Updated News From Kaup

ಉಡುಪಿಯ ಲಕ್ಷ್ಮೀ ನಗರದಲ್ಲಿ ಯುವಕನೋರ್ವನ ಬರ್ಬರ ಹತ್ಯೆ

Thumbnail
Posted On: 07 Jul 2020, 12:36 PM

ಉಡುಪಿಯ ಲಕ್ಷೀ ನಗರದ ಬಳಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಲಕ್ಷ್ಮೀ ನಗರ ಶಾಲೆಯ ಹಿಂಭಾಗದಲ್ಲಿ ಹತ್ಯೆಯಾದ ಯುವಕನ ಶವ ಪತ್ತೆಯಾಗಿದೆ. ಕೊಲೆಯಾದ ಯುವಕ ಮಲ್ಪೆ ಮೀನುಗಾರಿಕೆ‌ ಬೊಟ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಯೋಗಿಶ್ ಎನ್ನುವವನಾಗಿದ್ದು.ಹಣಕಾಸಿನ ವಿಚಾರದಿಂದ ಕೊಲೆ ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ರೌಡಿ ಶೀಟರ್ ವಕ್ವಾಡಿ ಪ್ರವೀಣ್ ಕೊಲೆ‌ ಪ್ರಕರಣದಲ್ಲಿ ಭಾಗಿಯಾಗಿದ್ದ ಸುಜೀತ್ ಪಿಂಟೋ ಈ ಯುವಕನ‌ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಸುಜೀತ್ ಪಿಂಟೋ ಹಾಗೂ ಅತನ‌ ಅಣ್ಣ ಬಡ್ಡಿ ವ್ಯವಹಾರ ನಡೆಸುತ್ತಿದ್ದು ,ಯೋಗಿಶನಿಗೆ ಹಣ ನೀಡಿದ್ದರು ಎನ್ನಲಾಗಿದೆ. ಹಣ ವಾಪಸ್ಸು ಕೇಳಲು ಇವರಿಬ್ಬರು ಸಂತೇಕಟ್ಟೆಯ ಬಾರ್ ಒಂದರಲ್ಲಿ ಕುಳಿತಿದ್ದ ಯೋಗಿಶನನ್ನು ಭೇಟಿಯಾಗಿದ್ದರು‌.ಅಲ್ಲಿ ಕೊಲೆಯಾದ ಯುವಕ ಹಾಗೂ ಸುಜಿತ್ ಪಿಂಟೋ ಗುಂಪು ಗಲಾಟೆ ನಡೆಸಿದ್ದರು ಎನ್ನುವ ಮಾಹಿತಿ ತಿಳಿದು ಬಂದಿದೆ. ಬಳಿಕ ಲಕ್ಷ್ಮೀನಗರದ ಶಾಲೆ ಬಳಿ ‌ಬಂದಾಗ ಇಬ್ಬರ ಮಧ್ಯೆ ಮಾತಿನ‌ ಚಕಮಕಿ ನಡೆದು ಹತ್ಯೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಉಡುಪಿಯಲ್ಲಿ ಕೆಲಸ ಕಳೆದುಕೊಂಡು ಬಾಡಿಗೆ ಮನೆಯಲ್ಲಿರುವ ಕುಟುಂಬಕ್ಕೆ ನೆರವು

Thumbnail
Posted On: 06 Jul 2020, 10:41 PM

ಉಡುಪಿ :- ಕೊರೋನಾ ಪ್ರಭಾವದಿಂದ ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಬನ್ನಂಜೆ ಬಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕುಟುಂಬವು ಸಹಾಯಕ್ಕಾಗಿ ಕರೋನಾ ವಾರಿಯರ್ಸ್ ಉಡುಪಿ ತಂಡವನ್ನು (21 ಭಾಷೆಗಳ ಅಡಿಯೋ ಕ್ಲಿಪ್ ಮೂಲಕ) ಸಂಪಕಿ೯ಸಿದ್ದರು.ತಂಡವು ವಿವಿಧ ದಾನಿಗಳ ಮೂಲಕ ಸಂಗ್ರಹಿಸಿದ ಸುಮಾರು 5 ಸಾವಿರ ರೂ ಮೌಲ್ಯದ ಜೀನಸಿ ಸಾಮಾಗ್ರಿ ಗಳನ್ನು ಅವರ ಮನೆಗೆ ಭೇಟಿ ನೀಡಿ ನೀಡಿತ್ತು.ಈ ಸಂದಭ೯ದಲ್ಲಿ ಸಂಯೋಜಕ ದೀಪಕ್ ಶೆಣ್ಯ್ ,ರಾಘವೇಂದ್ರ ಪ್ರಭು,ಕವಾ೯ಲು ಮುಂತಾದವರಿದ್ದರು.

ಕೊರೋನ ನಿಯಂತ್ರಣಕ್ಕೆ ರಚಿಸಿರುವ ತಂಡಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು

Thumbnail
Posted On: 06 Jul 2020, 10:33 PM

ಉಡುಪಿ ಜುಲೈ 6 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೊರೋನ ನಿಯಂತ್ರಣ ಮತ್ತು ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ರಾಜ್ಯ ಸರ್ಕಾರದ ಸೂಚನೆಯಂತೆ ರಚಿಸಲಾಗಿರುವ 14 ತಂಡಗಳು ಮಹತ್ವದ ಜವಾಬ್ದಾರಿ ಹೊಂದಿದ್ದು, ಪರಸ್ಪರ ಸಮನ್ವಯದಿಂದ ತಮಗೆ ನಿಯೋಜಿಸಿರುವ ಕಾರ್ಯಗಳನ್ನು, ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಸೋಮವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ -19 ಪಾಸಿಟಿವ್ ಬಂದ ವ್ಯಕ್ತಿಗಳನ್ನು ಸ್ಥಳಾಂತರಿಸಲು ರಚಿಸಲಾಗಿರುವ ತಂಡದ ಸಿಬ್ಬಂದಿ ಐ.ಸಿ.ಎಂಆರ್ ಪೋರ್ಟಲ್ ನಲ್ಲಿ ಪಾಸಿಟಿವ್ ವರದಿ ಬಂದ ಕೂಡಲೇ ಸಂಬAದಪಟ್ಟ ರೋಗಿಯನ್ನು ತಕ್ಷಣ ಆಸ್ಪತ್ರೆಗೆ ಸ್ಥಾಂತರಿಸಲು ವ್ಯವಸ್ಥೆ ಮಾಡಬೇÃಕು , ಜಿಲ್ಲೆಯಲ್ಲಿ ಆಂಬುಲೆನ್ಸ್ ಮಾನಟರಿಂಗ್ ಸಿಸ್ಟಂ ಜಾರಿಗೊಳಿಸಿದ್ದು, ವ್ಯಕ್ತಿಯ ಮನೆಗೆ ಸಮೀಪದ ಆರೋಗ್ಯ ಕೇಂದ್ರದಲ್ಲಿರುವ ಆಂಬುಲೆನ್ಸ್ ಸಹಾಯದೊಂಗಿಗೆ ನಿಗಧಿತ ಆಸ್ಪತ್ರೆಗೆ ದಾಖಲಿಸಬೇಕು, ತುರ್ತು ಅಗತ್ಯವಿದ್ದಲ್ಲಿ ಖಾಸಗಿ ಆಸ್ಪತ್ರೆಯ ಅಂಬುಲೆನ್ಸ್ ಗಳನ್ನು ಬಳಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಯಾವುದೇ ಕಾರಣಕ್ಕೂ ಪಾಸಿಟಿವ್ ವರದಿ ಬಂದ ವ್ಯತಿಯನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ವಿಳಂಬ ಸಲ್ಲದು ,. ವಿಳಂಬವಾದಲ್ಲಿ ಇತರರಿಗೂ ಹರಡುವ ಸಂಭವ ಹೆಚ್ಚು ಎಂದು ಹೇಳಿದರು. ಜಿಲ್ಲೆಯಲ್ಲಿ ಬೆಡ್ ಮಾನಿಟರಿಂಗ್ ಸಿಸ್ಟಂ ಯೋಜನೆ ಸಿದ್ದಪಡಿಸಲಾಗುತ್ತಿದ್ದು, ಇದರಿಂದ ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್ ಗಳು ಖಾಲಿ ಇವೆ, ಸಮೀಪದ ಆಸ್ಪತ್ರೆ ಎಲ್ಲಿದೆ , ಆ ಆಸ್ಪತ್ರೆಯಲ್ಲಿ ಏನು ಸೌಲಭ್ಯಗಳಿವೆ ಎಂಬ ಮಾಹಿತಿ ಕೂಡಲೆ ಲಭ್ಯವಾಗಲಿದ್ದು, ವೃಥಾ ಆಸ್ಪತ್ರೆಗೆ ಅಲೆಯುವುದು ತಪ್ಪಲಿದೆ, ಜಿಲ್ಲೆಯಲ್ಲಿ ಈಗಾಗಲೇ ವಿವಿಧ ಆಸ್ಪತ್ರೆಗಳಲ್ಲಿ 2400 ಬೆಡ್ ಗಳನ್ನು ಕೋವಿಡ್-19 ರೋಗಿಗಳಿಗೆ ಮೀಸಲಿಡಲಾಗಿದ್ದು, ಮುಂಜಾಗ್ರತೆಗಾಗಿ ಇನ್ನೂಂದು ಸುಸಜ್ಜಿತ ಕೋವಿಡ್-19 ಆಸ್ಪತ್ರೆ ಸಿದ್ದಪಡಿಸಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಯ ನಸ್ ð ಗಳಿಗೆ ಐ.ಸಿ.ಯು ನಲ್ಲಿ ಕಾರ್ಯ ನಿರ್ವಹಣೆಯ ವಿಧಾನ ಕುರಿತಂತೆ ಮಣಿಪಾಲದ ಕೆಎಂಸಿ ಯಲ್ಲಿ ವಿಶೇಷ ತರಬೇತಿಗೆ ನಿಯೋಜಿಸುವಂತೆ ಆರೋಗ್ಯ ಇಲಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಕೋವಿಡ್-19 ರೋಗಿಯ ಸಂಪರ್ಕ ಪತ್ತೆ ಹಚ್ಚುವುದನ್ನು ತ್ವರಿತವಾಗಿ ಮಾಡಿ, ಆತನ ಮೊಬೈಲ್ ನ ಸಿಡಿಆರ್ ಮೂಲಕ ಪ್ರಾಥಮಿಕ ಸಂಪರ್ಕಿತರ ಮಾಹಿತಿ ಪಡೆಯಿರಿ, ರೋಗಿಯ ಸಂಪರ್ಕದ ಮಾಹಿತಿ ಪಡೆಯುವಲ್ಲಿ ವಿಳಂಬವಾದಲ್ಲಿ ಅದು ಇಡೀ ಸಮಾಜಕ್ಕೆ ಕಂಟಕವಾಗಲಿದೆ, ಸಂಪರ್ಕ ದ ಮಾಹಿತಿ ಪಡೆಯಲು ಪ್ರತಿ ತಾಲೂಕಿಗೆ ವಿವಿಧ ಇಲಾಖೆಯ 50 ಮಂದಿ ಸಿಬ್ಬಂದಿಯನ್ನು ನಿಯೋಜಿಸಿ, ಅವರಿಗೆ ಅಗತ್ಯ ತರಬೇತಿ ನೀಡಿ, ಈ ತಂಡದಲ್ಲಿ ಅತ್ಯಂತ ಕ್ಷಿಪ್ರ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಶೀತ, ಕೆಮ್ಮ, ನಗಡಿ, ಜ್ವರದಿಂದ ಬಳಲುತ್ತಿರುವ ರೋಗಿಗಳ ವಿವರ ನೀಡದ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ ಡಿಸಿ, ಪ್ರತಿದಿನ ವರದಿ ನೀಡುವಂತೆ ಹಾಗೂ ಶೀಘ್ರದಲ್ಲಿ ಪ್ರಕರಣ ಪತ್ತೆ ಹಚ್ಚಿದ್ದಲ್ಲಿ ಸಮುದಾಯಕ್ಕೆ ಹರಡದಂತೆ ತಡೆಯಲು ಮತ್ತು ರೋಗಿಯ ಜೀವ ಉಳಿಸಲು ಸಾಧ್ಯವಾಗಲಿದೆ, ಎಲ್ಲಾ ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರು ಪ್ರತಿ ದಿನ ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ, ಶೀತ, ಕೆಮ್ಮ, ನಗಡಿ, ಜ್ವರದಿಂದ ಬಳಲುತ್ತಿರುವ ರೋಗಿಗಳ ವರದಿ ನೀಡಬೇಕು, ಇಂತಹ ಲಕ್ಷಣಗಳಿದ್ದು , ರೋಗಿಯ ತಪಾಸಣೆ ಬಿಟ್ಟು ಹೋಗಿ , ಆ ವ್ಯಕ್ತಿಗೆ ಕೋವಿಡ್ ನಿಂದ ಮರಣ ಸಂಭವಿಸಿದ್ದಲ್ಲಿ , ಸಂಬAದಪಟ್ಟ ವ್ಯಾಪ್ತಿಯ ಸಿಬ್ಬಂದಿಗಳ ನಿರ್ಲಕ್ಷö್ಯತನದ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು. ಕಂಟೈನ್‌ಮೆAಟ್ ವಲಯದ ಕುರಿತು ನಿಯಮ ಬದಲಾಗಿದ್ದು, ಸ್ಥಳಿಯವಾಗಿ 2-3 ಪ್ರಕರಣ ಕಂಡುಬAದಲ್ಲಿ ಸಂಬAದಪಟ್ಟ ವ್ಯಕ್ತಿಯ ಮನೆಯ ಬದಲಾಗಿ , ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಿ , ಆ ಭಾಗದಲ್ಲಿನ ಸಾರ್ವಜನಿಕರನ್ನು ವ್ಯಾಪಕವಾಗಿ ಪರೀಕ್ಷೆಗೆ ಒಳಪಡಿಸಬೇಕು, ಜಿಲ್ಲೆಯಲ್ಲಿ ಪ್ರತಿದಿನ 650 ಮಂದಿಯ ಸ್ಯಾಂಪಲ್ ಪರೀಕ್ಷೆ ನಡೆಸುವಂತೆ ನಿರ್ದೇಶನವಿದ್ದು, ಜಿಲ್ಲೆಯ ಒಂದೇ ಬಾಗದಲ್ಲಿ ಸ್ಯಾಂಪಲ್ ತೆಗೆಯದೇ , ಜಿಲ್ಲೆಯಾದ್ಯಂತ ವಿವಿಧ ವರ್ಗಗಳಿಗೆ ಸೇರಿದ ಸಾರ್ವಜನಿಕರ ಸ್ಯಾಂಪಲ್ ತೆಗದು ಪರೀಕ್ಷೆ ನೆಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲೆಯಲ್ಲಿ ಕೋವಿಡ್ ವಾರಿರ‍್ಸ್ ಗಳಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂತಹ ಕಾರ್ಯಕ್ರಮಗಳಲ್ಲಿ ಯಾವುದೇ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ,ಇನ್ನು ಮುಂದೆ ಇಂತಹ ಸನ್ಮಾನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಿಬ್ಬಂದಿಗಳಿಗೆ ಹಾಗೂ ಇಂತಹ ಕಾರ್ಯಕ್ರಮ ಆಯೋಜಿಸುವ ಸ್ವಯಂ ಸಂಸ್ಥೆಗಳು ಮತ್ತು ಆಯೋಜಕರ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಕೋವಿಡ್ ನಿಯಂತ್ರಣ ನಿಯಮಗಳನ್ವಯ ಈ ರೀತಿಯ ಯಾವುದೇ ಸಮಾರಂಭಗಳನ್ನು ನಡೆಸುವುದಕ್ಕೆ ಅನುಮತಿ ಇಲ್ಲ , ಕೋವಿಡ್ ವಿರುದ್ದದ ನಿಜವಾದ ಹೋರಾಟ ಈಗ ಆರಂಭವಾಗಿದೆ, ಸನ್ಮಾನ ಕಾರ್ಯಕ್ರಮ ಮಾಡಿಕೊಂಡು ಮರೆಯುವ ಗಳಿಗೆ ಇದಲ್ಲ, ಕೊರೋನಾ ಮುಗಿದ ನಂತರ ಪ್ರತಿಯೊಬ್ಬರಿಗೂ ಜಿಲ್ಲಾಡಳಿತದಿಂದಲೇ ಸನ್ಮಾನ ಆಯೋಜಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಕೋವಿಡ್ ನಿಂದ ಮರಣ ಸಂಭವಿಸಿದಲ್ಲಿ , ಶವಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ರಚಿಸಲಾಗಿರುವ ತಂಡವು, ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳಲ್ಲಿ ನಿಗಧಿತ ಜಾಗ ಗುರುತಿಸಿರುವಂತೆ ಹಾಗೂ ನಿಯಮಗಳನ್ವಯ ಯಾವುದೇ ಲೋಪವಾಗದಂತೆ ಶವ ಸಂಸ್ಕಾರ ನಡೆಸುವಂತೆ ತಿಳಿಸಿದರು. ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ತಂಡಗಳಿಗೆ , ಸಂದರ್ಭಗಳಿಗೆ ತಕ್ಕಂತೆ ಸ್ವಯಂ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರ ನೀಡಿದ್ದು, ಯಾವುದೇ ಸಂದರ್ಭದಲ್ಲಿ ಲೋಪಗಳಾದಲ್ಲಿ ಸಂಬAದಪಟ್ಟ ತಂಡ ಮುಖ್ಯಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ 14 ತಂಡಗಳ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

ಪಾಸಿಟಿವ್ ವರದಿಯೊಂದಿಗೆ ಆಗಮಿಸಿದಲ್ಲಿ ಕ್ರಿಮಿನಲ್ ಮೊಕದ್ದಮೆ : ಜಿಲ್ಲಾಧಿಕಾರಿ ಜಿ.ಜಗದೀಶ್

Thumbnail
Posted On: 06 Jul 2020, 10:21 PM

ಉಡುಪಿ ಜುಲೈ 6 (ಕರ್ನಾಟಕ ವಾರ್ತೆ): ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಾರ್ವಜನಿಕರು, ಖಾಸಗಿ ಲ್ಯಾಬ್ ಗಳಲ್ಲಿ ನೀಡಿರುವ ತಮ್ಮ ಕೋವಿಡ್-19 ಪರೀಕ್ಷಾ ವರದಿ ಬರುವ ಮುನ್ನವೇ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಜಿಲ್ಲೆಗೆ ಆಗಮಿಸಿದ ನಂತರ ಅವರ ವರದಿಯು ಪಾಸಿಟಿವ್ ಆಗಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಲ್ಲಿ, ಅಂತಹ ವ್ಯಕ್ತಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಹೊರರಾಜ್ಯದಿಂದ ಬರುವ ವ್ಯಕ್ತಿಗಳು ತಮ್ಮ ಕೋವಿಡ್ 19 ಪರೀಕ್ಷಾ ವರದಿ ಬಂದ ನಂತರವೇ ಜಿಲ್ಲೆಗೆ ಬರಬೇಕು, ಖಾಸಗಿ ಲ್ಯಾಬ್ ಗಳೂ ಸಹ ಅಂತಹ ವ್ಯಕ್ತಿಗಳ ವರದಿಯನ್ನು ಸಂಬAದಪಟ್ಟ ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಜಿಲ್ಲೆಯಲ್ಲಿ ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದೇ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇಂತಹ ಬಸ್ ಗಳ ವಿರುದ್ದ ಇದುವರೆಗೂ ಪ್ರಕರಣ ದಾಖಲಿಸದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ನೋಟೀಸ್ ನೀಡುವಂತೆ ಸೂಚಿಸಿದರು. ಎಲ್ಲಾ ತಹಸೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಸಂಚರಿಸಿಸುವ ಬಸ್ ಗಳಲ್ಲಿ , ನಿಗಧಿತ ಸಂಖ್ಯೆಗಿAತ ಹೆಚ್ಚಿನ ಪ್ರಯಾಣಿಕರು ಕಂಡುಬAದಲ್ಲಿ , ಹೆಚ್ಚುವರಿ ಪ್ರಯಾಣಿಕರನ್ನು ಕೆಳಗಿಳಿಸಿ, ಬಸ್ ನ ಚಾಲಕ ಮತ್ತು ಕಂಡಕ್ಟರ್ ವಿರುದ್ದ ಪ್ರಕರಣ ದಾಖಲಿಸುವಂತೆ ಹಾಗೂ ಹೆಚ್ಚ್ಚುವರಿ ಪ್ರಯಾಣಿಕರಿಗೆ ಆರ್.ಟಿ.ಓ ಮೂಲಕ ಮತ್ತೊಂದು ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು. ಜಿಲ್ಲೆಯ ಎಲ್ಲಾ ಖಾಸಗಿ ಬಸ್ ಮಾಲೀಕರಿಗೆ ಮತ್ತು ಆರ್.ಟಿ.ಓ ಅಧಿಕಾರಿಗಳಿಗೆ ಈ ಹಿಂದೆಯೇ ಸಭೆ ನೆಡೆಸಿ, ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲನೆಗೆ ಸೂಚನೆಗಳನ್ನು ನೀಡಿದ್ದರೂ , ಸಹ ಇನ್ನೂ ಇದರ ಉಲ್ಲಂಘನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಗ್ರಾಮೀಣಾಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಬಹುಮುಖ್ಯ

Thumbnail
Posted On: 05 Jul 2020, 10:17 PM

ನಂದಳಿಕೆ.05, ಜುಲೈ :- ಯುವ ಜನತೆ ತಮ್ಮ ಬಿಡುವಿನ ವೇಳೆಯನ್ನು ಸಮಾಜಮುಖಿ ಕಾಯ೯ದಲ್ಲಿ ತೊಡಗಿಸಿಕೊಂಡರೆ ಗ್ರಾಮೀಣ ಮಟ್ಟದ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಜೇಸಿಐ ವಲಯ ತರಬೇತುದಾರ ರಾಘವೇಂದ್ರ ಪ್ರಭು,ಕವಾ೯ಲು ಹೇಳಿದರು. ಅವರು ಜೇಸಿಐ ಬೆಳ್ಮಣ್, ನೆಹರುಯುವ ಕೇಂದ್ರ ನಂದಳಿಕೆ ಅಬ್ಬನಡ್ಕ ಶ್ರೀ ದುಗಾ೯ ಪರಮೇಶ್ವರಿ ಫ್ರ್oಡ್ಸ್ ಕ್ಲಬ್ ಇದರ ಆಶ್ರಯದಲ್ಲಿ ಕ್ಲಬ್ ನ ರಂಗಮಂದಿರದಲ್ಲಿ "ಗ್ರಾಮೀಣಾಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ''ಎಂಬ ಕುರಿತು ನಡೆದ ತರಬೇತಿ ಕಾಯಾ೯ಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಎಲ್ಲದಕ್ಕೂ ಸಕಾ೯ರವನ್ನು ಕಾಯದೆ ಸಂಘ ಸಂಸ್ಥೆಗಳು ಅಭಿವೃದ್ಧಿ ನಡೆಸಲು ಸಾಧ್ಯ ಅದೇ ರೀತಿ ಮೂಲಭೂತ ಅವಶ್ಯಕತೆ ಕೊರತೆ ಬಗ್ಗೆ ಸಕಾ೯ರ ದ ಗಮನ ಸೆಳೆಯಬಹುದು ಎಂದರು. ಉದ್ಘಾಟನೆ ನೆರವೇರಿಸಿದ ಸ್ವಚ್ಚ ಭಾರತ ಪ್ರೇoಡ್ಸ್ ನ ಸ್ಥಾಪಕ, ಸಂಚಾಲಕ ಗಣೀಶ್ ಪ್ರಸಾದ ಜಿ.ನಾಯಕ್ ಯುವ ಜನರು ಸಂಘ ಸಂಸ್ಥೆಗಳಲ್ಲಿ ಸೇರುವ ಮೂಲಕ ವಿವಿಧ ಅಭಿವೃದ್ಧಿ ಪರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬಹುದು ಎಂದರು. ಜೇಸಿ ಅಧ್ಯಕ್ಷ, ಇಂದಾರು ಸತ್ಯನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು.ಕ್ಲಬ್ ಅಧ್ಯಕ್ಷ ಅಬ್ಬನಡ್ಕ ಸತೀಶ ಪೂಜಾರಿ, ಕಾಯ೯ದಶಿ೯ ಪ್ರಶಾಂತ್ ಪೂಜಾರಿ, ಮಹಿಳಾ ಕಾಯ೯ದಶಿ೯ ವೀಣಾ ಹರೀಶ್ ಪೂಜಾರಿ, ಜೆಸಿರೆಟ್ ಸೌಜನ್ಯ ಸತೀಶ್ ಕೋಟ್ಯಾನ್, ಜೆಜೆಸಿ ಸಂದೀಪ್ ಕುಲಾಲ್ ಮುಂತಾದವರಿದ್ದರು.

ಮಹಮ್ಮದನ್ ಯುವಕರ ತಂಡದಿಂದ ನಡ್ಸಾಲುವಿನಲ್ಲಿ ತಾತ್ಕಾಲಿಕ ರಸ್ತೆ ದುರಸ್ತಿ

Thumbnail
Posted On: 05 Jul 2020, 04:03 PM

ನಡ್ಸಾಲು.05, ಜುಲೈ : ದೀನ್ ಸ್ಟ್ರೀಟ್ ಪ್ರವೇಶಿಸುವ ರಸ್ತೆ ಮಳೆ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದ ಕಾರಣ ರಸ್ತೆ ತುಂಬಾ ನೀರು ನಿಂತು ಜನರು ನಡೆದುಕೊಂಡು ಹೋಗಲು ಮತ್ತು ವಾಹನದಲ್ಲಿ ಹೋಗಲು ತುಂಬಾ ಕಷ್ಟಕರವಾಗುತ್ತಿತ್ತು. ಎಷ್ಟು ಬಾರಿ ಪಂಚಾಯಿತಿಗೆ ತಿಳಿಸಿದರು ಕೂಡ ಪ್ರಯೋಜನವಾಗಲಿಲ್ಲ ಇದನ್ನು ಸ್ಥಳೀಯ ಮಹಮ್ಮದನ್ ಯುವಕರು ತಂಡ ಸೇರಿ ತಾತ್ಕಾಲಿಕವಾಗಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಿ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿ ಮತ್ತು ಜನಪ್ರತಿನಿಧಿಗಳು ಇದನ್ನು ಆದಷ್ಟು ಬೇಗ ಸರಿಪಡಿಸಿ ಕೊಡಬೇಕಾಗಿ ತಮ್ಮಲ್ಲಿ MOHAMMADAN HELPING HAND ವಿನಂತಿಸಿಕೊಳ್ಳುತ್ತಿದ್ದಾರೆ

ಕಾಪುವಿನ ದಕ್ಷ, ಪ್ರಾಮಾಣಿಕ, ಜನಸ್ನೇಹಿ ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್

Thumbnail
Posted On: 05 Jul 2020, 02:05 PM

ಮಹೇಶ್ ಪ್ರಸಾದ್ ಪ್ರಸ್ತುತ ನಮ್ಮ ಕಾಪು ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರು, ಇವರು ಈ ಹಿಂದೆ ಹಿರಿಯಡ್ಕ ,ಕೋಟ,ಬಂಟ್ವಾಳದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು .ಹಿರಿಯಡ್ಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರುವಾಸಿಯಾದವರು .ತದನಂತರ ಕೋಟ ಠಾಣೆಗೆ ವರ್ಗಾವಣೆಯಾದ ಬಳಿಕ ಅಲ್ಲಿ ನಡೆಯುತ್ತಿರುವ ಮಟ್ಕಾ ,ಇಸ್ಪೀಟ್,ಇನ್ನಿತರ ಕಳ್ಳ ದಂಧೆಗಳಿಗೆ ಬ್ರೇಕ್ ಹಾಕಿದವರು ಇದೇ ಮಹೇಶ್ ಪ್ರಸಾದ್ . ಯಾವುದೇ ರಾಜಕೀಯ ಶಿಫಾರಸುಗಳಿಗೆ ಬೆಲೆ ಕೊಡುತ್ತಿರಲಿಲ್ಲ .ಸಾಮಾನ್ಯ ಜನತೆಗೆ ಠಾಣೆಗೆ ಬರಲು ಮುಕ್ತ ಅವಕಾಶ ನೀಡುತ್ತಿದ್ದರು .ತಪ್ಪು ಮಾಡಿದರೆ ಮೊದಲು ಅವರ ಮೇಲೆ ಎಫ್. ಐ.ಆರ್ ಆಗುತ್ತಿತ್ತು .ದಿನದ ಇಪ್ಪತ್ತನಾಲ್ಕು ಗಂಟೆ ಕರ್ತವ್ಯ ನಿರ್ವಹಿಸಿದ ಹೆಗ್ಗಳಿಕೆ ಇವರಿಗಿದೆ .ಪೊಲೀಸ್ ಪೇದೆಗಳು ಇವರ ವರ್ಗಾವಣೆ ಯಾವಾಗ ಆಗುತ್ತದೆ ಎಂದು ಕಾಯುತ್ತಿದ್ದರು .ಕೋಟದಲ್ಲಿ ಇವರು ಇರುವಾಗ ಪುಂಡ ಪೋಕರಿಗಳ ಹೆಡೆಮುರಿ ಕಟ್ಟಿ ರೌಡಿಶೀಟ್ ಓಪನ್ ಮಾಡಿದ ಖ್ಯಾತಿ ಇವರಿಗಿದೆ.ಕೋಟದ ಜನತೆಗೆ ಪೊಲೀಸ್ ಹೇಗಿರಬೇಕೆಂದು ತೋರಿಸಿಕೊಟ್ಟವರು ಇವರು .ಇಂದಿಗೂ ಕೂಡ ಕೋಟದ ವ್ಯಾಪ್ತಿಯಲ್ಲಿ ಅವರಿಗೆ ವಿಶೇಷ ಗೌರವವಿದೆ. ವಿಶೇಷ ತನಿಖಾಧಿಕಾರಿಯಾಗಿ ಮಹೇಶ್ ಪ್ರಸಾದ್ :ಮಹೇಶ್ ಪ್ರಸಾದ್ ಇವರ ಕರ್ತವ್ಯ ಪರತೆ ಹಾಗೂ ಚುರುಕುತನವನ್ನು ನೋಡಿ ಅಂದಿನ ಎಸ್ಪಿ ಅವರು ಕೋಟ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಮಹೇಶ್ ಪ್ರಸಾದರ ವಿಶೇಷ ತಂಡ ರಚನೆ ಮಾಡಿ ಭೂಗತ ಜಗತ್ತಿನ ಪಾತಕಿಯಾದ ಕೊರಗ ಶೆಟ್ಟಿ ಇವರ ಸಹಚರರ ದಸ್ತಗಿರಿ ಮಾಡಿದ್ದರು. ಆರ್.ಟಿ.ಐ ಕಾರ್ಯಕರ್ತ ವಂಡಾರು ವಾಸುದೇವ ಅಡಿಗ ಕೊಲೆ ಪ್ರಕರಣದ ವಿಶೇಷ ತನಿಖಾಧಿಕಾರಿ : ಕೋಟದಿಂದ ಮಹೇಶ್ ಪ್ರಸಾದ್ ಇವರು ಬಂಟ್ವಾಳಕ್ಕೆ ವರ್ಗಾವಣೆಯಾದ ನಂತರ ಆರ್ ಟಿ ಐ ಕಾರ್ಯಕರ್ತ ವಂಡಾರು ವಾಸುದೇವ ಅಡಿಗರ ಕೊಲೆಯಾದ ತಕ್ಷಣ ಆ ಗಂಭೀರ ಪ್ರಕರಣಕ್ಕೆ ವಿಶೇಷ ತನಿಖಾಧಿಕಾರಿಯಾಗಿ ಬಂದವರು ಇದೇ ಮಹೇಶ್ ಪ್ರಸಾದ್ .ಅತ್ಯಂತ ಕ್ಲಿಷ್ಟಕರವಾದ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಜನಮನ್ನಣೆ ಗೊಂಡವರು . ಕೋಟದ ಅವಳಿ ಕೊಲೆಯ ವಿಶೇಷ ತನಿಖಾಧಿಕಾರಿ ಕಳೆದ ಒಂದು ವರ್ಷದ ಹಿಂದೆ ಕೋಟದಲ್ಲಿ ಡಬ್ಬಲ್ ಮರ್ಡರ್ ಆಗಿ ಆರೋಪಿಗಳ ಪತ್ತೆ ಹಚ್ಚುವಂತೆ ಕೋಟದಲ್ಲಿ ಪ್ರತಿಭಟನೆ ನಡೆದಾಗ ಆ ಪ್ರಕರಣಕ್ಕೆ ವಿಶೇಷ ತನಿಖಾಧಿಕಾರಿಯಾಗಿ ಬಂದವರೇ ಇದೇ ಮಹೇಶ್ ಪ್ರಸಾದ್ .ಡಬ್ಬಲ್ ಮರ್ಡರ್ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ ಖ್ಯಾತಿ ಇವರಿಗಿದೆ . ಶಿರ್ವದ ಫಾದರ್ ಮಹೇಶ್ ಅವರ ಪ್ರಕರಣದ ವಿಶೇಷ ತನಿಖಾಧಿಕಾರಿ : ಶಿರ್ವ ಚರ್ಚಿನ ಫಾದರ್ ಮಹೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿರ್ವದಲ್ಲಿ ಅತಿ ದೊಡ್ಡ ಪ್ರತಿಭಟನೆ ನಡೆದಿತ್ತು .ಅಂದಿನ ಎಸ್ಪಿ ಅವರಿಗೆ ನೆನಪಾಗಿದ್ದು ಇದೇ ಮಹೇಶ್ ಪ್ರಸಾದ್ .ಆ ಪ್ರಕರಣದ ವಿಶೇಷ ತನಿಖಾಧಿಕಾರಿಯಾಗಿ ಸ್ವತಃ ಆರೋಪಿಯ ಮೇಲೆ ಎಫ್ಐಆರ್ ದಾಖಲು ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ದವರು . ಮಣಿಪಾಲದಲ್ಲಿ ಪರಪ್ಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಣೆ ಅಣ್ಣಾಮಲೈ ಅವರು ಎಸ್ಪಿ ಆಗಿರುವ ಸಂದರ್ಭದಲ್ಲಿ ಮಣಿಪಾಲದಲ್ಲಿ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು .ಮಣಿಪಾಲದ ವಿದ್ಯಾರ್ಥಿಗಳ ಫ್ಲ್ಯಾಟ್ ಒಂದರಲ್ಲಿ ಗಾಂಜಾ ಪ್ರಕರಣವನ್ನು ಪತ್ತೆ ಹಚ್ಚಿ ಹೆಸರುವಾಸಿಯಾಗಿದ್ದರು ಪುತ್ತೂರಿನಲ್ಲಿ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಣೆ : ಕಾಪು ಠಾಣೆಗೆ ವೃತ್ತ ನಿರೀಕ್ಷಕರಾಗಿ ಬರುವುದಕ್ಕಿಂತ ಮುಂಚೆ ಇವರು ಪುತ್ತೂರು ನಗರ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು .ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ ಪುತ್ತೂರಿನಲ್ಲಿ ಪ್ರಾಮಾಣಿಕ ,ದಕ್ಷ, ಜನಸ್ನೇಹಿ ಪೊಲೀಸ್ ಎಂಬ ಹೆಸರು ಗಳಿಸಿದವರು .ಪೂರ್ಣ ಪುತ್ತೂರಿಗೆ ಮುಖ್ಯ ಮುಖ್ಯ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಸಾರ್ವಜನಿಕರ ದೇಣಿಗೆಯಲ್ಲಿ ಅಳವಡಿಸಿ ಅದರ ಕಂಟ್ರೋಲ್ ರೂಮನ್ನು ಠಾಣೆಯಲ್ಲಿ ಮಾಡಿಕೊಟ್ಟು ರಾಜ್ಯದಲ್ಲೇ ಪ್ರಪ್ರಥಮ ಸಿಸಿ ಕೆಮರಾ ಅಳವಡಿಕೆ ಠಾಣೆ ಎಂದು ಹೆಸರುವಾಸಿ ಗಳಿಸಿದರು . ಮಹೇಶ್ ಪ್ರಸಾದರ ಹೆಸರಿಗೆ ಹಾಗೂ ಹುಟ್ಟಿಗೆ ವಿಶೇಷ ಅರ್ಥವಿದೆ : 1978 ನೇ ಇಸವಿಯಲ್ಲಿ ಪುತ್ತೂರಿನಲ್ಲಿ ಮಹೇಶ್ ಪ್ರಸಾದ್ ಇವರ ತಂದೆ ಕಾನ್ ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು .ಅವರ ತಂದೆ ಮೇಲಧಿಕಾರಿಗೆ ಸೆಲ್ಯೂಟ್ ಮೂಲಕ ಗೌರವ ಸೂಚಿಸುವಾಗ ಮಹೇಶ್ ಅವರ ತಂದೆಯ ಮನಸ್ಸಿನಲ್ಲಿ ತನಗೆ ಗಂಡು ಮಗುವೇ ಹುಟ್ಟಬೇಕು ,ತನ್ನ ಮಗ ಓರ್ವ ಪೊಲೀಸ್ ಅಧಿಕಾರಿಯಾಗಬೇಕು ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಲ್ಲಿ ಪ್ರಾರ್ಥಿಸಿದ್ದರಂತೆ. ಮಹೇಶ್ ಪ್ರಸಾದ್ ಅವರ ತಂದೆಯ ಪ್ರಾರ್ಥನೆಯ ಫಲವೆಂಬಂತೆ ಶ್ರೀ ಮಹಾಲಿಂಗೇಶ್ವರ ದೇವರು ಮಹೇಶ್ ಪ್ರಸಾದ್ ಅವರ ತಂದೆ ತಾಯಿಗೆ ಗಂಡು ಮಗುವಿನ ಪ್ರಸಾದವನ್ನು ಕರುಣಿಸಿದರು .ಶ್ರೀ ಮಹಾಲಿಂಗೇಶ್ವರ ದೇವರ ವರಪ್ರಸಾದ ಎಂಬಂತೆ ಮಹೇಶ್ ಪ್ರಸಾದ್ ರವರ ಹೆಸರಿನಲ್ಲಿ ಮಹೇಶ- ಪ್ರಸಾದ ಕಾಣಿಸಿಕೊಂಡಿದೆ .ಮನಸ್ಸಿನ ತುಡಿತವೂ ನಾಡಿ ಮಿಡಿತವು ಎಂಬಂತೆ 2003 ರಲ್ಲಿ ಪೊಲೀಸ್ ಇಲಾಖೆಗೆ ಸೇರಿ 2016 ರಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ತಾನು ಹುಟ್ಟಿದ ಊರಾದ ಪುತ್ತೂರಿನಲ್ಲಿ ಕರ್ತವ್ಯ ನಿರ್ವಹಿಸಿ ಹೆಸರುವಾಸಿಯಾದವರು . ಪುತ್ತೂರು ಠಾಣೆಯಿಂದ ಕಾಪು ಠಾಣೆಗೆ ಕಳೆದ ಒಂದು ವರ್ಷದಿಂದ ಈಚೆಗೆ ಪುತ್ತೂರು ಠಾಣೆಯಿಂದ ವರ್ಗಾವಣೆಗೊಂಡು ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ .ಇವರ ಕರ್ತವ್ಯದ ಅವಧಿಯಲ್ಲಿ ಕಾಪು ಪರಿಸರದಲ್ಲಿ ಶಾಂತಿ ನೆಲೆಸಲಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳು ಮುಕ್ತವಾಗಲಿ ಎಂದು ಶುಭ ಹಾರೈಸೋಣ..

ಮುಗ್ದ ಬಾಲಕನ ಭಕ್ತಿಗೆ ಒಲಿದ ಇನ್ನಂಜೆಯ ಉಂಡಾರು ಶ್ರೀ ವಿಷ್ಣುಮೂರ್ತಿ

Thumbnail
Posted On: 05 Jul 2020, 12:38 PM

ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಇದು ಇನ್ನಂಜೆ ಗ್ರಾಮದ 700 ವರ್ಷಗಳ ಇತಿಹಾಸವಿರುವ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೂಲ ಕತೆ. ಏಳುನೂರು ವರ್ಷಗಳ ಹಿಂದೆ ಇಲ್ಲಿ ಒಂದು ಪವಾಡ ನಡೆದಿತ್ತು. ಅಂದು ಆಷಾಢ ಅಮಾವಾಸ್ಯೆ, ದೇವಸ್ಥಾನದ ಅರ್ಚಕರು ಕೆಲಸ ನಿಮಿತ್ತ ದೂರದ ಊರಿಗೆ ಹೋಗಿರುತ್ತಾರೆ, ಮಧ್ಯಾನ್ನವಾದರೂ ಹಿಂತಿರುಗಿ ಬಂದಿರುವುದಿಲ್ಲ. ನಿತ್ಯ ಪೂಜೆಯ ಅರ್ಚಕರ ಮನೆಯವರು ದೇವರ ಪೂಜೆ ಆಗದೆ ಊಟ ಮಾಡುವಂತಿರಲಿಲ್ಲ. ಅವರ ಮಗ ಬಾಲ ವಟುವಿಗೆ (ಮಾಣಿ) ತುಂಬಾ ಹಸಿವಾಗ ತೊಡಗಿ ದೇವರ ಪೂಜೆ ತಾನು ಮಾಡಿ ಬರುವೆ ಎಂದು ತಾಯಿಯ ಬಳಿ ಹೇಳುತ್ತಾನೆ. ಆಗ ತಾಯಿ ಹೇಳುತ್ತಾಳೆ; ಪೂಜೆ ಅಷ್ಟು ಸುಲಭವಿಲ್ಲ, ನೈವೇದ್ಯ ಮಾಡಿ ದೇವರಿಗೆ ಉಣಿಸಬೇಕು ಅದೆಲ್ಲ ನಿನ್ನಿಂದ ಆಗದು. ಸ್ವಲ್ಪ ತಡೆದು ಕೋ ಇನ್ನೇನು ನಿನ್ನ ಅಪ್ಪ ಬಂದು ಪೂಜೆ ಮುಗಿಸುವರು ಎಂದು ಸಮಾಧಾನ ಪಡಿಸುತ್ತಾಳೆ.ಅದರೆ ವಟು ಮಾತ್ರ ಸ್ನಾನಾದಿ ನಿಯಮಗಳನೆಲ್ಲ ಮಾಡಿಕೊಂಡು ಪೂಜೆಗೆ ತೆರಳಿ, ನೈವೇದ್ಯ ತಯಾರು ಮಾಡಿ, ದಿನಾ ತಂದೆ ಮಾಡುತ್ತಿರುವಂತೆ ದೇವರ ವಿಗ್ರಹಕ್ಕೆ ಅರ್ಘ್ಯಪಾದ್ಯ ಆಚಮನ ಪರಿಕರಗಳಿಂದ ಅಭಿಷೇಕಮಾಡಿ, ಶುದ್ದ ವಸ್ತ್ರ ಉಡಿಸಿ, ಹೂವಿನ ಅಲಂಕಾರಮಾಡಿ, ದೇವರ ಎದುರು ನೈವೇದ್ಯ ಇಟ್ಟು ದೇವರಲ್ಲಿ ಉಣಲು ನಿವೇದನೆ ಮಾಡುತ್ತಾನೆ. ವಾಡಿಕೆಯಂತೆ ತುಳುವಿನಲ್ಲಿ "ಉಣ್ಲೆ ದೇವರೆ" (ಊಟ ಮಾಡಿ ದೇವರೇ) ಎನ್ನುತ್ತಾನೆ.ಅದರೆ ನೈವೇದ್ಯ ಹಾಗೆ ಇರುತ್ತದೆ. ನನ್ನ ಅಪ್ಪ ಹೇಗೆ ಉಣಿಸುತ್ತಿದ್ದಾರೋ ನನಗೆ ಗೊತ್ತಿಲ್ಲ , (ಅಪಯೇರ್ ಎಂಚ ಉಣ್ಪಾವೇರ್ ಪಂಡ್ದ್ ಎಂಕ್ ಗೊತ್ತುಜ್ಜಿ " ಬೇಗ ಉಣ್ಲೆ") ಎಂದು ಪರಿಪರಿಯಾಗಿ ನಿವೇದಿಸಿದರೂ ನೈವೇದ್ಯ ಹಾಗೆ ಇರುತ್ತದೆ. ಮಾಣಿಗೆ ದುಃಖ ಬರುತ್ತದೆ. ಕೊನೆಗೆ ಯೋಚಿಸಿ, ದೇವರಿಗೆ ಪಲ್ಯ ಇಲ್ಲದೆ ಊಟ ಸೇರುತ್ತಿಲ್ಲ ಕಾಣುತ್ತೆ ಎಂದು ಮನೆಗೆ ತೆರಳಿ ತನ್ನ ತಾಯಿಗೆ ತಿಳಿಯದಂತೆ ಮನೆಯಲ್ಲಿ ತಯಾರಿಸಿಟ್ಟ ಉಪ್ಪುನೀರಿನಲ್ಲಿ ಹಾಕಿಟ್ಟ ಮಾವಿನಕಾಯಿ ಚಟ್ನಿ (ಕುಕ್ಕುದ ಚಟ್ನಿ) - ವ್ರತ ಊಟದಲ್ಲಿ ಹುಣಸೆ ಹುಳಿಯ ಬದಲಿಗೆ ಉಪಯೋಗಿಸುವ ಹುಳಿ, ತಂದಿಟ್ಟು ಮತ್ತೆ ದೇವರೇ ಉಣ್ಲೇ (ಊಟ ಮಾಡಿ) ಎಂದು ನಿವೇದಿಸುತ್ತಾ ನಿವೇದಿಸುತ್ತಾ ಅಲ್ಲೇ ನಿದ್ರೆಗೆ ಜಾರುತ್ತಾನೆ. ಎಚ್ಚರವಾಗುವಾಗ ನ್ಯೆವೇದ್ಯ ಕುಕ್ಕುದ ಚಟ್ನಿ ಎಲ್ಲವೂ ಖಾಲಿಯಾಗಿರುತ್ತದೆ. ಮಾಣಿಗೆ ಖುಷಿಯಾಗಿ "ದೇವೆರ್ ಉಂಡೆರ್ (ದೇವರು ಊಟ ಮಾಡಿದರು) ಅಮ್ಮಾ ನನಗೆ ಊಟ ಬಡಿಸು " ಎಂದು ಓಡೋಡಿ ಬಂದು ತಾಯಿಯ ಬಳಿ ಹೇಳುತ್ತಾನೆ. ಆದರೆ ತಾಯಿ ನಂಬುವುದಿಲ್ಲ. ಅಗಷ್ಟೆ ಮನೆಗೆ ಹಿಂತಿರುಗಿ ಬಂದ ತಂದೆಗೂ ವಿಷಯ ತಿಳಿಯುತ್ತದೆ. ಮಗ ಸುಳ್ಳು ಹೇಳುತ್ತಿದ್ದಾನೆ ಎಂದು ತಂದೆಗೆ ಮಗನ ಮೇಲೆ ಎಲ್ಲಿಲ್ಲದ ಸಿಟ್ಟು ಬರುತ್ತದೆ; " ಏಯ್ ದೇವರು ಎಂದಾದರೂ ನೈವೇದ್ಯ ಉಣ್ಣುತ್ತಾರೆಯೇ? ಹಸಿವು ಹಸಿವು ಅಂತ ಹೇಳಿ ನೀನೇ ತಿಂದು , ದೇವಾಲಯವನ್ನು ಅಪವಿತ್ರ ಮಾಡಿದ್ದಲ್ಲದೆ ಸುಳ್ಳು ಬೇರೆ ಹೇಳುತ್ತೀಯಾ?" ಎಂದು ಬೆತ್ತ ಹಿಡಿದು ಗದರಿಸುವಾಗ, ದೇವರ ಅಶರೀರವಾಣಿ ಕೇಳಿತಂತೆ " ಆ ಮಗುವಿಗೆ ಹೊಡೆಯಬೇಡ ; ಅವನ ಮುಗ್ಧ ಭಕ್ತಿಗೆ ಮೆಚ್ಚಿ ನಾನು ಉಣದೆ ಇರಲು ಸಾಧ್ಯವಾಗಲಿಲ್ಲ ,ನಾನು ಎಲ್ಲವನ್ನೂ ಉಂಡೆ". ಹೀಗೆ ಬಾಲವಟುವಿನ ಮುಗ್ದ ಭಕ್ತಿಗೆ ಮೆಚ್ಚಿ ಉಂಡ ದೇವರ ಊರಿಗೆ ವಿಶೇಷಣ ಸೇರಿ " ಉಂಡಾರು" ಎಂಬ ಹೆಸರು ಬಂದಿದೆ. ಶ್ರೀನಿವಾಸ್ ಪ್ರಭು. (ಸ್ಪೂರ್ತಿ) ಬಂಟಕಲ್ಲು ಉಡುಪಿ. 8762924232

ಹಲ್ಲು,ಉಗುರು ಮತ್ತು ಕಾಲಿನಿಂದ ತೆಂಗಿನಕಾಯಿ ಸಿಪ್ಪೆ ಸುಲಿದು ದಾಖಲೆ ಮಾಡಿದ ರಾಜೇಶ್ ಪ್ರಭು

Thumbnail
Posted On: 04 Jul 2020, 10:32 PM

ಸಮಾಜದಲ್ಲಿ ಹಲವಾರು ಜನ ವಿವಿಧ ಸಾಧಕರಿದ್ದಾರೆ. ಅದರಲ್ಲಿಯೂ "ಆ ಸಾಧನೆಯಿಂದಲೆ ಹೆಸರು ವಾಸಿಯಾಗುವವರು ಬಹಳ ಕಡಿಮೆ ಮಂದಿ ಹೀಗಾಗಿ ಸಾಧನೆಗೆ ಸರಿಯಾದ ಮಾನ್ಯತೆ ದೊರೆಯದಿದ್ದರೆ ಅದು ಅಲ್ಲಿಯೇ ಕಮರಿ ಹೋಗಬಹುದು. ಆದರೆ ಕಾಪು ತಾಲೂಕಿನ ಶಿವ೯ ಸಮೀಪ ಪೆನಾ೯ಲಿ ನ.ರಾಜೇಶ್ ಪ್ರಭು ಎಂಬುವವರು ತನ್ನ ವಿಶೇಷ ಸಾಧನೆಯಿಂದ ಇಂದು ವಿಶ್ವ ದಾಖಲೆ ಮಾಡುವತ್ತ ದಾಪುಗಾಲು ಹಾಕುತ್ತಿದ್ದಾರೆ. ಹಲ್ಲು 30 ಸೆಕೆಂಡ್, ಕಾಲು 46 ಸೆ. ಉಗುರು 33 ಸೆ.. ಇದು ಅವರು ವಲ್ಡ್ ಇಂಡಿಯಾ ರೆಕಾಡ್೯ಗೆ ತೆಂಗಿನಕಾಯಿ ಸುಲಿಯುದಕ್ಕೆ ವ್ಯಯಿಸಿದ ಸಮಯ. ನಿಮಗೆ ಆಶ್ಚಯ೯ವಾಗಬಹುದು ತೆಂಗಿನಕಾಯಿಯನ್ನು ಕತ್ತಿಯಿಂದ ಅಥವಾ ಇತರ ಸಾಧನದಿಂದ ಸುಲಿಯಲು ಕಷ್ಟ ಪಡುವ ನಾವು ಕೇವಲ ಹಲ್ಲು, ಉಗುರು' ಕಾಲಿನಿಂದ ಸಿಪ್ಪೆ ಸುಲಿಯುವುದು ದೂರದ ಮಾತು ಆದರೆ ರಾಜೇಶ್ ಪ್ರಭುರವರು ಇದನ್ನು ಅತ್ಯಂತ ಚಮತ್ಕಾರದಲ್ಲಿ ಮುಗಿಸುತ್ತಾರೆ. ಮಹಾರಾಷ್ಟ್ರದ ನಾಸಿಕ್ ನಲ್ಲಿ 28 ಇಂಚು ಸುತ್ತಳತೆಯ 4.477 ಕೆ.ಜಿ ತೂಕದ ತೆಂಗಿನಕಾಯಿಯನ್ನು ಉಗುರು ಕಾಲು, ಮತ್ತು ಹಲ್ಲಿನಿಂದ ಸುಲಿದು ದಾಖಲೆ ಮಾಡಿದ್ದಾರೆ.ಈಗಾಗಲೇ ವಿವಿಧ ಕಡೆಗಳಲ್ಲಿ ಈ ಪ್ರದಶ೯ನವನ್ನು ನೀಡಿ ಎಲ್ಲರಿಂದಲೂ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅದರಲ್ಲಿಯೂ ಭಾರತದಲ್ಲಿ ಬರೇ ಕಾಲಿನಿಂದ ತೆಂಗಿನಕಾಯಿ ಸುಲಿಯುವವರು ಬಹಳ ಕಡಿಮೆ ಆದರೆ ಇವರು 3 ವಿಭಾಗದಲ್ಲಿಯೂ ಈ ಸಾಧನೆ ಮಾಡಿದ ಮೊದಲ ವ್ಯಕ್ತಿಯಾಗಿದ್ದಾರೆ.ಈಗಾಗಲೇ ಲಿಮ್ಕಾ ದಾಖಲೆ ಮಾಡಿರುವ ಇವರು ಗಿನ್ನೆಸ್ ದಾಖಲೆಗಾಗಿ ಪ್ರಯತ್ನ ಮಾಡುತ್ತಿದ್ದಾರೆ. 1997 ರಲ್ಲಿ ಪ್ರಾರಂಭವಾದ ಈ ಹವ್ಯಾಸ ಅಥವಾ ದಾಖಲೆಯ ಪಯಣ ಇಂದಿನವರೆಗೆ ಸಾಗಿದೆ. ಈ ಬಗ್ಗೆ ಅವರೊಂದಿಗೆ ಮಾತನಾಡಿದಾಗ ಮೊದಲು ಬಹಳ ಕಷ್ಟವಾಗುತ್ತಿತ್ತು ಒಂದು ತೆಂಗಿನಕಾಯಿಯ ಸಿಪ್ಪೆ ಸುಲಿಯಲು ಹಲ್ಲು, ಉಗುರು' ಕಾಲಿನಿಂದ ಬಹಳ ಸಮಯ ತೆಗೆದುಕೊಳ್ಳುತ್ತಿದ್ದೆ ಆದರೆ ಇಂದು ಕೆಲವೇ ಸೆಕೆಂಡುಗಳಲ್ಲಿ ಇದನ್ನು ಮಾಡಲು ಸಾಧ್ಯವಾಗಿದೆ.ಮಂಗಗಳು ತಮ್ಮ ಬೆರಳನ್ನು ಉಪಯೋಗಿಸಿ ಅಥವಾ ಹಲ್ಲಿ ನಿಂದ ಸಿಪ್ಪೆ ಸುಲಿಯುದನ್ನು ಗಮನಿಸಿ ಯಾಕೆ ನಾನು ಪ್ರಯತ್ನ ಮಾಡಬಾರದು ಎಂದು ಇದನ್ನು ಪ್ರಾರಂಭಿಸಿದೆ.ಮೊದಲಿನಿಂದಲೂ ಸಾಹಸ ಕಲೆಯಲ್ಲಿ ಆಸಕ್ತಿ ಹೊಂದಿದ ಕಾರಣ ನನಗೆ ಇದನ್ನು ಮಾಡಲು ಸಾದ್ಯವಾಯಿತು ಎಂದು ಅವರು ಹೇಳುತ್ತಾರೆ. ಇದಲ್ಲದೆ 2 ಕೈಯಿಂದಲೂ ಕನ್ನಡಿ ಬರಹವನ್ನು ಬರೆಯಬಲ್ಲರು ಇವರು ಸಾಮಾನ್ಯ ಹಳ್ಳಿ ಪ್ರದೇಶದಲ್ಲಿ ಬೆಳೆದರೂ ಸ್ಥಳೀಯ ಜನರ ಪ್ರೇರಣೆಯಿಂದ ಈ ಸಾಧನೆ ಸಾಧ್ಯವಾಯಿತು ಎನ್ನುತ್ತಾರೆ. ಮಂಗಳೂರಿನ ಖಾಸಗಿ ಟ್ರಾವೆಲ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಇವರು ಇದನ್ನು ಹವ್ಯಾಸವಾಗಿ ಮಾಡಿದ್ದಾರೆ. ಮನೆಯಲ್ಲಿ ತೆಂಗಿನಕಾಯಿ ಸುಲಿಯಲು ಕತ್ತಿ ಸಿಗದಿದ್ದಾಗ ಅವರು ಬರೇ ಕೈಯಿಂದ ಸಿಪ್ಪೆ ಸುಲಿದು ಮನೆಯವರಿಗೆ ಸಹಾಯ ಮಾಡುತ್ತಾರೆ. 60.ಕೆ.ಜಿ ಭಾರವನ್ನು ಹಲ್ಲಿನಿಂದ ಎತ್ತುವುದು ಮುಂತಾದ ಸಾಹಸವನ್ನು ಅವರು ಮಾಡಬಲ್ಲರು ಈಗಾಗಲೇ ವಲ್ಡ್ ರೆಕಾಡ್ ೯ ಇಂಡಿಯಾಕ್ಕೆ ಸೇಪ೯ಡೆಯಾದ ಇವರು ಪ್ರವಾಸ ಹೋದಾಗ ಮನರಂಜನೆಗಾಗಿ ಈ ರೀತಿಯ ಪ್ರದಶ೯ನ ಮಾಡುತ್ತಾರೆ.ಗಿನ್ನೆಸ್ ದಾಖಲೆಗಾಗಿ ಲಕ್ಷಾಂತರ ರೂ ವ್ಯಯಿಸಬೇಕಾಗಿದೆ ಅಷ್ಟೋoದು ಹಣವನ್ನು ಹೊಂದಾಣಿಕೆ ಮಾಡುವುದು ಕಷ್ಠವಾಗಿದೆ ದಾನಿಗಳು ಮುಂದೆ ಬಂದರೆ ಈ ಸಾಧನೆ ಮಾಡುವಾಗಿ ಹೇಳಿದ್ದಾರೆ.ಈ ರೀತಿಯ ಸಾಧನೆಗೆ ಹಳ್ಳಿಯ ಪರಿಸರ ಸಹಾಯಕ ವಾಗಿದೆ ನಗರದಲ್ಲಿ ಇದು ಸಾಧ್ಯವಾಗುತ್ತಿರಲಿಲ್ಲ ವಾತಾವರಣ ಮತ್ತು ಮಂಗಗಳು ನನಗೆ ಪ್ರೇರಣೆ ಎನ್ನುತ್ತಾರೆ. ಅವರು ಈ ಸಾಧನೆ ಬೇಗನೆ ಮಾಡಲಿ ಎಂಬ ಶುಭ ಹಾರೈಕೆ ನಮ್ಮದಾಗಿದೆ. ಲೇಖನ: ರಾಘವೇಂದ್ರ ಪ್ರಭು , ಕವಾ೯ಲು

ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕಟ್ಟುನಿಟ್ಟಿನ ಲಾಕ್ ಡೌನ್

Thumbnail
Posted On: 04 Jul 2020, 08:07 PM

ಉಡುಪಿ ಜುಲೈ 4 (ಕರ್ನಾಟಕ ವಾರ್ತೆ): ಜುಲೈ 5 ರ ಭಾನುವಾರದಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಪಾಲನೆಯಾಗಲಿದ್ದು, ಈ ಅವಧಿಯಲ್ಲಿ ಅವಶ್ಯಕ ಸೇವೆಗಳಾದ ಹಾಲು, ದಿನ ಪತ್ರಿಕೆ , ಆಸ್ಪತ್ರೆ, ಮತ್ತು ಔಷಧ ಅಂಗಡಿಗಳು ಮಾತ್ರ ತರೆಯಲಿದ್ದು, ಇತರೆ ಯಾವುದೇ ಅಂಗಡಿಗಳು ತರೆಯುವಂತಿಲ್ಲ, ಅಗತ್ಯ ವಸ್ತುಗಳ ಸರಕು ಸಾಗಾಣಿಕೆಗೆ ಮಾತ್ರ ಅವಕಾಶವಿದ್ದು, ಈಗಾಗಲೇ ಅನುಮತಿ ಪಡೆದಿರುವ ವಿವಾಹಗಳಲ್ಲಿ ನಿಗಧಿತ ಸಂಖ್ಯೆಯ ಜನರು ಮಾತ್ರ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಲಾಕ್‌ಡೌನ್ ಅವಧಿಯಲ್ಲಿ ಅನಗತ್ಯವಾಗಿ ವಾಹನಗಳಲ್ಲಿ ಓಡಾಡಿದರೆ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಹಾಗೂ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವವರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಈಗಾಗಲೇ ಸೆಕ್ಷನ್ 144 ಜಾರಿಗೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.