Updated News From Kaup
ಇನ್ನಂಜೆಯಲ್ಲೊಂದು ಉಪಯೋಗಕ್ಕೆ ಬಾರದ ಎಟಿಎಮ್
Posted On: 05 Oct 2020, 01:44 AM
ಬ್ಯಾಂಕುಗಳು ವಿಲೀನ ಪ್ರಕ್ರಿಯೆ ಒಂದೆಡೆ ಗ್ರಾಹಕರಿಗೆ ಕೊಂಚ ಕಿರಿಕಿರಿ ಎನಿಸಿದರೂ ತಮ್ಮ ಅಗತ್ಯತೆಗೆ ಬೇಕಾದ ಹಣವನ್ನು ತೆಗೆಯಲು ಎಟಿಮ್ ಗಳನ್ನು ಬಳಸುವುದು ಸಾಮಾನ್ಯ. ಆದರೆ ಶಂಕರಪುರ ಬ್ಯಾಂಕ್ ಆಫ್ ಬರೋಡದ ಇನ್ನಂಜೆಯ ಎಟಿಎಮ್ ಅಗತ್ಯಕ್ಕೆ ಹಣ ಬೇಕಾದವರಿಗೆ ತೆಗೆಯಲು ಸಾಧ್ಯವಾಗುತ್ತಿಲ್ಲ. ಕಾರಣ ಅದೆಷ್ಟೋ ದಿವಸದಿಂದ ಸ್ಥಬ್ದವಾಗಿದ್ದು ಅದರ ಬಗ್ಗೆ ಸಂಬಂಧಪಟ್ಟ ಬ್ಯಾಂಕಿನವರಿಗೆ ತಿಳಿಸಿದರೂ ಏನೂ ಪ್ರಯೋಜನವಾಗದ ಸ್ಥಿತಿಯಾಗಿದೆ. ಇನ್ನಾದರು ಸಂಬಂಧಪಟ್ಟ ಬ್ಯಾಂಕ್ ನವರು ಗ್ರಾಹಕರ ಹಿತದೃಷ್ಟಿಯಿಂದ ಇನ್ನಂಜೆಯ ಎಟಿಎಮ್ ನ್ನು ಸರಿಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹೋಟೆಲ್ ಉದ್ಯಮಿ ಗಂಗಾಧರ್ ಎನ್ ಶೆಟ್ಟಿ ಅಗ್ರಿಪಾಡ ಇನ್ನಿಲ್ಲ
Posted On: 05 Oct 2020, 12:29 AM
ಮುಂಬೈ ಅಗ್ರಿಪಾಡ ನಿವ್ ಉಡುಪಿ ನಿಕೇತನ್ ಮಾಲಕ ಹಾಗೂ ಉದ್ಯಮಿ ಗಂಗಾಧರ್ ಎನ್ ಶೆಟ್ಟಿ (67) ಕಳೆದ 03/10/2020 ರ ಶನಿವಾರ ಬೆಳಿಗ್ಗೆ ಸ್ವರ್ಗಸ್ಥರಾಗಿದ್ದಾರೆ.
ಮಡುಂಬು ಪಡ್ನಗುತ್ತು, ಪಡುಮನೆ ಸುಶೀಲ ಶೆಟ್ಟಿ ಹಾಗೂ ನಾರಾಯಣ ಶೆಟ್ಟಿ ದಂಪತಿಗಳ ಮಗನಾಗಿ 1953 ರಂದು ಜನಿಸಿದ ಗಂಗಾಧರ್ ಎನ್ ಶೆಟ್ಟಿಯವರು ಧಾರ್ಮಿಕ ಕ್ಷೇತ್ರಕ್ಕೂ ತನ್ನದೇ ಆದ ಅನೇಕ ಕೊಡುಗೆಗಳನ್ನು ನೀಡಿದ್ದಾರೆ.
ನಿವ್ ಉಡುಪಿ ನಿಕೇತನ್ ಹೋಟೆಲ್ ಬರೋಬ್ಬರಿ 60 ವರ್ಷಗಳ ಹಿಂದೆ ದಿವಂಗತ ನಾರಾಯಣ ಶೆಟ್ಟಿಯವರು ಸ್ಥಾಪಿಸಿದ ಹೋಟೆಲ್ ಆಗಿದ್ದು, ಇದನ್ನು ಅವರ ಹಿರಿಯ ಮಗನಾದ ಗಂಗಾಧರ್ ಎನ್ ಶೆಟ್ಟಿಯವರು ಮುನ್ನಡೆಸಿಕೊಂಡು ಬರುತ್ತಿದ್ದರು, ಈ ಹೋಟೆಲ್ ಸಾವಿರಾರು ಮಂದಿ ಕೆಲಸಗಾರರಿಗೆ ಉದ್ಯೋಗ ನೀಡಿದ ಸಂಸ್ಥೆಯಾಗಿದ್ದು.
ಮೃತರು ಸಹೋದರಂದಿರು, ಸಹೋದರಿ ಸೇರಿದಂತೆ ಧರ್ಮಪತ್ನಿ ಸುಜಾತ ಶೆಟ್ಟಿ, ಮಕ್ಕಳಾದ ಅಕ್ಷಯ್ ಶೆಟ್ಟಿ, ಅಭಿಷೇಕ್ ಶೆಟ್ಟಿ, ಸೊಸೆಯಂದಿರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ ಎಂದು ತಿಳಿಸಲು ವಿಷಾದ ವ್ಯಕ್ತಪಡಿಸುತ್ತೇವೆ.
ಕಟಪಾಡಿ ಕಾರುಣ್ಯ ವೃದಾಶ್ರಮಕ್ಕೆ ಕಂಪ್ಯೂಟರ್ ಟೇಬಲ್ ಕೊಡುಗೆ
Posted On: 04 Oct 2020, 09:11 PM
ಉಚಿತ ಕಂಪ್ಯೂಟರ್ ಟೇಬಲ್ ಕೊಡುಗೆ ದಿನಾಂಕ 04.10.2020 ಇಂದು "ಆಸರೆ" ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಕಟಪಾಡಿಯ ಕಾರುಣ್ಯ ವೃದ್ಧಾಶ್ರಮಕ್ಕೆ ಭೇಟಿನೀಡಿ ಉಚಿತ ಕಂಪ್ಯೂಟರ್ ಟೇಬಲ್ ಅನ್ನು ಕೊಡುಗೆಯಾಗಿ ನೀಡಲಾಯಿತು. "ಆಸರೆ" ತಂಡದ ಅಧ್ಯಕ್ಷರು ಆದ ಡಾ.ಕೀರ್ತಿ ಪಾಲನ್ ಕಂಪ್ಯೂಟರ್ ಟೇಬಲ್ ಅನ್ನು ಹಸ್ತಾಂತರಿಸಿದರು. ಟೇಬಲ್ ಮಾಡಲು ಸಹಕರಿಸಿದ ಅಶೋಕ್ ಆಚಾರ್ಯ ಬಸ್ತಿ, ಹಿರಿಯಡ್ಕ ಹಾಗೂ ಜಗದೀಶ್ ಬಂಟಕಲ್ ಉಪಸ್ಥಿತರಿದ್ದರು.
ಇನ್ನಂಜೆ ರೋಟರಿ ಸಮುದಾಯದಳ ಉದ್ಘಾಟನೆ ಮತ್ತು ಪದಪ್ರಧಾನ ಸಮಾರಂಭ
Posted On: 04 Oct 2020, 01:22 PM
ರೋಟರಿ ಶಂಕರಪುರ ವಲಯ-5 ರೋಟರಿ ಜಿಲ್ಲೆ 3182
ನೂತನ ರೋಟರಿ ಸಮುದಾಯ ದಳ ಇದರ ಉದ್ಘಾಟನಾ ಮತ್ತು ಪದಪ್ರಧಾನ ಸಮಾರಂಭ ಇಂದು ಇನ್ನಂಜೆಯಲ್ಲಿ ನಡೆಯಿತು.
ಇದರ ನೂತನ ಅಧ್ಯಕ್ಷರಾಗಿ Rcc ಪ್ರಶಾಂತ್ ಶೆಟ್ಟಿ ಮಂಡೇಡಿ ಹಾಗೂ ಕಾರ್ಯದರ್ಶಿಯಾಗಿ Rcc ಮನೋಹರ್ ಕಲ್ಲುಗುಡ್ಡೆ ಹಾಗೂ ದಂಡಪಾಣಿಯಾಗಿ Rcc ಗಣೇಶ್ ಆಚಾರ್ಯ ಇನ್ನಂಜೆ ಆಯ್ಕೆಯಾಗಿರುತ್ತಾರೆ.
ಕಾರ್ಯಕ್ರಮದಲ್ಲಿ ಡಿಸ್ಟ್ರಿಕ್ ಗವರ್ನರ್ ನವೀನ್ ಅಮೀನ್ ಶಂಕರಪುರ ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ಮಾತನಾಡಿ ವ್ಯಕ್ತಿತ್ವ ವಿಕಸನಕ್ಕೆ ರೋಟರಿ ಕ್ಲಬ್ ಸಹಾಯ ಮಾಡುತ್ತದೆ ಎಂದರು,
ಸಭಾಪತಿ ರೋಟರಿಯನ್ ಮಾಲಿನಿ ಶೆಟ್ಟಿ ಇನ್ನಂಜೆ ರೋಟರಿ ಕ್ಲಬ್ ನ ಉದ್ದೇಶಗಳನ್ನು ತಿಳಿಸಿದರು. ಡಿಸ್ಟ್ರಿಕ್ ಗವರ್ನರ್ ನಾಗರಾಜ್ ಎಚ್ ಎನ್ ಜನಸೇವೆ ಮಾಡಲು ಇದೊಂದು ಉತ್ತಮ ವೇದಿಕೆಯಾಗಿದೆ ಮತ್ತು ಅವಕಾಶಗಳನ್ನು ತೆರೆದಿಡುತ್ತದೆ, ಉದ್ಯೋಗ ಉನ್ನತಿಗಾಗಿ ರೋಟರಿಯು ಸಹಕರಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ರವಿವರ್ಮ ಶೆಟ್ಟಿ ಇನ್ನಂಜೆ, Rcc ಜಯರಾಮ್ ರೊಡ್ರಿಗಸ್, Rcc ವಿಕ್ಟರ್ ಮಾರ್ಟಿಸ್, Rcc ಸಂದೀಪ್ ಬಂಗೇರ ಶಂಕರಪುರ,Rcc ಹರೀಶ್ ಕುಲಾಲ್, ಕೊಪ್ಪ ಆನಂದ್ ಶೆಟ್ಟಿ, Rcc ಚಂದ್ರ ಪೂಜಾರಿ, ದಿವೇಶ್ ಶೆಟ್ಟಿ ಇನ್ನಂಜೆ, ಗ್ಲಾಡ್ಸನ್ ಕುಂದರ್ ಹಾಗೂ ಮತ್ತಿತರು ಪಾಲ್ಗೊಂಡಿದ್ದರು.
ನಂತರ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಪ್ರಮಾಣ ವಚನ ಸ್ವೀಕರಿಸಿ, ಅಧ್ಯಕ್ಷರು, ಕಾರ್ಯದರ್ಶಿ ಮತ್ತು ದಂಡಪಾಣಿಯವರಿಗೆ ಪದಪ್ರಧಾನ ಮಾಡಲಾಯಿತು.
ಶಂಕರಪುರ ರೋಟರಿ ಗವರ್ನರ್ ವಿಕ್ಟರ್ ಮಾರ್ಟಿಸ್ ಸ್ವಾಗತಿಸಿ, ಕಾರ್ಯದರ್ಶಿ Rcc ಮನೋಹರ್ ಕಲ್ಲುಗುಡ್ಡೆ ಇವರು ಧನ್ಯವಾದಗೈದರು.
ವರದಿ : ವಿಕ್ಕಿ ಪೂಜಾರಿ ಮಡುಂಬು
ಸ್ವಚ್ಛತೆ ಮನೆಯಿಂದಲೇ ಆರಂಭವಾಗಲಿ - ಸ್ವಚ್ಚ ಭಾರತ್ ಫ್ರೆಂಡ್ಸ್ ಸಂಯೋಜಕ
Posted On: 02 Oct 2020, 03:52 PM
ಉಡುಪಿ :- ಸ್ವಚ್ಚತೆ ಎಂಬುದು ನಮ್ಮ ಮನೆಯಿಂದ ಪ್ರಾರಂಭವಾಗಬೇಕು.ಪ್ರತಿ ಪ್ರಜೆಯೂ ಸ್ವಯಂಪ್ರೇರಿತನಾಗಿ ತನ್ನ ಸಮಾಜವನ್ನು ಶುಚಿಯಾಗಿಟ್ಟುಕೊಂಡರೆ ಆಗ ಯಾವುದೋ ಸಂಘ ಸಂಸ್ಥೆಗಳು ಸ್ವಚ್ಛಭಾರತ ಅಭಿಯಾನ ಮಾಡುವ ಅಗತ್ಯವೇ ಇಲ್ಲ ಎಂದು ಸ್ವಚ್ಚ ಭಾರತ್ ಫ್ರೆಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು ಕವಾ೯ಲು ಹೇಳಿದರು. ಅವರು ಕೆಮ್ಮಣ್ಣು ಸಕಾ೯ರಿ ಪ.ಪೂ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಸ್ವಚ್ಚತಾ ಅಭಿಯಾನ ಮತ್ತು ಗಾಂಧಿ ಜಯಂತಿ ಆಚರಣಿ ಕಾಯ೯ಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು. ನಾವು ಬದಲಾದರೆ ಮಾತ್ರ ದೇಶ ಬದಲಾಗುವುದು ಎಂದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ, ನಂದಕಿಶೋರ್, ಶಾಲಾ ಪ್ರಾಂಶುಪಾಲರು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ತೋನ್ಸೆ ಗ್ರಾ.ಪಂ, ಗಣಪತಿ ವ್ಯವಸಾಯ ಸೇವಾ ಸಹಕಾರಿ ಸಂಘ, ನಿಮ೯ಲ ತೋನ್ಸೆ, ಸೌಹಾಧ೯ ಸಮಿತಿ', ಸ್ವಚ್ಚ ಭಾರತ್ ಫ್ರೆಂಡ್ಸ್,ಲಯನ್ಸ್ ರೋಟರಿ ಕ್ಲಬ್, ರಿಕ್ಷಾ ಚಾಲಕರು ಶ್ರೀ.ಕ್ಷೇ.ಧ.ಗ್ರಾ ಯೋಜನೆ,ಪುಟ್ ಬಾಲ್ ಫ್ರೆಂಡ್ಸ್, ಮುಂತಾದವರು ಸಹಕರಿಸಿದರು.
ಇನ್ನಂಜೆ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಂದ ಇನ್ನಂಜೆ ಬಾಲವನದಲ್ಲಿ ಸ್ವಚ್ಛತಾ ಕಾರ್ಯಕ್ರಮ
Posted On: 02 Oct 2020, 03:14 PM
ಇನ್ನಂಜೆ ಗ್ರಾಮ ಪಂಚಾಯತ್ ಪ್ರತಿ ಬಾರಿಯೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದ ಹಾಗುಹೋಗುಗಳಿಗೆ ತನ್ನನ್ನು ತಾನು ತೊಡಗಿಸಿಕೊಂಡು ಮಾದರಿ ಗ್ರಾಮ ಅನಿಸಿಕೊಂಡಿದೆ.
ಇಂದು 151 ನೇ ಗಾಂಧಿ ಜಯಂತಿಯ ಪ್ರಯುಕ್ತ ಇನ್ನಂಜೆ ಬಾಲವನದಲ್ಲಿ ಬೆಳೆದಿದ್ದ ಗಿಡ, ಬಳ್ಳಿ, ಪೊದೆಗಳನ್ನು ಕಡಿಯುವುದರ ಮೂಲಕ ಸ್ವಚ್ಛ ಇನ್ನಂಜೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು.
ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ರಾಜೇಶ್ ಶೆಣೈ, ಮಾಜಿ ಉಪಾಧ್ಯಕ್ಷರಾದ ಮಾಲಿನಿ ಶೆಟ್ಟಿ ಇನ್ನಂಜೆ, ಇನ್ನಂಜೆ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾದ ಶ್ರೀ ಚಂದ್ರಶೇಖರ ಸಾಲಿಯಾನ್. ಇನ್ನಂಜೆ ಯುವಕ ಮಂಡಲದ ಅಧ್ಯಕ್ಷರಾದ ದಿವೇಶ್ ಶೆಟ್ಟಿ ಕಲ್ಯಾಲು, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪ್ರೀತಿ ಶೆಟ್ಟಿ, ಹರೀಶ್, ಸಂದೀಪ್, ವಜ್ರೇಶ್, ಪವಿತ್ರ, ರೋಕೆಶ್, ಗ್ರಾಮಸ್ಥರು ಆದ ಅರುಣ್ ಶೆಟ್ಟಿ, ಗಣೇಶ್ ಆಚಾರ್ಯ, ಚಿಂತನ್ ಉಪಸ್ಥಿತರಿದ್ದರು
ವರದಿ : ವಿಕ್ಕಿ ಪೂಜಾರಿ ಮಡುಂಬು
NAMMA KAUP NEWS
ಮಂಗಳೂರು ಡ್ರಗ್ಸ್ ಪ್ರಕರಣ ಭೇದಿಸುವರೇ ನೂತನ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ?
Posted On: 01 Oct 2020, 06:35 PM
ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರ ತಂಡದಲ್ಲಿದ್ದ ಸಿಸಿಬಿ ಇನ್ಸ್ಪೆಕ್ಟರ್ ಶಿವಪ್ರಕಾಶ ರಾಜೇಂದ್ರ ನಾಯಕ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಕಾಪು ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ಶಿವಪ್ರಕಾಶ್ ಅವರ ಸ್ಥಾನಕ್ಕೆ ನಿಯೋಜಿಸಲಾಗಿದೆ.
ಡ್ರಗ್ಸ್ ಜಾಲವನ್ನು ಬೇಧಿಸಲು ಕಾರ್ಯಾಚರಣೆ ತೀವ್ರಗೊಳಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಲ್ಪಟ್ಟಿರುವ ನೈಜೀರಿಯಾದ ಪ್ರಜೆ ಫ್ರಾಂಕ್ ಎಂಬಾತನ ವಿಚಾರಣೆ ತೀವ್ರಗೊಳಿಸಿದ್ದಾರೆ. ಈತ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ ಸ್ಥಳಗಳಲ್ಲಿ ತಪಾಸಣೆ ನಡೆಸುವ ಜೊತೆಗೆ ಬೆಂಗಳೂರಿನಲ್ಲಿ ಆತನೊಂದಿಗೆ ಸಂಪರ್ಕದಲ್ಲಿದ್ದ ಇತರರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆತ ಸಂಗ್ರಹಿಸಿಟ್ಟುಕೊಂಡಿರಬಹುದಾದ ಮಾದಕ ಪದಾರ್ಥಗಳನ್ನು ಪತ್ತೆಹಚ್ಚುವ ಕಾರ್ಯಾಚರಣೆಗೂ ಪೊಲೀಸರು ಮುಂದಾಗಿದ್ದಾರೆ.
ಬೆಟ್ಟಿಂಗ್, ಸಿನಿಮಾಕ್ಕೂ ಡ್ರಗ್ಸ್ ನಂಟು:
ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳು ಮತ್ತು ಸಿನಿಮಾರಂಗದ ಕೆಲವರಿಗೂ ಮಂಗಳೂರಿನ ಡ್ರಗ್ಸ್ ಪ್ರಕರಣದೊಂದಿಗೆ ನಂಟಿದೆ. ಬಂಧಿಸಲ್ಪಟ್ಟಿರುವವರು ಡ್ರಗ್ಸ್ ಪಾರ್ಟಿ ನಡೆಸಿರುವುದು ಅದರಲ್ಲಿ ಕೆಲವು ಮಂದಿ ಬುಕ್ಕಿಗಳು ಮುಂಬೈ, ಬೆಂಗಳೂರಿನ ಸಿನಿಮಾ ಕ್ಷೇತ್ರದವರು ಕೂಡ ಪಾಲ್ಗೊಂಡಿರುವ ಬಗ್ಗೆ ಪೊಲೀಸರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇರಳದಿಂದ ಗಾಂಜಾ ಪೂರೈಕೆ
ಒಂದೆಡೆ ಸಿಂತೆಟ್ ಡ್ರಗ್ಸ್ ಗಳ ಪೂರೈಕೆ ಜಾಲದ ಹಿಂದೆ ಸಿಸಿಬಿ ಎಕನಾಮಿಕ್ ಎಂ ನಾರ್ಕೊಟಿಕ್ ಪೊಲೀಸರು ಬೆನ್ನು ಬಿದ್ದಿದ್ದು ಇನ್ನೊಂದೆಡೆ ಪೊಲೀಸರು ಹಾಗೂ ಅಬಕಾರಿ ಇಲಾಖೆಯವರು ಗಾಂಜಾ, ಚರಸ್ ಮೊದಲಾದ ಮಾದಕ ವಸ್ತುಗಳ ಮೇಲೆ ಕಣ್ಣಿಟ್ಟಿದ್ದಾರೆ. ಮಂಗಳೂರಿಗೆ ಕೇರಳ ಶಿವಮೊಗ್ಗ ಮೊದಲಾದೆಡೆಗಳಿಂದ ಭಾರೀ ಪ್ರಮಾಣದಲ್ಲಿ ಸಾಗಾಟವಾಗುತ್ತಿದೆ ಎನ್ನಲಾಗಿದ್ದು ಪ್ರಮುಖ ಪೆಡ್ಲರ್ಗಳೊಂದಿಗೆ ಸಂಪರ್ಕ ಹೊಂದಿರುವವರ ಮಾಹಿತಿ ಕಲೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಕುಡಿಯುವ ನೀರು ಪೋಲು ಕೇಳುವವರು ಯಾರು ಇಲ್ಲವೇ ?
Posted On: 30 Sep 2020, 09:55 PM
ಹಿರಿಯಡಕ -ಉಡುಪಿ ಮುಖ್ಯ ರಸ್ತೆಯಲ್ಲಿ (ಅಂಜಾರು ಕ್ರಾಸ್) ಸ್ಯಾಬ್ ಒಡೆದು ಕಳೆದ 10 ದಿನದಿಂದ ನಿರಂತರವಾಗಿ ಕುಡಿಯುವ ನೀರು ಚರಂಡಿ ಸೇರುತ್ತಿದೆ. ಸ್ಥಳೀಯರ ಪ್ರಕಾರ ದಿನಕ್ಕೆ ಅಂದಾಜು ಹತ್ತು ಸಾವಿರ ಲೀಟರ್ ನೀರು ಚರಂಡಿಗೆ ಹೋಗುತ್ತಿದೆ.ಈ ರಸ್ತೆಯ ಪಕ್ಕದಲ್ಲಿ ನಿರಂತರವಾಗಿ ನೀರು ಹರಿಯುತ್ತಿರುದರಿಂದ ಕೆಸರು ಉಂಟಾಗಿ ರಸ್ತೆಯಲ್ಲಿ ನಡೆದಾಡುವ ಪಾದಚಾರಿಗಳಿಗೂ ತೊಂದರೆಯಾಗಿದೆ.
ಈ ಬಾರಿ ಮಳೆ ಬಂದ ಕಾರಣ ನೀರಿನ ಸಮಸ್ಯೆ ಉಂಟಾಗಲಾರದು ಆದರೆ ಈ ರೀತಿಯಲ್ಲಿ ಶುದ್ದ ನೀರು ಪೋಲಾಗುತ್ತಿರುದನ್ನು ನೋಡಿಯೂ ಗಮನ ಹರಿಸದ ಗ್ರಾಮ ಪಂಚಾಯತ್ ನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಅತೀ ಶೀಘ್ರದಲ್ಲಿ ನೀರಿನ ಸ್ಲಾಬ್ ದುರಸ್ತಿಗೊಳಿಸಿ ಕುಡಿಯುವ ನೀರು ಹಾಳಾಗದಂತೆ ಮಾಡಬೇಕಾಗಿದೆ.
ವರದಿ : ರಾಘವೇಂದ್ರ ಪ್ರಭು ಕರ್ವಾಲು
ನಮ್ಮ ಕಾಪು ನ್ಯೂಸ್
ಅಕ್ಟೋಬರ್ 19ರವರೆಗೆ 20% ರಿಯಾಯಿತಿ ದರದಲ್ಲಿ ಮೂಡುಬಿದ್ರಿಯ ತೆನಸ್ ರೆಸ್ಟೋರೆಂಟ್
Posted On: 30 Sep 2020, 01:36 PM
ಪಿಜ್ಜಾಪ್ರಿಯರಿಗೆ ಶುಭಸುದ್ದಿ.ಮೂಡಬಿದ್ರೆ ಪರಿಸರದ ಜನತೆ ಇನ್ನುಮುಂದೆ ಸುಪೀರಿಯರ್ ಕ್ವಾಲಿಟಿ ಯ ಪ್ಯಾನ್ ಪಿಜ್ಜಾದ ರುಚಿ ಸವಿಯಲು ದೂರದ ಮಂಗಳೂರಿಗೋ ಇಲ್ಲ ಬೇರಾವುದೋ ಊರಿಗೆ ಹೋಗಬೇಕಾಗಿಲ್ಲ.ಗ್ರಾಹಕರ ಅಗತ್ಯತೆಗಳನ್ನು ಗಮನದಲ್ಲಿ ಇಟ್ಟುಕೊಂಡು , ಕೈಗೆಟುಕುವ ದರದಲ್ಲಿ ಉತ್ಕೃಷ್ಟ ಗುಣಮಟ್ಟದ ಸೇವೆಯನ್ನು ಒದಗಿಸುವ ಉದ್ದೇಶದೊಂದಿಗೆ ಮೂಡುಬಿದಿರೆ ನಗರದ ಹೃದಯಭಾಗದಲ್ಲಿರುವ ಸಿಟಿ ಪಾಯಿಂಟ್ ಕಾಂಪ್ಲೆಕ್ಸ್(ಬದ್ರಿಯಾ ಜುಮ್ಮಾ ಮಸೀದಿ ಬಳಿ) ನಲ್ಲಿ ನೂತನ ಪಿಜ್ಜಾ ರೆಸ್ಟೋರೆಂಟ್ ‘ತೆನಸ್’ ಶುಭಾರಂಭಗೊಂಡಿದೆ.
ಸ್ವಚ್ಛತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಗ್ರಾಹಕರಿಗೆ 100% ಪ್ಯಾನ್ ಪಿಜ್ಜಾ ಒದಗಿಸುವುದು ಮತ್ತು ಪಿಜ್ಜಾ ಡೊ, ಸಾಸ್ ಇತ್ಯಾದಿಗಳನ್ನು ದಿನಂಪ್ರತಿ ತಾಜಾವಾಗಿ ರೆಸ್ಟೋರೆಂಟ್ ನ ಕಿಚನ್ ನಲ್ಲಿಯೇ ತಯಾರಿಸುವುದು ಇಲ್ಲಿನ ವಿಶೇಷ.
ರುಚಿರುಚಿಯಾದ ಪಿಜ್ಜಾದೊಂದಿಗೆ ಬರ್ಗರ್, ಪಾಸ್ತಾ, ಮೊಮೋಸ್, ಐಸ್ ಕ್ರೀಮ್ , ಜ್ಯೂಸ್ ಸೇರಿದಂತೆ ವಿವಿಧ ವೈರೈಟಿಯ ರುಚಿಕರ ಆಹಾರತಿನಿಸುಗಳು ರೆಸ್ಟೋರೆಂಟ್ ನಲ್ಲಿ ಲಭ್ಯವಿದೆ.
ಗೆಳೆಯರ ಜೊತೆ ಇಲ್ಲ ಫ್ಯಾಮಿಲಿ ಜೊತೆ ಬಂದು ರೆಸ್ಟೋರೆಂಟ್ ನಲ್ಲೆ ಕುಳಿತು, ಹರಟೆಯೊಡೆಯುತ್ತ ‘ತೆನಸ್’ ನ ಫ್ರೆಶ್ ಅಂಡ್ ಹಾಟ್ ಫುಡ್ ಸವಿಯಬೇಕೆನ್ನುವರಿಗೆ ಆರಾಮದಾಯಕ ಆಸನದ ವ್ಯವಸ್ಥೆಇದೆ ಮಾತ್ರವಲ್ಲ ವಾಹನದ ಪಾರ್ಕಿಂಗ್ ವ್ಯವಸ್ಥೆ ಕೂಡ ಇದೆ.
ಉದ್ಘಾಟನಾ ಕೊಡುಗೆಯಾಗಿ ಆಹಾರ ತಿನಿಸುಗಳ ಬಿಲ್ ಮೇಲೆ ಅಕ್ಟೋಬರ್ 19 ರವರೆಗೆ ಶೇ.20ರ ನೇರ ರಿಯಾಯಿತಿ ಕೂಡ ಲಭ್ಯ ಎಂಬುದಾಗಿ ರೆಸ್ಟೋರೆಂಟ್ ಮಾಲಕರು ತಿಳಿಸಿದ್ದಾರೆ. ಇನ್ನು, ಮನೆಯಿಂದಲೇ ಆರ್ಡರ್ ಮಾಡುವಿರಾದರೆ 3 ಕಿ.ಮೀ ವ್ಯಾಪ್ತಿಯಲ್ಲಿ ಉಚಿತ ಹೋಂ ಡೆಲಿವಿರಿ ವ್ಯವಸ್ಥೆ ರೆಸ್ಟೋರೆಂಟ್ ಕಡೆಯಿಂದ ದೊರಕುತ್ತದೆ.
‘ತೆನಸ್’ ರುಚಿಕರ, ತಾಜಾ, ವೈರೈಟಿ ತಿನಿಸುಗಳು ಮಾತ್ರವಲ್ಲದೇ ತಮ್ಮ ರೆಸ್ಟೋರೆಂಟ್ ನ ಬೋರ್ಡ್, ಸ್ಟಿಕ್ಕರ್ಸ್, ವಿಸಿಟಿಂಗ್ ಕಾರ್ಡ್ ನಲ್ಲಿ ತುಳುಲಿಪಿ ಬಳಸುವ ಮೂಲಕ ಗಮನಸೆಳೆದಿದೆ.ಈ ಮೂಲಕ ನಾವು ತುಳುವಿನ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ್ದೇವೆ ಎನ್ನುತ್ತಾರೆ ರೆಸ್ಟೋರೆಂಟ್ ಮಾಲಕರು.
Source: News Bhandara/ನ್ಯೂಸ್ ಭಂಡಾರ
ಕುಂಜೂರಿನಲ್ಲಿ ತುಳು ಬರೆಕ ಅಭಿಯಾನ, ತುಳು ಲಿಪಿ ಫಲಕ ಅಳವಡಿಕೆಗೆ ಚಾಲನೆ
Posted On: 30 Sep 2020, 11:49 AM
ಕಾಪು : ತುಳು ಭಾಷೆ - ಸಂಸ್ಕೃತಿಯ ಮೂಲ ಮೌಲ್ಯವನ್ನು ತಿಳಿಯುವ ಉದ್ದೇಶದಿಂದ 'ತುಳು ಲಿಪಿ' ಕಲಿಯಬೇಕು. ಜನರಿಗೆ ಕಲಿಸಬೇಕು, ತುಳುಲಿಪಿಯಲ್ಲಿ ಬರೆಯಲಾದ ಸಾಹಿತ್ಯವನ್ನು ಓದಬೇಕು ಎಂಬ ಉದ್ದೇಶಗಳಿಂದ ತುಳುವಾಸ್ ಕೌನ್ಸಿಲ್ ಆಯೋಜಿಸಿರುವ "ತುಳು ಬರೆಕ" ಅಭಿಯಾನಕ್ಕೆ ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಚಾಲನೆ ನೀಡಲಾಯಿತು.
"ತುಳು ಬರೆಕ" ಅಭಿಯಾನದ ಅಂಗವಾಗಿ ಕುಂಜೂರು ಶ್ರೀ ದುರ್ಗಾದೇವಸ್ಥಾನದ "ನಾಮ ಫಲಕ"ವನ್ನು ತುಳು ಲಿಪಿಯಲ್ಲಿ ಬರೆಯಿಸಿ ಅಳವಡಿಸಲಾಯಿತು .
ಪವಿತ್ರಪಾಣಿ ಕೆ. ಎಲ್. ಕುಂಡಂತಾಯ ಮಾತನಾಡಿ, ತುಳು ಬರೆಯುವ ಅಭಿಯಾನದ ಮೊದಲ ಹೆಜ್ಜೆಯಾಗಿ ಕುಂಜೂರಿನ ಯುವಕರು ಕುಂಜೂರು ದೇಗುಲದ ನಾಮಫಲಕವನ್ನು ತುಳುವಿನಲ್ಲೇ ಬರೆಯಿಸಿ ಮಾತೃ ಭಾಷೆಯನ್ನು ಗೌರವಿಸಿದ್ದಾರೆ. ತುಳುವಾಸ್ ಕೌನ್ಸಿಲ್ ಸಂಘಟನೆಯ ಪ್ರಯತ್ನ ಮಾದರಿಯಾಗಿದೆ ಎಂದರು.
ತುಳುವಾಸ್ ಕೌನ್ಸಿಲ್ ನಿರ್ದೇಶಕ ಅವಿನಾಶ್ ಶೆಟ್ಟಿ ಕುಂಜೂರು ಮಾತನಾಡಿ, ತುಳು ಬರೆಕ ಅಭಿಯಾನದ ಅಂಗವಾಗಿ ಕುಂಜೂರು ಶ್ರೀ ದುರ್ಗಾ ದೇವಸ್ಥಾನದ "ನಾಮ ಫಲಕ"ವನ್ನು ತುಳು ಲಿಪಿಯಲ್ಲಿ ಬರೆಯಿಸಿ ಅಳವಡಿಸಲಾಗಿದ್ದು, ಅಭಿಯಾನದ ಮೂಲಕ ಪ್ರತೀ ಮನೆ ಮನೆಗೂ ತುಳು ನಾಮ ಫಲಕ ಅಳವಡಿಸಲು ಯೋಚಿಸಲಾಗಿದೆ ಎಂದರು.
ಶ್ರೀ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ದೇವರಾಜ ರಾವ್ ನಡಿಮನೆ, ಆಡಳಿತ ಮಂಡಳಿ ಸದಸ್ಯ ಶ್ರೀವತ್ಸ ರಾವ್, ಅರ್ಚಕ ವೇ.ಮೂ. ಚಕ್ರಪಾಣಿ ಉಡುಪ, ಪ್ರಬಂಧಕ ರಾಘವೇಂದ್ರ ಶೆಟ್ಟಿ, ಶ್ರೀ ದುರ್ಗಾ ಮಿತ್ರವೃಂದದ ಅಧ್ಯಕ್ಷ ಚಂದ್ರಹಾಸ ಆಚಾರ್ಯ, ವಿಶ್ವನಾಥ ಉಡುಪ, ಸುಬ್ರಹ್ಮಣ್ಯ ಭಟ್, ಶ್ರೀಧರ ಮಂಜಿತ್ತಾಯ, ಅನಂತರಾಮ ರಾವ್, ರಘುಪತಿ ಉಡುಪ, ರಾಕೇಶ್ ಕುಂಜೂರು, ಪುಷ್ಪರಾಜ ಶೆಟ್ಟಿ, ಭಾರ್ಗವ ಕುಂಡಂತಾಯ, ಕೌಶಿಕ್ ಉಡುಪ ಮೊದಲಾದವರು ಉಪಸ್ಥಿತರಿದ್ದರು.
