Updated News From Kaup
ಉದ್ಯಾವರ ಸೌಹಾರ್ದ ಸಮಿತಿಯಿಂದ ಅಂಗನವಾಡಿಗಳಲ್ಲಿ ಕ್ರಿಸ್ಮಸ್ ಆಚರಣೆ
Posted On: 24-12-2024 02:27PM
ಉದ್ಯಾವರ : ಸೌಹಾರ್ದ ಸಮಿತಿ ಉದ್ಯಾವರದ ನೇತೃತ್ವದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 11 ಅಂಗನವಾಡಿಗಳಲ್ಲಿರುವ ಮಕ್ಕಳಿಗೆ ಕ್ರಿಸ್ಮಸ್ ಸಿಹಿ ವಿತರಿಸಿ, ಕ್ರಿಸ್ಮಸ್ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಡಿ.28 ಮತ್ತು 29 : ಪಡುಬಿದ್ರಿಯಲ್ಲಿ ಕೃಷಿ ಮೇಳ
Posted On: 24-12-2024 02:21PM
ಪಡುಬಿದ್ರಿ : ಉದಯಾದ್ರಿ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ನಿತ್ಯಾನಂದ ಆಗ್ರೋ ಲಿಮಿಟೆಡ್ ಕೊಲ್ನಾಡ್,ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಡಿ. 28 ಹಾಗೂ 29ರಂದು ದ್ವಿತೀಯ ಬಾರಿಗೆ ಪಡುಬಿದ್ರಿ ಉದಯಾದ್ರಿ ಬಾಲಗಣಪತಿ ಪ್ರಸನ್ನ ದೇವಸ್ಥಾನದ ಆವರಣದಲ್ಲಿ ಬೆಳಿಗ್ಗೆ ಗಂಟೆ 9ರಿಂದ ರಾತ್ರಿ 9ರವರೆಗೆ ಜರಗಲಿದೆ ಎಂದು ಸಂಘಟಕರಾದ ರಕ್ಷಾ ಇವರು ಪಡುಬಿದ್ರಿ ಉದಯಾದ್ರಿ ಬಾಲಗಣಪತಿ ಪ್ರಸನ್ನ ದೇವಸ್ಥಾನದ ಆವರಣದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಡಿ.29 : ಪಡುಬಿದ್ರಿಯಲ್ಲಿ ಅಂತರ್ ರಾಜ್ಯ ಬಂಟ ಕ್ರೀಡೋತ್ಸವ - ಎಂ ಆರ್ ಜಿ ಟ್ರೋಫಿ 2024
Posted On: 24-12-2024 01:44PM
ಪಡುಬಿದ್ರಿ : ಇಲ್ಲಿನ ಬಂಟರ ಸಂಘದ ವತಿಯಿಂದ ಡಿ.29 ರಂದು ಪಡುಬಿದ್ರಿ ಬಂಟರ ಭವನದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ದಿ. ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ಅಂತರ್ ರಾಜ್ಯ ಬಂಟ ಕ್ರೀಡೋತ್ಸವ ಎಂ ಆರ್ ಜಿ ಟ್ರೋಫಿ 2024 ನಡೆಯಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ. ಐಕಳ ಭಾವ ದೇವಿ ಪ್ರಸಾದ್ ಶೆಟ್ಟಿ ಬೆಳಪು ಇವರು ಮಂಗಳವಾರ ಪಡುಬಿದ್ರಿಯಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ದೇಶಾದ್ಯಂತ ನೆಲೆಸಿರುವ ಬಂಟ ಸಮುದಾಯವನ್ನು ಒಗ್ಗೂಡಿಸಿ ಯುವ ಶಕ್ತಿಯ ಕ್ರೀಡಾ ಸ್ಫೂರ್ತಿಗೆ ಪ್ರೇರಣೆ ನೀಡಿ ಪ್ರೋತ್ಸಾಹಿಸುವ ನಿಟ್ಟಿನಿಂದ ಹಲವಾರು ವಿಶೇಷತೆಗಳ ವೈಭವದಿಂದ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ಆಕರ್ಷಕ ಪಥಸಂಚಲನ, ವಾಲಿಬಾಲ್, ತ್ರೋಬಾಲ್, ಕಬ್ಬಡಿ, ಹಗ್ಗ ಜಗ್ಗಾಟ ಪಂದ್ಯಾಟಗಳು ನಡೆಯಲಿದೆ. ವಿಜೇತರಿಗೆ ಆಕರ್ಷಕ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುವುದು.
ಕಾಪುವಿನಲ್ಲಿ ಉಚಿತ ವೈದ್ಯಕೀಯ, ನೇತ್ರ, ದಂತ ತಪಾಸಣೆ ಚಿಕಿತ್ಸಾ ಶಿಬಿರ
Posted On: 22-12-2024 01:25PM
ಕಾಪು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಕಾಪು ಶಾಖೆಯ ನೇತೃತ್ವದಲ್ಲಿ ಕಾಪು ರೋಟರಿ ಕ್ಲಬ್ನ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ವಿಶ್ವವಿದ್ಯಾಲಯ ದೇರಳಕಟ್ಟೆ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿನ ನುರಿತ ತಜ್ಞ ವೈದ್ಯರ ತಂಡದಿಂದ ಆದಿತ್ಯವಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕಾಪು ಶಾಖಾ ವಠಾರದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಜರಗಿತು.
ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯ 40ನೇ ವಾರ್ಷಿಕೋತ್ಸವ ; ಸನ್ಮಾನ ; ಧನಸಹಾಯ ; ಸಾಂಸ್ಕೃತಿಕ ಕಾರ್ಯಕ್ರಮಗಳು
Posted On: 20-12-2024 06:12PM
ಪಡುಬಿದ್ರಿ : ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿ (ರಿ.) ಇದರ 40ನೇ ವಾರ್ಷಿಕೋತ್ಸವವು ಎರ್ಮಾಳು ಶ್ರೀ ಜನಾರ್ದನ ದೇವಸ್ಥಾನದ ಆವರಣದಲ್ಲಿ ಗೌರವಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಸಾಮಾಜಿಕ ಚಟುವಟಿಕೆಯ ಮೂಲಕ ಮಹಿಳೆಯರಿಗೆ ಸಾಕಷ್ಟು ಉತ್ತೇಜನವನ್ನು ನೀಡಿದ ಸಂಸ್ಥೆಯು ಹಲವಾರು ಕಲಾವಿದರನ್ನು ಹುಟ್ಟು ಹಾಕಿದೆ. ಇದೀಗ 40ರ ಸಂಭ್ರಮದಲ್ಲಿ ಸಮಾಜದ ಅಶಕ್ತರಿಗೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಜನಮಾನಸಕ್ಕೆ ಮಾದರಿಯಾಗಿದೆ ಎಂದರು.
ಆಧಾರ್ ಕಾಡ್೯ ಮಾಡಿಸಿ ಮಾನಸಿಕ ಅಸ್ವಸ್ಥರ ಬದುಕಿಗೆ ಬೆಳಕಾದ ಕಾಪು ತಹಶಿಲ್ದಾರ್
Posted On: 20-12-2024 05:55PM
ಕಾಪು : ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಎರ್ಮಾಳು ಬಡಾ ಗ್ರಾಮದ ಅಕ್ಕಪಕ್ಕದ ಮನೆಯ ಕಿರಣ ಕುಮಾರಿ (52) ಮತ್ತು ಪ್ರಮೋದ (69) ಎಂಬ ಮಹಿಳೆಯರಿಗೆ ಕಾಪು ತಾಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್. ಅವರ ಮನೆಗೆ ತೆರಳಿ ಆಧಾರ್ ಕಾರ್ಡ್ ಮಾಡಿಸಿದ್ದಾರೆ.
ರೋಬೋಸೋಫ್ಟ್ ಸಂಸ್ಥೆಯಿಂದ ಉಡುಪಿ ಜಿಲ್ಲಾ ಪಂಚಾಯತ್ ಗೆ 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳ ಹಸ್ತಾಂತರ
Posted On: 20-12-2024 12:04PM
ಉಡುಪಿ : ಸ್ವಚ್ಛತೆಯೇ ಸೇವೆ ಎಂಬ ಧೈಯವಾಕ್ಯದೊಂದಿಗೆ ಪರಿಸರ ಸುಸ್ಥಿರತೆ ಮತ್ತು ಹಸಿರು ಶಕ್ತಿಯ ಉತ್ತೇಜನದ ಕಡೆಗೆ ಹೆಜ್ಜೆ ಇಡುವ ನಿಟ್ಟಿನಲ್ಲಿ ಉಡುಪಿಯ ಐಟಿ ಕಂಪನಿಯಾದ ರೋಬೋಸೋಫ್ಟ್ ಟೆಕ್ನಾಲಜೀಸ್ ಸಿಎಸ್ಆರ್ ಕಾರ್ಯಕ್ರಮದ ಅಡಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಗೆ ಉಡುಪಿಯ ಹಲವಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಿಂದ ತ್ಯಾಜ್ಯ ಸಂಗ್ರಹಕ್ಕಾಗಿ ಬಳಸಲು 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಹಸ್ತಾಂತರಿಸಿತು.
ಕಾಪು ಹೊಸ ಮಾರಿಗುಡಿಗೆ ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರು ಭೇಟಿ
Posted On: 19-12-2024 11:15AM
ಕಾಪು : ಸಂಪೂರ್ಣ ಇಳಕಲ್ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡು, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಅಣಿಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶ್ರೀ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರು ಮಂಗಳವಾರ ಭೇಟಿ ನೀಡಿ, ಸಮಗ್ರ ಜೀರ್ಣೋದ್ಧಾರ ಕಾಮಗಾರಿಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಪು ಶ್ರೀ ಹೊಸ ಮಾರಿಗುಡಿ : ಮುಂಬೈಯ ಮೀರಾ - ಬಾಯಂದರ್ ವಲಯದಲ್ಲಿ ನವದುರ್ಗಾ ಲೇಖನ ಸಂಕಲ್ಪಕ್ಕೆ ಸಭೆ
Posted On: 17-12-2024 06:26PM
ಮುಂಬೈ: ಮುಂಬೈಯ ಮೀರಾ - ಬಾಯಂದರ್ ವಲಯದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿ ಮತ್ತು ಲೋಕಕಲ್ಯಾಣರ್ಥವಾಗಿ ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ಮಾಹಿತಿ ನೀಡಲು ಡಿ.15ರಂದು ಮೀರಾ ರೋಡ್ ಪೂರ್ವದ ಹೋಟೆಲ್ ಬಾಲಾಜಿ ಇಂಟರ್ನ್ಯಾಷನಲ್ ನಲ್ಲಿ ಸಭೆ ನಡೆಯಿತು.
ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆ : 37ನೇ ವರ್ಷದ ವಾರ್ಷಿಕೋತ್ಸವ
Posted On: 17-12-2024 06:16PM
ಉಚ್ಚಿಲ : ಉಚ್ಚಿಲ ಮೊಗವೀರ ಹಿತ ಸಾಧನ ವೇದಿಕೆ ಸಂಚಾಲಿತ ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮವನ್ನು ಮಂಗಳವಾರ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿ ಶುಭ ಹಾರೈಸಿದರು.
