Updated News From Kaup
ಡಿ.19ರಂದು ರೋಬೋಸೋಫ್ಟ್ ನಿಂದ ಜಿ.ಪಂ.ಗೆ 6 ಎಲೆಕ್ಟ್ರಿಕ್ ಆಟೋ ಹಸ್ತಾಂತರ
Posted On: 16-12-2024 06:07PM
ಉಡುಪಿ: ಹಳ್ಳಿಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಗ್ರಹಿಸುವ ಕಾರ್ಯವನ್ನು ಸ್ವಲ್ಪಮಟ್ಟಿಗೆ ಸುಲಭವಾಗಿಸುವ ನಿಟ್ಟಿನಲ್ಲಿ ಉಡುಪಿಯ ರೋಬೋಸೋಫ್ಟ್ ಟೆಕ್ನಾಲಜೀಸ್ ಸಂಸ್ಥೆಯು ತನ್ನ ಸಿಎಸ್ ಆರ್ ನಿಧಿಯ ಮೂಲಕ ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಖರೀದಿಸಿ ಉಡುಪಿ ಜಿಲ್ಲಾ ಪಂಚಾಯತ್ ಗೆ ನೀಡಲು ನಿರ್ಧರಿಸಿದೆ.
ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 15-12-2024 06:33PM
ಕಾಪು : ತಾಲೂಕಿನ ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜ.30 ರಿಂದ ಫೆ. 9ರವರೆಗೆ ನಡೆಯಲಿದ್ದು ಆ ಪ್ರಯುಕ್ತ ಇದರ ಆಮಂತ್ರಣ ಪತ್ರಿಕೆಯನ್ನು ರವಿವಾರ ಕ್ಷೇತ್ರದ ಆವರಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.
ಕಾಪು ಕಿಶೋರ ಯಕ್ಷಗಾನ ಸಂಭ್ರಮ - 2024 ಉದ್ಘಾಟನೆ
Posted On: 15-12-2024 06:29PM
ಕಾಪು : ಪ್ರದರ್ಶನ ಸಂಘಟನಾ ಸಮಿತಿ ಶಿರ್ವ ಸಹಯೋಗದೊಂದಿಗೆ ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರು ಆಯೋಜಿಸಿದ ಕಾಪು ಕ್ಷೇತ್ರದ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ "ಕಿಶೋರ ಯಕ್ಷಗಾನ ಸಂಭ್ರಮ - 2024" ಇದರ ಉದ್ಘಾಟನಾ ಸಮಾರಂಭ ರವಿವಾರ ಶಿರ್ವ ಮಹಿಳಾ ಸೌಧದ ಬಳಿ ನಡೆಯಿತು.
ಪೇಜಾವರ ಶ್ರೀಗಳ ಅವಹೇಳನ ಸಹಿಸುವುದಿಲ್ಲ - ಪೆರ್ಣಂಕಿಲ ಶ್ರೀಶ ನಾಯಕ್
Posted On: 14-12-2024 07:15PM
ಉಡುಪಿ : ವಿಶ್ವಾದ್ಯಂತ ಕೋಟ್ಯಾಂತರ ಭಕ್ತಾಭಿಮಾನಿಗಳನ್ನು ಹೊಂದಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ, ತೀರಾ ಕೆಳಮಟ್ಟದಲ್ಲಿ ಅವಹೇಳನ ಮಾಡುವ ಘಟನೆಗಳು ನಡೆಯುತ್ತಿರುವ ಅತ್ಯಂತ ಖಂಡನೀಯ. ಉಡುಪಿಯ ಅಷ್ಟ ಮಠಗಳ ಯತಿಗಳ ಪರಂಪರೆಯಲ್ಲಿ ಯಾರೂ ಸಂವಿಧಾನದ ವಿರುದ್ಧ ಮಾತನಾಡಿದ ಉದಾಹರಣೆಗಳಿಲ್ಲ. ಅದರಲ್ಲೂ ಪೇಜಾವರ ಮಠದ ಹಿರಿಯರಾಗಿದ್ದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರಂತೂ ಸಂವಿಧಾನದ ಮೇಲೆ ವಿಶೇಷ ಗೌರವವನ್ನು ಹೊಂದಿದ್ದರು, ತಾವೂ ಅದನ್ನು ಪಾಲಿಸುತ್ತಿದ್ದರು, ಇತರರೂ ಪಾಲಿಸುವಂತೆ ಹೇಳುತ್ತಿದ್ದರು.
ಕಾಪು ಹೊಸ ಮಾರಿಗುಡಿ : ನೂತನ ಆಡಳಿತ ಮಂಡಳಿ ಪದಗ್ರಹಣ
Posted On: 14-12-2024 05:59PM
ಕಾಪು : ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಅಧೀನದ ಕಾಪು ಹೊಸ ಮಾರಿಗುಡಿ ದೇಗುಲದ ನೂತನ ವ್ಯವಸ್ಥಾಪನ ಸಮಿತಿಯ ಅಧಿಕಾರ ಸ್ವೀಕಾರ ಕಾರ್ಯಕ್ರಮ ಶನಿವಾರ ನಡೆಯಿತು. ದತ್ತಿ ಇಲಾಖೆ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ ಹಾಗೂ ಕಾರ್ಯನಿರ್ವಾಹಣಾಧಿಕಾರಿ ರವಿಕಿರಣ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ, ಪಠ್ಯೇತರ ಸ್ಪರ್ಧೆಗಳು
Posted On: 13-12-2024 05:44PM
ಕಾರ್ಕಳ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ( ಪದವಿಪೂರ್ವ ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು ಸಪ್ತಸ್ವರ ವೇದಿಕೆ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಜರುಗಿತು.
ಕಾಪು : ಸಮಾಜ ರತ್ನ ದಿ. ಲೀಲಾಧರ ಶೆಟ್ಟಿ, ವಸುಂದರಾ ಶೆಟ್ಟಿ ಪುಣ್ಯಸ್ಮರಣೆ ; ಬೃಹತ್ ರಕ್ತದಾನ ಶಿಬಿರ
Posted On: 12-12-2024 06:27PM
ಕಾಪು : ಕಾಪುವಿನ ಸಮಾಜ ಸೇವಕ, ಸಮಾಜ ರತ್ನ ದಿವಂಗತ ಲೀಲಾಧರ ಶೆಟ್ಟಿ ಮತ್ತು ವಸುಂದರಾ ಶೆಟ್ಟಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಗುರುವಾರ ಕಾಪು ಶ್ರೀ ವೀರಭದ್ರ ಸಭಾಭವನದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದ ಮೊಕ್ತೇಸರ ಮನೋಹರ ಎಸ್ ಶೆಟ್ಟಿ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ನಾವು ಜೀವನದಲ್ಲಿ ಯಾವುದಾದರೂ ಒಳ್ಳೆಯ ಕೆಲಸ ಮಾಡಿ ಸ್ವಲ್ಪವಾದರೂ ಸಮಾಜ ಸೇವೆ ಮಾಡೋಣ. ದಿ. ಲೀಲಾಧರ ಶೆಟ್ಟಿಯವರು ನಮ್ಮನ್ನು ಅಗಲಿ ಒಂದು ವರ್ಷವಾದರೂ ಅವರು ಮಾಡಿದ ಸಮಾಜ ಸೇವೆ ನಿತ್ಯ ನಿರಂತರ ಎಂದು ಹೇಳಿದರು.
ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ : ಸೃಜನ ಕುಲಾಲ್ ಗೆ ಚಿನ್ನ, ಬೆಳ್ಳಿ ಪದಕ
Posted On: 11-12-2024 05:06PM
ಕಾರ್ಕಳ : ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬಾಲಕಿಯರ 16 ವರ್ಷ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಕಾಂತವಾರ ಗ್ರಾಮದ ಬಾರಾಡಿಯ ಸೃಜನ ಕುಲಾಲ್ ಇವರು ಭಾಗವಹಿಸಿ ಚಿನ್ನದ ಪದಕ ಕುಮಿಟೆಯಲ್ಲಿ(ಫೈಟಿಂಗ್ ನಲ್ಲಿ) ಹಾಗೂ ಬೆಳ್ಳಿಯ ಪದಕವನ್ನು ಕಟ ವಿಭಾಗದಲ್ಲಿ ಪಡೆದಿರುತ್ತಾರೆ.
ಡಿ.23ರಿಂದ 29: ಪಡುಕುತ್ಯಾರಿನಲ್ಲಿರುವ ಆನೆಗುಂದಿ ಮಠದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ - 2024
Posted On: 11-12-2024 04:53PM
ಶಿರ್ವ : ಪಡುಕುತ್ಯಾರಿನಲ್ಲಿರುವ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ಡಿಸೆಂಬರ್ 23ರಿಂದ 29ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ 2024 ನಡೆಯಲಿದೆ.
ಡಿ.13 : ಕಾಪು ದಂಡತೀರ್ಥ ಶಾಲಾ ಮೈದಾನದಲ್ಲಿ ಕುಟ್ಯಣ್ಣನ ಕುಟುಂಬ ತುಳು ನೂತನ ನಾಟಕ ಪ್ರದರ್ಶನ
Posted On: 11-12-2024 03:26PM
ಕಾಪು : ಸಮಾಜತ್ನ ದಿ| ಕೆ. ಲೀಲಾಧರ ಶೆಟ್ಟಿ ಅವರ ಸಾರಥ್ಯದ ಕಾಪು ರಂಗತರಂಗ ಕಲಾವಿದರು ತಂಡದ ಕುಟ್ಯಣ್ಣನ ಕುಟುಂಬ ತುಳು ನೂತನ ನಾಟಕವು ಡಿ.13 ರಂದು ಸಂಜೆ 6:30ಕ್ಕೆ ಕಾಪು ದಂಡತೀರ್ಥ ಶಾಲಾ ಮೈದಾನದಲ್ಲಿ ಪ್ರದರ್ಶನಗೊಳ್ಳಲಿದೆ.
