Updated News From Kaup
ಕಾಪು ನಿಕಿಲ ಚಿಕನ್ ಸ್ಟಾಲ್ ಹೊಸ ಮಾರಿಗುಡಿ, ಬೀಚ್ ರೋಡ್ ಇಲ್ಲಿಗೆ ಸ್ಥಳಾಂತರಗೊಂಡಿರುತ್ತದೆ
Posted On: 10 Aug 2020, 02:46 PM
ಕಾಪು ಮೂರನೇ ಮಾರಿಗುಡಿ ಹತ್ತಿರದಲ್ಲಿ ಇದ್ದ ನಿಕಿಲ ಚಿಕನ್ ಸ್ಟಾಲ್ ಈಗ ಹೊಸಮಾರಿಗುಡಿ ಬಳಿ ಇರುವ ಬೀಚ್ ರೋಡ್ ಇಲ್ಲಿಗೆ ಸ್ಥಳಾಂತರಗೊಂಡಿರುತ್ತದೆ.. ಇಲ್ಲಿ ಬಾಯ್ಲರ್ , ಟೈಸನ್, ಊರಿನ ಕೋಳಿ, ಕೋಳಿ ಮಾಂಸ ಸಿಗುತ್ತದೆ ಜೊತೆಗೆ ಹೋಮ್ ಡೆಲಿವರಿ ಕೂಡ ಕೊಡಲಾಗುತ್ತದೆ. ಗ್ರಾಹಕರ ಪ್ರೋತ್ಸಾಹದ ನಿರೀಕ್ಷೆಯಲ್ಲಿ ಜಗದೀಶ್ ಶೆಟ್ಟಿ ಕಾಪು 9845069173, 8197956173
ಹೇರೂರಿನಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ
Posted On: 09 Aug 2020, 08:44 PM
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೇರೂರು ಒಕ್ಕೂಟದ ಆಶ್ರಯದಲ್ಲಿ ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿಯ ಸಹಭಾಗಿತ್ವದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಮಾಡುವ ಕಾರ್ಯಕ್ರಮ ಹೇರೂರು ಭಜನಾ ಮಂಡಳಿಯ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿಯ ಅಧ್ಯಕ್ಷರಾದ ಸುಜಿತ್ ಕುಮಾರ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ಕೃಷಿ ಅಧಿಕಾರಿ ಶ್ರೀ ರಾಘವೇಂದ್ರ ಆಚಾರ್ಯ ಪರಿಸರದ ಬಗ್ಗೆ ಮಾಹಿತಿ ನೀಡಿದರು. ಉಡುಪಿ ತಾಲೂಕು ಯೋಜನಾಧಿಕಾರಿ ಶ್ರೀ ರೋಹಿತ್ ಮಜೂರು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಗಣೇಶ್ ಶೆಟ್ಟಿ ಶುಭ ಹಾರೈಸಿದರು. ಹೇರೂರು ಒಕ್ಕೂಟದ ಅಧ್ಯಕ್ಷರಾದ ಶ್ರೀ ದಿನೇಶ್ ದೇವಾಡಿಗ ರವರು ಶಿರ್ವ ವಲಯದ ಮೇಲ್ವಿಚಾರಕರಾದ ಶ್ರೀಮತಿ ಪಲ್ಲವಿ ಶೆಟ್ಟಿ ಸೇವಾ ಪ್ರತಿನಿಧಿ ಶ್ರೀಮತಿ ವಸಂತಿ ಆಚಾರ್ಯ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು ಭಜನಾ ಮಂಡಳಿಯ ಬಳಿ ಗಿಡಗಳನ್ನು ನೆಡಲಾಯಿತು ಆಗಮಿಸಿದ ಸದಸ್ಯರಿಗೆ ವಿವಿಧ ಗಿಡಗಳನ್ನು ನೀಡಲಾಯಿತು
ಕಾಪು ಪೇಟೆಯಲ್ಲಿ ನಾಳೆಯಿಂದ ಸ್ವಯಂ ಪ್ರೇರಿತ ಬಂದ್ ಇಲ್ಲ
Posted On: 09 Aug 2020, 08:33 PM
ಕಾಪು,09.ಆಗಸ್ಟ್ : ನಾಳೆಯಿಂದ ಸ್ವಯಂ ಪ್ರೇರಿತ ಬಂದ್ ಇಲ್ಲ ಈಗಾಗಲೇ ಸಾಕಷ್ಟು ವಹಿವಾಟು ಇಲ್ಲದೆ ಹೈರಾಣಾಗಿರುವ ವ್ಯಾಪಾರಿಗಳು ಅರ್ಧ ದಿನದ ಸ್ವಯಂ ಪ್ರೇರಿತ ಬಂದ್ ಅನ್ನು ನಿಲ್ಲಿಸುವ ಆಲೋಚನೆಯಲ್ಲಿದ್ದಾರೆ. ಬಂದ್ ಆರಂಭವಾದಾಗಿನಿಂದ ಜನರು ಬೆಳಿಗ್ಗೆಯೂ ಪೇಟೆಗೆ ಬರುವುದನ್ನು ನಿಲ್ಲಿಸಿರುವುದರಿಂದ ಇದ್ದ ವ್ಯಾಪಾರವೂ ನಿಂತು ಹೋಗಿದ್ದು ವರ್ತಕರು ದಿಕ್ಕೆಟ್ಟು ಹೋಗಿದ್ದಾರೆ. ಬಸ್ಸುಗಳಲ್ಲೂ ಪ್ರಯಾಣಿಕರು ಕಡಿಮೆ ಆಗಿರುವುದರಿಂದ ಇಂದು ಬಸ್ಸುಗಳು ಸಂಚಾರವನ್ನೇ ಮಾಡಲಿಲ್ಲ. ಒಟ್ಟಿನಲ್ಲಿ ಆದದ್ದಾಗಲಿ ನಮ್ಮ ಜಾಗ್ರತೆ ನಾವು ಮಾಡಿಕೊಂಡು ಇಡೀ ದಿನ ವ್ಯಾಪಾರ ಮಾಡುವ ಎಂದು ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ
ನೂತನ ಶಿಕ್ಷಣ ನೀತಿ ದೇಶದ ಅಭಿವೃದ್ಧಿಗೆ ರಹದಾರಿ
Posted On: 08 Aug 2020, 07:36 PM
ಕಳೆದ ಹಲವಾರು ವಷ೯ಗಳಿಂದ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕು ಎಂಬ ಕೂಗು ಕೇಳಿ ಬರುತ್ತಿತ್ತು ಈ ಬಗ್ಗೆ ಕೇಂದ್ರ ಸಕಾ೯ರ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ಶಿಕ್ಷಣವು ಕೇವಲ ಅಕ್ಷರಸ್ಥರನ್ನಾಗಿ ಮಾಡುವ ಕೇಲಸ ಮಾತ್ರ ಮಾಡುದಲ್ಲ ಅದು ವಿದ್ಯಾಥಿ೯ ಯ ಸವ೯ ತೋಮುಖ ಅಭಿವೃದ್ಧಿಯತ್ತ ಗಮನ ಹರಿಸಬೇಕು.ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಪ್ರಮಾಣವನ್ನು ಕಡಿಮೆ ಮಾಡಲು ಈ ರೀತಿಯ ನೀತಿ ಅವಶ್ಯಕವಿತ್ತು. ವಿವಿಗಳು ಸಟಿ೯ಫಿಕೆಟ್ ನೀಡುವ ಮಾರುಕಟ್ಟೆಯಾಗಬಾರದು ಅದು ದೇಶದ ಭವಿಷ್ಯವನ್ನು ಬದಲಾಯಿಸುವ ಕೇಂದ್ರವಾಗಬೇಕು ಈ ನಿಟ್ಟಿನಲ್ಲಿ ಸಕಾ೯ರವು ತಂದಿರುವ ಈ ನೀತಿ ವಿದ್ಯಾಥಿ೯ಗಳಿಗೆ ಉತ್ತಮವಾಗಬಹುದಾಗಿದೆ. ಹೊಸ ಶಿಕ್ಷಣ ನೀತಿಯ ಸಾರಾಂಶ: 1. 10 + 2 ಬೋರ್ಡ್ ರಚನೆಯನ್ನು ಕೈಬಿಡಲಾಗಿದೆ 2. ಹೊಸ ಶಾಲೆಯ ರಚನೆಯು 5 + 3 + 3 + 4 ಆಗಿರುತ್ತದೆ 3. 5 ಪೂರ್ವ ಶಾಲೆ, 6 ರಿಂದ 8 ಮಧ್ಯಮ ಶಾಲೆ, 8 ರಿಂದ 11 ಪ್ರೌ School ಶಾಲೆ, 12 ರಿಂದ ಪದವಿ 4. ಯಾವುದೇ ಪದವಿ 4 ವರ್ಷಗಳು 5. 6 ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣ ಲಭ್ಯವಿದೆ 6. 8 ರಿಂದ 11 ರವರೆಗೆ ವಿದ್ಯಾರ್ಥಿಗಳು ವಿಷಯಗಳನ್ನು ಆಯ್ಕೆ ಮಾಡಬಹುದು 7. ಎಲ್ಲಾ ಪದವಿ ಕೋರ್ಸ್ ಪ್ರಮುಖ ಮತ್ತು ಚಿಕ್ಕದಾಗಿರುತ್ತದೆ ಉದಾಹರಣೆ - ವಿಜ್ಞಾನ ವಿದ್ಯಾರ್ಥಿಯು ಭೌತಶಾಸ್ತ್ರವನ್ನು ಮೇಜರ್ ಮತ್ತು ಸಂಗೀತವನ್ನು ಚಿಕ್ಕದಾಗಿ ಹೊಂದಬಹುದು. ಅವರು ಆಯ್ಕೆ ಮಾಡಬಹುದಾದ ಯಾವುದೇ ಸಂಯೋಜನೆ. 8. ಎಲ್ಲಾ ಉನ್ನತ ಶಿಕ್ಷಣವನ್ನು ಕೇವಲ ಒಂದು ಪ್ರಾಧಿಕಾರದಿಂದ ನಿಯಂತ್ರಿಸಲಾಗುತ್ತದೆ. 9. ಯುಜಿಸಿ ಎಐಸಿಟಿಇ ವಿಲೀನಗೊಳ್ಳುತ್ತದೆ. 10. ಎಲ್ಲಾ ವಿಶ್ವವಿದ್ಯಾಲಯ ಸರ್ಕಾರ, ಖಾಸಗಿ, ಮುಕ್ತ, ಡೀಮ್ಡ್, ವೃತ್ತಿಪರ ಇತ್ಯಾದಿಗಳಿಗೆ ಒಂದೇ ಶ್ರೇಣಿ ಮತ್ತು ಇತರ ನಿಯಮಗಳಿವೆ. 11. ದೇಶದ ಎಲ್ಲಾ ರೀತಿಯ ಶಿಕ್ಷಕರಿಗೆ ಹೊಸ ಶಿಕ್ಷಕರ ತರಬೇತಿ ಮಂಡಳಿಯನ್ನು ಸ್ಥಾಪಿಸಲಾಗುವುದು, ಯಾವುದೇ ರಾಜ್ಯವು ಬದಲಾಗುವುದಿಲ್ಲ 12. ಯಾವುದೇ ಕೊಲಾಜ್ಗೆ ಅದೇ ಮಟ್ಟದ ಮಾನ್ಯತೆ, ಅದರ ರೇಟಿಂಗ್ ಕೊಲಾಜ್ ಆಧರಿಸಿ ಸ್ವಾಯತ್ತ ಹಕ್ಕುಗಳು ಮತ್ತು ಹಣವನ್ನು ಪಡೆಯುತ್ತದೆ. 13. ಪೋಷಕರು ಮನೆಯಲ್ಲಿ 3 ವರ್ಷಗಳವರೆಗೆ ಮತ್ತು ಶಾಲಾಪೂರ್ವ 3 ರಿಂದ 6 ರವರೆಗೆ ಮಕ್ಕಳಿಗೆ ಕಲಿಸಲು ಹೊಸ ಮೂಲ ಕಲಿಕಾ ಕಾರ್ಯಕ್ರಮವನ್ನು ಸರ್ಕಾರ ರಚಿಸುತ್ತದೆ 14. ಯಾವುದೇ ಕೋರ್ಸ್ನಿಂದ ಬಹು ಪ್ರವೇಶ ಮತ್ತು ನಿರ್ಗಮನ 15. ಪ್ರತಿ ವರ್ಷ ವಿದ್ಯಾರ್ಥಿಗೆ ಪದವಿಗಾಗಿ ಕ್ರೆಡಿಟ್ ವ್ಯವಸ್ಥೆಯು ಕೆಲವು ಸಾಲಗಳನ್ನು ಪಡೆಯುತ್ತದೆ, ಅವನು ಕೋರ್ಸ್ ವಿರಾಮ ತೆಗೆದುಕೊಂಡು ಕೋರ್ಸ್ ಅನ್ನು ಪೂರ್ಣಗೊಳಿಸಲು ಮತ್ತೆ ಬಂದರೆ ಅವನು ಬಳಸಿಕೊಳ್ಳಬಹುದು. 16. ಎಲ್ಲಾ ಶಾಲೆಗಳ ಪರೀಕ್ಷೆಗಳು ವರ್ಷಕ್ಕೆ ಸೆಮಿಸ್ಟರ್ ಬುದ್ಧಿವಂತವಾಗಿರುತ್ತವೆ 17. ಪಠ್ಯಕ್ರಮವು ಯಾವುದೇ ವಿಷಯದ ಮುಖ್ಯ ಜ್ಞಾನಕ್ಕೆ ಮಾತ್ರ ಕಡಿಮೆಯಾಗುತ್ತದೆ 18. ವಿದ್ಯಾರ್ಥಿಗಳ ಪ್ರಾಯೋಗಿಕ ಮತ್ತು ಅಪ್ಲಿಕೇಶನ್ ಜ್ಞಾನದ ಮೇಲೆ ಹೆಚ್ಚಿನ ಗಮನ ಯಾವುದೇ ಪದವಿ 19. ಕೋರ್ಸ್ಗೆ ವಿದ್ಯಾರ್ಥಿ ಕೇವಲ ಒಂದು ವರ್ಷ ಪೂರ್ಣಗೊಳಿಸಿದರೆ ಅವನಿಗೆ ಮೂಲ ಪ್ರಮಾಣಪತ್ರ ಸಿಗುತ್ತದೆ, ಎರಡು ವರ್ಷ ಪೂರ್ಣಗೊಳಿಸಿದರೆ ಅವನಿಗೆ ಡಿಪ್ಲೊಮಾ ಪ್ರಮಾಣಪತ್ರ ಸಿಗುತ್ತದೆ ಮತ್ತು ಅವನು ಪೂರ್ಣ ಕೋರ್ಸ್ ಪೂರ್ಣಗೊಳಿಸಿದರೆ ಪದವಿ ಪ್ರಮಾಣಪತ್ರವನ್ನು ಪಡೆಯುತ್ತಾನೆ. ಆದ್ದರಿಂದ ಯಾವುದೇ ವಿದ್ಯಾರ್ಥಿಯ ನಡುವೆ ಕೋರ್ಸ್ ಅನ್ನು ಮುರಿದರೆ ಅವನಿಗೆ ಯಾವುದೇ ವರ್ಷವನ್ನು ನೀಡಲಾಗುವುದಿಲ್ಲ. 20. ಎಲ್ಲಾ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್ ಫೀಡ್ ಅನ್ನು ಪ್ರತಿ ಕೋರ್ಸ್ ಅನ್ನು ಕ್ಯಾಪಿಂಗ್ ಮಾಡುವ ಮೂಲಕ ಒಂದೇ ಪ್ರಾಧಿಕಾರದಿಂದ ನಿಯಂತ್ರಿಸಲಾಗುತ್ತದೆ. ಈಗ ನಮ್ಮ ಶಿಕ್ಷಣ ವ್ಯವಸ್ಥೆಯು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸಮನಾಗಿರುತ್ತದೆ ಮತ್ತು ನಮ್ಮ ಮಕ್ಕಳ ಭವಿಷ್ಯವು ಉಜ್ವಲವಾಗಿರುತ್ತದೆ. ಸಕಾ೯ರ ಈ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕಾಗಿದೆ. ಬದಲಾವಣೆ ನಮ್ಮಿoದಲೇ ಪ್ರಾರಂಭವಾಗಲಿ. ಲೇಖಕ : ರಾಘವೇಂದ್ರ ಪ್ರಭು, ಕವಾ೯ಲು, ಶಿಕ್ಷಣ ಪ್ರೇಮಿ
ಯಶಸ್ವಿ ಉದ್ಯಮಿಗಳ ಸಂಘಟನೆ ಆಸರೆಯಿಂದ ಕೊರೊನ ಜಾಗೃತಿ ಕಾರ್ಯಕ್ರಮ
Posted On: 08 Aug 2020, 07:21 PM
ರುಡ್ಸೆಟ್ ಸಂಸ್ಥೆ ಬ್ರಹ್ಮಾವರ ಇಲ್ಲಿ ತರಬೇತಿ ಪಡೆದು ಯಶಸ್ವೀ ಉದ್ಯಮಿ ಗಳ ಸಂಘಟನೆ "ಆಸರೆ" ಇದರ ವತಿಯಿಂದ ಕೋವಿಡ್ 19 ಕೋರೋಣ ಇದರ ಸಮಸ್ಯೆ ಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವು ರುಡ್ಸೆಟ್ ಸಂಸ್ಥೆ ಬ್ರಹ್ಮಾವರ ದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ರುಡ್ಸೆಟ್ ನಿರ್ದೇಶಕರಾದ ಶ್ರೀ ಪಾಪ ನಾಯಕ್ ಆಸರೆ ಸಂಘಟನೆಯ ಅಧ್ಯಕ್ಷ ರಾದ ಕಿಶ್ವರಿ ಸಂಸ್ಥೆ ಯ ಹಿರಿಯ ಉಪನ್ಯಾಸಕರಾದ ಕರುಣಾಕರ ಜೈನ್, ಸಂತೋಷ ಶೆಟ್ಟಿ, ಆಸರೆ ಸಂಘಟನೆಯ ಮಾಜಿ ಅಧ್ಯಕ್ಷರು ಹಾಗೂ ರೋಟರಿ ಮಾಜಿ ಸಹಾಯಕ ಗವರ್ನರ್ ಎಮ್ ಮಹೇಶ್ ಕುಮಾರ್, ಗೌರವ ಅಧ್ಯಕ್ಷ ರಾದ ರಾಜೇಶ್, ಡಿ. ಕೆ ಸಿ ಅಮೀನ್, ಕಾರ್ಯದರ್ಶಿ ಉಮೇಶ್ ಹಾಗೂ ಆಸರೆ ಸಂಘಟನೆ ಯ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮ ನಿರೂಪಣೆಯನ್ನು ಮಾಜಿ ಕಾರ್ಯದರ್ಶಿ ಕುಶ ಕುಮಾರ್ ಮಾಡಿದರು.
ಲಯನ್ಸ್ ಕ್ಲಬ್ ಬಂಟಕಲ್ಲು 2020-21ನೇ ಸಾಲಿನ ಪದಗ್ರಹಣ ಕಾರ್ಯಕ್ರಮ
Posted On: 08 Aug 2020, 07:07 PM
ಬಂಟಕಲ್ಲು ಲಯನ್ಸ್ ಕ್ಲಬ್ ಬಿ ಸಿ ರೋಡ್ ಇದರ ಪದಗ್ರಹಣ ಕಾರ್ಯಕ್ರಮವು ನಿನ್ನೆ ಸಂಜೆ ಗಂಟೆ 5.30 ಕ್ಕೆ ಬಿ.ಸಿ ರೋಡ್ ಪಾಂಬೂರು ನಿಶಾ ಕೆಟರರ್ಸ್ ನ ಮಾಲಕರಾದ ಇಗ್ನೇಶಿಯಸ್ ಡಿಸೋಜ ರವರ ಮನೆಯಲ್ಲಿ ನೆರವೇರಿತು. ಈ ಸಭೆಯಲ್ಲಿ 317C ಲಯನ್ ಜಿಲ್ಲಾ ಗವರ್ನರ್ ಲಯನ್ N .M ಹೆಗ್ಡೆ ಮತ್ತು 317 C II ಪ್ರಾಂತ್ಯ ಅಧ್ಯಕ್ಷ ಲಯನ್ ಸ್ಟೀಫನ್ ಕಾಸ್ಟ್ಲಿನೋ , ಲಿಯೋ ಕ್ಲಬ್ ನ ಕೋ ಅರ್ಡಿನೇಟ್ ಲಯನ್ ಜೆರಾಲ್ಧ್ ಫೆರ್ನಾಂಡಿಸ್, ವಲಯ ಅಧ್ಯಕ್ಷ ಲಯನ್ ಲಾನ್ಸಿ ಕೊರ್ಡ ಮೊದಲಾದವರು ಉಪಸ್ಥಿತರಿದ್ದರು. ಕೇವಲ ಕ್ಲಬ್ ಸದಸ್ಯರ ಉಪಸ್ಥಿತಿಯಲ್ಲಿ ಸರಳವಾಗಿ ಕಾರ್ಯಕ್ರಮ ನೆರವೇರಿತು ಬಿ.ಸಿ ರೋಡ್ ಕ್ಲಬ್ ನ ಅಧ್ಯಕ್ಷರಾಗಿ ಲಯನ್ ವಿಜಯ್ ಧೀರಜ್ ಪದ ಪ್ರಧಾನ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಲಯನ್ ಅರುಂಧತಿ ಪ್ರಭು, ಖಜಾಂಚಿಯಾಗಿ ದಿನೇಶ್ S K .ಪ್ರಮಾಣ ವಚನ ಸ್ವೀಕರಿಸಿದರು. ನಿರ್ಗಮನ ಅಧ್ಯಕ್ಷರು ಲಯನ್ K .R ಪಾಟ್ಕರ್ ತಮ್ಮ ಅನಿಸಿಕೆ ತಿಳಿಸಿ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು. ಇದೇ ಸಮಯದಲ್ಲಿ ನೂತನ ಲಿಯೋ ಕ್ಲಬ್ ಉದ್ಘಾಟನೆಗೊಂಡು ನೂತನ ಲಿಯೋ ಅಧ್ಯಕ್ಷರಾಗಿ ಲಿಯೋ ಲಾಯಲ್ ಡಿಸೋಜಾ ಕಾರ್ಯದರ್ಶಿ ಲಯನ್ ಗ್ಲೇನ್ ಪಿ0ಟೋ, ಹಾಗೂ ಖಜಾಂಜಿ ಆಗಿ ಆರೋನ್ ಡಿಸೋಜರವರು ನೂತನ ಲಿಯೋ ಕ್ಲಬ್ ನ ಪದಾಧಿಕಾರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು ಲಯನ್ ಅನಿತಾ ಮಥ್ಯಾಯಸ್ ಕಾರ್ಯಕ್ರಮ ನಿರೂಪಿಸಿದರು.
ಕುಂಜೂರು ದುರ್ಗಾ ದೇವಸ್ಥಾನದ ನಿವೃತ್ತ ಸಿಬಂದಿಗಳಿಗೆ ಸಮ್ಮಾನ
Posted On: 07 Aug 2020, 08:37 PM
ಕಾಪು, ಆ. 7 : ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಹಲವು ದಶಕಗಳಿಂದ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಗೋವಿಂದ ಉಡುಪ ದಂಪತಿ ಮತ್ತು ಅಡಿಪುಮನೆ ಗೋವಿಂದ ದೇವಾಡಿಗ ದಂಪತಿಯನ್ನು ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ತಲಾ 50,000 ರೂಪಾಯಿ ಗೌರವ ನಿಧಿಯೊಂದಿಗೆ ಸನ್ಮಾನಿಸಿ, ಗೌರವಿಸಲಾಯಿತು. ಸಮ್ಮಾನ ಕಾರ್ಯಕ್ರಮ ನೆರವೇರಿಸಿದ ಪವಿತ್ರಪಾಣಿ ಕೆ.ಎಲ್. ಕುಂಡಂತಾಯ ಮಾತನಾಡಿ, ಇಬ್ಬರೂ ಕೂಡಾ ತಮ್ಮ ಸೇವೆಯ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದು, ಭವಿಷ್ಯದಲ್ಲಿ ಇವರ ಜೀವನವನ್ನು ದೇವರು ಸುಖಮಯವಾಗಿರಿಸಲಿ ಎಂದು ಹಾರೈಸಿದರು. ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ನಡಿಮನೆ ದೇವರಾಜ ರಾವ್ ಅಧ್ಯಕ್ಷತೆ ವಹಿಸಿದ್ದರು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವೈ. ಪ್ರಫುಲ್ಲ ಶೆಟ್ಟಿ, ಎಲ್ಲೂರುಗುತ್ತು ಪ್ರಭಾಕರ ಶೆಟ್ಟಿ, ದೇಗುಲದ ಪರ್ಯಾಯ ಅರ್ಚಕ ವೇ. ಮೂ. ಚಕ್ರಪಾಣಿ ಉಡುಪ, ಅರ್ಚಕ ವೇ.ಮೂ. ಹರಿಕೃಷ್ಣ ಉಡುಪ, ಆಡಳಿತ ಮಂಡಳಿಯ ಸದಸ್ಯರಾದ ಶ್ರೀವತ್ಸ ರಾವ್, ಲೋಕೇಶ್ ಶೆಟ್ಟಿ ಬೆಳಪುಗುತ್ತು, ಗಿರಿಜಾ ಪೂಜಾರ್ತಿ, ಸರೋಜಿನಿ ಕುಮಾರಿ, ಪ್ರಬಂಧಕ ರಾಘವೇಂದ್ರ ಶೆಟ್ಟಿ, ಮಾಧವ ರಾವ್ ಪಣಿಯೂರು, ಎಲ್ಲೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮಮತಾ ವೈ. ಶೆಟ್ಟಿ, ಯಶೋಧರ ಶೆಟ್ಟಿ ಬಗ್ಗೇಡಿಗುತ್ತು, ಶ್ರೀ ದುರ್ಗಾ ಮಿತ್ರವೃಂದದ ಮಾಜಿ ಅಧ್ಯಕ್ಷ ರಾಕೇಶ್ ಕುಂಜೂರು ಮೊದಲಾದವರು ಉಪಸ್ಥಿತರಿದ್ದರು. ಎಲ್ಲೂರು ಗ್ರಾ.ಪಂ. ಮಾಜಿ ಸದಸ್ಯ ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಮಳೆ ಹಾನಿಗೆ ತಕ್ಷಣ ಪರಿಹಾರ ವಿತರಿಸಿ: ಸಚಿವ ಬೊಮ್ಮಾಯಿ
Posted On: 06 Aug 2020, 07:12 PM
ಉಡುಪಿ ಆಗಸ್ಟ್ 6 : ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ಥರಿಗೆ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ತಕ್ಷಣವೇ ಪರಿಹಾರ ವಿತರಿಸುವಂತೆ ರಾಜ್ಯ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಗುರುವಾರ, ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಮಳೆ ಹಾನಿ ಹಾಗೂ ಕೋವಿಡ್ ಸ್ಥಿತಿಗತಿ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ತಕ್ಷಣ ಪ್ರಾಥಮಿಕ ಹಂತದ ಪರಿಹಾರ ಬಿಡುಗಡೆಗೊಳಿಸಿ, ಮನೆ ಹಾನಿಯ ವಿವರ ಕುರಿತು ರಾಜೀವ ಗಾಂಧಿ ವಸತಿ ನಿಗಮದ ಪೋರ್ಟಲ್ ನಲ್ಲಿ , ಹಾನಿಯದ ದಿನವೇ ಅಪ್ಲೋಡ್ ಮಾಡುವಂತೆ ಸೂಚಿಸಿದ ಸಚಿವ ಬೊಮ್ಮಾಯಿ, ಕೃಷಿ ಬೆಳೆ ಹಾನಿ ಪರಿಶೀಲಿಸಲು ತಾಲೂಕುವಾರು ಕಂದಾಯ, ಕೃಷಿ ಮತ್ತು ಪಿಡಿಓ ಒಳಗೊಂಡ ತಂಡಗಳನ್ನು ರಚಿಸಿ, ಹಾನಿಯ ಸಮೀಕ್ಷೆಯನ್ನು ಶೀಘ್ರದಲ್ಲಿ ನಡೆಸಿ ವರದಿ ಪಡೆದು ಪರಿಹಾರ ನೀಡಲು ಕ್ರಮ ಕೈಗೊಂಡು ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಿ, ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿದ್ದಲ್ಲಿ ಅಲ್ಲಿನ ಜನತೆಗೆ ಈ ತಿಂಗಳ ಪಡಿತರದ ಜೊತೆಗೆ , ಮುಂದಿನ ತಿಂಗಳು ಪಡಿತರವನ್ನು ಮುಂಚಿತವಾಗಿ ವಿತರಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಇದುವರೆಗೆ 116 ಮನೆಗಳಿಗೆ ಭಾಗಶ: ಹಾನಿ ಮತ್ತು 2 ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, ಅವುಗಳಿಗೆ ಪರಿಹಾರ ವಿತರಣೆ ಮಾಡಲಾಗಿದೆ, ವಿಪತ್ತು ಪರಿಹಾರ ನಿಧಿಯಲ್ಲಿ ಹಣದ ಕೊರತೆ ಇಲ್ಲ, ತಹಸೀಲ್ದಾರ್ ಗಳಿಗೆ ಹಾನಿಯ ಪರಿಹಾರ ವಿತರಿಸುವ ಅಧಿಕಾರ ನೀಡಲಾಗಿದೆ, ಸಂಬಂಧಪಟ್ಟ ತಹಸೀಲ್ದಾರ್ ಗಳಿಗೆ ಹಣ ಬಿಡುಗಡೆ ಮಾಡಲಾಗಿದೆ, ಪ್ರವಾಹದಿಂದ ಜನರನ್ನು ಸ್ಥಳಾಂತರಿಸುವ ಪರಿಸ್ಥಿತಿ ಜಿಲ್ಲೆಯಲ್ಲಿ ಇಲ್ಲ, ಪ್ರವಾಹ ಪೀಡಿತ ಸಂಭವವಿರುವ 26 ಗ್ರಾಮಗಳನ್ನು ಗುರುತಿಸಲಾಗಿದ್ದು, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ, ಎಲ್ಲಾ ಅಧಿಕಾರಿಗಳಿಗೆ ಕೇಂದ್ರಸ್ಥಾನದಲ್ಲಿರಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸಚಿವರಿಗೆ ತಿಳಿಸಿದರು. ಜಿಲ್ಲೆಯಲ್ಲಿ ಈ ತಿಂಗಳ ಪಡಿತರ ಎತ್ತುವಳಿ ಆಗಿದ್ದು, ಕಳೆದ ತಿಂಗಳು 95% ಪಡಿತರ ವಿತರಣೆ ಆಗಿದೆ, 1000 ಟನ್ ರಸಗೊಬ್ಬರದ ಅವಶ್ಯಕತೆಯಿದ್ದು, ಎಂಸಿಎಫ್ ನಿಂದ ನಾಳೆ ಸರಬರಾಜು ಆಗಲಿದ್ದು, ರಸಗೊಬ್ಬರದ ಸಮಸ್ಯೆ ಇಲ್ಲ, ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಕಾರ್ಯ ನಡೆದಿದ್ದು, 88% ಪೂರ್ಣಗೊಂಡಿದೆ , ಮರವಂತೆ ಮತ್ತು ನಾವುಂದ ಕ್ಕೆ ಭೇಟಿ ನೀಡಿ ನೆರೆ ಕುರಿತು ಪರಿಶೀಲನೆ ನಡೆಸಲಾಗಿದೆ ಎಂದು ಡಿಸಿ ಹೇಳಿದರು. ಜಿಲ್ಲೆಗೆ ಪ್ರಾಕೃತಿಕ ವಿಕೋಪ ನಿಧಿಗೆ ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ತಮ್ಮ ಗಮನಕ್ಕೆ ತರುವಂತೆ ತಿಳಿಸಿದ ಸಚಿವ ಬೊಮ್ಮಾಯಿ , ಜಿಲ್ಲೆಯ ಪ್ರತಿದಿನದ ಹಾನಿಯ ವರದಿಯನ್ನು ತಮಗೆ ನೀಡುವಂತೆ ಹಾಗೂ ಜಿಲ್ಲೆಯ ನಾಗರೀಕರಿಗೆ ಮಳೆಯಿಂದಾಗಿ ಯಾವುದೇ ರೀತಿಯ ಸಮಸ್ಯೆಗಳಾದಲ್ಲಿ , ತಕ್ಷಣವೇ ಸ್ಪಂದಿಸಿ ಅಗತ್ಯ ನೆರವು ನೀಡುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕೋವಿಡ್19 ಸ್ಥಿತಗತಿ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಕಳೆದ ವಾರದಿಂದ ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 145 ಪ್ರಕರಣಗಳು ವರದಿಯಾಗುತ್ತಿದ್ದು, ಪ್ರಸ್ತುತ 2100 ಸಕ್ರಿಯ ಪ್ರಕರಣಗಳಿದ್ದು, 1000 ಮಂದಿ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ನಲ್ಲಿ ಮತ್ತು 1100 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ, ಇದುವರೆಗೆ ಒಟ್ಟು 46 ಮರಣ ಸಂಭವಿಸಿದ್ದು, 15 ದಿನಗಳಿಂದ ಮರಣದ ಸಂಖ್ಯೆ ಅಧಿಕವಾಗಿದೆ. ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಬೆಡ್ ಗಳು , ವೆಂಟಿಲೇಟರ್ ಮತ್ತು ಹೈ ಪ್ಲೋ ಆಕ್ಸಿಜಿನ್ ಬೆಡ್ ಗಳ ಕೊರತೆ ಇಲ್ಲ , ಪಾಸಿಟಿವ್ ಬಂದ ಕೊನೆಯ ಹಂತದಲ್ಲಿ ರೋಗಿಗಳು ಆಸ್ಪತ್ರೆಗೆ ದಾಖಲಾಗುತ್ತಿರುವುದರಿಂದ ಮರಣ ಅಧಿಕವಾಗಿದ್ದು, ಇದನ್ನು ತಪ್ಪಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸರ್ವೇಕ್ಷಣೆ ನಡೆಸಬೇಕಿದ್ದು, ಇದಕ್ಕಾಗಿ ಅಗತ್ಯ ಸಿಬ್ಬಂದಿ ನೇಮಿಸಿಕೊಳ್ಳಲು ಅನುಮತಿ ನೀಡುವಂತೆ ಸಚಿವರಲ್ಲಿ ಕೋರಿದರು. ಜಿಲ್ಲೆಯಲ್ಲಿನ ಸರ್ಕಾರಿ ಕೋವಿಡ್ ಲ್ಯಾಬ್ ಕಾರ್ಯ, ಪರೀಕ್ಷಾ ಕಿಟ್ ಗಳ ಸರಬರಾಜು ಕುರಿತು ಮಾಹಿತಿ ಪಡೆದ ಉಸ್ತುವಾರಿ ಸಚಿವರು, ತುರ್ತು ಸಂದರ್ಭಗಳಲ್ಲಿ ಮಾತ್ರ ಆಂಟಿಜಿನ್ ಕಿಟ್ ಗಳ ಬಳಕೆ ಮಾಡುವಂತೆ ಮತ್ತು ರೋಗ ಲಕ್ಷಣವಿರುವ ವ್ಯಕ್ತಿಗಳನ್ನು ಆರ್.ಟಿ.ಪಿ.ಸಿ.ಆರ್. ಮೂಲಕ ಪರೀಕ್ಷೆ ನಡೆಸುವಂತೆ ಸೂಚಿಸಿದರು, ಆರೋಗ್ಯ ಇಲಾಖೆಯಲ್ಲಿ ಸರ್ವೆಕ್ಷಣಾ ಸಿಬ್ಬಂದಿ ನೇಮಕ ಕುರಿತಂತೆ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಬೊಮ್ಮಾಯಿ ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಉಪಸ್ಥಿತರಿದ್ದರು
ಉಡುಪಿಯಲ್ಲಿ ಬಾವಿಗೆ ಆಕಸ್ಮಿಕವಾಗಿ ಬಿದ್ದಿರುವ ವೃದ್ಧೆಯ ರಕ್ಷಣೆ
Posted On: 06 Aug 2020, 06:32 PM
ಉಡುಪಿ,ಅ.6; ವೃದ್ಧೆಯೊರ್ವರು ಮನೆಯ ನೀರಿರುವ ಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದು, ಅಸಹಾಯಕ ಸ್ಥಿತಿಯಲ್ಲಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ವೃದ್ಧೆಯನ್ನು ಉಡುಪಿ ನಗರ ಠಾಣೆಯ ಪಿ.ಎಸ್.ಐ-2 ಸದಾಶಿವ ರಾ ಗವರೋಜಿ, ಅಗ್ನಿಶಾಮಕ ದಳದ ಸಿಬ್ಬಂದಿ ವಿನಾಯಕ ಹಾಗೂ ಸ್ಥಳಿಯ ಆಟೋ ಚಾಲಕ ರಾಜೇಶ್ ನಾಯಕ್ ಇರ್ವರು ಬಾವಿಗಿಳಿದು ರಕ್ಷಿಸಿದ ಘಟನೆಯು ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ಗುರುವಾರ ನಡೆದಿದೆ. . ಜೀವರಕ್ಷಣೆ ಕಾರ್ಯಚರಣೆಯಲ್ಲಿ ಸಾಹಸ ಮೆರೆದಿರುವ ಜೀವರಕ್ಷಕರಿಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಮತ್ತು ಸಾಮಾಜಿಕ ಕಾಯ೯ಕತ೯ ರಾಘವೇಂದ್ರ ಪ್ರಭು ಕವಾ೯ಲು ಅವರು ಅಭಿನಂದನೆ ಸಲ್ಲಿಸಿದ್ದಾರೆ. ಆಪತ್ಬಾಂದವರು
ಬಿರುವೆರ್ ಕಾಪು ಸೇವಾ ಟ್ರಸ್ಟ್ ನಿಂದ ದಾರಿಸೂಚಿ ನಾಮಫಲಕ ಹಸ್ತಾಂತರ
Posted On: 06 Aug 2020, 05:47 PM
ಬಿರುವೆರ್ ಕಾಪು ಸೇವಾ ಟ್ರಸ್ಟ್ ಕಾಪು ತಾಲೂಕು ಉಡುಪಿ ಜಿಲ್ಲೆ ಇದರ 4ನೇ ವರ್ಷದ ಪಾದರ್ಪಣೆಯ ಸುಸಂದರ್ಭದಲ್ಲಿ ವಿಜೇತ ವಸತಿಯುತ ವಿಶೇಷ ಶಾಲೆ ನೂತನವಾಗಿ ಸ್ಥಳಾಂತರಗೊಂಡ ಅಯ್ಯಪ್ಪನಗರ, ದುರ್ಗಾ ಹೈಸ್ಕೂಲ್ ಕಟ್ಟಡದಲ್ಲಿ ಜೋಡುರಸ್ತೆ ಹೆಬ್ರಿ ಹೆದ್ದಾರಿಯಲ್ಲಿ ದಾರಿಸೂಚಿ ನಾಮಫಲಕ ಹಸ್ತಾಂತರ ಕಾರ್ಯಕ್ರಮ ನೆರವೇರಿಸಲಾಯಿತು . ಸಮಾಜದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಶೇಷ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಕೂಡ ತಮ್ಮ ಸೇವೆಯನ್ನು ಮುಂದುವರೆಸುವುದಾಗಿ ತಿಳಿಸಿದರು. 4ನೇ ವರ್ಷದ ಸಂಭ್ರಮದ ಪ್ರಯುಕ್ತ ಶಾಲಾ ಸಂಸ್ಥಾಪಕಿ ಡಾ.ಕಾಂತಿ_ಹರೀಶ್ ಇವರಿಗೆ ಬಿರುವೆರ್ ಕಾಪು ಸೇವಾ ಟ್ರಸ್ಟ್ ವತಿಯಿಂದ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಕೋಟ್ಯಾನ್ ರವರ ಸುಪುತ್ರ ಶ್ರೀ ವರುಣ್, ಶ್ರಿ ಮನೋಹರ್, ಶ್ರೀ ಕಾರ್ತಿಕ್, ಶ್ರೀ ಅತಿಥ್, ಶ್ರೀ ಪ್ರಶಾಂತ್ ಪೂಜಾರಿ, ಶ್ರೀ ಅನಿಲ್ ಕಾಪು, ಶ್ರೀ ವಿಕ್ಕಿ ಪೂಜಾರಿ, ಶ್ರೀ ದೇವಿಪ್ರಸಾದ್,ಯೋಗೀಶ್ ಬಿಲ್ಲವ ಮತ್ತು ಶಾಲಾ ಟ್ರಸ್ಟಿ ಶ್ರೀ ಸಂತೋಷ್ ನಾಯಕ್ ಸಿಯಾ ಉಪಸ್ಥಿತರಿದ್ದರು
