Updated News From Kaup
ಫೆ. 20-23 : ಉದ್ಯಾವರದಲ್ಲಿ ಏಳನೇ ವರ್ಷದ ನಿರಂತರ ಬಹುಭಾಷಾ ನಾಟಕೋತ್ಸವ
Posted On: 20 Feb 2025, 10:42 AM
ಕಾಪು : ಕಲೆ, ಸಾಹಿತ್ಯಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಘಟನೆ 7ನೇ ವರ್ಷದ ಬಹುಭಾಷಾ ನಾಟಕೋತ್ಸವವನ್ನು ಫೆಬ್ರವರಿ 20 ರಿಂದ 23ರ ವರೆಗೆ ಉದ್ಯಾವರದ ಸರಕಾರಿ ಪದವಿ ಪೂರ್ವ ಕಾಲೇಜು, ಮೈದಾನ, ಗ್ರಾಮ ಪಂಚಾಯತ್ ಕಚೇರಿ ಹಿಂಭಾಗದಲ್ಲಿ ಆಯೋಜಿಸಲಾಗಿದೆ. ಫೆಬ್ರವರಿ 20ರಂದು ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ (ರಿ.) ಬೈಕಾಡಿ ಬ್ರಹ್ಮಾವರದ ಮಂದಾರ ತಂಡದಿಂದ ಬೆತ್ತಲಾಟ ಕನ್ನಡ ನಾಟಕ, ಫೆಬ್ರವರಿ 21ರಂದು ಪ್ರತಿಷ್ಠಿತ ಸುಮನಸ ಕೊಡವೂರು ಉಡುಪಿ ಇವರಿಂದ ತುಳು ಭಾಷೆಯಲ್ಲಿ ಈದಿ, ಫೆಬ್ರವರಿ 22ರಂದು ರಂಗ ಅಧ್ಯಯನ ಕೇಂದ್ರ ಸಂತ ಅಲೋಶಿಯಸ್ ಕಾಲೇಜು ಇವರಿಂದ ಹ್ಯಾಂಗ್ ಆನ್ ಕನ್ನಡದಲ್ಲಿ ಮತ್ತು ಫೆಬ್ರವರಿ 23 ಕೊನೆಯ ದಿನ ರಂಗ ಅಧ್ಯಯನ ಕೇಂದ್ರ ಸಂತ ಅಲೋಶಿಯಸ್ ಕಾಲೇಜು ಇವರಿಂದ ಕೊಂಕಣಿ ಭಾಷೆಯಲ್ಲಿ ಪಯ್ಣ್ ಪರ್ವತಕ್ ಪ್ರದರ್ಶನವಾಗಲಿದೆ. ಪ್ರತಿದಿನ ಸಂಜೆ 6:30ಕ್ಕೆ ಸರಿಯಾಗಿ ನಾಟಕಗಳು ಆರಂಭವಾಗಲಿದ್ದು, ಎಲ್ಲಾ ನಾಟಕಗಳಿಗೆ ಉಚಿತ ಪ್ರವೇಶವಿರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾಪು ಶ್ರೀ ಹೊಸ ಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ : ಮುಜರಾಯಿ, ಧಾರ್ಮಿಕ ದತ್ತಿ ಇಲಾಖೆ ಸಚಿವರಿಗೆ ಆಹ್ವಾನ
Posted On: 19 Feb 2025, 08:22 PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25ರಿಂದ ಮಾ.5ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರದ ವತಿಯಿಂದ ಕರ್ನಾಟಕ ಸರಕಾರದ ಮುಜರಾಯಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು. ಈ ಸಂದರ್ಭ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು ಮತ್ತು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ ಹಾಗೂ ಸದಸ್ಯರಾದ ಮಾಧವ ಆರ್. ಪಾಲನ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ನಾಯಕ ಸಂಘದ ನಿಯೋಗದಿಂದ ಲೋಕೋಪಯೋಗಿ ಸಚಿವರ ಭೇಟಿ
Posted On: 18 Feb 2025, 10:03 PM
ಉಡುಪಿ : ಉಡುಪಿ ಜಿಲ್ಲಾ ಪರಿವಾರ ನಾಯಕ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯಕ ಇವರ ನೇತೃತ್ವದಲ್ಲಿ ಉಡುಪಿಗೆ ಭೇಟಿ ನೀಡಿದ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿಯಾಗಿ ನಾಯಕ ಸಮುದಾಯದ ಸಮಸ್ಯೆಗಳ ಕುರಿತು ಸಚಿವರ ಗಮನಕ್ಕೆ ತರಲಾಯಿತು. ಉಡುಪಿ ಜಿಲ್ಲೆಗೆ ನಾಯಕ ಸಮುದಾಯಕ್ಕೆ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡುವಂತೆ ವಿನಂತಿಸಲಾಯಿತು. ಸಚಿವರು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿದರು. ಸಚಿವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ನಂತರ ಜಿಲ್ಲಾ ಸಂಘದ ನಿಯೋಗವು ಸಚಿವರೊಂದಿಗೆ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಜಿಲ್ಲಾಧಿಕಾರಿಗೂ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಗೌರವ ಅದ್ಯಕ್ಷರಾದ ಶೇಖರ್ ನಾಯಕ, ಪ್ರಧಾನ ಕಾರ್ಯದರ್ಶಿ ಸತೀಶ್ ನಾಯಕ, ಸಂಘಟನಾ ಕಾರ್ಯದರ್ಶಿ ಸುಬ್ರಹ್ಮಣ್ಯ ನಾಯಕ, ಕಾಪು ತಾಲೂಕಿನ ಉಪಾಧ್ಯಕ್ಷರಾದ ಗೋಪಾಲ್ ನಾಯಕ ಕರಂದಾಡಿ, ಸಕ್ರಿಯ ಸದಸ್ಯರಾದ ಸುರೇಶ್ ನಾಯಕ ಕಲ್ಯಾ-ಕಾಪು, ಜಿಲ್ಲಾ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುವಂತೆ ಧರ್ಮಸ್ಥಳದ ಧರ್ಮಾಧಿಕಾರಿಯವರಿಗೆ ಮನವಿ
Posted On: 18 Feb 2025, 07:10 PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 5ರವರೆಗೆ ನವ ದಿನಗಳ ಪರ್ಯಂತ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಕ್ಷೇತ್ರದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ಮನವಿಯನ್ನು ಮಾಡಲಾಯಿತು. ಈ ಸಂದರ್ಭ ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಧವ ಆರ್.ಪಾಲನ್ ಹಾಗೂ ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ : ಹುತಾತ್ಮ ಯೋಧರಿಗೆ ಗೌರವಾರ್ಪಣೆ
Posted On: 14 Feb 2025, 10:48 PM
ಉಡುಪಿ : ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನೆಯ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಲ್ಲಿ 40 ಮಂದಿ ಹುತಾತ್ಮರಾದ ಯೋಧರಿಗೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರ ನೇತೃತ್ವದಲ್ಲಿ ಹಾಗೂ ಭಾರತೀಯ ಅರೆ ಸೇನಾ ಪಡೆಯ ನಿವೃತ್ತ ಯೋಧರ ಸಂಘ ಉಡುಪಿ ಮತ್ತು ದಕ್ಷಿಣ ಜಿಲ್ಲೆಯ ವತಿಯಿಂದ ಉಡುಪಿ ಜಿಲ್ಲಾ ಯೋಧರ ಸ್ಮಾರಕದಲ್ಲಿ ಮೌನ ಪ್ರಾರ್ಥನೆಯ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಹೆಡ್ ಕಾನ್ಸ್ಟೇಬಲ್ ಸುರೇಶ್ ರಾವ್, ಸಿಪಿಒ ಜಯಾನಂದ ಪೂಜಾರಿ, ಹಲ್ವಾದರ್ ಶರತ್ ಕುಮಾರ್, ಎಸ್.ಐ.ಎಂ. ಪದ್ಮನಾಭ ರಾವ್, ಎಎಸ್ಐ ದಾಮೋದರ್, ಎಸ್.ಐ ಕೇಶವ ಆಚಾರ್ಯ, ಹವಲ್ಧಾರ್ ರಾಜೇಶ್ ಮೆಂಡನ್, ಸುಬೇದಾರ್ ಮೇಜರ್ ಗಣಪಯ್ಯ ಶೇರಿಗಾರ್, ಸಿ.ಎಸ್.ಎಲ್ ಪದ್ಮನಾಭ ಪೆರ್ಡೂರ್ ಹಾಗೂ ವಿಜಯ ಕುಂದರ್, ವೀಣಾ ಶೆಟ್ಟಿ, ಸುಧಾಕರ್ ಆಚಾರ್ಯ, ವಾರಿಜಾ ಕಲ್ಮಾಡಿ, ಶ್ವೇತ ಜಯರಾಮ್ ಉಪಸ್ಥಿತರಿದ್ದರು.
ಶಿರ್ವ ಸಹಕಾರಿ ವ್ಯವಸಾಯಿಕ ಸಂಘ : ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
Posted On: 14 Feb 2025, 08:04 PM
ಶಿರ್ವ : ಶಿರ್ವ ಸಹಕಾರಿ ವ್ಯವಸಾಯಿಕ ಸಂಘ (ರಿ.) ಶಿರ್ವ ಇದರ ಅಧ್ಯಕ್ಷರಾಗಿ ಕುತ್ಯಾರು ಪ್ರಸಾದ್ ಶೆಟ್ಟಿ ಹಾಗೂ ಉಪಾಧ್ಯಕ್ಷ ರಾಗಿ ವೀರೇಂದ್ರ ಪಾಟ್ಕರ್ ಅವಿರೋಧ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಸಂಘದ ನಿರ್ದೇಶಕರುಗಳಾದ ರಂಜಿತ್ ಪ್ರಭು ಮಟ್ಟಾರು, ಉಮೇಶ ಆಚಾರ್ಯ, ಪುರುಶೋತ್ತಮ ಶೆಟ್ಟಿಗಾರ್, ಸುಂದರ ಮೂಲ್ಯ, ವಾರಿಜ ಆರ್ ಕಲ್ಮಾಡಿ, ವೇದಾವತಿ ಆಚಾರ್ಯ, ವಿಜಯ ಪೂಜಾರಿ, ಹರಿಣಾಕ್ಷ ಶೆಟ್ಟಿ, ಕೃಷ್ಣ ಮುಖಾರಿ, ಗಣೇಶ್ ನಾಯ್ಕ ಉಪಸ್ಥಿತರಿದ್ದರು.
ಫೆ.22 ಮತ್ತು 23 : ಕಾಪು ಶ್ರೀ ಹೊಸ ಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ
Posted On: 14 Feb 2025, 07:57 PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬಹ್ಮಕಲಶೋತ್ಸವದ ಅಂಗವಾಗಿ ಫೆಬ್ರವರಿ 22 ಮತ್ತು 23ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಲಿದೆ ಎಂದು ಹೊರೆ ಕಾಣಿಕೆ ಸಮರ್ಪಣಾ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಅವರು ಶುಕ್ರವಾರ ಕಾಪುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಫೆಬ್ರವರಿ 22ರಂದು ಮೆರವಣಿಗೆ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಿಂದ ದಕ್ಷಿಣ ವಾಹಿನಿ ಹೊರೆಕಾಣಿಕೆ ಸಮರ್ಪಣೆಯು ಹೆಜಮಾಡಿ ಗಡಿ ದಾಟಿ ಮೂಳೂರು ಕೊಪ್ಪಲಂಗಡಿಗೆ ಬಂದು ಅಲ್ಲಿಂದ ಹೊಸ ಮಾರಿಗುಡಿ ದೇವಳವನ್ನು ತಲುಪಲಿದೆ. ಫೆಬ್ರವರಿ 23ರಂದು ಉಡುಪಿ ಜಿಲ್ಲೆಯಿಂದ ಸಮರ್ಪಿಸಲ್ಪಡುವ ಉತ್ಸರವಾಹಿನಿ ಹೊರೆಕಾಣಿಕೆಯು ಪಾಂಗಾಳ ಸೇತುವೆ ಬಳಿಯಿಂದ ಹೊಸ ಮಾರಿಗುಡಿ ತಲುಪಲಿದೆ. ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ಸಂದರ್ಭದಲ್ಲಿ ವಿವಿಧ ಬಿರುದಾವಳಿಗಳೊಂದಿಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಸಂದರ್ಭ ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಹೊರೆ ಕಾಣಿಕೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಪಾದೂರು, ಉಪಾಧ್ಯಕ್ಷರಾದ ಶ್ರೀಕರ ಶೆಟ್ಟಿ ಕಲ್ಯ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಾಧವ ಪಾಲನ್, ಯೋಗೀಶ್ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ,ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಡಾ. ಸುನೀತಾ ಶೆಟ್ಟಿ, ಮೋಹನ ಬಂಗೇರ, ಶಾಂತಲತಾ ಶೆಟ್ಟಿ, ಅನಿಲ್ ಕುಮಾರ್, ಅವಿನಾಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿ : ಹರಿದ್ವಾರದಿಂದ ಪವಿತ್ರ ಗಂಗಾಜಲ ಆಗಮನ
Posted On: 14 Feb 2025, 07:46 PM
ಕಾಪು : ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿದ್ದು, ಬ್ರಹ್ಮಕಲಶೋತ್ಸವಕ್ಕಾಗಿ ಹರಿದ್ವಾರದಿಂದ ವಿಮಾನದ ಮೂಲಕ ತರಲಾದ ಪವಿತ್ರ ಗಂಗಾಜಲವನ್ನು ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣದಿಂದ ಬೃಹತ್ ವಾಹನ ಜಾಥದ ಮೂಲಕ ಕಾಪು ಸಾವಿರ ಸೀಮೆಯ ಒಡೆಯ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಾನಕ್ಕೆ ತಂದು ಪೂಜೆ ಸಲ್ಲಿಸಲಾಯಿತು. ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಹರಿದ್ವಾರದಲ್ಲಿ ಫೆಬ್ರವರಿ 12ರ ಕುಂಭ ಸಂಕ್ರಮಣದ ಹುಣ್ಣಿಮೆಯ ಪರ್ವಕಾಲದಲ್ಲಿ ಬೃಹತ್ ನವಕುಂಭಗಳಲ್ಲಿ ಗಂಗಾಜಲವನ್ನು ತುಂಬಿಸಿ, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಲಾಯಿತು. ಬೆಳಿಗ್ಗೆ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ದಂಪತಿಗಳು, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ದಂಪತಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಉದಯ ಸುಂದರ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಒಂಬತ್ತು ಮಂದಿ ನವಕುಂಭದೊಂದಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಗಣ್ಯರು ನವಕುಂಭವನ್ನು ಸ್ವಾಗತಿಸಿದರು. ಮುಂದಿನ 9 ದಿನಗಳ ಕಾಲ ನವಕುಂಭಗಳಿಗೆ ವಿಶೇಷ ಪೂಜೆ ಸಲ್ಲಿಸಿ, ತದನಂತರ ಕಾಪು ಹೊಸಮಾರಿ ಗುಡಿಯ ಅಮ್ಮನ ಸನ್ನಿಧಾನಕ್ಕೆ ತರಲಾಗುವುದು. ಈ ಸಂದರ್ಭ ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಅಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿಯ ಶ್ರೀ ಉಚ್ಚಂಗಿ ಅಮ್ಮನವರ ಸ್ವರ್ಣ ಕವಚ
Posted On: 14 Feb 2025, 11:35 AM
ಶ್ರೀ ಶಿಲ್ಪಿ ನಾಗರಾಜ್ ಆಚಾರ್ಯ, ಇಂದ್ರಾಳಿ ಹಾಗೂ ನಂದನ್ ಆಚಾರ್ಯ ಸಹೋದರ ಇವರ ಅದ್ಭುತ ಕೈ ಚಳಕದಲ್ಲಿ ನಿರ್ಮಾಣವಾದ ಕಾಪು ಶ್ರೀ ಹೊಸ ಮಾರಿಗುಡಿಯ ಶ್ರೀ ಉಚ್ಚಂಗಿ ಅಮ್ಮನವರ ಸ್ವರ್ಣ ಮೊಗದ ಪ್ರತಿಮೆ. ವಿಶ್ರುತ ಶಿಲ್ಪಶಾಲ, ಪೆರ್ಡೂರು PH: 70262 59449
ಊರಿನ ರಸ್ತೆಗೆ ಕಾಯಕಲ್ಪ ನೀಡಿದ 80 ವಯಸ್ಸಿನ ಶ್ರೀನಿವಾಸ ಮೂಲ್ಯರಿಗೆ ಕುಲಾಲ ಸಂಘದಿಂದ ಸನ್ಮಾನ
Posted On: 13 Feb 2025, 07:32 PM
ಕಾರ್ಕಳ : ತಾಲೂಕಿನ ಮರ್ಣೆ ಪಂಚಾಯತ್ ನ ಒಂದು ಭಾಗದ ರಸ್ತೆಯನ್ನು 50 ವರ್ಷದಿಂದ ಶ್ರೀನಿವಾಸ್ ಮೂಲ್ಯ ಎನ್ನುವ 80 ವರ್ಷದ ವೃದ್ಧ ರಿಪೇರಿ ಮಾಡುತ್ತಿರುವುದು ಗಮನಾರ್ಹವಾಗಿದೆ. ಈ ಸಾಹಸದ ಕಾರ್ಯವನ್ನು ಗುರುತಿಸಿ ಇತ್ತೀಚೆಗೆ ಅಜೆಕಾರು ಕುಲಾಲ ಸಂಘದ ಪ್ರಮುಖರಾದ ಕೃಷ್ಣ ಮೂಲ್ಯ ಅಜೆಕಾರು, ಸುರೇಂದ್ರ ಮೂಲ್ಯ, ಅನಿಲ್ ಎಣ್ಣೆಹೊಳೆ, ಸುಕೇಶ್ ಮೂಲ್ಯ, ಯೋಗೀಶ್ ಮೂಲ್ಯ, ಜಯಾನಂದ ಮೂಲ್ಯ, ಹರೀಶ್ ಮೂಲ್ಯ ಉಪಸ್ಥಿಯಲ್ಲಿ ಸನ್ಮಾನಿಸಲಾಯಿತು.
