Updated News From Kaup

ಉಡುಪಿ : ಹುತಾತ್ಮ ಯೋಧರಿಗೆ ಗೌರವಾರ್ಪಣೆ

Thumbnail
Posted On: 14 Feb 2025, 10:48 PM

ಉಡುಪಿ : ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನೆಯ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಲ್ಲಿ 40 ಮಂದಿ ಹುತಾತ್ಮರಾದ ಯೋಧರಿಗೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರ ನೇತೃತ್ವದಲ್ಲಿ ಹಾಗೂ ಭಾರತೀಯ ಅರೆ ಸೇನಾ ಪಡೆಯ ನಿವೃತ್ತ ಯೋಧರ ಸಂಘ ಉಡುಪಿ ಮತ್ತು ದಕ್ಷಿಣ ಜಿಲ್ಲೆಯ ವತಿಯಿಂದ ಉಡುಪಿ ಜಿಲ್ಲಾ ಯೋಧರ ಸ್ಮಾರಕದಲ್ಲಿ ಮೌನ ಪ್ರಾರ್ಥನೆಯ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಹೆಡ್ ಕಾನ್ಸ್ಟೇಬಲ್ ಸುರೇಶ್ ರಾವ್, ಸಿಪಿಒ ಜಯಾನಂದ ಪೂಜಾರಿ, ಹಲ್ವಾದರ್ ಶರತ್ ಕುಮಾರ್, ಎಸ್.ಐ.ಎಂ. ಪದ್ಮನಾಭ ರಾವ್, ಎಎಸ್‌ಐ ದಾಮೋದರ್, ಎಸ್.ಐ ಕೇಶವ ಆಚಾರ್ಯ, ಹವಲ್ಧಾರ್ ರಾಜೇಶ್ ಮೆಂಡನ್, ಸುಬೇದಾರ್ ಮೇಜರ್ ಗಣಪಯ್ಯ ಶೇರಿಗಾರ್, ಸಿ.ಎಸ್.ಎಲ್ ಪದ್ಮನಾಭ ಪೆರ್ಡೂರ್ ಹಾಗೂ ವಿಜಯ ಕುಂದರ್, ವೀಣಾ ಶೆಟ್ಟಿ, ಸುಧಾಕರ್ ಆಚಾರ್ಯ, ವಾರಿಜಾ ಕಲ್ಮಾಡಿ, ಶ್ವೇತ ಜಯರಾಮ್ ಉಪಸ್ಥಿತರಿದ್ದರು.

ಶಿರ್ವ ಸಹಕಾರಿ ವ್ಯವಸಾಯಿಕ ಸಂಘ : ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

Thumbnail
Posted On: 14 Feb 2025, 08:04 PM

ಶಿರ್ವ : ಶಿರ್ವ ಸಹಕಾರಿ ವ್ಯವಸಾಯಿಕ ಸಂಘ (ರಿ.) ಶಿರ್ವ ಇದರ ಅಧ್ಯಕ್ಷರಾಗಿ ಕುತ್ಯಾರು ಪ್ರಸಾದ್ ಶೆಟ್ಟಿ ಹಾಗೂ ಉಪಾಧ್ಯಕ್ಷ ರಾಗಿ ವೀರೇಂದ್ರ ಪಾಟ್ಕರ್ ಅವಿರೋಧ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಸಂಘದ ನಿರ್ದೇಶಕರುಗಳಾದ ರಂಜಿತ್ ಪ್ರಭು ಮಟ್ಟಾರು, ಉಮೇಶ ಆಚಾರ್ಯ, ಪುರುಶೋತ್ತಮ ಶೆಟ್ಟಿಗಾರ್, ಸುಂದರ ಮೂಲ್ಯ, ವಾರಿಜ ಆರ್ ಕಲ್ಮಾಡಿ, ವೇದಾವತಿ ಆಚಾರ್ಯ, ವಿಜಯ ಪೂಜಾರಿ, ಹರಿಣಾಕ್ಷ ಶೆಟ್ಟಿ, ಕೃಷ್ಣ ಮುಖಾರಿ, ಗಣೇಶ್ ನಾಯ್ಕ ಉಪಸ್ಥಿತರಿದ್ದರು.

ಫೆ.22 ಮತ್ತು 23 : ಕಾಪು ಶ್ರೀ ಹೊಸ ಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Thumbnail
Posted On: 14 Feb 2025, 07:57 PM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬಹ್ಮಕಲಶೋತ್ಸವದ ಅಂಗವಾಗಿ ಫೆಬ್ರವರಿ 22 ಮತ್ತು 23ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಲಿದೆ ಎಂದು ಹೊರೆ ಕಾಣಿಕೆ ಸಮರ್ಪಣಾ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಅವರು ಶುಕ್ರವಾರ ಕಾಪುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಫೆಬ್ರವರಿ 22ರಂದು ಮೆರವಣಿಗೆ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಿಂದ ದಕ್ಷಿಣ ವಾಹಿನಿ ಹೊರೆಕಾಣಿಕೆ ಸಮರ್ಪಣೆಯು ಹೆಜಮಾಡಿ ಗಡಿ ದಾಟಿ ಮೂಳೂರು ಕೊಪ್ಪಲಂಗಡಿಗೆ ಬಂದು ಅಲ್ಲಿಂದ ಹೊಸ ಮಾರಿಗುಡಿ ದೇವಳವನ್ನು ತಲುಪಲಿದೆ. ಫೆಬ್ರವರಿ 23ರಂದು ಉಡುಪಿ ಜಿಲ್ಲೆಯಿಂದ ಸಮರ್ಪಿಸಲ್ಪಡುವ ಉತ್ಸರವಾಹಿನಿ ಹೊರೆಕಾಣಿಕೆಯು ಪಾಂಗಾಳ ಸೇತುವೆ ಬಳಿಯಿಂದ ಹೊಸ ಮಾರಿಗುಡಿ ತಲುಪಲಿದೆ. ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ಸಂದರ್ಭದಲ್ಲಿ ವಿವಿಧ ಬಿರುದಾವಳಿಗಳೊಂದಿಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಸಂದರ್ಭ ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಹೊರೆ ಕಾಣಿಕೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಪಾದೂರು, ಉಪಾಧ್ಯಕ್ಷರಾದ ಶ್ರೀಕರ ಶೆಟ್ಟಿ ಕಲ್ಯ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಾಧವ ಪಾಲನ್, ಯೋಗೀಶ್ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ,ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಡಾ. ಸುನೀತಾ ಶೆಟ್ಟಿ, ಮೋಹನ ಬಂಗೇರ, ಶಾಂತಲತಾ ಶೆಟ್ಟಿ, ಅನಿಲ್ ಕುಮಾರ್, ಅವಿನಾಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿ : ಹರಿದ್ವಾರದಿಂದ ಪವಿತ್ರ ಗಂಗಾಜಲ ಆಗಮನ

Thumbnail
Posted On: 14 Feb 2025, 07:46 PM

ಕಾಪು : ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿದ್ದು, ಬ್ರಹ್ಮಕಲಶೋತ್ಸವಕ್ಕಾಗಿ ಹರಿದ್ವಾರದಿಂದ ವಿಮಾನದ ಮೂಲಕ ತರಲಾದ ಪವಿತ್ರ ಗಂಗಾಜಲವನ್ನು ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣದಿಂದ ಬೃಹತ್ ವಾಹನ ಜಾಥದ ಮೂಲಕ ಕಾಪು ಸಾವಿರ ಸೀಮೆಯ ಒಡೆಯ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಾನಕ್ಕೆ ತಂದು ಪೂಜೆ ಸಲ್ಲಿಸಲಾಯಿತು.  ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಹರಿದ್ವಾರದಲ್ಲಿ ಫೆಬ್ರವರಿ 12ರ ಕುಂಭ ಸಂಕ್ರಮಣದ ಹುಣ್ಣಿಮೆಯ ಪರ್ವಕಾಲದಲ್ಲಿ ಬೃಹತ್  ನವಕುಂಭಗಳಲ್ಲಿ ಗಂಗಾಜಲವನ್ನು ತುಂಬಿಸಿ, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಲಾಯಿತು. ಬೆಳಿಗ್ಗೆ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ದಂಪತಿಗಳು, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ದಂಪತಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಉದಯ ಸುಂದರ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಒಂಬತ್ತು ಮಂದಿ ನವಕುಂಭದೊಂದಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಗಣ್ಯರು ನವಕುಂಭವನ್ನು ಸ್ವಾಗತಿಸಿದರು. ಮುಂದಿನ 9 ದಿನಗಳ ಕಾಲ ನವಕುಂಭಗಳಿಗೆ ವಿಶೇಷ ಪೂಜೆ ಸಲ್ಲಿಸಿ, ತದನಂತರ ಕಾಪು ಹೊಸಮಾರಿ ಗುಡಿಯ ಅಮ್ಮನ ಸನ್ನಿಧಾನಕ್ಕೆ ತರಲಾಗುವುದು. ಈ ಸಂದರ್ಭ ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಅಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿಯ ಶ್ರೀ ಉಚ್ಚಂಗಿ ಅಮ್ಮನವರ ಸ್ವರ್ಣ ಕವಚ

Thumbnail
Posted On: 14 Feb 2025, 11:35 AM

ಶ್ರೀ ಶಿಲ್ಪಿ ನಾಗರಾಜ್ ಆಚಾರ್ಯ, ಇಂದ್ರಾಳಿ ಹಾಗೂ ನಂದನ್ ಆಚಾರ್ಯ ಸಹೋದರ ಇವರ ಅದ್ಭುತ ಕೈ ಚಳಕದಲ್ಲಿ ನಿರ್ಮಾಣವಾದ ಕಾಪು ಶ್ರೀ ಹೊಸ ಮಾರಿಗುಡಿಯ ಶ್ರೀ ಉಚ್ಚಂಗಿ ಅಮ್ಮನವರ ಸ್ವರ್ಣ ಮೊಗದ ಪ್ರತಿಮೆ. ವಿಶ್ರುತ ಶಿಲ್ಪಶಾಲ, ಪೆರ್ಡೂರು PH: 70262 59449

ಊರಿನ ರಸ್ತೆಗೆ ಕಾಯಕಲ್ಪ ನೀಡಿದ 80 ವಯಸ್ಸಿನ ಶ್ರೀನಿವಾಸ ಮೂಲ್ಯರಿಗೆ ಕುಲಾಲ ಸಂಘದಿಂದ ಸನ್ಮಾನ

Thumbnail
Posted On: 13 Feb 2025, 07:32 PM

ಕಾರ್ಕಳ : ತಾಲೂಕಿನ ಮರ್ಣೆ ಪಂಚಾಯತ್ ನ ಒಂದು ಭಾಗದ ರಸ್ತೆಯನ್ನು 50 ವರ್ಷದಿಂದ ಶ್ರೀನಿವಾಸ್ ಮೂಲ್ಯ ಎನ್ನುವ 80 ವರ್ಷದ ವೃದ್ಧ ರಿಪೇರಿ ಮಾಡುತ್ತಿರುವುದು ಗಮನಾರ್ಹವಾಗಿದೆ. ಈ ಸಾಹಸದ ಕಾರ್ಯವನ್ನು ಗುರುತಿಸಿ ಇತ್ತೀಚೆಗೆ ಅಜೆಕಾರು ಕುಲಾಲ ಸಂಘದ ಪ್ರಮುಖರಾದ ಕೃಷ್ಣ ಮೂಲ್ಯ ಅಜೆಕಾರು, ಸುರೇಂದ್ರ ಮೂಲ್ಯ, ಅನಿಲ್ ಎಣ್ಣೆಹೊಳೆ, ಸುಕೇಶ್ ಮೂಲ್ಯ, ಯೋಗೀಶ್ ಮೂಲ್ಯ, ಜಯಾನಂದ ಮೂಲ್ಯ, ಹರೀಶ್ ಮೂಲ್ಯ ಉಪಸ್ಥಿಯಲ್ಲಿ ಸನ್ಮಾನಿಸಲಾಯಿತು.

ಫೆ. 14 : ಹರಿದ್ವಾರದಿಂದ ಕಾಪು ಹೊಸ ಮಾರಿಗುಡಿ ಸನ್ನಿಧಾನಕ್ಕೆ ಗಂಗಾಜಲ

Thumbnail
Posted On: 11 Feb 2025, 04:43 PM

ಕಾಪು : ಶ್ರೀ ಹೊಸ ಮಾರಿಗುಡಿಯಲ್ಲಿ ಫೆ.25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸದ ಪೂರ್ವಭಾವಿಯಾಗಿ ಫೆ.14 ರಂದು ಬೆಳಿಗ್ಗೆ 9:30 ಕ್ಕೆ ನವಕುಂಭಗಳಲ್ಲಿ ಗಂಗಾಜಲ ಆಗಮಿಸಲಿದೆ ಎಂದು ಗಂಗಾಜಲ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಅವರು ಕಾಪು ಬ್ರಹ್ಮಕಲಶೋತ್ಸವ ಸಮಿತಿಯ ಕಚೇರಿಯಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಎಂ. ಆರ್ ಜಿ ಗ್ರೂಪ್ ಬೆಂಗಳೂರು ಇದರ ಚೇರ್ ಮ್ಯಾನ್ ಡಾ.ಕೆ. ಪ್ರಕಾಶ್ ಶೆಟ್ಟಿಯವರ ನೇತೃತ್ವದಲ್ಲಿ ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿಯವರು ಹರಿದ್ವಾರದಲ್ಲಿ ಕುಂಭ ಸಂಕ್ರಮಣದ ಹುಣ್ಣಿಮೆಯ ಪರ್ವಕಾಲದಲ್ಲಿ ನವಕುಂಭಗಳಲ್ಲಿ ಗಂಗಾಜಲವನ್ನು ತುಂಬಿಸಿ ಧಾರ್ಮಿಕ ವಿಧಿಗಳಿಂದ ಪೂಜಿಸಿ ಫೆ.14 ರಂದು ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಿದ್ದಾರೆ. ತದನಂತರ ಗಂಗಾಜಲವನ್ನು ಶೋಭಾಯಾತ್ರೆಯ ಮೂಲಕ ಕಾಪು ಶ್ರೀ ಲಕ್ಷ್ಮಿಜನಾರ್ಧನ ದೇವರ ಸನ್ನಿಧಾನದಲ್ಲಿರಿಸಿ ಮುಂದಿನ 9 ದಿನ ವಿಶೇಷ ಪೂಜೆ ಸಲ್ಲಿಸಿ ತದನಂತರ ಹೊಸ ಮಾರಿಗುಡಿ ಸನ್ನಿಧಾನಕ್ಕೆ ತರಲಾಗುವುದು. ಹರಿದ್ವಾರದಲ್ಲಿ ಗಂಗಾಜಲ ತರುವ ಸಂಧರ್ಭ ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ದಂಪತಿಗಳು, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ದಂಪತಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಉದಯ ಸುಂದರ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಸೇರಿ ಒಟ್ಟು ಒಂಬತ್ತು ಜನರ ತಂಡ ಈ ಸಂಧರ್ಭದಲ್ಲಿ ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರರಾದ ಯೋಗೀಶ್ ವಿ ಶೆಟ್ಟಿ ಬಾಲಾಜಿ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಮಾಧವ ಆರ್ ಪಾಲನ್, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಶೇಖರ ಸಾಲ್ಯಾನ್, ಗೀತಾಂಜಲಿ ಸುವರ್ಣ, ಕೆ. ವಿಶ್ವನಾಥ್, ಮನೋಹರ ರಾವ್, ಜಯಲಕ್ಷ್ಮಿಎಸ್. ಶೆಟ್ಟಿ, ಶಾಂತಲತಾ ಎಸ್.ಶೆಟ್ಟಿ, ಚರಿತ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

ಪಡುಬಿದ್ರಿ ಸಿ.ಎ. ಸೊಸೈಟಿ : ಅಧ್ಯಕ್ಷರಾಗಿ ವೈ.ಸುಧೀರ್ ಕುಮಾರ್, ಉಪಾಧ್ಯಕ್ಷರಾಗಿ ಗುರುರಾಜ್ ಪೂಜಾರಿ ಅವಿರೋಧವಾಗಿ ಆಯ್ಕೆ

Thumbnail
Posted On: 11 Feb 2025, 02:58 PM

ಪಡುಬಿದ್ರಿ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ವೈ.ಸುಧೀರ್ ಕುಮಾರ್, ಉಪಾಧ್ಯಕ್ಷರಾಗಿ ಗುರುರಾಜ್ ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಸೊಸೈಟಿಯ ಸಭಾಭವನದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೂತನ ಅಧ್ಯಕ್ಷ -ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಚುನಾವಣಾ ನಿರ್ವಚನಾಧಿಕಾರಿಯಾಗಿ ಸುನಿಲ್ ಕುಮಾರ್ ಸಿ. ಎಂ. ಚುನಾವಣಾ ಪ್ರಕ್ರಿಯೆ ನಿರ್ವಹಿಸಿದರು. ಅಧ್ಯಕ್ಷರಾಗಿ ಆಯ್ಕೆಯಾದ ವೈ ಸುಧೀರ್ ಕುಮಾರ್ ಅವರು ಕಳೆದ 20 ವರ್ಷಗಳಿಂದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಇದೀಗ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವೈ ಸುಧೀರ್ ಕುಮಾರ್, ಸೊಸೈಟಿಯು 4 ಕೋಟಿ ಠೇವಣಾತಿಯಿಂದ 140 ಕೋಟಿ ಠೇವಣಾತಿ ಹೊಂದಿದ್ದು, ಮುಂದೆ 200 ಕೋಟಿಯ ಗುರಿಯನ್ನು ಹೊಂದಿದೆ. ಚುನಾವಣೆ ಗೆಲುವಿಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಆಡಳಿತ ಮಂಡಳಿ ನಿರ್ದೇಶಕರಾದ ಜಿತೇಂದ್ರ ಫುರ್ಟಾಡೊ, ಮಾಧವ ಆಚಾರ್ಯ, ವಾಸುದೇವ, ರಾಜಾರಾಮ ರಾವ್, ಹಸನ್ ಬಾವ, ರೋಹಿಣಿ ಎ., ಕುಸುಮಾ ಕರ್ಕೇರ, ಗಿರೀಶ್ ಫಲಿಮಾರು, ಶಿವರಾಮ ಎನ್ ಶೆಟ್ಟಿ, ಕೃಷ್ಣ ಬಂಗೇರ, ಕಾಂಚನಾ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಬಾಲಗೋಪಾಲ್ ಬಲ್ಲಾಳ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಶ್ಮಿತ ಪಿ.ಎಚ್. ಉಪಸ್ಥಿತರಿದ್ದರು.

ಕಾಪುವಿನಲ್ಲಿ ಬಿ. ಐ. ಇ. ವಾರ್ಷಿಕ ಪರೀಕ್ಷೆ ಸಂಪನ್ನ

Thumbnail
Posted On: 09 Feb 2025, 11:24 PM

ಕಾಪು : ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಷನ್ ಕರ್ನಾಟಕ, ರಾಜ್ಯ ಮಟ್ಟದಲ್ಲಿ ನಡೆಸುವ ವಾರ್ಷಿಕ ಪರೀಕ್ಷೆಯು ಕಾಪು ವರ್ತುಲದ ಸೆಂಟರ್ 166ರ ವಿದ್ಯಾರ್ಥಿಗಳಿಗೆ ಕಾಪುವಿನ ಹೋಟೆಲ್ ಕೆ. 1 ನ ಸಭಾಂಗಣದಲ್ಲಿ ನಡೆಯಿತು. ಇಸ್ಲಾಮ್ ನ ಬಗ್ಗೆ ನೈಜ ತಿಳುವಳಿಕೆ ಮೂಡಿಸುವ ಬಗ್ಗೆ, ತಳ ಮಟ್ಟದಿಂದ ಹಿಡಿದು ಅಂತಿಮ ಪರಿಣಾಮದ ತನಕದ ಬೋಧನೆಗಳನ್ನು ಅಭ್ಯಸಿಸಿ ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮನುಷ್ಯನ ಇಹ ಮತ್ತು ಪರಲೋಕ ಜೀವನ ಬೆಳಗುತ್ತದೆ. ಮನುಷ್ಯನು ಸಮಾಜದಲ್ಲಿ ಸೌಹಾರ್ದಮಯ ಜೀವನ ಸಾಗಿಸಬಹುದು ಎಂಬ ಸಂದೇಶವುಳ್ಳ ಇಸ್ಲಾಮಿ ಪುಸ್ತಕಗಳನ್ನು ತಮ್ಮ ಮನೆಯಲ್ಲಿಯೇ ಅಧ್ಯಯನ ಮಾಡಿ ಬಂದು ಪರೀಕ್ಷೆಯಲ್ಲಿ ಭಾಗವಹಿಸಬೇಕಾಗಿದ್ದು, ಇದರಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ಈ ಪರೀಕ್ಷೆಯಲ್ಲಿ ಗಣನೀಯ ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಈ ಪರೀಕ್ಷೆಯು ಜಮಾ ಅತೆ ಇಸ್ಲಾಮಿ ಹಿಂದ್ ಕಾಪು ವರ್ತುಲದ ಸ್ಥಾನೀಯ ಅಧ್ಯಕ್ಷರಾದ ಅನ್ವರ್ ಅಲಿಯವರ ಮೇಲುಸ್ತುವಾರಿಯಲ್ಲಿ ನಡೆಯಿತು. ಸೆಂಟರ್ ನ ಸಂಚಾಲಕಿ ಶೇಹೆನಾಜ್ ಕಾಪು, ಫಝಿಲತ್ ಬಾನು, ಬೀಬಿ ಬತುಲ್ ಹಾಗೂ ಮುಹಮ್ಮದ್ ಹಾಶಿಮ್ ಸಾಹೇಬ್ ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸ ಮಾರಿಗುಡಿಗೆ ಶ್ರೀ ಕ್ಷೇತ್ರ ದಂಡತೀರ್ಥ ಮಠದಿಂದ ಬೃಹತ್ ಶೋಭಾಯಾತ್ರೆ

Thumbnail
Posted On: 09 Feb 2025, 09:22 PM

ಕಾಪು : ಜೀರ್ಣೋದ್ದಾರದೊಂದಿಗೆ ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ನೂತನ ಸ್ವರ್ಣ ಗದ್ದುಗೆ, ರಜತ ರಥ, ಬೃಹತ್ ಗಂಟೆ, ಸಹಿತ ಸ್ವರ್ಣಾಭರಣಗಳ ಶೋಭಾಯಾತ್ರೆಯು ಭಾನುವಾರ ನಡೆಯಿತು. ಕೃಷ್ಣಾಪುರ ಮಠದ ಶ್ರೀ ವಿದ್ಯಾಶ್ರೀ ಸಾಗರ ಸ್ವಾಮೀಜಿ ಸ್ವರ್ಣ ಗದ್ದುಗೆಯನ್ನು ಅನಾವರಣಗೊಳಿಸಿದರು. ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಪುರಮೆರವಣಿಗೆಗೆ ಚಾಲನೆ ನೀಡಿದರು. ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ನೇತೃತ್ವದಲ್ಲಿ ಭಕ್ತಾಧಿಗಳ ಸಹಕಾರದೊಂದಿಗೆ ಅರ್ಪಿಸಲ್ಪಟ್ಟ ಸ್ವರ್ಣ ಗದ್ದುಗೆ ಮತ್ತು ಮಾರಿಯಮ್ಮ ದೇವಿಯ ಚಿನ್ನದ ಮುಖ, ದಾನಿ ಮುಂಬಯಿಯ ಉದ್ಯಮಿ ತೋನ್ಸೆ ಆನಂದ ಎಂ. ಶೆಟ್ಟಿ ಮತ್ತು ಶಶಿರೇಖಾ ಆನಂದ ಶೆಟ್ಟಿ ಅವರು ನೀಡಿದ ಮಂಗಳೂರು ಎಸ್.ಎಲ್. ಶೇಟ್ ಜುವೆಲ್ಲರ್ಸ್ನಲ್ಲಿ ನಿರ್ಮಾಣಗೊಂಡಿರುವ ರಜತ ರಥ, ಮುಂಬಯಿ ಉದ್ಯಮಿ ಅರವಿಂದ್ ಶೆಟ್ಟಿ ಮತ್ತು ಪಲ್ಲವಿ ಶೆಟ್ಟಿ ದಂಪತಿ ಸಮರ್ಪಿಸುವ ಅಯೋಧ್ಯೆ ಮಾದರಿಯ ಬೃಹತ್ ಗಂಟೆ, ಉಳಿಯಾರಗೋಳಿ ದಿ. ಸುಂದರ ಶೆಟ್ಟಿ ಮತ್ತು ದಿ. ರಾಧಾ ಸುಂದರ ಶೆಟ್ಟಿ ಅವರ ಮಕ್ಕಳು ಹಾಗೂ ಮೂಳೂರು ಸುಧಾಕರ ಹೆಗ್ಡೆ ಮತ್ತು ರಂಜನಿ ಸುಧಾಕರ ಹೆಗ್ಡೆ ದಂಪತಿ ಸಮರ್ಪಿಸುವ ರಾಜಗೋಪುರದ ಮಹಾದ್ವಾರದ ಬಾಗಿಲು ಹಾಗೂ ಉಚ್ಚಂಗಿ ದೇವಿಯ ಚಿನ್ನದ ಪಾದಪೀಠ ಮತ್ತು ಚಿನ್ನದ ಮುಖದ ಶೋಭಾಯಾತ್ರೆಯು ಶ್ರೀ ಕ್ಷೇತ್ರ ದಂಡತೀರ್ಥ ಮಠದಿಂದ ಹೊರಟು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಗಿ ಕಾಪು ಪೇಟೆಯ ಮೂಲಕ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಾಗಿತು. ಸಾವಿರಾರು ಭಕ್ತರು ಹೆದ್ದಾರಿ ಇಕ್ಕೆಲಗಳಲ್ಲಿ ನಿಂತು ಶೋಭಾಯಾತ್ರೆಯನ್ನು ಕಣ್ತುಂಬಿಕೊಂಡರು. ಮೆರವಣಿಗೆಯಲ್ಲಿ ಕುಣಿತ ಭಜನೆ, ಡೋಲು ವಾದನ, ಮಕ್ಕಳಿಂದ ಜಾಗಟೆ ಮತ್ತು ಶಂಖನಾದ, ಹುಲಿ ವೇಷ, ಮರಕಾಲು ಕುಣಿತ, ಕೀಲು ಕುದುರೆ, ಯಕ್ಷಗಾನ ನೃತ್ಯ ರೂಪಕ ಸಹಿತ ವಿವಿಧ ವೇಷಗಳು, ವಿವಿಧ ಸಮಾಜದ ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ವಿ. ಸುನೀಲ್ ಕುಮಾರ್, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ರಘುಪತಿ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಪ್ರಧಾನ ತಂತ್ರಿ ಕೊರಂಗ್ರಪಾಡಿ ಕುಮಾರ ಗುರು ತಂತ್ರಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಾರ್ಯನಿರ್ವಹಣಾಧಿಕಾರಿ ಕೆ. ರವಿಕಿರಣ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣ ಸಮಿತಿ ಅಧ್ಯಕ್ಷ ರವಿಸುಂದರ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣ ಮೆರವಣಿಗೆ ಸಮಿತಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.