Updated News From Kaup
ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್ ಆಯ್ಕೆ

Posted On: 17-10-2024 08:16PM
ಕಾಪು : ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರಿ.) ಕರ್ನಾಟಕ (ರುಪ್ಸ) ಇವರು ಕೊಡ ಮಾಡುವ ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಾಪು ತಾಲೂಕಿನ ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್ ಇವರು ಆಯ್ಕೆಯಾಗಿದ್ದಾರೆ.
ಅಕ್ಟೋಬರ್ 21, ಸೋಮವಾರ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಾಪು : ವಾಲ್ಮೀಕಿಯವರ ಸಂದೇಶಗಳು ಬಾಳಿನ ಬೆಳಕು - ತಹಶಿಲ್ದಾರ್ ಡಾ. ಪ್ರತಿಭಾ ಆರ್

Posted On: 17-10-2024 02:58PM
ಕಾಪು : ವಾಲ್ಮೀಕಿಯವರಂತೆ ಮನಃ ಪರಿವರ್ತನೆ ಮಾಡಿಕೊಂಡು ಸದ್ಗಗುಣವಂತರಾಗಲು ಎಲ್ಲರಿಗೂ ಸಾಧ್ಯವಿದೆ. ಜಗತ್ತಿನ ಪ್ರಥಮ ಕಾವ್ಯ ರಚನೆಕಾರರಾದ ವಾಲ್ಮೀಕಿಯವರ ಹಿರಿಮೆ ಎಂದೆಂದಿಗೂ ಪ್ರಾಥಃಸ್ಮರಣೀಯ ಎಂದು ಕಾಪು ತಾಲೂಕು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಹೇಳಿದರು. ಅವರು ಗುರುವಾರ ಕಾಪು ತಹಶಿಲ್ದಾರ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂತಹ ಮಹಾನ್ ವ್ಯಕ್ತಿಯ ಜಯಂತಿ ಸಾರ್ಥಕತೆ ಹೊಂದಬೇಕಾದರೆ ಮಹರ್ಷಿಯವರು ರಾಮಾಯಣದ ಮೂಲಕ ನೀಡಿರುವ ಪಿತೃ ವಾಕ್ಯ ಪರಿಪಾಲನೆ, ಪಿತೃದೇವೋಭವ, ಮಮತೆ, ಸಮತೆ, ಭ್ರಾತೃತ್ವ ತ್ಯಾಗ ದೇಶಪ್ರೇಮ, ಅಳಿಲುಸೇವೆ ಮುಂತಾದ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಯುವ ಜನತೆಗೆ ಒಳ್ಳೆಯ ಹಾದಿಯಲ್ಲಿ ನಡೆಯಲು ಅದ್ಭುತ ಸಂದೇಶವನ್ನು ಮಹರ್ಷಿ ನೀಡಿದ್ದಾರೆ ಎಂದರು.
ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಸವರಾಜು, ಉಪ ತಹಶಿಲ್ದಾರ್ ಗಳಾದ ರವಿಕಿರಣ್, ದೇವಕಿ, ಅಶೋಕ್ ಕೋಟೆಕಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಕ್ಕುಂಜ : ಅಯ್ಯಪ್ಪ ಶಿಬಿರದ ಮಂಟಪ ನಿರ್ಮಾಣ, ಇನ್ನಿತರ ಕಾರ್ಯಕ್ಕೆ ಭಕ್ತವೃಂದ ಸಹಕರಿಸುವಂತೆ ಮನವಿ

Posted On: 17-10-2024 02:47PM
ಕಾಪು : ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ದಿ| ಸೂರ್ಯ ಕುಲಾಲ್ ಕುಕ್ಕುಂಜ ಗುರುಸ್ವಾಮಿಯಾಗಿ ಸ್ಥಾಪಿಸಿದ ಅಯ್ಯಪ್ಪ ಭಕ್ತವೃಂದ (ರಿ.) ಕುಕ್ಕುಂಜ ಕಳತ್ತೂರು ಶಿಬಿರ 25 ವರ್ಷ ಪೂರೈಸಿದ್ದು, ಇದೀಗ ಮಂಟಪ ರಚನೆ ಹಾಗೂ ಇನ್ನಿತರ ಕೆಲವು ಕೆಲಸಗಳು ಶಿಬಿರದ ಮಹಾಪೂಜೆಯ ಮೊದಲು ಆಗಬೇಕಿದ್ದು ಭಕ್ತವೃಂದ ತಮ್ಮಿಂದಾದಷ್ಟು ಧನ ಸಹಾಯ ನೀಡಬೇಕಾಗಿ ಶಿಬಿರದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಮುಂಬೈ ಬಂಟರ ಭವನದಲ್ಲಿ ಸ್ವರ್ಣಗೌರಿ ಪೂಜೆ

Posted On: 17-10-2024 02:45PM
ಕಾಪು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮತ್ತು ನವದುರ್ಗಾ ಲೇಖನ ಯಜ್ಞ ಯಶಸ್ವಿಯಾಗಿ, ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಮುಂಬೈನಲ್ಲಿರುವ ಊರಿನ ಬಂಧುಗಳು ಪಾಲ್ಗೊಳ್ಳಲು ಆಮಂತ್ರಿಸಲು ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಪದಾಧಿಕಾರಿಗಳು ಮುಂಬೈಗೆ ತೆರಳಿದ್ದು, ಮಂಗಳವಾರ ಮುಂಬೈ ಬಂಟರ ಭವನದಲ್ಲಿ ನಡೆದ ಸ್ವರ್ಣಗೌರಿ ಪೂಜೆಯಲ್ಲಿ ಭಾಗವಹಿಸಿದರು.
ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ, ಸ್ವರ್ಣ ಸಮರ್ಪಣಾ ಸಮಿತಿ ಅಧ್ಯಕ್ಷ ರವಿಸುಂದರ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಮುಂಬಯಿ ಸಮಿತಿ ಅಧ್ಯಕ್ಷ ಸುಧಾಕರ ಹೆಗ್ಡೆ ತುಂಗಾ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಲಾಲಾಜಿ ಆರ್. ಮೆಂಡನ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ. ಸೋಜ, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲಬೆಟ್ಟು, ವಿಶ್ವಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪ್ರಮುಖರಾದ ಆನಂದ ಶೆಟ್ಟಿ, ಡಾ. ದೇವಿಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಕೆ. ವಿಶ್ವನಾಥ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಪಡುಬಿದ್ರಿ : ವಿಧಾನ ಪರಿಷತ್ ಉಪ ಚುನಾವಣೆ ಬಿಜೆಪಿಯಿಂದ ಪೂರ್ವಭಾವಿ ಸಭೆ

Posted On: 17-10-2024 02:14PM
ಪಡುಬಿದ್ರಿ : ಉಡುಪಿ - ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಪೂರ್ವಭಾವಿಯಾಗಿ ಗುರುವಾರ ಪಡುಬಿದ್ರಿಯ ಉದಯಾದ್ರಿ ಸಭಾಭವನದಲ್ಲಿ ಹೆಜಮಾಡಿ, ಪಡುಬಿದ್ರಿ, ಪಲಿಮಾರು, ಮುದರಂಗಡಿ, ಎಲ್ಲೂರು, ತೆಂಕ, ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಭೆಯು ಜರಗಿತು

ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ ಇವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಎಲ್ಲರೂ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಅಭ್ಯರ್ಥಿಗಳಾದ ಕಿಶೋರ್ ಕುಮಾರ್ ಬೊಟ್ಯಾಡಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಅಭ್ಯರ್ಥಿ ಪ್ರಮುಖ್ ಅರುಣ್ ಶೆಟ್ಟಿ ಪಾದೂರು, ಅಭ್ಯರ್ಥಿ ಪ್ರವಾಸ ಪ್ರಮುಖ್ ರಾಜೇಶ್ ಕಾವೇರಿ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಅ.22 : ಬೊಬ್ಬರ್ಯ ಕಟ್ಟೆ ದೈವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

Posted On: 17-10-2024 01:50PM
ಉಡುಪಿ : ಇಲ್ಲಿನ ತೆಂಕುಪೇಟೆ ವುಡ್ ಲಾಂಡ್ಸ್ ಹೋಟೆಲ್ ಬಳಿಯ ಬೊಬ್ಬರ್ಯ ಕಟ್ಟೆಯ ಬೊಬ್ಬರ್ಯ, ಕಾಂತೇರಿ ಜುಮಾದಿ, ಕಲ್ಕುಡ, ಕೊರಗಜ್ಜಿ ಪರಿವಾರ ದೈವಗಳ ದೈವಸ್ಥಾನದಲ್ಲಿ ಅಕ್ಟೋಬರ್ 22, ಮಂಗಳವಾರ ಬೆಳಿಗ್ಗೆ 8.30 ಗಂಟೆಗೆ ಸರಿಯಾಗಿ ಕಾಂತೇರಿ ಜುಮಾದಿ, ಪಿಲಿಚಂಡಿ, ಪಂಜುರ್ಲಿ ದೈವದ ನೂತನ ಮಣೆಮಂಚ ಸಮರ್ಪಣೆ ಹಾಗೂ ಸಂಜೆ 5 ಗಂಟೆಗೆ ಸರಿಯಾಗಿ ಹೂವಿನ ಪೂಜೆ ಹಾಗೂ ಕಾಂತೇರಿ ಜುಮಾದಿ ದೈವ ದರ್ಶನ ನಡೆಯಲಿದೆ ಎಂದು ದೈವಸ್ಥಾನದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ.ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರಿಗೆ ಪ್ರತಿಷ್ಠಿತ ವಫಾ ಸಂಸ್ಥೆಯಿಂದ ಸನ್ಮಾನ

Posted On: 17-10-2024 01:42PM
ಕಾಪು : ಉಡುಪಿ-ಮಂಗಳೂರು ನಗರದ ಪ್ರತಿಷ್ಠಿತ ಸುಪ್ರಸಿದ್ದ ವಫಾ ಸಂಸ್ಥೆಯವರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ ಡಾ.ಎಂ.ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರನ್ನು ವಫಾ ಸಂಸ್ಥೆಯು ಬೈಕಂಪಾಡಿ ಅಡ್ಕ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಫಾ ಸಂಸ್ಥೆಯ ಸ್ಥಾಪಕರಾದ ಅಬ್ದುಲ್ ವಹಾಬ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಫಾರೂಕ್ ಅವರ ಸಮಾಜ ಸೇವೆಯು ಹೀಗೆ ಮುಂದುವರಿಯಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್ ಮೊಹಮ್ಮದ್, ಮಂಗಳೂರು ಮಾಜಿ ಮೇಯರ್ ಅಶ್ರಫ್, ತುಳುವಿನ ಪ್ರಖ್ಯಾತ ಚಿತ್ರನಟರಾದ ದೇವಿದಾಸ್ ಕಾಪಿಕಾಡ್, ಸುಮಂತ, ರಾಹುಲ್ ಅಮೀನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಅಧ್ಯಕ್ಷರಾದ ಶರ್ಫುದ್ದಿನ್ ಶೇಕ್, ಸಾಹಿತಿ ಮುಸ್ತಾಕ್ ಹೆನ್ನಾಬೈಲು, ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷರಾದ ತಸ್ನೀನ್ ಅರಾ, ಉಡುಪಿ ಜಿಲ್ಲಾ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶೇಕಬ್ಬ ಉಚ್ಚಿಲ, ವಫಾ ಸಂಸ್ಥೆಯ ಮುಂದಾಳು ಜುನೈದ್ ಉಚ್ಚಿಲ ಮತ್ತಿತರರು ಉಪಸ್ಥಿತರಿದ್ದರು.
ಅ.20 : ಕಾಪು ತಾಲೂಕು ಪರಿವಾರ ನಾಯಕ ಸಮುದಾಯದ ಮಹಾಸಭೆ

Posted On: 16-10-2024 09:29AM
ಕಾಪು : ಕಾಪು ತಾಲೂಕು ಪರಿವಾರ ನಾಯಕ ಸಮುದಾಯದ ಮಹಾಸಭೆಯು ಅಕ್ಟೋಬರ್ 20, ಆದಿತ್ಯವಾರ ಬೆಳಿಗ್ಗೆ 10 ಘಂಟೆಗೆ ಸರಿಯಾಗಿ ಮಜೂರು ಪಂಚಾಯತ್ ಸಭಾಂಗಣದಲ್ಲಿ ಕಾಪು ತಾಲೂಕಿನ ಅದ್ಯಕ್ಷರಾದ ನೀಲಾನಂದ್ ನಾಯ್ಕ್ ಇವರ ಅಧ್ಯಕ್ಷತೆಯಲ್ಲಿ ಜರಗಲಿದೆ.
ಈ ಮಹಾಸಭೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯ್ಕ್, ಉಡುಪಿ ತಾಲೂಕು ಸಂಘದ ಅಧ್ಯಕ್ಷರಾದ ಶೇಖರ್ ನಾಯ್ಕ್, ಮಂಗಳೂರು ತಾಲೂಕು ಸಂಘದ ಅಧ್ಯಕ್ಷರಾದ ಜಯಂತ್ ನಾಯ್ಕ್ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ - ಕನ್ನಡ ವೀಡಿಯೋ ಅಲ್ಬಮ್ ಸಾಂಗ್ ಬಿಡುಗಡೆ

Posted On: 14-10-2024 11:19PM
ಪಡುಬಿದ್ರಿ : ಪುರಾತನ ದೇವಸ್ಥಾನದ ಹಿನ್ನೆಲೆಯನ್ನು ಇಂದಿನ ಜನತೆಗೆ ತಿಳಿಯಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಇಂದಿನ ಯುವ ಜನತೆ ನಮ್ಮ ಸಂಸ್ಕೃತಿ, ಸಂಪ್ರದಾಯ ಉಳಿಸುವ ಕಾರ್ಯ ಮಾಡಬೇಕಾಗಿದೆ. ಇಂತಹ ಅಲ್ಬಮ್ ಸಾಂಗ್ ನ ಜೊತೆ ಚಲನಚಿತ್ರ ಕೂಡಾ ನಿರ್ಮಾಣವಾಗಲಿ ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ನವೀನಚಂದ್ರ ಜೆ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಭಾರತ್ ಸಿನಿಮಾದಲ್ಲಿ ನಡೆದ "ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ" ಕನ್ನಡ ವಿಡಿಯೋ ಅಲ್ಬಮ್ ಸಾಂಗ್ ನ ಪ್ರದರ್ಶನ ವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ವಂದನಾ ರೃೆ, ಕಾಪು ರಕ್ಷಣಾಪುರ ಜವನರ್ ಅಧ್ಯಕ್ಷರಾದ ನವೀನ್ ಎನ್ ಶೆಟ್ಟಿ, ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೇಸ್ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್, ಕಾಪು ತಾಲೂಕು ಪತ್ರಕರ್ತರ ಸಂಘ ದ ಮಾಜಿ ಅಧ್ಯಕ್ಷ ಸುರೇಶ್ ಎರ್ಮಾಳ್, ಸಾಮಾಜಿಕ ಹೋರಾಟಗಾರ ಶೇಖರ್ ಹೆಜ್ಮಾಡಿ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕರುಣಾಕರ್ ಪೂಜಾರಿ, ಪಡುಬಿದ್ರಿ ರೋಟರಿ ಕ್ಲಬ್ ಪೂರ್ವ ಅಧ್ಯಕ್ಷೆ ಗೀತಾ ಅರುಣ್, ನಿಯೋಜಿತ ಅಧ್ಯಕ್ಷ ಸುನಿಲ್ ಕುಮಾರ್, ಪಡುಬಿದ್ರಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ಯಶೋಧ ಪಡುಬಿದ್ರಿ, ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಅಧ್ಯಕ್ಷ ರಚನ್ ಸಾಲ್ಯಾನ್, ಇನ್ನರ್ ವೀಲ್ ಕ್ಲಬ್ ಪೂರ್ವ ಅಧ್ಯಕ್ಷೆ ನಮೃತಾ ಮಹೇಶ್, ನಿರ್ದೇಶಕ ಶರತ್ ಎಸ್ ಪೂಜಾರಿ, ನಿರ್ಮಾಪಕ ಸಂತೋಷ್ ಪಡುಬಿದ್ರಿ, ನಾಯಕಿ ನಟಿ ಸುಪ್ರೀತಾ ಪೂಜಾರಿ ಪಾಂಗಾಳ, ಗಾಯಕಿ ನಮಿತಾ ಕಾರ್ಕಳ, ಭಜನಾ ಗಾಯಕ ಸುರೇಶ್ ಪಲಿಮಾರ್ ಉಪಸ್ಥಿತರಿದ್ದರು.
ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ನಿರೂಪಿಸಿ, ವಂದಿಸಿದರು.
ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ - ಕನ್ನಡ ವೀಡಿಯೋ ಅಲ್ಬಮ್ ಸಾಂಗ್ ವೀಕ್ಷಣೆಗೆ ಲಿಂಕ್ ಕ್ಲಿಕ್ ಮಾಡಿ
ಪಡುಬಿದ್ರಿ : ಬಾಲ ಗಣಪತಿಯ ಜಲಸ್ತಂಭನ

Posted On: 13-10-2024 10:44AM
ಪಡುಬಿದ್ರಿ : ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ಹಿಂದಿನ ಕಾಲದಲ್ಲಿ ಮಕ್ಕಳಿಂದಲೇ ನಿರ್ಮಿತವಾದ ಕ್ಷೇತ್ರವೆಂಬ ಪ್ರತೀತಿಯಿರುವ ಬಾಲ ಗಣಪತಿಯ ಜಲಸ್ತಂಭನ ಶನಿವಾರ ಸಂಜೆ ಜರಗಿತು.

ವಿಶೇಷವಾಗಿ ಗಣೇಶ ಚತುರ್ಥಿಯಿಂದ ಮೊದಲ್ಗೊಂಡು ನವರಾತ್ರಿಯಾದ್ಯಂತ ಪ್ರತಿದಿನ ಸಾಯಂಕಾಲ ಭಕ್ತರಿಂದ ಹರಕೆಯ ರೂಪವಾಗಿ ರಂಗಪೂಜೆ ನಡೆಯುತ್ತದೆ. ವಿಜಯದಶಮಿಯಂದು ಬೆಳಗ್ಗಿನಿಂದ ಪೂಜಾ ವಿಧಿವಿಧಾನಗಳು ನಡೆದು ಸಂಜೆ ಪಲ್ಲಕ್ಕಿಯ ಮೂಲಕ ಗಣಪತಿಯ ಮೃಣ್ಮಯ ಮೂರ್ತಿಯು ಶ್ರೀ ಕ್ಷೇತ್ರದಿಂದ ಪೇಟೆಗೆ ಸಾಗಿ ಅಲ್ಲಿಂದ ಹಿಂತಿರುಗಿ ಕೆಳಗಿನ ಪೇಟೆಯ ರಸ್ತೆಯ ಮೂಲಕ ಬೀಚ್ ರಸ್ತೆಗೆ ಸಾಗಿ ಗುಡ್ಡೆಚ್ಚಿಗೆ ತಲುಪಿ ಅಲ್ಲಿ ಕಟ್ಟೆ ಪೂಜೆ, ತಪ್ಪಂಗಾಯಿ ಸೇವೆಯ ಬಳಿಕ ಮುಂದೆ ಸಾಗಿ ಸಮುದ್ರದಲ್ಲಿ ಗಣಪತಿಯ ಮೂರ್ತಿಯನ್ನು ಜಲಸ್ತಂಭನ ಮಾಡಲಾಯಿತು.
ಮೆರವಣಿಗೆಯಲ್ಲಿ ಕುಣಿತ ಭಜನಾ ತಂಡ, ವಿವಿಧ ವೇಷಗಳು, ಹುಲಿವೇಷ ಕುಣಿತ ತಂಡ ಪಾಲ್ಗೊಂಡಿದ್ದವು.