡಿ ಬಳಿ ಇರುವ ಬೀಚ್ ರೋಡ್ ಇಲ್ಲಿಗೆ ಸ್ಥಳಾಂತರಗೊಂಡಿರುತ್ತದೆ.. ಇಲ್ಲಿ ಬಾಯ್ಲರ್ , ಟೈಸನ್, ಊರಿನ ಕೋಳಿ, ಕೋಳಿ ಮಾಂಸ ಸಿಗುತ್ತದೆ ಜೊತೆಗೆ ಹೋಮ್ ಡೆಲಿವರಿ ಕೂಡ ಕೊಡಲಾಗುತ್ತದೆ. ಗ್ರಾಹಕರ ಪ್ರೋತ್ಸಾಹದ ನಿರೀಕ್ಷೆಯಲ್ಲಿ ಜಗದೀಶ್ ಶೆಟ್ಟಿ ಕಾಪು 9845069173, 8197956173

ಹೇರೂರಿನಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Posted On: 09-08-2020 08:44PM

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೇರೂರು ಒಕ್ಕೂಟದ ಆಶ್ರಯದಲ್ಲಿ ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿಯ ಸಹಭಾಗಿತ್ವದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಮಾಡುವ ಕಾರ್ಯಕ್ರಮ ಹೇರೂರು ಭಜನಾ ಮಂಡಳಿಯ ವಠಾರದಲ್ಲಿ ನಡೆಯಿತು.