Updated News From Kaup

ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ನೂತನ ರಜತ ಉಯ್ಯಾಲೆ ಸಮರ್ಪಣೆ

Thumbnail
Posted On: 24 Aug 2020, 04:11 PM

ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು ಇಲ್ಲಿ ವಾರ್ಷಿಕ ಸುಗ್ಗಿ ಮಾರಿಪೂಜೆ ಸಂದರ್ಭದಲ್ಲಿ ವಿಶೇಷವಾಗಿ ನಡೆಯಲ್ಪಡುವ ಶ್ರೀ ದೇವಿಯ ಗೊಪುರೋತ್ಸವ ಹಾಗೂ ಚಂಡಿಕಾ ಹೋಮ ಸಂದರ್ಭ ವಿನಿಯೋಗಕ್ಕೆ .ನೂತನ ರಜತ ಉಯ್ಯಾಲೆ ಯನ್ನು ದಿ.ಕಾಪು ಬಾಲಕೃಷ್ಣ ಭಟ್ ಸ್ಮರಣಾರ್ಥ ಇವರ ಮಕ್ಕಳು ಸೇವಾರ್ಥವಾಗಿ ಸಮರ್ಪಿಸಿದರು.

ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಕಾಪು ಪ್ರಖಂಡದ ನೂತನ ಜವಾಬ್ದಾರಿಗಳ ಆಯ್ಕೆ‌

Thumbnail
Posted On: 24 Aug 2020, 02:01 PM

ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾಪು ಪ್ರಖಂಡದ ನೂತನ ಹಲವು ಜವಾಬ್ದಾರಿ ಗಳನ್ನು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ಘೋಷಣೆ ಮಾಡಲಾಯಿತು. ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್,ಜಿಲ್ಲಾ ವಿದ್ಯಾರ್ಥಿ ಪ್ರಮುಖ್ ಪ್ರವೀಣ್ ಹಿರಿಯಡ್ಕ,ಕಾಪು ಪ್ರಖಂಡ ಕಾರ್ಯದರ್ಶಿ ಜಯಪ್ರಕಾಶ್ ಪ್ರಭು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳದ ನೂತನ ಜವಾಬ್ದಾರಿಗಳನ್ನು ಘೋಷಿಸಲಾಯಿತು. ಉಪಾಧ್ಯಕ್ಷರಾಗಿ ಗೋವರ್ಧನ ಭಟ್ ಮಜೂರು ಮತ್ತು ಶರತ್ ಕಟಪಾಡಿ ಸಹ ಕಾರ್ಯದರ್ಶಿಯಾಗಿ ನಿತೇಶ್ ಸುವರ್ಣ ಎರ್ಮಾಳ್, ಕೋಶಾಧಿಕಾರಿಯಾಗಿ ಮಹೇಶ್ ಉಚ್ಚಿಲ, ಮಠಮಂದಿರ ಸಂಪರ್ಕ ಪ್ರಮುಖ್ ಸದಾಶಿವ ಕುಲಾಲ್ ಶಿರ್ವ, ಸಾಮರಸ್ಯ ಪ್ರಮುಖ್ ಭಾಸ್ಕರ ಭಂಡಾರಿ ಪಡುಬಿದ್ರಿ, ಧರ್ಮ ಪ್ರಸಾರ ಪ್ರಮುಖ್ ರಾಘವೇಂದ್ರ ಶೆಟ್ಟಿ ಪಡುಬೆಳ್ಳೆ
ಬಜರಂಗದಳ ಸಂಯೋಜಕರಾಗಿ ಸುಧೀರ್ ಕಾಪು, ಸಹ ಸಂಯೋಜಕರಾಗಿ ಶರಣ್ ಸಾಲಿಯಾನ್ ಹೆಜಮಾಡಿ, ಸೇವಾ ಪ್ರಮುಖ್ ಸುಭಾಷ್ ಶೆಟ್ಟಿ ಹೇರೂರು, ಗೋರಕ್ಷಾ ಪ್ರಮುಖ್ ನಾಗೇಶ್ ಕೋಟ್ಯಾನ್ ಪಾಂಗಾಳ, ಸುರಕ್ಷಾ ಪ್ರಮುಖ್ ಆನಂದ ಶಿರ್ವ, ಅಖಾಡ ಪ್ರಮುಖ್ ಅಭಿಜಿತ್ ಶೆಟ್ಟಿ ಪಾಂಗಾಳ ಆಯ್ಕೆಯಾದರು.

ಬೊಲ್ಜೆ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ಮಲ್ಲಾರ್ ನಿವಾಸಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ

Thumbnail
Posted On: 24 Aug 2020, 11:07 AM

ಕಾಪು.24,ಆಗಸ್ಟ್ : ಉಬೇದುಲ್ಲಾ (54), ಮಲ್ಲಾರ್ ನಿವಾಸಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಮನೆ. ಉದ್ಯಾವರ ಬೊಲ್ಜೆ ರೈಲ್ವೆ ಬ್ರಿಡ್ಜ್ ಪಕ್ಕದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆ.. ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದು, ಬ್ರಿಡ್ಜ್ ಪಕ್ಕದಲ್ಲೇ ಬೈಕ್, ಮೊಬೈಲ್ ವಾಚ್ ಪತ್ತೆಯಾಗಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಶವವನ್ನು ಮಣಿಪಾಲ ಶವಾಗಾರಕ್ಕೆ ಸಮಾಜ ಸೇವಕ ಸೂರಿ ಶೆಟ್ಟಿಯವರು ಸಾಗಿಸಿದರು. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ನಡೆಯಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಕಾಪುವಿನಲ್ಲಿ ಮನೆಯೂಟಕ್ಕೆ ಹೆಸರುವಾಸಿಯಾದ ಶೆಣೈ ರೆಸ್ಟೋರೆಂಟ್ ಮಾಲಕ ಭಾಸ್ಕರ್ ಶೆಣೈ ಇನ್ನಿಲ್ಲ

Thumbnail
Posted On: 24 Aug 2020, 09:04 AM

ಕಾಪುವಿನ ಭಾರತ್ ನಗರದಲ್ಲಿ ಮನೆಯೂಟಕ್ಕೆ ಹೆಸರುವಾಸಿಯಾದ ಶೆಣೈ ರೆಸ್ಟೋರೆಂಟ್ ನ ಮಾಲಕರಾದ ಭಾಸ್ಕರ್ ಶೆಣೈಯವರು ಇಂದು ಮುಂಜಾನೆ ದೈವಾಧೀನರಾದರು. ಬ್ಯಾಂಕ್ ಉದ್ಯೋಗಿಗಳು ಮತ್ತಿತರ ನೌಕರರಿಗೆ ಮನೆಯೂಟದ ಸವಿ ಬಡಿಸುತ್ತಿದ್ದ ಇವರ ಹೋಟೆಲಿಗೆ ಹಲವಾರು ಗಣ್ಯರೂ ಊಟಕ್ಕೆ ಬರುತ್ತಿದ್ದರು. ಪ್ರಸ್ತುತ ಹೋಟೆಲ್ ನ್ನು ಅವರ ಪುತ್ರ ಮೋಹನದಾಸ ಶೆಣೈಯವರು ನಡೆಸಿಕೊಂಡು ಬರುತ್ತಿದ್ದಾರೆ. ಮೃತರು ಎರಡು ಗಂಡು ಹಾಗೂ ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಬ್ರಹ್ಮಾವರದ ಆಶ್ರಮವಾಸಿಗಳ ಸಮ್ಮುಖದಲ್ಲಿ ಗಣೇಶ ಹಬ್ಬ ಆಚರಣೆ

Thumbnail
Posted On: 23 Aug 2020, 09:21 AM

ಗಿರಿಜಾ ಕೃಷ್ಣ ಪೂಜಾರಿ ಚಾರಿಟೇಬಲ್ ಟ್ರಸ್ಟ್ (ರಿ.) ಕೂರಾಡಿ. ಅಪ್ಪ-ಅಮ್ಮ ಅನಾಥಾಲಯ ಬ್ರಹ್ಮಾವರ ಮೊದಲ ವಷ೯ದ ಗಣೇಶೋತ್ಸವ ಬ್ರಹ್ಮಾವರ: - ಅಪ್ಪ ಅಮ್ಮ"ಅನಾಥಾಲಯ (ಉಚಿತ ಸೇವೆ ) ಪ್ರಥಮ ವರ್ಷದ ಗಣೇಶೋತ್ಸವವನ್ನು ಆಶ್ರಮವಾಸಿಗಳಿಗಾಗಿ ಆಚರಿಸಲಾಯಿತು.ಈ ಸಂದಭ೯ದಲ್ಲಿ ಗಣಹೋಮ, ವಿಶೇಷ ಪೂಜೆ ಮತ್ತು ಸಹಭೋಜನ ನೆರವೇರಿತು. ಈ ಸಂದಭ೯ದಲ್ಲಿ ಉದ್ಯಮಿಗಳಾದ ಶ್ರೀಕಾಂತ್ ಶೆಣೈ, ಮೋಹನ್ ಶೆಟ್ಟಿ, ಸ್ವಚ್ಚ ಭಾರತ್ ಫ್ರೆಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು,ಕವಾ೯ಲು, ಉದಯ ನಾಯ್ಕ್, ಟ್ರಸ್ಟ್ ನ ಪ್ರಮುಖರಾದ ಗಿರಿಜಾ ಕೃಷ್ಣ ಪೂಜಾರಿ,ಆಶ್ರಮದ ಮುಖ್ಯಸ್ಥರಾದ ಪ್ರಶಾಂತ್ ಪೂಜಾರಿ ಕೂರಾಡಿ ಮುಂತಾದವರಿದ್ದರು.

ಚೌತಿಗೊಂದು ಚಿಂತನೆ ಬಂದು ಹೋಗುವ ಗಣಪತಿ

Thumbnail
Posted On: 22 Aug 2020, 08:25 AM

| ಆರಾಧನೆಯ ಪೂರ್ವಾಪರ | ಆಗಮಿಸಿ , ಪೂಜೆಗೊಂಡು , ನಿರ್ಗಮಿಸುವ ಅಥವಾ ಆಹ್ವಾನಿಸಿ , ಆವಾಹಿಸಿ , ಪೂಜಿಸಿ ವಿಸರ್ಜಿಸುವ ದೇವರುಗಳಲ್ಲಿ "ಗಣಪತಿ" ಒಬ್ಬ . ಋತುಮಾನಕ್ಕೆ ಅನುಗುಣವಾಗಿ ನಿರ್ದಿಷ್ಟ ದಿನಗಳಲ್ಲಿ‌ ಬಂದು ಹೋಗುವ ಈ ದೇವರುಗಳ ಆರಾಧನಾ ವಿಧಾನವು ಎಷ್ಟು ವೈಭವದಿಂದ ನಡೆದರೂ ತಾತ್ಕಾಲಿಕ ಕಲ್ಪನೆ ಮತ್ತು ಅನುಸಂಧಾನ ಆಧರಿತವಾಗಿರುವುದು ಗಮನಾರ್ಹ .ವರ್ಷಪೂರ್ತಿ ಬೇರೆಬೇರೆ ಸಂದರ್ಭಗಳಲ್ಲಿ ಇಂತಹ ದೇವರುಗಳ ಆಗಮನವಾಗುತ್ತಿರುತ್ತದೆ .ಶ್ರದ್ದೆಯ ಆರಾಧನೆ ನಡೆದು ಆ ದೇವರುಗಳನ್ನು ಬೀಳ್ಕೊಡಲಾಗುತ್ತದೆ . ಜನಪದರ ಆಟಿಯ‌ಅಜ್ಜಿ , ಸೋಣದ ಬಲೀಂದ್ರನತಾಯಿ , ಹೊಸ್ತಿಲಿನ ದೇವರು, ತೆನೆಕಟ್ಟುವ ಆಚರಣೆ , ತುಳುವರ ಪರ್ಬದ ಬಲೀಂದ್ರ , ಕೆಡ್ಡಸದ ಭೂಮಿತಾಯಿ , ಬಿಸುಕಣಿ ಹಾಗೂ ಶಿಷ್ಟದ ಗೌರಿ - ಗಣೇಶ , ನವರಾತ್ರಿಯ ಶಕ್ತಿಪೂಜೆ ,ದೀಪಾವಳಿಯ ಬಲೀಂದ್ರ ಮುಂತಾದ ದೇವರುಗಳು ತಾತ್ಕಾಲಿಕವಾಗಿ ನೆಲೆಗೊಂಡು , ಪೂಜೆಗೊಂಡು ನಿರ್ಗಮಿಸುವಂತವರು .ಈ ಸ್ಥಿರವಲ್ಲದ ಉಪಾಸನೆಗೆ ಮಣ್ಣಿನಮೂರ್ತಿ‌, ಕಲಶ ,ದೀಪ , ಸ್ವಸ್ತಿಕೆ(ಸುತ್ತೆ) ಮುಂತಾದ ಸಂಕೇತಗಳು ಮಾಧ್ಯಮಗಳಾಗುತ್ತವೆ . ಗೌರಿ - ಗಣೇಶರಿಗೆ ಮಣ್ಣಿನ ಮೂರ್ತಿಯಲ್ಲಿ ಪೂಜೆ .ಗಣೇಶನ ಎಷ್ಟೇ ಭೀಮಗಾತ್ರದ ಪ್ರತಿಮೆಯನ್ನಾದರೂ ಮಣ್ಣಿನಲ್ಲೆ ರಚಿಸುವುದು ,ಪೂಜೆಯ ಬಳಿಕ ನೀರಿನಲ್ಲಿ ವಿಸರ್ಜಿಸುವುದು . ನವರಾತ್ರಿಯ ಸಂದರ್ಭ ಕಲಶದಲ್ಲಿ ಆವಾಹನೆ - ಪೂಜೆ , ಸ್ವಸ್ತಿಕೆಯಲ್ಲಿ ಆರಾಧನೆ ಮತ್ತು ಶಾರದೆಯ ಮಣ್ಣಿನ ಮೂರ್ತಿಯ ಪೂಜೆ - ವಿಸರ್ಜನೆ ಇತ್ಯಾದಿ ವಿಶಿಷ್ಟ ವಿಧಾನದಲ್ಲಿ ಉಪಾಸನೆಗಳು ನಡೆದು ಬಂದಿದೆ . ಪೊಲಿ ( ಸಮೃದ್ಧಿ)ಯನ್ನು ತೆನೆಯ ರೂಪದಲ್ಲಿ ಮನೆ ತುಂಬಿಸಿಕೊಳ್ಳುವ ಆಚರಣೆ , ಬಲೀಂದ್ರನನ್ನು ದೀಪದಲ್ಲಿ - ಬೆಳೆಯ ಸಮೃದ್ಧಿಯಲ್ಲಿ ಕಾಣುವುದು , ಮನೆಯಂಗಳದಲ್ಲಿ ಬೂದಿಯಲ್ಲಿ ಬರೆಯುವ ರಂಗವಲ್ಲಿ ಹಾಗೂ ಅದರಲ್ಲಿರಿಸುವ ಮಂಗಳ ದ್ರವ್ಯಗಳಲ್ಲಿ ಕೆಡ್ಡಸದ ಆಚರಣೆಯ ಭೂಮಿತಾಯಿಯನ್ನು ಪೂಜಿಸುವುದು , ಮಂಗಳದ್ರವ್ಯಗಳೊಳಗೊಂಡ 'ವಿಷುಕಣಿ'ಯಲ್ಲಿ ಯುಗಾದಿಯ ಅಥವಾ ಹೊಸ ವರ್ಷದ ಭವಿಷ್ಯದ ದೇವರನ್ನು ಗುರುತಿಸುವುದು ಮುಂತಾದ ಕ್ರಮಗಳೆಲ್ಲ ತಾತ್ಕಾಲಿಕ ನೆಲೆಯಲ್ಲಿ ನೆರವೇರುತ್ತಿವೆ . ಅಂದರೆ ಈ ಸಂದರ್ಭಗಳಲ್ಲಿ ಪೂಜೆಗೊಳ್ಳುವ ನಂಬಿಕೆಗಳೆಲ್ಲ ಬಂದುಹೋಗುವ ಶ್ರದ್ಧೆಗಳಾಗಿವೆ .ಅಂತೆಯೇ ನಮ್ಮ ಗಣಪತಿ ಬಂದು ಹೋಗುವ ದೇವರುಗಳಲ್ಲಿ ಒಬ್ಬ . • ತಾಯಿ ಗೌರಿಯೊಂದಿಗೆ ಪ್ರತಿವರ್ಷ ಆಗಮಿಸಿ ಪೂಜೆಗೊಂಡು ನಿರ್ಗಮಿಸುವ ಗಣಪನ ಆರಾಧನೆಯಲ್ಲಿ ತಾಯಿ ಗೌರಿಗೂ ಪ್ರಾಧಾನ್ಯವಿದೆ .ಮೊದಲು "ಗೌರಿ ತೃತೀಯ , ಬಳಿಕ ಗಣೇಶ ಚತುರ್ಥಿ" ಇದರಿಂದ ಆದಿಪೂಜಿತನಾದರೂ ಮೊದಲು ತಾಯಿಗೆ ಪೂಜೆ . ಇಂದಿನ ಆಡಂಬರದ ವೈಭವೋಪೇತ ಗಣಪತಿ ,ದುರ್ಗೆಯರ ,ಬಲೀಂದ್ರನ ಉಪಾಸನಾ ವಿಧಾನಗಳ ಬಹು ವಿಸ್ತ್ರತ ಅಲಂಕಾರದ ಮರೆಯಲ್ಲಿ ಜನಸಾಮನ್ಯರ ಚಿಂತನೆಗೆ ಆಧಾರಗಳು ದೊರೆಯುತ್ತವೆ. ಸರಳ - ಸುಂದರ ಜನಪದೀಯ ಅನುಸಂಧಾನವು ಅಲ್ಲೆ ನಿಚ್ಚಳವಾಗಿರುತ್ತವೆ. ಏಕೆಂದರೆ ಜನಪದರ ಮನಸ್ಸುಗಳು ಕಲ್ಪಸಿದ ,ಆ ಆಲೋಚನೆಗಳನ್ನೆ ಮೂರ್ತಸ್ವರೂಪಕ್ಕೆ ಇಳಿಸಿದ ಪೂಜಾವಿಧಾನ - ಪ್ರತೀಕಗಳ ಚಿಂತನೆಗಳು ಸುಪ್ತವಾಗಿ ಗಮನ ಸೆಳೆಯುತ್ತಿರುತ್ತವೆ . ಸಹಜ ,ಮುಗ್ಧ ಚಿಂತನೆಯಿಂದ ವೈದಿಕದ ವೈಭವೋಪೇತ ಸೃಷ್ಟಿಯವರೆಗೆ ; ಬೇಟೆ ಸಂಸ್ಕೃತಿಯಿಂದ ಆರಂಭಿಸಿ ಆಧುನಿಕ ಜೀವನ ಶೈಲಿಯ ಹರವಿನಲ್ಲಿ ಮಣ್ಣಿನ ಮಗ ಮಹಾಕಾಯ ಮಹಾಗಣಪತಿಯ ಸ್ವೀಕಾರ ಮತ್ತು ಪೂಜಾವಿಧಾನಗಳಿಗೆ ರೋಚಕ ಇತಿಹಾಸವಿದೆ. ವಿಶ್ವದಾದ್ಯಂತ ಮಾನ್ಯತೆ ಇದೆ . ಒಂದು ಸಂಸ್ಕೃತಿಯ ಸಂಕೇತವಾಗಿ , ಒಬ್ಬ ಗಣವಾಗಿ , ಬ್ರಹ್ಮಣಸ್ಪತಿಯಾಗಿ , ಗಣಾಧ್ಯಕ್ಷನಾಗಿ ಈ ವಿನಾಯಕ ಆಧ್ಯಾತ್ಮಿಕ ಪ್ರಪಂಚದಲ್ಲಿ ಏರಿದ ಎತ್ತರ ಊಹಿಸಲಸಾಧ್ಯ .ಆಸ್ತಿಕ ,ನಾಸ್ತಿಕ ಭೇದವಿಲ್ಲದೆ ಬಹುಮಾನ್ಯನಾದ ದೇವರು ಗಣಪತಿ .ಜಾತಿ - ಮತ - ಪಂಥಗಳ ಕಟ್ಟುಪಾಡುಗಳನ್ನು ಮೀರಿ ವಿಶ್ವವ್ಯಾಪಿಯಾಗಿ ತನ್ನ ಆಕರ್ಷಕ ವರ್ಚಸ್ಸಿನ ಮೂಲಕ ವಿಶ್ವವಂದ್ಯನಾದ ದೇವರು ವಿಶ್ವಂಬರ ಮೂರ್ತಿಯಾಗಿ ಬೆಳೆದದ್ದು ,ಜನಮಾನಸದಲ್ಲಿ ಸ್ಥಾಯೀ ಸ್ಥಾನವನ್ನು ಪಡೆದದ್ದು ಮಾತ್ರ ಸತ್ಯ . ವಿಘ್ನ ವಿಡ್ಡೂರಗಳು
ಮಾನವ ಬಯಸಿದ್ದೆಲ್ಲ ನಿರಾಯಾಸವಾಗಿ ಪ್ರಾಪ್ತಿಯಾಗಬೇಕು ,ಜೀವನ ಸುಂದರ ಹಾಗೂ ನಿರಾಳವಾಗಬೇಕು , ಬದುಕಿನ ನಿರಂತರತೆಗೆ ಭಂಗ ಬರಬಾರದು , ನಿರ್ವಿಘ್ನವಾಗಿ ಬಾಳಬೇಕು ಎಂದು ಬಯಸಿದಾಗ ಸಹಜವಾಗಿ ವಿಘ್ನಗಳು ಬರುತ್ತವೆ , ಆಗ ಆತಂಕಕ್ಕೊಳಗಾಗುತ್ತೇವೆ. ಕಾರ್ಯಾರಂಭಗಳಿಗೆ ವಿಘ್ನ - ವಿಡ್ಡೂರಗಳು ಬಂದಾಗ ವಿಘ್ನದ ಕುರಿತು ಗಮನಹರಿದಿರಬೇಕು . ವಿಘ್ನನಿವಾರಕ ದೇವರೊಬ್ಬನ ಚಿಂತನೆ ಬಂದಿರಬಹುದು .ಈ ತಲ್ಲಣ ,ಗೊಂದಲಗಳ ನಿವೃತ್ತಿಗಾಗಿ ವಿಘ್ನನಿವಾರಕ ದೇವರೊಬ್ಬ ಸಾಕಾರಗೊಂಡಿರಬೇಕು . ನಮ್ಮ ವಿಶಾಲ ಮನೋಭಾವದ ಆಧ್ಯಾತ್ಮಿಕ ಬದುಕು , ಸಾಂಸ್ಕೃತಿಕ ವೈಚಾರಿಕ ವೈಶಾಲ್ಯತೆಯಲ್ಲಿ ಗಜಮುಖನಾದರೂ ಸುಮುಖನಾಗಿ ಆದಿಪೂಜಿತನು ಪ್ರಥಮ ಪೂಜೆಗೊಳ್ಳುತ್ತಾನೆ .
ಅಮೂರ್ತವಾದರೂ ಮೂರ್ತ ಚಿಂತನೆ ,ಅಲೌಕಿಕದ ಲೌಕಿಕ ದರ್ಶನ , ಪ್ರತಿಕೃತಿ ಆರಾಧನೆಗಳೆಲ್ಲ ವಿವಿಧ ಹಂತದಲ್ಲಿ ಅಭಿವೃದ್ಧಿ ಹೊಂದಿದಾಗಲೂ ನಮ್ಮ ಗಣಪ ಹಲವು ಸ್ಥಿತ್ಯಂತರ - ರೂಪಾಂತರಗಳಿಗೆ ಒಳಗಾದರೂ ಬೆಳೆದದ್ದು ಭವ್ಯವಾಗಿ .ಸಂಸ್ಕೃತಿಯ ಮೂಲದಲ್ಲೆ ಇದ್ದ ಅಥವಾ ಆವಿರ್ಭವಿಸಿದ ಒಂದು ಚಿಂತನೆ ಇದಾದುರಿಂದ ಇದರ ಪರಿಣಾಮ ಇಷ್ಟು ತೀವ್ರವಾಗಿದೆ .ಗಾಢವಾಗಿ ಬೇರೂರಿದೆ . ಅಸಂಗತ ,ಅಸಂಬದ್ದ ಪ್ರತಿಮಾಲಕ್ಷಣ , ಧಾರಣೆ - ವಾಹನಗಳಲ್ಲೂ ವೈರುಧ್ಯ , ಆಯುಧಗಳಲ್ಲೂ ಏನೋ ಒಂದು ಮೂಲದ ನೆನಪು , ಪ್ರತ್ಯಕ್ಷ ವಿರೋಧ - ಪರಸ್ಪರ ವಿರೋಧದ ಗಣಪನ ಭವ್ಯ ಬಿಂಬದಲ್ಲಿ‌ ಪರಿಪೂರ್ಣತೆಯನ್ನು ,ಸುಮುಖತೆಯನ್ನು , ಪ್ರಕೃತಿ - ವಿಕೃತಿಗಳನ್ನು ದಿವ್ಯಸಾನ್ನಿಧ್ಯವನ್ನು ಗುರುತಿಸಿರುವುದು ಅಚ್ಚರಿಯ ಸಂಗತಿ . ಹೊಟ್ಟೆಗೆ ಬಿಗಿದುಕೊಂಡದ್ದು ಸರ್ಪ . ವಾಹನವಾಗಿ ಇಲಿ . ಇಲಿಯನ್ನು ಕಂಡ ಸರ್ಪ ಬೆನ್ನಟ್ಟಿ ಬೇಟೆಯಾಡುವುದು ಲೋಕರೂಢಿ. ಆದರೆ ಅಸಂಬದ್ಧ ಎನಿಸಿದರೂ ಈ ವಿನಾಯಕನ ಪ್ರತಿಮೆಯಲ್ಲಿ ಜಾತಿವೈರಗಳೇ ಇಲ್ಲ .ಅಸಂಗತಗಳೇ ಸುಸಂಗತಗಳಾಗುವ ಪರಿಷ್ಕಾರ ಗಣಪತಿಯ ಬಿಂಬದಲ್ಲಿ ಸ್ಪಷ್ಟ. ಮಾನವ ದೇಹ ,ಆನೆಯ ತಲೆ ಇದು‌ ಒಂದು ರೀತಿಯ ಅಸಂಭವ . ಇಂತಹ ಬೇರೆ ದೇವರುಗಳೂ ನಮ್ಮಲ್ಲಿದ್ದಾರೆ .ಬೇಟೆ ಸಂಸ್ಕೃತಿಯ ಪ್ರತೀಕವಾಗಿ ಆನೆ ಎನ್ನುತ್ತಾ ಆದಿಮದ ಕಲ್ಪನೆಯಿಂದ ಗಜಾನನ ರೂಪವನ್ನು ಸಮರ್ಥಿಸಿದರೆ ಆತ ಬೇಟೆಯಿಂದ ಕೃಷಿ ಸಂಸ್ಕೃತಿಯವರೆಗೂ ತನ್ನ ಹರವನ್ನು ವಿಸ್ತರಿಸಿಕೊಳ್ಳುತ್ತಾನೆ . ಜನಪದರೊಂದಿಗೆ ಸ್ಥಾನ ಪಡೆಯುತ್ತಾನೆ .ಮಕ್ಕಳಿಂದ ವೃದ್ಧರವರೆಗೆ ಹೇಗೆ ತನ್ನ ಛಾಪನ್ನು ಒತ್ತಿ ಪ್ರಿಯನಾಗುತ್ತಾನೆಯೋ ಅಂತೆಯೇ ಸಮಷ್ಟಿಯಲ್ಲಿ ಅದ್ಭುತ ಜನಪ್ರಿಯತೆವುಳ್ಳ ದೇವರಾಗುತ್ತಾನೆ . ಈ ಮಂಗಳಮೂರ್ತಿಯ ಪೂಜೆಯ ಅಥವಾ ಉಪಾಸನಾ ಅವಧಿಯಲ್ಲಿ ಆತ್ಮೀಯನಾಗುತ್ತಾ ಗಾಢವಾಗಿ ನಮ್ಮನ್ನು ಅಂದರೆ ಆರಾಧಕರನ್ನು ಆವರಿಸುತ್ತಾನೆ .ಈಗ ಹೇಳಿ ,ಈ ಮೂರ್ತಿ ನಿರ್ಣಯದಲ್ಲಿ ಅಸಂಗತವಿದೆಯೇ ? ಎಂತಹ ದುಷ್ಟ ಮರ್ದನದಲ್ಲೂ ಬಳಸಬಹುದಾದ ಪ್ರಖರವಾದ ಆಯುಧ‌‌ ಧರಿಸಿದ್ದರೂ ಗಣಪತಿ ಮೂರ್ತಿ ಪರಿಪೂರ್ಣವಾಗಬೇಕಿದ್ದರೆ ಒಂದು ಕೈಯಲ್ಲಿ ಮೋದಕ ಇರಲೇ ಬೇಕು .ಇಲ್ಲಿಯೂ ಆಯುಧ - ಆಹಾರದ ಸಾಂಗತ್ಯ ಅಚ್ಚರಿ ಮೂಡಿಸುವಂತಹದ್ದೆ . ಗಾಣಪತೇಯರು ,ಆಧ್ಯಾತ್ಮಿಕ ಚಿಂತಕರು , ವೈದಿಕ ವಿದ್ವಾಂಸರು ಗಣಪನನ್ನು ಪ್ರಣವ ಸ್ವರೂಪನೆಂದೇ ಕೊಂಡಾಡಿದರು . ಮಣ್ಣಿನಿಂದ ತೊಡಗಿ ಬಾನೆತ್ತರಕ್ಕೆ ಹರಡಿಕೊಳ್ಳಬಲ್ಲ ವಿಸ್ತೃತ ವ್ಯಾಖ್ಯಾನ ನೀಡುತ್ತಾ ವಿರಾಟ್ ಗಣಪನನ್ನು ನಮ್ಮ ಮುಂದಿರಿಸಿದರು. ಹೀಗೆ ಗಣಪತಿ ಬಹುಪ್ರೀತ , ಬಹುಮಾನ್ಯ .ಕಿವಿ , ಹೊಟ್ಟೆಗಳ ವೈಶಾಲ್ಯದಲ್ಲಿ ಪ್ರಪಂಚ ವಿಶಾಲತೆಯನ್ನು ಪ್ರಕಟಿಸುತ್ತಾ ಈ ಕಾಲದ ದ್ವಂದ್ವ ಹಾಗೂ ವಿರೋಧಾಭಾಸದ ಪ್ರಾಪಂಚಿಕ ವ್ಯವಹಾರಗಳಿಗೆ ಉತ್ತರ ನೀಡುತ್ತಾನೆ. ವಿಲಕ್ಷಣ ತಾಯಿ - ಮಗ
ಸ್ತ್ರೀ ತನ್ನ ಬಯಕೆಯನ್ನು ಪುರುಷಾವಲಂಬನೆ ಇಲ್ಲದೆ ನೆರವೇರಿಸಿಕೊಳ್ಳುತ್ತಾಳೆ , ಮಗುವನ್ನು ಪಡೆಯುತ್ತಾಳೆ .ಇದನ್ನು ಗಮನಿಸಿದ ಪುರುಷ ಸಿಟ್ಟಾಗುತ್ತಾನೆ .ಅಸೂಯೆಗೊಳ್ಳುತ್ತಾನೆ . ಚಿತ್ತಸ್ವಾಸ್ಥ್ಯ ಕಳೆದುಕೊಳ್ಳುತ್ತಾನೆ .ಜನಿಸಿದ ಮಗು - ಪುರುಷ ಸಂಘರ್ಷವೇರ್ಪಡುತ್ತದೆ . ಆದರೆ ಪ್ರಕರಣ ಸುಖಾಂತ್ಯವಾಗುತ್ತದೆ . ಕತ್ತರಿಸಲ್ಪಟ್ಟ ತಲೆಗೆ ಆನೆಯ ಮುಖ ಜೋಡಿಸಿ ಮಗು ಗಜಾನನನಾಗುತ್ತಾನೆ.
ಸ್ತ್ರೀಯ ನಿರ್ಬಂಧಕ್ಕೆ ಪುರುಷನು ಮಗುವನ್ನು ಒಪ್ಪಿಕೊಳ್ಳುತ್ತಾನೆ .ಇದು ಅನಿವಾರ್ಯವಾಗಿ ಅಲ್ಲ , ಪ್ರೀತಿಪೂರ್ವಕವಾಗಿ . ನಿಗ್ರಹಿಸಲ್ಪಟ್ಟರೂ ಶಿವನ ಪ್ರಸನ್ನತೆಗೆ ಪ್ರಕೃತಿ ಕಾರಣವಾಗಿ ಗಣಪ ಏರಿದ ಎತ್ತರ ,ಪಡೆದ ಸ್ಥಾನಮಾನ ಪುರಾಣಗಳೇ ವಿವರಿಸುವಂತೆ ಅದು ವಿಸ್ತಾರವಾದುದು .
ಎಷ್ಟೇ ಮುನಿದರೂ ಕೊನೆಗೊಮ್ಮೆ ಪ್ರಕೃತಿಯನ್ನು ಪುರುಷ ಸಮೀಪಿಸಲೇ ಬೇಕಾಗುತ್ತದೆ ,ಅನುಗ್ರಹಿಸುವುದು ಅನಿವಾರ್ಯವಾಗುತ್ತದೆ .ಈ ಪ್ರಪಂಚ ನಿಯಮ‌ ಗಣೇಶನ ಜನನದಲ್ಲಿ‌ ಸಹಜವಾಗಿ ಅನಾವರಣಗೊಳ್ಳುತ್ತದೆ .
ಪ್ರಕೃತಿಯ ನಿರೀಕ್ಷೆ ಮತ್ತು ಸಿದ್ಧತೆ‌ಯ ಸಂಕೇತವಾಗಿ ಗೌರಿ ಮೈಯ ಮಣ್ಣನ್ನು ಆಕೆ ತೆಗೆಯುವುದು ಮತ್ತು ಸ್ನಾನಕ್ಕೆ ಹೊರಡುವುದು. ಈ ನಡುವೆ ಮೈಯ ಮಣ್ಣಿಗೆ ರೂಪು ನೀಡಿ - ಜೀವ ಕೊಡುವುದು ಮತ್ತೆ ಪರಿಶುದ್ಧಳಾದುದನ್ನು ದೃಢೀಕರಿಸುತ್ತದೆ . ಪುರುಷ ಪ್ರವೇಶ ಪ್ರಕೃತಿಯ ನಿರೀಕ್ಷೆಯಂತೆಯೇ ಆದರೆ 'ಅಕಾಲ'ದಲ್ಲಿ ಆಗುತ್ತದೆ. ಸಮಾಗಮಕ್ಕೆ ತೊಡಕಾಗುವ ಮೈಯ ಮಣ್ಣು ಪ್ರತಿಮೆಯಾಗಿ ರೂಪು ಪಡೆದು ತಡೆಯುತ್ತದೆ .ಈ ಘಟನೆ ಭೂಮಿ - ಆಕಾಶ ಸಂಬಂಧವನ್ನು ನಿರೂಪಿಸುತ್ತಾ ವಿಶಾಲತೆಯನ್ನು ಒದಗಿಸಿ ಕೃಷಿ ಸಂಸ್ಕೃತಿಯ ಹುಟ್ಟು-ಬೆಳವಣಿಗೆಯನ್ನು ಮತ್ತು ಕೃಷಿ ಆಧರಿತ ಮಾನವ ಬದುಕನ್ನು ತೆರೆದಿಡುತ್ತದೆ . ಬೇಟೆಯೇ ಜೀವನಾಧಾರವಾಗಿದ್ದ ಕಾಲದಲ್ಲಿ ಮಾನವ ಬದುಕಿನ‌ ವಿವಿಧ ಹಂತಗಳಲ್ಲಿ ಭಿನ್ನ ಪರಿಕಲ್ಪನೆ ಅನುಸಂಧಾನದೊಂದಿಗೆ ಸಾಗಿ ಬಂದ ಗಣಪತಿ ಆರಾಧನೆ ಈ ಕಾಲಘಟ್ಟದಲ್ಲಿ ಈ ವಿಧಾನದಲ್ಲಿ ವಿಜೃಂಭಿಸುತ್ತಿದೆ .ಇತಿಹಾಸ ಕಾಲದಲ್ಲೂ ಗಣಪತಿ ಇಲಿ ರಹಿತನಾಗಿಯೇ ಮೊತ್ತಮೊದಲು ಕಾಣಸಿಗುತ್ತಾನೆ .ಅನಂತರ ಇಲಿಯ ಸಾಂಗತ್ಯ ಸಿಗುತ್ತದೆ . ಆದರೆ ಕೃಷಿಯೇ ಪ್ರಧಾನವಾದಾಗ ಗಣಪ ಬಹುವಾಗಿ ಪೂಜಿಸಲ್ಪಡುತ್ತಾನೆ .ಆಕರ್ಷಕ ಪ್ರತಿಮಾ ಲಕ್ಷಣಗಳ ವೈವಿಧ್ಯಮಯ ಗಣಪತಿ ಶಿಲಾಶಿಲ್ಪಗಳಲ್ಲಿ - ದಾರುಶಿಲ್ಪಗಳಲ್ಲಿ ಲಭ್ಯ. "ಸಾರ್ಪತ್ಯ ಆವೊಂದಿಪ್ಪೊಡು"
• ಜನಪದರ ಹೆಣ್ಣು ಮೈಸಗೆಯನ್ನು‌ ಶಿವ ಪ್ರೀತಿಸುವುದು .ತಾವರೆ ಹೂವಾಗುವುದು . ಗುಟ್ಟಿನಲ್ಲಿ ಜೊತೆಯಾಗುವುದು . ಮುಂದುವರಿಯುವ ಕತೆಯಲ್ಲಿ ಭಾಮಕುಮಾರನ ಜನನ .ಈತ ಗಜಮುಖನಾಗುವುದು ಪಾರ್ವತಿ ಮಗುವನ್ನು ಸಾಕುವುದು . ಪಾರ್ವತಿ ಸಹಜವಾಗಿ ಮೈಸಗೆಯನ್ನು ಸ್ವೀಕರಿಸುವುದು .ಪ್ರತಿ ಮನೆಯಲ್ಲೂ ಗಣಪತಿ ಪೂಜೆ ನಡೆಯಬೇಕು . ಅಲ್ಲೆಲ್ಲ ಗಣಪತಿ "ಸಾರ್ಪತ್ಯ ಆವೊಂದಿಪ್ಪೊಡು" ಎಂಬುದು ಶಿವನ ವರ . ಇದು ಭಾಮಕುಮಾರ ಸಂಧಿಯಲ್ಲಿ ಬರುವ ಕತೆ .
ಗಣಪನ ಹೊಟ್ಟೆ
• ಕಣಜ , ಕಣಜಕ್ಕೆ ಸುತ್ತುವ ಹಗ್ಗ ( ಪೆರ್ಮರಿ) ಇವು ಗಣಪತಿಯ ಹೊಟ್ಟೆ ಮತ್ತು ಹೊಟ್ಟೆಗೆ ಸುತ್ತಿದ ಸರ್ಪವನ್ನು ಸಾಂಕೇತಿಸುತ್ತವೆ . ಅಕ್ಕಿ - ಭತ್ತಕ್ಕೆ ಹಾಗೂ ಇತರ ಬೆಳೆಗಳಿಗೆ ಇಲಿಕಾಟ ಸಹಜ ( ಅರಿಬಾರ್ ಇತ್ತಿನಲ್ಪ ಎಲಿ ಪೆರ್ಗುಡೆ ಕಡಮೆನಾ ) . ಇಂತಹ ಆಹಾರದ ರಕ್ಷಣೆಗಾಗಿ ಸರ್ಪ(ಹಗ್ಗ). ಗಣಪನ ಹೊಟ್ಟೆ ಕೃಷಿ ಸಮೃದ್ಧಿಯ ದಾಸ್ತಾನು . ಹೇಗಿದೆ ಜನಪದರ ಕಲ್ಪನೆ .
ಬೆಣಚುಕಲ್ಲಿನ 'ಬೆನಕ'
• ಗಣಪತಿ ಬೇಟೆ ಸಂಸ್ಕೃತಿಯ ಪ್ರತಿನಿಧಿ‌ : ಗಣಪನ ಮೂರ್ತಿ ಶಿಲ್ಪದಲ್ಲೆ ಪಾಚೀನತೆಯನ್ನು ಗುರುತಿಸುವ ಸಂಶೋಧಕರು ಇವನ ಅಸ್ತಿತ್ವಕ್ಕೆ ಅಥವಾ ಕಲ್ಪನೆಗೆ ಬೇಟೆ ಸಂಸ್ಕೃತಿಯಷ್ಟು ಪಾಚೀನತೆಯನ್ನು ಅಥವಾ ಅದಕ್ಕಿಂತಲೂ ಪೂರ್ವದ ಜನಜೀವನದ ಕಾಲದವರೆಗೆ ಒಯ್ಯುತ್ತಾರೆ .ಬೇಟೆ , ಬೇಟೆಗೆ ಬಳಸುತ್ತಿದ್ದ ಬೆಣಚುಕಲ್ಲು ಪ್ರಧಾನ ಆಯುಧ . ಇಲ್ಲಿಂದಲೇ ಬೆಣಚುಕಲ್ಲಿನಿಂದ "ಬೆನಕ" ಎಂದು ಪೂಜಿಸುವ ವಿಧಾನ ರೂಢಿಗೆ ಬಂದಿರಬಹುದು . ಈ ಶೈಲಿಯ ಪೂಜೆ ಈಗಲೂ ರೂಢಿಯಲ್ಲಿವೆ .ವೈಭವದ ಮೂರ್ತಿಗಳ ಭವ್ಯತೆಯ ನೇಪಥ್ಯದಲ್ಲಿ ಈ ಬೆನಕನಿದ್ದಾನೆ . ಬೇಟೆಯ ಕಾಲಘಟ್ಟದಲ್ಲಿ ಆನೆಯ ಕಲ್ಪನೆ ಬಂದಿರಬಹುದು .
ಶ್ರಮ ಸಂಸ್ಕೃತಿ
• ಶ್ರಮ ಸಂಸ್ಕೃತಿಯ ಸಂಕೇತವಾಗಿ ಗಣಪತಿ ಗುರುತಿಸಲ್ಪಡುವುದಿದೆ .ಶ್ರಮದಿಂದ ಮೈಬೆವರುತ್ತೆ , ಇದೇ ಮೈಯ ಮಣ್ಣಿಗೆ ಕಾರಣವಾಗುತ್ತದೆ .ಪಾರ್ವತಿಯ ಮೈಯ ಮಣ್ಣಿನಿಂದ ಗಣಪನ ಸೃಷ್ಟಿ .ಮಣ್ಣಿನ ಮಗನ ಕಲ್ಪನೆ ಎಷ್ಟು ಸುಂದರ .ಕಪಿಲ ವರ್ಣ , ಕಾವಿಬಣ್ಣ , ಮಣ್ಣಿನ ಬಣ್ಣ ,ಧೂಮ್ರವರ್ಣ , ಕಪ್ಪು - ಕೆಂಪು ಬಣ್ಣಗಳ ಸಂಯುಕ್ತ ಇದೂ ಮಣ್ಣಿನ ಬಣ್ಣವೆ .ಇದು ವಿಘ್ನೇಶನ ಮೈ ಬಣ್ಣ . ಕೃಷಿ ಸಂಸ್ಕೃತಿ: "ಸೆಗಣಿಯ ಗಣಪಂಗೆ ಸಂಪಗೆಯರಳಲ್ಲಿ ಪೂಜಿಸಿದರೆ" ಭೂಮಿಯ ಫಲವತ್ತತೆಗಾಗಿ ಸೆಗಣಿ - ಕೃಷಿಗೆ ಪೂರಕವಾಗಿ ಒದಗಿದ ಪಶುಪಾಲನೆ. ಸೆಗಣಿಗೆ ಹಸಿರು ಗರಿಕೆಯನ್ನು ಇಟ್ಟು ಪೂಜಿಸುವ ಗಣಪತಿಯ ಕಲ್ಪನೆಯೊಂದಿದೆ . ಕಬ್ಬು ಪ್ರಧಾನವಾಗಿ ಆನೆಮುಖ ಹೊಂದಿರುವ ಸ್ವರೂಪದ ಆರಾಧನೆ . ಇವು ಜನಪದರ ಚಿಂತನೆಗಳು . (ಓದಿದ್ದು)
ಬರಹ :ಕೆ.ಎಲ್.ಕುಂಡಂತಾಯ

ಬಂಟಕಲ್ಲು - ಕೊಂಕಣಿ ಮಾನ್ಯತಾ ದಿನಾಚರಣೆ

Thumbnail
Posted On: 20 Aug 2020, 08:09 PM

ಕೊಂಕಣಿ ಬಾಷೆಯನ್ನು 1992 ರ ಅಗೋಷ್ಟ್ 20 ರಂದು ಸಂವಿಧಾನದ 8 ನೇ ಪರಿಚ್ಚೇದಕ್ಕೆ ಸೇರಿಸಲಾಯಿತು. ಕೊಂಕಣಿ ಬಾಷೆಗೆ ಸಂವಿಧಾನಿಕ ಸ್ಥಾನ ಮಾನ ಸಿಕ್ಕಿದ ಈ ದಿನವನ್ನು ಕೊಂಕಣಿ ಮಾನ್ಯತಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬಂಟಕಲ್ಲು ರಾಜಾಪುರ ಸಾರಸ್ವತ ಯುವ ವೃಂದದ ಆಶ್ರಯದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆಯನ್ನು ಬಂಟಕಲ್ಲು ದೇವಸ್ಥಾನದ ವಠಾರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಶೈಕ್ಷಣಿಕ, ತಾಂತ್ರಿಕ, ಸಮಾಜಿಕವಾಗಿ ಸೇವೆ ನೀಡುತ್ತಿರುವ ಕಟಪಾಡಿ ಶ್ರೀ ಸತ್ಯೇಂದ್ರ ಪೈ ಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕೊಂಕಣಿ ಬಾಷೆಯ ವಿಶೇಷತೆ ಬಗ್ಗೆ ತಿಳಿಸಿ ನಮ್ಮ ಬಾಷೆಯ ಬಗ್ಗೆ ಅಭಿಮಾನ ಹೊಂದಿ ಬಾಷೆಯ ಉಳಿವಿಗೆ ಎಲ್ಲರೂ ಪ್ರಯತ್ನಿಸಬೇಕು, ಕೊಂಕಣಿ ಬಾಷೆಯ ಇತಿಹಾಸವನ್ನು ಎಲ್ಲರೂ ತಿಳಿಯುವಂತಾಗಬೇಕು.ಇದರ ಇತಿಹಾಸವನ್ನು ದಾಖಲಿಸಿಕೊಳ್ಳುವ ಕಾರ್ಯ ಆಗಲಿ ಎಂದರು. ಚಲನ ಚಿತ್ರ, ಅಥವಾ ಧಾರವಾಹಿಯ ಮೂಲಕ ಇತಿಹಾಸ ದಾಖಲಿಸುವಂತಾಗಲಿ ಎಂದರು ...
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಪ್ರೀತಿ ನಾವೆಲ್ಕರ್ ಬಂಟಕಲ್ಲು ಇವರಿಗೆ ಕೊಂಕಣಿ ಮಾನ್ಯತಾ ದಿವಸ್ನ ಗೌರವ ಪ್ರಧಾನ ಮಾಡಲಾಯಿತು. ಇವರನ್ನು ಬಂಟಕಲ್ಲು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ಜಯರಾಮ ಪ್ರಭು ಗಂಪದಬೈಲು ಇವರು ಶಾಲು ಹೊದಿಸಿ ಸನ್ಮಾನಿಸಿದರು.
ಕಾರ್ಯಕ್ರಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ಈ ಕಾರ್ಯಕ್ರಮವು ಪ್ರತೀವರ್ಷ ನಡೆಯುವಂತಾಗಲಿ ಎಂದು ಹಾರೈಸಿದರು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯರೂ , ಮಂಗಳೂರು ವಿ.ವಿಯ ಕೊಂಕಣಿ ಅಧ್ಯಾಯನ ಪೀಠದ ದ ಸದಸ್ಯರು ಆಗಿರುವ ಶ್ರೀ ಪುಂಡಲೀಕ ಮರಾಠೆಯವರು ಪ್ರದಾನ ಬಾಷಣ ಮಾಡಿದರು. ಕೊಂಕಣಿ ಮಾನ್ಯತಾ ದಿವಸದ ಮಹತ್ವ, ಅಕಾಡಮಿಯಿಂದ ಸಿಗುವ ಸಹಾಯಗಳು, ಬಾಷೆ ನಡೆದು ಬಂದ ದಾರಿ ಹಾಗೂ ಅಕಾಡಮಿ ಯ ವಿಚಾರಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ, ಬರಹಗಾರ ಶ್ರೀ ರಾಘವೇಂದ್ರ ಪ್ರಭು ಕರ್ವಾಲು, ಶಿರ್ವ ಸಂತ ಮೇರಿ ಕಾಲೇಜಿನ ಉಪನ್ಯಾಸಕ ಶ್ರೀ ವಿಠಲ ನಾಯಕ್, ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಶ್ರೀ ಉಮೇಶ್ ಪ್ರಭು,ಯುವ ವೃಂದದ ಸದಸ್ಯರು, ಸಮಾಜ ಭಾಂಧವರು ಉಪಸ್ಥಿತರಿದ್ದರು.
.ಯುವ ವೃಂದದ ಗೌರವಾಧ್ರಕ್ಷ ಶ್ರೀ ಕೆ ಆರ್ ಪಾಟ್ಕರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು.
ಯುವ ವೃಂದದ ಅಧ್ಯಕ್ಷ ಶ್ರೀ ವಿಶ್ವನಾಥ ಬಾಂದೇಲ್ಕರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯದರ್ಶಿ ಶ್ರೀ ಆಶಿಷ್ ಪಾಟ್ಕರ್ ಧನ್ಯವಾದ ನೀಡಿದರು. ಯುವ ವೃಂದದ ಜೊತೆಕಾರ್ಯದರ್ಶಿ ಪ್ರಾರ್ಥಿಸಿ, ಕುಮಾರಿ ರಚಿತಾ ಪಾಟ್ಕರ್ ರವರು ಕಾರ್ಯಕ್ರಮ ನಿರ್ವಹಿಸಿದರು.

ಬಿರುವೆರ್ ಕಾಪು ಸೇವಾ ಟ್ರಸ್ಟ್ 2020ನೇ ಸಾಲಿನ ವಿದ್ಯಾರ್ಥಿ ವೇತನ ಅರ್ಜಿ ಅಹ್ವಾನ

Thumbnail
Posted On: 18 Aug 2020, 10:21 AM

ಕಾಪು ತಾಲೂಕಿನಲ್ಲಿ ಎರಡನೇ ಬಾರಿಗೆ ಬಿರುವೆರ್ ಕಾಪು ಸೇವಾ ಟ್ರಸ್ಟ್ ಇದರ ವತಿಯಿಂದ ಕಾಪು ತಾಲೂಕಿನ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ *ಜ್ಞಾನ ದೀವಿಗೆ 2020* ಎಂಬ ಯೋಜನೆಯಲ್ಲಿ ವಿದ್ಯಾರ್ಥಿ ವೇತನ ನೀಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಆರ್ಥಿಕವಾಗಿ ಹಿಂದುಳಿದಿದ್ದು ಹಿಂದಿನ ತರಗತಿಯಲ್ಲಿ ಕಲಿಕೆಯಲ್ಲಿ ಶೇಕಡಾ 85% ಗಿಂತ ಹೆಚ್ಚು ಅಂಕಗಳಿಸಿದ್ದರೆ ಆತನು ಅಥವಾ ಆಕೆಯು *ಜ್ಞಾನ ದೀವಿಗೆ 2020* ಯೋಜನೆಯ ಫಲಾನುಭವಿಯಾಗಬಹುದು (ವಿ.ಸೂ : ಬಿರುವೆರ್ ಕಾಪು ಸೇವಾ ಟ್ರಸ್ಟ್ ಪರಿಶೀಲಿಸಿದ ಅರ್ಜಿಯಲ್ಲಿ ಯೋಜನೆಗೆ ಅರ್ಹರಾದವರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.. ) ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು 1. 2020 ನೇ ಸಾಲಿನ SSLC ಮತ್ತು 2nd PUC ಪಾಸಾದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. 2. ಹಿಂದಿನ ತರಗತಿಯಲ್ಲಿ ಶೇಕಡಾ 85% ಅಂಕ ಪಡೆದಿರಬೇಕು. 3. ವಿದ್ಯಾರ್ಥಿವೇತನ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ತಮ್ಮ ಹಿಂದಿನ ಪರೀಕ್ಷೆಯ ಮಾರ್ಕ್ ಕಾರ್ಡ್ ಲಗತ್ತೀಕರಿಸಿ, ಈ ಕೆಳಗೆ ತಿಳಿಸಿರುವ ವಿಳಾಸಕ್ಕೆ ವಿದ್ಯಾರ್ಥಿಯೇ ಸ್ವತಃ ಅರ್ಜಿ ಸಲ್ಲಿಸಬೇಕು. 4. ಅರ್ಜಿಯೊಂದಿಗೆ ವಿದ್ಯಾರ್ಥಿಯ ಒಂದು ಫೋಟೊ ಲಗತ್ತಿಸಿರಬೇಕು ಮತ್ತು ಮೊಬೈಲ್ ನಂಬರ್ ನಮೂದಿಸಿರಬೇಕು. 5. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 10/ 09/2020 6. ಅರ್ಜಿಯನ್ನು ಬಿರುವೆರ್ ಕಾಪು ಸೇವಾ ಟ್ರಸ್ಟ್ ಗೆ ಬರೆದಿರಬೇಕು ಮತ್ತು ಕೆಳಗೆ ಬರೆದ ವಿಳಾಸವನ್ನು ನಮೂದಿಸರಬೇಕು. ಅರ್ಜಿ ಸಲ್ಲಿಸುವ ವಿಳಾಸ (ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮುಖಾಂತರವೇ ಸಲ್ಲಿಸಬೇಕು)
Anil amin kaup
City travels & tours
Janardhana complex
Main road kaup
Near trupthi hotel - 574106
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಕಾರ್ತಿಕ್ ಅಮಿನ್ : 74833 45138 ಸುಧಾಕರ್ ಸಾಲ್ಯಾನ್:9901329819

ಆನ್ ಲೈನ್‌ ಜೂಜಿಗೆ ತೀಲಾಂಜಲಿ ಹಾಕಬೇಕಾಗಿದೆ

Thumbnail
Posted On: 18 Aug 2020, 08:51 AM

ದಿನ ಬೆಳಗಾದರೆ ಸಾಕು ಮೊಬೈಲ್ನಲ್ಲಿ ಸಾಮಾಜಿಕ ಜಾಲತಾಣ ನೋಡಿದಾಗ ನಮಗೆ ನೋಡಲು ಸಿಗುವುದು ರಮ್ಮಿ ಆಡಿ ಕ್ಯಾಶ್ ಗೆಲ್ಲಿ ಇಂತಹ ಹಾದಿ ತಪ್ಪಿಸುವಂತಹ ಮೆಸೇಜ್ ಗಳು ಮತ್ತು ಜಾಹೀರಾತುಗಳು,ಇದನ್ನು ನೋಡಿದವರು ತಪ್ಪಿಯೂ ಹಣ ಕೊಟ್ಟು ಆಡಿದರೆ ನಿಮ್ಮ ಕಥೆ ಮುಗಿಯಿತು ಕಾರಣ ಈ ಜೂಜು ನಿಮ್ಮ ಮನೆಹಾಳು ಮಾಡುವುದು ಖಂಡಿತ.ಈ ರಮ್ಮಿ ರೀತಿಯ ಆನ್ ಲೈನ್ ಗೇಮ್ಸ್ ಗಳು ಇಂದು ದೇಶದೆಲ್ಲೆಡೆ ವ್ಯಾಪಕವಾಗಿ ಹರಡಿದೆ,ಇದರಿಂದ ಬಹಳಷ್ಟು ಜನರು ಸಂಕಷ್ಟ ಅನುಭವಿಸಿದ್ದಾರೆ. ಅನೇಕರು ತಾವು ಉಳಿತಾಯ ಮಾಡಿದ ಹಣವನ್ನು ಕಳೆದುಕೊಂಡು, ಈ ಜೂಜು ಆಡಲು ಬೇರೆಯವರ ಬಳಿ ಸಾಲ ಮಾಡಿಕೊಂಡು ಆ ಸಾಲ ತೀರಿಸಲು ಸಾಧ್ಯವಾಗದೆ ಕೊನೆಗೆ ನೇಣಿಗೆ ಶರಣಾಗುತ್ತಿದ್ದಾರೆ.ಅದೇ ರೀತಿ ಅನೇಕ ಮಂದಿ ತಮ್ಮ ಮನೆ, ಆಸ್ತಿ-ಪಾಸ್ತಿ ಮಾರುತ್ತಿರುವುದು ನಮಗೆ ಕಾಣಸಿಗುತ್ತದೆ. ಅಂದಾಜು ಸುಮಾರು 2 ಸಾವಿರಕ್ಕೂ ಅಧಿಕ ವೆಬ್ಸೈಟ್ಗಳು ಭಾರತದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ ಪ್ರೋತ್ಸಾಹ ನೀಡುತ್ತಿವೆ. ಈ ರೀತಿಯ ಜೂಜು ಆಡಲು ಜಾಹೀರಾತು ನೀಡುವ ವವರು ಪ್ರಖ್ಯಾತ ಚಲನಚಿತ್ರ ನಟರು ಅದೇ ರೀತಿ ಕ್ರಿಕೇಟ್ ಆಟಗಾರರಾಗಿರುವುದು ದುರಂತದ ವಿಷಯ. ಈ ರೀತಿಯ ಜೂಜು ಯುವ ಜನರ ಮೇಲೆ ಎಷ್ಟು ಪರಿಣಾಮ ಬೀರಿದೆ ಎಂದರೆ ಈ ಘಟನೆಯೇ ಸಾಕ್ಷಿಯಾಗಿದೆ. ಚೈನ್ನೈ ನಗರದಲ್ಲಿ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ವ್ಯಕ್ತಿ ಒನ್ಲೈನ್ ಜೂಜಿನ ಮಾಯಾಜಾಲಕ್ಕೆ ಬಿದ್ದು,ಯಾರೋ ಕಸ್ಟಮರ್ ಕೊಟ್ಟಿದ್ದ ಬಂಗಾರವನ್ನು ಬೇರೆ ಅಂಗಡಿಯಲ್ಲಿ ಮಾರಿ ಅದನ್ನು ಒನ್ಲೈನ್ ಜೂಜಿಗೆ ಕಟ್ಟಿ ಅದರಲ್ಲಿ ತನ್ನೆಲ್ಲಾ ಹಣವನ್ನು ಕಳೆದುಕೊಂಡು ಕೊನೆಗೆ ಸಮಾಜದದಲ್ಲಿ ಮಯಾ೯ದೆಗೆ ಹೆದರಿ ರೈಲಿಗೆ ತಲೆ ಕೊಟ್ಟು ತನ್ನ ಜೀವನ ತ್ಯಜಿಸಿರುತ್ತಾನೆ. ಆಂಧ್ರಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಅನೇಕರು ಆನ್ಲೈನ್ ಜೂಜಿಗೆ ಸಿಲುಕಿ ನೇಣು ಬಿಗಿದುಕೊಂಡವರ ಕಥೆಯನ್ನು ನಾವು ಪತ್ರಿಕೆಗಳಲ್ಲಿ ಓದಿದ್ದೇವೆ. ಈ ಜೂಜಿನ ವಿಷಯದ ಕುರಿತು ಇದರ ಆಳಕ್ಕೆ ಹೋದರೆ ಅನೇಕ ರೀತಿಯ ದಂತ ಕಥೆಗಳನ್ನು ನಾವು ನೋಡಬಹುದು. ಈ ಜೂಜಿಗೆ ಇನ್ನೆಷ್ಟು ಯುವಕರು ಬಲಿ ತೆಗೆದುಕೊಳ್ಳಬೇಕೋ ತಿಳಿಯದು. ನಾವು ನಮ್ಮ ಮಕ್ಕಳಿಗೆ ಮೊಬೈಲ್ ಕೊಡುವಾಗ ಎಷ್ಟು ಎಚ್ಚರವಹಿಸಬೇಕಾಗಿದೆ.,ಆಗಾಗ ಮಕ್ಕಳ ಮೊಬೈಲ್ ಅನ್ನು ನೋಡುತ್ತಾ ಇರಬೇಕಾದ ಪರಿಸ್ಥಿತಿ ಇದೆ.ಈಗ ಎಲ್ಲ ಕಡೆ ಆನ್ ಲೈನ್ ತರಗತಿ ನಡೆಯುವ ಸಂದಭ೯ದಲ್ಲಿ ಮಕ್ಕಳು ಈ ರೀತಿಯ ಅನ್ ಲೈನ್ ಜೂಜಿನ ಖೆಡ್ಡಕ್ಕೆ ಬೀಳುವ ಸಂದಭ೯ವಿದೆ ಹೀಗಾಗಿ ಪೋಷಕರು ಈ ಬಗ್ಗೆ ಗಮನ ಹರಿಸಬೇಕಾದ ಸ್ಥಿತಿಯಿದೆ. ಈ ಒನ್ಲೈನ್ ಗ್ಯಾಬ್ಲಿಂಗ್ ಎನ್ನುವುದು ವಯಸ್ಕರು, ಮುಖ್ಯವಾಗಿ ಯುವ ಜನಾಂಗ ಮತ್ತು ಓದುತ್ತಿರುವ ಮಕ್ಕಳಲ್ಲಿ ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದೆ, ಇದರಿಂದ ಅನೇಕ ಮಕ್ಕಳು ಯುವಕರು ಹಣದ ಆಸೆಗಾಗಿ ಅಡ್ಡ ದಾರಿಯನ್ನು ತುಳಿಯುತ್ತಿದ್ದಾರೆ. ಪ್ರಸ್ತುತ ಸ್ಥಿತಿಯಲ್ಲಿ ಈ ರೀತಿಯ ಒನ್ಲೈನ್ ಗ್ಯಾಂಬ್ಲಿಂಗ್ ದೊಡ್ಡ ಮಾರಕವಾಗಿ ಮಾರ್ಪಾಡಾಗಿದೆ.ಇದರಿಂದ ಅನೇಕ ಕುಟುಂಬಗಳು ಬೀದಿಗೆ ಬೀಳುವ ಸ್ಥಿತಿಯಲ್ಲಿವೆ. ನಮ್ಮ ಅನೇಕ ಮಕ್ಕಳು ಮನೆಯಲ್ಲಿ ಪೋಷಕರ ಜೊತೆಗೆ ಕುಳಿತು ತಮ್ಮ ಸಂತೋಷದ ಸಮಯವನ್ನು ಸವಿಯುವುದನ್ನ ಬಿಟ್ಟು ಮೊಬೈಲ್ ನಲ್ಲಿ ಒನ್ಲೈನ್ ಗ್ಯಾಬ್ಲಿಂಗ್ ಆಡುತ್ತಾ ತಮ್ಮ ಉತ್ತಮ ಸಮಯವನ್ನು ಹಾಳು ಮಾಡುದನ್ನು ನೋಡಿದಾಗ ಮನ ಕರಗುತ್ತದೆ.ಅಪ್ಪ- ಅಮ್ಮಾ ಕಷ್ಟ ಪಟ್ಟು ಕೂಲಿ-ನಾಲಿ ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕೂಡಿಟ್ಟ ಹಣವನ್ನು ನೀರಲ್ಲಿ ಹೋಮಮಾಡಿದಂತೆ ಖಚು೯ ಮಾಡುತ್ತಿದ್ದಾರೆ. ತಮ್ಮ ಪಾಲಕರಿಗೆ ಸಮಾಜದಲ್ಲಿ ಇರುವ ಗೌರವ,ಘನತೆ ಮತ್ತು ಮರ್ಯಾದೆಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ನಮ್ಮ ಸಮಾಜಕ್ಕೂ ಒಂದು ಕಪ್ಪು ಚುಕ್ಕೆಯಾಗಿ ಪರಿಣಮಿಸಿದ್ದಾರೆ. ನಮ್ಮ ಯುವ ಸಮೂಹಕ್ಕೆ ಚಲನಚಿತ್ರದಲ್ಲಿ ಅಥವಾ ಆಟದಲ್ಲಿ ಹೀರೋಗಳಾಗಿರುವವರು ಜನರಿಗೆ ಬುದ್ದಿ ಹೇಳುವುದನ್ನು ಬಿಟ್ಟು,ಸೆಲೆಬ್ರಿಟಿಗಳೇ ಒನ್ಲೈನ್ ಗ್ಯಾಂಬಿಂಗ್ ಗೆ ಪ್ರಚೋದನೆಯನ್ನು ನೀಡುತ್ತಿದ್ದಾರೆ,ಮತ್ತು ಅನೇಕರು ಅಡ್ಡ ದಾರಿಯನ್ನು ತುಳಿಯುವುದಕ್ಕೆ ಇವರುಗಳೇ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಕಾರಣೀಕರ್ತರಾಗಿದ್ದಾರೆ. ಸಕಾ೯ರದ ಮಧ್ಯಪ್ರದೇಶ ಬೇಕಾಗಿದೆ: ಸರ್ಕಾರವು ಇದರ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ನಮ್ಮ ಹಳ್ಳಿಯಲ್ಲಿ ಕೇಳಿ ಅಂಕ ಅದೇ ರೀತಿ ಎಕ್ಕ ರಾಜ ಆಟ ಆಡಿದರೆ ಪೋಲಿಸರು ನಿದಾ೯ಕ್ಷಿಣ್ಯವಾಗಿ ಕೇಸು ದಾಖಲಿಸಿ ಜೈಲಿಗೆ ಹಾಕುತ್ತಾರೆ. ಆದರೆ ಈ ರೀತಿಯ ಆನ್ ಲೈನ್ ಜೂಜಿಗೆ ಯಾವ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ. ಮಾಹಿತಿಯ ಪ್ರಕಾರ ನಮ್ಮ ದೇಶದಲ್ಲಿ ಸಾವಿರಾರು ವೈಬ್ ಸೈಟ್ ಗಳು ಈ ರೀತಿಯ ಆನ್ ಲೈನ್ ಜೂಜಿನಿಂದ ಕೋಟ್ಯಾಂತರ ರೂಪಾಯಿ ವಹಿವಾಟು ಮಾಡುತ್ತಿದ್ದಾರೆ. ನಮ್ಮಯುವ ಪೀಳಿಗೆ ಇದಕ್ಕೆ ದಾಸರಾಗಿ ಬಿಟ್ಟಿದ್ದಾರೆ ಮತ್ತು ಯಾರ ಮಾತನ್ನು ಕೇಳುವ ಸ್ಥಿತಿಯಲ್ಲಿ ಇಲ್ಲ. ಸಕಾ೯ರ ಬೇಗನೇ ಈ ಪಿಡುಗಿನ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದರ ನಿಷೇಧಕ್ಕೆ ಶೀಘ್ರ ಕಾನೂನು ರೂಪಿಸಬೇಕು. ಸರ್ಕಾರ,ಸೆಲೆಬ್ರೆಟಿಗಳು, ಸಂಘ ಸಂಸ್ಥೆಗಳು ಎಲ್ಲರೂ ಕೈಜೋಡಿಸಿ ಒನ್ಲೈನ್ ಗ್ಯಾಂಬ್ಲಿಂಗ್ ಅನ್ನು ಸಮಾಜದಿಂದ ಬೇರು ಸಮೇತ ಕಿತ್ತೆಸೆಯಬೇಕಾಗಿದೆ. ಈ ಆನ್ಲೈನ್ ಗ್ಯಾoಬ್ ಲಿಂಗ್ ಬಗ್ಗೆ ಜನರು ಎಚ್ಚರವಹಿಸಬೇಕು ಹಣದ ಆಸೆಗೆ ಬಲಿಯಾಗಿ ಜೀವನ ಹಾಳು ಮಾಡಬಾರದು. ಈ ರೀತಿಯ ಅನ್ ಲೈನ್ ಗೇಮ್ಸ್ ಪ್ರಾರಂಭಿಸುವ ಮೊದಲು ಜನರನ್ನು ಸೇರಿಸಲು ವಾಟ್ಸ್ ಗ್ರೂಪ್ ರಚಿಸಿ ಗೂಗಲ್ ಪೇ ಮೂಲಕ ಪ್ರಾರಂಭಿಕ ಶುಲ್ಕ ಕಟ್ಟಲು ತಿಳಿಸಲಾಗುತ್ತದೆ ನಂತರ ಆಟ ಪ್ರಾರಂಭವಾದ ಬಳಿಕ ನೇರ ವಾಗಿ ಬ್ಯಾಂಕಿನ ಖಾತೆಯ ಮೂಲಕ ಹಣ ಹೋಗುತ್ತದೆ. ಒಂದು ಬಾರಿ ಆಟಕ್ಕೆ ಹೋದರೆ ಮತ್ತೆ ವಾಪಾಸು ಬರಲು ಕಷ್ಟ ಹೀಗಾಗಿ ತನ್ನ ಜೀವನವನ್ನು ಈ ಆಟದಲ್ಲಿ ಕಳೆದು ಹೋಗುತ್ತಾರೆ. ಈ ರೀತಿಯ ಜೂಜಿನ ಬಗ್ಗೆ ಜನಜಾಗೃತಿ ಮೂಡಿಸಲು ಯುವ ಜನಾಂಗದವರು ಮುಂದೆ ಬರುತ್ತಿರುವುದು ಅಭಿನಂದನೀಯ ವಿಷಯ. ಈಗಾಗಲೇ ಜನಪ್ರತಿನಿಧಿಗಳಿಗೆ ಈ ವಿಷಯ ತಿಳಿದಿದೆ ಎಲ್ಲರೂ ಪಕ್ಷ ಭೇಧ ಮರೆತು ಸಕಾ೯ರದ ಮೇಲೆ ಒತ್ತಡ ತರಬೇಕು. ಒಟ್ಟಾಗಿ ಈ ಆನ್ ಲೈನ್ ಜೂಜಿಗೆ ಪೂಣ೯ ವಿರಾಮ ಹಾಕಬೇಕಾಗಿದೆ. ರಾಘವೇಂದ್ರ ಪ್ರಭು, ಕವಾ೯ಲು, ಯುವ ಲೇಖಕ

ಮೂಕ ಪ್ರಾಣಿಗಳ ನೋವಿಗೆ ಮಿಡಿಯುತ್ತಿರುವ ಕಾಪು ತುಳುನಾಡ ಹಿಂದೂ ಸೇನೆ

Thumbnail
Posted On: 17 Aug 2020, 07:20 PM

ಕಳೆದ ಸ್ವಲ್ಪ ದಿನಗಳ ಹಿಂದೆಯಷ್ಟೇ ಸ್ಥಾಪನೆಯಾದ ತುಳುನಾಡ ಹಿಂದೂ ಸೇನೆ ಮೂಕ ಪ್ರಾಣಿಗಳ ನೋವಿಗೆ ಮಿಡಿಯುತ್ತಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.. ಇಂದು ಬೆಳಿಗ್ಗೆ ಕೊಪ್ಪಲಂಗಡಿ ಹೈವೇ ಸಮೀಪ ವಾಹನಕ್ಕೆ ಸಿಲುಕಿ ಗಾಯಾಳುವಾಗಿ ಬಿದ್ದಿದ್ದ ಗಿಡುಗವನ್ನು ತುಳುನಾಡ ಹಿಂದೂ ಸೇನೆಯ ಕಾರ್ಯಕರ್ತರಾದ ಶಿವಾನಂದ ಪೂಜಾರಿ (ಮುನ್ನ) ಪ್ರಶಾಂತ್ ಪೂಜಾರಿ ಕಾಪು, ಜೀವನ್ ಶೆಟ್ಟಿ ಮತ್ತು ಪ್ರಜ್ವಲ್ ಶೆಟ್ಟಿ ಪ್ರಥಮ ಚಿಕಿತ್ಸೆ ನೀಡಿ ಕಾಪು ಉಪವಿಭಾಗ ಅರಣ್ಯ ಇಲಾಖೆಗೆ ಹಸ್ತಾಂತರಿಸಿದರು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಹೋಗುತ್ತಿರುವ ಹಿಂದೂ ಸೇನೆಯ ಕಾರ್ಯಕರ್ತರು