Updated News From Kaup
ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಕರ್ನಾಟಕಕ್ಕೆ ಆಂಧ್ರಪ್ರದೇಶ ಮಾದರಿಯಾಗಲಿ
Posted On: 15 Sep 2020, 06:06 PM
ಇಚ್ಚಾಶಕ್ತಿಯ ರಾಜಕೀಯ ನಿಲುವುಗಳಲ್ಲಿ ಮಾತ್ರ ಇಂತಹದ್ದು ಸಾಧ್ಯ. ವೈ.ಎಸ್.ಜಗನ್ಮೋಹನ್ ರೆಡ್ಡಿ ಯವರನ್ನು ಅಭಿನಂದಿಸೋಣ. ಈ ದೇಶದಲ್ಲಿಯೆ ಅವಿಸ್ಮರಣೀಯವಾಗುಳಿಯುವಂತೆ ಕಳೆದ ಸಾಲಿನಲ್ಲಿ ಐವತ್ತು ಸಾವಿರದಷ್ಟು ಸಮಸ್ತ ಸಮಾಜಬಾಂಧವರು ಏಕ ಉದ್ದೇಶದಿಂದ ಒಗ್ಗೂಡಿ "ಬಿಲ್ಲವ ಮಹಾ ಸಮಾವೇಶ" ದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಎನ್ನುವ ಪರಿಕಲ್ಪನೆಯ ಮನವಿಯನ್ನು ಪ್ರಪ್ರಥಮ ಬಾರಿ ನೀಡಲಾಗಿತ್ತು.ಈವರೆಗೆ ಬೇರೆ ಬೇರೆ ಸಮಾಜಕ್ಕೆ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಲಾಗಿದೆ.ಇದಕ್ಕೆ ವಿರೋಧವಲ್ಲ ಮತ್ತು ಸಂತಸವೆ.ಆದರೆ ಈ ಸಮಾವೇಶದ ಪ್ರಭಾವದಿಂದಾಗಿ ಆಂಧ್ರಪ್ರದೇಶ ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡಿರುವುದನ್ನು ಮೆಚ್ಚುವಂತದ್ದು. ಹಿಂದುಳಿದ ಸಮುದಾಯವಾಗಿ ರಾಜ್ಯಾದ್ಯಂತ ಬಹಳ ದೊಡ್ಡ ಸಂಖ್ಯೆಯಲ್ಲಿದ್ದು ರಾಜಕೀಯ ನಿರ್ಣಾಯಕರಾಗಿರುವ ನಾವು ಪ್ರತಿ ಭಾರಿಯೂ ಮನವಿ ಮತ್ತು ಆಶ್ವಾಸನೆಗಷ್ಟೆ ಸೀಮಿತರಾಗುತ್ತಿದ್ದೇವೆ. ಸಂಘಟನಾತ್ಮಕ ಭೇದ ಭಾವಗಳನ್ನು ಮರೆತು ಸಮಾಜಕ್ಕೋಸ್ಕರ ನೀಡಿರುವ ಮನವಿಯನ್ನು ಪಕ್ಷಭೇದವಿಲ್ಲದೆ ಸರ್ಕಾರಗಳು ಪರಿಗಣಿಸುವುದು ಅತ್ಯಂತ ಅಗತ್ಯ. ಇನ್ನಾದರೂ ಬೃಹತ್ ಬಿಲ್ಲವ ಸಮುದಾಯಕ್ಕಾಗುತ್ತಿರುವ ಅನ್ಯಾಯ ,ಅವಮಾನವನ್ನು ಖಂಡಿಸುತ್ತಾ ಕರ್ನಾಟಕ ಘನ ಸರ್ಕಾರವು ಪಕ್ಷಾತೀತವಾಗಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ದಿಟ್ಟ ಕ್ರಮ ಕೈಗೊಳ್ಳುವಂತಾಗಲಿ. ಪ್ರವೀಣ್ ಪೂಜಾರಿ, ಜಿಲ್ಲಾಧ್ಯಕ್ಷರು, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ.)ಉಡುಪಿ
ಉಡುಪಿಯಲ್ಲಿ ಹೀಗೊಂದು ಮಾದರಿ ಕಾಯ೯ ಸಾವ೯ಜನಿಕರ ಮೆಚ್ಚುಗೆ
Posted On: 14 Sep 2020, 09:17 PM
ಉಡುಪಿ: -ಹೋಮ್ ಡಾಕ್ಟರ್ ಫೌಂಡೇಶನ್ ಇದರ ವತಿಯಿಂದ ಯಂತ್ರದೊಂದಿಗೆ ಕೆಲಸ ಮಾಡುವ ಸಂದಭ೯ ಒಂದು ಕೈಯನ್ನು ಕಳೆದುಕೊಂಡು ಕಳೆದ 10 ವಷ೯ಗಳಿಂದ ಕಷ್ಟಪಡುತ್ತಿದ್ದ ಪೇತ್ರಿ ನಟರಾಜ ರವರಿಗೆ ಬ್ಯಾಟರಿ ಸೆನ್ಸಾರ್ ಒಪೆರಾಟೆಡ್ ಕೃತಕ ಕೈ ಅಳವಡಿಸಿ ಅವರ ಜೀವನಕ್ಕೆ ಆಧಾರವಾಗುವ ಪ್ರಾಮುಖ್ಯವಾದ ಕಾಯ೯ವನ್ನು ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.ಸುಮಾರು 2 ಲಕ್ಷ ರೂ ಮೌಲ್ಯದ ಈ ಕೃತಕ ಕೈಜೋಡಣೆಗೆ ಅಜು೯ನ್ ಭಂಡಾರ್ಕಾರ್ ನೇತೃತ್ವದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಅದೇ ರೀತಿ ರೋಶನ್ ಬೆಲ್ಮನ್ ನೇತೃತ್ವದ ಹ್ಯುಮಾನಿಟಿ ಟ್ರಸ್ಟ್ ರವರ ಸಹಕಾರದೊಂದಿಗೆ ಅದೇ ರೀತಿ ದಾನಿಗಳ ಸಹಕಾರದಲ್ಲಿ ಈ ಕಾಯ೯ ನೆರವೇರಿದೆ. ಇದರಿಂದ ಈ ಬಡ ಕುಟುಂಬದ ನಟರಾಜ್ ರವರು ಸ್ವತಂತ್ರವಾಗಿ ಬದುಕಲು ಸಾಧ್ಯವಾಗಿದೆ. ಸೆ.13ರಂದು ಅವರ ಮನೆಗೆ ತೆರಳಿ ಈ ಕೈ ಜೋಡಣೆ ಕಾಯ೯ಕ್ರಮದಲ್ಲಿ ಡಾII ಶಶಿಕಿರಣ್ ಶೆಟ್ಟಿ, ಡಾ|| ಸುಮಾ ಶೆಟ್ಟಿ, ರಾಘವೇಂದ್ರ ಪೂಜಾರಿ, ಬಂಗಾರಪ್ಪ, ಸುಜಯ ಶೆಟ್ಟಿ, ಅನುಷಾ, ಮುಂತಾದವರಿದ್ದರು Namma Kaup
ಮಹಾಯೋಗಿ ಚಾಪಮ್ಮ ದೇವಿಯ ಕೈಯಲ್ಲಿ ಬಿಡುಗಡೆಯಾಗಲಿದೆ ಕರಾವಳಿಯ ಆದ್ಯಾತ್ಮ App
Posted On: 14 Sep 2020, 11:10 AM
ಉಡುಪಿ: ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿಬಾಬಾ ಮಂದಿರ ಧರ್ಮದರ್ಶಿ ಗುರೂಜೀ ಸಾಯಿ ಈಶ್ವರ್ ಇವರು ಆಧ್ಯಾತ್ಮಿಕ ಸಾಧಕರಿಗಾಗಿ ಮಾಡಿದ ಕರಾವಳಿಯ ಪ್ರಥಮ ಆಧ್ಯಾತ್ಮಿಕ Android Mobile App ಅನ್ನು ಮಹಾಯೋಗಿ ಶ್ರೀ ಶ್ರೀ ಚಾಪ್ಪಮ್ಮ ದೇವಿಯವರ ದಿವ್ಯ ಹಸ್ತದಿಂದ ಲೋಕಾರ್ಪಣೆಗೊಳ್ಳಲಿದೆ. ಸೆಪ್ಟಂಬರ್ 16 ರಂದು ರಾಯಚೂರಿನ ಸಿಂಧನೂರಿನ ಕಲ್ಮಂಗಿಯಲ್ಲಿರುವ "ಅಮ್ಮನವರ ಕುಟೀರ" ಇಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿಬಾಬಾ ಮಂದಿರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಗುರೂಜಿ ಸಾಯಿಈಶ್ವರ್ ಸದಾ ಅಸಹಾಯಕರ ಪರವಾಗಿ ಶ್ರಮಿಸುವವರು ಶ್ರೀ ಸಾಯಿ ಬಾಬಾರ ಪರಮಭಕ್ತರು, ಆರಾಧಕರು. ನೊಂದವರಿಗೆ ಸಾಂತ್ವಾನ ನುಡಿಯುವವರು. ಹಸಿದವರಿಗೆ ತುತ್ತು ಅನ್ನ ನೀಡಿದವರು. ಜಿಜ್ಞಾಸುಗಳಿಗೆ ಆಧ್ಯಾತ್ಮದ ಬೆಳಕು ಚೆಲ್ಲಿದವರು. ಆಧ್ಯಾತ್ಮ ವಲಯದಲ್ಲಿ ಇವರು ಮಾದರಿ ಆಧ್ಯಾತ್ಮ ಪರಿಚಾರಕರು. ಈಗಾಗಲೇ ಲಾಕ್ ಡೌನ್ ಸಮಯದಲ್ಲಿ ಆನ್ಲೈನ್ ಮೂಲಕ ಮಕ್ಕಳಿಗೆ "ನನ್ನ ಮನೆ ನನ್ನ ಗುರುಕುಲ" ಎಂಬ ಕಾರ್ಯಕ್ರಮ ಮಾಡಿ ಯಶಸ್ವಿಯಾಗಿರುವಂತೆ ನಂತರ ಆನ್ಲೈನ್ ಮೂಲಕ "ಆತ್ಮ ಶುದ್ಧಿ ಕ್ರಿಯಾ ಧ್ಯಾನ" ಮಾಡಿದ್ದು ಇದರಲ್ಲಿ ಐದುನೂರಕ್ಕೂ ಹೆಚ್ಚು ಜನರು ಭಾಗವಹಿಸಿರುವರು, ನಂತರ "ಪಾಕೆಟ್ ಪೆಂಡುಲಂ" ತರಬೇತಿ ಶಿಬಿರವನ್ನು ಆನ್ಲೈನ್ ಮೂಲಕ ಎರಡು ಅವದಿಯಲ್ಲಿ ಮಾಡಿದ್ದು ಎಲ್ಲವೂ ಯಶಸ್ವಿಯಾಗಿರುತ್ತದೆ ಇದೀಗ ಲೋಕಾರ್ಪಣೆ ಮಾಡಲಾಗುವ Android App ನಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಲು ಬೇಕಾಗುವ ವ್ಯವಸ್ಥೆಯೂ ಇರುತ್ತದೆ. ಈ ಆಫ್ ಮೂಲಕ ಭೌತಿಕ, ಐಶ್ವರ್ಯ, ಆರೋಗ್ಯ, ಶಾಂತಿ, ಧ್ಯಾನ, ಯೋಗ, ಸಾಂತ್ವನ ಮತ್ತು ಆಧ್ಯಾತ್ಮಿಕ ಮಾಹಿತಿಗಳ ಕಣಜವೇ ಆಧ್ಯಾತ್ಮಿಕ ಸಾಧಕರಿಗೆ ಸಿಗಲಿದೆ
ಪ್ರತಿ ಗ್ರಾಮದಲ್ಲಿ ಗೋಶಾಲೆ ಪ್ರಾರಂಭವಾಗಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಂದ ಕರೆ
Posted On: 14 Sep 2020, 08:54 AM
ಉಡುಪಿ :- ಹಿಂದೆ ಪ್ರತಿ ಮನೆಯಲ್ಲಿಯೂ ಗೋವುಗಳಿದ್ದವು. ಆದರೆ ಯಂತ್ರಾಧಾರಿತ ಕೃಷಿ ಎಲ್ಲೆಡೆ ವ್ಯಾಪಿಸಿದ ಬಳಿಕ ಮನೆಯಲ್ಲಿ ಗೋವುಗಳ ಸಂಖ್ಯೆಯೂ ಕಡಿಮೆಯಾಗಿದೆ. ಗೋವುಗಳು ನಮ್ಮ ಜೀವನದ ಅವಿಭಾಜ್ಯ ಅಂಗ. ನಮ್ಮ ಸನಾತನ ಸಂಸ್ಕೃತಿಯ ಪ್ರತೀಕವಾಗಿರುವ ಗೋವುಗಳಿಗಾಗಿಯೇ ಇರುವಂತಹ ಗೋಮಾಳಗಳನ್ನು ಅನ್ಯ ಕಾರ್ಯಕ್ಕಾಗಿ ನೀಡದೆ ಅದನ್ನು ಗ್ರಾಮಗಳಲ್ಲಿ ಉಳಿಸುವ ಮೂಲಕ ಪ್ರತಿ ಗ್ರಾಮಗಳಲ್ಲಿಯೂ ಗೋಶಾಲೆಯನ್ನು ನಿರ್ಮಿಸಿ ಗ್ರಾಮಗಳ ನಿಜವಾದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು ಎಂದು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕರೆ ನೀಡಿದರು. ನೀಲಾವರ ಗೋಶಾಲೆಯಲ್ಲಿ ಸೆ.13ರಂದು ಗೋವಿಗಾಗಿ ಮೇವು ಅಭಿಯಾನದ ಬಗ್ಗೆ ವಿಸ್ತ್ರತವಾಗಿ ಮಾತನಾಡುತ್ತಾ ಗೋವುಗಳ ಅಗತ್ಯತೆಯ ಬಗ್ಗೆ ಶ್ರೀಪಾದರು ಬೆಳಕನ್ನು ಚೆಲ್ಲಿದರು. ಯುವಕ ಮಂಡಲ ಮತ್ತು ಇತರ ಸಂಘಟನೆಗಳ ಮಾಧ್ಯಮದಿಂದ ಯುವಕರು ಮುಂದೆ ಬರುವ ಮೂಲಕ ಗೋವಿಗಾಗಿ ಮೇವು ಅಭಿಯಾನವನ್ನು ಇನ್ನಷ್ಟು ಬಲಪಡಿಸಬೇಕು. ಕೋವಿಡ್ ಸಂದರ್ಭದಲ್ಲಿ ಗೋಶಾಲೆಗಳಿಗೆ ಆರ್ಥಿಕ ಸಹಾಯವು ಬರುವುದು ವಿರಳವಾಗುತ್ತಿರುವ ಸಂದರ್ಭದಲ್ಲಿ ಹಸಿ ಹುಲ್ಲನ್ನು ನೀಲಾವರ ಗೋಶಾಲೆಗೆ ನೀಡಲು ಹಲವಾರು ಸಂಘ ಸಂಸ್ಥೆಗಳು ಮುಂದೆ ಬಂದಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ. ಹಿಂದೆ ಗೋಗ್ರಾಸ ನೀಡಿ ಮತ್ತೆ ನಾವು ಆಹಾರ ಸ್ವೀಕರಿಸುವ ಪದ್ಧತಿಯಿತ್ತು. ಆದರೆ ಇಂದು ಯಂತ್ರಾಧಾರಿತ ಬದುಕು ಆ ಪದ್ಧತಿಯನ್ನು ಕೈಬಿಡುವಂತೆ ಮಾಡಿದೆ. ಆದರೆ ಊಟ ಮಾಡುವ ಮೊದಲು ಗೋಗ್ರಾಸಕ್ಕಾಗಿ ಕಿಂಚಿತ್ ಧನವನ್ನು ಪ್ರತಿದಿನ ತೆಗೆದಿಟ್ಟು ಬಳಿಕ ಅದನ್ನು ಸ್ಥಳೀಯ ಗೋಶಾಲೆಗೆ ನೀಡಿದರೆ ಗೋವುಗಳ ಪಾಲನೆಗೆ ದೊಡ್ಡ ಮಟ್ಟಿನ ಸಹಕಾರವನ್ನು ನೀಡಿದಂತೆ ಆಗುತ್ತದೆ ಎಂದರು. ಮಳೆಗಾಲದ ಬಳಿಕ ಒಣ ಹುಲ್ಲನ್ನು ಕೂಡ ನೀಡಲು ಸಂಘ ಸಂಸ್ಥೆಗಳು ಮುಂದೆ ಬರಬೇಕು ಎಂದು ಕರೆ ನೀಡಿದ ಪೇಜಾವರ ಶ್ರೀಗಳು, ಗೋವಿನ ಆಹಾರವನ್ನು ವ್ಯರ್ಥಮಾಡಬಾರದು. ಕೃಷಿ ಭೂಮಿಯಲ್ಲಿ ಕೃಷಿ ಚಟುವಟಿಕೆಯ ಬಳಿಕ ಒಣ ಹುಲ್ಲನ್ನು ಗೋವುಗಳಿಗಾಗಿ ಗೋಶಾಲೆಗಳಿಗೆ ಒದಗಿಸಿದರೆ ಅದೊಂದು ಪುಣ್ಯದ ಕಾರ್ಯ ಎಂದರು. ಗೋವಿಗಾಗಿ ಮೇವು ಅಭಿಯಾನದ ಸಂಚಾಲಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮಾತನಾಡುತ್ತಾ, ಆಗಸ್ಟ್ 1 ರಂದು ಮಂದರ್ತಿಯ ಕಾಮಧೇನು ಗೋಸೇವಾ ಸಮಿತಿಯ ವತಿಯಿಂದ ಆರಂಭಿಸಿದ ಗೋವಿಗಾಗಿ ಮೇವು ಅಭಿಯಾನವನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಮರ್ಪಕ ರೀತಿಯಲ್ಲಿ ಬಿತ್ತರಿಸಿದ ಪರಿಣಾಮದಿಂದ ಅದರಿಂದ ಪ್ರೇರಣೆ ಪಡೆದ ಯುವಜನರು ಆಗಸ್ಟ್ ತಿಂಗಳಿನಿಂದ ಇಲ್ಲಿಯವರೆಗೆ ಸುಮಾರು 250 ಸಂಘಟನೆಗಳು ಮುಂದೆ ಬಂದು ನೀಲಾವರ ಗೋಶಾಲೆಗೆ ಹಸಿ ಹುಲ್ಲನ್ನು ನೀಡುವ ಮೂಲಕ ಗೋಸೇವೆಗಾಗಿ ವಿಶೇಷ ರೀತಿಯಲ್ಲಿ ಸಹಕಾರವನ್ನು ನೀಡಿವೆ ಎಂದರು. ಖ್ಯಾತ ವೈದ್ಯರಾದ ಡಾ. ವಿಜಯ್ ನೆಗಳೂರು ಹಾಗೂ ಡಾ. ಚಿತ್ರ ನೆಗಳೂರು ಒಂದು ಟೆಂಪೋ ಹಸಿ ಹುಲ್ಲನ್ನು ನೀಡಿದರು. ಈ ಸಂದರ್ಭದಲ್ಲಿ ಉಪನ್ಯಾಸಕ ಗಣೇಶ್ ಪ್ರಸಾದ್ ಜಿ. ನಾಯಕ್, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು.
ಇಂಡಿಯನ್ ಹ್ಯೂಮಾನಿಟೇರಿಯನ್ ಆಫ್ ದ ಇಯರ್ ಪ್ರಶಸ್ತಿ ಪ್ರಧಾನ
Posted On: 13 Sep 2020, 11:48 PM
ಉಡುಪಿ :- ಇಂಡಿಯನ್ ಬುಕ್ ಆಫ್ ರೆಕಾಡ್೯ ಸಂಸ್ಥೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ "ಇಂಡಿಯನ್ ಹ್ಯೂಮಾನಿಟೇರಿಯನ್ ಆಫ್ ದ ಇಯರ್" ಪ್ರಶಸ್ತಿ ಗೆ ಯುವ ಲೇಖಕ ರಾಘವೇಂದ್ರ ಪ್ರಭು, ಕವಾ೯ಲು ರವರು ಆಯ್ಕೆಯಾಗಿದ್ದು ಅದನ್ನು ಸೆ.13 ರಂದು ನೀಲಾವರ ಗೋಶಾಲೆಯಲ್ಲಿ ಅಯೋಧ್ಯೆ ರಾಮ ಕ್ಷೇತ್ರದ ಟ್ರಸ್ಟಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀಥ೯ ಶ್ರೀಪಾದರು ಪ್ರಧಾನ ಮಾಡಿದರು. ಕೋವಿಡ್ 19 ಸಂದಭ೯ದಲ್ಲಿ ನಡೆಸುತ್ತಿರುವ ವಿವಿಧ ಸಮಾಜ ಮುಖಿ ಕಾಯ೯ಗಳಿಗೆ ಈ ಪುರಸ್ಕಾರ ನೀಡಲಾಗುತ್ತದೆ. ಈ ಸಂದಭ೯ದಲ್ಲಿ ಉಪನ್ಯಾಸಕ ಗಣೀಶ್ ಪ್ರಸಾದ್ ನಾಯಕ್, ಎಸ್.ಡಿ.ಎಂ ಆಯುವೇ೯ದ ಕಾಲೇಜಿನ ಪ್ರಾಧ್ಯಾಪಕ ಡಾ" ವಿಜಯ್ ನೆಗಳೂರು, ಡಾII ಚಿತ್ರಾ ನೆಗಳೂರು, ಬಿಲ್ಲಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮುoತಾದವರಿದ್ದರು.
ಶಿರ್ವದಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಐದನೇ ವರ್ಷದ ಪಾದಯಾತ್ರೆ
Posted On: 12 Sep 2020, 06:38 PM
ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ಮುಲ್ಕಾಡಿ ಕೋಡು ಪಂಜಿಮಾರು ಶಿರ್ವ ಇವರ ವತಿಯಿಂದ 5 ನೇ ವರ್ಷದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ, ಮುಲ್ಕಾಡಿ ಉಧ್ಬವ ದುರ್ಗಾಪರಮೇಶ್ವರೀ ದೇವಸ್ಥಾನ ಕೋಡು ಪಂಜಿಮಾರುವಿನಿಂದ ಊರ ಪರವೂರ ಭಕ್ತರ ಕೂಡುವಿಕೆಯಿಂದ ಪಾದಯಾತ್ರೆ ಇಂದು ಸಂಜೆ 5 ಗಂಟೆಗೆ ನಡೆಯಿತು.. ಕಟೀಲು ಶ್ರೀ ದುರ್ಗಾ ಪರಮೇಶ್ವರಿಯ ಭಕ್ತರು ಐದನೇ ವರ್ಷದ ಸುಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಮುಲ್ಕಾಡಿ ಭಜನಾ ಮಂಡಳಿಯ ಸದಸ್ಯರಿಗೆ ಸಂತಸ ತಂದಿದೆ..
ಕಾಪುವಿನ ರಾಣ್ಯಕೇರಿಯಲ್ಲಿ ವಿದ್ಯುತ್ ಇಲ್ಲದ ಬಡ ಕುಟುಂಬಕ್ಕೆ ವಿದ್ಯುತ್ ಸಂಪರ್ಕ
Posted On: 11 Sep 2020, 05:05 PM
ಕಾಪು ಕ್ಷೇತ್ರದ ಪುರಸಭಾ ವ್ಯಾಪ್ತಿಯ ರಾಣ್ಯಕೇರಿ ಎಂಬಲ್ಲಿ ಜಯಲಕ್ಷ್ಮಿ ಎನ್ನುವರವರ ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದ್ದನ್ನು ಗಮನಿಸಿದ ಕಾಪುವಿನ ಸಾಮಾಜಿಕ ಕಾರ್ಯಕರ್ತೆ ನೀತಾ ಪ್ರಭುರವರು ಶ್ರೀಕಾಂತ್ ನಾಯಕ್ ಅವರಿಗೆ ತಿಳಿಸಿದಾಗ ಸ್ಥಳೀಯ ಪ್ರಮುಖರಾದ ಸುಧಾಮ ಶೆಟ್ಟಿ ಹಾಗೂ ಪ್ರಶಾಂತ್ ಪೂಜಾರಿ ಇವರೊಂದಿಗೆ ಮನೆಗೆ ಭೇಟಿ ನೀಡಿ ವಿದ್ಯುತ್ ಸಂಪರ್ಕ ಕೊಡಿಸುವ ಭರವಸೆ ನೀಡಿದ್ದರು. ತೀರಾ ಬಡಕುಟುಂಬವಾದ ಇವರು ತಮ್ಮಲ್ಲಿ ಹೆಚ್ಚಿನ ದಾಖಲೆಗಳು ಇಲ್ಲದ್ದನ್ನು ಮನಗಂಡ ಸುಧಾಮ ಶೆಟ್ಟಿಯವರು ಪುರಸಭಾ ಅಧಿಕಾರಿಗಳೊಂದಿಗೆ ಮಾತನಾಡಿ ಮಾನವೀಯ ನೆಲೆಯಲ್ಲಿ ವಿದ್ಯುತ್ ಸಂಪರ್ಕ ಒದಗಿಸಲು ನಿರಾಪೇಕ್ಷಣಾ ಪತ್ರ ಕೊಡಿಸಿದರು. ನಂತರದಲ್ಲಿ ಕಾಪು ಮೆಸ್ಕಾಂ ನ್ನು ಸಂಪರ್ಕಿಸಿ ಅವರಿಗೆ ಉಚಿತ ಕಂಬ ಒದಗಿಸಿ ವಿದ್ಯುತ್ ಸಂಪರ್ಕ ಒದಗಿಸಿದ್ದರು. ಇಂದು ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರೊಂದಿಗೆ ಫಲಾನುಭವಿಗಳ ಮನೆಗೆ ಭೇಟಿ ನೀಡಿ ವಿದ್ಯುತ್ ಸಂಪರ್ಕದ ಉದ್ಘಾಟನೆ ಮಾಡಿದರು. ಕಾಪುವಿನ ಸಾಮಾಜಿಕ ಕಾರ್ಯಕರ್ತೆ ನೀತಾ ಪ್ರಭುರವರು ಮನೆಗೆ ಬೇಕಾದಂತಹ ಬಲ್ಬ್ಗಳನ್ನು ಹಾಗೂ ಒಂದು ಟೇಬಲ್ ಫ್ಯಾನ್ ನ್ನು ಕೊಡುಗೆಯಾಗಿ ನೀಡಿದ್ದು ಮಾನ್ಯ ಶಾಸಕರ ಮುಖೇನ ಅದನ್ನು ಹಸ್ತಾಂತರಿಸಲಾಯಿತು. ಬಡಕುಟುಂಬವೊಂದಕ್ಕೆ ಸಹಾಯ ಮಾಡಲು ಅವಕಾಶ ನೀಡಿದ ನೀತಾ ಪ್ರಭು, ಪ್ರಶಾಂತ್ ಪೂಜಾರಿ ಮತ್ತು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಹಿರಿಯರಾದ ಸುಧಾಮ ಶೆಟ್ಟಿ, ಇವರೆಲ್ಲರಿಗೂ ಶ್ರೀಕಾಂತ್ ನಾಯಕ್ ಧನ್ಯವಾದಗಳನ್ನು ತಿಳಿಸಿದರು.
ಕಾಪು ರಾಷ್ಟ್ರೀಯ ಹೆದ್ದಾರಿ ವಿಭಾಜಕದಲ್ಲಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ
Posted On: 11 Sep 2020, 04:34 PM
ರಾ.ಹೆ. 66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ಕಾಪುವಿನಲ್ಲಿ ನಡೆದಿದೆ.
ಅಪಘಾತದಲ್ಲಿ ಆಶ್ರಿತಾ (24) ಎಂಬ ಯುವತಿ ಮೃತಪಟ್ಟಿದ್ದು, ನಿಹಾಲ್, ಅನೀಷ್, ನಿನಾದ್ ಮತ್ತು ಅಥರ್ವ ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಕಾಪು ಹಳೇ ಮೆಸ್ಕಾಂ ಕಛೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ಉರುಳಿ ಬಿದ್ದಿದೆ.
ಮುಂಬಯಿಯಿಂದ ಆಗಮಿಸಿದ್ದ ಯುವಕರ ತಂಡ ಕಾರಿನಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಎಸ್ಸೈ ರಾಜಶೇಖರ ಬಿ. ಸಾಗನೂರು, ಕ್ರೈಂ ಎಸ್ಸೈ ಐ.ಆರ್. ಗಡ್ಡೇಕರ್ ಮೊದಲಾದವರು ಭೇಟಿ ನೀಡಿದ್ದಾರೆ.
ಕಾಪುವಿನ ಮಜೂರಿನಲ್ಲಿ ಕೃಷ್ಣ ಜನ್ಮಾಷ್ಟಮಿಯಂದು ಮೂರು ಕರುಗಳಿಗೆ ಜನ್ಮ ನೀಡಿದ ಹಸು
Posted On: 10 Sep 2020, 02:06 PM
ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಅಂದರೆ ರೋಹಿಣಿ ನಕ್ಷತ್ರ ವೃಷಭ ರಾಶಿಯ ಪವಿತ್ರವಾದ ಅಷ್ಪಮಿಯ ದಿನದಂದು ಶ್ರೀ ಕೃಷ್ಣನ ಜನನವಾಗಿತ್ತು. ಕೃಷ್ಣನಿಗೆ ಗೋವುಗಳೆಂದರೆ ಅಚ್ಚು ಮೆಚ್ಚು.. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರಿನ ಸಾನದ ಮನೆಯಲ್ಲಿ ಹಸುವೊಂದು ಮೂರು ಕರುಗಳಿಗೆ ಜನ್ಮ ನೀಡಿದ್ದು. ಮಜೂರು ಗ್ರಾಮಸ್ಥರು ಕರುಗಳನ್ನು ನೋಡಲು ಮುಗಿಬಿದ್ದಿದ್ದಾರೆ.
